ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಾಣಿ ಶ್ರೀ ಕೃಷ್ಣವೇಣಿ ಪ್ರಾಣಪತಿ ಪದಕಮಲ ಕಾಣಿಸು ಹೃದಯದಿ ತ್ರಾಣಿ ಶ್ರೀ ಕೃಷ್ಣ ವೇಣಿ ಪ ಯಮಧರ್ಮತನಯೆ ಶ್ರೀ ಕೃಷ್ಣ ಸಂಗದಿ ಜನಿಸಿ ಕಮಲ ಸಂಭವನ ಲೋಕದಲಿ ಮೆರೆದೆ ಸುಮನಸರ ನುಡಿಗೇಳಿ ಲೋಕಗಳ ದುರಿತೋಪ ಶಮನ ಗೊಳಿಸಲು ಬಂದೆ ತುಮಲ ಹರುಷದಲಿ 1 ಭೂತನಾಥನ ಜಟಾಜೂಟದಿಂದುದ್ಭವಿಸಿ ಶ್ವೇತಪಿಂಗಳ ಶೈಲಶಿಖರಕಿಳಿದೇ ಭೂತಳಕೆ ಭೂಷಣಳೆನಿಸಿ ಪೂರ್ವವನಧಿ ನಿ ಕೇತನವನೈದಿ ಸುಖಿಸಿದಿ ನಿನ್ನ ಪತಿಯೊಡನೇ 2 ಪ್ರಾಣಿಗಳು ನಿನ್ನ ಜಲಪಾನವನು ಗೈಯೆ ನಿ ತ್ರಾಣ ಸಂಹಾರ ವ್ಯಾಧಿಗೆ ಭೇಷಜಾ ಪ್ರಾಣ ಪ್ರಯಾಣ ಪಾಥೇಯವೆಂದರಿಯೆ ನಿ ರ್ವಾಣಪದವಿತ್ತು ಕಲ್ಯಾಣವಂತರ ಮಾಳ್ಪೆ 3 ಜನಪದಗಳಾಗಿ ಕಾನನವಾಗಿ ಮನ್ವಾದಿ ದಿನಗಳಲ್ಲಾಗಿ ಮತ್ತೇನಾಗಲೀ ಮನುಜ ಮಜನಗೈಯೆ ವಾಜಪೇಯಾದಿ ಮಖ ವನುಸರಿಸಿದಕೆ ಫಲವೇನು ತತ್ಪಲವೀವೆ 4 ಅರವತ್ತು ಸಹಸ್ರ ವರುಷಂಗಳಲ್ಲಿ ನಿ ರ್ಜರ ತರಂಗಿಣಿಯ ಮಜ್ಜನದ ಫಲವು ಗುರುವು ಕನ್ಯಸ್ಥನಾಗಿರಲು ಒಂದಿನ ಮಿಂದ ನರರಿಗಾ ಪುಣ್ಯಸಮನೆನಿಸಿ ತತ್ಫಲವೀವೇ 5 ಮನನಶೀಲ ಸುಯೋಗಿಗಳಿಗಾವ ಗತಿಯು ಇಹ ವನುದಿನದಿ ನಿನ್ನ ತೀರದಲಿ ಇಪ್ಪಾ ಮನುಜೋತ್ತಮರಿಗೆ ಆ ಗತಿಯಿತ್ತು ಪಾಲಿಸುವೆ ಅನುಪಮ ಸುಕಾರುಣ್ಯಕೆಣೆಗಾಣಿ ಜಗದೊಳಗೆ 6 ತಾಯೆ ಎನ್ನನುದಿನದಿ ಹೇಯ ಸಂಸಾರದೊಳ ಗಾಯಾಸ ಗೊಳಿಸದಲೆ ಕಾಯಬೇಕೊ ವಾಯುಪಿತ ಶ್ರೀ ಜಗನ್ನಾಥ ವಿಠ್ಠಲ ಹೃ ತ್ತೋಯಜದೊಳಗೆ ಕಾಂಬುಪಾಯ ಮಾರ್ಗವ ತೋರೆ 7
--------------
ಜಗನ್ನಾಥದಾಸರು
ಹರಿಯನ್ನು ಒಲಿಸಿಕೊಡೋ ಮಾರುತಿರಾಯಾಹರಿಯನ್ನು ಒಲಿಸಿಕೊಡೊ ಪ ಪರಿ ಮುಖದಿಂದಲೆಸರುವರು ಕಾಣಬೇಕೆಂಬರು ನೋಡೋ ಅ.ಪ. ಪರಮಭಕ್ತ ನೀನೆಂದೂ ಎಂದೆಂದೂಹರಿಯ ಮೀರನೆಂದು ಒರೆವರು ಮನದಂದುಮೊರೆಯು ನನ್ನದು ಇಂದುಹರಿಗೆ ನಿವೇದಿಸು ಕರುಣಾಸಿಂಧು 1 ಒಡೆಯ ರಾಮಗೆ ನೀ ದೂತ ಎಂದಿಗೂ ಆತನಡೆಸುವ ನಿನ್ನ ಮಾತಬಡವ ನಾನೊಬ್ಬನು ಕಡು ಕರುಣೆಯ ಭಿಕ್ಷೆಕೊಡು ಎಂದು ಬೇಡುವೆನೆಂದು ನೀ ತಿಳಿಸುತ 2 ಹಾಯಗೊಡರು ಜೀಯಾ ಬಾಗಿಲದಲಿಕಾಯುವ ಜಯ ವಿಜಯಾಶ್ರೀಯರಸನ ಕಾಂಬುಪಾಯವ ಕಲಿಸಿಬಡಪಾಯೆನಗೆ ನೀ ನೀಡುತ ಕಯ್ಯಾ 3 ಸದಯನೆ ಕರುಣ ಬಂತೆ ಸಂಸಾರದಿಕುದಿಸುವದೆನ್ನ ಚಿಂತೆಗದುಗಿನ ವೀರನಾರಾಯಣನೆನ್ನೊಳು ಸದಾಕಾಲದಿ ಹೃದಯದಿ ನಿಲುವಂತೆ 4
--------------
ವೀರನಾರಾಯಣ