ಒಟ್ಟು 24 ಕಡೆಗಳಲ್ಲಿ , 7 ದಾಸರು , 10 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶ್ರೀ ವಿಷ್ಣುತೀರ್ಥರು) ಮೋದ ಬೀರುತ ತಾ ಮೋದಪುರಕೆ ಬಂದವನ್ಯಾರೆಪೇಳಮ್ಮಯ್ಯಾ ಪ ಶುಕಮುನಿ ಪೇಳಿದ ಶಾಸ್ತ್ರದ ಸಾರವ ಸುರಿಸಿದ ಧೀರ ಶ್ರೀ ವಿಷ್ಣುತೀರ್ಥಾರ್ಯ ಕಾಣಮ್ಮಾಅ.ಪ. ಶುದ್ಧವೃತ್ತಿಗಳಿಂದನುಭೋಗಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಜೀವರತಾ ಬುದ್ಧಿ ಭೇದಿಪನ್ಯಾರೆ ಪೇಳಮ್ಮಯ್ಯಾ ಶುದ್ಧ ಶೂನ್ಯರುಪದ್ರವ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಶುದ್ಧ ಶೃತಿ ಸ್ಮøತಿ ಪದ್ಧತಿ ತಪ್ಪದೆ ಇರುವೋ ಯತೀಶ್ವರರೇ 1 ಮರೆಪೊಕ್ಕವರನು ಮರೆಯದೆ ಪೊರೆವನದಾರೆ ಪೇಳಮ್ಮಯ್ಯಾ ಮೋರೆಯ ತೋರೆಂದು ಮಾರನಯ್ಯ ಮುರಾರಿಗೆ ಪೇಳ್ವವನಾರೆ ಪೇಳಮ್ಮಯ್ಯಾ ಮೋರೆ ಮೋಹಿಸಿ ಮೂಲೋಕವ ಸುತ್ತಿದನ್ಯಾರೆ ಪೇಳಮ್ಮಯ್ಯಾ ಮೋರೆ ಒಂದು ಮೂರು ಕಣ್ಣುಳ್ಳ ಬೊಮ್ಮನ ಪ್ರೀತಿಯ ಮಗನಮ್ಮ 2 ಬಂದು ಸೇವಿಸೆ ಘನ ಬಂಧನ ಬಿಡಿಸುವನ್ಯಾರೆ ಪೇಳಮ್ಮಯ್ಯಾ ಹಿಂದು ಮುಂದು ತನ್ನ ನಂಬಿದವರ ಮನಮಂದಿರ ದಿಪ್ಪುವನ್ಯಾರೆ ಪೇಳಮ್ಮಯ್ಯಾ ಇಂದುಧರ ಖಳವೃಂದ ಮೋಹನ ಗುರು ನಂದಿವಾಹನನೇ ಪೇಳಮ್ಮಯ್ಯಾ ಇಂದಿರೇಶ ತಂದೆವರದಗೋಪಾಲವಿಠಲನ ಸೇವಿಪ ನೀಲಕಂಠ ಕಾಣಮ್ಮಾ 3
--------------
ತಂದೆವರದಗೋಪಾಲವಿಠಲರು
ಎಂಥವ ನಿವನಮ್ಮಾ ಬಾಲಕನಂತಿಹ ಗೋಪೆಮ್ಮಾ ಎಂಥವನಿವ ತನ್ನಂತತ ನ್ನಂತದೋರ ಗುಡದ ನಂತ ಮಹಿಮ ನರಕಾಂತಕ ದೇವಾ ಪ ವಾರಿಯೊಳಗ ಮನವಾರಿ ಕ್ರೀಡಿಸುತಿರೆ ಘೋರ ಪ್ರವಾಹದಿ ತೀರದಲೆಮ್ಮಾ ಆರು ಅರಿಯದಂತೆ ಸೀರೆನೆಗೆದು ಕೊಂಡು ಗಾರು ಮಾಡಿದ ಮರ ಸೇರಿದ ಕಾಣಮ್ಮಾ ನಾರೇರೆಲ್ಲರು ಕೂಡಿ ಸೀರೆ ಬೇಡಲು ಬಿಟ್ಟು ನೀರ ಮುಗಿದು ಕೈಯ್ಯದೋರೆರಡೆನವಾ 1 ಪುಣ್ಯ ಚರಣೆಸಳ ಗಣ್ಣ ಜಲಧರದ ಬಣ್ಣದ ಲೋಪ್ಪವ ಸಣ್ಣಪನೆಂದು ಬಣ್ಣಿಸಿ ಕರುವುತ ಹೆಣ್ಣೆಂದೊಪ್ಪುವ ತಿಣ್ಣ ಮೊಲೆಗಳನು ಉಣ್ಣೆಂದೂಡಿದಾ ಸಣ್ಣಿಸಿ ಕಳೆದ ಮುಕ್ಕಣ್ಣನ ಸಹಿನು2 ಇಂದು ವದನೆಯರು ಮುಂದಕ ಕದವನು ತಂದಿಕ್ಕಿ ಪೋಗೆರೆ ಮಂದಿರದಿಂದಾ ಸಂದಿಸ್ಯಾಗಳೆ ಆಂದದಿ ಗೋವಳ ವೃಂದ ನೆರಹಿಕೊಂಡು ಬಂದು ನೋಡಮ್ಮಾ ಛಂದದಿ ಬೆಣ್ಣೆಯನಿಂದು ಸೇವಿಸುತಿಹ ತಂದೆ ಮಹಿಪತಿ ನಂದನೋಡಿಯನು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚದುರೇ ವೃಂದಾವನದೊಳು ನಿಂತಿಹನ್ಯಾರೇ ಪೇಳಮ್ಮಯ್ಯಾ ಪ ಸತ್ ಸಖಿಯರಿಗುಣಿಸುವ ಜಾರಚೋರ ಶ್ರೀಕೃಷ್ಣ ಕಾಣಮ್ಮಾ ಅ.ಪ. ನೀರೇ ನೋಡೋಣು ಬನ್ನಿರಿ ಎಂದುಈ ಬಾಲೇರು ಗೋಪಾಲನ ಗಾನಕೆ ಬಂದು ಬೆದರುತ ಮನದೊಳು ಮದನಾಟಕೆ ನಿಂದೂಮೋರೆಯ ತಿರುವುತ ಅಂದು ಮಾರನಯ್ಯ ತವ ಚಾರುಧರಾಮೃತ ಸೂರೆಗೈಯ್ಯೋ ಸದ್ಧೀರಿಯರೊ ನಾವು 1 ಬಾಲೆ ನಿನ್ನಾಳುವ ದಾರಿ ಬ್ಯಾರಿಲ್ಲಾ ಕಾಲಬಂದೊದಗದು ಕೇಳೆನ್ನ ಸೊಲ್ಲ ಮತ್ತಾವದೊ ತಂಗಾಳಿ ಬೀಸುವ ವ್ಯಾಳೆ ಬಂತಲ್ಲಾ ಮೋಹಿಸಿ ಬಂದೆವೊ ನಲ್ಲಾ ಫುಲ್ಲಲೋಚನ ಮೃದು ಮಲ್ಲಿಗೆ ಮುಡಿಸಿ ಮೆಲ್ಲಗೆ ಮರ್ದಿಸು ಮೃದು ಚಲ್ವಯರುಹರೆ 2 ಸಿಂಧೂ ರಾಜಕುಮಾರಿಯ ರಮಣ ಶರದಿಂದೂ ಮಂಡಲ ಮುಟ್ಟುತಲಿದೆ ಧ್ವನಿ ಹಸನಾ ಶಂಭೂರ ಶತ್ರಾದಿಗಳುಗರೆವರು ಪೂಮಳಿ ನಾನಾ ಗಣಶಿರಿಸುತ ಮರುಳಾಗಿ ಪೂ ಬಾಣಾನಾಟವನೋಡುತ ನಾರಿಯ ತ್ಯಜಿಸದೆ ಪರನಾರಿಯ ರೂಪದಿಂದ್ರಮಿಪ ಮುರಾರೇ 3 ಸುರನದಿ ಸ್ಮರಸುತ ರಾಣಿ ನಾಟ್ಯವನಾಡುತ ನವನವ ಪಾಡುತ ದಿದ್ಧಿದ್ಧಿಮಿಕಿಟ ತಾಂ ತಾಳದಿ ನಲಿಯುತ 4 ಶಶಿಸೂರ್ಯನೆಳಸನ್ನಿಭ ಪ್ರಖನಕರಾ ಸರಸೀಜಾದಳ ನುತ ಭಾವಿ ಸಮೀರಾ ಷಟ್ ಶತ ಬಂದು ವಿಂಶತಿಹಂ ಸಾಖ್ಯ ಮಂತ್ರ ಸಹಸ್ತಾದಿಂದ ಸೇವಿಪ ಮಧ್ವಮಧೀಶನ ಲೀಲೆಯನೆನಿಪರ ಬಂದು ತೋರುವಾತ ತಂದೆವರದಗೋಪಾಲವಿಠಲನು 5
--------------
ತಂದೆವರದಗೋಪಾಲವಿಠಲರು
ಚಾರು ಶ್ರೀ ಕುಶನದಿ ತೀರದಲ್ಲಿರುತಿಹನ್ಯಾರೆ ಪೇಳಮ್ಮಯ್ಯ ಸಾರಯತೀಶ್ವರ ಧೀರ ಸುಗುಣಗಂಭೀರ ವಿಷ್ಣುತೀರ್ಥಾರ್ಯಕಾಣಮ್ಮಾ ಪ ಇವನಾರೆ ಪೇಳಮ್ಮಯ್ಯ ವೃಂದಾವನದಲಿ ಬಂದಿರುವರು ಮತ್ತಲ್ಲಿ ನೋಡಮ್ಮಯ್ಯಾ ಗಂಧಾಕ್ಷತ ನೋಡಮ್ಮಯ್ಯ ವಿಷ್ಣು ತೀರ್ಥಾರ್ಯ ಕಾಣಮ್ಮಾ 1 ಬೆನ್ಹಿಂದೆ ನೋಡಮ್ಮಯ್ಯ ಇಹನೂ ನೋಡಮ್ಮಯ್ಯ ತೀರದಲ್ಲಿಹನಮ್ಮಾ ತೀರ್ಥಾರ್ಯ ಕಾಣಮ್ಮಾ 2 ನೋಡಮ್ಮಯ್ಯಾ ನೋಡಮ್ಮಯ್ಯ ಪುರವಾಸಾ ಕಾಣಮ್ಮ ವಿಷ್ಣು ತೀರ್ಥಾರ್ಯ ಕಾಣಮ್ಮ 3
--------------
ಅನಂತಾದ್ರೀಶರು
ನೀರಜಗಂಧಿಯೇ ಹೇಳೇ ಸುಳಿದವರಾರಮ್ಮಾ | ನೀರಜ ಶರಪತಿ ಕಾಣಮ್ಮಾ ಪ ಅರುಣನಖಾಂಗುಲಿ ಗುಲ್ಫ ಗೆಜ್ಜೆ ಕಾ- ಪುರ ನೂಪುರದ ಲೊಪ್ಪುವನವದಾರಮ್ಮಾ | ಸರಸಿಯೊಳಗಪೊಕ್ಕು ತಮನಸುವ ಬಗೆದು | ವರಶೃತಿ ತಂದವ ಕಾಣಮ್ಮಾ 1 ಕಲಿ ದಶನಂದದಿ ಜಂಘೆ ಪೊಂಬಾಳೆಯ | ಪರಿಯ ತೊಡೆಯುಳ್ಳುವ ದಾರಮ್ಮಾ | ಶರಧಿ ಮಥಿಸುವಂದುಗಿರಿನಿಲ್ಲದಿರೆ ಬಂದು | ಭರದಿ ಬೆನ್ನೆವಿತ್ತವ ಕಾಣಮ್ಮ2 ಕಾಂಚನ ವಸನನಿರಿಯ ಮ್ಯಾಲ ವಡ್ಯಾಣ ಮಿಂಚಿನ ಘಂಟೆಯ ದಾರಮ್ಮಾ | ಕ್ಷಿತಿ ವಯ್ದದನುಜನ ಶೀಳಿ ವಿ | ರಂಚಿ ಗುಳಹಿದವ ಕಾಣಮ್ಮಾ3 ಕಿರಿಡೋಳ್ಳಾತ್ರಿವಳಿಯ ನವರತ್ನ ಪದಕಿಹ | ಉರಸಿನ ವತ್ಸನವ ದಾರಮ್ಮಾ | ನರಹರಿ ರೂಪದಿ ಹಿರಣ್ಯಕನನು ಕೊಂದು | ಶರಣನ ಕಾಯ್ದವ ಕಾಣಮ್ಮಾ4 ಕೌಸ್ತುಭಹಾರ ಮೌಕ್ತಿಕದ ಕೊರಳಲಿಹ | ಹಸ್ತ ಕಡಗದವ ನಾರಮ್ಮಾ | ಸ್ವಸ್ತಿ ಎನುತ ಬಂದು ಬೇಡಿ ಬಲಿಯಾಗರ್ವ | ಸ್ವಸ್ತಿ ಮಾಡಿವನು ಕಾಣಮ್ಮಾ5 ಕ | ಪೋಲ ಹೊಳಹಿನವ ದಾರಮ್ಮಾ | ಏಳು ಮೂರು ಬಾರಿ ಕ್ಷತ್ರಿಯ ರಾಯರ ಸೋಲಿಸಿ ಬಂದವ ಕಾಣಮ್ಮಾ6 ಕರ್ಪೂರ ಕರಡಿಗಿ ಬಾಯಿ ಸಂಪಿಗೆಯಂತೆ | ತೋರ್ಪ ನಾಶಿಕದವ ದಾರಮ್ಮಾ | ದರ್ಪ ಮುರಿದು ರಾವಣನ ತಲಿಯ ಧರೆ | ಗೊಟ್ಟಿಸಿದವ ನಿವ ಕಾಣಮ್ಮಾ7 ಕುಡಿಗಂಗಳ ಭ್ರೂಲತೆಯ ಪೆರೆನೆಣೆಸಲು | ಪೊಡವಿಯೊಳಗ ನಂಬಿದ್ದ ಪಾಂಡವರನು | ಬಿಡದೆ ಸ್ಪಾಪಿಸಿದವ ಕಾಣಮ್ಮಾ8 ಕುರುಳು ಗೂದಲು ತಳಕದ ಮಾಲ್ಯ ಮೌಲಿಕ | ಧರಸಿದ ಮುಕುಟವ ದಾರಮ್ಮಾ | ತರಳನಾಗಿ ಮುಪ್ಪುರ ನಾರಿಯರ ವೃತ | ತ್ವರಿತದಿ ಅಳಿದವ ಕಾಣಮ್ಮಾ9 ನೋಡಲು ಮನಸಿಗೆ ಮೋಹನೆ ಮಾಡುವ | ಪ್ರೌಡದಿ ಮನವವ ದಾರಮ್ಮಾ | ರೂಢಿಲಿ ಕುದುರೆಯ ಏರಿ ಕಲಿಮಲವ | ಝಾಡಿಸಿದವನಿವ ಕಾಣಮ್ಮ10 ಸಹಜದಿ ಸವಿಸವಿ ಮಾತಲಿ ಸೋಲಿಸು | ತಿಹ ಸರ್ವರಿಗಿವ ದಾರಮ್ಮಾ | ಮಹಿಪತಿ ಸುತನ ಹೃದಯದಲಿ ನಿಂತು ತನ್ನ| ಮಹಿಮೆ ಬೀರಿಸುವವ ಕಾಣಮ್ಮಾ11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭುವನದೊಳಗೆ ಒಬ್ಬ ಶಿವಯೋಗಿನಾ ಕಂಡೆ ಅವತರಿಸಿರುವನದ್ಯಾರಮ್ಮಾ ಪ ತುಂಬಿ ನಡುನಾಡಿಯೊಳಗಾಡೊ ಪವನರೂಪನ ಬೇಗ ತೋರಮ್ಮಾ ಅ.ಪ ಉಪಜೀವಿಯನು ಕಂಡು ಉಷ್ಣಶೀತವನಳಿದು ತಪಸು ಮಾಡುವನ್ಯಾರದೇಳಮ್ಮಾ ಅಪಮೃತ್ಯುವನು ಕಂಡು ಆನಂದವನು ಬಿಟ್ಟಾ ವಿಪರೀತವೇನಿದು ಹೇಳಮ್ಮಾ 1 ಬುದ್ಧಿ ಮನಸು ಚಿತ್ತ ಅದ್ವಯವನು ಮಾಡಿ ಇದ್ದನಹುದು ಆತಾ ಕಾಣಮ್ಮಾ ಮದ್ಗುರುವಾದ ಶ್ರೀ ತುಲಶಿರಾಮದಾಸ ಪರೀಕ್ಷಿತ ಕಾಣಮ್ಮಾ 2
--------------
ಚನ್ನಪಟ್ಟಣದ ಅಹೋಬಲದಾಸರು
ಮಾರಜನಕ ಮುರಾರಿ ಕಾಣಮ್ಮ ಪ ಅರುಣ ಚರಣ ಕಳದಿರವು ಅಂಕುಶಧ್ವಜ ಅರವಿಂದ ರೇಖಾಂಕ ಪುರುಷನಾರಮ್ಮ ಉರಗಶಯನ ಕರಸರೋಜ ಮಧ್ಯದೊಳಿಟ್ಟು ಸುರರಿಂದರ್ಚನೆಗೊಂಬ ಹರಿಯು ಕಾಣಮ್ಮ 1 ಪೊಳೆವ ಉದಯ ಶಶಿ ಬೆಳಗು ಸೋಲಿಪ ನಾಖಾ ವಳಿಯಿಂದ ಒಪ್ಪುವ ಚಲುವನಾರಮ್ಮಾ ಕುಲಿಶ ಪಾಣಿಗೆ ಒಲಿದಿಳೆಯೊಳು ಬಂದು ಖಂ ಜಲಧಿ ಕಾಣಮ್ಮ 2 ಅಂದುಗೆ ಗೆಜ್ಜೆ ಕಡಗ ಪೊನ್ನೂಪುರ ತೊಡಂದ ಬರುತಿಹ ಪ್ರೌಢನಾರಮ್ಮ ದೃಢ ಭಕ್ತರೆಡೆಯಲಿ ಬಿಡದೆ ನಲಿಯುತಲಿಪ್ಪ ಮೃಡಸುರಪಾದ್ಯರ ಪತಿಯು ಕಾಣಮ್ಮ 3 ಕರಿಗಲ್ಲಿನಂತೆ ಸುಂದರ ಜಂಘೆ ಜಾನುಗ ಳೆರಡು ತರಣಿಯಂತೆ ಇವನಾರಮ್ಮಾ ಪರಮೇಷ್ಠಿ ಪ್ರಳಯದಿ ಸಿರಿಯಿಂದ ನುತಿಗೊಂಬ ಪರಮ ಪುರುಷ ನರಹರಿಯು ಕಾಣಮ್ಮ 4 ಇಭವರಕರದಂತೆ ಉಭಯ ಊರು ಕಟಿ ಪ್ರಭ ವಸನವನುಟ್ಟ ಸುಭಗನಾರಮ್ಮಾ ರಭಸದಿಂದಲಿ ಕಂಭ ಬಿಗಿದು ಪ್ರಹ್ಲಾದಗೆ ಅಭಯವಿತ್ತ ಸುರಪ್ರಭುವು ಕಾಣಮ್ಮ 5 ವಲಿವಿೂಕ ಬಿಲದಂತೆ ಸುಳಿನಾಭಿ ಜಠರತ್ರಿ ವಳಿಗಳಿಂದಲಿ ಬಲು ಪೊಳೆವನಾರಮ್ಮಾ ನಳಿನೋದ್ಭವನ ಪುತ್ರಾಖಿಳ ಲೋಕ ತಾಳಿದಾ ಹಾಲಾಹಲಕಂಠನ ಗೆಳೆಯ ಕಾಣಮ್ಮಾ 6 ಕೌಸ್ತುಭ ವೈಜಯಂತೀ ಸರ ಸಿರಿಯಿಂದಲೊಪ್ಪೋ ನಿರಯನಾರಮ್ಮ ವರಭೃಗುಮುನಿಪನ ಸ್ಪರುಶವನು ತಾಳ್ದ ಕರುಣ ಸಾಗರ ಸಿರಿಧರನು ಕಾಣಮ್ಮ 7 ಅರಿ ಶಂಖ ಸತತ ಪಿಡಿದಿಹ ಚತುರನಾರಮ್ಮ ದಿತಿಜರ ಸದೆದು ದೇವತೆಗಳ ಸಲಹಿದ ಚತುರಾಸ್ಯ ಕೃತಿದೇವಿ ಪತಿಯು ಕಾಣಮ್ಮ 8 ಧರದಿಂದೊಪ್ಪುತಲಿಹ ಪಿರಿಯ ನಾರಮ್ಮಾ ಸಿರಿಯೊಡನೆ ಕ್ಷೀರಶರಧಿ ಯೊಳೊರಗಿಪ್ಪ ವಜ್ರ ಪಂಜರವನು ಕಾಣಮ್ಮ 9 ಸುರಕಪೋಲ ನಾಸ ಸರಸಿಜನಯನ ಪು ಕುಂಡಲಿ ಯುಗಧರನು ಆರಮ್ಮಾ ಶರಧಿ ಮಥನದಲ್ಲಿ ತರುಣಿಯಾಗಿ ಅಸು ರರ ಮೋಹಿಸಿದ ಅಜರನು ಕಾಣಮ್ಮ10 ಬಾಲಶಶಿಯಂತೆ ಫಾಲಕಸ್ತೂರಿನಾಮ ಮೌಳಿ ಸುಳಿಕೇಶ ಬಾಲನಾರಮ್ಮಾ ಮೂಲೇಶನಾದ ಜಗನ್ನಾಥ ವಿಠ್ಠಲ ಮೂರ್ಲೋಕಾಧಿಪ ಶ್ರೀ ಗೋಪಾಲ ಕಾಣಮ್ಮ11
--------------
ಜಗನ್ನಾಥದಾಸರು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ರಥವಾನೇರಿದ ಯತಿವರನ್ಯಾರೇ ಪೇಳಮ್ಮಯ್ಯಾ ಪವಿತತ ಮಹಿಮಾ - ನತಜನರನತಿಹಿತದಿ ಪಾಲಿಸುವ - ಅತುಲ ಮಹಿಮ ಕಾಣಮ್ಮ ಅ.ಪಸ್ಮರಿಸುವ ಭಕುತರಪರಿ-ಪರಿಸಲಹುವನ್ಯಾರೇ ಪೇಳಮ್ಮಯ್ಯಾಗುರುವರ ರಾಘವೇಂದ್ರ ಕಾಣಮ್ಮಾ 1ಸ್ತುತಿಸುವ ಜನರಿಗೆ ಸತಿಸುತ ಸಂಪದ -ಮತಿರಹಿತರಿಗೆ ಸುಮತಿಯ ನೀಡುವನ -ಭೂತಳಜನನಾಥನೆನಿಸಿ ಮಹಾ -ಭೂತಿದಾಯಕ ರಾಘವೇಂದ್ರ ಕಾಣಮ್ಮಾ 2ಭೂತಪ್ರೇತ ಪಿಶಾಚ ಸುಮಹ -ಪಾತಕವನುಕುಲವೀತಿಹೋತ್ರಸುಖದೂತನೆನಿಪ ಗುರುರಾಯ ಕಾಣಮ್ಮ 3
--------------
ಗುರುಜಗನ್ನಾಥದಾಸರು
ಸೋದಾಪುರದಲಿ ನಿಂತ ಸುಯತಿವರನ್ಯಾರೇ ಪೇಳಮ್ಮಯ್ಯಾ ಪಭೂಧರಹÀಯಮುಖ ಪಾದವ ಭಜಿಸುವxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವಾದಿಗಜಕೆ ಮೃಗರಾಜ ಕಾಣಮ್ಮ ಅ.ಪಅಂಚೆವಾಹನ ಪ್ರಪಂಚದಿ ಪೊಳೆವ ವಿ -ಸಂಚಿತಕರ್ಮವ ಕುಂಚಿಸಿ ಭಕ್ತರಮುಂಚಿಗೆ ಪ್ರಾಣವಿರಿಂಚಿಕಾಣಮ್ಮಾ1ಬೃಂದಾರಕಪ್ರತಿಸುಂದರ ಯತಿವರಇಂದುಮುಖಿಯೆ ಈತ ಗಂಧವಾಹÀನನಾಗಿಮಂದಜಾಸನಪದವೈದುವ ನಮ್ಮಾ2ಖ್ಯಾತಮಹಿಮ ಮಾಯಿವ್ರಾತ ವಿ -ದಾತಗುರುಜಗನ್ನಾಥವಿಠಲನವೀತಭಯಪುರುಹೂತಪ್ರಮುಖನುತಭೂತನಾಥನ ಪಿತ ಮಾತರಿಶ್ವನಮ್ಮಾ 3
--------------
ಗುರುಜಗನ್ನಾಥದಾಸರು