ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾರೇನೆಂಬುರೈ|ಹರಿ ಭಕ್ತರಿಗೆ|ದಾರಲ್ಲವೆಂಬುರೈ ಪ ಗುರುವಿನಂಘ್ರಿವಿಡಿದು|ಗುರುತುಕೀಲವರಿತು ನಿಜಾ| ಪರಮಾನಂದ ಸುಖಾ|ಸುರಸನುಂಬುವರಿಗೇ 1 ಕುತ್ಸಿತ ಮಾರ್ಗವನೆಲ್ಲಾ|ಕೊಚ್ಚಿಜರಿದು ಧರಿಯೊಳು| ಅಚ್ಯುತ ಪರದೈವನೆಂದು|ನೆಚ್ಚಿದ ಮಹಿಮೆಗೆ 2 ಮಾಧವ ಮುದ್ರೆಯಿಂದ|ದ್ವಾದಶ ನಾಮವನಿಟ್ಟು| ಪದುಮಾ ತುಳಸೀಸರ|ಹೃದಯದಲ್ಲಿ ಮೆರೆವಂಗೆ 3 ನಷ್ಟನೃಪರಾ ಮನೆಯಾ|ತನಿಷ್ಟೆಯೊಳು ಲೆಕ್ಕಿಸದೆ| ಹುಟ್ಟಿದ ಲಾಭದಲ್ಲಿ|ತುಷ್ಟಿ ಬಟ್ಟಿರುವಂಗೆ 4 ಅವರವರಂತೆ ಲೋಕ|ದವರಿಗೆ ತೋರುತಾ| ವಿವರಿಸಿ ವಿವೇಕ ಹಾದಿ|ಭವದಾ ಬೇರಿಳಿದಂಗೆ 5 ತಾಳದಂಗಡಿಗೆಯ ಸಿಡಿದು|ಮೇಳ ಭಾಗವತರೊಳು| ಶ್ರೀಲೋಲನನು ಪಾಡಿ|ನಲಿದಾಡುತಿಹರಿಂಗೆ 6 ತಂದೆ ಮಹಿಪತಿ ನಿಜಾ|ನಂದನ ಸಾರಿದ ನುಡಿ| ಹೊಂದಿ ಭಾವಭಕ್ತಿಯಿಂದ|ಛಂದವಾಗಿಪ್ಪರಿಂಗೆ7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಿನಗ್ಯಾಕೋ ಜನರಂಜನೆ | ವಣಾ ಭಂಜನೆ ಪ ಎಲ್ಲವಿದ್ಯವ ಸಾಧಿಸಿ ಮೆರೆಯಬೇಕೆಂಬ | ಬಲ್ಲವಿಕೆ ಹೆಮ್ಮೆಗೆ ಬೀಳುರೆ | ಯಳ್ಳಿಗೆ ಬೆಲ್ಲವ ಹುಯಲು ಹೋದಂತವಯ | ಸುಳ್ಳಿನ ಭ್ರಾಂತಿ ಕಳುವರೇ 1 ಹೆಣಗುತಿ ದೀಕ್ಷಿತನೆಂಬ ಮನ್ನಣಿಗ್ಯಾಗಿ | ದಣಿವರೆ ಕರ್ಮದಿ ದಣ್ಣನೆ | ಮುಣುಗುವವನ ತೆಲಿಮ್ಯಾಲ ಕಲ್ಲನ್ನಿಟ್ಟರೆ | ಗಣಿಸದೇ ದಾಟಲು ಬಲ್ಲನೆ 2 ಶರಣ ಕೊಳಬೇಕೆಂದು ಬೂದಿ ರುದ್ರಾಕ್ಷಿಯ | ಧರಿಸಿ ಕಾವಿಯ ಸೋಗು ಮಾಡುವರೆ | ಹರುಷದಿ ಖಜ್ಜಿಗೆ ಬಿಸಿನೀರು ಹೊಯ್ದಂತೆ | ಮರುಳೆ ಜನ್ಮ ಸಾಧನ ಕೂಡುರೇ 3 ಕಾಲನುಕೂಲವಿದ್ದ ಕೈಯಲಿ ಪರಗತಿ | ಕೀಲವರಿತು ಜ್ಞಾನ ಪಡೆವುದ | ಕೊಳ್ಳೆ ಹೋದ ಬಳಿಕ ಕೂಗುವ ಪರಿಯಲಿ | ಚಾಲವರಿದರಾಗ ಬಾರದು 4 ಒಂದೇ ನಿಷ್ಠೆ ಒಂದೇ ಮಾರ್ಗದಿ ಮನ | ದಂದುಗ ಬಿಟ್ಟು ಶರಣ ಹೊಕ್ಕರೆ | ತಂದೆ ಮಹಿಪತಿ ಸುತ ಪ್ರಭು ಬೀರುವ | ಮಂದನಾಗದೇ ತಿಳಿ ಇನ್ನಾದರೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು