ಒಟ್ಟು 4 ಕಡೆಗಳಲ್ಲಿ , 2 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜನಾಸುತ ವರದ | ವಿಠಲ ಪೊರೆ ಇವನಾ ಪ ಕಂಜಜನಯ್ಯ ಹರಿ | ಸಂಜೆ ಚರಹರನೇ ಅ.ಪ. ಕರ್ಮ | ಮಾಡಿ ಮಾಡಿಸುತಾಮತಿರಹಿತ ಜೀವನಿಗೆ | ಫಲ ಎಂಬ ತೆರಮಾಳ್ವೆಕೃತುಭುಜನೆ ಈ ತರಳ | ನುದ್ಧಾರಗೈಯ್ಯೊ 1 ಆದ್ಯಂತರಹಿತ ಸ | ದ್ಬುದ್ಧಿಗಳ ಪ್ರೇರಕನೆಶ್ರ್ರದ್ಧಾಳು ಎನಿಸಿವನ | ಮಧ್ವಮತದಲ್ಲೀಪದ್ಧತಿಯ ಪ್ರಕಾರ | ಬದ್ದನಾಗಿಹದಾಸಶುದ್ಧ ದೀಕ್ಷೆಯಲಿವನ | ಉದ್ಧರಿಸೋ ದೇವ 2 ಉತ್ತಮಾಧಮರೆಂಬ | ತತ್ವ ತರತಮ ತಿಳಿಸಿಆರ್ಥಿಯಿಂದಿವನ ಭಾವ | ಉತ್ತರಿಸೊ ಹರಿಯೇ |ಕತೃ ಸರ್ವಕೆ ನೀನೆ | ಅತ್ಯಂತ್ಯ ಆಪ್ತ ತಮಮತ್ತೊಬ್ಬರಿಲ್ಲಿವಗೆ | ಸ್ತುತ್ಯ ಶ್ರೀಹರಿಯೇ 3 ಕಂಸಾರಿ ತವತಾಮಶಂಸನಕೆ ಎಡೆಗೊಟ್ಟು | ಸಲಹ ಬೇಕಿವನಾಅಂಶ ಅವತಾರಗಳ | ಶಂಸನದಿ ತವಪಾದಪಾಂಸುವನೆ ಭಜಿಪಂಥ | ಸನ್ಮತಿಯನೀಯೊ 4 ಸತ್ಸಂಗ ದೊರಕಿಸುತ | ಕುತ್ಸಿತರ ದೂರಗೈಮತ್ಸ್ಯಧ್ವಜ ಪಿತ ಶ್ರೀ | ವತ್ಸಲಾಂಛನನೇನಿತ್ಯ ತವ ಸಂಸ್ಮರಣೆ | ಇತ್ತುಪಾಲಿಪುದಿವನಚಿತ್ಸುಖಪ್ರದ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಈರೇಳು ಲೋಕದೊಳಗೆ ಇವಗೆಣೆಗಾಣೆ ಗೋವಿಂದರಾಯನಿಗೆಮಾರನ್ನ ಪೆತ್ತ ಮನೋಹರ ಮೂರುತಿ ಗೋವಿಂದರಾಯನಿಗೆ ಪ. ನೀಲನೀರದನಿಭ ನಿರ್ಮಲಕಾಯ ಗೋವಿಂದರಾಯನಿಗೆಪಾಲಸಾಗರದಲ್ಲಿ ಪಡಿಸಿ ಪಾಲಿಪ ಗೋವಿಂದರಾಯನಿಗೆ1 ಕೂರ್ಮ ವರಾಹ ನಾರಸಿಂಹ ವಾಮನ ಗೋವಿಂದರಾಯನಿಗೆಕುತ್ಸಿತರಾಯರ ಕೊಂದÀ ಕೊಡಲಿಯ ಗೋವಿಂದರಾಯನಿಗೆ2 ಕಳೆವ ಶ್ರೀ ಗೋವಿಂದರಾಯನಿಗೆ 3ಕಡೆಗೋಲ ಪಿಡಿದು ನಮ್ಮುಡುಪಿಲಿ ನೆಲೆಸಿದ ಗೋವಿಂದರಾಯನಿಗೆಬಡನಡುವಿನ ಭಾವಕಿಯರೊಡನಾಡುವ ಗೋವಿಂದರಾಯನಿಗೆ 4 ವರ್ಣಿಸಿ ಪೊಗಳುವ ವಾದಿರಾಜಗೊಲಿದÀ ಗೋವಿಂದರಾಯನಿಗೆಚಿನ್ನದ ಚೆಲುವನೆ ಜಯ ಹಯವದನ ಶ್ರೀ ಗೋವಿಂದರಾಯನಿಗೆ 5
--------------
ವಾದಿರಾಜ
ಮಂಗಳದೇವಿಯರರಸಗೆ ತುಂಗಮಹಿಮ ತ್ರಿವಿಕ್ರಮಗೆ ಅಂಗನೆಯರು ಸಿರಿರಂಗಗಾರತಿಯನೆತ್ತಿದರೆ ಪ. ಶ್ರೀರುಕುಮಿಣಿ ಮೊದಲಾದ ನಾರಿಯರೆಲ್ಲರು ನೆರೆದು ವಾರಿಜದಳಲೋಚನಗಾರತಿಯನೆತ್ತಿದರೆ 1 ಮುತ್ತಿನ ಹರಿವಾಣದಲಿ ರತ್ನದ ಸಾಲ್ಗಳ ನೆರಪಿ ಚಿತ್ತಜನಯ್ಯಗೆ ಮುತ್ತ್ತಿನಾರತಿಯನೆತ್ತಿದÀರೆ 2 ಚಿನ್ನದ ಹರಿವಾಣದಲಿ ರನ್ನದ ಸಾಲ್ಗಳ ನೆರಪಿ ಚೆನ್ನಕೇಶವನಿಗೆ ಚಿನ್ನದಾರತಿಯನೆತ್ತಿದರೆ 3 ಹೃದಯದ ತಮವ ಗೆಲುವಗೆ ಸದುಗತಿಪಥವ ತೋರುವಗೆ ಸುದತಿಯರೆಲ್ಲರು ಮಂಗಳಾರತಿಯನೆತ್ತಿದರೆ 4 ಚಂದದ ಭೂಷಣಮಣಿಯೊಳು ನಂದಾದೀಪಗಳೆಲ್ಲ ಹೊಳೆಯೆ ಒಂದನಂತವ ಮಾಡಿಕೊಂಬಗಾರತಿಯನೆತ್ತಿದರೆ 5 ಕಂದರ್ಪಕೋಟಿಲಾವಣ್ಯಗೆ ಸೌಂದರ್ಯವಾದ ಮೂರುತಿಗೆ ಇಂದುಮುಖಿಯರೆಲ್ಲ ಮಂಗಳಾರತಿಯನೆತ್ತಿದರೆ 6 ಅಗಣಿತ ಗುಣಸಾಗರಗೆ ನಿಗಮವಂದಿತ ವೈಭವಗೆ ಅಘಕುಲದೂರಗೆ ಮಂಗಳಾರತಿಯೆನೆತ್ತಿದರೆ 7 ನಳಿತೋಳ್ಗಳ ನಸುನಗೆಯ ಹೊಳೆವ ಕಡಗ ಕಂಕಣದ ಸುಲಲಿತ ಕಾಂತಿಗೆ ಮಂಗಳಾರತಿಯೆತ್ತಿದರೆ 8 ಶೇಷವಂದಿತಪದಗೆ ಸುರೇಖಾದಿಗಳೊಡೆಯನಿಗೆ ಭಾಸುರಸುರಮಯಪೀಠಗಾರತಿಯನೆತ್ತಿದರೆ9 ಶ್ರೀಸತಿಯಪ್ಪಿಕೊಂಡಿಪ್ಪಗೆ ವಾಸುದೇವಾದಿವಿಗ್ರಹಗೆ ಕೇಶವ ನಾರಾಯಣಗಾರತಿಯನೆತ್ತಿದರೆ 10 ನಿಖಿಳ ಖಳರ ಸೀಳ್ದನಿಗೆ ಅಕುತೋಭಯನಿಗೆ ಮಂಗಳಾರತಿಯನೆತ್ತಿದರೆ 11 ಕೂರ್ಮ ವರಾಹನಿಗೆ ಕುತ್ಸಿತರೊಲ್ಲದ ಹರಿಗೆ ಚಿತ್ಸುಖರೂಪಗೆ ಮಂಗಳಾರತಿಯನೆತ್ತಿದರೆ12 ಶಂಕೆಯಿಲ್ಲದ ಹಯವದನಗೆ ಕಿಂಕರವರದ ಶ್ರೀಹರಿಗೆ ಪಂಕಜಮುಖಿಯರು ಮಂಗಳಾರತಿಯೆತ್ತಿದರೆ 13
--------------
ವಾದಿರಾಜ
ವೆಂಕಟಾ ಹರಿವಿಠಲ | ಪಂಕಕಳೆದಿವನಾ ಪ ಪಂಕಜಾಕ್ಷನೆ ದೇವ | ಕಾಪಾಡ ಬೇಕೋ ಅ.ಪ. ಅಂಧಕಾರದಲಿಪ್ಪ | ಮಂದಮತಿಯುದ್ಧರವಮಂದರೋದ್ಧಾರಿ ಹರಿ | ಮಾಡಿ ಪೊರೆಯಿವನಾ |ನಂದಮುನಿ ಮತ ತಿಳಿಸಿ | ಸಂದೇಹಗಳ ಕಳೆದುಸಂದೋಹ ಸಂಸ್ಥಿತನ | ಉದ್ಧರಿಸೊ ಬೇಕೋ 1 ಸೃಷ್ಟ್ಯಾದಿ ತವ ಮಹಿಮೆ | ನಿಷ್ಠೆಯಿಂದಲಿ ಭಜಿಪಸುಷ್ಠುಮನವನೆಯಿತ್ತು | ಕಾಪಾಡೊ ಹರಿಯೇಕೃಷ್ಣಮಾರುತಿ ಇವನ | ಕಷ್ಟ ಸಂಚಯ ಕಳೆದುಶ್ರೇಷ್ಠ ತವದಾಸ್ಯದಲಿ | ಇಟ್ಟು ಪೊರೆ ಇವನಾ 2 ಸತ್ಸಂಗ ಸದ್ವ್ಯಸನ | ಸನ್ಮಾರ್ಗದಲಿ ಇಟ್ಟುಕುತ್ಸಿತರ ಸಂಗವನು | ದೊರಗೈ ಹರಿಯೇ ಮತ್ಸ ಕೇತನ ಜನಕ | ಭಕ್ತವತ್ಸಲನಾಗಿವತ್ಸನ್ನ ಪೊರೆವವರು | ಮತ್ತಾರು ಇಹರೋ 3 ಹರಿಗುರುಗಳಾ ಸೇವಾ | ಪರಮ ಪ್ರೀತಿಲಿ ಮಾಳ್ವವರಮತಿಯನೇ ಕೊಟ್ಟು | ಪೊರೆಯ ಬೇಕಿವನಾ |ಹರಿಯ ನಾಮಾಮೃತವ | ನಿರುತದಲಿ ಸವಿದುಂಬಪರಮ ಸೌಭಾಗ್ಯವನೆ | ಕರುಣಿಸೋ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವ ಸ್ವಾತಂತ್ರನೇಭವವನದಿ ಉತ್ತರಿಸಿ | ಪೊರೆಯ ಬೇಕಿವನಾ |ದುರ್ವಿಭಾವ್ಯನೆ ಗುರು | ಗೋವಿಂದ ವಿಠಲನೇದರ್ವಿಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು