ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಪರಿಯಲಿ ನಿನ್ನನು ವೊಲಿಸುವೆ ದೇವ ಎನ್ನೊಳಗೆ ಒಂದಾದರೂ ಗುಣವಿಲ್ಲಾ ಪ ಅರಿಯೆ ಧರ್ಮವ ಪಾಪ | ಮರಿಯೆ ಉತ್ತಮರನ್ನ ಕರಿಯೆ ನಾಮಕೆ ಬಾಯಿ | ತೆರಿಯೆ ಸುರಿಯೆ ಜರಿಯೆ ಮೋºಕೆ ಮನ | ಮುರಿಯೆ ವ್ಯಾಕುಲ ಜ್ಞಾನಾಂ | ಕುರಿಯ ನಿನ್ನವರೊಳು | ಬೆರಿಯೆನರಿಯೆ ಸರಿಯೆ ದುಸ್ಸಂಗ ಕಥಾ | ಬರಿಯೆ ಕರದಿ ಯಾತ್ರಿಗೆ ಹರಿಯೆ ಪುಣ್ಯ ತೀರ್ಥ | ವರಿಯೆ ಮೊರಿಯೆ ಹರಿಯೆ ಜಗದೊರೆಯೆ | ಸಿರಿದೊರೆಯೆ ಅಘ ಕರಿಗೆ ಕೇಸರಿಯೆ ಮತ್ತಾ | ರರಿಯೆ ನಿನ್ನವರ ಮರಿಯೆ1 ನಡಿಯೆ ಸುಮಾರ್ಗ ವ್ರತವಿಡಿಯೆ ಮುಡಿದ ಪೂವು ಮುಡಿಯೆ ಕಾಮದ ಮರ್ಮ | ತಡಿಯೆ ಕಡಿಯೇ ಕುಡಿಯೆ ಪಾಪೋದಕವ ನುಡಿಯೆ ಮಂಗಳ ವಾರ್ತಿ ಪಿಡಿಯೆ ಭಕುತಿ ನೀತಿ ಪಿಡಿಯೆ ಗುಡಿಯೇ ಸುಕೃತಿ ಕಾಳ | ಗೆಡಿಯೆ ಪರರೊಸ್ತಕ್ಕೆ ತೊಡಿಯೆ ಚಿಂತಾತುರವ | ವುಧಿಯೆ ಹೊಡಿಯೆ ಕೊಡಿಯೆ ಎನ್ನಗೊಡಿಯೆ ನೆಂ | ದೆಡೆಯಲ್ಲಿ ಸೂಸಿದಾ ಪುಡಿಯಲ್ಲಿ ವೊಡಬೆರಸೆ | ಅಡಿಗಡಿಗೆ ಎನ್ನ ಕಡಿಗೆ 2 ಸುಳಿಯೆ ಕೀರ್ತನಿಗೆ ಮದ | ವಳಿಯೆ ಗುರುನಿಂದಕರ ಹಳಿಯೆ ಕಾಮದ ಕುಪ್ಪೆ | ಕಳಿಯೆ ಬಳಿಯೆ ತೊಳಿಯೆ ಮನನ ನರಕಕ್ಕೆ | ಮುಳಿಯೆ ಸುಮತಿಮಾರ್ಗ ತಿಳಿಯೆ ಪದವಿಗೆ ಪೋಗಿ | ಇಳಿಯೆ ಬೆಳಿಯೆ ಛಳಿಯೆ ಮುಂದಿನ ಜನನ | ಹೊಳೆಯೆಂಬೋದು ಅರಿದು ಸಂಚಿತ ಕರ್ಮ | ವಳಿಯೆ ತುಳಿಯೆ ವುಳಿಯೆ ಬೊಬ್ಬುಳಿಯೆ ಈ | ಕಳೆಯೇನುವಲ್ಲನಭ ಸುಳಿ ಹೃದಯಾವಳಿಯಲ್ಲಿ | ವಿಜಯವಿಠ್ಠಲವೊಳಿಯೆ3
--------------
ವಿಜಯದಾಸ
ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ದೂರ ತರುವಿರೇನೆ ಕೃಷ್ಣನ ಮೇಲೆ ಪ ದೂರ ತರುವಿರೇನೆ ಚೋರಾಗ್ರೇಸರನೆಂದು ಕ್ಷೀರ ತಕ್ರಗಳನ್ನು ಸೂರೆ ಮಾಡಿದನೆಂದು ಅ.ಪ ನೊರೆಹಾಲ ಕುಡಿಬಾ ದೊರೆ ಬಾರೋ ಬಾ ಎಂದು ಕರದಿಂದಲೆತ್ತಿ ಮುತ್ತಿಟ್ಟೆಯಂತೆ ಬಿರುಗಾಳಿ ಬಂತೆಂದು ಬಿಗಿದಪ್ಪಿ ಕೊರಳಿಂಗೆ ಕೊರಳಿಟ್ಟು ಬರಿಗೈಯ ತೋರಿದೆಯಂತೆ 1 ಹಸಿದೆ ಬಾ ಕಂದ ಮೊಸರ ಕುಡಿಯೆಂದು ಹುಸಿನಗೆಯ ಬೀರಿ ಕೈಹಿಡಿದರವಳು ಉಸಿರಾಡದಂತೆ ಅಧರಕಧರವನ್ನಿಟ್ಟು ಹಸಿವಾರಿತಿನ್ನು ನೀ ಹೋಗೆಂದಳಂತೆ 2 ಮಲ್ಲಿಗೆ ಹಾಸಿನಲ್ಲಿ ಮಲಗು ಬಾರೆನ್ನುತ ಬೆಲ್ಲ ತುಪ್ಪವ ನೀ ತಿನ್ನಿಸಿದೆಯಂತೆ ಹಲ್ಲ ತೋರಿಸು ಹೊಂಬೆಳಕ ನೋಡುವೆನೆಂದು ಮೆಲ್ಲನೆ ಬಾಗಿ ಬಾಗಿ ಗಲ್ಲವ ಕಚ್ಚಿದೆಯಂತೆ 3 ಬೆಣ್ಣೆಗಳ್ಳನು ಎಂದು ಹಿಂದೋಡಿ ಓಡಿ ಬಂದು ಸಣ್ಣ ತೋಳನು ಹಿಡಿದು ಎಳೆದಾಡಲವಳು ಕಣ್ಣಿನಲಿ ಕಣ್ಣಿಟ್ಟು ದೃಷ್ಟಿ ದೋಷವ ಬೀರೆ ಚಿಣ್ಣ ಮಾಂಗಿರಿರಂಗ ಕಣ್ಣಬಿಡಲೊಲ್ಲ ನೋಡೆ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಜಯದಾಸರ ಸ್ತೋತ್ರ ಪದಗಳು ಪರಮ ಹರುಷವಾಯಿತು ವಿಜಯರಾಯಗುರುಗಳಂಘ್ರಿಯನೆ ಕಂಡು ಪ ಪರಿಪರಿ ಜನುಮದ ಥರಥರದಘಗಳುತಿರುಗಿ ನೋಡದಲೇವೆ ತೆರಳಿ ಪೋದವು ಯಿಂದು ಅ.ಪ. ಕಾನನದೊಳು ತಿರುಗಿ ತನ್ನ ಮಾತಿ-ಯಾನು ಕಾಣದೆ ಚಿಂತಿಸಿ ||ಧೇನಿಸಿ ಅರಸಲಾಕ್ಷಣದೊಳಗವಳ ವತ್ಸತಾನು ಕೂಗಲು ಕಾಮಧೇನು ಒದಗಿದಂತೆ 1 ತರಣಿಯ ಕಿರಣದಿಂದ ತಪಿಸಿನೆರ ಬಾಯ ಬಿಡವುತ ಬಪ್ಪರನ ||ಕರವ ಪಿಡಿದು ಸುರತರುವಿನಡಿಯಲ್ಲಿ ಕು-ಳ್ಳಿರಿಸಿ ಕುಡಿಯೆ ದಿವ್ಯ ಸರಸಿಯನಿತ್ತಂತೆ 2 ಧನವ ಪೋಗಾಡಿ ಕೊಂಡು ನರನು ಬಲುಮನ ಕ್ಲೇಶದಿಂದಿರಲು ||ಘನ ಮಹಿಮನೆ ನಮ್ಮ ಮೋಹನ ವಿಠಲ-ವನ ಕೈಯ್ಯೊಳಗ ಚಿಂತಾಮಣಿಯನುಯಿತ್ತಂತೆ 3
--------------
ಮೋಹನದಾಸರು