ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ನಾರಾಯಣ ಸನ್ನುತ ಸುಗುಣ ಗುಣಾರ್ಣವ ಸುಮನಪತಿ ಶ್ರೀ ಭೂದುರ್ಗಾರಮಣ ಮಾಂಪಾಹಿ ಪ ಲೋಕೇಶ ವಿಧಾತಜನಕ ರ ತ್ನಾಕರಮಥನ ಜಗದಾಘಪಹ ಶ್ರೀಕಂಠ ಪಿತಾಮಹ ಮದನನೇಕ ಸುಲಾವಣ್ಯ ಆಕಾಶ ತರಂಗಿಣಿ ಪಿತ ಕರುಣಾಕರ ಕೌಮೋದಕಿಧರ ಧರಣಿ ಕುವರಾಂತಕ ಕರುಣದಿ ಚಿತ್ತೈಸು ನೀ ಹಸಿಗೆ ಶೋಭಾನೆ 1 ಅರದೂರಾಬ್ಜ ಭವಾಂಡೋದರ ಶರಣಾಗತ ಸವಿ ಪಂಜರ ಅಂ ಬರ ಭೂ ಪಾತಾಳದಿ ವ್ಯಾಪ್ತಾ ಜರಮೃತ್ಯು ವಿದೂರ ಕರಿವರ ಪ್ರಭಂಜನ ಪೀತಾಂ ಬರಧರ ಖಳಕುಲವನ ವೈಶ್ವಾ ನರ ನಾರದನುತ ಮಹಿಮನೆ ಚಿತ್ತೈಸು [ಹಸೆಗೆ] 2 ಸತ್ವರಜಸ್ತಮ ಜೀವರ ತತ್ ಸಾಧನವರಿತವರಗತಿ ಗ ಳಿತ್ತು ಪೊರೆವ ವಿಬುಧವರದ ವರಸತ್ಯವತಿ ಸೂನು ಉತ್ತಮ ಪುರುಷನೆ ಚೇತನ ಜಡದ ತ್ಯಂತವಿಭಿನ್ನ ವಿಜಯ ಸಖ ಸತ್ಯಸುಕಾಮ ಕಮಲನಯನನೆÉ ಚಿತ್ತೈಸೊ [ಹಸೆಗೆ]3 ವಾಸವತನುಸಂಭವ ಸಾರಥಿ ವೀಶುದ್ಭುಜ ವಿಧೃತ ಸುದರ್ಶನ ದಶಾರ್ಹ ದಿವಕರನಿಭ ಸಂಕಾಶÀ ಸುಭದ್ರಾತ್ಮಾ ವಾಸುಕಿ ಪರ್ಯಂಕಶಯನ ಹರಿ ವ್ಯಾಸಕಪಿಲ ದತ್ತಾತ್ರಯ ಮಹಿದಾಸ ವೃಷಭರೂಪ ರಮೆಯರಸ ಚಿತ್ತೈಸು [ಹಸೆಗೆ]4 ಪಾಂಡವ ಸಖ ಪತಿತ ಸುಪಾವನ ಚಂಡಾಂಶು ನಿಶಾಕರ ಪಾವಕ ಮಂಡಲದೊಳಗತಿ ಬೆಳಗುವ ಕೋದಂಡ ಧೃತ ಕರಾಬ್ಜ ಕುಂಡಲ ಮಂಡಿತ ಗಂಡಸ್ಥಳ ಖಂಡಮಹಿಮ ಖೇಚರ ಪುರಹರ ಗಂಡುಗಲಿ ಜಗನ್ನಾಥ ವಿಠಲ ಚಿತ್ತೈಸೋ [ಹಸೆಗೆ]5
--------------
ಜಗನ್ನಾಥದಾಸರು
ನಿನ್ನ ಪೋಲುವ ಕರುಣಿಗಳನಾರ ಕಾಣೆ ಪ್ರ ಪನ್ನ ತಾ ಪಾಪಹರನೇ ಪ ಎನ್ನಪರಾಧಗಳ ಎಣಿಸದಿರು ಅಜಭವಶ ರಣ್ಯ ಪರಿಪೂರ್ಣೇಂದಿರಾಗಾರ ಅ ಶುದ್ಧಾಖ್ಯ ದ್ವಿಜನು ದಾರಿದ್ರ್ಯದಲಿ ನೆರೆ ನೊಂದು ಸದ್ಧರ್ಮ ತೊರೆದು ಮರೆದು ಶ್ರಾದ್ಧಾದಿ ದುಷ್ಟನ್ನ ಮೆದ್ದು ನಿಂದಿತನಾಗಿ ಬಿದ್ದಿರಲು ಸತಿಯು ಮತಿಯು ತಿದ್ದಿ ಪೇಳಲು ಕೇಳಿ ಶುದ್ಧ ಭಾವದಿ ತವ ಪ ದದ್ವಯಕ್ಕೆರಗಿ ಮರುಗಿ ಪದ್ಮೇಶ ಸಲಹೆನಲು ಸಿದ್ಧಿಸಿ ಮನೋರಥವ ಉದ್ಧಾರವನು ಮಾಡ್ದೆ ನೋಡ್ದೆ 1 ವಿಧಿಯ ಸಂಸ್ತುತಿ ಕೇಳಿ ಮಧ್ವಜಾಕಾರಿ ಮದಡತಮನುದರ ಬಗೆದೇ ಉದಧಿ ಮಥನದಲುದಿಸಿದಮೃತ ದೇವತೆಗಳಿಗೆ ಮುದದಿಂದಲೆರೆದೆ ಪೊರೆದೆ ಹೇಮ ಲೋಚನನ ನೀ ದೌಂಷ್ಟ್ರ ತುದಿಯಿಂದ ಕೊಂದೆÀ ತಂದೆ ಬೆದರದಲೆ ಕರೆದರ್ಭಕನ ನುಡಿಗೆ ಅವನಯ್ಯ ನುದರ ರಕ್ತವನು ಸುರಿದೇ ಮೆರೆದೇ 2 ವೈರೋಚನಿಯ ಭೂಮಿ ದಾನವನು ಬೇಡಿ ಭಾ ಗೀರಥಿಯ ಪಡದಿ ಪದದಿ ಧಾರಿಣಿಯ ದಿವಿಜರಿಗೆ ದಾನವಿತ್ತವನಿಪರ ಗಾರು ಮಾಡಿದೆ ಸವರಿದೇ ನೀರಧಿಯ ಬಂಧಿಸಿ ದಶಾಸ್ಯನ ಬಲವನು ಸಂ ಹಾರ ಮಾಡಿದೆ ರಣದೊಳು ಕಾರಗೃಹದೊಳಗಿಪ್ಪ ಜನನಿ ಜನಕರ ಬಿಡಿಸಿ ತೋರಿಸಿದೆ ವಿಶ್ವರೂಪಾ ಶ್ರೀಪಾ 3 ಆದಿತೇಯರು ಮಾಳ್ಪ ಸಾಧುಕರ್ಮಗಳ ಶುದ್ಧೋದನಾಚರಿಸೆ ತಿಳಿದು ವೇದ ಶಾಸ್ತ್ರಾರ್ಥ ಪುಸಿಯೆಂದರುಪಿ ಜಿನನತಿ ಭೇದಗೈಸಿದೆ ಸಹಿಸಿದೇ ಭೇದಗೊಳಿಸುವ ಕಲಿಯ ಕೊಂದು ಶೀ ಘ್ರದಿ ತಮಸಿಗೈಸಿದೆ ಕಲ್ಕಿ ಭಳಿರೇ ನಿಖಿಳ ಲೋಕವನೆಲ್ಲ ಧರಿಸಿ ಪ್ರಳ ಯೋದಕದಿ ಮಲಗಿ ಮೆರೆದೇ ಪೊರೆದೇ 4 ಹಂಸರೂಪದಲಿ ಕಮಲಾಸನಗೆ ತತ್ವೋಪ ದೇಶಮಾಡಿದೆ ಕರುಣದೀ ವ್ಯಾಸಾವತಾರದಲಿ ದೇವ ಋಷಿ ಪಿತೃಗಳಭಿ ಲಾಷೆ ಪೂರೈಪ ನೆವದೀ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಭಾಷ್ಯತ್ರಯಗಳಿಂದ ಭಗವದ್ಗುಣಂಗಳ ಪ್ರ ಕಾಶÀ ಮಾಡಿದೆ ಮೋದದಿ ವಾಸವಾನುಜ ಜಗನ್ನಾಥವಿಠಲ ನಿನ್ನವರ ಸಲ ಹೋ ಸಮರ್ಥಾ ಕರ್ತಾ 5
--------------
ಜಗನ್ನಾಥದಾಸರು