ಒಟ್ಟು 22 ಕಡೆಗಳಲ್ಲಿ , 10 ದಾಸರು , 22 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವರೇ ನಮ್ಮವರೂ ಇದು ಭಾಗ್ಯವುನಮಗ್ಹಗಲಿರಳೂ ಪ ಭವ ಸಮುದ್ರದಲಿ ಮುಳುಗಿಸಿ ಕಡೆಯಲಿ ಜವನಾಳ್ಗಳ ಕೈಗೊಪ್ಪಿಸಿ ಕೊಡುವ ಅ.ಪ ಧನಯೌವನ ಬಲವು | ದೇಹದ ಅನುಬಂಧಗಳಿರುವು ಮನೆಮಕ್ಕಳುವನಿತಾದಿಗಳೊಲಿವರೊ 1 ಕೇಳಿದ್ದಿಲ್ಲೆನಲೂ | ಇವನ ಹೀ- ಯಾಳಿಪರ್ ಸ್ವಜನಗಳೂ ಕಾಲಕಾಲದಿ ಬಾಡಿಗೆ ಎತ್ತಿನ ಪರಿ ಆಳಾಗಿದ್ದರೆ ಹಾ ಎಂದು ನಗುವ 2 ಇವರಾಸೆಯ ಮಾಡೀ | ನಾವುನ- ಮ್ಮವರನು ಹೋಗಾಡಿ ಕವಳಕೆ ಗತಿಯಿಲ್ಲದೆ ಪರಿಯಾಯಿತು ಕಡೆಹಾಯಿಸು ಗುರುರಾಮವಿಠ್ಠಲನೆ 3
--------------
ಗುರುರಾಮವಿಠಲ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ 1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ 2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಏಳಯ್ಯ ಸುಬ್ರಹ್ಮಣ್ಯ ಬೆಳಗಾಯಿ- ತೇಳಯ್ಯ ಸುಬ್ರಹ್ಮಣ್ಯ ಕೋಳಿ ಕೂಗುವದು ವನಜಾಳಿಸೌರಭ್ಯ ತಂ- ಗಾಳಿ ಬೀಸುವದು ಕರುಣಾಳು ತವಚರಣವ- ಕೀಲಾಲಜಾಪ್ತನೀಗ ಕಾಲಕಾಲದಿ ಭಕ್ತಜಾಲವನು ಜಯಗೊಳಿಸಿ ಪಾಲಿಸುವ ಪಾರ್ವತೀಬಾಲ ಭಾಸ್ಕರತೇಜ ಲೋಲಲೋಚನೆಯ ಸಹಿತ1 ಇಂದು ಸಂಕ್ರಮಣ ದಿನ ಬಂದಿಹರು ಭಕ್ತಜನ- ವೃಂದ ಕಾಣಿಕೆ ಕಪ್ಪ ತಂದು ನಿಂದಿಹರು ಬಲ- ಸಲಹೆಂದು ಸ್ತುತಿಸೆ ಕಂದರ್ಪಸಾಹಸ್ರ ಸೌಂದರ್ಯ ಮೂರ್ತಿಯನು ಚಂದದಿಂ ಕಾಣುವಾನಂದ ಮಾನಸರು ಗೋ- ಸ್ಕಂದ ಕರುಣಾಸಿಂಧುವೆ2 ಪೃಥ್ವಿಯೊಳಗುತ್ತಮ ಪವಿತ್ರ ಪಾವಂಜಾಖ್ಯ ಕ್ಷೇತ್ರಾಧಿವಾಸ ಲೋಕತ್ರಯ ವಿಭೂಷಣ ಪ- ಕಾರ್ತಿಕೇಯ ನಮೋಸ್ತುತೇ ಭೃತ್ಯವತ್ಸಲ ಭವಭಯಾಬ್ಧಿಕುಂಭಜ ಭಜಕ- ಪ್ರೋತ್ಸಾಹ ಪಾವನಚರಿತ್ರ ಸುತ್ರಾಮನುತ ಮೃತ್ಯುಂಜಯನೆ ಪುತ್ರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಕಮಲ ಭಜಿಸೋ ಮೈಲಾರ ಲಿಂಗನ ಪ ಪುರಹರ ಸ್ವರೂಪನೆ ಎಂದು ಧ್ಯಾನಿಸೋ ಪಾತಕ ತಿಮಿರ ಭಾಸ್ಕರನೆಂದು ನೀ ಸ್ಮರಿಸೋ ಶಿರಬಾಗಿ ನಮಿಸೋ ಅ.ಪ ತುರಗವಾಹನವೇರಿ ಬರುತಿಹನ ಧರೆಯೊಳಗೆ ಮೈಲಾಪುರ ಸುಮಂದಿರನೆಂದು ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದ ರ್ಚನೆಯ ಕೊಂಬುವನ ಶರಣರನ ಪೊರೆವನ 1 ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನು ಗಾಲಭಕುತರ ಮ್ಯಾಳವನು ಪಾಲಿಸಲು ಬಂದಿಹನ ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನ ಮಾಳಸಾಕಾಂತನ 2 ನಿಷ್ಠೆಯಿಂದಲಿ ಭಜಿಪ ಭಕುತರನ ರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನು ಕೊಳುತಿಹನ ಸಿರಿ ವಿಷ್ಣು ಭಕುತರ ಮನೆಗಳಲಿ ಪೂಜೆಯನು ಕೊಂಬುವನ ಇಷ್ಟ ಪ್ರದಾತನ3 ಸಂಚರಿಸುತಲಿ ದಿನಕರನು ಮಕರದಿ ಬರಲು ಸಂಕ್ರಮಣ ಉತ್ಸವದಿ ನೋಡಲು ನೆರೆದ ಬಹು ಜನ ರಿಂದ ಸೇವಿತನ ಗಿರಿಶಿಖರ ಗುಂಡಿನ ಮೇಲೆ ದೀಪೋತ್ಸವದಿ ರಾಜಿತನ ಮಹಿಮಾನ್ವಿತನ 4 ವಿನುತ ಶುಭಚರಣ ಸರೋಜ ಕಾರ್ಪರ ನಾರಸಿಂಹನ ಒಲಿಮೆ ಪಡೆ ದಿಹನಾ ರವಿವಾರ ವಾರದಿ ಮಾರ್ತಾಂಡದೇವನ5
--------------
ಕಾರ್ಪರ ನರಹರಿದಾಸರು
ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕಾಲಕಾಲದಿ ಕರುಣಿಗಳರಸನಾದ ರಾಮಾ ಎನಬಾರದೇ | ಜಗ | ಪಾಲಕ ನಿನಗಿಹಪರಗಳ ನೀವಾ ಪ ಪಂಚಾಗ್ನಿಯಲಿ ದೇಹ ಬಳಲಿಸುವದ್ಯಾತಕ | ರಾಮಾ ಎನಬಾರದೇ | ಪ್ರ | ಪಂಚ ತೊರೆದು ವನವಾಸ ಹಿಡವುದ್ಯಾಕ | ರಾಮಾ ಎನಬಾರದೇ || ಒಂಟಿ ಕಾಲಿನ ಯೋಗಧಾರಣವ್ಯಾಕ | ರಾಮಾ ಎನಬಾರದೇ | ಪುಣ್ಯ | ಸಂಚಿಸೆ ಕೃಚ್ಛೆ ಚಾಂದ್ರಾಯಣಿ ವೃತವ್ಯಾಕ | ರಾಮಾ ಎನಬಾರದೇ 1 ರಾಮಾ ಎನಬಾರದೇ | ಅ| ಖಂಡದಿ ಛಟಪಟ ಕರ್ತಬೋಧಗಳ್ಯಾಕ ರಾಮಾ ಎನಬಾರದೇ || ಮಂಡೆ ಬೋಳಿಸಿ ಭಿಕ್ಷಾನ್ನ ಬಯಸುವದ್ಯಾಕ | ರಾಮಾ ಎನಬಾರದೇ | ಜಗ | ಭಂಡರಂದದಿ ಬತ್ತಲೆ ತಿರುಗುವುದ್ಯಾಕ | ರಾಮಾ ಎನಬಾರದೇ 2 ಉಂಬಾಗ ಉಡುವಾಗ ಕೊಂಬು ಕೊಡುವಾಗ | ರಾಮಾ ಎನಬಾರದೇ | ಸರ್ವಾ | ರಂಭದಿ ಸತಿಸುತಲಾಲನೆ ಮಾಳ್ಪಾಗ | ರಾಮಾ ಎನಬಾರದೇ || ತಿಂಬು ತಾ ಕಳಿಸುತಾ ಎಡಹುತಾಣಕಿಸುತಾ ರಾಮಾಎನಬಾರದೇ | ಇದು | ಸಂಭ್ರಮದಲಿ ಮಹಿಪತಿ ಸುತ ಸಾರಿದಾ ರಾಮಾ ಎನಬಾರದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಾನಕಿಯು ನಮ್ಮಮ್ಮ ನಮಗೆ ಭಯವೇನು ಪ ಪವಮಾನ ತನಯನು ಪಾಲಿಪ ಗುರುವಯ್ಯಾ ಅ.ಪ ಕಾಲಕಾಲದಿ ತಪ್ಪದೆ | ಭತ್ಯವ ಹಾಕಿ ಬಾಲಲೀಲೆಗಳಾಡಿಸಿ ಮೇಲೆ ತುಡುಗಾಟವಾಡಿದರೆ ಕೆನ್ನೆಯ ಹಿಂಡಿ ಹಾಲ ಕುಡಿಸಿ ಮಕ್ಕಳರ್ಥಿಯ ನೋಡುವ 1 ಇತರ ಮಕ್ಕಳಿಗೆಲ್ಲಾ | ಅವರ ಮಾತಾ ಪಿತರು ವಡವೆಗಳಿಟ್ಟು ಮಿತಿಯಿಲ್ಲದೆ ಬೈದು ಬಲು ಚಿಂತೆಯ ಪಡುವರು 2 ಕಳ್ಳರಿಗೆ ಸಿಕ್ಕದೈಯ್ಯ | ನಮ್ಮೊಡವೆಗಳ್ ಕಳಚುವುದಕೆ ಬಾರದು ಒಳ್ಳೆ ವಸ್ತ್ರವ ಉಡಿಸಿ ಉಚಿತ ತಿಂಡಿಯ ಕೊಡಿಸಿ ಸುಳ್ಳಾಡದಂದದಿ ಸುತ್ತಿಸಿ ನಗುವರು 3 ಓದು ಬರಹವ ಕಲಿಸಿ | ನಮ್ಮನು ಕೆಲವು ಹೊತ್ತು ಆಟಗಳಾಡಿಸಿ ಆದರಿಸುತ ಜನ್ಮ ಜನ್ಮಗಳಲಿ ಬಿಡದೆ ಕಾದು ಕೊಂಡಿರುವರು ಕಡೆಗೂ ನಮ್ಮಗಲರು 4 ಇಂತಹ ನಮ್ಮವರ ಬಿಟ್ಟು | ಬರಿದೇ ಲೋಕ ಸಂತೆಯವರನು ನಂಬುವರೆ ಎಂತಾದರೂ ಗುರುರಾಮ ವಿಠಲನ ನಾಮ ಸ್ವಂತವಾದರೆ ಮುಕ್ತಿ ಸ್ವಾಧೀನವಾಗುವುದು5
--------------
ಗುರುರಾಮವಿಠಲ
ಡಂಕವ ಸಾರಿದನೋ ಯಮ ತನ್ನ ನಗರದಿ ಘಂಟೆಯ ನುಡಿಸಿದನು ಪ ಡಂಕಸಾರಿದ ತನ್ನ ತುಂಟದೂತರಿಗ್ವೊ ಯ್ಕುಂಠನ ದಾಸರ ತಂಟೆಯು ಬೇಡೆಂದು ಅ.ಪ ಕಾಲಕಾಲದಿ ಹರಿಯಕಥೆ ಕೀರ್ತ ನಾಲಿಸುವರ ನೆರೆಯು ತಾಳದಮ್ಮಡಿ ಸಮ್ಮೇಳದೊಡನೆ ಆ ನೀಲಶ್ಯಾಮನ ಭಜಿಪರಾಳಿನಾಳನುಕಂಡು ಕಾಲನಾಲುಗಳೆಂದ್ಹೇಳದೆ ಬನ್ನಿರೆಂದು 1 ಮಂದಿರಂಗಳದಿ ವೃಂದಾವನ ದಂದ ಕಂಡಾಕ್ಷಣದಿ ಸಿಂಧುಶಯನ ಬಂಧುಭಕ್ತರ ಮಂದಿರವಿದೆಂದು ಹಿಂದಕ್ಕೆ ನೋಡದೆ ಸಂದ್ಹಿಡಿದೋಡಿ ಪುರ ಬಂದು ಸೇರಿರೆಂದು 2 ಪರರಂಗನೆಯರ ಸ್ಮರಿಸುವ ಪರಮ ನೀಚರನ್ನು ನರಹರಿ ಸ್ಮರಣೆಯ ಅರಿಯದ ಆಧಮರ ಕರುಣಿಸದೆ ತುಸುಮುರಿದು ಮುಸುಕಿಕಟ್ಟಿ ದರದರನೆಳೆತಂದು ಉರಿಯೊಳ್ಪೊಯಿರೆಂದು 3 ಪರದ್ರವ್ಯವಪಹರಿಸಿ ಲಂಚದಿಂದ ಸರುವ ತನ್ನದೆನಿಸಿ ನಿರುತ ಮಡದಿಮಕ್ಕಳೊರೆವ ದುರಾತ್ಮನರ ಗುರುತಳನೆಳತಂದು ಕರಿಗಿದಸೀಸಬಾಯೊಳ್ ವೆರಸಿ ಜನಕಕೊಂಡದುರುಳಿಸಿಬಿಡಿರೆಂದು 4 ವೇಣು ಕರದಿ ಪಿಡಿದು ಬಾಣಾರಿ ಧ್ಯಾನದೊಳಗೆ ಬರೆದು ಜಾನಕೀಶನ ಲೀಲೆ ಗಾನದಿಂ ಪಾಡುತ ಆನಂದಿಪ ಮಹಜ್ಞಾನಿಗಳನು ಕಂಡು ಕಾಣದಂತೆ ಸಿಕ್ಕ ಜಾಣ್ಣುಡಿದೋಡಿರೆಂದು 5 ಇಂದಿರೇಶನದಿನದಿ ಅನ್ನವನು ತಿಂದ ಮೂಢರ ಭರದಿ ತಂದು ಒದೆದು ಮಹಗಂಧಮದು ರ್ಗಂಧನಾರುವ ಮಲತಿಂದು ಬದುಕಿರೆಲೊ ಎಂದು ಮನೆಹೊರಗಿನ ಮಂದಿರದಿಡಿರೆಂದು 6 ವಿಮಲ ತುಳಸೀಮಣಿಯ ಧರಿಸಿ ಅಮಿತ ಮಹಿಮನ ಚರಿಯ ವಿಮಲಮನಸರಾಗಿ ಕ್ರಮದಿ ಬರುವ ಶ್ರೀ ರಾಮದಾಸರ ಪಾದಕಮಲಗಳನು ಕಂಡು ಯಮದೂತರೆನ್ನದೆ ನಮಿಸಿ ಬನ್ನಿರೆಂದು 7
--------------
ರಾಮದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ಧನ್ಯರಿಗನ್ಯರ ಪರಿವ್ಯೇ ದೈನ್ಯಬಿಡುವರೆ ಅವರಿಗಿರುವುದೇ ಅರಿವು ಪ ಮೇಲು ಉಪ್ಪರಿಗೆಯ ಮಾಲಿನೊಳನುದಿನ ಶೀಲಸುಂದರಿಯರ ಲೋಲರಾಗಿರುವಂಥ 1 ನೀಲಕೌಸ್ತುಭಮಣಿ ಮಾಲಾಲಂಕೃತರಾಗಿ ಕಾಲಕಾಲದಿ ಮಹಲೀಲೆಯೊಳಿರುವಂಥ 2 ಮೂರ್ಹತ್ತು ಮೂರುಕೋಟಿ ವಾರಿಜಾಸನ ಸುರರಿಂ ಮೂರ್ಹೊತ್ತು ಬಿಡದಂತೆ ಸಾರಿ ಪೂಜೆಯಗೊಂಬ 3 ಎಂಟುಐಶ್ವರ್ಯಂಗಳಂಟಿಕೊಂಡು ಬಿಡದ್ವೊ ಯ್ಕುಂಠ ಪದವಿಯೊಳು ಬಂಟರಾಗಿರುವಂಥ 4 ಲೋಕೈಕ ಶ್ರೀರಾಮ ಲೋಕತ್ರಯಕೆ ತಾನೆ ಏಕದೇವನು ಎಂಬ ಯಾಕಿಂಥ ಮದವಯ್ಯ 5
--------------
ರಾಮದಾಸರು
ಪಾಲನುತ ಶ್ರೀಶೈಲಮಂದಿರ ಮಲ್ಲಿಕಾರ್ಜುನ ರಕ್ಷಿಸು ಪ ಏಳುಕೊಳ್ಳಗಳೇಳು ನೆಲೆಗಳ ಮೇಲೆ ತೋರ್ಪ ಲಿಂಗನೆ ಕಾಲಕಾಲದಿ ಬಾಲನೆಂದೆನ್ನ ಮಲ್ಲಿಕಾರ್ಜುನ ರಕ್ಷಿಸು 1 ಶೀಲ ಭಕುತರ ಪಾಲಿಸಲು ಪಾತಾಳಗಂಗೆಯ ನಿರ್ಮಿಸಿ ಪಾಲಿಸಿದಿ ಬುವಿ ಪಾಲಿಸಿ ವರ ಮಲ್ಲಿಕಾರ್ಜುನ ರಕ್ಷಿಸು 2 ಸಾರಸೌಖ್ಯ ನೀಡುದ್ಧಾರ ಮಾಡಿದ ಮಲ್ಲಿಕಾರ್ಜುನ ರಕ್ಷಿಸು 3 ಅಂಗಜಹರ ಗಂಗಾಧರ ಗುರುಲಿಂಗಜಂಗಮಾತ್ಮಕ ಭವ ಮಲ್ಲಿಕಾರ್ಜುನ ರಕ್ಷಿಸು 4 ಕಾಲಕಾಲ ಕಾಲಕೇಶ್ವರ ಶೂಲಪಾಣಿಯೆ ನಂಬಿದೆ ಕಾಲನ ಮಹದಾಳಿ ಗೆಲಿಸೆನ್ನ ಮಲ್ಲಿಕಾರ್ಜುನ ರಕ್ಷಿಸು 5 ಕಳೆದೆ ದಿನಗಳ ಇಳೆಯ ಸುಖಮೆಚ್ಚಿ ತಿಳಿಯದೆ ತವಮಹಿಮೆಯ ಒಲಿದು ಕ್ಷಮಿಸೆನ್ನ ಬಾಲನೆಂದೆತ್ತಿ ಮಲ್ಲಿಕಾರ್ಜುನ ರಕ್ಷಿಸು 6 ಅಷ್ಟವರ್ಣ ವಿಶಿಷ್ಟಭಕ್ತಿಯ ಕೊಟ್ಟು ಕುರಣಾದೃಷ್ಟಿಯಿಂ ಅನುದಿನ ಮಲ್ಲಿಕಾರ್ಜುನ ರಕ್ಷಿಸು 7 ದುಷ್ಟಭವಕಿನ್ನು ಹುಟ್ಟಿಬರುವಂಥ ಕೆಟ್ಟ ಬವಣೆಯ ತಪ್ಪಿಸು ಇಷ್ಟದಾಯಕ ಮುಟ್ಟಿಪೂಜಿಪೆ ಮಲ್ಲಿಕಾರ್ಜುನ ರಕ್ಷಿಸು 8 ಪರಕೆ ಪರತರ ಪರಮಪ್ರಕಾಶ ವರದ ಶ್ರೀರಾಮಮಿತ್ರನೆ ಮರೆಯ ಬಿದ್ದೆನು ಕರುಣಿಸಿ ಮುಕ್ತಿ ಮಲ್ಲಿಕಾರ್ಜುನ ರಕ್ಷಿಸು 9
--------------
ರಾಮದಾಸರು
ಪಾಲಿಸಯ್ಯ ಪದುಮವದನ ಪಾಲಸಾಗರಶಾಯಿ ನಂಬಿದೆ ಪ ಪಾಲ ಸುಜನಶೀಲ ಸುಗುಣ ಕಾಲಕಾಲದಿ ತವ ಭಜನ ಅ.ಪ ನಾದಬ್ರಹ್ಮನಾದಿಕಾಲದ ಆದಿವಸ್ತು ಭಜಿಪೆ ಸದಾ ಮೋದದೀಯೋ ಎನಗೆ ಮುದ ಭೇದವಾದ ಗೆಲಿದ ವಿಮಲ ಸಾಧುಸುಜನರಮಿತವರ್ತನ ವೇದವೇದಾಂತದೊಳು ಗೌಪ್ಯ ವಾದ ನಿಜ ಬೀಜಮಂತ್ರ 1 ಮಾಲತುಲಸಿ ಕೌಸ್ತುಭಾಂಬರ ಮೇಲುನಿಲಯ ಕುಜನಕುಠಾರ ಶೀಲ ಸುಗುಣ ಕರುಣಾಮಂದಿರ ಕೀಳುತನದಿ ಮಾಡಿದ ಎನ್ನ ಹಾಳು ಪಾಪಗಳನು ಸುಟ್ಟು ಬಾಲನೆಂದು ಕರುಣವಿಟ್ಟು ಮೂಲತತ್ತ್ವಕಿಳಿಸು ದಯದಿ 2 ಭಾಸುರಕೋಟಿವರಪ್ರಕಾಶ ಸಾಸಿರನಾಮ ಜಗಜೀವೇಶ ದೋಷಹರಣ ಭವವಿನಾಶ ದಾಸಜನರ ಪ್ರಾಣಪ್ರಿಯ ಪೋಷಿಸೆನ್ನನುಮೇಷÀ ನಿಮ್ಮ ದಾಸರ ದಾಸನೆನಿಸಿ ಶೇಷಶಯನ ಶ್ರೀಶ ಶ್ರೀರಾಮ 3
--------------
ರಾಮದಾಸರು
ಪಾಲಿಸಯ್ಯ ವರವ ಹರಿಹರಿ ಪಾಲಿಸಯ್ಯ ವರವ ಪ ಪಾಲಿಸಯ್ಯ ವರ ಬಾಲಗೆ ಬೇಗನೆ ಕಾಲಕಾಲದಿ ನಿನ್ನ ಲೀಲಾನಂದವ ಅ.ಪ ಸತತದಿ ತವಭಜನೆ ಅಗಲಿಸ ದತಿ ಗುಪ್ತ ತತ್ವವನು ಯತಿತತಿ ಪೊಗಳುವ ಸ್ಮøತಿಶಾಸ್ತ್ರರ್ಥವನಿತ್ತು ಸುತಗೆ ಮಹಗತಿಯ ಪಥಕೆ ಹಚ್ಚು 1 ಮತಿ ಮಾನ್ಯರು ಸದಾ ಪೊಗಳುವ- ಪಾದ ಸತತ ನುತಿಪ ಅತಿಹಿತ ಮತಿಯಿತ್ತು ಪತಿತ ಪಾವನ ಮಾಡು ರತಿಪತಿಪಿತನೆ 2 ಜಡ ಬಡತನ ಕಡಿದು ಗಡನೆ ನ್ನೊಡಲಾಶೆಯ ತೊಡೆದು ನುಡಿನುಡಿಗಡಿಗಡಿಗೆಡಬಡದಲೆ ನಿ ನ್ನಡಿಧ್ಯಾನ ಕೊಡು ಎನ್ನೊಡೆಯ ಶ್ರೀರಾಮ 3
--------------
ರಾಮದಾಸರು
ಪಾಲಿಸು ಮರೆಯದೆನ್ನ ಪಾಲ ತ್ರಿಜಗಮೋಹ ಮಾಲಕೌಸ್ತುಭ ಸತ್ಯಭಾಮಾ ಲೋಲ ಭಕ್ತಜನರ ಪ್ರೇಮ ಕಾಲಕಾಲದಿ ನಿಮ್ಮ ಭಜನಲೋಲಜನರೊಳಿರಿಸಿ ಎನ್ನ ಬಾಲನೆಂದು ಕರುಣದಾಳು ಕಾಳರಕ್ಕಸಕುಲಸಂಹಾರ ಪ ವಾರಿಧಿಯೊಳು ಮುಳುಗಿದ ವೇದಗಳ ತಂದು ವಾರಿಜಾಸನಗೊಪ್ಪಿಸಿದಿ ಸಾಧುಗಳ ಬಂಧು ವಾರಿಧಿಯೊಳು ವಾರಿಧಿಯ ಕಡೆದಿ ವಾರಿಧಿಯೊಳು ವಾಸನಾದಿ ವಾರಿಧಿಸುತೆಪತಿ ನೀನಾದಿ ವಾರಿಧಿಯನು ಬಂಧಿಸಿ ಮತ್ತೆ ವಾರಿಧಿಯ ಮಧ್ಯದ ಪುರವ ಸೂರೆಗೈದಾಪಾರಮಹಿಮ ಘೋರತಾಪದಿ ಬಿಡದೆ ದೇವ1 ಮಾಯಾಜಗವ ತುಂಬಿದಿ ಮಹರಮಣ ಹರಿಯೆ ಮಾಯದ ಮರುಣುಣಿಸಿದಿ ವೈಕುಂಠಪತಿಯೆ ಮಾಯೆಗೆ ಮಾಯೆಯೆನಿಸಿದಿ ಮಾಯೆಹರನಾದಿ ಮಾಯದಿಂ ಬಲಿಯನ್ನು ತುಳಿದಿ ಕಶ್ಯಪನ ಅಳಿದಿ ಮಾಯದ್ಹಿರಣ್ಯಕನ ಸೀಳಿದಿ ಮಾಯದಿಂ ಮಾಯೆಮೂಗು ಕುಯ್ಸಿದಿ ಮಾಯಮೃಗವನು ಮಾಯದಿಂ ಕೊಂದಿ ಮಾಯದೆನ್ನ ನೂಕದೆ ದೇವ 2 ಕಪಟಕೋಟಿಗಳನ್ನಳಿದಿ ಚಪಲಸುರಪನ ಕಪಟಗರುವವ ಮುರಿದಿ ಲಕುಮಿರಮಣ ಕಪಟನಾಟಕ ನೆನಿಸಿದಿ ಕಪಟಹರನಾದಿ ಕಪಟ ಅಸುವ ಸೆಳೆದಿ ಕಪಟ ಕಂಸನ ಶಿರವಮೆಟ್ಟಿದಿ ಕಪಟಿಗಳ ಮಹ ಕಪಟದಿಂ ಕೊಂದಿ ಶ್ರೀರಾಮ3
--------------
ರಾಮದಾಸರು
ಬಾಳು ಬಾಳು ಹರಿ ಪೂಜಾಲೋಲುಪÁಳೊ ಬಾಳೊ ಮುನಿವಾದಿರಾಜಬಾಳೆಂದಕ್ಷತಿನಿಟ್ಟು ದೇವಕ್ಕಳೆಲ್ಲಬಲು ಕೃಪೆಯಲಿ ಹರಸಿದರೊಪ. ಮಕ್ಕಳ ಮ್ಯಾಲೆಂದೆಂದು ಬಲುಅಕ್ಕರುಳ್ಳ ತಾಯಿ ಬಳಗಅಕ್ಷತಿನಿಕ್ಕಿ ಹರಸುವಂದದಿ ದೇ-ವಕ್ಕಳೆನ್ನ ಹರಸಿದರೊ 1 ಸಾಲಿಗ್ರಾಮ ತೀರ್ಥವನು ಮ್ಯಾಲೆಫಲವೀವ ಕ್ಷೇತ್ರವನುಕಾಲಕಾಲದಿ ಹರಿಸ್ಮರಣೆಯ ಬಿಡದಿರುಕೀಳು ಭವವೆಂಬ ಶತ್ರುವನು 2 ತುಲಸಿ ಪದ್ಮಾಕ್ಷಿಯ ಸರವ ನಿನ್ನಕೊರಳ ರವದಲ್ಲಿ ಮೆರೆವಅಲಸದೆ ಹರಿವಾಸರವನೆ ಬಿಡದಿರುಸುಲಭದಿ ಹರಿ ನಿನ್ನ ಪೊರೆವ 3 ಭ್ರಾಮಕರೊಡನಾಡದಿರು ಕಂಡಕಾಮಿನಿಯರ ಕೂಡದಿರುನೇಮನಿಷ್ಠೆಗಳನ್ನು ಬಿಡದಿರು ಎಂದೆಂದುತಾಮಸನಾಗಿ ಕೆಡದಿರು 4 ಹಯವದನಗೆ ನಮಿಸುತಿರು ನಿ-ರ್ಣಯದ ಶ್ರುತಿಯಸೇವಿಸುತಿರುಪ್ರಿಯ ಪುರಾಣಗಳ ಕೇಳುತಿರು ನಿ-ರ್ಭಯದಿಂದವನ ಪೊಗಳುತಿರು 5 ಹರಿಭಕುತರೊಳೆಂದೆಂದಾಡಿರೊ ನರ-ಹರಿಯ ನಾಮಗಳನು ಪಾಡಿರೊ ಹರಿ ಅರ್ಚನೆಯನು ಮಾಡಿರೊ ಶ್ರೀಹರಿಯ ಮೂರುತಿಯನು ನೋಡಿರೊ 6 ದೂರಕ್ಕೆ ದೂರನು ದಾವನ ಹ-ತ್ತಿರ ಬಂದ ಭಕುತರ ಕಾವನಆರಾಧಿಸಲು ಫಲವೀವನ ಹ-ತ್ತಿರ ಸೇರುವ ಭಾವ ದಾವನ 7 ಕಾಮದೇವನ ಪೆತ್ತ ಕರುಣಿಯ ಸುತ್ತಸೇವಿಪರಘತಮ ತರಣಿಯ- - - - - - - - - - -- - - - - - - - - - -8 ಜಯಿಸಿ ಕಂಸನೆಂಬ ಮಾವನ ಆಶಯವಿತ್ತು ಭಕುತ ಸಂಜೀವನಹಯವದನನಾಗಿ ಪಾವನ ಶ್ರು-ತಿಯ ತಂದ ದೇವರದೇವನ9
--------------
ವಾದಿರಾಜ