ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮುಂದೋರುವನು ಮುರಾರಿಎಂದೆಂದು ಕುಜನಕೆ ದೂರನುಶೌರಿಪ.ಘನಭಾಗವತಶ್ರವಣವ ಮಾಳ್ಪರಿಗೆವನಜನಾಭನ ಸಂಕೀರ್ತನೆ ಕಾಮೇಷ್ಟರಿಗೆಮುನಿವಂದ್ಯ ಕೃಷ್ಣನ ಮನಸಲಿ ಮರಿಯದೆಗುಣಕರ್ಮನಾಮ ಸ್ಮರಣೆಯಲಿಹರಿಗೆ1ಶ್ರೀ ವಾಸುದೇವಾಂಘ್ರಿ ಸೇವಾಸಕ್ತರಿಗೆಶ್ರೀವರನರ್ಚನೆ ಸದ್ಭಾವಯುಕ್ತರಿಗೆಸಾವಿರಭಿದಾನದ ದೇವದೇವಗೆ ಸರ್ವದಾ ವಂದಿಸುವ ವ್ಯಾಸಂಗವಿಡಿದರಿಗೆ 2ಶೇಷಶಯನನ ಸದ್ದಾಸರಾದರಿಗೆದೋಷದೂರನ ಸಖರಹ ಸಜ್ಜೀವರಿಗೆಪ್ರಸನ್ವೆಂಕಟವಾಸಗೆ ತನ್ನನರ್ಪಿಸಿ ಮುಕುತಿ ಮನೆಯಾಸೆವಂತರಿಗೆ 3
--------------
ಪ್ರಸನ್ನವೆಂಕಟದಾಸರು
ರಾಯನ ನೋಡಿರೋ - ಮಧ್ವ - ರಾಯನ ಪಾಡಿರೊ ಪಅಂಜನೆಯಲಿ ಹುಟ್ಟಿ ಅಂಬರಕಡರಿದಹರಿಯೋ - ಸಿಂಹದ - ಮರಿಯೋ |ಕಂಜಾಕ್ಷಿಯ ಸುದ್ದಿಗೆ ಶರಧಿಯ ಲಂಘಿಸಿದ-ಪುರ- ಸಂಧಿಸಿದಅಂಜದೆ ವನವನು ಕಿತ್ತಿದ ಪುರವನುಸುಟ್ಟ - ತಾ ಬಲು - ದಿಟ್ಟಾ |ಸಂಜೀವನ ಗಿರಿ ತಂದು ವಾನರರಪೊರೆದಾ - ರಾಮನ - ಬೆರೆದಾ 1ಕುಂತಿ ಕುಮಾರನು ಶೀಮೆಗೆ ಹರುಷದಿಬೆಳೆದ - ಖಳರನು - ತುಳಿದ |ಅಂತ ಕೌರವ - ದುಶ್ಯಾಸನರಾ ಶಿರತರೆದಾ - ಚಲವನು - ಮೆರೆದ |ಸಂತಾಪವ ಪಡಿಸಿದ ಕುಜನಕೆ ಭೀಮ -ನಾದ -ಸನ್ನುತ- ನಾದ |ಕಂತುಜನಕಶ್ರೀ ಕೃಷ್ಣನ ಪಾದದಿಬಿದ್ದ - ಮದಗಜ - ಗೆದ್ದ 2ಮುನಿಕುಲದಲಿ ಉದಿಸಿದ ಗುರುಮಧ್ವ ತಾನಾದ - ಧರೆಯಲಿ - ಮೆರೆದ |ಅನಿಮಿಷರೊಡೆಯ ಶ್ರೀವೇದವ್ಯಾಸರಚರಣ-ಅನುದಿನ- ಸ್ಮರಣ |ಕನಸೊಳು ಕಾಣದ ಅದ್ವೈತಂಗಳಮುರಿದ - ತತ್ತ್ವ - ತೋರಿದ |ಘನಮಹಿಮ ಶ್ರೀಪುರಂದರವಿಠಲನದಾಸ - ಪಡೆದ - ಸನ್ಯಾಸ 3
--------------
ಪುರಂದರದಾಸರು