ಒಟ್ಟು 9 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರಿಗೊರಳಾ ಪಾಲಿಸೋ ಪ ಕರಿವರದನ ದಯ | ನಿರುತ ನಿನ್ನೊಳಗಿದೆಸುರಜೇಷ್ಠಾನುಜ | ಶರಣನ ಕರಪಿಡಿಅ.ಪ. ಪಶುಪತಿ ಎನಿಸಿಹೆ 1 ಆರು ನಿನಗೆ ಸರಿ | ವೈರಾಗ್ಯಾಧಿಪಕೋರುವೆನೋ ತವ | ಕರುಣಾ ರಸವನುಭೂರಿ ದಯದಿ ಮಮ | ಕಾರವ ಹರಿಪುದುಬೇರೊಂದನೊಲ್ಲೆ | ಕಾರುಣ್ಯಾಂಬುಧಿ 2 ದೇವ ದೇವ ಹರಿ | ದಾವಾಗ್ನಿಯ ಭಯತೀವರ ಹರಿಸುತ | ಗೋವ್ಗಳನುಳುಹಿದ |ಭಾವಜ ಪಿತ ಗುರು | ಗೋವಿಂದ ವಿಠಲನಪಾವನ ಪದ ದ್ವಯ | ಭಾವದಿ ತೋರಿಸಿ 3
--------------
ಗುರುಗೋವಿಂದವಿಠಲರು
ದಾರಿಗಾಣದಯ್ಯ ಕಣ್ಣಿಗೆ ದಾರಿ ತೋರಿಸಯ್ಯಾ ಪ ಪಾರುಗಾಣದ ಸಂಸಾರ ವಾರಿಧಿಯಲಿ ಪಾರುಗಾಣಿಸಯ್ಯ ಮಾರನ ಪಿತನೇ ಅ.ಪ ಯಾರಿಗೆ ಮೊರೆಯಿಡಲಾರು ಕೈಹಿಡಿವರು ಧಾರಿಣಿಯೆ ಅಂಧಕಾರವಯ್ಯ ಸಾರಸನಾಭ ನೀ ಕಾರುಣ್ಯಾಮೃತ ಬೀರದಿದ್ದರೆ ಎನ್ನ ಗತಿಏನೋ ರಂಗ1 ಸತಿಸುತರೆನಗತಿ ಹಿತರೆಂದೆನ್ನುತೆ ಸತತ ನಂಬಿ ಸತ್ಪಥವನು ಮರೆತಂತೆ ಪತಿತನಾದೆನಗೆ ನೀ ಗತಿದೋರದಿದ್ದರೆ ಪತಿತನಾಗಿರುವುದೇ ಗತಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುರ್ಗೆ ಪಾಲಿಸೆ ಕರುಣದಿ | ಮಹಾ ಲಕುಮಿ ದುರ್ಗೆ ಪಾಲಿಸೆ ಕರುಣದಿ ಪ. ಅಪವರ್ಗ ಪದವಿ ಇತ್ತು ದುರ್ಗಮವಾಗಿಹ ದುಃಖವ ಬಿಡಿಸಿ ಭಾರ್ಗವಿರಮಣನ ಮಾರ್ಗವ ತೋರೆ ಭೋರ್ಗರೆಯುತ ಖಳರ ನಿಗ್ರಹಿಸುವಳೆ ಅ.ಪ. ಕ್ಷೀರವಾರಿಧಿ ತನಯೆ | ಶ್ರೀ ರಮಣನ ಜಾಯೆ ನಾರಸಿಂಹನ ಅರಸಿಯೆ ಸಾರಿದೆ ನಿನ ಪದ ತೋರಿಸೆ ಹರಿಪದ ಕಾರುಣ್ಯಾತ್ಮಳೆ ಕರುಣವ ಬೀರೆ ವಾರವಾರಕೆ ನಿನ್ನ ಆರಾಧಿಸುವಂಥ ಚಾರುಮತಿಯ ನೀಡೆ ನಾರಿರನ್ನಳೆ 1 ಪದ್ಮಾವತಿಯೆ ಪದ್ಮಿನಿ | ಪದ್ಮಾಕ್ಷಿದೇವಿ ಪದ್ಮಸಂಭವೆ ಕಾಮಿನಿ ಪದ್ಮನಾಭ ಶ್ರೀ ಶ್ರೀನಿವಾಸನ ಪದ್ಮಪಾದವ ಹೃತ್ಪದ್ಮದಿ ತೋರೆ ಪದ್ಮಸರೋವರ ತೀರವಾಸಿ ಕರ ಪದ್ಮಯುತಳೆ ಮುಖಪದ್ಮವ ತೋರೆ2 ರೂಪತ್ರಯಳೆ ಕಾಮಿನಿ | ಕಾಮಪೂರಿಣೀ ತಾಪಹರಿಸೆ ಭಾಮಿನಿ ಪಾಪಗಳÉಲ್ಲವ ನೀ ಪರಿಹರಿಸುತ ಗೋಪಾಲಕೃಷ್ಣವಿಠ್ಠಲನನು ತೋರುತ ನೀ ಪರಿ ನುಡಿವೆನೆ ನೀ ಪಾಲಿಸುವುದು ಆಪವರ್ಗದಲಿ 3
--------------
ಅಂಬಾಬಾಯಿ
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು
ಪೊರೆಯುವುದೆಮ್ಮನು ನರಹರಿ ನೀನು ಸ್ಮರಿಪೆವು ತವ ಪದಸರಸಿಜಗಳನು ಪ. ತರಳ ಪ್ರಹ್ಲಾದನು ಮೊರೆಯಿಟ್ಟು ತಾನು ಕರೆಯಲಾಕ್ಷಣ ಬಂದೆ ತ್ವರಿತದಿ ನೀನು 1 ದುರುಳ ಹಿರಣ್ಯಕಸುರನನು ಸೀಳಿ ಸುರರನ್ನು ಸಲಹಿದೆ ಕರುಣವ ತಾಳಿ 2 ಮಿತ್ರ ಮಂಡಳಿ ಶತಪತ್ರಕೆ ನೀನು ಮಿತ್ರನಂತೆಸಗು ವಿಮಿತ್ರತೆಯನ್ನು 3 ಕಾರುಣ್ಯಾಮೃತವಾರಿಧೇ ಮೂರ್ತೇ ವರ ಲಕ್ಷುಮಿನಾರಾಯಣ ಸತ್ಕೀರ್ತೇ 4
--------------
ತುಪಾಕಿ ವೆಂಕಟರಮಣಾಚಾರ್ಯ
ಶೇಷ ವಂದ್ಯ ಶಿರಿನಾರಾಯಣ ವಿಠಲ ದಾಸನೆನಿಸೋ ಇವನಾ ಪ ದೋಷ ದೂರ ಸುವಿಶೇಷ ಮಹಿಮ ಬ್ರಹ್ಮೇಶ ವಂದ್ಯ ಚರಣ ಅ.ಪ. ಸಾಧಕ ಜೀವ ಸಮೂಹವ ಸೃಜಿಸುತ್ತಸಾಧನ ಬಗೆ ಬಗೆ ನಿರ್ಮಿಸುತಾ |ಭೋದಕ ವೇದ ವಿಭಾಗವ ಗೈದಾ ಅ-ಗಾಧ ಮಹಿಮ ಪೊರೆಯೊ 1 ಕಾರುಣ್ಯಾಂಬುಧಿ ತಾರತಮ್ಯ ಜ್ಞಾನಮೂರೆರಡಿಹ ಭೇದವನೆ ತಿಳಿಸೊಸಾರಾಸಾರದಿ ಸಾರತಮನು ನೀನೆಂ-ದಾರಧಿಪ ಮತಿ ತಿಳಿಸೋ 2 | ಸೇವ್ಯಸೇವಕ ಭಾವ ತಿಳಿಸುತನಿವ್ರ್ಯಲೀಕ ನೆನಿಸೊ |ಪೂಜ್ಯ ಪೂಜಕನೆ ಮಾಳ್ಪುದೆಲ್ಲ ತವಭವ್ಯ ಪೂಜೆ ಎನಿಸೋ 3 ಗುರ್ವನುಗ್ರಹವೆ ಬಲವೆಂದೆನಿಸುತಸರ್ವಕಾರ್ಯ ನಡೆಸೊ |ದುರ್ವಿಭಾವ್ಯ ಸರ್ವೋತ್ತಮ ಹರಿಸರ್ವೇಷ್ಟ ಪ್ರದ ನೆನಿಸೊ 4 ತಂದೆ ತಾಯಿಯೋಳ್ಬಂಧು ಮಿತ್ರರಲಿಸಂದುಗೊಂದು ತವವ್ಯಾಪ್ತಿ |ಛಂದದರಹಿ ಪೊರೆನಂದಕಂದ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಶ್ರೀರಮಣೀಮಣಿ ಬಾರೌ ಶ್ರೀಕರಮಣಿಪೀಠಕೆ ಪ. ಸಾರಸದಳನಯನೆ ಸುಗುಣಾಭರಣೆ ಸಾರಸಭವವಂದಿತಚರಣೆ ಕ್ಷೀರಸಾಗರನಂದನೇ ವರ ಕಾರುಣ್ಯಾಮೃತಪೂರಿತ ವದನೆ 1 ಪವನಾತ್ಮಜಸಂಸೇವಿತಾಂಘ್ರಿಯುಗಳೇ ಪಾಲಿತಾಮರ ಜಾಲೇ ಪಾವನಗುಣಶೀಲೇ ಶಶಾಂಕನಿಭಫಾಲೇ ಪಾಲಿಸುನೀಂ ಪಂಕಜಸುಮಮಾಲೆ 2 ಕೇಶವಹೃದಯನಿವಾಸಿನೀ ಪದ್ಮಾಸಿನೀ ಕ್ಲೇಶ ನಿವಾರಿಣಿ ಭುವನೈಕ ಜನನಿ ಕಾಂಕ್ಷಿತಾರ್ಥ ಪ್ರದಾಯಿನಿ 3
--------------
ನಂಜನಗೂಡು ತಿರುಮಲಾಂಬಾ
ಹೀಗಿದ್ದವನೇ ತಿಳಿದವನು | ನಿಜ | ಯೋಗದ ಮಾರ್ಗಕ ಬೇಗ ಹೊಂದುವನು ಪ ನೆಂಟರಿಷ್ಟರೊಳು ದಾಕ್ಷಿಣ್ಯಾ | ತನ್ನ | ಬಂಟ ಜನರ ಮ್ಯಾಲ ಘನ ಕಾರುಣ್ಯಾ | ಶುಂಠ ಶಠರೊಳು ಕಾಠಿಣ್ಯಾ | ತನ | ಗುಂಟಾದ ಸಾಧುಗಳೊಳು ಪ್ರೀತಿ ಬಣ್ಣಾ 1 ಅರಸುಗಳಲಿ ನಮ್ರ ಸ್ಥಿತಿ | ಸರ್ವ | ವರಿತ ವಿದ್ವತ್ತರೋಳರ್ಜಿವ ವೃತ್ತಿ | ಅರಿಗಳೊಳಗೆ ಶೌರ್ಯ ಖ್ಯಾತಿ | ತನ್ನ | ಗುರುಗಳೊಳಗ ಭೆಜ್ಜರಂಜಿಕೆ ನೀತಿ 2 ಹೆಂಗಳೆಯರೊಳು ಧೂರ್ತತನಾ | ತಾನು | ಹಿಂಗದೆ ಮಾಡುವ ಶ್ರವಣ ಮನನಾ | ತುಂಗ ಮಹಿಪತಿ ಸುತ ಪ್ರಿಯನಾ | ಮಂಗ | ಳಂಗುಟ ನೆನೆವನು ಬಿಡದನು ದಿನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪೊರೆಯುವುದೆಮ್ಮನು ನರಹರಿ ನೀನುಸ್ಮರಿಪೆವು ತವ ಪದಸರಸಿಜಗಳನು ಪ.ತರಳಪ್ರಹ್ಲಾದನು ಮೊರೆಯಿಟ್ಟು ತಾನುಕರೆಯಲಾಕ್ಷಣ ಬಂದೆ ತ್ವರಿತದಿ ನೀನು 1ದುರುಳಹಿರಣ್ಯಕಸುರನನು ಸೀಳಿಸುರರನ್ನು ಸಲಹಿದೆ ಕರುಣವ ತಾಳಿ 2ಮಿತ್ರಮಂಡಳಿ ಶತಪತ್ರಕೆ ನೀನುಮಿತ್ರನಂತೆಸಗು ವಿಮಿತ್ರತೆಯನ್ನು 3ಕಾರುಣ್ಯಾಮೃತವಾರಿಧೇ ಮೂರ್ತೇವರಲಕ್ಷುಮಿನಾರಾಯಣ ಸತ್ಕೀರ್ತೇ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ