ಒಟ್ಟು 6 ಕಡೆಗಳಲ್ಲಿ , 6 ದಾಸರು , 6 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ನೆರೆ ಪ್ರಚಂಡ ಬರತಕದ ನಿರಗೊಡದ ಮನ್ಮಥನ ಪರಿಯನೆಲ್ಲ ಕೇಳು ಕೆಳದಿ ಸುರಪುರದ ಕರಿವರದ ಗರುಹಿದಡೆ ಮುತ್ತಿನ ಸರದ ಹಾರವ ನೀವೆ ಕೆಳದೀ ಪ ಸಸಿ ಬಿಂಬ ದೆಸೆ ತುಂಬಿ ಪಸರಿಸಿತೆಂಬುದನು ಪಿಕ ಕುಸುಮಾಂಬರಗೆ ಪೇಳೆ ಕೆಳದೀ ಮಸರೆಳೆಯದಸು ಬಿಳಿ ಯೆಸಳು ಕೇದಗೆಯಲರ ಹಸಮಾಡಿದನು ನಲಿದು ಕೇಳದಿ 1 ಅಸಿನನೆಯ ಹೊಸಮನೆಯ ಬಿಸುಗಣೆಯೆಂದಳೆಸೆಯೆಮಣಿಸಲುತರಹರಿಸುವುದುಕೆಳದಿ ಬಿಸಜಾಕ್ಷನ ನುಶಿಕ್ಷಣದಿ ತನು ಉಚ್ಚಿಕಡುಸುಡುತಲಿದೆ ನೀ ಸಾಕ್ಷಿ ಕೆಳದೀ 2 ತಂಬೆಲರ ಮುಂಬೆಲರ ಪಂಬೆಲರನುಳಿದು ಮರಿ- ದುಂಬಿಗಳ ಸಂಭ್ರಮದಿ ಕೇಳದ ಕೆಳದೀ ಬೆಂಬಿಡದೆ ಇಂಬುಗೊಂಡಂಬುಜಾಸ್ತ್ರವ ತುಡುಕಿ 3 ಪೊಂಬಲಕೆ ಕೊಳಗಾದೆ ಕೆಳದೀ ಪಣೆ ಯೆಂಬುವಗೆ ಕುಂಬಿನಿಯೊಳೇ ಮಣಿಹ- ದೆಂಬುದನು ಕೊಡಬಹುದೆ ಕೆಳದೀ 4 ನಂಬಿದಳು ಕಂಬನಿಯ ತುಂಬಿರಲು ಸಖಿಯರೊಳು ಗಾಂಭೀರ್ಯತನವಹುದೇ ಕೆಳದಿ ಕಂತುಶರವಂತಿರದೆಂತೊರೆಯಬಹುದೆನಗೆ ಚಿಂತೆ ತಲ್ಲಣ ಕೆಳದೀ 5 ದಂತಿ ನಡೆಯಂತೆ ಬೆಡಗಿಂತವಳ ಕಾಣೆ ಗುಣ ವಂತೆ ವಿಧಾನ್ಯಾಯದಲಿ ಸಂತೈಸಿ ಯೆನ್ನ ನೆರೆವಂತೆ ಸುರಪುರದ ಲಕ್ಷ್ಮೀ ಕಾಂತನಿಗೆ ಬಿನ್ನಯಿಸು ಕೆಳದೀ 6
--------------
ಕವಿ ಲಕ್ಷ್ಮೀಶ
ಬಲ್ಲವನಿವನು ಚಿಕ್ಕವನಲ್ಲವೆ ಬಾಲಕನು ಇಲ್ಲದ ನುಡಿಗಳ ಎನ್ನೊಡನುಸುರಲು ಇಲ್ಲಿಗೆ ಬಂದಿರೆ ಗೋಪಿಯರÉಲ್ಲರು ಪ ಮಣಿಮಯದೊಡಿಗೆಯನು ತೆಗೆತೆಗೆದ್ಹಣಿವನೆ ಬಲ್ಲವನು ಉಣಲೊಲ್ಲ ಉಡಲೊಲ್ಲ ಚಲಗೊಂಡಳುವ ಜಾರ ಚೋರನಂಬರೇ 1 ಹೆಣ್ಣಿಗೆ ಮರುಳಾಗುವ ಪ್ರಾಯವೆ ಕಣ್ಣು ನಿಮಗೆ ಕಾಣವೆ ಸಣ್ಣವನಿವಗೆ ನಿಲುಕದ ನೆಲುವಿನ ಪಾ ಲ್ಬೆಣ್ಣೆಯ ಮೆದ್ದೋಡಿ ಬಂದನೆಂದೆಂಬರೆ 2 ಅಂಬರದೊಳು ಮೂಡಿದ ಚಂದ್ರಬಿಂಬವ ತಾರೆನುತ ಕುಂಬಿನಿಯೊಳು ಬಿದ್ದು ಹೊರಳುವ ತರಳ ಹಿಡಿಂಬೆಯ ರಮಣ ಕೋಣೆಯ ಲಕ್ಷ್ಮೀರಮಣನು 3
--------------
ಕವಿ ಪರಮದೇವದಾಸರು
ಭವ ಭಯದೊಳು ಬಿದ್ದು ಬರಲಾರೆನೆಂದು ಪ ಅಂಬೆಗಾಲೂರುತ್ತ ಕುಂಬಿಣಿ ತಿರುಗುತಡೊಂಬನಂಥ ಹೊಟ್ಟೆ ಎಳೆಯಲಾರೆನೆಂದು 1 ಕಂದನಾಗಿ ಬಂದು ಹಿಂದು ಮುಂದರಿಯದೆಇಂದುಧರನ ರೂಪ ಕಣ್ಣೊಳಗಿಟ್ಟುಕೊಂಡು 2 ಜನನ ಮರಣ ಹುಟ್ಟು ಮುರಿದು ಮೂಲ್ಯಾಗಿಟ್ಟುಚಿದಾನಂದ ಸ್ವಾಮಿನ್ನ ಕೂಡಿಕೊಂಡೆನೆಂದು 3
--------------
ಚಿದಾನಂದ ಅವಧೂತರು
ಸಖಿಸು ವರದ ಕೊಂಡು ಉಂಡು ನಾಮಾಮೃತವನು ಪ ಅಂಬರಲಿ ಧೃವ|ಕುಂಬಿನಿಲಿ ಜಾಂಬವ| ಅಂಬುಧಿಯೊಳು ವಿಭೀಷಣನು 1 ಸುತಳದಿ ಬಲಿನೋಡಿ ನುತ ಪ್ರಹ್ಲಾದೊಡಗೂಡಿ| ಅತಿಶಯಾನಂದದಿ ತಾನು 2 ಗುರು ಮಹಿಪತಿಸುತ ಗರುಹಿದ ನಿಜಹಿತ| ಹರಿಶರಣರ ನೋಡೋ ನೀನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೊಲೆಯ ಹೊಲತಿ ಇವರವರಲ್ಲಹೊಲಗೇರಿಯೊಳು ಹೊಲೆಯ ಹೊಲತಿಯಿಲ್ಲ ಪ.ಸತಿಯಳ ವಶನಾಗಿಜನನಿ - ಜನಕರಿಗೆಅತಿ ನಿಷ್ಟುರ ನುಡಿವವ ಹೊಲೆಯಸುತರ ಪಡೆದು ವಾರ್ಧಿಕ್ಯ ಮದವೇರಿಪತಿದ್ಟೇಷ ಮಾಡುವಳೆ ಹೊಲತಿ 1ಗುರುಗಳಲ್ಲಿ ವಿದ್ಯೆಗಳನು ಕಲಿತುಹಿರಿಯರ ಬಳಲಿಸುವವ ಹೊಲೆಯಪರಪುರಷಗೊಲಿದು ತನ್ನ ಪುರುಷನವಿರಸವ ಮಾಡುವ ಕುಲಕೇಡಿತೆ ಹೊಲತಿ 2ಒಡೆಯನನ್ನವನುಂಡು ಅಡಿಗಡಿಗೆ ಬಾಯ್ಬಿಡದೆ ತರ್ಕಿಸುವ ಜಡ ಹೊಲೆಯಬಡತನ ಬಂದರೆ ಪುರುಷನ ರಚ್ಚೆಗೆಬಿಡದೆ ತಹಳೆ ಶುದ್ಧ ಹೊಲತಿ 3ನೂರೊಂದು ಕುಲ ಕುಂಬಿಪಾಕಕಟ್ಟುವಪರನಾರಿಯಲ್ಲಿ ವೀರ್ಯವಿಟ್ಟವ ಹೊಲೆಯಆರೊಳು ಕಲಹಾಪಸ್ಮಾರಿ ದುರ್ಮುಖಿಯು - ಕಠೋರಕುಮತಿ ಶುದ್ಧ ಹೊಲತಿ 4ಅಜನುತ ಪುರಂದರವಿಠಲನ ದಾಸರಭಜನೆಯ ದಾರಿಯ ಬಿಟ್ಟವ ಹೊಲೆಯನಿಜವರ್ಯರಾದ ಸಜ್ಜನರ ಪಾದಪದ್ಮವಭಜಿಸದಿರುವಳೆ ಶುದ್ಧ ಹೊಲತಿ 5
--------------
ಪುರಂದರದಾಸರು