ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದಾದರಹುದೆನ್ನಿ ಅಲ್ಲವಾದರಲ್ಲವೆನ್ನಿ ಪ ಬಹುಜನರು ನೆರೆ ತಿಳಿದು ಪೇಳಿ ಮತ್ತಿದನು ಅ ಕುಹಕ ಯುಕುತಿಹೇವವಿಲ್ಲದ ಹೆಣ್ಣು ಗಜುಗ ಬೆಳೆದ ಕಣ್ಣುಸೇವೆಯರಿಯದ ದಣಿಯು ಕಲ್ಲಿನಾ ಕಣಿಯು1 ಧರ್ಮವಿಲ್ಲದ ಅರಸು ಮುರಿದ ಕಾಲಿನ ಹೊರಸುನಿರ್ಮಲಿಲ್ಲದ ಮನಸು ಅದು ಕಜ್ಜಿ ತಿನಿಸುಶರ್ಮವಿಲ್ಲದ ಗಂಡು ಕರಿಯ ಒನಕೆಯ ತುಂಡುಮರ್ಮವಿಲ್ಲದ ಮಾತು ಒಡಕು ಮಡಕೆ ತೂತು 2 ಭೃತ್ಯ ಅವ ಕ್ರೂರ ಕೃತ್ಯ 3 ಬಂಟ ಒಡಕು ಹರವಿಯ ಕಂಠಗಂಡಗಂಜದ ನಾರಿ ಅವಳೆ ಹೆಮ್ಮಾರಿ 4 ದಾತ ಅವ ಹೀನ ಜಾತಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಭಜಿಸದ ನರನು ಅವನೆ ವಾನರನು 5
--------------
ಕನಕದಾಸ
ಈ ಸಿರಿಯ ನಂಬಿ ಹಿಗ್ಗಲು ಬೇಡ ಮನವೆ ಪ ವಾಸುದೇವನ ಭಜಿಸೊ ಒರಟು ಜೀವನವೆ ಅ ನೆಂಟರೂರಿಗೆ ಹೋಗಿ ನಾಲ್ಕು ದಿವಸವಿದ್ದರೆಎಂಟು ದಿನದಾಯಾಸ ಅಟ್ಟಬಹುದೊಉಂಟು ಸೌಭಾಗ್ಯವೆಂಬ ಧೈರ್ಯವ ಬಿಟ್ಟು ವೈ-ಕುಂಠವಾಸಿಯ ಭಜಿಸೊ ತುಂಟ ಜೀವನವೆ1 ಮಾಯಾ ಸಂಸಾರಕ್ಕೆಸಡಗರವಗೊಂಡು ಬರಿದೆ ಭ್ರಮಿಸಲೇಕೆಬಿಡದೆ ಯಮನಾಳುಗಳು ಬಾರೆಂದು ಎಳೆವಾಗಮಡದಿ ಮಕ್ಕಳು ಬಹರೆ ಭಂಡ ಜೀವನವೆ2 ಇಷ್ಟ ಸಂಪತ್ತನ್ನು ಬಡವರಾ ಕರೆತಂದುಕೊಟ್ಟು ಮಾಡಿದ ಪುಣ್ಯಫಲ ತನ್ನದೊಸೃಷ್ಟಿಯೊಳು ಕಾಗಿನೆಲೆಯಾದಿಕೇಶವನಂಘ್ರಿಮುಟ್ಟಿ ಮನದಲಿ ಭಜಿಸೊ ಭ್ರಷ್ಟಜೀವನವೆ3
--------------
ಕನಕದಾಸ