ಒಟ್ಟು 7 ಕಡೆಗಳಲ್ಲಿ , 7 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

2. ಶ್ರೀ ವೆಂಕಟೇಶ ಸ್ತೋತ್ರ 6 ಶರಣಾಗತರ ಕಲ್ಪತರುವೆ ವೆಂಕಟ ಧರಾ ಧರನಾಥ ನಿನ್ನ ಚರಣಾಬ್ಜ | ಚರಣಾಬ್ಜಯುಗಳ ಸಂ ದರುಶನವ ಈಯೊ ಎಂದೆಂದು 1 7 ಸ್ವಾಮಿ ತೀರ್ಥ ನಿವಾಸ ಸು ಭಯಹಾರಿ ಸುರರ ಸಾರ್ವ ಭೌಮ ನೀ ಸಲಹೆಮ್ಮೆ 2 8ವೆಂಕಟಾಚಲನಿಲಯ ಪಂಕಜೋದ್ಭವನಯ್ಯ ಕಿಂಕರನೆನಿಸೊ ಶುಭಕಾಯ 3 9 ಸತ್ಯಸಂಕಲ್ಪ ಜಗದತ್ಯಂತ ಭಿನ್ನಸ ರ್ವೋತ್ತಮ ಪುರಾಣ ಪುರುಷೇಶ | ಪುರುಷೇಶ ಸತತತ್ವ ದ್ಭೈತ್ಯನ್ನ ಕಾಯೊ ಕರುಣಾಳೊ 4 10 ದೇವಶರ್ಮನ ತುತಿಗೆ ನೀನೊಲಿದು ಪಾಲಿಸಿದೆ ದೇವಕೀಕಂದ ದಯದಿಂದ | ದಯದಿಂದ ಒಲಿದೆನ್ನ ತಾವಕರೊಳಿಟ್ಟು ಸಲಹಯ್ಯ 5 11 ಕೃತಿಪತಿಯೆ ನಿನ್ನ ಸಂಸ್ಮøತಿಯೊಂದಿರಲಿ ಜನ್ಮ ಮೃತಿ ನರಕ ಭಯವು ಬರಲಂಜೆ | ಬರಲಂಜೆ ಎನಗೆಕೃಸಂ ತತ ನಿನ್ನ ಸ್ಮರಣೆ ಕರುಣೀಸೊ 6 12ಶುಚಿಸದ್ಮನೆ ಮನೋವಚನಾತ್ಮಕೃತ ಕರ್ಮ ನಿಚಯ ನಿನಗೀವೆ ಸುಚರಿತ್ರ | ಸುಚರಿತ್ರ ಸುಗುಣಗಳ ರಚನೆ ಸುಖವೀಯೊ ರುಚಿರಾಗ 7 13ಹೃದಯದಲಿ ತವರೂಪ ವದನದಲಿ ತವನಾಮ ಉದರದಲಿ ನೈವೇದ್ಯ ಶಿರದಲ್ಲಿ | ಶಿರದಲ್ಲಿ ನಿರ್ಮಾಲ್ಯ ಪದಜಲಗಳಿರಲು ಭಯವುಂಟೆ 8 14ಸತತ ಸ್ಮರಿಸುತ ನಿನ್ನ ನುತಿಸಿ ಬೇಡಿಕೊಳುವೆ ಹಿತದಿಂದ ನಿನ್ನ ವಿಜ್ಞಾನ | ವಿಜ್ಞಾನ ನಿಜ ಭಾಗ ವತರ ಸಂಗವನ್ನೇ ಕರುಣೀಸೊ 9 15ಪ್ರಕೃತಿ ಗುಣಗಳ ಕಾರ್ಯ ಸುಖ ದುಃಖ ಮೂಲ ಜಡ ಪತಿ ನಿನ್ನ ಭಕುತ ನಾನಯ್ಯ ಎಂದೆಂದು 10 16ಪುಣ್ಯಪಾಪಾದಿಗಳು ನಿನ್ನಾಧೀನದೊಳಿರಲು ಎನ್ನದೆಂದರುಹಿ ದಣಿಸುವಿ | ದಣಿಸುವುದು ಧರ್ಮವೇ ನಿನ್ನರಿವ ಜ್ಞಾನ ಕರುಣೀಸೊ 11 17ಝಷಕೇತು ಜನಕ ದುರ್ವಿಷಯಕೊಳಗಾಗಿ ಸಾ ಹಸ ಪಡುವ ಚಿತ್ತ ಪ್ರತಿದಿನ | ಪ್ರತಿದಿನಗಳಲ್ಲಿ ನಿನ್ನ ವಶಮಾಡಿಕೊಳ್ಳೊ ವನಜಾಕ್ಷ 12 18ಇನಿತಿದ್ದ ಬಳಿಕ ಯೋಚನೆ ಯಾಕೆ ಗರುಡವಾ ಹನನೆ ಮಹಲಕ್ಷ್ಮಿ ನರಸಿಂಹ/ನರಸಿಂಹ ಬಿನ್ನೈಪೆ ಘನತೆ ನಿನಗಲ್ಲ ಕರುಣಾಳು 13 19ಸುಲಭರಿನ್ನುಂಟೆ ನಿನ್ನುಳಿದು ಲೋಕತ್ರಯದಿ ಬಲವಂತರುಂಟೆ ಸುರರೊಳು/ಸುರರೊಳು ನೀನು ಬೆಂ ಬಲವಾಗಿ ಇರಲು ಭಯವುಂಟೆ 14 20ಹಯವದನ ಸೃಷ್ಟಿ ಸ್ಥಿತಿಲಯ ಕಾರಣನುನೀನೆ ದಯವಾಗಲೆಮಗೆ ದುರಿತೌಘ / ದುರಿತೌಘರ್ಕಳು ಬಟ್ಟ ಬಯಲಾಗುತಿಹವೊ ಸುಕೃತಿಯಿಂದ 15 21ಕಲುಷವರ್ಜಿತನೆ ಮಂಗಳ ಚರಿತ ಭಕ್ತವ ತ್ಸಲ ಭಾಗ್ಯವ ಪುಷ ಬಹುರೂಪಿ /ಬಹುರೂಪಿ ಎನಗೆಚಂ ಚಲ ಬಿಡಿಸಿ ನೀ ಕರುಣೀಸೊ 16 22ಫಾಲಾಕ್ಷಪ್ರಿಯ ನಿನ್ನ ಲೀಲೆಗಳ ಮರೆಯದಲೆ ಕಾಲಕಾಲದಲಿ ಸ್ಮರಿಸುವ/ ಸ್ಮರಿಸಿ ಹಿಗ್ಗುವ ಭಾಗ್ಯ ಪಾಲಿಸೊ ಎನಗೆ ಪರಮಾತ್ಮ 17 23ಚತುರವಿಧ ಪುರುಷಾರ್ಥ ಚತುರಾತ್ಮ ನೀನಿರಲು ಇತರ ಪುರುಷಾರ್ಥ ನಾನೊಲ್ಲೆ | ನಾನೊಲ್ಲೆ ತ್ವತ್ಪಾದ ರತಿ ಭಾಗ್ಯ ನೀನೆ ಕರುಣೀಸೊ 18 24 ಜಯ ಮತ್ಸ್ಯ ಕೂರ್ಮ ವರಹ ನರಸಿಂಹ ಭೃಗುರಾಮರಘುರಾಮ ಜಯ ಬೌದ್ಧ ಕಲಿಹರ್ತಾ 19 25 ಜಯ ವಿಶ್ವತೈಜಸನೆ ಜಯ ಪ್ರಾಜ್ಞ ತುರ್ಯಾತ್ಮ ಜಯ ಅಂತರಾತ್ಮ ಪರಮಾತ್ಮ | ಪರಮಾತ್ಮ ಜ್ಞಾನಾತ್ಮ ಅನಿರುದ್ಧ ಪ್ರದ್ಯುಮ್ನ 20 26 ಜಯ ಸಂಕರುಷಣನೆ ಜಯ ವಾಸುದೇವನೆಜಯ ಜಯತು ಲಕ್ಷ್ಮೀನಾರಾಯಣಾ |ನಾರಾಯಣಾನಂತ ಜಯತು ಗೋವಿಂದಾಚ್ಯುತ ಶ್ರೀ ಕೃಷ್ಣ 21 27ಜಯ ಪೂರ್ಣ ಜ್ಞಾವಾತ್ಮ ಜಯ ಪೂರ್ಣೈಶ್ವರ್ಯ ಜಯ ಪ್ರಭಾ ಪೂರ್ಣ ತೇಜಾತ್ಮ | ತೇಜಾತ್ಮ ನಂದಾತ್ಮ ಜಯತು ಶಕ್ತ್ಯಾತ್ಮ ಕೃದ್ಧೋಲ್ಕ 22 28ಜಯ ಜಯತು ಮಹೋಲ್ಕ ಜಯತು ವೀರೋಲ್ಕ ಜಯ ಜಯತು ದ್ಯುಲ್ಕ ಸಹಸ್ರೊಲ್ಕ | ಸಹಸ್ರೊಲ್ಕ ಜಯ ಜಯ ಜಯತು ಜಗನ್ನಾಥ ವಿಠಲಾರ್ಯ 23 29 ಶ್ರೀನಿವಾಸನ ಪೋಲ್ವ ದೀನವತ್ಸಲರುಂಟೆ ದಾನಿಗಳುಂಟೆ ಜಗದೊಳು |ಜಗದೊಳು ನೀನೆ ಗತಿಯೆಂದನರರಿಗೆ ಆನಂದವೀವೆ ಅನುಗಾಲ 24 30ಒಪ್ಪಿಡಿ ಅವಲಕ್ಕಿಗೊಪ್ಪಿಕೊಂಡು ಮುಕುಂದ ವಿಪ್ರನಿಗೆ ಕೊಟ್ಟ ಸೌಭಾಗ್ಯ | ಸೌಭಾಗ್ಯ ಕೊಟ್ಟ ನ ಮ್ಮಪ್ಪಗಿಂತಧಿಕ ದೊರೆಯುಂಟೆ 25 31ಏನು ಕರುಣಾ ನಿಧಿಯೊ ಶ್ರೀನಿತಂಬಿನಿರಮಣ ತಾನುಮ್ಮನಗಲಿ ಸೈರಿಸ | ಸೈರಿಸದ ಕರುಣಿಯ ನಾನೆಂತು ತುತಿಸಿ ಹಿಗ್ಗಲಿ 26 32ಶ್ರೀನಿಧೆ ನಿನ್ನವರ ನಾನಾಪರಾಧಗಳ ನೀನೆಣಿಸದವರ ಸಲಹುವಿ | ಸಲಹುವಿ ಸರ್ವಜ್ಞ ಏನೆಂಬೆ ನಿನ್ನ ಕರುಣಕ್ಕೆ 27 33ಎನ್ನ ಪೋಲುವ ಭಕ್ತರನ್ನಂತ ನಿನಗಿಹರು ನಿನ್ನಂಥ ಸ್ವಾಮಿ ಎನಗಿಲ್ಲ | ಎನಗಿಲ್ಲವದರಿಂದ ಬಿನ್ನೈಪೆನಿನ್ನು ಸಲಹೆಂದು 28 34ಅಚ್ಯುತನೆ ನಿನ್ನಂಥ ಹುಚ್ಚು ದೊರೆಯನು ಕಾಣೆ ಕಚ್ಚಿ ಬಯದೊಡ್ಡೆ ಭಕುತರ | ಭಕುತರಪರಾಧಗಳ ತುಚ್ಛಗೈದವರ ಸಲಹೀದೆ 29 35ಎನ್ನ ಬಂಧುಗಳೆಲ್ಲ ನಿನ್ನ ದಾಸರು ಸ್ವಾಮಿ ಮನ್ನಿಸಬೇಕು ಮಹರಾಯ | ಮಹರಾಯ ನೀನಲ್ಲ ದನ್ಯರು ಸಾಕಲರಿಯರು 30 36 ತಂದೆ ತಾಯಿಯು ಭ್ರಾತ ಸಖ ಗುರು ಪುತ್ರ ಎಂದೆಂದು ನೀನೆ ಗತಿ ಗೋತ್ರ | ಗತಿಗೋತ್ರ ಇಹಪರಕೆ ಇಂದಿರಾರಾಧ್ಯ ಸಲಹೆಮ್ಮ 31 37 ಪತಿತ ನಾನಾದರೂ ಪತಿತ ಪಾವನ ನೀನು ರತಿನಾಥ ನಗಪಾಣಿ | ನಗಪಾಣಿ ನೀನಿರಲು ಇತರ ಚಿಂತ್ಯಾಕೊ ಎನಗಿನ್ನು 32 38 ನಡೆ ನುಡಿಗಳಪರಾಧ ಒಡೆಯ ನೀನೆಣಿಸಿದರೆ ಬಡವ ನಾನೆಂತು ಬದುಕಲಿ | ಬದುಕಲಿ ಕರುಣಿಯೆ ಕಡೆ ಬೀಳ್ವುದೆಂತೊ ಭವದಿಂದ 33 39ಏಸೇಸು ಜನ್ಮದಲಿ ದಾಸ ನಾ ನಿನಗಯ್ಯ ಈಶ ನೀನೆಂಬೊ ನುಡಿಸಿದ್ಧ | ನುಡಿಸಿದವಾಗಿರಲು ದಾಸೀನ ಮಾಡೋದುಚಿತಲ್ಲ 34 40ಆವ ಯೋನಿಯಲಿರಿಸು ಆವ ಲೋಕದಲಿರಿಸು ಆವಾಗ್ಯೆ ನಿನ್ನ ನೆನೆವಂತೆ | ನೆನೆವಂತೆ ಕರುಣಿಸೊ ದೇವಕೀಕಂದ ದಯದಿಂದ 35 41ಶಿಷ್ಟನೆಂದೆನಿಸೆನ್ನ ಭ್ರಷ್ಟನೆಂದೆನಿಸು ಸ ಜನರಿಂದ ನುಡಿಸಿದ್ದು
--------------
ಜಗನ್ನಾಥದಾಸರು
ಎಲ್ಲರ ಮನೆ ದೋಸೆ ತೂತು ಪ ಚಿಲ್ಲರೆಯಲ್ಲವಿದೀ ಮಾತು ಅ.ಪ ಗಾಜಿನ ಮನೆಯಲಿ ವಾಸಿಸುವ ಪರ ಗೇಹಕೆ ಕಲ್ಲುಗಳೆಸೆಯುಬಹುದೇ ಮೂರ್ಜಗನಿಂದಕ ತನ್ನಯ ನಾಶಕೆ ಬೀಜ ಬಿತ್ತಿ ಫಲ ಭೋಜನ ಮಾಡುವ 1 ನೀರ ಕ್ಷೀರ ನ್ಯಾಯವ ಕೇಳದ ಜನ ರ್ಯಾರಿರುವರು ಈ ಧರೆಯೊಳಗೆ ಬಾರಿಬಾರಿಗದ ಮನಕೆ ತಾರದೆಲೆ ದೂರಿನ ನುಡಿಯಲಿ ರುಚಿಯು ಉಚಿತವೆ 2 ಗೂಳಿಯು ಹಳ್ಳಕೆ ಬಿದ್ದ ಕಾಲದಲಿ ಆಳಗೊಂದು ಕಲ್ಲೆಸೆಯುವರು ಬಾಳಿಬಾಳಿಸುವ ನರನ ಪ್ರಸನ್ನನು ಕಾಲಕಾಲದಲಿ ಸಲಹದೇ ಇರುವನೆ 3
--------------
ವಿದ್ಯಾಪ್ರಸನ್ನತೀರ್ಥರು
ಕಾಲಕಾಲದಲಿ ಕೇಶವನೆನ್ನಿರೊ ಬಾಲ ಮುಕುಂದ ಮಾಧವನೆನ್ನಿರೊ ಧ್ರುವ ಉದಯಕಾಲದಲಿ ಅನಂತಮಹಿಮನೆನ್ನಿ ಮಧ್ಯಾಹ್ನದಲಿ ಪದ್ಮನಾ¨sನೆನ್ನಿ ಸಂಧ್ಯಾಸಾಯಂಕಾಲದಲಿ ಶ್ರೀಧರನೆನ್ನಿ ಸದಾ ಕಾಲದಲಿ ಶ್ರೀ ಹರಿಯೆನ್ನಿರೊ 1 ಏಳುತ ಮಚ್ಛಾವತಾರ ಅಚ್ಯುತನೆನ್ನಿ ಮಲಗುತ ಶೇಷಶಯನನೆನ್ನಿರೊ ಹೇಳುತ ವಿಷ್ಣುವರಾಹವತಾರನೆನ್ನಿ ಕೇಳುತ ಕೃಷ್ಣಾವತಾರನೆನ್ನಿ 2 ನಡೆಯುತ ಸುಗುಣ ನಿರ್ಗುಣ ಸರ್ವೋತ್ತಮನೆನ್ನಿ ನುಡಿಯುತ ನಾರಯಣನೆನ್ನಿರೊ ಮಾಡುತ ಕೃಷ್ಣನಿರ್ಮಿತ ದಾಮೋದರನೆನ್ನಿ ಕೂಡುತ ಕೂರ್ಮಾವತಾರನೆನ್ನಿ3 ಆಡುತ ಗರುಡವಾಹನ ತ್ರಿವಿಕ್ರಮನೆನ್ನಿ ಬೇಡುತ ಸ್ವಾಮಿ ವಾಮನನೆನ್ನಿರೊ ನೋಡುತ ವಾರಿಜನೇತ್ರ ಪ್ರಸಿದ್ದನೆನ್ನಿ ಪಾಡುತ ಪರಮಾತ್ಮನೆನ್ನಿರೊ 4 ಉದ್ಯೋಗದಲಿ ಸಹಕಾರನಿರುದ್ದನೆನ್ನಿ ಉದರ ಕಾಯದಲಿ ಉಪೇಂದ್ರನೆನ್ನಿ ಮೇದಿನೊಯೊಳು ಹರಿಮಧುಸೂದನನೆನ್ನಿ ಆದಿ ಅಂತಿಮ ಅಧೋಕ್ಷಜನೆನ್ನಿರೊ 5 ಹೃದಯಕಮಲದೊಳು ಹೃಷೀಕೇಶನು ಎನ್ನಿ ಶಬ್ದಜಿಹ್ವೆಲಿ ಜನಾರ್ಧನನೆನ್ನಿರೊ ಬುದ್ಧಿಯಲಿ ಸಿದ್ಧಬೌದ್ದಾವತಾರನೆನ್ನಿ ಅದಿಅನಾದಿ ಗೋವಿಂದನೆನ್ನಿ 6 ಅನುದಿನ ಮನದೊಳು ಘನಮಹಿಮನು ಎನ್ನಿ ತನುವಿನೊಳು ಪುರುಷೋತ್ತಮ ನಾನೆನ್ನಿ ಅನ್ನವುದಕ ಸೇವಿಸುವ ಹರಿಭೋಕ್ತನೆನ್ನಿ ಘನಭೂಷಣದಿ ಸಂಕರುಷಣನೆನ್ನಿ 7 ಸತಿಪತಿ ಸಂಯೋಗದಲಿ ಪ್ರದ್ಯುಮ್ನನೆನ್ನಿ ಪತಿತಪಾವನ ಪರಬ್ರಹ್ಮನೆನ್ನಿ ಭಕ್ತವತ್ಸಲ ನರಸಿಂಹಾವತಾರನೆನ್ನಿ ಮುಕ್ತಿದಾಯಕ ದೇವೋತ್ತಮನೆನ್ನಿರೊ 8 ಪಾವನಮೂರುತಿ ಪರಶುರಾಮನೆನ್ನಿ ಜೀವಸಂಜೀವ ಶ್ರೀ ರಾಮನೆನ್ನಿ ಭವಭಯನಾಶ ಕಲ್ಕ್ಯಾವತಾರನೆನ್ನಿ ಮಹಿಪತಿಗುರು ವಾಸುದೇವನೆನ್ನಿ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾಳಲಾರೆನಮ್ಮಾ ಬಾಲಕನಟ್ಟುಳಿ ಗೋಪೀಘನವಮ್ಮ ಕೇಳಿದುಳವಿಲ್ಲಾ ಕೇಳಿದುಳವಿಲ್ಲಾ ಕಾಲಕಾಲದಲಿಟ್ಟ ಬೆಣ್ಣೆ ಮೂಲವಿರಲಿಕ್ಕಿಲ್ಲಾ ಪ ಅತ್ತನೋಡ ಲಿಹಾ ಇತ್ತ ನೋಡಲಿಹಾ ಸುತ್ತಸೂಸುತ ಬಾಲೆಯರಾ ಚಿತ್ತಮೋಹಿಸುತಿಹಾ1 ಹಿಡಿದೇನೆಂದರೆ ಸಿಕ್ಕಾ ತುಡುಗ ಬಲುದಕ್ಕಾ ಹಿಡಿದು ನಿಲ್ಲಿಸುವರಿಲ್ಲಾ ಪೊಡವಿಲಿವನ ತುಕ್ಕಾ2 ಆರಿಗೇ ವಿಚಾರಾ ಸಾರಬೇಕು ದೂರಾ ಸೂರೆಹೋಗುತಿದೆ ಸಂಸಾರಾ ಸುಖಸಾರ 3 ತಂದೆಮಹಿಪತಿ ನಂದನ ಸಾರಥಿ ಇಂದು ನಮ್ಮ ಕಾಡಿದರ ಮುಂದಾರುಗತಿ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಾರತೀ ರಮಣ ಸುರವಿನುತ ಚರಣ ಶಾರದಾ ಪುರ ಶರಣ ಪ ನೂರು ಯೋಜನಮಿರ್ದವಾರಿಧಿ ಲಂಘಿಸಿ ಬೇಗ ಧಾರುಣಿ ಸುತೆಯ ಕಂಡು ದೂರ ನಮಿಸಿ ಸಾರಿ ಮುದ್ರಿಕೆಯ ನಿತ್ತು ತೋರಿರಾಕ್ಷಸಗೆ ಭಯ ಶ್ರೀರಾಮಗೆ ಬಂದು ಕ್ಷೇಮ ವಾರುತಿಯ ಪೇಳಿದಂಥ 1 ಇಂದು ಕುಲದಲ್ಲಿ ಪಾಂಡುನಂದನನೆನಿಸಿ ಜರಾ ಸಂಧ ಮುಖರನು ಗದೆಯಿಂದವರಸಿ ಅಂದುರಣದಲ್ಲಿ ಕರುವೃಂದವ ಮಥಿಸಿ ಆ ನಂದ ಕಂದನೊಲಿಮೆಯ ಛಂದದಿ ಪಡೆದು ಗುರು 2 ಮೇದಿನಿ ಮೋದ ತೀರ್ಥರೆಂದೆನಿಸಿ ವಾದದಿಂದಲಿ ವಾದಿ ಮತ್ತ ವಾರಣ ಮೃಗಾಧಿಪರೆನಿಸಿ ಪಂಚ ಬೇಧ ಬೋಧಿಸುವ ಶಾಸ್ತ್ರ ಸಾದರದಿ ವಿರಚಿಸಿದ 3 ಕಾಲಕಾಲದಲಿ ದ್ವಿಜರಾಲಯದಿ ಬಂದು ನಿನ್ನ ಬಾಲವನಿತೆರ ಸಹ ಶೇವಿಸುವರು ಪಾಲಿಕಿ ಉತ್ಸವದಲ್ಲಿ ಶೇರುವದು ಪೌರಜನ ಪಾಲಿಸಬೇಕಯ್ಯ ಪಾಂಚಾಲಿರಮಣನೆ ನಮೊ 4 ಭವ ಕೂ ಪಾರ ನಾವಿಕನೆ ಎಂದು ಪ್ರಾರ್ಥಿಸುತಲಿ ಸೇರಿದ ಸಜ್ಜನರಘ ದೂರಮಾಡಿ ಪೊರೆವಂಥಕಾರ್ಪರ ನಿಲಯ ಸಿರಿನಾರಸಿಂಹ ನೊಲಿಸಿದ 5
--------------
ಕಾರ್ಪರ ನರಹರಿದಾಸರು
ಯಮದೂತರಿನ್ನೇನು ಮಾಡುವರು ಪೇಳೊರಮೆಯರಸ ರಘುನಾಥ ನಿನ್ನರಿಕೆಯುಳ್ಳವರಿಗೆ ಪ ಮಂಡಲದೊಳಗೊಬ್ಬ ಜಾರಸ್ತ್ರೀಯಳು ತನ್ನಗಂಡನರಿಕೆಯಿಂದ ವ್ಯಭಿಚಾರಗೈಯೆಮಂಡಲ ಪತಿಯು ಶೋಧಿಸಿ ಹಿಡಿದೆಳೆ ತಂದುಭಂಡು ಮಾಡಲು ಬೆದರುವಳೆ ಕೇಳೆಲೊ ಹರಿ1 ಕಳವಿನ ಒಡವೆಯ ಒಡೆಯಗೆ ಪಾಲೀವಕಳಬಂಟ ಕನ್ನವ ಕೊರೆಯುತಿರೆಕಳವು ಮಾಡಿದನೆಂದು ಹಿಡಿದೆಳೆತಂದರೆತಳವಾರನೇನು ಮಾಡುವನು ಕೇಳೆಲೊ ಹರಿ 2 ಮನವಚನದಲಿ ಮಾಡಿದ ಪುಣ್ಯ ಪಾಪಗಳನಿನಗರ್ಪಿಸುವೆ ಕಾಲಕಾಲದಲಿಘನ ಕೃಪಾಂಬುಧಿ ಕಾಗಿನೆಲೆಯಾದಿಕೇಶವಎನಗೆ ಆರೇನು ಮಾಡುವರು ಕೇಳೆಲೊ ಹರಿ 3
--------------
ಕನಕದಾಸ
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ