ಒಟ್ಟು 6 ಕಡೆಗಳಲ್ಲಿ , 4 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಏನೆಂದು ಪೇಳಲೋ ರಾಮ ನಿನ್ನಾ ದೀನವತ್ಸಲತೆಯ ಆಶ್ರಿತ ಪ್ರೇಮ ಪ ಕಲ್ಲಾಗಿ ಪಥದಲ್ಲಿ ಬಿದ್ದ | ಮುನಿ ವಲ್ಲಭೆಯನು ಸಲಹಿದ ಸುಪ್ರಸಿದ್ಧ ಕಲ್ಲೆದೆಯವ ನಾನು ಸಿದ್ಧ | ಎನ್ನ ಅನಿರುದ್ಧ 1 ಪಶುಜಾತಿ ಸುಗ್ರೀವ ಮುಖರ | ನೀ ಹಸನಾಗಿ ಪೊರೆದದ್ದು ಕೇಳಿದೆ ವಿವರ ವಶವಲ್ಲದಿಂದ್ರಿಯನಿಕರವುಳ್ಳ ಪಶುಪ್ರಾಯ ನಾನಯ್ಯ ರಕ್ಷಿಸೋ ಚತುರ 2 ಚೆಂಡಾಲನಾದ ಗುಹನ | ಕೈ ಗೊಂಡು ಕಾಪಾಡಿದೆ ಕುರುಣದಿಂದವನ ಖಂಡಿತ ಪೇಳುವೆ ಘನ್ನ | ಕರ್ಮ ಚೆಂಡಾಲ ನಾನು ಶ್ರೀ ಕಾಂತ ಪ್ರಸನ್ನ 3
--------------
ಲಕ್ಷ್ಮೀನಾರಯಣರಾಯರು
(ಅ) ಪಾಲಯ ಶರಣಾಭರಣ ಹರಿ ಪಾಲಯ ಶರಣಾಭರಣ ಪ ಶೌರಿ ದುರಿತ ವಿದಾರಿ ಘೋರಧ್ವಾಂತ ಹರಿ ವೀರ ನರಸಿಂಹ ತೇನಮೋ ಪರಾತ್ಪರ ಕೃಪಾಕೂಪಾರ 1 ತಾತನ ಖತಿಗೆ ಭೀತಿಯ ಪಡದೆ ನಾಥ ಬಾರೆನಲು ಆಮರಸ್ಥಂಭದಲೀ ತಕ್ಷಣದೊಳು ಮೈದೋರ್ದೆ 2 ತುಡುಕೀ ಖಳನಾ ಪಿಡಿದೂ ಅವನಾ ಬಡಿದೂ ನೆಲಕೊರಿಸೇ ನೋಡಿ ಪಾಡೆ ಭಕ್ತನಾ ಕಾಪಾಡಿದೆ ನಮೋ ಶ್ರೀಕಾಂತ 3
--------------
ಲಕ್ಷ್ಮೀನಾರಯಣರಾಯರು
ಪರಮ ಕರುಣಾಕರನೆ ಕರಪಿಡಿದು ಸಲಹೆನ್ನ ವರ ತಂದೆ ಮುದ್ದುಮೋಹನರೊಡೆಯನೆ ಪ. ಸಿರಿಯರಸ ಶ್ರೀ ಶ್ರೀನಿವಾಸ ಶ್ರೀ ಕೃಷ್ಣಹರೆ ಪರಮದಯಾಳು ದೇವ | ದೇವಅ.ಪ. ನಿರುತ ನೀ ಸ್ವಪ್ನದಲ್ಲಿ ಪರಿಪರಿಯ ರೂಪದಲಿ ತ್ವರಿತದಲಿ ತೋರಿ ಕಾಯ್ದೆ ಪರಮಪಾವನಮೂರ್ತಿ ಗುರು ಅಂತರ್ಯಾಮಿಯೆ ಕರಕರೆಯ ಬಿಡಿಸಿ ಸಲಹೊ | ದೇವ 1 ವಿಶ್ವತೈಜಸ ಪ್ರಾಜ್ಞ ತುರಿಯ ರೂಪಗಳಿಂದ ನೀ ಸ್ವಪ್ನಗಳನೆ ತೋರ್ವೆ ವಿಶ್ವೇಶ ಎನ್ನೊಳಗೆ ಸಾಕ್ಷಿಯಾಗಿರುತ್ತಿರ್ದು ವಿಶ್ವಮಯ ಚೇಷ್ಟೆ ಮಾಳ್ಪೆ | ದೇವ 2 ಈ ಶರೀರದೊಳಗೆ ಶ್ರೀ ತೈಜಸನೆ ನೀನು ವಾಸವಾಗಿರುತಲಿರ್ದು ನಾಶರಹಿತನೆ ಮೋಹಪಾಶದಲಿ ಸಿಲುಕಿಸಿ ಮೋಸಪಡಿಸುವರೆ ಎನ್ನ | ದೇವ 3 ಬಿಡಿಸೊ ದುರ್ವಿಷಯಗಳ ತಡವಾಕೊ ಹರಿ ಇನ್ನು ಒಡಲಿಗೊಡೆಯನೆ ಶ್ರೀಹರಿ ಕೊಡು ನಿನ್ನ ಪದಸೇವೆ ನುಡಿಸು ನಿನ್ನಯ ನಾಮ ಪಡಿಸು ಸುಖ ಅನವರತದಿ | ದೇವ 4 ಸ್ವಪ್ನ ವ್ಯಾಪಾರದಲಿ ಅಪ್ರತಿಮಮಹಿಮೆಗಳ ಕ್ಷಿಪ್ರದಿಂದಲಿ ತೋರಿದೆ ಸಪ್ತಫಣಿಮಂಡಿತನೆ ಒಪ್ಪದಿಂದಲಿ ಎನ್ನ ತಪ್ಪನೆಣಿಸದಲೆ ಕಾಯೋ | ದೇವ 5 ನೀತ ಗುರುಗಳ ದ್ವಾರ ಪ್ರೀತನಾದ ಹರಿಯೆ ಪಾತಕವÀ ಕಳದೆ ಸ್ವಾಮಿ ವಾತಜನಕನೆÀ ನಿನ್ನ ಖ್ಯಾತಿ ಪೊಗಳಲು ಅಳವೆ ಪ್ರೀತನಾಗಿದ್ದು ಸಲಹೊ | ದೇವ 6 ಶ್ರೀಪತಿಯೆ ಪರಮಪಾವನಮೂರ್ತಿ ವಿಖ್ಯಾತ ನೀ ಪ್ರೀತಿಲೀಲೆ ತೋರ್ದೆ ಕಾಪಾಡಿದೆಯೊ ಎನ್ನ ಶ್ರೀ ಗುರುಗಳೊಳಗಿರ್ದು ಗೋಪಾಲಕೃಷ್ಣವಿಠ್ಠಲ ದೇವ 7
--------------
ಅಂಬಾಬಾಯಿ
ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಮುನಿಯುವರೇ ಕೃಷ್ಣಾ ಮುನಿಯುವರೆ ಪ ದಣಿಸಲಾಗದೊ ನಿನ್ನ ನೆನೆವ ಭಕುತರೊಳು ಅ.ಪ ಮುನಿಗಳು ಮನದೊಳು ಕ್ಷಣಬಿಡದಲೆ ನಿನ್ನ ದಣಿಸಿ ಕುಣಿಸುವರೊ ಮೌನದಿಂದಲಿ ನಾ ಮಣಿದು ಬೇಡುವೆ ಬರಿದೆ ಹಣಿದು ಬಿಸುಡುವರೆ ಕೆಣಕಿದವರ ನೀ ಕ್ಷಣದಿ ಕಾಪಾಡಿದೆ 1 ಬಲಿಯ ಯಾಚಿಸಿ ಭಕ್ತಿಬಲೆಗೆ ನೀ ಸಿಲುಕಿದೆ ಶಿಲೆಯನೊತ್ತಿ ಸುಶೀಲೆಯ ಪೊರೆದೆ ಜಲಧಿಶಯನಾ ನೀ ರಥಕೆ ಸಾರಥಿಯಾದೆ ಛಲವೇತಕೆನ್ನೊಳು ನೀನೆ ಗತಿ ಎಂದರೆ2 ಎಂಜಲಾಸೆಗೆ ಸೋತು ಶಬರಿಯ ಪೊರೆದೆ ಸಂಜೆ ಹಗಲೆನ್ನದೆ ಎಂಜಲ ಬಳಿದೆ ಅಂಜದೆ ಅಜಾಮಿಳಗೊಲಿದೆಯೋದೇವ ಅಂಜೆನೊ ಎಂದಿಗೂ ಕುಂಜರವರದಾ 3 ಶಪಥಮಾಡಿ ನಿನ್ನ ಪಂಥವ ಕೆಡಿಸಲು ಕುಪಿತನಾಗಲಿಲ್ಲ ಕುರುಪಿತಾಮಹನೊಳು ಆಪ್ತನಿಮಿತ್ತಬಾಂಧವನೆಂದು ನಿನ್ನ ಪ್ರಾಪ್ತಿಯ ಬೇಡಲು ಬಂದುದಕೆ ಈಗ 4 ಪರಿ ಅಂಕಿತ ಪೇಳದೆ ಬಿಂಕತನದಲಿ ಕಾಲವ ಕಳೆದೆ ಶಂಕರನುತ ಶ್ರೀ ವೇಂಕಟೇಶ ನಿನ್ನ ಕಿಂಕರನೆನಿಸೆನ್ನ ಸಂಕಟ ಹರಿಸೂ5
--------------
ಉರಗಾದ್ರಿವಾಸವಿಠಲದಾಸರು
ವೆಂಕಟರಮಣ ಮಾಂಪಾಹಿ ಸಂಕಟಹರಣ ಸರ್ವಲೋಕಕಾಧಾರ ಪ ಮತ್ಸ್ಯರೂಪವತಾಳಿ ವೇದಗಳ ರಕ್ಷಿಸಿದೆ ಮತ್ತೆ ಬೆಟ್ಟವ ಪೊತ್ತೆ ಕೂರ್ಮನಾಗಿ ಹೊತ್ತು ಭೂಮಿಯ ಪೊರೆದೆ ವರಾಹಾವತಾರದಲಿ ಬತ್ತಿ ಕಂಬದಿ ಬಂದೆ ನರಸಿಂಹನಾಗಿ ನೀ ಇತ್ತೆ ವರವನು ತುಳಿದು ಬಲಿಯು ನೀಡಲು ತಲೆಯ ವಟುರೂಪಿನಿಂದ ವೆಂಕಟರಮಣ ಮಾಂ ಪಾಹಿ 1 ಹೊತ್ತು ಪರಶುವ ಭುವಿಯ ಕ್ಷಾತ್ರಿಯರನೀ ಕೊಂದೆ ಮತ್ತೆ ರಾಮಾವತಾರದಲಿ ರಾವಣನ ಕೊಂದೆ ನಿತ್ತು ಕಾಪಾಡಿದೆಯೋ ಕೃಷ್ಣ ಪಾಂಡವರನ್ನು ಮತ್ತೆ ಬುದ್ದನರೂಪ ತಾಳಿ ಮೆರೆದೆ ತಾಳಿ ದರುಳ ದುರ್ಜನರನ್ನು ಮೆಟ್ಟಿ ಕುಟ್ಟಿದೆಯೋ ವೆಂಕಟರಮಣ ಮಾಂ ಪಾಹಿ 2 ಬೇಡಿದವರ ಇಷ್ಟಾರ್ಥಗಳನೀವ ಕಾಡಿದ ರಕ್ಕಸರ ಜೀವ ಕೊಳುವ ನೋಡಿ ದಯಮಾಡಿ ನೀಸುಜನರನು ಕಾವ ಆಡಿ ಅಡಗಿಸೋ ನೀನೇ ಮನದ ನೋವ ಗಾಢ ರಕ್ಷಿಸು ಕಡು ಬಾಡಿದೆ ಭಯದಲ್ಲಿ ವೆಂಕಟರಮಣ ಮಾಂ ಪಾಹಿ 3 ವರ ಅಜಾಮಿಳಗೆ ವರವಿತ್ತು ಸಲಹಿದೆಯೋ ಕರಿ ರಾಜ ಬರಲಿದಡೆ ಬಂದು ಕಾಯ್ದೆ ದುರುಳ ಕಾಳಿಂಗನನು ಮೆಟ್ಟಿಕುಣಿದಾಡಿದೆಯೋ ಧರಿಸಿ ಗೋವರ್ಧನವ ಕಾಯ್ದೆಗೋವಳರನ್ನು ವೆಂಕಟರಮಣ ಮಾಂ ಪಾಹಿ 4 ಇಳೆಯೊಳಗೆ ಮೂಡಲಗಿರಿವಾಸನಾಗಿ ನೆಲೆಯ ನರಿದು ಭಜಿಪರ ಪಾಪನಾಶ ಸೂರ್ಯ ಕೋಟಿ ಪ್ರಕಾಶ ಕಲಿಯುಗದೊಳು ನಿನ್ನ ಮಹಿಮೆ ವಿಶೇಷ ಸಲಹೋ ಪಾತಳ ಸೇವೆಯ ಗೆಣಸಿನ ಕುಣಿ ವೆಂಕಟರಮಣ ಮಾಂ ಪಾಹಿ 5
--------------
ಕವಿ ಪರಮದೇವದಾಸರು