ಒಟ್ಟು 18 ಕಡೆಗಳಲ್ಲಿ , 12 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅ. ಮುಂಡಿಗೆಗಳು ಪೌರಾಣಿಕ ವಾವೆವರಸೆಯ ಮುಂಡಿಗೆಗಳು 254 ಇಂದು ನೀ ಕರೆದು ತಾರೆ - ಬಾರದೆ ಶ್ರೀಗೋ-ವಿಂದ ತಾ ಮುನಿದಿಹರೆ - ವಿರಹ ಬೇಗೆಯಲಿಬೆಂದು ಸೈರಿಸಲಾರೆ - ಸಖಿ, ನೀನು ತಂದು ತೋರೆ ಪ ನೊಂದರೂ ಮನದಾನಂದದಿಂದನಂದನಂದನನೆಂದು ಸೈರಿಸಿಎಂದಿಗೂ ಅಗಲಿರಲಾರೆ ಕರೆತಂದುಹೊಂದುಗೂಡಿಸೆ ಮಂದಗಮನೆ ಅ ಅಮೃತ ಗಜ ಉನ್ಮತ್ತಕಾಲಿನಿಂದಲಿ ಕೊಲುವ ರೂಪದಿಕಾಲಿನಲಿ ರಿಪುವನು ಸೀಳಿದಕಾಲಿನಲಿ ತಾನಳೆದ ಮೇದಿನಿಕಾಲಿನಲಿ ನಡೆದ ಭಾರ್ಗವಕಾಲಿನಲಿ ವನವಾಸ ಪೋದನಕಾಲಿನಲಿ ಕಾಳಿಯನ ಮರ್ದಿಸಿದನಕಾಲಿನಲಿ ತ್ರಿಪುರರ ಗೆಲಿದನಕಾಲಿಗೆರಗುವೆ ತೇಜಿರೂಢನ 1 ಎವೆಯಿಕ್ಕದೆ ನೋಡಿದ - ತಲೆಯ ತಗ್ಗಿಸಿಕವಲು ಕೋರೆದಾಡೆಯೊಳಾಡಿದ - ಕಂಬದಿ ಮೂಡಿದತವಕದಿಂದಲಿ ಬೇಡಿದ - ಭೂಭುಜರ ಕಡಿದಶಿವನ ಬಿಲ್ಲನು ಮುರಿದ _ ದೇವಕಿಕುವರ ನಗ್ನ ಹಯವನೇರಿದವಿವಿಧಾಬ್ಧಿಯೊಳಾಡಿ ಗಿರಿಧರಸವಿದು ಬೇರನು ಬಾಲಗೊಲಿದನಅವನಿ ಬೇಡಿ ಕೊಡಲಿ ಪಿಡಿದನಸವರಿ ದಶಶಿರನ ಬೆಣ್ಣೆ ಕದ್ದನಯುವತಿಯರ ವ್ರತಗೆಡಿಸಿ ಕುದುರೆಯ ಹವಣುಗತಿಯಲಿ ಏರಿದಾತನ2 ಮತ್ಸ್ಯ ಸೂಕರ ವಿಪ್ರ ಕೂರ್ಮ ವರಹನರಹರಿ ದ್ವಿಜ ಕೊರಳ ಕೊಯ್ದವನ ನೆಲಮಗಳ ವರಶೌರಿ ಬುದ್ಧನ ತುರಗವೇರಿದ ಆದಿಕೇಶವನ3
--------------
ಕನಕದಾಸ
ಅಶ್ವಧಾಟೀ ಕೃಷ್ಣನೆ ಎಮ್ಮನು ಪ ಕಾಯ ನಂಬಿದೆ ನಿನ್ನನುಅ.ಪ ಸಾರ ಮಾರ್ಗದ ದಾರಿ ಕಾಣದೆ ಸಾರಿ ಬೇಡುವೆ ನಿನ್ನನು ನೀರಜಾಕ್ಷನೆ ಘೋರಭವದಿ ಪಾರುಗಾಣಿಸೊ ಎಮ್ಮನು 1 ದುಷ್ಟನಾಶಕ ಶಿಷ್ಟಪಾಲಕ ಶ್ರೇಷ್ಠಮೂರುತಿದೇವನೆ ಕಷ್ಟಓಡಿಸಿ ಇಷ್ಟಪಾಲಿಸೊ ಅಷ್ಟಕರ್ತನೆ ಬೇಗನೆ 2 ವೇದಗೋಚರ ಯಾದವೇಂದ್ರ ಸುಧಾಮ ರಕ್ಷಕ ಕೃಷ್ಣನೆ ನಂದಗೋಪ ಸುಕಂದ ನಾಮಕ ರಾಧೆವಂದಿತ ಚರಣನೆ 3 ಗೋಪಿ ಮೋಹಕ ಪಾಪಮೋಚಕ ತಾಪಸ ಪ್ರಿಯರೂಪನೆ ಕೋಪಮಾಡದೆ ಪಾಪಿ ಎನಗೆ ರೂಪ ತೋರಿಸೊ ಬೇಗನೆ 4 ದೋಷದೂರ ವಿನಾಶವರ್ಜಿತ ಕೇಶಿ ಸೂದನ ಶೂರನೆ ಕ್ಲೇಶ ಓಡಿಸಿ ದಾಸನೆನಿಸೊ ಬಿಂಬನೆ 5 ವೇಣುನಾದ ವಿನೋದ ಸುಂದರ ಜಾಣೆ ರುಕ್ಮಿಣಿ ಅರಸನೆ ಸಾನುರಾಗದಿ ಜ್ಞಾನದಂಬಕ ದಾನ ಮಾಡೊ ದಾನಿಯೆ6 ಶ್ಯಾಮಸುಂದರ ಮಾಮನೋಹರ ಭೀಮ ವಿಕ್ರಮ ಭೂತಿಯೆ ಸಾಮಸನ್ನುತ ರಾಮಚಂದಿರ ಕಾಮಜನಕನೆ ಕಲ್ಕಿಯೆ 7 ಸಿಂಧು ಶಯನನೇ ಬಂಧಮೋಚಕ ಮಂದರಾದ್ರಿಧಾರನೇ ಬಿಂಧುಮಾಧವ ಮಂದಹಾಸದ ಸುಂದರಾಂಗ ರೂಪನೆ8 ಲಕ್ಷ್ಮಣಾಗ್ರಜ ಪಕ್ಷಿವಾಹನ ಅಕ್ಷರೇಡ್ಯ ಸುಲಕ್ಷಣ ಮೋಕ್ಷದಾಯಕ ಲಕ್ಷ್ಮಿರಮಣನೆ ರಕ್ಷಿಸಯ್ಯ ಸರ್ವದಾ 9 ವಾರಿಜನೇತ್ರ ವಾರಿಜನಾಭ ವಾರಿಜಾಸನ ವಂದ್ಯನೆ ಸೂರಿ ಶೇಖರ ಮೇರೆಗಾಣದ ಮಹಿಮನೆ 10 ಸರ್ವವ್ಯಾಪ್ತನೆ ಸರ್ವವಂದ್ಯನೆ ಸರ್ವವಾಚ್ಯದ ಈಶನೆ 11 ಪೂರ್ಣಗುಣನೆ ಪೂರ್ಣಶಕ್ತನೆ ಪೂರ್ಣಭೋಧರ ಪ್ರಿಯನೆ ಪೂರ್ಣರೂಪನೆ ಪೂರ್ಣಪೂರ್ಣನೆ ಪೂರ್ಣ ತಂತ್ರ ಸ್ವತಂತ್ರನೆ12 ಬಾಲ ಲೀಲ ಕಲಾವಿಭೂಷಿತ ಲೀಲ ಮಾನುಷ ವಿಗ್ರಹ ಲೋಲ ಸುಂದರ ಜಾಲ ಮೋಹಕ ಕಾಲನಾಮಕ ಪುರುಷ 13 ಕಾಳಿಮರ್ಧನ ಕಾಳಿವರದ ಕಾಳಿಯನುಜ ಕೇವಲ ಮೌಳಿಯಿಂದಲಿ ಕಾಲಿಗೆರಗುವೆ ಪಾಲಿಸಯ್ಯ ಈಗಲೇ 14 ಭಂಜನ ನಿಕಟ ಸರ್ವರ ಕುಟಿಲ ವರ್ಜಿತ ಶ್ರೇಷ್ಟನೆ ನಕ್ರತರಿದ ಚಕ್ರಪಾಣಿಯೆ ಫಕ್ಕನೊಲಿಯೊ ಶುಕ್ರನೇ 15 ವಿಪ್ರಸತಿಯರ ಕ್ಷಿಪ್ರದಿಂದಲಿ ತಪ್ಪದೆ ಪೊರೆದಾತನೆ ತಪ್ಪುನೋಡದೆ ಒಪ್ಪಿಕೊಂಡು ಅಪ್ಪ ಒಲಿಯೊ ವೆಂಕಟ 16 ಪಾಂಡವ ಪ್ರಿಯ ಪುಂಡಮರ್ದನ ಅಂಡಜಾಧಿಪ ಅಂಡಗ ಭಂಡನೆನಿಸದೆ ತೊಂಡನೆನಿಸೊ ಪಾಂಡುರಂಗ ವಿಠ್ಠಲಾ 17 ಸೋಮಶೇಖರ ಭಾಮೆ ಪೂಜಿತ ಕಾಮಿತ ಪ್ರದಸಾಮನೆ ತಾಮಸಾರಿಯ ನೇಮದಿಂದಲಿ ನಾಮನುಡಿಸೊ ಶೀಲನೆ 18 ಸೋಮಕಾಂತಕ ಭಾಮ ರೂಪದಿ ಸೋಮಹಂಚಿದ ಜಾಣನೆ ವಾಮದೇವಗೆ ಭ್ರಮೆಯ ಮಾಡಿದ ಶ್ರೀಮನೋಹರವಾಮನ 19 ಇಂದ್ರಗೊಲಿದ ವೀಂದ್ರವಾಹನ ನಂದಗೋಕುಲ ಚಂದ್ರನೆ ಬಂಧನಪ್ರದ ಬಂಧು ಸರ್ವರ ತಂದೆ ಕಾಯೋ ಬೇಗನೆ 20 ವಿಜಯಸಾರಥಿ ವೃಜಿಜನಾರ್ದನ ಅಜಭವಾದಿ ಪೂಜಿತ ತ್ರಿಜಗವಂದಿತ ಭುಜಗಶಯನನೆ ಅಜಿತ ಶಾಶ್ವತ ವಿಷ್ಣುವೆ 21 ಕಳತ್ರ ಅನೀಕನೆ ವಾಕು ಲಾಲಿಸು ನೂಕುಭವವನು ಏಕರೀತಿಲಿಮೆರೆವನೆ 22 ಜೀವ ಪ್ರೇರಕ ಜೀವಭಾಸರ ಜೀವರಾಶ್ರಯ ಭಿನ್ನನೇ ದೇವದೇವನೆ ಕಾವುದೆಮ್ಮನು ಕೋವಿದಪ್ರಿಯ ಕಪಿಲನೆ 23 ಅನ್ನನಾಮಕ ಅನ್ನದಾಯಕ ಅನ್ನುಉಂಬುವ ಅತಿಥಿಯೆ ಮಾನ್ಯಮಾನದ ಜ್ಞಾನಿಗಮ್ಯನೆ ಬೆನ್ನುಬಿದ್ದೆ ಅನಂತನೆ 24 ಸಾರ ಉಣ್ಣುವ ಗಾರು ಉಣ್ಣದ ಮಾರುತೀಶನೆ ಸ್ವರತನೆ ಧೀರ ಜಯಮುನಿ ವಾಯು ಅಂತರ ಮೆರೆವ ಸಿರಿಪತಿ ಕೃಷ್ಣವಿಠಲನೆ ಬಿಂಬನೆ 25
--------------
ಕೃಷ್ಣವಿಠಲದಾಸರು
ಕೈಲಾಸದ ಹುಲಿಯೇ ಕಲಿಕಲುಶವ ಕಳೆಯೊಕಾಳಿಯಾಗಿಳಿಯೇ ಪ ಕಾಲಕಾಲಕೆ ನಿನ್ನ ಕಾಲಿಗೆರಗುವೆ ಕರುಣಾಲಯತೋರೋ ಕರುಣಾಳುಗಳರಸನೆ ಅ.ಪ. ತುಳಸಿಗೆ ಕಳಸೀದರೆನ್ನ ತುಳಸಿಯ ತಾರದೆ ನಾ ಹೊಲಸಿನೊಳಳುತಿರೆ ಘಳಿಗೆಯಾ ತಾಳದೆ ಘಳಿಸಿದೆ ತುಳಸಿಯಾ ಕಳಸವ ಕಳ್ಳ ನಾ ಗೆಳೆಯನೆ ಕಳವಳಿಗಳು ಕಳುಹಿಸಿ ಕಾಳ್ವಗೈಸುವ ಕಾಳಿರಮಣ ನಿನ್ನ ಧೂಳಿ ಧರಿಸುವಂತೆ ಖೂಳನಾ ಮಾಡದೆ 1 ಚಲುವ ಚನ್ನಿಗ ನೀನಹುದೋ ಚಂಚಲ ನಯನಾ ಕರುಣಾ ಚಲ ನೀನಹುದೊ ಚಾಲೂವರಿಯಲು ಎನಗೆ ಕಾಲವು ತಿಳಿಯದು ಶೂಲಿ ಚಂಚಲ ಎನ್ನ ಸಂಚಿತಗಾಮಿ ವಂಚಿಸದೆ ಕಾಯ್ವುದೊ ಇದೇ ಕೊಡುವುದೋಕಂಬು ಕಂಧರಮಣಿ ಹಂಚುವುಗಾಣದೆ ಚಂಚಲೂ ನಯನದಿ ಸುರವಂಚಕನಾಗಿ ಪ್ರಪಂಚದಿ ಶರಪಂಚನ ಚಿಂತಿಸಿಸಂತೆಯಾನರುಹಿದ 2 ಅಕಳಂಕ ಮಹಿಮನೆ ದೋಷದೂರ ನೀ ಗುಣವಂತನೇ ಸಹಸ ಬಲವಂತನೆ ಕಾಂತಿಯ ತಂದನೆ ಕಾಂತಿಯುಳ್ಳ ಕಂತಿಯು ಧರಿಸಿದ ದಿಗಂತ ನಿಷ್ಕಿಂಜನರ ಕಾಂತನೆ ಭುಜಬಲ ಮಹಬಲವಂತನೆ ಕುರುಕಂತನೆ ಅಂತು ಇಂತು ತಂತು ಬಿಡದೆ ನಿಜ ಕುಂತಿಯ ಮಗನನ ಕಂತೆಯುಪೂಜಿಪ ಮಂತ್ರಿಯೆನಿಸಿ ಸುಖತಂತ್ರ ಪಠಿಸಿ ಶೃತಿಪಂಶವಿಂಶತಿ ದ್ವಿಪಿಂಚಕಲ್ಪವ ಮಿಂಚಿನಂದದಿ ತಪವಗೈದು ಪಂಚಪದವಿಯ ಪೊ0ದುಕೊಂಡು ಪಂಚ ಬಾಣನ ಪಿತನು ಯನಿಸಿದ ಮಾಂಗಲ್ಯ ಲಕುಮಿಯ ರಮಣ ಯೆನ ತಂದೆವರದಗೋಪಾಲವಿಠ್ಠಲನ ಆತಂಕವಿಲ್ಲದೇ ಚಿಂತಿಸುವ ನಾರಾಯಣಾಚಾರ್ಯನೇ3
--------------
ತಂದೆವರದಗೋಪಾಲವಿಠಲರು
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪವಮಾನ ಪಾವನ ಚರಿತ ಪದ್ಮ ಭವನ ಪದಾರ್ಹನೆ ನಿರುತ ಅಹ ಪ ಶ್ರವಣಾದಿ ಭಕುತಿ ಜ್ಞಾನವಿತ್ತು ಸಲಹೊ ಮೂ ರವತಾರಾತ್ಮಕ ತತ್ವ ದಿವಿಜನಿಯಾಮಕ ಅ.ಪ. ಪ್ರಾಣೋಪಾನ ವ್ಯಾನೋದಾನ ಹೇ ಸ ಮಾನ ರೂಪಕನೆ ವಿಜ್ಞಾನ ತತ್ವ ಗೀರ್ವಾಣ ಅಹ ಸೇನಾಧಿಪತಿ ನಿನ್ನ ಜ್ಞಾನಸಾರದಲಿಪ್ಪ ಮಾನವರನು ಕಾಯೋ ಮೌನಿ ಧ್ಯಾನಗಮ್ಯ 1 ನಾಗಕೂರ್ಮ ದೇವದತ್ತ ಕೃಕಳ ಯೋಗಿವರಿಯ ಮುಕ್ತಾಮುಕ್ತ ಕ್ಲುಪ್ತ ಭೋಗಗಳೀವ ಸುಶಕ್ತಾ ತಲೆ ಬಾಗಿ ಬೇಡುವೆ ಸರ್ವೋದ್ರ್ರಿಕ್ತ ಅಹ ಜಾಗುಮಾಡದೆ ನಿಜ ಭಾಗವತರೊಳಿಡೊ ಮೈಗಣ್ಣಪದನಾಳ್ದ 2 ಮೂರುಕೋಟಿ ರೂಪಧರನೆ ಲೋಕ ಧಾರಕ ಲಾವಣ್ಯಕರನೆ ಸರ್ವ ಪ್ರೇರಕ ಭಾರತಿವರನೆ ತ್ರಿಪು ರಾರಿಗೆ ವಜ್ರಪಂಜರನೆ ಆಹ ನೀರಜ ಜಾಂಡದಿ ಮೂರೇಳು ಸಾವಿರ ದಾರು ನೂರು ಜಪ ಬೇರೆ ಬೇರೆ ಮಾಳ್ಪ 3 ಆಖಣಾಶ್ಮ ಸಮಚರಣ ಪದ್ಮ ಲೇಖರ ಮಸ್ತಕಾಭರಣ ಕಲ್ಪ ಶಾಖೆಯಂತೆ ಅತಿಕರುಣಾದಿಂದ ಈ ಖಂಡದೊಳು ಮಿಥ್ಯಾವರಣ ಆಹಾ ನೀ ಖಂಡಿಸಿದಿ ದಂಡ ಮೇಖಲ ಭೂಷಣ ಆಖುವಾಹನಪಿತ ಆಖಂಡಲರ್ಚಿತ 4 ಶ್ರೀವಲ್ಲಭಗೆ ಪ್ರತಿಬಿಂಬನಾಗಿ ಜೀವವೇದ ಕಾಲಸ್ತಂಭಗತ ಆವಾಗ ಹರಿರೂಪ ಕಾಂಬ ಶಕ್ತ ನೀ ಒಬ್ಬನಹುದೋ ನಾನೆಂಬೆ ಆಹಾ ವಿಭವ ಜಗ ನಿತ್ಯ 5 ದಕ್ಷಿಣಾಕ್ಷಿಗತ ವತ್ಸಾ ರೂಪಿ ದಕ್ಷನಹುದೋ ಪರಮೋಚ್ಚಾ ಚಾರು ತ್ರ್ಯಕ್ಷಾದಿ ಸುರರೊಳಧ್ಯಕ್ಷಾ ಸರ್ವಾ ಪೇಕ್ಷರಹಿತನೆ ಸ್ವೇಚ್ಛಾ ಆಹಾ ಮೋಕ್ಷಾದಿ ದ್ವಾತ್ರಿಂಶ ಲಕ್ಷಣ ಪುರುಷ ನಿ ರೀಕ್ಷಿಸಿ ಕರುಣದಿ ರಕ್ಷಿಸೋ ಎನ್ನನು 6 ಮೂಲೇಶನಂಘ್ರಿ ಸರೋಜ ಭೃಂಗ ಏಳೇಳು ಲೋಕಾಧಿರಾಜಾ ಇಪ್ಪ ತ್ತೇಳು ರೂಪನೆ ರವಿತೇಜಾ ಲೋಕ ಪಾಲಕರಾಳ್ವ ಮಹೋಜಾ ಆಹಾ ಕಾಳಿರಮಣ ನಿನ್ನ ಕಾಲಿಗೆರಗುವೆ ಕೃ ಪಾಳು ಭಕ್ತಿ ಜ್ಞಾನವಾಲಯ ಕರುಣಿಸು 7 ಅಧಿಭೂತ ಅಧ್ಯಾತ್ಮಗತನೇ ವಿಮಲ ಅಧಿದೈವರೊಳು ಪ್ರವಿತತನೆ ಕಲಿ ವದನದಿ ನಿಲಿಸೋ ಮಾರುತನೆ ಆಹಾ ಬದರಿಕಾಶ್ರಮದೊಳು ಹದಿನಾರು ಸಾವಿರ ಸನ್ನುತ 8 ಮಾತರಿಶ್ವ ಮಹಾಮಹಿಮ ಸರ್ವ ಚೇತನ ಹೃದ್ಗತ ಹನುಮ ಭೀಮ ಭೂತಳದೊಳು ಮಧ್ವ ನಾಮಾದಿಂದ ಜಾತನಾಗಿ ಜಿತಕಾಮಾ ಆಹಾ ಆ ತಿಪ್ಪಣ್ಣಾದಿ ವಿಖ್ಯಾತ ಮಾಯ್ಗಿಳ ಗೆದ್ದ ಸೀತಾರಮಣ ಜಗನ್ನಾಥ ವಿಠ್ಠಲ ದೂತ 9
--------------
ಜಗನ್ನಾಥದಾಸರು
ಪಾಲಿಸೆ ಸರಸ್ವತಿ ಪಾಲಿಸೆ ಪಾಲಿಸೆ ನಿನ್ನಯ ಪಾರಿಗೆ ಬಂದೆನುಕಾಲಕಾಲಕೆ ನಿನ್ನಯ ಕಾಲಿಗೆರಗುವೆ ಪಾಲಿಸೆ ಪ. ಆದಿ ಬ್ರಹ್ಮನರಾಣಿಯೆ ವೇದಕ್ಕ ಭಿಮಾನಿಯೆಮೋದ ಗಾಯನ ಕುಶಲಳೆಮೋದ ಗಾಯನ ಕುಶಲಳೆ ಸರಸ್ವತಿ ನೀ ದಯಮಾಡಿ ಮತಿಯ ಕೊಡು 1 ಹೊನ್ನವರೆ ಹೊಸ ಕಪ್ಪು ಬೆನ್ನಿನ ಮ್ಯಾಲಿನ ಹೆರಳುಕಿನ್ನರಿ ನಿನ್ನ ಬಲಗೈಯಕಿನ್ನರಿ ನಿನ್ನ ಬಲಗೈಯ್ಯಲಿ ಹಿಡಕೊಂಡುಖನಿ ಬಾ ನಮ್ಮ ವಚನಕ್ಕೆ 2 ಮಿತ್ರಿ ಸರಸ್ವತಿಗೆ ಮುತ್ತಿನ ಉಡಿಯಕ್ಕಿಮತ್ತೆ ಮಲ್ಲಿಗೆಯ ನೆನೆದಂಡೆಮತ್ತೆ ಮಲ್ಲಿಗೆಯ ನೆನೆದಂಡೆ ತಂದಿದ್ದೆಪ್ರತ್ಯಕ್ಷವಾಗ ಸಭೆಯೊಳು3 ಅರಳು ಮಲ್ಲಿಗೆ ನೆನೆದಂಡೆ ತಂದಿಹೆತಡೆಯದೆ ನಮಗೆ ವರವ ಕೊಡು 4 ಗುಜ್ಜಿ ಸರಸ್ವತಿಗೆ ಗೆಜ್ಜೆ ಸರಪಳಿಯಿಟ್ಟು ವಜ್ರಮಾಣಿಕ್ಯ ದಾಭರಣವಜ್ರಮಾಣಿಕ್ಯ ದಾಭರಣ ಭೂಷಿತಳಾಗಿನಿರ್ಜರೊಳುತ್ತಮಳೆ ನಡೆ ಮುಂದೆ 5 ಹರದಿ ಸರಸ್ವತಿ ಸರಿಗೆಸರಪಳಿಯಿಟ್ಟುಜರದ ಸೀರೆಯನೆ ನಿರಿದುಟ್ಟು ಜರದ ಸೀರೆಯನೆ ನಿರಿದುಟ್ಟು ಬಾರಮ್ಮದೊರೆ ರಾಮೇಶನ ಅರಮನೆಗೆ6
--------------
ಗಲಗಲಿಅವ್ವನವರು
ಪಾಲಿಸೆನ್ನನು ಶ್ರೀಲಕುಮಿವರ ಭೂಲೋಲಕಾರ್ಪರ ದೊಳು ಪಿಪ್ಪಲತರು ಸುಮಂದಿರ ಪ ಬಾಲತನದಿ ಜನಕನ ಬಹು ಕೀಳುನುಡಿಗಳನು ಸಹಿಸಿದ ಬಾಲಗೊಲಿದ ನರಹರಿಯೆ ಕೃಪಾಳೊ ನಿಮ್ಮಯ ಕಾಲಿಗೆರಗುವೆ ಅ.ಪ ಸಾಲಿಗ್ರಾಮದಿ ನೆಲಸಿ ತರುವರ ಮೂಲದಿ ಸೇವಿಪರ ಪಾಲಿಸಲೋಸುಗ ನಿರಂತರ ಕಾಲಕಾಲಗಳಲ್ಲಿ ಬಿಡದೆ ವಾಲಗ ಕೈಕೊಳ್ಳುತ ಮೆರೆವ ಕಾಳಿಯಮದನನೆ ತವಪದ ಕೀಲಾಜದಲಿ ಭಕುತಿಯ 1 ಮಂದಜಾಸನಾದಿ ಸುರಗಣ ವಂದಿತ ಸುಚರಣ ದ್ವಂದ್ವ ಭಜಕ ವೃಂದಪೋಷಣ ಸಿಂಧುಶಯನವಂದಿಪೆ ಭವ ಬಂಧ ಬಿಡಿಸ್ಯಾನಂದಗರಿವ ಮಂದಿರದಲಿ ತಂದುತೋರಿಸಿ2 ನಾರದಾದಿ ಮುನಿ ಸುವರ್ಣಿತ ಉದಾರ ಚರಿತ ನಾರಾಯಣ ಮುನಿಸು ಪೂಜಿತ ಧಾರುಣಿಯೊಳು ಘೋರ ಕೃಷ್ಣಾತೀರ ಸಂಸ್ಥಿತ ಸೇರಿದ ಭಕುತರಿಗೆ ತ್ರಿದಶ ಭೂರುಹ ಸಿರಿನರಸಿಂಹನೆ 3
--------------
ಕಾರ್ಪರ ನರಹರಿದಾಸರು
ಪಾಹಿ ವಿನತಾತ್ಮಜ ಪತಗಾಧಿರಾಜಾ ಪ ಪಡೆದ ಗರುಡನೆ ಅ.ಪ ಶ್ಯಂದನೋತ್ತಮನೆನಿಸಿ ಜಗದೊಳು ಸಿಂಧು ತಂದಿಟ್ಟ ಧೀರನೆ 1 ಬಂಧವ ಬಿಡಿಸಿದಂಥ ಕಾಲಿಗೆರಗುವೆ 2 ಜನರಘ ತರಿದಭೀಷ್ಟಿಯ ಸೌಪರ್ಣಿ ರಮಣನೆ 3
--------------
ಕಾರ್ಪರ ನರಹರಿದಾಸರು
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಷಷ್ಠಿಯ ದಿವಸ (ಶ್ರೀ ವೆಂಕಟೇಶನ ಅವಭೃಥ ಸ್ನಾನ) ರಂಭೆ :ಸಖಿಯೆ ಕೇಳೀಗ ಸಲುಗೆವಂತಳೆ ಮುಕುತಿದಾಯಕ ಮೂಲಪುರುಷಗೆ1 ಭೇರಿಶಬ್ದವು ನಗಾರಿಘರ್ಜನೆ ಮೌರಿತಾಳವು ಮೃದಂಗಶಬ್ದವು 2 ಉದಯಕಾಲದಿ ಒದಗಿ ಭಕುತರು ಪದುಮನಾಭನ ಪಾಡಿ ಪೊಗಳ್ವರು3 ಭೂರಿಮಂಗಲಕರದ ಶಬ್ದವು ಸೇರಿ ಕಿವಿಯೊಳು ತೋರುವುದಲ್ಲೆ4 ನಿದ್ದೆಬಾರದು ನಿಮಿಷಮಾತ್ರಕೆ ಎದ್ದು ಪೇಳೆಲೆ ಏಣಲೋಚನೆ5 ಸುಮ್ಮನೀನಿರು ಸುಳಿಯಬೇಡೆಲೆ ಎಮ್ಮುವುದು ನಿದ್ರೆ ಏನ ಪೇಳಲಿ6 ಬೊಮ್ಮಸುರರಿಗು ಪೊಗಳತೀರದು ತಿಮ್ಮರಾಯನ ಮಹಿಮೆ ದೊಡ್ಡಿತು7 ನಿನ್ನೆ ದಿವಸದ ನಿದ್ರೆವಿಹುದೆಲೆ ಕಣ್ಣಿಗಾಲಸ್ಯ ಕಾಂಬುವದಲ್ಲೇ8 ಬಣ್ಣಿಸುವದೆಲೆ ಬಹಳವಿಹುದಲೆ ಪನ್ನಗವೇಣಿ ಪವಡಿಸೆ ನೀನು9 ಏಳು ಏಳಮ್ಮ ಅಲಸ್ಯವ್ಯಾತಕೆ ಕಾಲಿಗೆರಗುವೆ ಹೇಳಬೇಕಮ್ಮ10 ಜಯಜಯ ವಾಧಿಶಯನ ಜಯಜಯ ದೈತ್ಯವಿನಾಶ ಜಯಜಯ ಶ್ರೀನಿವಾಸ1 ಗಂಧಕಸ್ತೂರಿಪುಣುಗಚಂದನಪನ್ನೀರುಗಳ ಹೊಂದಿಸಿ ತೋಷದಿ ಮಂದರಧರಗೆ2 ಆಕಾಶರಾಯನ ಮಗಳು ಹರುಷದಿಂದೊಡಗೂಡಿ ಶ್ರೀಕರ ವೆಂಕಟಪತಿಯು ಸರಸವಾಡಿ3 ಮಾಧವ ಸಹಿತಲಿ ಸಾದರದಿಂದಲಿ ಸರಸವಾಡಿ4 ಬಡನಡು ಬಳುಕುತಲಿ ಎಡಬಲದಲಿ ಸುಳಿದು ಕಡಲೊಡೆಯಗೆ ಲಕ್ಷ್ಮಿ ಚೆಲ್ಲಿದಳಾಗ5 ಛಲದಿ ಪದ್ಮಾವತಿಯು ಜಲಜನಾಭನ ಮೇಲೆ ಒಲವಿನಿಂದಲಿ ಬಂದು ಚೆಲ್ಲಿದಳಾಗ6 ಭರದಿ ಶ್ರೀದೇವಿಯು ಸರಸಿಜಮುಖದಲ್ಲಿ ಪರಮ ಸುಸ್ನೇಹದಿ ಬೆರಸಿದಳಾಗ7 ಭೂದೇವಿ ಭುಲ್ಲವಿಸಿ ಮಾಧವನ ಮುಖದೊಳಗೆ ಮೋದದಿಂದಲಿ ಬಂದು ಚೆಲ್ಲಿದಳಾಗ8 ಸುತ್ತುಮುತ್ತಲು ಇವರ ಆರ್ತಿಯಿಂದಲಿ ಹರಿಯು ವೃತ್ತಕುಚವ ನೋಡಿ ಚೆಲ್ಲಿದನಾಗ 9 ಝಣಝಣಾಕೃತಿಯಿಂದ ಮಿನುಗುವಾಭರಣದ ಧ್ವನಿಯ ತೋರುತ ಬಲು ಸರಸವಾಡಿ10 ಓಕುಳಿಯಾಡಿದ ನೀರಾನೇಕಭಕ್ತರು ಮಿಂದು ಏಕಮಾನಸರಾಗಿ ಪೊರಟರು ಕಾಣೆ11 * * * ಆಡಿದರೋಕುಳಿಯ ಶರಣರೆಲ ಆಡಿದರೋಕುಳಿಯಪ. ಕಾಡುವ ಪಾಪವ ಓಜಿಸಿ ಹರಿಯೊಳ- ಗಾಡಿ ನಿತ್ಯಸುಖ ಬೀಡಿನ ಮಧ್ಯದಿ1 ಅಬ್ಬರದಿಂದಲಿ ಉಬ್ಬಿ ಸಂತೋಷದಿ ಒಬ್ಬರ ಮೈಗಿನ್ನೊಬ್ಬರು ಚೆಲ್ಲುತ 2 ಚೆಂಡು ಬುಗರಿನೀರುಂಡೆಗಳಿಂದಲಿ ಹಿಂಡು ಕೂಡಿ ಮುಂಕೊಂಡು ಪಿಡಿಯುವರು3 ಸುತ್ತುಮುತ್ತ ಒತ್ತೊತ್ತಿ ಮುತ್ತಿ ಜಲ- ವೆತ್ತಿ ಚಿತ್ತತನುನೆತ್ತಿಗೆ ಸೂಸುತ್ತ4 ರಂಭೆ : ನಾರಿ ಕೇಳೀಗ ಭೂರಿಭಕುತರು ಶ್ರೀರಮಾಧವ ಸಹಿತ ಬಂದರು1 ಭಾವ ಶ್ರೀಹರಿ ಪ್ರತಿರೂಪದೋರುತ ದೇವ ತಾನೆ ನಿದ್ರ್ವಂದ್ವನೆನ್ನುತ 2 ಹೇಮಖಚಿತವಾದಂದಣವೇರಿ ಪ್ರೇಮಿಯಾಗುತ ಪೊರಟು ಬರುವನು 3 ವಲ್ಲಭೆಯರ ಕೂಡಿ ಈ ದಿನ ಫುಲ್ಲನಾಭನು ಪೊರಟನೆತ್ತಲು4 ಊರ್ವಶಿ : ನಾರಿ ನೀ ಕೇಳಿದರಿಂದ ಈಗ ಭೂರಿಭಕುತರಾನಂದ ಶ್ರೀರಮಾಧವ ಮಿಂದ ನೀರಿನೊಳಾಡುತ್ತ ಓರಂತೆ ತುಳಸಿಮಾಲೆಯ ಧರಿಸುತ್ತ ಭೇರಿಡಂಕನಗಾರಿಶಬ್ದ ಗಂ- ಭೀರದೆಸಕವ ತೋರಿಸುತ್ತ ವೈ- ಯಾರದಿಂದಲಿ ರಾಮವಾರ್ಧಿಯ ತೀರದೆಡೆಗೆಲೆ ಸಾರಿ ಬಂದರು1 ವರದಭಿಷೇಕವ ರಚಿಸಿ ಬಕು- ತರ ಸ್ನಾನವನನುಕರಿಸಿ ಭರದಿಂದ ಪೂಜಾಸತ್ಕಾರ ಸೇವೆ ಕೈಗೊಂಡು ತ್ವರಿತದಿ ನಗರಾಂತರಕನುವಾದನು ಬರುತ ದಿವ್ಯಾರತಿಗೊಳ್ಳುತ ಚರಣ ಸೇರಿದ ಭಕ್ತರಿಷ್ಟವ ನಿರುತ ಪಾಲಿಸಿ ಮೆರೆವ ಕರುಣಾ- ಕರ ಮನೋಹರ ಗರುಡವಾಹನ2 ರಂಭೆ : ಸರಸಿಜಾನನೆ ಈ ಸೊಲ್ಲ ಲಾಲಿಸೆ ಕರವ ಮುಗಿಯುತ್ತಕೈಯ ತೋರುತ1 ಪರಮಪುರುಷ ಗೋವಿಂದ ಎನುತಲಿ ಹೊರಳುತುರಳುತ ಬರುವದೇನಿದು2 ಊರ್ವಶಿ :ಅಂಗದಾಯಾಸವೆಲ್ಲವನು ಪರಿ- ಭಂಗಿಪ ಸೇವೆಯೆಂಬುದನು ಅಂಗಜಪಿತಚರಣಂಗಳ ರಜದಲಿ1 ಹೊಂಗಿ ಧರಿಸಿ ಲೋಟಾಂಗಣ ಎಂಬರು ರಂಗನಾಥನ ಸೇವೆಗೈದ ಜ- ನಂಗಳಿಗೆ ಭಯವಿಲ್ಲವದರಿಂ- ದಂಗವಿಪ ಲೋಲೋಪ್ತಿ ಕೋಲಾ- ಟಂಗಳನು ನೀ ನೋಡು ಸುಮನದಿ2 ಕೋಲು ಕೋಲೆನ್ನಿರೊ ರನ್ನದ ಕೋಲು ಕೋಲೆನ್ನಿರೊಪ. ಪಾಲಾಬ್ಧಿಶಯನ ನಮ್ಮಾಲಯಕೆದ್ದು ಬಂದ ಲೀಲೆಗಳಿಂದ ಜನಜಾಲಗಳೆಲ್ಲರು1 ಗುಂಗಾಡಿತಮನನ್ನು ಕೊಂದು ವೇದವ ತಂದು ಬಂಗಾರದೊಡಲನಿಗಿಟ್ಟನು ನಮ್ಮ ದೇವ2 ಅಡ್ಡಿಮಾಡದೆ ಸುರವಡ್ಡಿಗೆ ಸುಧೆಯಿತ್ತು ಗುಡ್ಡೆಯ ಬೆನ್ನಿಲಿ ಧರಿಸಿದ ನಮ್ಮ ದೇವ3 ರೂಢಿಯ ಕದ್ದನ ಓಡಿಸಿ ತನ್ನಯ ದಾಡೆಯಿಂದಲೆ ಸೀಳ್ದ ಕಾಡವರಾಹನಮ್ಮ4 ಸಿಂಗನ ರೂಪತಾಳಿ ಹೊಂಗಿ ಕಂಬದಿ ಬಂದು ಬಂಗಾರಕಶ್ಯಪುವಂಗವ ಕೆಡಹಿದ5 ಗಿಡ್ಡನಾಗುತ ಕೈಯೊಡ್ಡಿ ದಾನಕೆ ಮನ- ಸಡ್ಡಿಮಾಡದೆ ಮೇಣು ದೊಡ್ಡವನಾದನಮ್ಮ6 ಕಾಮಧೇನುವಿಗಾಗಿ ಕಾರ್ತವೀರ್ಯನ ಕೊಂದು ಭೂಮಿಯ ಬುಧರಿಗೆ ಪ್ರೇಮದಿನಿತ್ತನಮ್ಮ7
--------------
ತುಪಾಕಿ ವೆಂಕಟರಮಣಾಚಾರ್ಯ
ನಿಲ್ಲು ರಂಗ ನಿಲ್ಲು ರಂಗ ನಿಲ್ಲೆಲೊ ರಂಗನಿಲ್ಲು ಮಜ್ಜಿಗೆಯನೆಲ್ಲ ಚೆಲ್ಲಿ ಬೆಣ್ಣೆ ಮೆದ್ದ ಕಳ್ಳ ಪ.ಜಾವ ಜಾವಕೆ ಕಾಡುವೆ ನಾವು ಕಟ್ಟಿದರೋಡುವೆಹಾವಳಿಗಾರೆವೊ ನಿನ್ನ ದೇವಕಿ ಚಿನ್ನಗೋವಳೆಗಾರ್ತಿರ ಚಿತ್ತವ ಆವಾಗೆ ಗೆದ್ಯೊಮಾಧವದೇವಿ ಗೋಪಿಗೆ ಹೇಳುತೈದೆವೊ ನಡೆ ಯಾಕೊ ಪಿಂತೆ 1ಬಾಲ ಬಾಲ ಬಾಲನೆಂದು ತಾಳಬೇಕೆಷ್ಟು ದಿನೆಂದುಮೇಲೆ ಬಲ್ಲಿದರ ಮಗ ನೀಲಮೇಘಾಂಗಕಾಲಿಗೆರಗುವೆವಿನ್ನು ಪಾಲಿಸೊ ನಮ್ಮನು ನೀನುನಾಲಿಗೇಲಿ ನಿಮ್ಮ ಗುಣಂಗಳ ಹೇಳೋದು ಕಠಿಣ 2ಬಿಟ್ಟು ಕೆಟ್ಟೆವೊ ಪಾದವ ಕಟ್ಟೆವೊ ಬಾರೊ ದೇವಸಿಟ್ಟಲಿ ಯಶೋದೆ ಮೇಲೆ ಅಟ್ಟಿ ಬಿಡಲುಗಟ್ಟಿ ಮೊಸರು ಹಾಲನು ಅಷ್ಟು ಕುಡಿದಧಿಕನೊದಿಟ್ಟ ಪ್ರಸನ್ನವೆಂಕಟ ಕೃಷ್ಣ ನಿಮ್ಮಮ್ಮನಾಣಿಟ್ಟೆ 3
--------------
ಪ್ರಸನ್ನವೆಂಕಟದಾಸರು
ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪವಮಾನ ರಾಯಾ ಪಾವನ ಕಾಯಾ | ಕಾಯೋದಿವಿಷತ್ಪೂಜಿತ ಕವಿಜನ ಗೇಯ ಪಭಕ್ತವತ್ಸಲ ದೇವ ರವಿತೇಜ | ಸರ್ವೋ-ದ್ರಕ್ತ ಪ್ರಣತ ಜನ ಸುರಭೂಜ||ಶಕ್ತ ಲೋಕೈಕ ಅನಂತಜ |ಭುಕ್ತಿಮುಕ್ತಿದ ದಿತಿಜಾಹಿ ದ್ವಿಜರಾಜ1ದುರಿತಾಂಬುಧಿ ಘಾಗಜ ಕಾಳೀಶ | ಸರ್ವಸುರವಂದ್ಯ ಪದಕಂಜ ನಿರ್ದೋಷಾ ||ಪುರರಿಪುಪಿತ ಪಯೋಧರ ಭಾಸ | ಸಾರೆ-ಗರೆದು ಪೂರ್ತಿಸೊ ಯನ್ನ ಅಭಿಲಾಷಾ 2ಪೌಲಸ್ತ್ಯಾನುಜ ಮಾಠ ರಜ ರಕ್ಷ | ಶ್ರೀ ಗೋ-ಪಾಲನವನೆನೀಸುವದುಪೇಕ್ಷ ||ನೀಲೇಶ ತ(?)ಮಾಡದೆ ತಾ ರಕ್ಷ | ವಂದ್ಯಕಾಲಿಗೆರಗುವೆ ದುರ್ಜನ ಶಿಕ್ಷ3ಮಧುಸಖ ಪಾಲಾನುಜ ಪಾದಾರವಿಂದ |ಮಧುಕರ ದಂಡ ಮೇಖಲ ಧಾರ ||ವಿದುರಾಗ್ರಜ ನಂದನ ಸಂಸಾರಾರಣ್ಯ |ಸುಧನಂಜಯ ವೃಕೋದರ ಸಮೀರ4ಕುಟಿಲರಹಿತ ಋಜುಗಣಾಧೀಶ | ಶ್ರೀ ಧೂ-ರ್ಜಟಿವಂದ್ಯ ಭಕ್ತಿಯಿಂ ಪ್ರಾಣೇಶ ||ವಿಠಲನ್ನ ಭಜಿಸುತ್ತ ಸದ್ಭಾಷ್ಯವನ್ನು |ಪಠನೆ ಮಾಡಿಸೊ ದಯದಿಂದ ನಿಶಾ 5
--------------
ಪ್ರಾಣೇಶದಾಸರು
ಬಂದೆಯಾ ಬಾರೊ ಗೋಪಾಲ ಕೃಷ್ಣಬಂದೆಯಾ ಬಾರೊ ಪ.ಇಲ್ಲಿಯ ಗೊಲ್ಲತೇರೆಲ್ಲರುಬಲ್ಲಿದಕಾಮುಕ ನಲ್ಲೇರುಫುಲ್ಲಲೋಚನ ನಿನ್ನ ಮುದ್ದಿನ ಮೊಗವಮೆಲ್ಲನೆ ಚುಂಬಿಸಿ ಬಿಡರೊ ಮಗುವೆ 1ಚಿಕ್ಕವನೆಂದಾಡಿಸಿ ನಿನ್ನಚಕ್ಕಂದಿಲಿ ಬಾಡಿಸಿ ಚಿನ್ನಸಕ್ಕರೆ ಮಾತಲಿ ಬಿಗಿದಪ್ಪುವರೊಕಕ್ಕಸಕುಚದಂಗನೆ ಗೋಪಿಯರೊ 2ಇರುಳ್ಹಗಲೆನ್ನ ಕಂದನ್ನಮರುಳಿಕ್ಕುವರೆಂದಂಜುವೆ ನಾತರಳನ ಕಾಲಿಂಗೆರಗುವೆ ನೋಡೋತರಳೇರೊಡಗೂಡಾಡಲಿ ಬೇಡೊ 3ನಿಲ್ಲದೆ ನಿನ್ನ ಬರಮಾಡುವರೊಚೆಲ್ವಹ ಹಣ್ಣುಗಳ ನೀಡುವರೊಒಳ್ಳೆ ನಾರೇರನುದಿನ ನಿನ್ನಬುಲ್ಲಿ ಬೆಲ್ಲಕೆ ಮನಸೋತಿಹರಣ್ಣ 4ವಿಗಡೇರ ದೃಷ್ಟ್ಯಾಗಲೆತಗಲಿದವೈ ನಿನ್ನ ಮೈಯಲಿಅಗಲದಿರೆನ್ನ ಪ್ರಸನ್ನವೆಂಕಟನಗಪತಿ ಬಡವರ ಧನವೆ ಕೃಷ್ಣ 5
--------------
ಪ್ರಸನ್ನವೆಂಕಟದಾಸರು