ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದೆ ಮಾಡುವಿ ಯಾತಕೋ | ಮಂದಮಾನವ ಶ್ರೀಗೋವಿಂದ ದಾಸಾರ್ಯರನ್ನ ಎಂದೆಂದಿಗೀಮಾತು | ಇಂದಿರೇಶನ ಭಕುತ ವೃಂದ ಮೆಚ್ಚುವದಿಲ್ಲವೋ ಮೂಢ ಪ ಬಾಲತನದಾರಭ್ಯ ಶೀಲ ಸದ್ಭಕುತಿಯಲಿ ತಾಳ ತಂಬೂರಿ ಪಿಡೆದು | ಶ್ರೀಲೋಲ ಹರಿನಾಮ ಹೇಳುತಲಿ ಸತತ | ಗೋಪಾಳ ವೃತ್ತಿಯ ಮಾಡಿ ಕಾಲವನು ಕಳೆದವರು 1 ಕುಸುಮಶರನಟ್ಟುಳಿಗೆ ವಶವಾಗದಿರಿ ಎಂದು ಉಸುರುತಲಿ ಶಿಷ್ಯಗಣಕೆ | ಅಸುರಾರಿ ಮಹಿಮೆಯನು ರಸವತ್ ಕವಿತೆಯಲಿಂದ ನಿಶಿ ಹಗಲು ವರ್ಣಿಸಿದ ಅಸಿಫ್ಯಾಳು ನಿಲಯರನು 2 ಕ್ಲೇಶ ಸುಖ ಸಮ ತಿಳಿದು ಲೇಸಾಗಿ ಗುರುಸೇವೆಗೈದು ವಾಸಸ್ಥಾನಕೆ ತೆರಳಿದೀ ಸುಗುಣರನು ವ್ಯರ್ಥ ನಿಂದೆ ಮಾಡುವಿ ಯಾಕೋ 3
--------------
ಶಾಮಸುಂದರ ವಿಠಲ
ಹರಿಯೇ ಸರ್ವಸಾರವೆಂದು ಸಾರುವರು |ತೆರೆದು ಹೇಳಿ ತತ್ತ್ವವನು ತಾರಿಸುವರು ಪ ಮೊರೆ ಹೊಕ್ಕವರ ಮನದ ಮಲಕು ಬಿಡಿಸುವರು |ಹರಿದು ಹೋಗುವವಗೆ ಕರೆದು ಕಡೆಗ್ಹಾಕುವರು1 ಧರೆಯೊಳವರೇ ಸಾಧು ಪುರುಷರೆನಿಸುವರು |ಸಿರಿಗೆ ಸೆರಗೊಡ್ಡಿ ಸಿರಬಾಗಿ ನಡಿಯದವರು 2 ಬರಿಯ ತರ್ಕದಿಂದ ಖಂಡಿಸದವರು |ಸರಿಗೆ ಬಂದರೆ ಸುಮ್ಮನೆ ಸಹಿಸುವರು 3 ಕಾಯ ಕದ್ದು ಕರ್ಮಪಾಶ ಕಳೆದವರು |ರಾಯ ರಂಕರಿಗೆ ಸರಿ ತಿಳಿದವರು 4 ಮಾಯದ ಮೂಲವಾದ ಭೇದವಳಿದವರು |ಲಯದ ಮನೆಯ ಮೆಟ್ಟಿ ಭಯ ಮೀರಿದವರು 5 ಅರಿತು ಅರಿಯದವರಂತೆ ತೋರುತಿಹರು |ಮರೆತು ಮರವಿಗೆ ತಾವೆ ಮರವಾಗಿಹರು6 ಗುರು ರುಕ್ಮಭೂಷಣನಂತ ತೋರಿಸುವರು |ತ್ವರಿತದಿ ತಮ್ಮ ನೆಲೆಯ ಕೊಡದವರು 7
--------------
ರುಕ್ಮಾಂಗದರು