ಒಟ್ಟು 26 ಕಡೆಗಳಲ್ಲಿ , 15 ದಾಸರು , 23 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಪ್ರಮೇಯ ಪ್ರಕರಣ) ಸುವ್ವಿ ಸುವ್ವಿ ಉರಗಾದ್ರಿವಾಸ ಶ್ರೀ ವೆಂಕಟೇಶ ಸುವ್ವಿ ಶ್ರೀ ಸಚ್ಚಿದಾನಂದಾತ್ಮಕಾನೆ ಸುವ್ವಿ ಪ ಮೂಲನಾರಾಯಣ ಮೂಲಪ್ರಕೃತಿಯನ್ನು ಮೂರುಭಾಗಗೈಸಿ ಸೃಷ್ಟಿಮಾಡಿದನೆ ಸುವ್ವಿ ಸೃಷ್ಟಿಯೊಳು ಗುಣವ್ಯಷ್ಟಿಸಮಷ್ಟಿಯಿಂದ ಸೃಷ್ಟಿಸಿದ ಜಗಸಂಸೃಷ್ಟನೆನಿಸಿದಸುವ್ವಿ 1 ಸತ್ವರಜತಮ ಸಂಯುಕ್ತದಿಂದ ಕರ್ಮ ಮುಕ್ತಿ ಪರ್ಯಂತ ಜನ್ಮಕರ್ಮಂಗಳು ಸುವ್ವಿ ಕರ್ಮಂಗಳು ಸವೆದು ಉತ್ಕ್ರಾಂತ ಮಾರ್ಗ ಪಿಡಿದು ತಮ್ಮ ಸ್ವರೂಪ ಕರ್ಮನೆಸಗುವರೋ ಸುವ್ವಿ 2 ಮಹದಹಂಕಾರದಿಂದ ವೈಕಾರಿಕದಿಂದ ವ್ಯಸ್ತ- ರಾದರು ತತ್ವದೇವತೆಗಳು ಸುವ್ವಿ ದೇವತೆಗಳಾದರು ಮೇಲೆ ರಾಜಸಾಹಂಕಾರದಿಂದ ಇಂದ್ರಿಯಾದಿಗಳೆಲ್ಲ ಸೃಷ್ಟಿಯಾದವು ಸುವ್ವಿ 3 ಭೂತಪಂಚಕವು ತನ್ಮಾತ್ರಪಂಚಕಗಳು ತಾಮ- ಸಾಹಂಕಾರಗಳುದಿಸಿದವೆನ್ನು ಸುವ್ವಿ ಉದಿಸಿದಹಂಕಾರತ್ರಯದೊಳು ಬಂದು ಸರ್ವಸೃಷ್ಟಿ ಅದುಭುತವಾದುದು ಅನಿರುದ್ಧನಿಂದ ಸುವ್ವಿ 4 ಎಲ್ಲಜೀವರು ಮುನ್ನಾಸೃಷ್ಟಿಗೆ ಬಾರದಿರೆ ಇನ್ನು ಸುಪ್ತಾವಸ್ಥೆಯಲ್ಲಿ ಸುಮ್ಮನಿರ್ಪರೋ ಸುವ್ವಿ ಸೃಷ್ಟಿಗೆ ತಂದ ಗುಣವೈಷಮ್ಯದಿಂದಲೀ ಸುವ್ವಿ 5 ಭೇದಪಂಚಕವು ನಿತ್ಯತಾರತÀಮ್ಯ ಸತ್ಯ ವಿಧಿ ಮೊದಲು ತೃಣಾಂತ ಜೀವರು ತ್ರಿವಿಧವು ಸುವ್ವಿ ನಿತ್ಯ ತ್ರಿವಿಧಕಾರ್ಯ ಅರಿತು ತ್ರಿವಿಧಸಾಧನದಂತೆ ತ್ರಿವಿಧಗತಿಯು ಸುವ್ವಿ 6 ಜೀವರು ಅನಾದಿಯು ಸಾವು ನೋವುಗಳಿಲ್ಲ ಆ- ವಾವಸ್ಥೆಗಳೆಲ್ಲ ಸ್ಥೂಲ ದೇಹಕೆ ಸುವ್ವಿ ಸ್ಥೂಲದೇಹವ ಧರಿಸಿ ಪೂರ್ವಕರ್ಮದಂತೆ ಸಾಧನದಿಂ- ದಲೆ ಕರ್ಮಕ್ಷಯವಹುದು ಸುವ್ವಿ 7 ವೃದ್ದಿಹ್ರಾಸಗಳಿಲ್ಲ ಶುದ್ದ ಜೀವಸ್ವರೂಪ ವಿಧಿಮೊದಲು ತೃಣಾಂತ ಪರಿಮಿತಿ ಒಂದೆ ಸುವ್ವಿ ಪರಿಮಿತಿ ಒಂದೇ ರೀತಿ ಗುಣಕ್ರಿಯ ವಿವಿಧರೀತಿ ಅ- ದರಂತೆ ಜಡ ಪ್ರಕೃತಿ ಕಾರ್ಯವು ಪರಿಪರಿ ಇಹುದು ಸುವ್ವಿ 8 ಸರ್ವತ್ರ ಹರಿವ್ಯಾಪ್ತನಿರ್ಲಿಪ್ತನು ಸುವ್ವಿ ನಿರ್ಲಿಪ್ತನು ಅನಂತಾನಂತಗುಣಗಣಪೂರ್ಣ ಅವ್ಯಯ ಅಪ್ರಮೇಯ ಅಚ್ಯುತಾನಂತ ಸುವ್ವಿ9 ಅನಂತಾನಂತರೂಪಾನಂತ ಚೇತನ ಜಡದಿ ಅಂತರಾತ್ಮ ತಾ ನಿರಂತರ ನಿಂತಿಹ ಸುವ್ವಿ ನಿಂತು ತದಾಕಾರದಿ ತದ್ಭಿನ್ನ ತನ್ನಾಮದಲಿ ಕಂತುಪಿತನು ತಾ ನಿಂತಿಹನೆನ್ನು ಸುವ್ವಿ 10 ಇಂಥಾಜೀವರಿಗೆ ಲಿಂಗದೇಹ ಅನಾದಿಯಲ್ಲಿದ್ದು ಜ್ಯೋತಿರ್ಮಯವಾಗಿ ಪ್ರಕಾಶಿಸುವುದು ಸುವ್ವಿ ಪ್ರಕಾಶದ ಜೀವಕ್ಕೆ ಗಜ್ಜಗಬೀಜದಂತೆ ತ್ರಿಗುಣಾ ವರ್ಕವು ಲಿಂಗಕ್ಕಾವರ್ಕವು ಸುವ್ವಿ 11 ಗುಣಬದ್ಧನಾದುದರಿಂದ ಗುಣಕಾರ್ಯ ಫಲಗಳಿಂದೆ ಶೀ ತೋಷ್ಣಸುಖದುಃಖಾನುಭವವಾಗುವುದೆನ್ನು ಸುವ್ವಿ ಅನುಭವದಭಿಮಾನ ಸಾಧನದಂತೆ ಜೀವಾ ಜೀವ ಜನುಮಜನುಮಾಂತರದ ವಾಸನವಿಹುದು ಸುವ್ವಿ 12 ಸತ್ವಜೀವರ ಲಿಂಗಕ್ಕೆ ಸತ್ವಾವರಣವೇ ಪ್ರಥಮ ದ್ವಿತೀಯಾವರಣವೆ ರಜ ತೃತೀಯ ತಮವೆನ್ನು ಸುವ್ವಿ ತಮೋ ಆವರಣವೆ ಪ್ರಥಮ ರಜ ಸತ್ವವು ತದುಪರಿ ತ್ರಿವಿಧಾವರ್ಕವು ತಮೋಜೀವರಿಗಿಹುದು ಸುವ್ವಿ 13 ರಜೋ ಜೀವರಿಗೆ ರಜವು ಪ್ರಥಮಾವರಣದಿ ಇಹುದು ತಮಸತ್ವಾವರಣಾನಂತರವಿಹುದು ಸುವ್ವಿ ತಮರಜಸತ್ವಾವರಣತ್ರಯಗಳು ಲಿಂಗಕ್ಕೆ ನಿತ್ಯ ಇರಲು ತ್ರಿವಿಧಬದ್ದರಾಗಿ ಸುತ್ತುತಿಪ್ಪರು ಸುವ್ವಿ 14 ಸತ್ವಾವರ್ಕದಿ ವಿಶ್ವರಜತಮ ತ್ವೆಜಸ ಪ್ರಾಜ್ಞ ನಿತ್ಯದಿ ಜೀವನವಸ್ಥಾ ತೋರಿಸುವರು ಸುವ್ವಿ ತೋರಿಸುವರು ಜೀವರ ಜಾಗ್ರಸ್ವಪ್ನಾ ವಸ್ಥೆಯೊಳು ಶ್ರೀಭೂದುರ್ಗಾ ಲಿಂಗಕಭಿಮಾನಿಗಳುಸುವ್ವಿ 15 ಸತಿಸಹಿತರಾಗಿ ಬ್ರಹ್ಮವಾಯು ಬಿಡದೆ ನಿತ್ಯ ಭಕ್ತಿಯಿಂದ ಹರಿಯಾರಾಧಿಸುವರೋ ಸುವ್ವಿ ನಿತ್ಯಭಕ್ತಿಯಿಂದ ಸ್ತುತಿಯ ಮಾಡಿ ಜಗ- ಕತೃವಿನಾಜ್ಞೆಯಿಂ ತೃಪ್ತರಾಗೋರೋ ಸುವ್ವಿ 16 ಜ್ಞಾನ ಕರ್ಮೇಂದ್ರಿಯ ಭೂತಪಂಚಕಗಳು ಮನಸು ಎಂದು ಇನಿತು ಕೂಡಿ ಷೋಡಶಕಳೆಗಳು ಲಿಂಗಕ್ಕೆ ಸುವ್ವಿ ಷೋಡಶಕಳೆಗಳಿಂದ ಕೂಡಿ ಲಿಂಗವು ಇಹದು ಕಳೆಗಳಲ್ಲಿನ ಭಗವದ್ರೂಪವ ತಿಳಿಯೋ ಸುವ್ವಿ 17 ಮನಸಿಗೆ ಶ್ರವಣಕೆ ಶ್ರೀ ಕೇಶವನಾರಾಯಣ ತ್ವ- ಮಾಧವ ಗೋವಿಂದನೆ ಸುವ್ವಿ ಜಿಹ್ವೆ ಘ್ರಾಣದಿ ವಿಷ್ಣುಮಧುಸೂದನ ತ್ರಿವಿಕ್ರಮನೆನ್ನು ಸುವ್ವಿ 18 ಹಸ್ತ ಪಾದಕ್ಕೆಲ್ಲ ವಾಮನ ಶ್ರೀಧರ ಗುಹ್ಯಕ್ಕೆ ಹೃಷೀಕೇಶ ಮೂರುತಿ ಇಹರೋ ಸುವ್ವಿ ಮೂರುತಿ ಇಹರೋ ಮತ್ತೆ ಗುದದೊಳು ಪದ್ಮನಾಭ ಮುದದಿಂದ ಜ್ಞಾನ ಕರ್ಮೇಂದ್ರಿಯದಲ್ಲಿ ಸುವ್ವಿ 19 ಶಬ್ದದೊಳು ದಾಮೋದರ ಸ್ಪರ್ಶದಿ ಸಂಕರ್ಷಣನು ವಾಸುದೇವ ಮೂರುತಿ ಇಹರೋ ಸುವ್ವಿ ರೂಪಸುಗಂಧಗಳಲಿ ಈರೂಪಗಳಹವೋ ಸುವ್ವಿ 20 ಷೋಡಶ ಕಳೆಗಳಲ್ಲಿ ಅಭಿಮಾನಿಗಳಂತರದಲ್ಲಿ ನೀ ಬಿಡದೆ ನೆನೆಸು ಈ ಭಗವದ್ರೂಪಗಳಲ್ಲಿ ಸುವ್ವಿ ಭಗವದ್ರೂಪಗಳಲಿ ಧೃಡಭಕುತಿಯಿಂದಲಿ ಎಡೆಬಿಡದೆ ನಡೆನುಡಿಗಳಲ್ಲಿ ಸುವ್ವಿ 21 ಆಚ್ಛಾದಿಕವು ಜೀವರಿಗೆ ಎರಡುಂಟು ನಿತ್ಯದಲ್ಲಿ ಜೀವನ ಮರೆಯಮಾಡಿದ ಜೀವಾಚ್ಛಾದಿಕ ಸುವ್ವಿ ಜೀವಾಚ್ಛಾದಿಕ ಇದೆ ಹರಿಚ್ಛಾಬಂದಕಾಲದಿ ಬಿಚ್ಚಿ ಹೋಗುವುದು ನಿಶ್ಚಯ ಕೇಳೋ ಸುವ್ವಿ 22 ಪರಮಾಚ್ಛಾದಿಕವೆಂಬುದು ನಿರುತವು ತಪ್ಪಿದ್ದಲ್ಲ ಹರಿಇಚ್ಛಾ ಇಂಥಾದ್ದೆ ಇಂಥಾದ್ದೆನ್ನು ಸುವ್ವಿ ಇಂತಿದ್ದರು ಹರಿಯು ಒಮ್ಮೆ ಇಚ್ಛೆಮಾಡಿದರೆ ಒಮ್ಮೆ ಒಮ್ಮೆ ತೋರಿದರೆ ಒಮ್ಮೆ ತೋರದಿಹನೋ ಸುವ್ವಿ 23 ಲಿಂಗದೇಹಕ್ಕೆ ತಮ ಮೋಹ ಮಹಮೋಹ ತಾಮಿಶ್ರ ಅಂಧತಾಮಿಶ್ರವೆನ್ನು ಸುವ್ವಿ ತಾಮಿಶ್ರದಿ ಪಂಚ ನರಕಂಗಳಲ್ಲಿರ್ಪ ಕೃದ್ಧೋಲ್ಕಾದಿ ಪಂಚಭಗವದ್ರೂಪವಿಹುದೋ ಸುವ್ವಿ 24 ದೈತ್ಯರಿಗವಕಾಶ ಲಿಂಗದೊಳೆಂದಿಗಿಲ್ಲ ದೈತ್ಯಾರಿಜನಾರ್ದನ ಹರಿ ಅಲ್ಲೆ ಇಹನು ಸುವ್ವಿ ದೈತ್ಯಾರಿ ಜನಾರ್ದನನು ಲಿಂಗವ ರಕ್ಷಿಸುತ್ತ ನಿತ್ಯನಿರ್ಲಿಪ್ತನಾಗಿ ನಿಂತಿಹನೋ ಸುವ್ವಿ 25 ವಿಧಿಮೊದಲು ತೃಣಾದಿ ಜೀವರ ಲಿಂಗದಲಿ ದಗ್ಧಪಟದ ತೆರದಿ ವಿಧಿಗೆ ಲಿಂಗವು ಸುವ್ವಿ ವಿಧಿಗಿಹ ಲಿಂಗದ ಕಾರ್ಯ ಹರಿಯ ಪ್ರೀತ್ಯರ್ಥವು ಲಿಂಗಗುಣದ ಕಾರ್ಯವೆಂದಿಗಿಲ್ಲವೋ ಸುವ್ವಿ 26 ಲಿಂಗದೇಹಕೆ ಮುಂದೆ ಅನಿರುದ್ಧದೇಹವು ಅಂಗಿಯ ತೊಟ್ಟಂತೆ ಸಂಗಮಾದುದು ಸುವ್ವಿ ಅದರಿಂದ ಅನಿರುದ್ಧದೇಹ ಇಹುದು ಸಪ್ತಾವರಣ ಆವರಣಗಳಲ್ಲಿ ವಿವರಣೆ ತಿಳಿಯೋ ಸುವ್ವಿ 27 ಅನಿರುದ್ಧ ಪ್ರದ್ಯುಮ್ನ ಆವರಣಗಳೆರಡು ವಾಸುದೇವ ನಾರಾಯಣ ಸುವ್ವಿ ಸರ್ವತತ್ತ ್ವ ವ್ಯಕ್ತವಾದವು ನೀ ಮತ್ತೆ ತಿಳಿಯೋದು ಸುವ್ವಿ 28 ಮಹತ್ತತ್ವ ತಿಳಿ ಶ್ರೀ ವಾಸುದೇವಾವರಣದಿ ನಾರಾಯಣಾವರಣದಿ ಅವ್ಯಕ್ತ ತತ್ವವು ಸುವ್ವಿ ಅವ್ಯಕ್ತ ತತ್ವಾದಿಚತುರ್ವಿಂಶತಿ ತತ್ವದಲಿ ಕೇಶವಾದಿ ಚತುರ್ವಿಂಶತಿ ರೂಪವಿಹುದು ಸುವ್ವಿ 29 ತತ್ವಂಗಳಲಿ ತತ್ತದಭಿಮಾನಿಗಳಂತರದಿ ನಿತ್ಯ ಹರಿಯು ತನ್ನ ಸತಿಯರಿಂದಲಿ ಸುವ್ವಿ ಸತಿಯರಿಂದಲಿ ಕೂಡಿ ಕೃತ್ಯವ ನಡೆಸಿ ಅಭಿ ವ್ಯಕ್ತಮಾಡಿಸುತ್ತಿರುವನು ಹರಿ ಸತ್ಯವೆನುಸುವ್ವಿ 30 ಹೃದಯದೊಳಿರುತಿರ್ಪ ಅನಿರುದ್ಧದೇಹದೊಳು ಮುದದಿಂದ ದೈತ್ಯದಾನವಾದಿಗಳಿರುವರು ಸುವ್ವಿ ದೈತ್ಯರೆಲ್ಲರು ಪಾಪಕಾರ್ಯಗಳ ಮಾಳ್ಪರು ಪುಣ್ಯಕಾರ್ಯಗಳೆಲ್ಲ ಸುರರಿಂದಾಹುದು ಸುವ್ವಿ 31 ಲಿಂಗದೇಹದ ಸಂಗಡ ಭಂಗವಿರುವುದು ಸುವ್ವಿ ಭಂಗವಾಗಲು ವಿಷಯ ಸಂಗರಹಿತನಾಗು ರಂಗ ಅಂತರದಿ ತಿಳಿಯಗೊಡುವನು ಸುವ್ವಿ 32 ಜೀವಪ್ರಕಾಶವು ಲಿಂಗಾನಿರುದ್ಧದೊಳು ಷೋಡಶಕಳೆಗಳಿಂದ ವ್ಯಾಪಿಸಿಹುದು ಸುವ್ವಿ ವ್ಯಾಪಿಸಿಹುದು ಮುಂದೆ ಸ್ಥೂಲದೇಹವು ಒಂದು ಸ್ಥೂಲಜಡದೇಹದ ಕಾರ್ಯ ಅಭಿವ್ಯಕ್ತವಾಹುದು ಸುವ್ವಿ 33 ಸ್ಥೂಲ ದೇಹದೊಳು ಸುಷುಮ್ನಾಧಾರ ಹಿಡಿದು ಸಪ್ತಕಮಲಗಳಲ್ಲುಂಟು ತಿಳಿಯೋ ಸುವ್ವಿ ಸಪ್ತಕಮಲದಿ ಮೊದಲು ಮೂಲಾಧಾರದಿ ನಾಲ್ಕು ಕಮಲ ಹವಳವರ್ಣವಿದೆ ಭೂಲೋಕವೆನ್ನು ಸುವ್ವಿ 34 ಕಮಲ ನಾಭಿಯಲ್ಲಿ ವಾಯುಮಂಡಲವಿದೆ ಭುವರ್ಲೋಕವು ಸುವ್ವಿ ಭುವರ್ಲೋಕ ಇಲ್ಲಿ ವಾಯುಬೀಜಾಕ್ಷರದಲ್ಲಿ ನಿತ್ಯ ಸುವ್ವಿ 35 ಹೃದಯಕಮಲದಿ ಎಂಟುದಳ ಉಂಟು ರವಿಭಾ ಸತ್ರಿಕೋಣ ಅಗ್ನಿಮಂಡಲವಿಹುದಿಲ್ಲಿ ಸುವ್ವಿ ಇಹುದು ಸುವರ್ಲೋಕ ಇಲ್ಲಿ ಅಗ್ನಿ ಬೀಜಾಕ್ಷರ ನಿತ್ಯ ಸುವ್ವಿ 36 ಹೃದಯಕಮಲದ ಮಧ್ಯ ಕರ್ಣಿಕಮಧ್ಯದಲ್ಲಿ ಮೂಲೇಶನಿಪ್ಪ ಸ್ಥೂಲಾಂಗುಷ್ಟ ಮೂರುತಿ ಸುವ್ವಿ ಮೂರುತಿ ಮೂಲೇಶನ ಪಾದಮೂಲದಲ್ಲಿಪ್ಪ ಅನಿರುದ್ಧ ದೇಹವೇ ಸುವ್ವಿ 37 ನಿತ್ಯ ಇಪ್ಪತ್ತೊಂದು ಸಾವಿರದಾರುನೂರು ಸುವ್ವಿ ಆರುನೂರು ಜಪ ಮೂರು ಮೂರು ವಿಧಜೀವರೊಳು ಮೂರು ವಿಧ ನಡೆಸಿ ಮೂರ್ಗತಿ ನೀಡುವ ಸುವ್ವಿ 38 ಅಷ್ಟದಳಗಳ ಮೇಲೆ ಅಷ್ಟಭುಜನಾರಾಯಣ ನಿಷ್ಟೆಯಿಂದಲಿ ಚರಿಸಿ ಜೀವರಿಷ್ಟವ ತೋರುವ ಸುವ್ವಿ ಜೀವರಿಷ್ಟದೊಳು ಪೂರ್ವದಳದಲಿ ಪುಣ್ಯ ನಿದ್ರಾಲಸ್ಯವು ಶ್ರೀ ಆಗ್ನೇಯ ದಳದಲಿ ಸುವ್ವಿ 39 ಆಗÉ್ನೀಯದಳದ ಮುಂದೆ ಯಮದಿಕ್ಕಿನಲ್ಲಿ ಕ್ರೂರ ಬುದ್ಧಿಯು ಜೀವಗಾಗುವುದೆನ್ನು ಸುವ್ವಿ ನಿರುತ ದಳದಲ್ಲಿ ಸಂಚರಿಸುವ ಸುವ್ವಿ 40 ವಾಯುವ್ಯದಲ್ಲಿ ಗಮನಾಗಮನವು ಸುವ್ವಿ ಗಮನಾಗಮನದಿಮೇಲೆ ರತಿಬುದ್ಧಿಯ ಉತ್ತರದಲಿ ದಾನಬುದ್ಧಿಯು ಈಶಾನ್ಯದಲಿ ಸುವ್ವಿ41 ಬರಲು ಸ್ವಪ್ನಾವಸ್ಥೆಯು ಸುವ್ವಿ ಸ್ವಪ್ನಾನಂತರದಿ ಕರ್ಣಿಕೆಯಲ್ಲಿ ಜಾಗ್ರತಿಯು ಮಧ್ಯದೊಳು ಸುಷುಪ್ತಾವಸ್ಥೆಯು ಸುವ್ವಿ 42 ಉರದಲ್ಲಿ ಮುತ್ತಿನವರ್ಣ ಎರಡಾರುದಳಕಮಲದಿ ವಿರುಪಾಕ್ಷನಭಿಮಾನಿ ನರಸಿಂಹನ ಪೂಜಿಪ ಸುವ್ವಿ ನರಸಿಂಹನ ಪೂಜಿಪ ಈ ಲೋಕ ಮಹರ್ಲೋಕ ದ್ವಾದಶದಳದಿ ಕಲಾಭಿಮಾನಿಗಳಿಹರು ಸುವ್ವಿ43 ಕಂಠದಲಿ ಎರಡೆಂಟರಷ್ಟದಳಕಮಲ ಕಮಲ ರಕ್ತವರ್ಣ ಜನಲೋಕವು ಸುವ್ವಿ ಜನಲೋಕದಲಿ ಶೇಷ ಸಂಕರ್ಷಣ ಮೂರ್ತಿಯನು ನಿತ್ಯ ಸ್ತುತಿಸುತ ತಾ ಭೃತ್ಯನಾಗಿಹನೊ ಸುವ್ವಿ 44 ಭ್ರೂಮಧ್ಯ ದ್ವಿದಳಕಮಲ ಉಂಟೊಂದಿಲ್ಲಿ ತಾ ಮಧುಪುಷ್ಪದಂತೆ ಪೊಳೆಯುತ್ತಿಹುದು ಸುವ್ವಿ ತಪೋಲೋಕವೆನ್ನು ಸುವ್ವಿ 45 ಶಿರದೊಳು ಸಾವಿರದಳಕಮಲವು ವಜ್ರದ ಕಲಾ ವರುಣ ಮಂಡಲವಿದೆ ಸತ್ಯಲೋಕವೆ ಸುವ್ವಿ ಉತ್ತಮೋತ್ತಮ ಶ್ರೀರಂಗನ ಪೂಜಿಸುವನು ಸುವ್ವಿ 46 ಅಷ್ಟಾಕ್ಷರU
--------------
ಉರಗಾದ್ರಿವಾಸವಿಠಲದಾಸರು
(ಆ) ಶ್ರೀಹರಿಯ ಗುಣಗಾನ ಇದು ಬಲು ಸುಖಕಾಣೆ ಕೇಳಿದಕೆಣೆಗಾಣೆ ಪ ಒದಗಿ ಬರುವ ಮೃತ್ಯುವ ಪರಿಹರಿಸುವ ಪದುಮನಾಭನ ಪದಪದುಮಕ್ಕೆರಗುವ ಅ.ಪ ಚಂಚಲ ಸಿರಿಗಾಗಿ ಲೋಕ ಪ್ರ- ಪಂಚಕೆ ಬೆರಗಾಗಿ ಸಂಚಿತ ಕರ್ಮವ ಕಳೆಯದೆ ಕಾರ್ಯವು ಮಿಂಚಿದ ಬಳಿಕಾಯಾಸಕ್ಕಿಂತಲು1 ಚಿಂತೆಯೆಲ್ಲವ ಕಳೆದು ಮನದಿ ನಿ- ಶ್ಚಿಂತೆಯಾಗಿ ನಲಿದು ಅಂತರಂಗದಿ ಲಕ್ಷ್ಮೀಕಾಂತನ ತುತಿಸುತ ಸಂತೋಷ ಶರಧಿಯಳೋಲ್ಯಾಡುವುದು 2 ಶರಣ ಜನರ ಪೊರೆವ, ದ್ವಾರಕಾ-ಪುರವರದಲಿ ತಾನಿರುತಿರುವಪರಮ ಪುರುಷ ನಮ್ಮ ಸಿರಿಕೃಷ್ಣರಾಯನಮುರಳಿಧರನ ಸೇವಿಸಿ ಸುಖಿಯಾಗುವ.3
--------------
ವ್ಯಾಸರಾಯರು
(ಊ) ಲೋಕನೀತಿ ಹರೇ ಪಾಹಿ ಮಾಂ ಸದಾ ಪ ಭವದೊಳೆನ್ನ ಬಳಲಿಸಲಿ ತವ ಹಿತವೇನಿಹುದಿದರೊಳು ತವಕದಿಂದ ಕೊಡು ದಯಾಳು ನವವಿಧ ಭಕುತಿ ನಿನ್ನೊಳು 1 ಲೋಕ ಪಾಲಕನೆಂಬೊ ಬಿರುದು ಈ ಕಾಲಕೆ ತೋರೊ ಒಲಿದು ಸಾಕಲಾರೆನೆನಲು ಬಿಡದು ನೀ ಕರುಣಿಸು ದÀಯಾಸಿಂಧು 2 ಧೀರ ಶ್ರೀ ಹನುಮೇಶವಿಠಲಾ ಮೀರಿದ ಕಾರ್ಯವು ಇದಲ್ಲಾ ಸಾರ ಮಾರ್ಗ ತೋರಿ ಸುಫಲಾ ಮಾರಜನಕ ಕೊಡು ಗೋಪಾಲ 3
--------------
ಹನುಮೇಶವಿಠಲ
ಅಧ್ಯಾಯ ಆರು ರಾಗ:ನಾಟಿ ಝಂಪೆತಾಳ ಅಘಟ್ಯಘಟಿನಾಟ್ವೀ ಪುಲಿಂದಾ ಶ್ರೀಪತೇಸ್ತನುಃ ನೃಪಜಾಸ್ಮರಪೀಡಾಂ ತಾಂ ಕಥಯಂತೀ ಹರೇದಘಮ್ ನಿತ್ಯ ಸಂತೋಷ ಜಯತು ಜಯ ಲಕ್ಷ್ಮೀಶಾ ವೆಂಕಟೇಶಾ 1 ಪದ್ಮಜಾಕೃತಯಾತ್ರೆ ಪ್ರದ್ಮವಿಕಸಿತ ನೇತ್ರಾ ಪ್ರದ್ಮಾಜಾಸನ ಮುಖ್ಯ ಪದ್ಮನಾಭಾಖ್ಯ 2 ಗುರ್ವನುಗ್ರಹ ಗಮ್ಯ ಗುರುಗುಣಾರ್ಣವಸೌಮ್ಯ ಗುರ್ವನಂತಾದ್ರೀಶ ಗುರುಸುಪ್ರಕಾಶ3 ವಚನ ಪುರುಷನ ಪಾದ ನಿತ್ಯ ಮರೆಯದಲೆ ಮನದಲ್ಲಿ ಕರವ ವರಬುದ್ಧಿಯಲಿ ಎನ್ನ ಶಿರಮೆಟ್ಟಿ ಕರಮುಗಿದು ಕೊರವಂಜಿ ಕಥೆಯ 1 ಮುನ್ನಾಗಿ ನಾರೀಕುಲ ತನ್ನ ಕಾರ್ಯಕೆ ಕಳುಹಿ ಎನ್ನ ಕಾರ್ಯಕೆ ಅನ್ಯ ತನ್ನ ಕಾರ್ಯವು ಮತ್ತೆ ಮಾಡುವರಲ್ಲ ಚನ್ನವಾಗಿ2 ಉಬ್ಬುಬ್ಬಿ ವನಿತೆಯರು ಈ ರೀತಿ ಅವಲಂಬಿ ಗಂಭೀರಕೊರವಿ ಮುಖ ಬಾಯ್ವಳಗ್ಹಲ್ಲು ಎಂಬುವದು ಒಂದಿಲ್ಲ ಲಂಭಕರ್ಣಗಳಿಹವು ಲಂಭಕುಚಗಳು ಮತ್ತ ಲಂಬೋದರಿ ಯೆನಿಸಿಕೊಂಬುವಳು ತಾನು 3 ಜಡೆಗಳ ಧರಿಸಿ ಧೀರ ಮಾಡಿ ಸಾರ ಚಾರುನವಧಾನ್ಯಗಳ ಪೂರ ಚಾರು ತಿಲಕವನಿಟ್ಟು ಹಾರ ಗೀರುಕಂಕಣ ಕೈಗೆ ಚಾರು ತಾ ಐವತ್ತು ಪೂರ ವಯದವಳಾಗಿ ತೋರುತಿಹಳು4 ಮಣಿ ಮಾಲೆಗಳ ಧರಿಸಿ ಮಣಿ ಮೇಲೆ ಕರ್ಪೂರ ಮಣಿಯು ಮೇಲೆ ಸಾಲ್ಹಿಡಿದು ವಿವಿಧಮಣಿ ಬಾಲಕನ ಉಡಿಯಲ್ಲಿ ಕೋಲು ಕೈಯಲಿ ಪಿಡಿದು ನಡೆದಳಾಗ 5 ರಾಗ:ಶ್ರೀರಾಗ ಆದಿತಾಳ ಗಿರಿಯಿಂದಲಿ ನಾರಾಯಣ ಪುರಕೆ ಬಂದಳು ಪುರದ ಬಾಗಿಲುಗಳನ್ನೆಲ್ಲ ತ್ವರದಿ ದಾಟಿದಳು ತಿರವಿದ ಸೆರಗು ತಿರುಗಿ ಹೊದೆಯುತಲೆ ತಿರುಗಾಡುತ ಬಂದಳು ತಿರುಕೊಂಬುವರಂತೆ ಮನೆ ಮನೆ ಬಾಗಿಲನು ಮೆಟ್ಟುತಿಹಳು ಮನಸಿಗೆ ಬಂದ್ಹಾಂಗೆ ಧ್ವನಿಮಾಡುತಿಹಳು ಮನಗೊಟ್ಟು ಕೇಳಿರಿ ಎನ್ನ ತಾಯಿಗಳಿರಾ ಮನದ ಮಾತುಗಳ್ಹೇಳುವೆ ಮನೆಯವ್ವಗಳಿರಾ 1 ಹಿಂದಾದದ್ದು ಹೇಳೇನು ಇಂದಾದದ್ದು ಮತ್ತೆ ಚಂದಾಗಿ ಪೇಳೇನು ಮುಂದಾಗುವದೆಲ್ಲಾ ಹಿಂದಕ್ಕೆ ನಾ ಬಹಳ ಮಂದಿಗ್ಹೇಳಿದೆನು ಒಂದೂ ಸುಳ್ಳಾಗಿಲ್ಲ ಸಂದೇಹವಿಲ್ಲ 2 ಸಾಮಭೇದವ ಬಲ್ಲೆ ಸಾಮುದ್ರಿಕಿ ಬಲ್ಲೆ ಹೈಮಾದಿ ಜ್ವರಕೌಷಧ ನಾ ಮಾಡಲು ಬಲ್ಲೆ ಕಾಮಿನಿಯರಿಗಾದ ಕಾಮಜ್ವರ ಬಲ್ಲೆ ಕೌಮಾರಿಗಳಿಗಂತು ನಾ ಮುಂಚೆ ಬಲ್ಲೆ 4 ಭೂತ ಬಿಡಿಸಲು ಬಲ್ಲೆ ಬೇತಾಳವ ಬಲ್ಲೆ ಮಾತಾಡದ ಮೂಕರನು ಮಾತಾಡಿಸಬಲ್ಲೆ ನೀತಿನುಡಿಗಳ ಬಲ್ಲೆ ಜ್ಯೋತಿಷ್ಯವ ಬಲ್ಲೆ ಕೂತು ಕೇಳಿದರೆಲ್ಲ ಮಾತ್ಹೇಳಲು ಬಲ್ಲೆ5 ಹಸನಾಗಿ ಪೇಳುವೆ ಕುಶಲಾದವಾಣಿ ಹುಸಿಯಲ್ಲವಿದು ಎನ್ನ ಹಸುಗೂಸಿನಾಣಿ ಅಸು ಹೋದರು ನಾನಲ್ಲ ಹುಸಿಯಾಡುವ ಕೊರವಿ ವಸುಧೆಯೊಳಗೆ ನಾ ಹೆಸರಾದ ಕೊರವಿ6 ನರನಾರಾಯಣಲಿ ಇರುವಂಥ ಕೊರವಿ ವರನಂತಾದ್ರೀಶನ ನೆರವುಳ್ಳ ಕೊರವಿ ಕೊರವಿ ಮಾತನು ಕೇಳಿ ಪುರದ ನಾರಿಯರು ಅರಸನ ರಾಣಿಗೆ ತ್ವರದಿ ಪೇಳಿದರು7 ರಾಗ:ಪೂರ್ವಿರಾಗ ಭಿಲಂದಿ ತಾಳ ಬಂದಳಮ್ಮ ಇಲ್ಲೆ ಜನರು ನೆರೆದು ಬಹಳ ಆತುರ ಪಟ್ಟು ಕೇಳುತಿಹರÀುಪ ಮಾತನಾಡುತಿಹಳು ಮುದದಿ ಕೇಳಿ ದ್ಹೇಳುವಳು ಮುದಕಿಯಾಗಿ ತೋರುತಿಹಳು 1 ತನ್ನ ಮಕ್ಕಳಾಣೆ ಕೊಡುತಿಹಳು 2 ನರನಾರಾಯಣರು ಎಲ್ಲಿ ಇವರೊ ಅಲ್ಲೆ ಇರುವಳಂತೆ ವರದನಂತಾದ್ರೀಶ ಕೊಟ್ಟ ವರವುಳ್ಳ ಕೊರವಿಯಂತೆ 3 ರಾಗ:ಕನ್ನಡ ಕಾಂಬೋದಿ ಅಟತಾಳ ಬೇಗ ಅರಸನ ಪಟ್ಟದ ರಾಣಿ ಪನ್ನಗವೇಣಿ 1 ತಿರುಗಿ ಬಂದರು ಮತ್ತಲ್ಲೆ ಕೊರವಿ ಇದ್ದಲ್ಲೆ 2 ಎಂದು ಕರೆದರು ಕಯ್ಯ ಬೀಸುತ ಕಣ್ಣುತಿರುವುತ 3 ನುಡಿದಾಳೀಪರಿ ವಾಣಿ ಮಾತಿನ ಜಾಣೆ 4 ಆಕೆ ಸೌಭಾಗ್ಯದ ಒಡವಿ ಹುಟ್ಟನಾ ಬಡವಿ 5 ನೋಡಿ ಎನ್ನ ಒಡವೆಯ ನೋಡಿರಿ ಮಾತನಾಡಿರಿ 6 ಎನ್ನ ಕರಿದಾಳೆಂಬುವದು ಅಪಹ್ಯಾಸವಿದು 7 ನಕ್ಕು ಮಾತಾಡುವಿರಾ ಬಂಡು ಮುದಕಿಯ ಕಂಡು 8 ಅಂಜಿ ಮಾತಾಡಿದರಾಗ ವಿನಯದಿ ಬೇಗ9 ಒಮ್ಮೆಗಾದರುದಕ್ಕೀತೆ ಆಡೋದು ರೀತೆ10 ಬಂದು ನಡೆದಳು ಮುಂದೆ ಆನಂದದಿಂದ11 ಅರಮನೆಗೆ ಬಾಗಿಲೊಳಗೆ ಅಂಗಳದೊಳಗೆ 12 ಕೋಲುಕೋಲೆಂದು ಪಾಡುವಳು ಮಾಯಾತೋರುವಳು 13 ರಾಗ:ಶಂಕರಾಭರಣ ಆದಿತಾಳ ಕೋಲೆನ್ನ ಕೋಲು ಲೀಲೆಕೊಂಡಾಡುತಲಿ ಪ ಭರದಿಂದೊದೆಯುತಿರೆ ತಿರುಗಿ ಕಾಲ್ಹಿಡಕೊಂಡು ಪರಿಪರಿಸ್ತುತಿಸಿದಾ 1 ನೋಡಿ ಸಹಿಸದೆ ಕೊಲ್ಲಾಪುರಕೆ ನಡೆದಳು 2 ಹರಿ ವೈಕುಂಠದಿಂ ಧರೆಗಿಳಿದನು 3 ಹುತ್ತಮನೆಯ ಮಾಡಿ ಗುಪ್ತದಲ್ಲಿರುತಿಹ4 ನೆತ್ತಿಯ ಒಡಕೊಂಡು ಭಕ್ತನ ಸಲುಹಿದೆ 5 ಗುರುವಕರೆದ ಅವನಿಂದ ತಲೆ ಗಾಯವ ಕಳೆದನು 6 ತಾ ಬೇಡಿ ಸ್ವಾಮಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಆರ್ತಭಾವ ಸುಳಾದಿ ಧ್ರುವತಾಳ ವೊಂದು ತೋರೆನಗರವಿಂದನಯನ ಮಂದಾಕಿನಿಯ ಪಡೆದ ಮುದ್ದು ಚರಣ ಸುಂದರಾಂಗ ತೋರೆನಗೆ ಸುರೇಂದ್ರನಾಥ ಕಂದರ್ಪಪಿತನ ಕಾಲಂದಿಗೆ ರುಳಿ ಗೆಜ್ಜೆ ಚೆಂದುಳ್ಳ ಪದ್ಮರೇಖೆಯಿಂದೊಪ್ಪುವೊ ಇಂದಿರೆ ಕರಕಮಲದಿಂದ ಪೂಜಿತನಾದ ಚಂದ್ರವದನ ನಿನ್ನ ಚೆಲುವ ಪಾದ ಇಂದ್ರಾದಿ ಹರ ನಾರಂದ ಸುರಬ್ರಹ್ಮಾದಿ ವಂದ್ಯ ನಿನಗೆ ಕೋಟಿ ನಮೋ ನಮೋ ಎಂದು ಬೇಡುವೆ ದಯಾಸಿಂಧು ಎನಿಸಿದಾತ ಕಂದನಂದದಿ ನೋಡಿ ಸಲಹೋ ಎನ್ನ ಮಂದಬುದ್ಧಿಯ ಮಹಾಮದಡ ಪಾಮರ ಭವ ಬಂಧನದೊಳು ಸಿಲುಕಿ ನೊಂದೆನಯ್ಯ ಸಂದೇಹ ಮಾಡದೆ ಸಲಹದಿದ್ದರೆ ನಿನ್ನ ಹೊಂದಿ ಬಾಳುವುದೆಂತೊ ಮುಂದರಿಯೆ ಬಿಂದು ಮಾತ್ರದಿ ನಾಮಾಮೃತವ ಭೀಮೇಶಕೃಷ್ಣ ತಂದು ನೀಡೆನಿಗೆ ಇಂದೀವರಾಕ್ಷ 1 ಮಠ್ಯತಾಳ ಯುಗಳ ಪಾದಕೆ ಕೈಯ ಮುಗಿದು ಬೇಡುವೆನಯ್ಯ ಜಗದುದರನೆ ನಿನ್ನ ಜಾಣತನವ ಬಿಟ್ಟು ಅಗಣಿತಗುಣಮಹಿಮ ಅಂತರಾತ್ಮಕ ದೇವ ಬಗೆಬಗೆಯಲಿ ಸಲಹೋ ಭಕ್ತವತ್ಸಲ ನಿನ್ನ ಮಗುವೆಂದೆನ್ನ ಕಾಯೊ ಮಂದರೋದ್ಧರ ದೇವ ನಿಗಮಗೋಚರ ಸ್ವಾಮಿ ನಿಂತು ನೋಡುತ ಎನ್ನ ಚಿಗುರುದೋಷದಕುಡಿಯ ಚಿವುಟಿ ಹಾಕುತ ನಿನ್ನ ಸುಗುಣಗಳನೆ ಬಿಟ್ಟೆನ್ನವಗುಣವೆಣಿಸಿದರೆ ಇಗೋ ನಿನಗಪಕೀರ್ತಿ ಈಗ ಒಪ್ಪಿಸುವೆನು ಬಿಗಿದ ಭವಪಾಶ ಬಿಚ್ಚಿ ಭೀಮೇಶಕೃಷ್ಣ ತೆಗೆಯದೆ ನಿನ್ಹೊರತೀ ಜಗದೊಳಗುಂಟೇನಯ್ಯ 2 ವಚನ ಸಕಲ ಸ್ನಾನವು ನೇಮ ಹೋಮ ಜಪಂಗಳು ಸಕಲ ಪುಣ್ಯಕ್ಷೇತ್ರ ಮೂರ್ತಿನಾಮಂಗಳು ಸಕಲ ಪುರಾಣ ವೇದಾದಿಗ್ರಂಥಗಳು ಸಕಲ ಕಾರ್ಯವು ಸರ್ವೇಷ್ಟ ಫಲಂಗಳು ಸಾಯುಜ್ಯ ಪದವಿಗಳು ಲಕುಮೀಶ ಇವು ನಿನ್ನ ನಖಶಿಖ ಪರಿಯಂತ್ರ ಸಾರಥಿ ಸಮದೃಷ್ಟಿಲಿ ನೋಡಲು ಸಕಲಸಿದ್ಧ್ದಿಯು ಸರಿಯಾಗಿ ಕೈಗೂಡೋದು ಶಕಟಸುರಾಂತಕ ಕಕುಲಾತಿ ಮಾಡದೆ ಬಕನ್ವೈರಿಯೆನ್ನ ಭಾರವ ನೀ ವಹಿಸಲಿ ಬೇಕೊ ಇಕೋ ನಿನ್ನ ಚರಣಕ್ಕೆ ಈ ದೇಹ ಅರ್ಪಿಸುವೆ ಗೋಕುಲಾವಾಸ ನಿನ್ನ ಪಾದಕೆ ನಮಸ್ಕರಿಸುವೆ ಮುಕುತಿದಾಯಕ ಮುದ್ದು ಭೀಮೇಶಕೃಷ್ಣನೆ ಭಕುತಿಜ್ಞಾನದಲಿಡೊ ಭಯಹಾರಿ ಎನ್ನ 3 ಗೋಪಸುತನೆ ನಿನ್ನ ಗುರುವಿನ್ವಲ್ಲಭೆ ಮಹ ದಪರಾಧವೆಣಿಸದೆ ನೀ ಕರುಣದಲೆ ಸಾಂ- ದೀಪಗೆ ಸುತರನಿಟ್ಟ ಪಯಾಂಬುಧಿವಾಸ ಕೋಪದಿ ಬಯ್ದ್ದಾ ಶಿಶುಪಾಲಗೊಲಿದೆಯೊ ಶ್ರೀಪತಿ ಶರಣೆಂದಾ ದ್ರೌಪದಿ ಕಾಯ್ದಂತೆ ಕಾಪಾಡೊ ಈ ಭವಕೂಪದೊಳಗೆ ಬಿದ್ದೆ ನೀ ಪಿಡಿಕೈಯ ದಯಾಪರಮೂರುತಿ ಆಪತ್ತು ಬಾಂಧವ ಈ ದೇಹವೃಕ್ಷದಲಿ ದ್ವಾ- ಸೂಪರಣನಂತೆ ದೂರೇನೋ ಎನ್ನ ಸ- ಮೀಪದಲ್ಲಿದ್ದು ಸ್ವರೂಪ ತೋರದಲೆ ಸಂ- ತಾಪ ಬಡಿಸದಿರೆಂದಾಪನಿತು ಪೇಳ್ವೆ ಭೂಪಾಲ ಭೀಮೇಶಕೃಷ್ಣ ನಿನ್ನ ಪಾದ ನಾ ಪೊಂದಿದೆನೊ ದೊರೆ ನೀ ಪೊರೆಯೆಂದು 4 ಜತೆ ಏಸೇಸು ಕಾಲಕೆ ಬ್ಯಾಸರದೆ ಭೀಮೇಶಕೃಷ್ಣ ಲೇಸು ನೀಡೆನಗೆ ಸದಾ ಸುಮಂಗಳವ 5
--------------
ಹರಪನಹಳ್ಳಿಭೀಮವ್ವ
ಇಂದಿರೇಶ ಭಾಗವತ ಎಂದು ಬರುವನು ಇಲ್ಲೆ ಮಂದಸೂನನುನಮಗೆ ಮುಂದೆ ಗತಿಯೇನುದ್ಧವಾಒಂದು ಕಾರ್ಯವು ಬಾರದಂದಿನಾದಿಈಶ ಸುರಸುಂದರನು ಪೋದನಲ್ಲೋ ಉದ್ಧವಾ ಪ ಪತಿ ಸುತರ ಪರಿಚರಿಸುತಿಹ ನಮ್ಮಮರುಳು ಮಾಡಿದನುದ್ಧವಾ 1 ತೊರೆದು ಮನೆ ಧನಗಳನೆ ಬರಲು ಬಳಿಯಲಿ ಭಾಳತರಲಿ ಮಾಡಿದನುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 2 ಮರುಗ ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆತುರುಬಿನೊಳಗಿಟ್ಟುದ್ಧವಾಸರಸ ಸೌಂದರ್ಯಕ್ಕೆ ಮರುಳಾದನಿವನೆಂದುಗರುವ ಮಾಡಿದೆವುದ್ಧವಾಅಂತು ನಮ್ಮನು ಬಿಟ್ಟು ಮರೆಯಾಗಿ ರೋಧಿಸಲುಭರದಿ ಬಂದನುದ್ಧವಾ 3 ಕೋಲು ಕುದುರೆಯನೇರಿ ಬಾಲಕರಕೂಡಿ ತಾ ಕೇಳಿ ಮಾಡಿದನುದ್ಧವಾಲೀಲೆ ಚತುರರ ಸದೃಶ ಬಾಲೆಯರಕೂಡಿ ತಾ ಕೋಲನಾಡಿದನುದ್ಧವಾ4 ದಧಿ ಬೆಣ್ಣೆ ನಮ್ಮಾಲಯದೊಳುತಿಂದು ಭಾಳ ಮೋಹಿಸಿದನುದ್ಧವಾ 5 ಗರಳ ಹರಿಸಿನುದ್ಧವಾಉರಿಯ ನುಂಗುತ ಮುಖದಿ ಬೆರಳೊಂದುಹತ್ತೊಂದು ವರುಷ ಇಲ್ಲಿದ್ದುದ್ಧವಾಅರಿಯಲಿಲ್ಲವೊ ನಾವು ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 6 ಒಂದಿನಾದರೂ ಒಮ್ಮೆ ಮನದಿ ಗೋಕುಲದವರಇಂದು ಸ್ಮರಿಪನೆ ಉದ್ಧವಾಚಂದ್ರ ವದನೇರ ಸ್ನೇಹ ಕೂಡಿ ಪುರದೊಳು ನಮ್ಮನಿಂದು ಮರೆತನೆ ಉದ್ಧವಾ 7 ಬಂದು ಬಳಗವ ಬಿಟ್ಟು ಮಧುರೆಗೆಲ್ಲರುನಿನ್ನ ಹಿಂದೆ ಬರುವೆವೊ ಉದ್ಧವಾಕಂದರ್ಪ ಪಿತನಿವನ ಸ್ಮರಿಸುತಲೆ ದೇಹದಿಪ್ರಾಣವೊಂದೇ ಉಳಿದಿಹುದುದ್ಧವಾ8 ಪರಮ ವೈಕುಂಠನು ಸರತಿಯಲೆ ತೋರಿಸುತಮರುಳು ಮಾಡಿದನುದ್ಧವಾಗಿರಿಗಿರಿ ಝರಿಯೊಳಗೆ ಚರಿಸಿ ಚಿನ್ನದ ಚರಯಗುರುತು ಮಾಡಿದನುದ್ಧವಾಅರಿಯಲಿಲ್ಲವೋ ಸಿರಿಯರಸ ಇವನೆಂದುಪರಿಮೋಹಿಸಿದೆವುದ್ಧವಾ 9
--------------
ಇಂದಿರೇಶರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಕಣ್ಮನಕೆ ಆನಂದ ಇಂದಿನದಿ ಕೇಳೀ |ಮನ್ಮನೋರಥ ಮುಂದೆ | ಪೋಗಿ ಸೇರಿಹುದು ಪ ಮಧ್ವ ಸರಸಿಯ ತಟದಿ | ಮಧ್ವಮುನಿ ಸದ್ವಂದ್ಯಮಧ್ವೇಶ ಶಿರಿ ಕೃಷ್ಣ | ನರ್ಚಿಸುತ ನಿತ್ಯಮಧ್ವಮತ ಸಾಮ್ರಾಜ್ಯ | ಪೀಠದಲಿ ಭೂಷಿತರುವಿಶ್ವೇಶ ತೀರ್ಥರಿಗೆ | ವಂದಿಪೆನು ಸತತ 1 ಮಧ್ವ ಸಿದ್ಧಾಂತಗಳ | ಉತ್ಕರ್ಷ ಭೋದಿಸುತವಿದ್ವಜ್ಜನಾರಾಧ್ಯ | ಪಾಠಶಾಲಾವರ್ಧಂತಿ ಹತ್ತಾರು | ನಾಲ್ಕೊರ್ಷ ಉತ್ಸವದಿಅದ್ಯಕ್ಷ ವಿಶ್ವೇಶ | ತೀರ್ಥರನುಗ್ರಹಿಸೇ 2 ಅನಂತೇಶ ಸನ್ನಿಧಿಲಿ | ಅನುಮಾನ ತೀರ್ಥರಿಂದಾನಂತ ಸತ್ ಜ್ಞಾನ | ರಶ್ಮಿ ಸೂಸುತಲೀ |ಜ್ಞಾನ ಕಾರ್ಯವು ಗುರು | ಗೋವಿಂದ ವಿಠಲನಪ್ರೀಣನಕೆ ಜರುಗಿಹುದ | ನೋಡವನೆ ಧನ್ಯ 3
--------------
ಗುರುಗೋವಿಂದವಿಠಲರು
ಕಾಣದ ವಸ್ತುವು ಕಾಣುವುದು ಕೇಳದದನಿಯು ಕೇಳುವುದು ಇಂದಿನ ಕಾರ್ಯವು ನಾಳಿನ ಸಂಗತಿ ತಿಳಿಯುವುದು ಚಿರವಹುದು ಪ [ಜೀವ]ಹೇಗಿದ್ದರೆ ಹೀಗಾಗುವುದು ನಾ ಮಾಡುವ ಕೈ ವಶವಹುದು ಮನಸಿನ ಕಶ್ಮಲ ಕಳೆದಿರಬೇಕು 1 ಆಶೆಯ ಪಾಶವು ಸುಟ್ಟಿರಬೇಕು ಸೋದರ ಭಾವವು ನೆಟ್ಟಿರಬೇಕು ನೀ ಗತಿಯೆಂದರೆ ಸಾಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲ ಹರಿ ವಿಠಲ ನೀ ಪಾಲಿಸಿವಳಾ ಪ ಪಾಪೌಘಗಳ ಕಳೆದು ಸುಪವಿತ್ರಳನೆ ಮಾಡಿಕೈ ಪಿಡಿದು ಪೊರೆಯಿವಳ | ಗೋಪಾಲ ಬಾಲ ಅ.ಪ. ನಿನ್ನ ಸೇವಿಸೆ ದಾಸ | ಘನ್ನ ದೀಕ್ಷೆಯ ಮನದಿಕನ್ಯೆ ಬಹು ಭಕ್ತಿಯಲಿ | ಬಿನ್ನವಿಸಿ ಇಹಳೊಮನ್ಯು ಸೂಕ್ತೋದಿತನೆ | ಚೆನ್ನ ತೈಜಸನಾಗಿಇನ್ನು ಪೇಳ್ದಂಕಿತವ | ಕನ್ಯೆ ಗಿತ್ತಿಹನೋ 1 ಪತಿಸೇವೆ ದೊರಕಿಸುತ | ಪತಿವ್ರತೆಯಳೆಂದೆನಿಸಿಅತುಳ ವೈಭವ ತೋರಿ | ಹಿತದಿಂದ ಪೊರೆಯೋವ್ರತತಿ ಜಾಸನ ಪಿತನೆ | ಗತಿಗೋತ್ರ ನೀನೆನಿಸಿಸುತೆಸಮಳ ಪೊರೆವುದಕೆ | ಮತಿ ಮಾಡೊ ಹರಿಯೇ 2 ತಾರತಮ್ಯ ಜ್ಞಾನ ಮೂರೆರಡು ಭೇದಗಳಸಾರತತ್ವಗಳುರುಹಿ | ಸಾರತಮ ನಿನ್ನಾಪಾರುಗಾಣದ ಮಹಿಮೆ | ಚಾರುಕೀರ್ತಿಸುವಂತೆತೋರೊ ಸನ್ಮಾರ್ಗವನು | ವಾರಿನಿಧಿ ಶಯ್ಯಾ 3 ಹರಿಗುರೂ ಸದ್ಭಕ್ತಿ | ಹಿರಿಯರಲಿ ಆಸಕ್ತಿಸರ್ವ ಕಾರ್ಯವು ಹರಿಯ ವರಸೇವೆಯೆಂಬಾವರಮತಿಯ ಕರುಣಿಸುತ | ಹರಿಯು ತಾನಿತ್ತುದನಹರುಷದಲಿ ಉಂಬಂಥ | ಅರಿವು ಕೊಡು ಸತತ 4 ಭಾವಜಾರಿಯ ತಾತ | ಪಾವಮಾನಿಯ ಪ್ರೀತಕೇವಲಾನಂದಮಯ | ಜೀವ ಪರತಂತ್ರಾಈ ವಿಧವು ಇರಲಾಗಿ | ನೀವೊಲಿಯಲಿನ್ಯಾರುಕಾವರನು ಕಾಣೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಂದೆ ವಿಜಯರಾಯ ವ್ಯಾಳಿಗೆಬಂದ್ಯೊ ವಿಜಯರಾಯ ||ಹಿಂದೇಸು ಜನ್ಮವು ಮುಂದೇಸು ಜನ್ಮವುಒಂದು ತಿಳಿಯದೆಂದಿಗು ಯೆನ್ನಯ ಪ ಸೂರ್ಯನ ಸುತನಂತೆ ಅಲ್ಲಿ ಮಹಶೌರ್ಯ ದೂತನಂತೆ ||ಕಾರ್ಯಾಕಾರ್ಯವು ತಿಳಿಯದೆ ನಿನ ಪರಿಚಾರ್ಯನ ಯೆಳೆತಿರೆ ಭಾರ್ಯಳು ಮೊರೆಯಿಡೆ 1 ಮೋದ ತೀರ್ಥರೆಂ-ದೊದರಿದಳೊದರಿದಳ್ ವಿಜಯರಾಯರೆಂದು 2 ಕರಗಳನೇ ಕಟ್ಟಿ ಯೆಳೆಯುತಿರೆದೊರೆಗಳನೇ ಮುಟ್ಟಿ ||ಸಿರಿ ಮೋಹನ ವಿಠಲನ ಪದವ ತೋರಿಧರಿಗೆ ತಂದುಬಿಟ್ಟೆ ಕರುಣಾಳುವೆ ಯೆನ್ನ 3
--------------
ಮೋಹನದಾಸರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ಧೇನಿಸೊ ಶ್ರೀಹರಿಯ ಮಹಿಮೆಯ ಪ ಧೇನಿಸು ಲಯದ ವಿಸ್ತಾರ ಚತುರಾ ನಾನಕಲ್ಪದ ವಿವರಾ ||ಆಹಾ|| ಧೇನಿಸು ಶತಾನಂದಗೆ ಶತ- ಮಾನಕಾಲದಲ್ಲಿ ಇದ್ದು ನಡೆಸುವ ಹರಿಕಾರ್ಯ ಅ.ಪ ಮೊದಲರ್ಧ ಶತಮಾನ ಸೂಕ್ಷ್ಮ ಸೃಷ್ಟಿ ಪದುಮನ ತೋರಿದ ಮಹಾಮಹಿಮ ಆಗ ಅದೆ ಪ್ರಥಮ ಪರಾರ್ಧವು ನೇಮ ಮೇಲೆ ದ್ವಿತೀಯ ಭಾಗಕ್ಕೆಲ್ಲ ಬ್ರಹ್ಮ ||ಆಹಾ|| ಅದರೊಳು ತ್ರಿದಶ ಏಳರ್ಧ ವರ್ಷವು ಪದುಮಜನಿಂದ ರಾಜ್ಯವನಾಳಿಸಿದ ಪರಿಯನು 1 ದ್ವಾದಶಾರ್ಧವರುಷ ತಾ ಉಳಿಯೆ ಆಗ ತೋರ್ದ ಅದುಭೂತವಾದ ಮಹಾಪ್ರಳಯ ಸೂಚ- ನಾದಿ ಕಾರ್ಯವು ತಾ ಮೆರೆಯೆ ಶತ ಅಬ್ದ ಅನಾವೃಷ್ಟಿ ತೋರಿರೆ ಆಹಾ|| ಉದಧಿ ಶೋಷಣೆಯಿಂದ ಸರ್ವಸಂಹಾರವು 2 ಮೇರುಪರ್ವತ ಸ್ಥಳದಲ್ಲಿ ಇದ್ದ ವಿ- ಧಿರುದ್ರಾದಿಗಳೆಲ್ಲರಲ್ಲಿ ಮಹ ತೋರುತ್ತ ಕುಣಿದಾಡುತ್ತಲಿ ||ಆಹಾ|| ಸುರರವಯವಗಳ ತಾನಲಂಕರಿಸಿದನ 3 ನರಹರಿ ನರ್ತನ ಮಾಡಿ ತನ್ನ ಕರದಿ ತ್ರಿಶೂಲವನ್ನು ನೀಡಿ ದಿ- ಕ್ಕರಿಗಳ ಪೋಣಿಸಿ ಆಡಿ ಸರ್ವರಉ- ದರದೋಳಿಟ್ಟು ಕೂಡಿ ||ಆಹಾ|| ಗ್ರಾಸ ತ್ವರಿತದಿ ತಾ ಮಾಡಿ ಕ್ರೀಡಿಸುತಿರ್ಪನ್ನ 4 ವಾಯುದೇವರ ಗದಾಪ್ರಹಾರದಿಂದ ಭಯ ಹುಂಕಾರದಿಂದ ಜೀವರ ಲಿಂಗ ಆಯತ ಸ್ಥಳದಲ್ಲಿಟ್ಟವರಾ ||ಆಹಾ|| ಲಯಕಾಲದಿ ಸಂಕರುಷಣ ಮುಖದಿಂದ ಲಯವಾಗಲು ಅಗ್ನಿ ಪೊರಟು ದಹಿಪುದಾ 5 ಕರಿಯ ಸೊಂಡಿಲಿನಂತೆ ಮಳೆಯ ಧಾರೆ ನಿರುತ ಶತವರ್ಷಗರೆಯೆ ನೋಡೆ ಸರ್ವತ್ರ ಜಲಮಯವಾಗೆ ಆಗ ನೀರಜಾಂಡವೆಲ್ಲ ಕರಗೆ ||ಆಹಾ|| ಗರುಡ ಶೇಷ ಮಾರ್ಗವರಿತು ಬರುತಿರ್ಪ ಸರ್ವಜೀವರ ತನ್ನ ಉದರದೊಳಿಟ್ಟನ್ನಾ 6 ಅರಿಯೋ ನೀ ಶೇಷಮಾರ್ಗವನ್ನೂ ಇಲ್ಲಿ ಸುರರು ಕುಬೇರನೊಳಿನ್ನು ಆತ ವರುಣನಲ್ಲಿ ಲಯವನ್ನೂ ಚಂದ್ರ ಹರಿಪಾರ್ಷಧರನಿರುದ್ಧನನ್ನು ಆಹಾ ಅನಿರುದ್ಧ ಸನತ್ಕುಮಾರನ್ನ ತಾವು ಪೊಂದಿ ಮಾರ ವಾರುಣಿಯು ಹರಿಮಡದಿಯರಲ್ಲಿ ಲಯವಾ 7 ಸುರರು ಮೊದಲು ಅಗ್ನಿಯೊಳ್ ಲಯವನ್ನೈದುವರು ಆ ಅಗ್ನಿ ತಾ ಸೂರ್ಯನ್ನ ಸೇರುವನು ಸೂರ್ಯ ತಾ ಗುರುವನ್ನ ಸೇರುವನು ||ಆಹಾ|| ಆಗಲೇ ಸರ್ವಮನುಜರು ಪಿತೃಗಳು ನಿರುಋತಿಯೊಳು ಪೊಕ್ಕು ತಾ ಯಮನಲ್ಲಿ ಸೇರುವಾ 8 ಯಮ ಪ್ರಿಯವ್ರತರಾಯರೆಲ್ಲ ಲಯ ತಮ್ಮ ಸ್ವಾಯಂಭು ಮನುವಿನಲ್ಲಿ ಮತ್ತೆ ಮ- ಹಿಮ ಭೃಗುವು ದಕ್ಷನಲ್ಲಿ ಲಯವು ಆ ಮಹಾದಕ್ಷ ಸ್ವಾಯಂಭು ಇಂದ್ರನಲ್ಲೀ-ಆಹಾ ಅಮರಪತಿಯು ತಾ ಸೌಪರಣಿಯನು ಪೊಂದಿ ಈ ಮಾರ್ಗದಿ ತಾನು ಗರುಡನ್ನ ಸೇರುವುದು 9 ಶೇಷಗರುಡರೊಡಗೂಡಿ ಆಗ ಸರಸ್ವತಿಯನ್ನೆ ಪೊಂದುವರು ಮತ್ತೆ ಆಸುವಿರಂಚಿ ವಾಯುಗಳು ತಾವು ಸರಸ್ವತಿಯನ್ನೆ ಪೊಂದುವರು ಆಹಾ ಈ ಸೂಕ್ಷ್ಮಲಯವನ್ನೆ ಕ್ರಮವರಿತು ನೀನೀಗ 10 ಸೂತ್ರನಾಮಕ ವಾಯುದೇವ ರುದ್ರ ಉಮೆಪ್ರದ್ಯುಮ್ನದ್ವಾರ ತ್ರಾತ ಸಂಕುರುಷಣನಾ ದಯದಿ ಜಗ- ನ್ಮಾತೆ ಲಕ್ಷ್ಮಿಯೊಳು ಸೇರುವರು ||ಆಹಾ|| ಚತುರಾಸ್ಯ ಜೀವರ ತನ್ನುದರದೊಳಿಟ್ಟು ಅತಿಮೋದದಿಂದ ವಿರಾಟನ್ನೈದುವುದು11 ವಿರಾಟ್ ಬ್ರಹ್ಮನು ತಾನೆಲ್ಲಾ ತನ್ನ ಆ ವರಣದಲ್ಲಿ ಇಪ್ಪಂಥ ತನ್ನ ಧರೆಯಲ್ಲಿ ಲೀನವಾಗುವ ಆಗ ಪರಿಪರಿಯಿಂದ ತನ್ಮಾತÀ್ರ ಆಹಾ ಅರಿತು ಶಬ್ದಸ್ಪರ್ಶರೂಪರಸಗಂಧ ಪರಿಪರಿಯಿಂದಲಿ ಲಯವನ್ನೈದುವುದಾ12 ಗಂಧದ್ವಾರ ಲಯತನ್ನ ಬಿಲದಿ ಜಾತ ವೇದದಲ್ಲಿ ರಸ ಲಯವು ರೂಪ ದ್ವಾರ ಲಯ ಆಕಾಶದೊಳು-ಆಹಾ- ಶಬ್ದದ್ವಾರ ಲಯತಮ ಅಹಂಕಾರಾದಿ ತದಾಂತರ್ಗತÀ ಭಗವದ್ರೂಪದಲ್ಲ್ಯೆಕ್ಯವಾ 13 ಅಹಂಕಾರತ್ರಯದಲಿ ಬಂದಾ ತತ್ತ ್ವ ದೇಹಸೂರರೆಲ್ಲರ ಲಯವು ಇಹ ತತ್ವಾಂತರ್ಗತ ಭಗವದ್ರೂಪಕೆ ||ಆಗ|| ಅಲ್ಲಲ್ಲಿ ತನ್ನೊಳೈಕ್ಯವೂ-ಆಹಾ ಅಹಂಕಾರತ್ರಯ ಮಹತ್ತತ್ವದಲ್ಲಿ ಲಯ ಮಹತ್ತತ್ತ ್ವವು ಮೂಲಪ್ರಕೃತಿಯಲ್ಲಿ ಲಯವು 14 ವಾಸುದೇವಾದಿ ಚತುರ ರೂಪ ಮತ್ಸ್ಯ ಶ್ರೀಶನನಂತಾದಿರೂಪ ಮತ್ತು ಶ್ರೀಶನಷ್ಟೋತ್ತರ ರೂಪ ||ಆಹಾ|| ತಾ ಸಕಲರೂಪಗಳು ಮೂಲರೂಪದೊಳೈಕ್ಯ ಶಾಶ್ವತನಾದ ಶ್ರೀ ಸಚ್ಚಿದಾನಂದನ್ನಾ 15 ಗುಣಮಾನಿ ಶ್ರೀ ಭೂ ದುರ್ಗಾ ಅಂ- ಭ್ರಣಿ ರೂಪವನ್ನೆ ತಾ ಧರಿಸೀ ಸಂ- ಪೂರ್ಣನ್ನ ಸಾಮೀಪ್ಯ ಸೇರಿ ಪೂರ್ಣ ಕಾಮನ್ನ ಎಡಬಿಡದೆ ನೋಡೀ ||ಆಹಾ|| ಕ್ಷಣ ಬಿಡದೊಡೆಯನ ಅಗಣಿತಗುಣಗಳ ಕಡೆಗಾಣದೆ ನೋಳ್ಪ ನಿತ್ಯಮುಕ್ತಳ ಸಹಿತಾ16 ಏಕೋ ನಾರಾಯಣ ಆಸೀತ ಅ- ನೇಕ ಜನರ ಸಲಹಲಿನ್ನು ತಾನೆ ಸಾಕಾರದಲಿ ನಿಂದಿಹನು ಇಂತು ವೇಂಕಟಾಚಲದಿ ಇನ್ನು ಮುನ್ನು ||ಆಹಾ|| ಏಕಮನಸಿನಿಂದ ಭಜಿಪ ಭಕ್ತರನ ತಾ ನಿ- ನಿತ್ಯ 17
--------------
ಉರಗಾದ್ರಿವಾಸವಿಠಲದಾಸರು
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು