ಒಟ್ಟು 46 ಕಡೆಗಳಲ್ಲಿ , 20 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂದಕುಮಾರಾ ಮುಕುಂದಾ ಜನಾರ್ದನ ಮಂದರಧರ ಗೋವಿಂದ ಹರೇ ಪ ಸುಂದರ ಗೋಪಿ ಮಾಧವ ಕೇಶವಪತೇ ನಮೋ ಸಾಮಜಪಾಲನ ನಾಮಾ ನಮೋ ಭೂಮಿ ಸುತಾನ್ವಿತ ರಾಮಾ ನಮೋ ನಮೋ ಕಾಮಿತದಾತಾ ಪರೇಶಾ ನಮೋ ನಮೋ 1 ಅಕ್ಷಯಾತ್ಮ ಸುರಪಕ್ಷಾ ನಮೋ ನಮೋ ಪಕ್ಷಿಗಮನ ಪದುಮಾಕ್ಷಾ ನಮೋ ನಮೋ ಲಕ್ಷರೂಪ ಖಳಶಿಕ್ಷಾ ನಮೋ ನಮೋ [ರಕ್ಷಕ ಪಾಂಡವ ಪಕ್ಷ ನಮೋ] 2 ತುಂಗ ಕೃಪಾಂಬಕ ರಾಮಾ ನಮೋ ನಮೋ [ಮಂಗಳದಾಯಕ ಕೃಷ್ಣನಮೋ] ಅಂಗಜಾತ ಪಿತ ರಂಗ ನಮೋ ನಮೋ ಮಾಂಗಿರಿವಾಸ ಕೃಪಾಂಗಾ ನಮೋ ನಮೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಂಕಿತ-ಗಿರಿಧರಸುತ ಗುರುಮಹೀಪತಿರಾಯಾ | ಕೊಡು ಎನಗೆ ಸುಮತಿಯಾ ಪ ಭಕ್ತರ ಸುರಧೇನು | ಐಗಳಿ ವೃತ್ತಿಯನು | ಮನಕೆ ತಾರದೆ ಘನ ವ್ಯಾಪರವನು | ಮಾಡುತ ಭಾಗ್ಯವನು | ಮಾಡಲು ತಿಮ್ಮವ್ವನು 1 ಭಾಸ್ಕರ ಮುನಿ ಬಂದು | ಧಾರುಣಿ ಜನರುದ್ಧರಿಸಲಲ್ಲೆ ನಿಂದು | ಇರಲು ದಯಾಸಿಂಧು | ನಾರಿಶಿರೋಮಣಿ ದರುಶನಕ್ಕೆ ತಂದು | ನೀನೆ ಗತಿಯೆಂದು | ಆರು ತಿಂಗಳಾರಾಧಿಸೆ ಸಲಹೆಂದು | ದೀನಜನ ಬಂಧು | 2 ಸತಿಪತಿಗಳ ಚಿತ್ತಾ | ಆಗುದು ಎನೆ ವನಿತಾ | ನಮಿಸಲು ಗುರುತಾತ | ಆತರಿದನು ತವ ಮುಖವನು ಈಕ್ಷಿಸುತಾ ಪಕ್ವಾಫಲವೆನುತಾ 3 ಮಂದಹಾಸದಿಂ ನುಡಿದನು ನಿಜಗುಟ್ಟು | ವ್ಯಾಪಾರವ ಬಿಟ್ಟು | ಚಂದದಿ ಯಾಚಕ ವೃತ್ತಿಲಿ ಮನನಟ್ಟು | ಎನೆ ಸಮ್ಮತ ಬಟ್ಟು | ಮಂದಿ ಕುದುರಿಗೆಲ್ಲರಿಗಪ್ಪಣೆ ಕೊಟ್ಟು | ನಿಲ್ಲದ್ಹರುಷ ತೊಟ್ಟು | ಉಪದೇಶವ ಕೊಟ್ಟು 4 ಯೋಗಧಾರಣದ ಕೀಲವ ದೋರಿಸಲು | ದೂದಿಯವೋಲ್ | ನಾನಾ ಬಯಕೆಗಳು | ತ್ಯಾಗವ ಮಾಡುವ ಅನ್ನ ಉದಕಗಳು | ಕ್ಲಪ್ತಕೆ ನಿಲ್ಲಿಸಲು | ಮುಗಿದವು ಹಸ್ತಗಳು 5 ಭ್ರೂಮಧ್ಯದ್ವಿದಳದಾ | ದ್ವಾರವ ತ್ಯಜಿಸುತ್ತಾ | ತ್ರಿಕುಟ ಶ್ರೀಹಟ ಗೋಲ್ಹಟ ಗೋಪುರದಾ | ನೋಡುತ ಸಂಭ್ರಮದಾ | ಪಂಕಜದೊಳಗಿದ್ದ 6 ನಿತ್ಯ ಪ್ರಭೆಯು ಅನುದಿನಾ | ಕಾಣುತ ಸಂಪೂರ್ಣಾ | ತಿಳಕೊಂಡ್ಯೋ ಪ್ರವೀಣಾ | ದಿಂದಲೇ ಭಯಹರಣಾ 7 ಅಂತಹದು ಬೇಗ | ನೋಡೆಂದನು ಅನಘಾ | ನಿನ್ನಲ್ಲೇ ಈಗಾ | ದುಷ್ಕøತ ತರುನಾಗಾ 8 ಆಗುದು ನಿರ್ಧಾರಾ | ನಿನ್ನುದರದಿ ಕುವರಾ | ಸಂಶಯ ಬಿಡು ಅದರಾ | ಭಕ್ತರ ಸಹಕಾರಾ 9 ಮುನಿವರನಾಜ್ಞೆದಿ ಸ್ವಸ್ಥಾನಕೆ ಬರುತಾ | ಕೆಲ ದಿವಸಲ್ಲಿರುತಾ | ಸತ್ಪುರುಷರೆನಿಸುತಾ | ಇರಲು ದಯವಂತಾ | ವೇಧಿಯು ಬಂತೆನುತಾ 10 ಅಂತರಂಗದಲಿ ತಿಳಿಯತಲಾಗ್ರಾಮ | ತ್ಯಜಿಸಿದೆ ನಿಸ್ಸೀಮಾ | ಧಾಮಾ ಮಾಡಿದೆ ನಿಷ್ಕಾಮಾ | ಬಟ್ಟರು ಬಹುಪ್ರೇಮಾ | ಗುರುಸಾರ್ವಭೌಮಾ 11 ಅಲ್ಲಿ ಮೂರು ಸಂವತ್ಸರ ಇರಲಾಗಿ | ಶರಣ್ಹಾಳಿಯು ಬಾಗಿ | ಇಲ್ಲಿ ನೀವು ದಯಮಾಡುವದೊಳಿತಾಗಿ | ಸರಿ ಬಾರದಾಗಿ | ಬಂದ್ಯೋ ಮಹಾತ್ಯಾಗಿ | ಬರಲು ವರಯೋಗಿ12 ಕರೆದೊಯ್ದರು ಸ್ತುತಿಸಿ | ಕರಣಿಕ ತನ್ನಯ ಸ್ಥಳದಲಿ ಗೃಹ ರಚಿಸಿ | ಕೊಡಲಂಗೀಕರಿಸಿ | ಹರುಷದಿ ವರಭಾಸ್ಕರ ಮುನಿಕರ ಸರಿಸಿ | ರುಹಜಾತನೆನಿಸಿ | ಇರುತಿರೆ ತೋರಿತು ಸಂತತಿ ಉದ್ಭವಿಸಿ | ಗುರುವಾಕ್ಯಫಲಿಸಿ 13 ಆರಿಂದಾಗದು ನೈರಾಶ್ಯಾಚಾರಾ | ನಡೆಸಿದೆ ಗಂಭೀರಾ | ಧಾರುಣಿ ಜನರಿಂದಧಿಕೃತ ಸಂಸಾರ | ಜಲ ಪದ್ಮಪ್ರಕಾರಾ | ಅನುದಿನ ವೈರಾಗ್ಯದಾಗರಾ | ಸಂಪತ್ತು ಅಪಾರಾ | ತಿಳಿದ್ಯೋ ಸುಕುಮಾರಾ 14 ಕೊಟ್ಟರ್ಹಿಡಿಯಲಿಲ್ಲ ಓರ್ವರ ಧನವು | ಪೂರ್ವದ ಸಂಗ್ರಹವು | ಸತಿಸುತ ಪರಿವಾರವು | ಭಕ್ತರ ಸಮುದಾಯವು | ಮೃಷ್ಟಾನ್ನ ಭೋಜನವು 15 ತುಕ್ಕವ್ವಳು ನಿಮ್ಮತ್ತಿಗೆ ಭಾವಿಕಳು | ಪ್ರೀತಿಯ ಶೇವಕಳು | ಫಕ್ಕನೆ ವಿನಯದಿ ಮೃದು ಮಾತಾಡಿದಳು | ಸತ್ಪುರುಷರಿಳೆಯೊಳು | ಅಕ್ಕರದಲಿ ದೋರುವರು ಶಿದ್ಧಿಗಳು ನೀವೇನಿಲ್ಲೆನಲು | ಆದೀತೆಂದೆನಲು16 ಸೊಸಿಯೊಳು | ತುಕ್ಕವ್ವ ತಿಳಿಸಲು | ಕೈಯ್ಯನೆಳೆಯಲು | ನೋಡುತ ಬೆರಗಾದಳು 17 ಲೋಕವನುದ್ಧರಿಸಲು ನೀನವತರಿಸಿ | ಜಡದೇಹವ ಧರಿಸಿ | ಕೊಟ್ಯೋ ಗುಣರಾಶಿ | ಕೊಂಡ್ಯೋ ಸುಖವಾಸಿ | ಬಹು ನರಕದ ವಾಸಿ 18 ಜಗದೊಳಗಿಹ ಶಿದ್ಧರ ಮುಕುಟದ ಮಣಿಯೇ | ಸಾಧಕರೊಳಗೆಣೆಯೆ | ದುರಿತಾಂಧ ದ್ಯುಮಣಿಯೆ | ಕುಹಕರಿಗೇನ್ಹೊಣೆಯೆ | ವರಸತ್ವದ ಗುಣಿಯೆ 19 ಕಾಲ ತಪ್ಪಿಸುವದೇನೈ ನಿಮಗರಿದೆ | ಮನದೊಳು ನೀನರಿದೆ | ತಾಳಿದ ದೇಹವ ಸಾಕೆನುತಲಿ ಜರಿದೆ | ಚಿದ್ರೂಪವ ಬೆರೆದೆ | ಬಹು ಭಕ್ತರ ಪೊರೆದೆ | ತಡಮಾಡಗೊಡದೆ20
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಋ) ಕ್ಷೇತ್ರವರ್ಣನೆ (1) ಮೇಲುಕೋಟೆ ಯತಿರಾಜ ಸಂಪತ್ಕುಮಾರಾ ಸ ತ್ಕøತದೊಳಗಿರಿಸೆನ್ನ ಧೀರಾ ಪ ಸತತ ಶ್ರೀಮದ್ವೈಷ್ಣವರನಾ ನುತಿಸುವಾನಂದ ದೊಳಗಿರಿಸೈ ಪತಿತಪಾವನ ಕಂಕಣಾಧ್ರುತ ಕ್ಷಿತಿಯ ಪಾಲ ಮಹಾನುಭಾವನೆ 1 ನೋಡಲಿಚ್ಚೈಸಿ ನಾಂ ಬಂದೆ ನನ್ನ ಮೂಢಾಕೃತದೊಳು ನಿಂದೆ ಕೇಡುಗಳು ಬಂದೆನ್ನ ವಿಧ ವಿಧ ಬಾಧೆ ಪಡಿಸುತ್ತಿರುವದಿದೆಕೊ ನೋಡಿ ಸುಜನರ ಕೂಡಿ ಭಜನೆಯ ಮಾಡುವೆನು ಶ್ರೀಮಾಧವಾಗ್ರಣಿ 2 ತುಲಶಿಮಣಿಹಾರ ಲೀಲಾ ಸ ತ್ಫಲತಂತ್ರ ದಾಸಾನುಕೂಲಾ ಕಾಲಕಲನಹುದೊ ಶ್ರೀಮನ್ ಬಾಲಬ್ರಹ್ಮಚಾರಿ ಮದ್ಗುರು ಮೇಲುಕೋಟೆಯೊಳಿರುವೊ ನಿಜವರ ಲೀಲಾಮಾನುಷವಿಗ್ರಹನೆ ನಿಜ ಯತಿರಾಜ ಸಂಪತ್ಕುಮಾರಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಅನುದಿನ ನಿನ್ನ | ಸುಬ್ರಹ್ಮಣ್ಯ ಪ ಮಮ ಅಪರಾಧವ ಕ್ಷಮಿಸು ಪ್ರಸನ್ನ ಅ.ಪ ನೀಲಲೋಹಿತನ ಸುಕುಮಾರಾ ಸದ್ವಿಚಾರ | ಬಾಲಾರ್ಕಭಾಸ ಸುಶೀಲಾ ಅಪಾರಾ 1 ತಾರಕಾದ್ಯ ಸುರಾಳಿನಾಶಾ | ಶ್ರೀವಲ್ಲೀಶ | ಮಾರನಾಕಾರದ ಧೀರ ಗುಹೇಶ 2 ಶ್ರೀಶನ ಸಖ ದಾಸರಕ್ಷ | ಖಳ ಶಿಕ್ಷ | ಸಾಸಿರ ಪೆಸರ ಪಾವಂ | ಜೇಶ ಸುರಪಕ್ಷ 3
--------------
ಬೆಳ್ಳೆ ದಾಸಪ್ಪಯ್ಯ
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಓಂ ನಮೋ ನಮಃ ಕುಲಸ್ವಾಮಿ ಬಿನ್ನಪ ಲಾಲಿಸು ಪ್ರೇಮಿ ಮನ್ನಿಸೆಮ್ಮ ಭಕ್ತ ಸುಪ್ರಸನ್ನ ಮೂರುತಿ ಪ. ವಹ್ನಿಜಠರಸಂಸ್ಥಿತ ಸ್ವರ್ನದೀಗರ್ಭಸಂಭೃತ ಪನ್ನಂಗಭೂಷಣನ ವೀರ್ಯೋತ್ಪನ್ನ ಸಂಪನ್ನ 1 ತಾರಕಾದಿದೈತ್ಯಾಂತಕ ವೀರವೈಷ್ಣವರ ತಿಲಕ ಸೇರಿದವರ ಪೊರೆವ ಕರುಣಾವಾರಿ ರಾಶಿಯೇ2 ಶಿವಕುಮಾರಾಶ್ರಿತಮಂದಾರ ದಿವಿ ಭುವಿ ವಿಖ್ಯಾತ ಶೂರ ನವವಿಧ ಹರಿಭಕ್ತಿಯಂ ಬೇಡುವೆನು ನೀಡಯ್ಯಾ 3 ಸ್ಥಾನಿಕಾಖ್ಯವಿಪ್ರರಿಂದ ಅನವರತ ಪೂಜೆಗೊಂಬ ದೀನಜನವತ್ಸಲ ಭವಾನಿಪುತ್ರನೆ 4 ಭೂವಳಯದಲ್ಲಿ ಮೆರೆವ ಪಾವಂಜಾಖ್ಯ ಪುರನಿವಾಸ ದೇವಲಕ್ಷ್ಮೀನಾರಾಯಣನ ಸೇವಕೋತ್ತಮ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಂ ನಮೋ ನಮಃ ಕುಲಸ್ವಾಮಿ ಬಿನ್ನಪ ಲಾಲಿಸು ಪ್ರೇಮಿ ಮನ್ನಿಸೆಮ್ಮ ಭಕ್ತ ಸುಪ್ರಸನ್ನ ಮೂರುತಿಪ. ವಹ್ನಿಜಠರಸಂಸ್ಥಿತ ಸ್ವರ್ನದೀಗರ್ಭಸಂಭೃತ ಪನ್ನಂಗಭೂಷಣನ ವೀರ್ಯೋತ್ಪನ್ನ ಸಂಪನ್ನ1 ತಾರಕಾದಿದೈತ್ಯಾಂತಕ ವೀರವೈಷ್ಣವರ ತಿಲಕ ಸೇರಿದವರ ಪೊರೆವ ಕರುಣಾವಾರಿ ರಾಶಿಯೇ2 ಶಿವಕುಮಾರಾಶ್ರಿತಮಂದಾರ ದಿವಿ ಭುವಿ ವಿಖ್ಯಾತ ಶೂರ ನವವಿಧ ಹರಿಭಕ್ತಿಯಂ ಬೇಡುವೆನು ನೀಡಯ್ಯಾ3 ಸ್ಥಾನಿಕಾಖ್ಯವಿಪ್ರರಿಂದ ಅನವರತ ಪೂಜೆಗೊಂಬ ದೀನಜನವತ್ಸಲ ಭವಾನಿಪುತ್ರನೆ4 ಭೂವಳಯದಲ್ಲಿ ಮೆರೆವ ಪಾವಂಜಾಖ್ಯ ಪುರನಿವಾಸ ದೇವಲಕ್ಷ್ಮೀನಾರಾಯಣನ ಸೇವಕೋತ್ತಮ5
--------------
ತುಪಾಕಿ ವೆಂಕಟರಮಣಾಚಾರ್ಯ
ಕರುಣಾಕರಾ ಕಮಲಾರಮಣ ಕರಿರಾಜ ಬಂಧನ ಹರಣಾ ಸುರ ಬ್ರಹ್ಮ ಮುಖಾರ್ಚಿತ ಚರಣಾ ಶರಣಾಗೆಲೋ ದೀನೋದ್ಧರಣಾ ಪ ಅತಿಸುಂದರ ನಂದ ಕುಮಾರಾ ಸುತ ನಾಗೈ ತಂದನು ಮಾರಾ ಅತನೇ ಕುಸುಮದ ಶರೀರಾ ಸುತ ಸದ್ಗುಣ ಗಣ ಮಂದಾರಾ ಪ್ರತಿಯುಗದಲಿ ಧರಿಸೈವತಾರಾ ಕ್ಷಿತಿಯೊಳು ಪಾಲಿಪ ಸುರನಿಕರಾ 1 ಜಲಧಿ ಯೊಳಗೆರಡು ರೂಪಾದೆ ಸಲೆ ವೇದಾಮೃತವನು ತಂದೆ ಬಲಿದೀ ಕ್ರೂರಾಂಗವ ವಿಡಿದೆ ಇಳೆಸಲೆ ಪ್ರಲ್ಹಾದರ ಹೊರೆದೆ ನೆಲೆ ಪ್ರಥಮಾಶ್ರಮದಲಿ ನಿಂದೇ ಬಲಿ ಜಮದಗ್ನ್ಯರ ತೋಷಿಸಿದೆ 2 ಎರಡನೆ ವರ್ಣದೊಳಗೆ ಜನಿಸಿ ಸುರ ಪಾಂಡವರೇಳಿಗೆ ಬಲಿಸಿ ನೆರೆ ಅಂತ್ಯಯುಗದಿ ಅವತರಿಸಿ ಪುರಹರ ದ್ವಿಜರಭಿಮತ ಸಲಿಸಿ ಗುರು ಮಹಿಪತಿ ಪ್ರಭು ಕರುಣಿಸಿ ಹೊರಿಯೋ ನಿನ್ನೆಚ್ಚರ ನಿಲಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಪಾಡೋ ಸುಬ್ರಹ್ಮಣ್ಯ ಮಹಸ್ವಾಮೀ ಪ ಅನುದಿನ ದಯಾಪರ ದೇವ ನೀನೂ ಮಮತೆಯಿಂದ ಕಾಪಾಡು ಎಂಬೆ ನಾನು ಸುಬ್ರಹ್ಮಣ್ಯ 1 ಉರಗ ಬೇಡ್ವೆ ನಿನ್ನ ಸುಬ್ರಹ್ಮಣ್ಯ2 ಚಿತ್ತಜ ಕುಮಾರಾ ಸುಬ್ರಹ್ಮಣ್ಯ3
--------------
ಬೆಳ್ಳೆ ದಾಸಪ್ಪಯ್ಯ
ಗಿರಿಧರ ಗೋಪಾಲ | ಗಾನವಿಲೋಲ ಪ ವರನೀಲೋತ್ಪಲ ಶ್ಯಾಮಲ ಕೋಮಲ ಕರುಣಾಲವಾಲಾ ಗೋಪಾಲಬಾಲ ಅ.ಪ ಸಕಲ ಚರಾಚರ ಭರಿತ ಸುಖಂಕರ ಬಕಶಕಟಾಸುರನಿಕರ ಭಯಂಕರ ಶುಕಮೌನೀಶ್ವರನುತ ಕರುಣಾಕರ ಸುಕುಮಾರಾಂಗ ರಾಜಿತ ಮಾಂಗಿರಿವರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯ ಶಂಕರ ಪ್ರಿಯಸುತ ಷಟ್ಶಿರ | ಜಯ ಜಯ ಕುಮಾರಾ ಪ ಧುರ ಧೀರಾ ಮಹ ಶೂರಾ ಅ.ಪ ಇಂದು ಪಾಲಿಪುದಿಂದುವದನ ಗುಹನೇ ಷಟ್ಶಿರನೇ 1 ಪನ್ನಗ ಕುಲದೊಡೆಯಾ ಕಾರ್ತಿಕೇಯಾ 2 ಸಿಂಧು 3
--------------
ಬೆಳ್ಳೆ ದಾಸಪ್ಪಯ್ಯ
ಜಯ ಜಯ ಸಕಲಾಧಾರಾ | ಕೃಷ್ಣ ಜಯ ಜಯ ಭಕ್ತೋದ್ಧಾರಾ ಜಯಸಕಲಾಲಂಕಾರಾ | ಕೃಷ್ಣಾ ಯಮುನಾ ವೇಗ ಸಂಹಾರಾ ಜಯ ಜಯ ನಂದಕುಮಾರಾ ಕೃಷ್ಣ ಜಯ ಜೀಮೂತ ಶರೀರಾ ಪ ದೇವಕೀಕುಮಾರಾ ನಿಗಮಗೋಚರಾ ಶಂಖಚಕ್ರಧರ ವಸುದೇವಾನಂದಕರ ಸುರುಚಿರ ಪೀತಾಂಬರಧರ 1 ನಯನ ಮನೋಹರ ಗೋಪೀ ಮಂದಿರ ಸರಸಿಜ ದುರುಳ ಭಯಂಕರ ಶಕಟ ಬಕಾಂತಕ ಶೂರಾ ಕೃಷ್ಣ ಪೂತನಿ ಸಂಹಾರಾ ಅಜ ಸುರ ಮುನಿ ಪರಿವಾರ2 ಧೇನುಕ ದೈತ್ಯವಿದಾರಾ | ಕೃಷ್ಣ ಮರಕತ ಮಣಿಮಯ ಹಾರಾ ತರುಣೀ ಮಣಿಗಣನಿಕರಾ | ಕೃಷ್ಣ ಸರಸಿಜಲಸದಾಕಾರಾ ನವನೀತಕರಾ ಘನ ಮುರಳೀಧರ | ಕುಂಜವಿಹಾರಾ ವಿಷಧರ ಭಯಹರ ಗೋವರ್ಧನಧರ | ಮುಷ್ಟಿಕ ಮಧುರಾ 3 ವಿಹಾರಾ | ಕೃಷ್ಣ ನಾದಾನಂದ ಪ್ರಚಾರಾ ಅಕ್ರೂರಾನತ ಚರಣಾ | ಕೃಷ್ಣ ಮುನಿಜನ ಹೃದಯಾಭರಣ ಕುಬ್ಜಾವಂದಿತ ಚರಣ | ಕೃಷ್ಣ ಘನಮಹಿಮಾ ವಿಸ್ತರಣ ಗೋಪೀಜನಗಣ ಮೌಢ್ಯನಿವಾರಣ 4 ದುರುಳ ವಿದಾರಣ | ಭವಜನಕರುಣ ಹಲಧರ ಭುಜಬಲ ಪ್ರಾಣಾ ಕೃಷ್ಣ ಬೃಂದಾರಕಗಣ ಪ್ರಾಣ 5 ಶಿಶುಪಾಲೋತ್ಸವ ಬಾಣಾ | ಕೃಷ್ಣ ರುಕ್ಮ ಲೋಭ ಮದ ಯಾಣಾ ಅರಿಕುಲ ಸೈನ್ಯ ಕೃಪಾಣಾ | ಕೃಷ್ಣ ಚತುರೋಪಾಯ ಪ್ರವೀಣಾ ರುಕ್ಮಿಣೀರಮಣ ಶುಭಕರಕಂಕಣ ಪಾಂಡವಪೋಷಣ ಹರಣ ಚಕ್ರವಿಭೂಷಣ6 ದ್ರುಪದಸುತಾನತಚರಣಾ | ಕೃಷ್ಣ ಪರಮಾನಂದಾವರಣ ವಿದುರಾನತ ನೀಲಾಂಗ | ಕೃಷ್ಣ ಕರಧೃತವ್ಯರಥಾಂಗ ಕುರುಕುಲ ವನ ಸಾರಾಂಗಾ | ಕೃಷ್ಣ ಗೀತಾವನಜತರಂಗಾ ಕಮಲಾ ಅಂಗ | ಸತ್ವ ತುರಂಗಾ | ಧರ್ಮವಿಹಂಗಾ 7 ಮಾಂಗಿರಿ ರಂಗ ಸುಧಾಂಗಾ ಶುಭಾಂಗ | ಜಯ ಜಯ ಮಾಂಗಿರಿ ರಂಗಾ | ಕೃಷ್ಣ ಜಯ ಜಯ ಗರುಡ ತುರಂಗಾ 8
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಾನಕೀಮನೋಹರಾ ಜನಪಕುಮಾರಾ ಭಾನುವಂಶಭಾಸ್ಕರಾ ದುರಿತವಿದೂರಾ ಪ ಮಾರಕೋಟಿಸುಂದರ ಶರಧಿಗಂಭೀರ ಶೂರ ದೈತ್ಯಭೀಕರ ಪರಮ ಉದಾರ 1 ವಾನರೇಂದ್ರ ವಂದಿತ ಮೌನಿನಿಕರ ಸೇವಿತ ಸನ್ನುತ 2 ಪಾಹಿ ಪಾಹಿ ರಾಘವೇಶ ಪಾಹಿ ಲೋಕೇಶ ಪಾಹಿ ಪಾಹಿ ಮಾಂಗಿರೀಶ ಸುಪ್ರಕಾಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುರಿತ ವಿಪಿನ ದಾವಾ ಪ ಹರಿಸಿ ಕೈಪಿಡಿವ ಕರುಣಾನಿಧಿಯೆ ಅ.ಪ ಜಮದಗ್ನಿಕುಮಾರಾ ನಿನ್ನನು ಸಮವಿರಹಿತ ಉತ್ತಮ ಪದವಿಯೊಳಿ ಟ್ಟಮಿತ ಸುಖಪಡಿಸಿ ಆದರಿಸುವೆ ಸದಾ 1 ಬನ್ನಬಡುವೆನು ಭವಾರ್ಣವದೊಳುಯೆನ್ನ ಜನ್ಮಜನ್ಮದಘವನ್ನು ಬಿಡಿಸಿ ಕಾಯೊ 2 ಗರಳಪುರದದೊರಿಯೆ ನಿನ್ನ ಸಂ ಸ್ಮರಣೆ ಕೊಡೊ ಹರಿಯೆ ಪರಮ ಪುರುಷ ಶ್ರೀ ಗುರುರಾಮ ವಿಠಲ 3
--------------
ಗುರುರಾಮವಿಠಲ