ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೊ ರಂಗ ಎಲೋ ರಂಗನೇ ಸಲಹೊ ಶುಭಾಂಗನೆ ಪ ಜಯಕರ ಶ್ರೀಹರಿಯೆ ದಯವಂತನಾಗಯ್ಯ ಭಯ ಭಕ್ತಿಯಲಿ ನಿಮ್ಮ ದಯವ ಬೇಡುವೆನಯ್ಯ 1 ನಿನ್ನ ಭಕ್ತನು ನಾನು ಬನ್ನಬಡಿಸುವಿ ಯಾಕೋ ಮುನ್ನಿನ ಭಕ್ತರಂತೆನ್ನನು ಸ್ಮರಿಸಯ್ಯ 2 ಶರಣೆಂದು ವಿಭೀಷಣಗೆ ಕರುಣಿಸಿ ಲಂಕೆಯ ಸ್ಥಿರಪಟ್ಟ ಕೊಟ್ಟಂಥ ಕರುಣಾಳು ಮೊರೆ ಕೇಳೊ 3 ಯತಿವರನ ಯಾಗವ ಹಿತದಿ ರಕ್ಷಿಸಿದಂಥ ಪತಿತಪಾವನ ಎನ್ನ ಹಿತದಿಂದ ಕಾಯೆಲೊ 4 ಸತತ ನಿಮ್ಮಯ ಪಾದಸ್ತುತಿಯೊಳಿರಿಸಿ ಎನ್ನ ಮೃತ್ಯುಬಾಧ್ಹರಿಸಯ್ಯ ಕ್ಷಿತಿವರ ಶ್ರೀರಾಮ 5
--------------
ರಾಮದಾಸರು
ಗಣಪತೇ - ಪಾಹಿ - ಗಣಪತೇ ಪ ಗಣಪತಿ ಪಾರ್ವತಿ ತನಯಾ | ಭಕ್ತಜನಕೆ ಕೊಡುವುದು ವಿನಯಾ | ಆಹಮನದೊಳು ನೀನಿಂತು | ಅನುಗಾಲ ಹರಿಗುಣಗಣಗಳ ಪೊಗಳುವ | ಮನವ ನೀ ಪಾಲಿಸೋ ಅ.ಪ. ಬಾಲೇಂದು ಮೌಳಿಯ ತನುಜ | ವರಶೈಲಜೆ ಶರೀರ ಮಲಜಾ | ಪುಟ್ಟಿಶ್ರೀಲೋಲ ಕೃಷ್ಣ ರುಕ್ಮಿಣಿಜ | ನೆಂದುಪೇಳುವರು ಮಾರನನುಜಾ | ಆಹಕಾಳಗದೊಳು ಬಲು | ಅಸುರರ ಅಸುಗಳಕೀಲಿಸುತಲಿ ಬಹು | ಭೂಭಾರ ನಿಳುಹಿದ 1 ಸುಜ್ಞ ಭಕ್ತಾಧೀನ ಗಣಪಾ | ಬಂದವಿಘ್ನಗಳ್ಹರಿಸುವೆ ಭೂಪ | ನೀನುಭಗ್ನ ಗೈಸೋ ಮನಸ್ತಾಪಾ | ಇಂಗಿತಜ್ಞ ಬೇಡುವೆ ತವ ಕೃಪಾ | ಆಹಮಗ್ನ ಮಾಡಿಸು ಮನ | ಮೊದಲಾದ ಕರುಣವಯಜ್ಞೇಶ ಶ್ರೀಹರಿ | ಪದದ್ವಯ ವನಜದಿ 2 ಸಿಂಧುರಾಸ್ಯನೆ ಬಹು ಗುಣ | ಪೂರ್ಣಮಂದರೋದ್ಧಾರಿಯೆ ಕರುಣ | ಪಾತ್ರನೆಂದು ಹೊಕ್ಕನೊ ತವ ಚರಣ | ಕಂದನೆಂದು ಕಾಯೆಲೊ ಬಹು ಕರುಣ | ಆಹನಂದ ನಂದನ ಗುರು | ಗೋವಿಂದ ವಿಠಲನಬಂಧುರ ಚರಣವಾ | ನಂದದಿ ತುತಿಪಂತೆ 3
--------------
ಗುರುಗೋವಿಂದವಿಠಲರು