ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗಾಭೋಗ ಚಿಕ್ಕ ಮಗುವಾದ ಪ್ರಹ್ಲಾದ ದೇವನನು ರಕ್ಕಸನು ಪಿಡಿದತಿ ಹಿಂಸೆಪಡಿಸುವದ ನೋಡಿ ಉಕ್ಕಿಬರುತಿಹ ಕೋಪದಿಂ ಕಿಡಿಕಿಡಿಯಾಗಿ ಉಕ್ಕಿನ ಕಂಬದಿಂ ಉರಿಯ ಕಾರುತ ಬಂದು ಪಕ್ಕಿದೇರನು ಹಿರಣ್ಯಕಶಿಪನ ಪಿಡಿದು ತಾ ಉರ ಬಗೆದು ಕರುಳ ಮಾಲೆಯ ಗಕ್ಕನೆ ಗಳಕಿಕ್ಕಿಕೊಂಡು ಆರ್ಭಟಿಸಿದಂದು ಲಕ್ಕುಮಿಯಾದಿಯಾಗಿ ಮುಕ್ಕೋಟಿ ದೇವತೆಗಳು ಬೆದರಿ ದಿಕ್ಕೆಟ್ಟು ಗಡ ಗಡ ನಡುಗುತಿರಲಾಗ ಅಕ್ಕರದ ಭಕುತ ಪ್ರಹ್ಲಾದ ಬರೆ ಬಿಗಿಯಪ್ಪಿ ತಕ್ಕೈಸಿ ಮುಂಡಾಡಿ ಪ್ರಸನ್ನನಾದನು ತನ್ನ ಭಕ್ತರೊಳಿನ್ನೆಷ್ಟು ಪ್ರೀತಿಯೋ ರಂಗೇಶವಿಠಲಗೆ
--------------
ರಂಗೇಶವಿಠಲದಾಸರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ಮರೆಯದಿರುವರೋ ನಿನ್ನ ಸ್ಮರಣೆಯಾ ನೀನು ಪ ಗರಿಯಾ ಚರಿಯಾ ಮರಿಯಾ ನೆರಿಯಾ | ಸೇರಿ ಕ್ರೂರ ಮಾರಿದಾರಿ ಜಾರಿ ದೂರಸಾರದೇ ಅ.ಪ ಕಡಲಶಯನೆಚ್ಚರಾ ಕಳೆದು ಹೊರಿಯಲುದರಾ | ಬಿಡದೋಲೈಸಿ ಘನಮದರಾ | ಕಡಿಯಾ ಕಿಡಿಯಾ ನುಡಿಯಾ ಪಡಿಯಾ | ಬೇಡಿ ಕಾಡಿ ಓಡಿ ಆಡ ಬ್ಯಾಡ ಗಾಢ ಮೂಢನೇ 1 ತರಳ ಪ್ರಾಯ ಮುಪ್ಪಿಂದೆ ತೀರಲಾಯುಷ್ಯ ಬರುದೇ | ಯರಗುವಾಯಮ ತಾ ನಿಲದೇ | ತ್ವರಿಯಾ ಧರಿಯಾ ಕುರಯಾ ಮರಿಯಾ | ವೈರಿ ಮೀರಿ ಹಾರಿ ತೂರಿ ಹೊರುವಂದದಿ 2 ಮಿನಗು ಬೆಳಗ ಘನ ಮಹಿಪತಿ ಸುತ ಪ್ರಿಯನಾ | ಅನುಭದಿಸದಿಹುದೇನಾ | ಅನುವೇ ಮನವೇ ಗುಣವೇ ದನವೇ | ಜ್ಞಾನ ಹೀನ ಮಾನ ದೀನ ಆನನದಲೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವೈರಾಗ್ಯದಾವಾಗ್ನಿ ಉರಿಯು ಛಟಿಛಟಿಸಿತುಸರ್ವಪ್ರಪಂಚವೆಲ್ಲವ ಅಟ್ಟಟ್ಟಿ ಸುಟ್ಟಿತುಪಸತಿಸುತರು ಎಂಬ ಹೆಮ್ಮರವೀಗ ಸುಟ್ಟವುಪಿತೃ ಮಾತೃವೆಂಬ ಪಲ್ಲವ ಕರಿಕಿಟ್ಟಿತುಹಿತವೆಂಬ ಬಳ್ಳಿಗಳು ಅನಿಲ ಪುಟ್ಟವಿಟ್ಟವುಅತಿಭಾಗ್ಯವೆಂದೆಂಬ ಸಿಂಗಾರ ಹೊಗೆಯಿಟ್ಟವು1ಏಸೋ ಬಂಧುಗಳೆಂಬ ಧ್ರುಮವು ಶಿಖಿಸೋಂಕಿದವುಕ್ಲೇಶವೆಂದೆಂಬ ಕರಡವು ಭುಗಿ ಭುಗಿ ಲೆಂದವುವಾಸಗಳೆಂದೆಂಬಕುಡಿಕಿಡಿಯಾಗಿ ಉದುರಿದವುಆಸೆ ಎಂಬ ಫಲ ವಹ್ನಿಗಾಹಾರವಾದವು2ಘನಭ್ರಾಂತಿ ಎಂಬ ಪಕ್ಷಿಗಳು ಹಾರಿಹೋದವುಮನೆಯೆಂಬ ಗೂಡುಗಳು ನಿಗಿನಿಗಿಯಾದವುಬಿನುಗುಚಿಂತೆ ಎಂಬ ಹರಿಣ ಮುಗ್ಗರಿಸಿದವುಮನಸಿಜನ ಕ್ರೋಧವೆಂಬ ಕಳ್ಳರು ಸತ್ತಿಹರು3ಅಷ್ಟಮದದಾನೆ ಎಂಬುವು ಅಡವಿಯ ಹಿಡಿದವುತುಚ್ಛವಿಷಯಗಳೆಂಬ ನರಿಗಳೋಡಿದವುದುಷ್ಟಗುಣವೆಂದೆಂಬ ದುರ್ಜನ ಮೃಗವು ಚಲ್ಲಿದವುಕಷ್ಟ ತಾಪತ್ರಯದ ಕತ್ತಲು ಹರಿಯಿತು4ಇಂತು ಪ್ರಪಂಚವೆಂಬೀ ವೈರಾಗ್ಯದಾವಾಗ್ನಿಯಂತೆ ಧಗಧಗನೆ ಝಗಝಗನೆ ಸುಡುತಲಿಚಿಂತಯಕ ಚಿದಾನಂದ ಉರಿಯು ಅಖಂಡವಾಗಿಶಾಂತರೆಂಬರ ಮುಕ್ತರುಗಳ ಮಾಡಿತ್ತು5
--------------
ಚಿದಾನಂದ ಅವಧೂತರು