ಒಟ್ಟು 36 ಕಡೆಗಳಲ್ಲಿ , 17 ದಾಸರು , 31 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಏ) ವಿಶೇಷ ಸಂದರ್ಭದ ಹಾಡುಗಳು ಬರಗಾಲ ಮತ್ತು ಯುದ್ಧವನ್ನು ಕುರಿತು ನಿರ್ದಯನಾಗಬೇಡವೋ ಭಗವಂತ ದುರ್ದಿನ ದೂರಮಾಡೋ ದೇಶಕ್ಕೆ ಪ್ರಶಾಂತ ಪ ಮಳೆಗಾಲ ಮರೆತುಹೋಗಿ ಬೇಸಗೆ ಬೆಳೆದು ಬಂದು ನೆಲವೆಲ್ಲ ದುರ್ಭಿಕ್ಷ ತಾಂಡವವಾಡುತಿದೇ 1 ಕೆರೆಕಟ್ಟೆತೊರೆಭಾವಿ ಹೊಳೆಯಲ್ಲಿ ನೀರಿಲ್ಲ ಧರೆಯಲ್ಲಿ ತೃಣವಿಲ್ಲ ಬರಿಗಾಡಾಯ್ತೋ 2 ಹೊಲಗದ್ದೆ ತೋಟಗಳ ಬೆಳೆಯೆಲ್ಲ ಒಣಗಿತು ಫಲವಿಲ್ಲ ಜನವೆಲ್ಲ ಗೋಳಾಡುತಿಹರೋ 3 ಅನ್ನಾಹಾರಗಳಿಲ್ಲ ಗೋಗಳಿಗೆ ಗ್ರಾಸವಿಲ್ಲ ಚಿನ್ನದಂಥ ಮಕ್ಕಳೆಲ್ಲ ಉಣಿಸಿಲ್ಲದಿಹರೋ4 ಧನಿಕರ್ಗೆ ಧನದಾಸೆ ಬಡವರ್ಗೆ ಕೂಳಿಲ್ಲ ದಿನಕಳೆವುದು ಕಷ್ಟವಾಗಿ ಬರಗಾಲ ಬಂತೋ 5 ಕಳವು ಕೊಲೆಯು ದಂಗೆ ದಾರಿದರೋಡೆಯು ಉಳಿಗಾಲ ಬರಲಿಲ್ಲ ಯುದ್ಧದ ಭಯವು6 ಒಂದೊಂಬತ್ತಾರೈದು ಹತ್ತು ಹನ್ನೊಂದರ ಮಧ್ಯೆ ಬಂದು ಜಗದ ಕುತ್ತು ಕತ್ತಿಯಂತೆ ಕಂಡಿತು 7 ಬೆಳಗುಪೂರ್ವ ಆಶ್ವಿಜ ಕಾರ್ತಿಕದೆ ಧೂಮಕೇತು ಇಳೆಗಂಡಕಳೆ ಯಮದ್ವಾರವ ಮುಚ್ಚಿ 8 ಅವಿಶ್ವಾಸದ ವಿಶ್ವವಸುವ ಪರಾಭವದಿಂ ಪ್ರೀತಿತೋರಿ ಭಂಗ ಹರಿಸೋ 9 ಪಾಕಿ-ಚೀನಾ ಪತನಗೈದು ಜೋಕೆಯಿಂ ಭಾರತವ ರಕ್ಷಿಸಿ ಲೋಕಕ್ಕೆ ಕ್ಷಾಮಹರಿಸಿ ಕ್ಷೇಮಕೊಟ್ಟು ಪೊರೆಯೋ10 ನಗೆಯಿಲ್ಲ ಸಂತೋಷ ಸುದ್ಧಿ ಕೇಳುತಲಿಲ್ಲ ಮಿಗಿಲಾಗಿ ಜನರೆಲ್ಲ ಸೊರಗಿ ಸುತ್ತುವರೋ11 ಕನ್ನಡದ ನಾಡಿಗೆ ಹೊನ್ನಿನ ಬಿರುದಿದೆ ಖಿನ್ನತೆ ತಾರದೆ ಉನ್ನತಿ ಕಾಪಾಡು 12 ಮುಂದೆಮಗೆ ಗತಿಯೇನು ಬಾಳುವಬಗೆಯೆಂತು ಬಂಧು ನೀನಿದ್ದುಕೊಂಡು ಅನ್ಯಾಯವಾಗಿದೆ13 ತಂದೆ ತಾಯಿಯು ನೀನು ಹೊಂದಿದ ಬಳಗ ನೀನು ಕುಂದಿಲ್ಲದೆಮ್ಮನ್ನು ಕಾವ ಪ್ರಭು ನೀನು 14 ಸುವೃಷ್ಟಿ ಸಸ್ಯವೃದ್ಧಿ ಜೀವನ ಸಮೃದ್ಧಿಯು ಸುವೃತ್ತಿ ಕರುಣಿಸಿ ಪೊರೆ ಜಾಜಿಶ್ರೀಶ 15
--------------
ಶಾಮಶರ್ಮರು
ಎಷ್ಟು ಪುಣ್ಯ ಮಾಡೀ ಕಂಬ ವಿಠ್ಠಲನ್ನ ಗುಡಿ ಸೇರಿತೋ ಪ. ಪುರಂದರ ದಾಸರನ್ನು ಕಟ್ಟಿಸಿಕೊಂಡು ತಾ ಪೂಜೆಗೊಂಡಿತೊ ಅ. ಎಲ್ಲಾ ಕಂಬಗಳಿದ್ದರೂ ಇಂತು ಇಲ್ಲೀ ಇದಕೆ ಈ ಖ್ಯಾತಿಯು ಬಂತು ಸುಜನ ವಂದಿಪರಿ ಪುಲ್ಲನಾಭನ್ನ ಕೃಪೆಯ ಪಡೆದಿತು 1 ಮಾಯಾಕಾರನು ನೀರನು ತಂದು ಈಯಲು ಪುರಂದರದಾಸರಿಗಂದು ನೋಯಿಸೆ ತಿಳಿಯದೆ ಮನಕದ ತಂದು ನ್ಯಾಯದಿ ಕಟ್ಟಿಸಿ ಹೊಡೆಸಿದನಂದು 2 ದಾಸರಂತೆ ತಾನು ವೇಷವ ಧರಿಸಿ ವೇಶ್ಯೆಗೆ ತನ್ನ ಕಂಕಣವನ್ನೆ ಕೊಡಿಸಿ ತಾಸೊತ್ತಿನಾ ರಾತ್ರೆ ಹೊಡೆದದ್ದ ನೆನಸಿ ವಾಸುದೇವ ಬೈಲಿಗೆಳೆಸಿದ ಬಿಗಿಸಿ 3 ಜ್ಞಾನ ಪುಟ್ಟಲು ಹರಿಮಾಯವಿದೆಂದು ಶ್ರೀನಿವಾಸ ತಾ ವಲಿದನು ಅಂದು ಆನಂದದಿಂದೊಂದು ಕವನ ಗೈದು ಶ್ರೀನಿಧೆ ಮುಟ್ಟಿತು ಮುಯ್ಯವಿದೆಂದು4 ದಾಸರ ಅಂಗವು ಸೋಕಿದ್ದರಿಂದ ಶ್ರೀಶನು ಹಗ್ಗದಿ ಬಿಗಿಸಿದ್ದರಿಂದ ದಾಸರ ಪೆಸರಲಿ ಮೆರೆವುದರಿಂದ ಭವ ಬಂಧ5 ಹಿಂದೆ ಕಂಬದಿ ನರಹರಿ ಅವತರಿಸೆ ಅಂದಿನ ಕಂಬವೆ ಈಗಿಲ್ಲ್ಲಿ ಉದಿಸೆ ಸಿಂಧುಶಯನನ್ನ ದಾಸತ್ವ ವಹಿಸೆ ಬಂದಿತು ವಿಠಲನ್ನ ಗುಡಿಯನಾಶ್ರೈಸೆ6 ಕರ್ಮ ಕಳೆವುದು ದಾಸರ ವಾಕ್ಶ್ರವಣ ಜ್ಞಾನವೀಯುವುದು ದಾಸರ ಉಪದೇಶ ಹರಿಯ ತೋರುವುದು ದಾಸರ ಸ್ಪರ್ಶವು ಮುಕ್ತಿಗೊಯ್ಯವುದು7 ಕಂಭವೆ ಸಾಕ್ಷಿಯು ಈ ಕಲಿಯುಗದಿ ಡಾಂಭಿಕ ಜನರಿಗೆ ತಿಳಿಯದು ಹಾದಿ ಬೆಂಬಿಡದೆ ಹರಿ ಕಾಯುವ ಭರದಿ ಇಂಬುಗೊಟ್ಟು ತನ್ನ ನಿಜ ದಿವ್ಯ ಪುರದಿ 8 ದಾಸರ ಮಾರ್ಗವೆ ಸುಲಭವೆಂತೆಂದು ದಾಸರ ಕೃಪೆ ದ್ವಾರ ವಲಿಯುವೆನೆಂದು ದಾಸರ ದೂಷಿಸೆ ಗತಿ ಇಲ್ಲೆಂದು ಶ್ರೀಶ ತಾನಿಲ್ಲೀ ನಿಂತನು ಬಂದು 9 ಶ್ರೀ ರಮಾಪತಿ ಓಡಿ ಬಂದ ನಿಲ್ಲೆಂದೂ ದ್ವಾರಕ ಪುರದೊಂದು ಕಂಭವೆ ಬಂದು ಸೇರಿತೊ ವಿಠಲನ ಮಂದಿರವಂದು ಸೂರೆಗೈದರೊ ಖ್ಯಾತಿ ದಾಸರು ಬಂದು 10 ನಿಜದಾಸರಂಗಸಂಗದ ಫಲದಿ ರಜತದ ಕಟ್ಟಿನಿಂ ಮೆರೆದಿತು ಜಗದಿ ಸುಜನರ ಸಂಗದಿ ಮುಕುತಿಯ ಹಾದಿ ಭುಜಗಶಯನ ತೋರುವ ನಿರ್ಮಲದಿ 11 ತತ್ವವನಿದರಿಂದ ತಿಳಿವುದು ಒಂದು ಉತ್ತಮತ್ವ್ವವು ಜಡಕಾಯಿತು ಬಂದು ಪಾದ ಸೋಂಕಲು ಅಂದು ವ್ಯರ್ಥವಾಗದು ಹರಿಭಕ್ತರೆ ಬಂಧು12 ಪಾಪ ನಿರ್ಲೇಪವಾಗೋದು ವಿಠ್ಠಲನ್ನ ಆಪಾದ ಮೌಳಿಯ ರೂಪ ದರುಶನ್ನ ಪರಿ ಖ್ಯಾತಿ ಪೊಂದಿತು ಕಂಬ ಘನ್ನ ಗೋಪಾಲಕೃಷ್ಣವಿಠ್ಠಲ ಸುಪ್ರಸನ್ನ 13
--------------
ಅಂಬಾಬಾಯಿ
ಏನನಾದರೂ ಬರೆಯೋ ಎನ್ನ ಪಣೆಯೊಳಗೆನೀನಿಷ್ಟ ಬರೆಯಬೇಡವೋ ಮೂಢ ವಿಧಿಯೇ ಪ ಬಾಲತನದಲಿ ಬಹಳ ಭಾಗ್ಯ ಸಂಪದಗಳನುಮೇಲೆ ಯೌವನ ಬರಲು ಬಡತನವನುಲೋಲಾಕ್ಷಿಯರಿಗೆ ಮರುಳಾಗಿ ಸಂಚರಿಪುದನುಹಾಲು ಅನ್ನವನಿಕ್ಕಿದವರಿಗೆ ಮುನಿವುದನು1 ಮುಪ್ಪಿನಲಿ ಯೌವನದ ಸ್ತ್ರೀಯ ಸಂಭೋಗವನುತುಪ್ಪವಿಲ್ಲದ ಭೋಜನದ ರುಚಿಯನುಅಪ್ಪುತಿಹ ಮಕ್ಕಳಿಲ್ಲದ ಕುಸಂಸಾರವನುಕಪ್ಪುಗೊರಲನ ನೆನೆಯದೇ ದಿನವ ಕಳೆವುದನು 2 ಪರರೊಡವೆಯನು ತಿಂದ ಶರೀರವನೆ ಪೊರೆವುದನುಪರರ ನಿಂದೆಯ ಮಾಡಿ ಬಾಳುವುದನುವರ ಕೆಳದಿ ರಾಮೇಶ ನಿನ್ನ ಪಾದಾಂಬುಜವಸ್ಮರಿಸಿದಂತನ್ಯಮತದಲ್ಲಿ ಸಂಭವಿಪುದನು 3
--------------
ಕೆಳದಿ ವೆಂಕಣ್ಣ ಕವಿ
ಕಾರಣಾತ್ಮಕ ಭಕ್ತವತ್ಸಲ | ಪೊರೆವುದೆನ್ನನು || ಕರುಣಾರ್ಣವನೆ ಪ ಭವ | ಕಷ್ಟ ಕಳೆದು ಸಂ | ತುಷ್ಟಿ ಗೈಸೆನ್ನ 1 ಪಕ್ಷಿವಾಹನ | ಅಕ್ಷರೇಡ್ಯ ಸು | ಪಕ್ಷಪಾತಿಯ | ಲಕ್ಷ್ಮೀವಕ್ಷನೆ ||ಇಕ್ಷುಶರ ಪಿತ | ಲಕ್ಷಣಾಗ್ರಜ | ರಾಕ್ಷಸರ ಬಹು ಶಿಕ್ಷಕ | ಜಗ ರಕ್ಷಕ 2 ಭವ | ನೋವ ಕಳೆವುದು | ಶ್ರೀ ವರನೆ ಗುರು | ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಕಾವಿಯ ಕಲ್ಲಿನ ತಿಲುಕವಿಡಕ್ಕ ಕಾವಿಯ ಕಲ್ಲಿನ ತಿಲುಕ ಪ. ಕಾವಿಯ ಕಲ್ಲಿನ ತಿಲುಕವನಿಟ್ಟರೆ ಕಾಯುವ ಶ್ರೀಹರಿ ಸತತ ಕಾಣಕ್ಕ ಅ.ಪ. ಕಾವಿಯ ತಿಲುಕವು ಕಲುಷವ ಕಳೆವುದು ಕಾವಿಯ ತಿಲುಕವು ಕಲಿಬಾಧೆ ಕಳೆವುದು ಕಾವಿಯ ತಿಲುಕವು ಕೋಪತಾಪಗಳನ್ನು ಜೀವನ ಬಳಿಯಲ್ಲಿ ಬರಲೀಸದಕ್ಕ 1 ಕಾವಿಯ ತಿಲುಕವು ಕವಿತೆಯ ಮಾಳ್ಪರಿಗೆ ಭಾವಶುದ್ಧಿಯನಿತ್ತು ಭಕ್ತಿ ಹೆಚ್ಚಿಸುವುದು ಕಾವಿಯ ಮಹಿಮೆಯ ಪಾವನ ಗುರು ಮಧ್ವರಾಯರೆ ಬಲ್ಲರಕ್ಕ 2 ಕಾವಿಯ ತಿಲುಕವು ಗುರುಭಕ್ತಿ ಕೊಡುವುದು ಕಾವಿಯ ತಿಲುಕವು ವೈವಿಧ್ಯ ಕಳೆವುದು ಕಾವಿಯ ತಿಲುಕವು ಕಳೆಯ ಹೆಚ್ಚಿಸುವುದು ಶ್ರೀ ವರನನು ಮನದಿ ತೊರುವುದಕ್ಕ 3 ಕಾವಿಯ ತತ್ವ ದಾಸರೆ ಬಲ್ಲರು ಕಾವಿಯೆ ಭೂಷಣ ದಾಸ ಶಿರಸಿಗೆ ಕಾವಿ ಇಲ್ಲದ ವ್ಯಾಸ ದಾಸಕೂಟವು ಇಲ್ಲ ಕಾವಿಯೆ ಸಂಸಾರ ನಾವೆಯಕ್ಕ 4 ಕಾವಿಯ ಮಹಿಮೆ ತಂದೆ ಮುದ್ದುಮೋಹನ ಗುರು ಭಾವಿಸಿ ಪೇಳಲು ಅರಿತು ಧರಿಸಿಹೆನು ಪಾವನ ಗೋಪಾಲಕೃಷ್ಣವಿಠ್ಠಲ ವ್ಯಾಸ ಕಾವಿಯ ಧರಿಸಿ ಮುನಿಯಾದ ಬದರಿಯಲಿ 5
--------------
ಅಂಬಾಬಾಯಿ
ಕೇಳೈ ಈಗಾ ಈ ಕರ್ಮಯೋಗಾ ಕಳೆವುದು ಸಂಸಾರರೋಗಾ ಬಂಧಕ್ಕೆ ಈ ಕರ್ಮವೇ ಕಾರಣಾಗಿ ಬಂದಿತು ಜನುಮಾ ಅನಿವಾರ್ಯವಾಗಿ ಈ ಬಂಧವ ನೀಗಿ ಚಿರಶಾಂತಿಗಾಗಿ ಈ ಯೋಗ ಬೆರಸಿ ಇದೆ ಕರ್ಮವೆಸಗಿ ಅರ್ವಿನಿ ಫಲವಾ ಪರಮಾತ್ಮಭಾವಾ ತಳೆಯುವದೆ ಈ ಕರ್ಮಯೋಗಾ ಕಳೆವುದು 1 ವಿಷಯಾಭಿಲಾಷಾ ನೀಗಿಸಿ ಆಶಾ ಹರಿಸುವದಿದುವೇ ನಿಷ್ಕಾಮ ಕರ್ಮ ಮನಸಿನ ಮಲಿನಾ ಕಳೆದೆಲ್ಲ ಹಸನಾ ಮಾಳ್ಪುದು ಇಹುವೇ ಜಿಜ್ಞಾಸೆಯೆನ್ನಾ ಹುಟ್ಟಿಸಿ ಜ್ಞಾನಾ ಕೇಳ್ವ ಭಾನಾ ಉದಿಸುವುದು ವೈರಾಗ್ಯಭಾಗ್ಯ ಕಳೆವುದು 2 ವಿಷಧಾತುಗಳ ತಂದು ಪುಟಹಾಕಿಕೊಂಡು ಹೆಸರಾದ ಸಿದ್ಧೌಷಧಿ ಮಾಡಿಕೊಂಡು ಉಪಯೋಗ ಕಂಡು ಜಡದೇಹಗಳ ಬೇನೆ ನೀಗಿಪತೆರದಿ ಈ ಕರ್ಮವಿಷವಾ ಪುಟಹಾಕುತಿಹುದೀ ನಿಷ್ಕಾಮತನದೀ ಈ ಸೂಕ್ಷ್ಮದೇಹಾ ರೋಗ ಕಳೆವಾ ಘನವಾದ ಪರಮೋಪಾಯಾ ಇದೇ ಪೇಳ್ದೆ ಗುರುಶಂಕರಾರ್ಯ3
--------------
ಶಂಕರಭಟ್ಟ ಅಗ್ನಿಹೋತ್ರಿ
ಕೊಳಲೂದೋ ಕೃಷ್ಣ ಕೊಳಲೂದೊ ಪ ಕೊಳಲೂದಲು ಮನ ತಳೆವುದು ಮನವಿದೊಬಳಲಿಪ ಚಿಂತೆಯ ಕಳೆವುದು ನಾದೊ ಅ.ಪ. ಸವಿಸವಿ ಸ್ವರಗಳು ಕಿವಿಗಳ ಹೊಗಲದು _ಭವಿಸುದೆನ್ನೊಳು ಭಕುತಿಯನಾದೊ 1 ತನು ಕೊಳವೆಯಲಿ ನಿನದುಸಿರನು ಕೊಡೆಇನಿದು ನುಡಿದು ಪಾವನ ತನುವಹುದೊ 2 ಸ್ವರಮಧುರತೆಯು ಶಿರದೊಳು ಚರಿಸುತೆನಿರುತ ನಿನ್ನಯ ಸ್ಮರಣೆಯ ನೀವುದೊ 3 ಮಧುರ ನಿನ್ನಯ ಗಾನವ ಕೇಳ್ವುದುಗದುಗು ವೀರನಾರಾಯಣನ ಮಹಾ ಪ್ರಸಾದೊ 4
--------------
ವೀರನಾರಾಯಣ
ತ್ಯಜಿಸದಲೆ ಸಂಸಾರ ಭಜಿಸಬಹುದು ಪ ಅಜಭವಾದಿಗಳೆಲ್ಲ ತ್ಯಜಿಸಿ ಭಜಿಸುವರೇ ಅ.ಪ ಅರ್ಣವವ ಪೋಲುವ ಭವವನ್ನು ನೀಗಲು ವರ್ಣಾಶ್ರಮಗಳ ಧರ್ಮಗಳನರಿತು ಪೂರ್ಣ ಸುಖಜ್ಞಾನ ಪೊಂದಿದ ಹರಿಯ ಗುಣಗಳನು ನಿರ್ಣಯದ ಭಕುತಿಯಲಿ ವರ್ಣಿಸುವ ನರನು 1 ಜನ್ಮವನು ಕಳೆವುದಕೆ ತೀರ್ಮಾನ ಮಾಡಿ ದು ಷ್ಕರ್ಮಗಳ ತ್ಯಜಿಸಿ ಸತ್ಕರ್ಮಗಳನು ಮರ್ಮವರಿಯುತ ರಚಿಸಿ ಹೆಮ್ಮೆಯಿಂದಲಿ ತನ್ನ ಧರ್ಮದಲಿ ಸತಿಸುತರ ಭೋಗ ಉಣುವವರು2 ಅನ್ಯಾಯಗಳ ಬಿಟ್ಟು ಮಾನ್ಯರೆಂದೆನಿಸುತಲಿ ಘನ್ನ ಮಹಿಮನ ಸೇವೆಯೆಂದರಿಯುತ ಕನ್ಯಾದಿ ದಾನಗಳ ಮಾಡುತಲಿ ಮುದದಿಂದ ಚೆನ್ನಾಗಿ ಹರಿಯ ಪ್ರಸನ್ನತೆಯ ಪಡೆಯುವರು 3
--------------
ವಿದ್ಯಾಪ್ರಸನ್ನತೀರ್ಥರು
ದಿನಗಳ ಕಳೆವುದೆ ಸಾಧನವು ಶ್ರವಣ ಮನನ ನಿಧಿಧ್ಯಾಸನಗಳಲಿ ಪ ಉದಯದಿ ಸ್ನಾನ ನದಿನದಗಳಲಿ ಸದಮಲ ಹರಿಯ ಪಾದೋದಕ ಪಾನ ಹೃದಯದಿ ಕೃಷ್ಣನ ಮೂರ್ತಿಯ ಧ್ಯಾನ ವಿಧಿಯಲಿ ಜಪತಪ ಪ್ರವಚನಗಳಲಿ 1 ಪ್ರೇಷ್ಟತಮರ ತಂತ್ರಸಾರದ ಕ್ರಮದಲಿ ಅಷ್ಟಮಹಾ ಮಂತ್ರಗಳನು ಜಪಿಸಿ ವೃಷ್ಣಿವರೇಣ್ಯನ ವೈಭವದಿಂದಲಿ ತುಷ್ಟಿಗೊಳಿಸಿ ಬಲು ಶಿಷ್ಟರ ಸಂಘದಿ 2 ತ್ರಿಭುವನ ಗುರುಗಳ ಶುಭಕರ ಶಾಸ್ತ್ರವ ಪ್ರವಚನಗೈಯುತ ಪ್ರತಿಕ್ಷಣಗಳಲಿ ವಿಬುಧ ಪ್ರಸನ್ನನ ಗುಣಗಳ ಸಜ್ಜನ ಸಭೆಯಲಿ ಪಾಡುತ ನಿರ್ಭಯರಾಗಿ 3
--------------
ವಿದ್ಯಾಪ್ರಸನ್ನತೀರ್ಥರು
ನಿನ್ನ ನಂಬಿದೆನಯ್ಯ ಚನ್ನಕೇಶವರಾಯ ಇನ್ನಾದಾರೂ ಕೃಪೆಯ ತೋರಿಸಯ್ಯ ಪ ಎನ್ನ ಕರ್ಮದ ಫಲದಿ ಬನ್ನಗೊಂಡಿಹೆನಯ್ಯ ನಿನ್ನ ಚರಣವನೆನಗೆ ಸನ್ನಿಹಿತ ಮಾಡಯ್ಯ ಅ.ಪ ನಡೆವುದೂ ನಿನಗಾಗಿ ನುಡಿವುದೂ ನಿನಗಾಗಿ ಪಡೆವುದೂ ನಿನಗಾಗಿ ಎನ್ನಿಸಯ್ಯ ಕೊಡುವವನು ನೀನಾಗಿ ಪಡೆವವನು ನಾನಾಗಿ ಪೊಡವಿಯಲೆಷ್ಟುದಿನ ಬಾಳ್ವುದಯ್ಯ 1 ಕಲಿಯುಗದಿ ಭಜನೆಯಿಂದಲೆ ಭವವು ಕಳೆವುದೆಂದು ಉಲಿದರೈ ವ್ಯಾಸಾದಿ ಮುನಿವರ್ಯರು ಕಲುಷ ಪೂರಿತನಾಗಿ ಬಲುನೊಂದೆ ಕೈ ಪಿಡಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀರಜ ಭೃಂಗ | ಪೊರೆ ರಾಜಾಧೀರಾಜಾ ಪ ಪರ ಬೊಮ್ಮ ಸೇವಕರೆಂಬ | ಮರ್ಮವೆನಿಪ ತಾರ |ತಮ್ಯವ ನೊರೆದಂಥ | ಬ್ರಹ್ಮಣ್ಯ ಮುನಿಪೋ | ತ್ತುಮ್ಮರ ಕುವರ 1 ಪತಿ ಸೇ | ವಕ ನೆನಿಸುತ ವಿ | ರಕುತನಾಗಿ ಮೆರೆದ 2 ಬೊಮ್ಮ ಭವ | ನೋವು ಕಳೆವುದಯ್ಯನೀವೊಲಿಯದೆ ಗುರು | ಗೋವಿಂದ ವಿಠ್ಠಲ | ತಾವೊಲಿಯನು ಖರೆಯ 3
--------------
ಗುರುಗೋವಿಂದವಿಠಲರು
ಪಾರ್ಥಸಾರಥಿ ನಿಮ್ಮ ಸೇವೆಯ ಮಾಡಿ ಸಾರ್ಥಕವಾದೆನು ಪ ವಾರ್ಥಿಪುರುಷನೆ ನಿಮ್ಮ ಕೀರ್ತಿಯ ಕೊಂಡಾಡಲೆನಗೆ ಶಕ್ತಿಯ ವಿಸ್ತರಿಸೆನಗೆ ಯುಕ್ತಿಯ ಅ.ಪ ಆಚಾರ್ಯರಿಗೆ ಅಭಿವಂದನೆ ಮಾಡಿ ಅಜನರಾಣಿಯ ಭಜಿಸುವೆ ಅನಾದಿಕ್ರಮವನು ಪೇಳುವೆ 1 ಕೈರವಿಣಿಯಲ್ಲಿ ಸ್ನಾನವಮಾಡಿ ಕೈಮುಗಿದು ಮಾರುತಿಗೆ ನಾ ಕರುಣಿಆಚಾರ್ಯರಿಗೆ ವಂದಿಸಿ ಕರಿಯಬಳಿಗೆ ನಾ ಬಂದೆನು ನಾ ಕರಿಯ ಬಳಿಗೆ ಬಂದೆನು 2 ದವನೋತ್ಸವದ ಮಂಟಪಂಗಳು ಭಾಗವತರ ಭವನವು ಬಲವಬಳಸಿ ಭಕ್ತವತ್ಸಲನ ಚೆಲುವರಥವನು ನೋಡಿದೆ ನಾ ಶೇಷರಥವನು ಸೇವಿಸಿ 3 ಮೂಡಬೀದಿಯ ಸುತ್ತಿಬಂದು ಮಹದಾಹ್ವಯರನು ಸೇವಿಸಿ ಮಹಾನುಭಾವನ ವಿಮಾನವನು ನೋಡಿ ಮಾನವನ್ನು ಬಿಟ್ಯೆನೊ ದೇಹಾಭಿಮಾನವನ್ನು ಬಿಟ್ಯೆನೊ 4 ಕಾರಿಮಾರಿ ಪುತ್ರರಿಗೆ ಬಾರಿಬಾರಿಗೆ ವಂದಿಸಿ ವಾರಿಜಾಕ್ಷನ ಗೋಪುರವ ನೋಡಿ ಘೋರಪಾಪವ ಕಳೆದೆನೊ ಯನ್ನ ಘೋರಪಾಪವ ಕಳೆದೆನೊ 5 ಗರುಡಕಂಭವ ದೀಪಸ್ತಂಭವು ವಾಹನದ ಮಂಟಪಂಗಳು ವಾರಿಜನಾಭನ ಪಕ್ಷಿವಾಹನನ ನೋಡಿ ವಂದನೆಯ ಮಾಡಿದೆ ಅಭಿವಂದನೆಯ ನಾ ಮಾಡಿದೆ 6 ತೋರಣದ ಬಾಗಿಲನು ದಾಟಿ ವಾರುಣದೆದುರಲಿ ವಂದಿಸಿ ವಾರಿಜಾಕ್ಷಿ ಶ್ರೀವೇದವಲ್ಲಿಯ ಸಾರೂಪ್ಯವನು ನಾ ಬೇಡಿದೆ ಸಾಯುಜ್ಯವನು ನಾ ಬೇಡಿದೆ 7 ಭಕ್ತಿಸಾರರ ಚರಣಕೆರಗಿ ಹಸ್ತಗಿರೀಶನ ವಂದಿಸಿ ಸುತ್ತಿ ಗರುಡಕಂಬವನ್ನು ಮತ್ತೆ ಸಿಂಹನ ಸೇವಿಸಿ ದಿವ್ಯ ನಾರಸಿಂಹನ ಸೇವೆಸಿ 8 ವಿಷ್ಣುಚಿತ್ತರ ಪುತ್ರಿಯನ್ನು ಅರ್ಥಿಯಿಂದಲೆ ಸೇವಿಸಿ ಮುಕ್ತಿದಾಯಕ ರಂಗನ ಪಾದಕೆ ಮುದದಿ ವಂದನೆ ಮಾಡಿದೆ ನಾ ಮುದದಿ ವಂದನೆ ಮಾಡಿದೆ 9 ಯಾಮುನಾಚಾರ್ಯರಿಗೆ ವಂದಿಸಿ ಕಾಂಚೀಪೂರ್ಣರಿಗೆರಗುವೆ ವೇದಾಂತಾಚಾರ್ಯರ ವಂದನೆ ಮಾಡಿ ಅನಾದಿ ಪಾಪವ ಕಳೆದೆನೊ ನಾ ಅನಾದಿ ಪಾಪವ ಕಳೆದೆನೊ 10 ಭಾಷ್ಯಕಾರರ ಚರಣಕೆರಗಿ ವರಯೋಗಿಗಳಿಗೆ ವಂದಿಸಿ ಕುಲೇಶ ದಾಶರಥಿಗೆ ವಂದಿಸಿ ದ್ವಾರಪಾಲಕರ ನೋಡಿದೆ ನಾ ದ್ವಾರಪಾಲಕರ ನೋಡಿದೆ 11 ಗಂಟೆಬಾಗಿಲ ದಾಟಿ ಶ್ರೀವೈಕುಂಠವಾಸನ ಭಕ್ತರು ಹದಿ ನೆಂಟು ಆಳ್ವಾರುಗಳ ಸೇವಿಸಿ ಕಂಟಕಗಳ ಕಳೆದೆನೊ ಭವ ಕಂಟಕಗಳ ಕಳೆದೆನೊ 12 ಮಾಧವ ಅನಂತ ಶ್ರೀಪದ್ಮನಾಭನ ಸೇವಿಸಿ ಶ್ರೀರಾಮ ಲಕ್ಷ್ಮಣ ಭರತ ಶತ್ರುಘ್ನ ಸೀತೆಯನು ನಾ ನೋಡಿದೆ ಲೋಕಮಾತೆಯನು ನಾ ಬೇಡಿದೆ 13 ಆದಿಶೇಷನ ಮೇಲೆ ಮಲಗಿದ ಅನಾದಿರಂಗನ ಸೇವೆಗೆ ಕುಲ ಶೇಖರರ ಸ್ಥಾನದಲಿ ನಿಂದು ಯದುಕುಲೇಶನ ನೋಡಿದೆ ನಾನೆದುಕುಲೇಶನ ನೋಡಿದೆ 14 ಅನಿರುದ್ಧ ಸಹಿತಲೆ ಎಡದಿ ಸಾತ್ಯಕಿ ಪಂಚಮೂರ್ತಿಗಳ ನಡುವೆ ಪಾರ್ಥಸಾರಥಿ ಯೆಡಬಲದಿ ಶ್ರೀದೇವಿ ಭೂದೇವಿ 16 ಆದಿಶೇಷನ ಮೇಲೆ ತನ್ನಯ ಪಾದವನ್ನು ಪ್ರಸÀರಿಸಿ ವಿ ಅಂದುಗೆ ಗೆಜ್ಜೆ ಕುಂದಣದ ಪಾಡಗಗಳು ಆನಂದದ ಪಾಡಗಗಳು 17 ಕನ್ನಡಿಯಂದದಿ ಕಣಕಾಲುಗಳು ಉನ್ನತವಾದ ಪೀತಾಂಬರವು ಪನ್ನಗಶಯನನ ವಡ್ಯಾಣದಲಿ ಪರಮಮೂರ್ತಿಯ ಸರಗÀಳು ಶ್ರೀಮೂರ್ತಿ ಸರವನು ಸಿಕ್ಕಿಸಿ 18 ದುಷ್ಟನಿಗ್ರಹವನ್ನು ಮಾಡಿ ಶ್ರೇಷ್ಠರನ್ನು ಪರಿಪಾಲಿಪ ಶ್ರೀ ಕೃಷ್ಣಮೂರುತಿಯ ಎಡದ ಭಾಗದಿ ಶ್ರೇಷ್ಠವಾದ ಖಡ್ಗವು ಸರ್ವಶ್ರೇಷ್ಠವಾದ ಖಡ್ಗವು 19 ಸಿಂಧುರಾಜನ ಕೊಲ್ಲುವುದಕಾಗಿ ಅಂದು ಚಕ್ರವ ಕಳುಹಿದೆ ಒಂದು ಕೈಯಲಿ ಪಾದವ ತೋರುತ ಮತ್ತೊಂದು ಕೈಯಲಿ ಶಂಖವು ಅನಂದದಿಂದಲೆ ಶಂಖವು 20 ಸೃಷ್ಟಿಯೆಳಗ್ಹದಿನಾಲ್ಕು ಲೋಕವ ಪಕ್ಷಿವಾಹನವಂ ಬಿಟ್ಟು ವಕ್ಷಸ್ಥಳದಲಿ ಲಕ್ಷ್ಮಿದೇವಿಯ ರತ್ನಾದ್ಹಾರದಪದಕವು ನವರತ್ನದ್ಹಾರದ ಪದಕವು 21 ಕಂಠದೊಳಗಿಟ್ಟ ಕೌಸ್ತುಭಮಣಿ ಎಂಟುಪುಷ್ಪದ ಹಾರವು ವೈ ಕುಂಠವಾಸನ ಸೇವಿಸಿದರೆ ಕಂಟಕಂಗಳು ಕಳೆವುದು ಭವಕಂಟಕಗಳು ಕಳೆವುದು 22 ಕುಂದಕುಸುಮದಂತೆ ದಂತವು ಪವಳದಂತೆ ಅಧರಕಾಂತಿಯು [ಚೆಂದದಿ] ಪೊಳೆವ ಕರ್ಣಕುಂಡಲ ಚೆಲುವ ನಾಸಿಕದಂದವು ತಿಲಕುಸುಮನಾಸಿಕದಂದವು 23 ದೀಪದಂದದಿ ಕರುಣನೇತ್ರವು ಚಾಪದಂದದಿ ಪುಬ್ಬುಗಳಲಿ ವಿವೇಕವಾಗಿ ತೋರ್ಪುದು 24 ಪದುಮನಾಭನ ಸೇವಿಸಿದವರಿಗೆ ಒದಗಿ ಬರುವುದು ಮುಕ್ತಿಯು ಎಲ್ಲರಿಗೊದಗಿ ಬರುವುದಿಷ್ಟಾರ್ಥವು 25 ಪಾದದಿ ಕೇಶದ ಸೇವೆಯನು ಮಾಡಿ ಅನಾದಿಪಾಪವ ಕಳೆದೆನೊ ವೇದಮೂರುತಿ ವೆಂಕಟಕೃಷ್ಣನೆ ಪಾದವನ್ನು ತೋರಿಸು ನಿಮ್ಮ ಶ್ರೀ ಪಾದವನ್ನು ತೋರಿಸು 26
--------------
ಯದುಗಿರಿಯಮ್ಮ
ಪ್ರಸನ್ನ ಶ್ರೀ ವೇದವ್ಯಾಸ ಪ್ರಥಮ ಆಧ್ಯಾಯ ಪ್ರಾದುರ್ಭಾವಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ನಾರಾಯಣ ಸರ್ವ ಉರು ಗುಣಾರ್ಣವ ನಮೋ ಪಾರತಂತ್ರ್ಯಾದ್ಯಖಿಲ ದೋಷಾತಿ ದೂರ ಪರ ಬ್ರಹ್ಮ ಶ್ರೀ ರಮಣ ವಿಷ್ಣು ಸರ್ವೋತ್ತಮನೇ ಸೂರಿ ಜ್ಞಾನ ಪ್ರಾಪ್ಯ ನಿಗಮೈಕ ವೇದ್ಯ 1 ವಾಸುದೇವ ವೈಕುಂಠ ನಮೋ ತುರ್ಯ ಸಂಕರ್ಷಣ ಪ್ರದ್ಯುಮ್ನಾನಿರುದ್ಧ ತುರಗಾಸ್ಯ ಕಾರ್ದಮ ನಾಭಿಜಾತ್ರೇಯನೇ ಪರಮಾತ್ಮ ಉದ್ದಾಮ ಹರಿ ಶ್ರೀನಿವಾಸ 2 ಕೂರ್ಮ ಕ್ರೋಢ ನರಸಿಂಹ ವಾಮನ ಮುನಿಜ ರಾಘವ ಕೃಷ್ಣ ವನಜ ಕಲ್ಕೀಶ ಆನಂದ ಜ್ಞಾನಾದಿ ಗುಣಮಯ ರೂಪಗಳು ನಿತ್ಯ 3 ವಾರಿಜ ಭವಾಂಡವ ಸೃಜಿಸಿ ಅದರೊಳು ಪೊಕ್ಕು ಕೃತಿ ನಡೆಸಿ ಮೂರು ವಿಧ ಅಧಿಕಾರಿಗಳಿಗೆ ಗತಿ ಇತ್ತು ಮೂರು ವಿಧ ಜೀವರಿಗೆ ಯೋಗ್ಯ ಫಲವೀವಿ 4 ಯದಾ ಯದಾಹಿ ಸದ್ಧರ್ಮಕ್ಕೆ ಹಾನಿಯೋ ಅಧರ್ಮಕ್ಕೆ ವೃದ್ಧಿಯೋ ಆದಾಗ ಅವತರಿಪಿ ಸಾಧುಗಳ ಉದ್ಧಾರ ಪಾಪಿಗಳ ಪತನಕ್ಕೆ ಸದ್ಧರ್ಮ ಸ್ಥಾಪನೆಗೆ ಶ್ರೀಶ ಮುಕುಂದ 5 ಕಲಿಯ ಚಟುವಟಿಕೆಯಲಿ ವೈದಿಕ ಜ್ಞಾನ ಇಳೆಯಲಿ ಸುಜನರಲಿ ಕಡಿಮೆ ಆಗಿ ಶೀಲ ಗೌತಮ ಸಹ ನಿಧಾನ ತಪ್ಪಿ ಶಪಿಸೆ ಬೆಳೆಯಿತು ಅಜ್ಞಾನ ಕಲಿ ವಿಷ ಏರಿತು 6 ದೇವತೆಗಳಿದು ನಿನ್ನಲಿ ಪೇಳಿ ಪಾಥಿರ್üಸಲು ದೇವ ದೇವೋತ್ತಮ ನೀ ಅಭಯವನಿತ್ತು ಭುವಿಯಲಿ ಪರಾಶರ ಸತ್ಯವತಿ ಸುತನೆಂದು ಅವತಾರ ಮಾಡಿದಿ ಸಜ್ಜನೋದ್ಧಾರ 7 ವೃತತಿಜಾಸನ ಸುತ ವಸಿಷ್ಠ ಋಷಿಗಳ ಮಗ ಶಕ್ತಿ ಋಷಿಗಳ ಪುತ್ರ ಪರಾಶರ ಋಷಿಯು ಆ ತಪೋಧನ ನಿನ್ನ ಕುರಿತು ತಪಶ್ಚರಿಸಿದರು ಅಜ ನೀ ತನ್ನಲವತರಿಸು ಎಂದು 8 ವೇದ ವೇದಾಂಗ ಕೋವಿದ ಪರಾಶರರ ಶ್ರದ್ಧೆ ಶೀಲತ್ವವ ಮೆಚ್ಚಿ ನೀನು ಪೇಳ್ದಿ ವಸುರಾಜನ ಸುತೆ ಸತ್ಯವತಿಯ ಸುತನೆನಿಸಿ ಅವತಾರ ಮಾಡುವಿ ಎಂದು 9 ವಸುರಾಜ ಅಡವಿಯಲಿ ಬೇಟೆಯಾಡುವಾಗ ಇಚ್ಚೈಸಿ ಮಗ ತನ್ನ ರಾಣಿಯ ನೆನೆಯೇ ವಿಸರ್ಜನೆ ಆಯಿತು ರೇತಸ್ಸು ಅದನ್ನ ತನ್‍ಸತಿಗೆ ಕಳುಹಿಸಿದ ಪಕ್ಷಿ ಮೂಲಕ 10 ಶೇನಪಕ್ಷಿ ಅದನ್ನ ಕುಂಡದಲಿ ಹಿಡಕೊಂಡು ರಾಣಿಯ ಪಟ್ಟಣಕೆ ಹೋಗುವ ಮಾರ್ಗದಲಿ ಯ- ಶೇನಪಕ್ಷಿ ತಡೆದು ಯುದ್ಧ ಮಾಡಿತು 11 ಆಗ ವಸುರಾಜ ಕೊಟ್ಟ ಪೊಟ್ಟಣ ನೀರೊಳು ಬಿದ್ದು ಬಿದ್ದ ವೇಗದಲಿ ಎರಡಾಗಿ ಆಗ ಗಂಗೆಮಾತೆಯು ಪ್ರಸನ್ನಳಾಗಿ ಸಣ್ಣದರೋಳ್ ಆವಿಷ್ಟಳಾದಳು ಅದನ್ನ ಹೆಣ್ಣು ಮೀನೊಂದು ನುಂಗಿ ಗರ್ಭ ಧರಿಸಿತು 12 ಸರ್ವೋತ್ತಮನೇ ನಿನ್ನ ಅವತಾರ ಕಾಲದಲಿ ಗಂಗಾಧರಾದಿ ದೇವತೆಗಳು ತಪಸ್ ಮಾಡಿ ವರಗಳ ಹೊಂದುವುದು ಅನುಚಿತವೂ ಅಲ್ಲ ಆಶ್ಚರ್ಯವೂ ಅಲ್ಲ ಗಂಗಾಧರನೂ ತಪವಾಚರಿಸಿ ನಿನ್ನನುಗ್ರಹದಿಂ ಪುತ್ರನಾದ ಶುಕನಾಗಿ 13 ಮತ್ಸದ ಗರ್ಭವು ವರ್ಧಿಸಿತು ಆಗ ಬೆಸ್ತರು ಆ ಮೀನ ಹಿಡಿದು ಸೀಳೆ ಅದರ ಉದರದಿ ಎರಡು ಶಿಶುಗಳ ಕಂಡರು ಒಂದು ಹೆಣ್ಣು ಮತ್ತೊಂದು ಮಗು ಗಂಡು 14 ತಮ್ಮ ನಾಯಕ ದಾಸರಾಜನಲಿ ಪೋಗಿ ಆ ಮೀನುಗಾರರು ಶಿಶುಗಳ ಕೊಡಲು ಆ ಮತಿವಂತನು ವಸುರಾಜನಲಿ ಪೋಗಿ ಸಮಸ್ತವ ಪೇಳಿ ಮಕ್ಕಳ ಮುಂದೆ ಇಟ್ಟ 15 ವಸುರಾಜನು ವಿಷಯವ ಚೆನ್ನಾಗಿ ಅರಿತು ಶಿಶುಗಳು ತನ್ನದೇ ಎಂದು ತಿಳಿದು ಭಾಸ್ಕರೋಜ್ವಲ ಗಂಡು ತಾನು ಇಟ್ಟುಕೊಂಡು ಶಶಿಕಾಂತಿಯ ಮಾತ್ಸೇಯ ದಾಸನಿಗೆ ಕೊಟ್ಟ 16 ಶೀಲತ್ವ ಸುಗುಣತ್ವದಲಿ ಪ್ರಕಾಶಿಸುತ ಬೆಳೆಯುತಿಹಳು ದಾಸರಾಜನ ಗೃಹದಿ ಬಾಲೆ ಇವಳಿಗೆ ಸತ್ಯವತೀ ಎಂಬ ನಾಮವು ಬಲು ಪುಣ್ಯವಂತಳು ಸುಶುಭ ಲಕ್ಷಣಳು 17 ದಾಸನಾಯಕನ ಮನೆಯಲ್ಲಿ ಬೆಳೆವ ಕಾರಣ ದಾಸನು ನಾವಿಗನು ಆದ್ದರಿಂದ ಸುಶೀಲೆ ಈ ಸತ್ಯವತಿಯು ನಾವೆ ನಡೆಸುವಳು ವಸುರಾಜಪುತ್ರಿ ಇವಳಿಗೆ ಗರ್ವವಿಲ್ಲ 18 ಸಮುದ್ರ ಕುರಿತು ಪ್ರವಹಿಸುವ ಸೂರ್ಯಾತ್ಮಜ ಯಮುನೆಯ ದಾಟಲು ಹಡಗಿನಲ್ಲಿ ಕುಳಿತ ಆ ಮುನಿ ಪರಾಶರರಿಗೆ ಒದಗಿದಳು ಕಾಲ 19 ಶ್ರೀಶ ನಿನ್ನಯ ಮಾತು ನೆನೆದು ಪರಾಶರರು ಆ ಸತ್ಯವತಿಯನ್ನ ಮದುವೆ ಆಗಲು ಒಪ್ಪಲು ವಸಿಷ್ಠರು ಯಾಜ್ಞವಲ್ಕ್ಯಾದಿ ಮುನಿ ಸಭೆಯಲಿ ವಸುರಾಜನು ಧಾರೆ ಎರೆದಿತ್ತ ಮಗಳ 20 ನಾರದರ ವೀಣೆ ಸಂಗೀತ ಗಾಯನವು ಸುರ ಗಂಧರ್ವರ ಸುಸ್ವರ ಗಾನ ಸುರನಾರಿ ನರ್ತಕರ ಆನಂದ ನರ್ತನವು ಸರಸಿಜಾಸನ ಮುಖ ಸುರರ ಸ್ತೋತ್ರಗಳು 21 ನೀಲ ಮೇಘ ಶ್ಯಾಮ ಇಂದಿರಾಪತಿಯು ಕಲಿ ವಿದಾರಕ ವಿಜ್ಞಾನ ಭೋದಕನು ಇಳೆಯಲಿ ವ್ಯಾಸ ಅವತಾರ ಸಮಯವೆಂದು ಸುರರು ಕೂಡಿ ತುಂಬಿದರು 22 ನಿಮೇರ್ಘ ಹಿಮ ಆಗಲಿ ದೇಶ ಪ್ರಕಾಶಿಸಿತು ಮರಗದ ವರ್ಣದಲಿ ಜ್ವಲಿಸುವ ರೂಪ ಉರು ಸ್ವಕಾಂತಿ ಸಹಸ್ರ ಲಕ್ಷ ಕೋಟ್ಯಮಿತ ಸೂರ್ಯತೇಜಃ ಪುಂಜ ಅವತಾರ ಮಾಡಿದಿ 23 ಶೋಣಿತ ಸಂಬಂಧ ಇಲ್ಲವೇ ಇಲ್ಲ ಅಪ್ರಾಕೃತ ಚಿದಾನಂದ ಕಾಯ ಚಿಕ್ಕ ಬಾಲಗೆ ಅಂದು ಒಲಿದು ಕಂಬದಿ ಬಂದ ಶ್ರೀಕಾಂತ ನರಸಿಂಹ ಅವತಾರದಂತೆ 24 ತಂದೆ ತಾಯಿಲ್ಲದೆ ಪುಂ ಸ್ತ್ರೀ ಕೂಡದೆ ಅಂದು ಕಂಬದಿಂದ ಸ್ವೇಚ್ಛದಿ ಬಂದಿ ಇಂದು ಸ್ವತಂತ್ರದಿ ಸತ್ಯವತಿ ಋಷಿ ಮುಂದೆ ಬಂದು ಪ್ರಕಟಿಸಿದಿ ವ್ಯಾಸ ಅವತಾರ 25 ಶೋಣಿತ ರಹಿತ ಅಲೌಕಿಕವಾದರೂ ನೀ ಲೋಕ ರೀತಿಯಲಿ ಪುಟ್ಟಿದ ತೆರದಿ ಕಲಿ ಕಲಿ ಪರಿವಾರ ದುರ್ಜನ ಮೋಹಕ್ಕೆ ಮಾಲೋಲ ನೀ ವಿಡಂಬನ ಮಾಡಿ ತೋರ್ದಿ 26 ಅಂಕುಶ ಅಬ್ಜ ಧ್ವಜ ಚಕ್ರ ರೇಖ ಪದಯುಗ ಪದ್ಮ ಸುಖಜ್ಞಾನಮಯ ಜ್ಞಾನ ಸುಖದ ಧ್ಯಾನಿಪರ್ಗೆ ತಟಿತ್ ಪ್ರಭಾ ಜಟಾಮಕುಟ ಶಿರವು ಪ್ರಕಾಶಿಸುವ ಕಸ್ತೂರಿ ತಿಲಕ ಲಲಾಟ 27 ಸೃಷ್ಟ್ಯಾದಿಕರ್ತ ನಿನ್ನ ಭೃ ಚೆಂದ ನಿಖಿಳ ಇಷ್ಟಪ್ರದ ಅನಿಷ್ಟ ನಿವಾರಕ ನೋಟ ಕರ್ಣ ಕುಂಡಲದ್ವಯವು ಶ್ರೇಷ್ಠತಮ ತುಳಸೀ ದಳಗಳು ಕಿವಿಯೋಳ್ 28 ಸುಧಾರಸ ಸುರಿಸುವ ಶಶಿಕೋಟಿ ನಿಭ ಮುಖ ಸಂದರ್ಶನ ಸುಖ ಸಂದೋಹ ಈವುದು ಮಂದಹಾಸವು ನತಜನ ಶೋಕ ಕಳೆವುದು ಶುಭ ಲೋಹಿತೋಷ್ಟ್ರಗಳು 29 ಸುಂದರ ರೇಖಾತ್ರಯಯುತ ಕುಂಬುಗ್ರೀವದಿ ಕೌಸ್ತುಭ ಮಣಿಯು ಶ್ರೀ ದೇವಿಗಾಶ್ರಯ ವಿಶಾಲ ವಕ್ಷ ಸ್ಥಳದಿ ಚಿದ್ದಮಲ ಮೋದಮಯ ಶ್ರೀವತ್ಸ ಅಂಕ 30 ಪೊಳೆವ ರತ್ನದ ಹಾರಗಳು ಉರದೇಶದಲಿ ವಲಿತ್ರಯಾಂಕಿತ ಉಳ್ಳ ಉದರ ಸುಂದರವು ಕೀಲಾಲಜ ಭವಾಂಡವ ಪಡೆದ ನಾಭಿಯು ಬೆಳಗುತಿದೆ ಮೌಂಜಿಯು ಸುಪ್ರಕಾಶದಲಿ 31 ಸುಪವಿತ್ರ ಜ್ಞಾನ ತೇಜ ಕೃಷ್ಣಾಜಿನವು ಶ್ರೀಪ ನಿನ್ನಯ ದಿವ್ಯ ಯೋಗ ಅಸನವು ಉಪಮವಿಲ್ಲದ ಸುಂದರ ಕಟಿಜಾನು 32 ಉರು ಜಂಘಾ ಗುಲ್ಫ ಪದ್ಮಾಂಘ್ರಿ ಸೌಂದಂiÀರ್i ಉರು ಸುಶುಭ ಲಕ್ಷಣ ವರ್ಣಿಸಲಶಕ್ಯ ವಜ್ರನಖಗಳ ದ್ಯುತಿ ಶಶಿ ಕೋಟ್ಯಮಿತವು ಶುಭ್ರತಮ ಯಜÉ್ಞೂೀಪವೀತ ಧರಿಸಿರುವಿ 33 ತಿಮಿರ ಮಾರ್ತಾಂಡ ನೀ ರವಿ ಕೋಟಿ ಅಮೃತ ಇಂದು ಕೋಟಿ ಅತ್ಯಧಿಕ ತೇಜ ಈ ದಿವ್ಯ ಸುರೂಪದಿ ಶ್ರೀಯಃಪತಿಯೇ ಪ್ರಾದುರ್ಭವಿಸಿದಿ ಸ್ವಾಮಿ 34 ನೀ ಪ್ರಾರ್ದುರ್ಭವಿಸಿ ದಿನ ಏಳೊಳಗೆ ಉಪನಯನ ರೂಪ ಪೂಜೆ ಪರಾಶರರು ಮಾಡಿದರು ಉಪನಯನ ಸಂಸ್ಕಾರ ಲೀಲಾ ಮಾತ್ರವು ನಿನಗೆ ಆ ಪರಾಶರ ಸತ್ಯವತಿಗೆ ಮುದಕರವು 35 ಸತ್ಯವತೀ ಪರಾಶರರ ಸುತನೆಂದು ನೀ ಕೀರ್ತಿ ಅವರಿಗೆ ಜಗತ್ತಲ್ಲಿ ಇತ್ತಿ ಸಾತ್ಯವತೇಯ ಪರಾಶರ್ಯ ನಾಮದಿಂ ಸತ್ ಸೃಷ್ಟಿ ಸುಖಜ್ಞಾನ ಪವಿತ್ರತ್ವಜÉ್ಞೀಯ 36 ಯಾವ ಯಾವಾಗ ಸತ್ಯವತಿ ಪರಾಶರರು ದೇವತಾ ಸಾರ್ವಭೌಮನೇ ವ್ಯಾಸ ನಿನ್ನ ತಾವು ನೋಡಲು ಇಚ್ಛೈಸಿ ನೆನೆಯುವರೋ ಆವಾಗ ತೋರುವಿ ಎಂದಿ ಮಾತೆಗೆ 37 ವ್ಯಾಸ ಅವತಾರದ ಕಾರ್ಯೋನ್ಮುಖನಾಗಿ ನಗ ಮೇರುಗಿರಿಗೆ ಬಿಸಜಭವ ಮೊದಲಾದ ದೇವರು ಹಿಂಬಾಲಿಸುತ ಶ್ರೀಶ ನೀ ಹೊರಟೆ ಪ್ರಣತಾರ್ತಿಹರ ಅಜಿತ 38 ಜ್ಞಾನ ಸುಖಪೂರ್ಣ 'ಪ್ರಸನ್ನ ಶ್ರೀನಿವಾಸ' ಪೂರ್ಣ ಪ್ರಜ್ಞರ ಹೃತ್‍ಸ್ಥ ವನಜ ಭವತಾತ ಸ್ವರ್ಣಾಂಡ ಬಹಿರಂತವ್ರ್ಯಾಪ್ತ ತೇಜಃಪುಂಜ ಆ ನಮಿಪೆ ಬದರೀಶ ಜ್ಞಾನಮುದ ಧನದ 39 - ಇತಿ ಪ್ರಥಮಾದ್ಯಾಯ ಸಂಪೂರ್ಣಂ - ದ್ವಿತೀಯ ಅಧ್ಯಾಯ ಸಾರ ಜ್ಞಾನ ಸುಖ ಬಲಪೂರ್ಣ ಅನಘ ವೇದವ್ಯಾಸ ವನಜಜಾಂಡಾಂತರ್ ಬಹಿವ್ರ್ಯಾಪ್ತ ಶ್ರೀಶ ಇನ ಸೋಮ ಕೋಟ್ಯಮಿತ ತೇಜ ಚಿನ್ಮಯಗಾತ್ರ ಜ್ಞಾನಾದಿ ಸಂಪತ್‍ಪ್ರದ ಶರಣು ಪಾಹಿ ಪ ರಾಜ ರಾಜೇಶ್ವರನೇ ರಾಜೀವಾಲಯ ಪತೇ ರಾಜೀವಭವ ಭವಾದ್ಯಮರ ವಿನುತ ರಾಜೀವ ಪದಯುಗಗಳ್ಗೆ ಶರಣಾದೆ ನಿನ್ನಲಿ ರಾಜೀವನಯನ ಔದಾರ್ಯ ಕರುಣಾಬ್ಧಿ 1 ಸೃಷ್ಟಿ ಕಾಲದಲಿ ನೀ ಪರಮೇಷ್ಟಿರಾಯನಿಗೆ ಶ್ರೇಷ್ಟ ನಿಗಮಾದಿಗಳ ಬೋಧಿಸಿದ ತೆರದಿ ಕೃಷ್ಣ ದ್ವೈಪಾಯನನೆ ಸುರಮುನಿಗಳಿಗೆ ಈಗ ಉತ್ಕøಷ್ಟ ಉಪದೇಶ ಮಾಡಿದಿ ಮೇರುವಿಲಿ 2 ಸಮಸ್ತ ಶಾಸ್ತ್ರಾರ್ಥ ನಿದರ್ಶನಾತ್ಮಕವಾದ ವಿಮಲ ಶಾಸ್ತ್ರೋತ್ತಮ ಮಹಾ ಭಾರತವನು ಸುಮಹಾ ವೇದಾರ್ಥ ನಿರ್ಣಯಕವಾದ ಬ್ರಹ್ಮ ಸೂತ್ರಂಗಳ ವಿರಚಿಸಿದಿ ವ್ಯಾಸ 3 ಹರಿ ವ್ಯಾಸ ಕೃಷ್ಣದೈಪಾಯನ ನಿನ್ನ ಅಮಿತ ಬಲಯುತ ಶರದಿಂ ರುದ್ರಾದಿಗಳ ಮನೋಗತವಾಗಿ ಇರುತ್ತಿದ್ದ ಕ್ರೂರ ಕಲಿಮೃತನಾದವನಂತೆ ಆದ 4 ಸಾತ್ಯವತೇ ವ್ಯಾಸ ನಿನ್ನಯ ಮುಖಾಂಬುಧಿಯಿಂದ ಉದ್ಭೂತವಾದ ಉತ್ತಮ ಜ್ಞಾನ ರೂಪ ಸುಧೆಯ ದೇವತೆಗಳು ಭುಂಜಿಸಲು ಆಗ ವಿದೂರರಾದರು ಕಲಿಯ ಕಲ್ಮಷದಿಂದ 5 ವಿಧಿ ವಾಯು ಎಂದೆಂದೂ ಕಲಿಕಲುಷ ವಿದೂರರು ಬಂದ ರುದ್ರಾದಿಗಳು ಮುಂದೆ ಕುಳಿತು ಶ್ರೀದ ನೀ ಬೋಧಿಸಿದ ಮಹಾಭಾರತ ಬ್ರಹ್ಮ- ಸೂತ್ರಾದಿ ಅಮೃತವ ಪಾನ ಮಾಡಿದರು 6 ಮನುಷ್ಯೋತ್ತಮರೊಳು ಇದ್ದ ಕಲಿ ಭಂಜನಕೆ ದೀನ ದಯಾಳು ನೀ ದಿಗ್ವಿಜಯಗೈದಿ ಮಂದಾಧಿಕಾರಿಗಳ ಉಪಕಾರಕಾಗಿ ನೀ ನಿಗಮ ವಿಭಾಗ ಮಾಡಿದಿಯೋ 7 ಯಾವ ಯಾವ ಸಜ್ಜನರು ಅಜ್ಞಾನ ಪೂರಿತರೋ ಅವರು ವಾಸಿಸುವ ಸ್ಥಳಗಳಿಗೆ ಪೋಗಿ ದಿವ್ಯ ಸಜ್ಞಾನವ ಬೋಧಿಸಿ ಕಲಿ ವಿಷ ನಿವಾರಣ ಮಾಡಿದಿ ಕರುಣಾಂಬು ನಿಧಿಯೇ 8 ಪರಮಾರ್ಥ ಭಾಷ್ಯಾರ್ಥ ಐಹಿಕಾಮುಷ್ಮಿಕ ಸರ್ವಾರ್ಥ ಒದಗಿಸುವ ಮುಖ್ಯ ನಿಯಂತೃ ಪರಮಾತ್ಮ ವ್ಯಾಸ ನೀ ದಿಗ್ವಿಜಯ ಮಾರ್ಗದಲಿ ಮರವಟ್ಟ ಕ್ರಿಮಿಗೆ ಔದಾರ್ಯದಲಿ ಒಲಿದಿ 9 ಹರಿಯ ಅಪರೋಕ್ಷ್ಯವು ಲಭಿಸಿದವರಿಗೂ ಸಹ ಕರ್ಮ ನಿಮಿತ್ತ ನರ ನರೇತರ ಜನ್ಮ ಅಸಂಭವವು ಅಲ್ಲವು ಈ ಕ್ರಿಮಿ ಜನ್ಮ ಸಹ ಪ್ರಾರಬ್ಧ ನಿಮಿತ್ತ 10 ಶೂದ್ರನು ಲೋಭಿಯು ಪೂರ್ವ ಜನ್ಮದೀ ಕ್ರಿಮಿಯು ಈ ದೇಹವ ಬಿಡು ರಾಜನಾಗಿ ಹುಟ್ಟಿಸುವೆ ಎಂದು ನೀ ಪೇಳಲು ದೇಹದಾಶೆ ಪ್ರಕಟಿಸಿತು ಆದರೂ ಆ ಕ್ರಿಮಿಗೆ ರಾಜಪದವಿತ್ತಿ 11 ಆ ಕ್ರಿಮಿಯಿಂದ ನೀ ರಾಜ್ಯವ ಆಳಿಸಿ ಜಗದೇಕ ಸ್ವಾಮಿಯು ಸ್ವತಂತ್ರ ಸಚ್ಛಕ್ತ ಭಕ್ತೇಷ್ಟ ಸಿದ್ಧಿದ ಸತಾಂಗತಿ ನೀನೆಂದು ಜಗತ್ತಿಗೆ ವ್ಯಕ್ತ ಮಾಡಿದಿ ದೇವ ದೇವ 12 ಅಗಣಿತ ಗುಣಾರ್ಣವನೇ ವ್ಯಾಸ ಕೃಷ್ಣನೇ ನಿನ್ನ ಮಗನೆಂದು ತಾ ಜನಿಸಿ ಸೇವಿಸಬೇಕೆಂದು ಗಂಗಾಧರ ನಿನ್ನ ಕುರಿತು ಮಹತ್ತಪಸ್ ಮಾಡಿ ಹಾಗೆ ನಿನ್ನಿಂದ ವರ ಪಡೆದು ಮಗನಾದ 13 ಯಥಾರ್ಥ ಹೀಗಿರಲು ನೀನು ಸಹ ತಪಸ್ ಮಾಡಿ ರುದ್ರಗೆ ವರವಿತ್ತು ಅಧಮರ ಮೋಹಿಸಿದಿ ಒಂದೊಂ
--------------
ಪ್ರಸನ್ನ ಶ್ರೀನಿವಾಸದಾಸರು
ಬಳಿಯೊಳು ಕುಳಿತು ಹೊಗಳುವಗಿಂತ ಪ ಹುಳಿಯಾಗದೆ ಕಾಯಿಸಿಹಿದಹುದೇ ಮದ ಅಳಿದಲ್ಲದೆ ಹರಿಯೊಲುಮೆಯು ಬಹುದೇ ಅ.ಪ ಹಳಿವು ಮನದೊಳಿಹ ಕೊಳೆಯನು ಕಳೆವುದು ಹಳಿವಿರದಿರೆ ಮದ ಮೊಳೆದೋರುವುದು ಹಳಿವಿನ ಭಯದಿಂದ ಬೆಳೆವುದು ಶುದ್ಧತೆ ಹಳಿವು ಸತ್ಕೀರ್ತಿಯ ಬೆಳಗುವ ದೀಪ 1 ಮನದೊಳಸೂಯೆಯ ಕಳೆದು ನಾಲಗೆಯಲಿ ಇನಿವಾತುಗಳ ಬಿನ್ನಾಣವ ಬೀರಿ ನಿನಗೆ ಸಮಾನರಿನ್ನಿಲ್ಲಾ ಎಂಬ ಕ್ಷುಲ್ಲ ಮನುಜನು ಸ್ವಾರ್ಥದಿ ಕೆಡಿಸುವನಯ್ಯ 2 ಹಳಿವಿಂದಲೆ ಕೃಷ್ಣ ಮೂರು ರತ್ನವ ತಂದ ಹಳಿವಿಂದಲಿ ಸೀತೆ ಕೀರ್ತಿ ಹೊಂದಿದಳು ಹಳಿದಲ್ಲದೆ ಸತ್ಯ ಹೊರಹೊಮ್ಮದು ಯನ್ನ ಹಳಿವರನೊದಗಿಸೋ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಿಡುಮನವೆ ಬಿಡದಿಹ್ಯ ಸಂಸಾರ ಪಡಕೊಂಬುದು ಮಾಡು ನೀ ಸುವಿಚಾರ 1 ವಿಚಾರದೊಳಗದ ಬಲು ವಿವೇಕ ಸೂಚಿಸಿಬಾಹುದು ಸ್ವಾತ್ಮದ ಸುಖ2 ಸ್ವಾತ್ಮದ ಸುಖ ತಿಳಿದವ ಸ್ವತ:ಸಿದ್ಧ ಮತ್ತೆಲ್ಲಿಹದವಗೆ ಭವಬಂಧ 3 ಭವಬಂಧವ ತಿಳಿಯಲುಪಾಯ ಭುವನದಲ್ಯದ ಶುಕನಳಿಕನ್ಯಾಯಾ 4 ನ್ಯಾಯವ ತಿಳಿದರೆ ನೋಯವನೆಂದು ಶ್ರಯ ತಿಳಿಯಲು ತಾ ಬಂಧು 5 ಬಂಧು ಹಗೆಯು ತನಗೆ ತಾಯೆಂದು ಸಂಧಿಸಿ ಪಾರ್ಥಗ್ಹೇಳಿದ ಹರಿ ಬಂದು 6 ಹರಿವಾಕ್ಯವೆ ಗುರುಗುಹ್ಯದ ಗುಟ್ಟು ಪರಮಾನಂದದ ಹೆಜ್ಜೆಯ ಮೆಟ್ಟು 7 ಹೆಜ್ಜೆಲೆ ನಡೆವನು ಕೋಟಿಗೊಬ್ಬವನು ಸಜ್ಜನ ಶಿರೋಮಣೆನಿಸಿಕೊಂಬುನು 8 ಶಿರೋಮಣೆನಿಕೊಂಬುದು ಗುರುಕರುಣ ಗುರುಚರಣಕೆ ಬ್ಯಾಗನೆಯಾಗು ಶರಣು 9 ಶರಣ ಹೊಕ್ಕವಗೆಲ್ಲಿಹುದು ಮರಣ ಮರಣಕ ಮರಣವ ತಂದವ ಜಾಣ 10 ಜಾಣನೆ ಜನ್ಮರಹಿತ ವಾದವನು ಜನವನ ಸಕಲ ಸಮವಗಂಡವನು 11 ಸಮಗಂಡವಗಳದಿಹ್ಯ ಶ್ರಮವೆಲ್ಲಾ ರಾಮ ವಸಿಷ್ಠರೊಳಾಡಿದ ಸೊಲ್ಲ 12 ಸೊಲ್ಲಿಗೆ ಮುಟ್ಟಿದವ ಪ್ರತಿಯಿಲ್ಲ ಎಲ್ಲರೊಳಗ ವಂದಾದವ ಬಲ್ಲ 13 ಬಲ್ಲವನೆ ಬಲ್ಲನು ಬಯಲಾಟ ಎಲ್ಲರಿಗಿದೆ ಅಗಮ್ಯದ ನೋಟ 14 ನೋಟಕ ನೀಟ ಮಾಡಿದವನು ಧನ್ಯ ನೀಟಿಲೆ ನಡೆದವ ಕೋಟಿಗೆ ಮಾನ್ಯ 15 ಕೋಟಿಗೆ ಒಬ್ಬನು ತತ್ವಜ್ಞಾನಿ ನೋಟವಗಂಡಿಹ್ಯ ಮಹಾ ಸುಜ್ಞಾನಿ 16 ಸುಜ್ಞಾನಿಗೆ ಘನಮಯ ಸುಕಾಲ ಸುಗಮ ಸುಪಥವಾಗಿಹುದನುಕೂಲ 17 ಅನುಕೂಲದ ನಿಜ ಮಾತನೆ ಕೇಳು ಅನುದಿನ ಘನಗುರು ಸೇವಿಲೆ ಬಾಳು 18 ಪರಿ ಲೇಸು ಕಳೆವುದು ಮಿಕ್ಕಿನ ಭ್ರಾಂತಿಯ ಸೋಸು 19 ಸೋಸ್ಹಿಡಿದರ ಇದೊಂದೇ ಸಾಕು ವೇಷವದೋರುವದ್ಯಾತಕೆ ಬೇಕು 20 ಬೇಕೆಂಬ ಬಯಕೆಯ ಈಡ್ಯಾಡು ಸೋಕಿ ಶ್ರೀ ಸದ್ಗುರು ಪಾದದಿ ಕೂಡು 21 ಪಡೆವುದಿದೇ ಸ್ವಸುಖ ಸಾಧನ 22
--------------
ಕಾಖಂಡಕಿ ಶ್ರೀ ಮಹಿಪತಿರಾಯರು