ಒಟ್ಟು 5 ಕಡೆಗಳಲ್ಲಿ , 3 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಶೆ ಅಳಿಯದೆ ಮನದ ರೋಷವಡಗದೆ | ವೇಷ ದಂಭಕಗೆಲ್ಲಿ ಶಿವಯೋಗವು ಪ| ತನ್ನ ತಾನರಿಯದೆ ಉನ್ಮತ್ತದಿಂದಲಿ ನನ್ನದು ನಾನೆಂದು ಜಲ್ಪಿಸುತ || ಕುನ್ನಿಯಂದದಿ ಕೋಟಲೆ ಯೊಳಗಿಹ ಹೀನ ಮನುಜಗೆಲ್ಲಿ ಶಿವಯೋಗವು 1 ಎಲಬು ತೊಗಲು ಮಲ ಮೂತ್ರದಿ ತೋರುವ | ಹೊಲಸಿನ ದೇಹವು ತಾನೆನುತ || ಹಲವು ಪಾಪಂಗಳನು ಹೇಸದೆ ಮಾಡುವ | ಕುಲಹೀನನಿಗೆಲ್ಲಿ ಶಿವ ಯೋಗವು 2 ಆರು ವೈರಿಗಳಿಗೆ ವಶವಾದನು ಈ ದೀನ | ವಾರಿಜನಾಭನ ಚರಣವನು || ಸೇರಿ ತನ್ನ ಹಿತವ ಮಾಡಿಕೊಳ್ಳದಾ- |ಚಾರಿಗೇಡಿಗೆಲ್ಲಿ ಶಿವ ಯೋಗವು 3 ಮೂರು ದೇಹಕೆ ಮೀರಿ ಬೇರೆ ತಾನಾಗದೆ | ಆರು ಇಂದ್ರಿಯಗಳಿಗೆ ವಶವಾಗಿಯು || ನಾರಿಯರ ಸಂಗ ಸುಖವ ಬಯಸುವ | ಕ್ರೂರ ಮನುಜನಿಗೆಲ್ಲಿ ಶಿವ ಯೋಗವು 4 ಶ್ರೀ ಗುರು ವಿಶ್ವಪತಿಯ ಪದ ಕಮಲವ | ಬೇಗದಿ ಸೇರಿ ಸುಖಿಯಾದೆ || ರಾಗರೋಷದಿ ತನ್ನಾಡಿತವ ತಾ ಮರೆತಂಥ | ಭೋಗಲಂಪಟಗೆಲ್ಲಿ ಶಿವಯೋಗವು ? 5
--------------
ನರಸಿಂಹ
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆಜರ ಇನ್ಯಾತಕೆ ಬಂತಮ್ಮಾ ಸಜ್ಜನರಿಗೆ ಪ ಪರಮೇಷ್ಠಿ ಜನಕಾನೆಪರನೆಂದು ತಿಳಿಸಾದೆ ಪರಗತಿಯ ತೋರದ ಅ.ಪ. ಸ್ನಾನವ ಮಾಡಿಕೊಂಡು ಕುಳಿತು ಬಲುಮೌನದಿಂದಿರಲೀಸಾದೆ ||ಶ್ರೀನಿವಾಸನ ಧ್ಯಾನ ಮಾಡಾದೆ ಮನಸುಶ್ವಾನನೋಪಾದಿಯಲ್ಲಿ ತಾ ಓಡುವಂಥ 1 ಜಪ ಮಾಡುವ ಕಾಲದಲ್ಲಿ ಕರೆಯ ಬರೆವಿಪರೀತವಾಗುವದು ಮನಸು ||ಸ್ವಪನದಂತೆ ಮನಸಿಗೆ ಪೊಳದು ಬಲುಸುಪಥವ ತಪ್ಪಿಸಿ ಅಪಗತಿ ಕೊಡುವಂಥ 2 ಯಜಮಾನನು ಮಾಡಿದ ಪಾಪಂಗಳವ್ರಜವು ಬಿಡದೆ ಅನ್ನದೊಳಗಿಪ್ಪುದ ||ದ್ವಿಜನು ಭುಂಜಿಸಲಾಗಿ ಅವನ ಉದರದೊಳುನಿಜವಾಗಿ ಇಪ್ಪಾವು ಸುಜನಾರು ಲಾಲಿಸಿ 3 ಉದರದೊಳಗೆ ಬಿಚ್ಚದ ಸಾವಿರಾರುವಿಧವಾಗುವದು ಕೇಳು ||ಅದೇ ದೇಹ ಪುಷ್ಟಿ ಮಲ ರೇತಸ್ಸುಅದೇ ಪಾಪಿಗೆ ತಿಳಿಯದೆ ಭುಜಿಸುವಂಥ 4 ಕೆಳಗೆ ಕುಳ್ಳಿರಿಸಿದಾರೆ ಜ್ಞಾನಿ-ಗಳ ಬೊಗಳುವೆ ಕುನ್ನಿಯಂದದಿ ||ಒಳಗೆ ಕರೆದು ಒಯ್ದು ಬೆಳಗಿಲಿಕುಳ್ಳಿರಿಸೆ ಸಾಯಂ ಪ್ರತಿ ಸ್ತುತಿ ಮಾಡುವಾ 5 ಪ್ರಸ್ತದಾ ಮನೆಯೊಳಗೆ ಕರೆಯಾದಲ್ಲಿಗೆಸ್ವಸ್ಥಾದಿ ನೀ ಕುಳಿತುಕೊಂಡು ||ವಿಸ್ತಾರದಿ ಹಾರೈಸಿ ಪ್ರ-ಶಸ್ತವಾಯಿತೆಂದೂ ಮಸ್ತಕ ತಿರುಹುವೆ 6 ಮಾಡಿದ ಮಹಾ ಪುಣ್ಯದ ಓದನಕಾಗಿಕಾಡಿಗೊಪ್ಪಿಸಿ ಪೋದಂತಾಯಿತು ||ಗಾಡಿಕಾರ ಮೋಹನ್ನ ವಿಠಲನಪಾಡಿ ಪೊಗಳಿ ಕೊಂಡಾಡಿಕೊಂಡಿರದಂತೆ 7
--------------
ಮೋಹನದಾಸರು
ಜಾತಿಭ್ರಷ್ಟ ಹೊಲೆಮಾದಿಗರಿವರಲ್ಲವೇನೋ ನೀತಿಬಾಹಿರರಾಗಿ ಆಚರಿಸುವವರು ಪ ಪನ್ನಂಗಶಯನ ಉನ್ನತ ಕತೆ ಕೀರ್ತ ನ್ಯನ್ನು ಕೇಳೆನೆ ಮುಖವನ್ನು ಹಿಂತಿರುವಿ ಭಿನ್ನ ಬೇಸರಿಲ್ಲದೆ ಅನ್ಯಜನ ಸುದ್ದಿಯೊಳು ಕುನ್ನಿಯಂದದಿ ದಿನಗಳನ್ನು ಕಳೆವವರು 1 ಆಲಯದ ಸತಿಯಳ ತಾಳದೆ ತುಸುತಪ್ಪು ತಾಳಿಯನ್ಹರಕೊಂಡು ದಾಳೀಯ ಹೊಡೆದು ಮೇಲುಜಾತಿಲಿ ಹುಟ್ಟಿ ಕೀಳು ಸೂಳೇರಿಗೊಲಿದು ಹೇಳಿದತೆರ ಕುಣಿದು ಬೀಳುಗಳೆವವರು 2 ಸದ್ಧರ್ಮಕಾರ್ಯಕ್ಕೆ ಇದ್ದುದ ಸಲ್ಲಿಸೆನಲು ಕದ್ದು ತಂದುಕೊಡುವೆವೆಂದಬದ್ಧ ನುಡಿಯುವವರು ಬದ್ಧ್ದ........ಬಂದು ಒದ್ದು ಕೂಡ್ರಿಸಲಾಗ ಸದ್ದಿಲ್ಲದೆ ತಂದು ಬೇಡಿದ್ದು ಕೊಡುವವರು 3 ಜ್ಞಾನಿಗಳು ಬಂದರೆ ಗೋಣೆತ್ತಿನೋಡದೆ ಹೀನಜನರಿಗೆ ಬಹುಮಾನ ಕೊಡುವವರು ಧ್ಯಾನ ದಾಸರ ತರದಿ ಜ್ಞಾನದ ಮಾತ್ಹೇಳಿ ಗೇಣ್ಹೊಟ್ಟಿಗೆ ಪರರ ಗೋಣು ಮುರಿವವರು 4 ತಾಸಿನ ಮೋಜೆಂಬ ನಾಶನ ಜಗಮಾಯ ಮೋಸನರಿಯದೆ ಯಮಪಾಶದೊಳು ಬಿದ್ದು ದಾಸಜನಪ್ರಿಯ ಜಗದೀಶ ಶ್ರೀರಾಮನ ಧ್ಯಾಸಮುರಿದು ದು:ಸ್ಸಹವಾಸದಿರುವವರು 5
--------------
ರಾಮದಾಸರು
ಬೇಗ ನೀಗಿಸು ದುರ್ಭೋಗದ ಸೆರೆಯ ನಾಗಶಯನ ಬಾಗಿ ಬೇಡುವೆ ಪ ನೀತಿಗೆಡಿಸಿ ಮಂಗನೆನಿಸಿ ಮಾತುಮಾತಿಗೆ ಭಂಗಬಡಿಸಿ ಪಾತಕನೆನಿಸಿ ದಂಗು ಹಿಡಿಸಿ ಘಾತಮಾಳ್ಪ ಹೊನ್ನಿನಾಸೆ 1 ಕುನ್ನಿಯಂದದಿ ಕುಣಿಸಿ ಕುಣಿಸಿ ಬನ್ನ ಬಡಿಸಿ ಬನ್ನಂಗನೆನಿಸಿ ಉನ್ನತ ಸುಖಗೆಲಿಪ ಹೇಸಿ ಗನ್ನಗತಕ ಹೆಣ್ಣಿನಾಸಿ 2 ಮೋಸಪಾಶದೊಳಗೆ ಮುಳುಗಿಸಿ ದೋಷದೆಳಸಿ ಮುತಿಯಕೆಡಸಿ ನಾಶ ಯಮನ ಕೊಲೆಗೀಡೆನಿಸಿ ಘಾಸಿ ಮಾಳ್ಪ ಹೆಣ್ಣಿನಾಸಿ 3 ಇಷ್ಟೆ ಜಗದ ಸುಖವಿದನು ಎಷ್ಟುನಂಬಿ ಫಲವೇನು ಅಷ್ಟು ಮಾಯವೆನಿಸಿ ಎನ್ನನು ನಷ್ಟಗೊಳಿಪ ಕೆಟ್ಟಾಸಿಯನು 4 ಮೀರಿ ಮಹ ಘೋರಬಡಿಸಿ ಸಾರಸುಖದ ಮಾರ್ಗ ಕೆಡಸಿ ಧೀರ ಶ್ರೀರಾಮ ನಿನ್ನ ಮರೆಸಿ ಗಾರುಮಾಳ್ಪ ಪಾಪರಾಸಿ 5
--------------
ರಾಮದಾಸರು