ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಎರಡು ರಾಗ ಭೂಲೋಕವನು ಜೈಸುತ ಬಲದಿಂದಾ ಇಂದ್ರನೇ ಮೊದಲಾದ ಬೇಗಾ ದೇವೇಂದ್ರ ನಾಸನಕೆ 1 ಉಗ್ರಶಾಸನ ಮಾಡು ಮಾಡುವಂಥಾ ಉಗ್ರಶಾಶನ ಶೀಘ್ರದಿಂ ಹರಿಗೆ 2 ಬಿಡದೆ ದಯದಿ ಅನಂತ ಇಂಥ ಕಾಲಕೆ ಎಲ್ಲಿ `ಅನಂತಾದ್ರೀಶನೆ ' ನಿಂತು ನುಡಿದನು ಅಂತರಿಕ್ಷದಲಿ 3 ರಾಗ ಅಂಜಬೇಡಿರಂಜ ಬೇಡಿರೋ ನೀವಿನ್ನು ಮೇಲೆ ಪ ಪಂಜರದೊಳಗಿರುವೆ ನಿಮ್ಮನಂಜಿಸುವನ ಭಂಜಿಸುವೆನು ಅ.ಪ ಎಂದು ದ್ವೇಷ ಮಾಡುವನೋ ಅಂದಿಗವನ ಕೊಂದÀು ಬಿಡುವೆ 1 ದ್ವೇಷವನ್ನು ಮಾಡಿದವನು ಉಳಿಯ ಮುನ್ನ ಬಹಳ ದಿವಸ ಸತ್ಯ 2 ಪ್ರಹ್ಲಾದ ಇದ್ದ ಸ್ಥಳದಲ್ಲಿರುವೆ ನಾನು 3 ವಚನ ಶ್ರೀ ಲಲಾಮನವಾಣಿ ಕೇಳಿ ಉಳಿದವನಲ್ಲ ಕಾಲ ಹಿರಣ್ಯಕನಿಂದ ಬಾಲ ಕಾಲಕಾಗುವದೆಂದು ಕಾಲವನು ನೋಡುತಲೆ ಕಾಲಗಳೆದರು ಲೋಕಪಾಲಕರು ಎಲ್ಲಾ 1 ರಾಗ ಕೈಯಲಿಕೊಟ್ಟು ನಕ್ಕು ನುಡಿದಾನು 1 ಇರಲಿ ಬುದ್ಧಿವಂತನಾಗಲಿ ಪ್ರಸಿದ್ಧನಾಗಲಿ2 ಆಗ ಪ್ರಹ್ಲಾದನ್ನ ಕರದ್ಹೇಳಿದರು ಆಹ್ಲಾದದಿಂದಾ3 ಸಂಭ್ರಮದಿಂದ ಉತ್ತಮ ಶ್ರೀ ಹರಿನಿಂದಾ ಶಾಸ್ತ್ರ ನುಡಿದರು 4 ತ್ರೈವರ್ಗಿಕ ಶಾಸ್ತ್ರ ನುಡಿದರು 5 ಪಾಠಮಾಡಲಿಲ್ಲ ಸವಿದು ಹರಿ ಚರಿತಾಮೃತವನ್ನು ಸವಿ ಇನ್ನೊಂದನರಿಯಾ 6 ನುಡಿದನು ಅವನು ನವನೀತ ಧಾಂಗಿರುವಂಥಾದು ನವವಿಧ ಭಕ್ತಿ 7 ಅವರಿಗೆ ಮತ್ತಾರಿಗಾದರು ಅವನಂಜುವನಲ್ಲಾ 8 ಅವನು ಚಲುವ ನಂತಾದ್ರೀಶನಲ್ಲೆ ಛಲ ಬಿಟ್ಟನಲ್ಲಾ 9 ವಚನ ಕೂಡಿಸಿಕೊಂಡು ಮಂದ ಮುಂದ್ಹೇಳು ಇಷ್ಟುದಿನ ಒಂದು ಬಿಡದಲೆ ಹೀಗೆ ಅಂದ ಮಾತಿಗೆ ಮತ್ತೆ ಕಂದ ಪ್ರಹ್ಲಾದ ಹೀಗೆಂದನಾಗ 1 ರಾಗ ಬರೆಯಲಿಲ್ಲ ಓದಲಿಲ್ಲವೋ ಅಪ್ಪಯ್ಯ ನಾನು ಪ ಹರಿಯ ನಿಂದಿಸುವ ಶಾಸ್ತ್ರ ಬರೆಯಲ್ಹ್ಯಾಗೆ ಓದಲ್ಹ್ಯಾಗೆ ಅ.ಪ ಹರಿಯ ಗುಣಗಳನ್ನು ಮಾಡುವೆನು ಹರಿಯಪಾದ ಹರಿಯ ವಂದಿಸುವೆ ನಿತ್ಯಾ 1 ಅಂಥಾದು ಎನ್ನ ಮನಸು ಮನಸಿಲ್ಲೆ ವಿಷಯಗಳನ್ನು ನೆನೆಸುವೆ ಸುಹರಿಯ ರೂಪಾ2 ಗೆಳೆಯನಾದ ತಾನು ಅಂತರಂಗದಲ್ಲಿ ತಾನು ನಿಂತು ಪ್ರೇರಿಸುವ ಅಂತರಂಗದಂತೆ ಇರುವೆ 3 ವಚನ ಸಿಟ್ಟು ಮಾಡುತಲಿಂಥ ಥಟ್ಟನ್ಹೇಳಿರಿಯೆನಲು ಥಟ್ಟ ನಾವಲ್ಲ ಕೊಟ್ಟವರು ಕೊಟ್ಟ ಬುದ್ಧಿಯು ಅಲ್ಲ ರಾಗ ಕೇಳಿರಿ ನೀವೆಲ್ಲ ಭಾಳ ಭಕುತಿಯಲಿ ಕೇಳಿರಯ್ಯಾ ಪ ಬಾಳ ಮಾತುಗಳೇಕೆ ಹೇಳುವೆ ಸಾರಾಂಶ ಕೇಳಿರಯ್ಯಾ ಅ.ಪ ಅಲ್ಲ ಕೇಳಿರಯ್ಯಾ ದಿಟ್ಟಾಗಿ ಶ್ರೀ ಹರಿಯು ಕೊಟ್ಟ ಬುದ್ಧಿಯು ಇದು ಕೇಳಿರಯ್ಯ 1 ಶ್ರೀ ಜಗದೀಶನಿಂದೀ ಜಗ ತಿರಗೋದು ಕೇಳಿರಯ್ಯಾ 2 ಅನಂತಾದ್ರೀಶನು ತಾನೆ ಆಡುವದು ಕೇಳಿರಯ್ಯಾ 3 ವಚನ ದೈತ್ಯ ಅಡಿಯಿಟ್ಟು ನೀತಿಯಲಿ ಕಿಡಿಗಣ್ಣಿನೊಳು ನೋಡಿ ಒಡಲೊಳಗೆ ಸಿಟ್ಟಿನಲಿ ದೃಢವಾಗಿ ಇರುವಂಥ ಭೃತ್ಯರುಗಳಿಗೆ ನುಡಿದನೀಪರಿಯ 1 ರಾಗ ಕಡಿದ್ಹಾಕಿರೀತನ ||ಪಲ್ಲ|| ಬಗೆ ದುಷ್ಟಮಾತುಗ- ವಿಷ್ಣುವ ಸೊಗಸಾಗಿ ಪೂಜಿಸಿ ನಗುತಿಪ್ಪನ 1 ಸುತನಾಗದಿದ್ದರೂ ಸುತನವನೆ ಅತಿರಭಸದಲೆ ವಿಶ್ರುತವಾಗಿ ಹುಟ್ಟಿದ ವಿತತರೋಗ ತನಗ್ಹಿತವಾಗಿರುವದೇನು 2 ನಾನಾರೀತಿಗಳಿಂದ ಹಾನಿಯ ಅನಂತಾದ್ರೀಶನ ಧ್ಯಾನದಲ್ಲಿರುವನ 3 ರಾಗ ಆಗೆಲ್ಲ ಮಂದಿಗಳನ ನೆರಸಿದಾ1 ಮುರಿದು ಅವನ ಭಯ ಬಿಡಿಸಿದಾ 2 ಹರಿಯು ಬಂದು ಉಳಿಸಿದಾ3 ಸರ್ಪಶಯನ ಬಂದು ಭಯವಾ ಬಿಡಿಸಿ4 ವಿಷವ ತಂದು ಯತ್ನದಿಂದ ಕುಡಿಸಿದಾ ಹರಿ ತಾ ವಿಷವಮೃತ ಮಾ ಡಿ ಸೌಖ್ಯ ಬಡಿಸಿದಾ 5 ಘಟ್ಟ್ಯಾಗ್ಹಿಡಿದು ಶ್ರೀಹರಿ ಸಾಕಿದಾ 6 ತಾನೆ ತಾರಿ ಸಿದಾ7 ಶೀತಾಗಿ ಸೌಖ್ಯ ಬಡಿಸದಾ 8 ನಾನಾರೀತಿಯಿಂದಲವನನು ಸರಿಸಿದಾ ಅಚ್ಯುತನಂತಾದ್ರೀಶನು ಸೌಖ್ಯ ಸುರಸಿದಾ 9 ವಚನ ಮಾಡಿದರಿವಗೆ ಇನ್ನದೇನು ಪಾಯವುಯೆಂದು ಮಾನಿತರು ಗುರುಗಳಾ ದಾನವೇಂದ್ರ ನೀನು ದೀನನಾಗುವದು ಮುಂದೆ ನೀನು ತಿಳಿಯೊ
--------------
ಅನಂತಾದ್ರೀಶ - ಕಥನಕಾವ್ಯಗಳು
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು
ಪ್ರಾಣಲಿಂಗ ಲಕ್ಷ್ಮಣನ ಮಂಗೀಶಾ ಪುಣ್ಯ ಸ್ಥಾಣು ಸರ್ವಾತ್ಮಕ ನೀನೆ ಮಂಗೀಶಾ ಮಾಣದೆನ್ನ ಕೈಪಿಡಿದು ಮಂಗೀಶಾ ಇನ್ಯಾ ರ್ಕಾಣೆ ನಿನಗೆ ಸಮನಾಗಿ ಮಂಗೀಶಾ ಪ ಆದಿಗನಾಗಿ ಸಿದ್ಧ ಮಂಗೀಶಾ ನಿನ್ನ ಶೋಧಿಸಿ ಕಂಡವರುಂಟೆ ಮಂಗೀಶಾ ವೇದ ಉಪನಿಷದ ನೀನೇ ಮಂಗೀಶಾ ನಿನ್ನ ಪಾದವ ನೆರೆನಂಬಿರುವೆ ಮಂಗೀಶಾ 1 ರಾಮನ ವಂಶವನೊಲಿದು ಮಂಗೀಶಾ ಬಹು ಪ್ರೇಮದಿಂದ ಸಲಹಿದಯ್ಯಾ ಮಂಗೀಶಾ ನಾಮಕ್ಕೆ ಲಕ್ಷ್ಮಣ ಎನ್ನ ಮಂಗೀಶಾ ನೀನೇ ಸ್ವಾಮಿಯೆಂದು ನಂಬಿದೆನು ಮಂಗೀಶಾ 2 ನಿನ್ನ ಬಲದಿಂದ ಸರ್ವ ಮಂಗೀಶಾ ಸುಖ ವನ್ನು ಪಡೆದೆನು ನಾನು ಮಂಗೀಶಾ ಇನ್ನು ನಿನ್ನೊಳು ಕೂಡಿಸಿಕೊ ಮಂಗೀಶಾ ಮುಂದೆ ಬೆನ್ನನು ರಕ್ಷಿಸಿ ಕಾಯೋ ಮಂಗೀಶ 3 ಯಾರಿಗುಸುರಲಿ ನಾನು ಮಂಗೀಶಾ ಸರ್ವ ಭಾರಕರ್ತೃ ನೀ ಸಲಹೋ ಮಂಗೀಶಾ ದಾರಿಯ ತೋರಿಸೋ ಎನಗೆ ಮಂಗೀಶಾ ನಿನ್ನ ಸೇರಿ ಬದುಕುವೆ ನಾನು ಮಂಗೀಶಾ 4 ಏನೇನರಿಯೆನೆಲೊ ನಾನು ಮಂಗೀಶಾ ನಿನ್ನ ಧ್ಯಾನಿಸಲೊಂದೆ ಬಲ್ಲೆ ಮಂಗೀಶಾ ಹಾನಿ ವೃದ್ಧಿನಿನ್ನದು ಶ್ರೀ ಮಂಗೀಶಾ ಎನ್ನ ಮಾನಾಭಿಮಾನದ ಕರ್ತೃ ಮಂಗೀಶಾ 5 ಅರಿಕೆ ಇಲ್ಲದುಂಟೆ ನಿನಗೆ ಮಂಗೀಶಾ ದುಷ್ಟ ಅರಿಗಳ ಮಾಯಾಜಾಲವು ಮಂಗೀಶಾ ಸ್ಮರನ ದಹಿಸಿದಂತೆ ನೀನು ಮಂಗೀಶಾ ಅವರ ನುರುಹಿ ತೋರೋ ಎನ್ನೊಡೆಯ ಮಂಗೀಶಾ 6 ಬರದು ಬಿನ್ನವಿಸಿದೆ ನಾನು ಮಂಗೀಶಾ ಚಿತ್ತ ವಿರಲಿ ಅಣುಗನ ಮೇಲೆ ಮಂಗೀಶಾ ಸ್ಥಿರದಿ ಕುಶಸ್ಥಲವಾಸಿ ಮಂಗೀಶಾ ಶ್ರೀ ಗುರು ವಿಮಲಾನಂದ ಚೆಲುವ ಮಂಗೀಶಾ 7
--------------
ಭಟಕಳ ಅಪ್ಪಯ್ಯ
ಯಾಕೆ ಮೈಮರೆದೆ ನೀನು ಪ. ಯಾಕೆ ಮೈಮರೆದೆ ಶ್ರೀ ಹಯವದನನ ಪಾದವನುಬೇಕೆಂದು ಬಿಡದೆ ಭಜಿಸೊ ನಿನ್ನಕಾಕು ವ್ಯಸನಗಳ ತ್ಯಜಿಸೊ ಈ ದೇಹತಾ ಕಂಡ ಕನಸೋ ಸ್ಥಿರವಲ್ಲ ಇನ್ನುನೀ ಕೇಳದಿರೆ ನಿನ್ನ ಮನಸೋ ಪ್ರಾಣಿ ಅ.ಪ. ಪರಹೆಣ್ಣುಗಳ ನೋಡಿ ಪಾತಕಿಗಳ ನೀಡಾಡಿಹರಿದೆದ್ದು ಕಡೆಗೆ ಕರೆವೆ ಎಲೆಮರುಳೆ ಹರುಷದಿಂದವಳ ನೆರೆವೆ ಅಕಟಕಟದುರುಳ ಜೀವನೆ ನಿನಗೆ ತರವೆ ಮತ್ತೊ-ಬ್ಬರಿಗೆ ಬರಿದೆ ನೀ ಹೇಳುವೆಲ್ಲೊ ಶಾಸ್ತ್ರಗಳನೊರದೊರದು ಕೇಳ್ವೆಯಲ್ಲೊ ನೀ ಹೋಗಿನರಕದೊಳು ಬೀಳ್ವೆಯಲ್ಲೊ ಪ್ರಾಣಿ 1 ಧನವ ಕೂಡಿಸಿಕೊಂಡು ದಾನ ಧರ್ಮವ ಮಾಡ-ದೆನಗಾರು ಸಾಟಿಯೆಂಬೆ ಇಷ್ಟಜನರ ಬಿಟ್ಟೊಬ್ಬನುಂಬೆ ಎಲೊ ಎಲೊಮುನಿದು ಸಕಲರ ಮುನಿಯಗೊಂಬೆ ಆಧನವು ಮನಶುದ್ಧವಾಗಿ ಇಹುದೆ ಅದು ಸಾವದಿನದೆ ಸಂಗಡ ಬಾಹುದೆ ಕುಬೇರನಬಿಟ್ಟು ಕಡೆಗೆ ಹೋಹುದೆ ಪ್ರಾಣಿ 2 ಅಳೆವ ಕೊಳಗದ ಮಾಟ ಆತ್ಮನಿನ್ನೋಡಾಟ ಸರ-ಕಳೆದ ಬಳಿಕ ನೋಡೊ ದೇಹ ತಾ-ನುಳಿಯದು ಹಮ್ಮು ಮಾಣೊ ಎಲೆ ಮರುಳೆಗಳಿಸಿರೋ ಧರ್ಮಗಳ ವ್ಯರ್ಥ ಕೆಡಬ್ಯಾಡೊ ದಿನಮಾನಗಳ ಕಳೆಯದಿರು ನಿತ್ಯವಲ್ಲ ಇದಕೆಉಳಿದರ್ಥ ಕೆಲಸಕಿಲ್ಲ ಹಿಂದೆಉಳಿದವರೊಬ್ಬರಿಲ್ಲ ಪ್ರಾಣಿ 3 ಕೊಲೆ ದೋಷವೆಂದರಿಯೆ ಕೊಸರು ಒಬ್ಬನ ಜರೆವೆಇಳೆಯೊಳದಾವನೀತ ನಿನಗೆ ನೀತಿಳಿದುಕೊ ನಿನ್ನಮಾತ ನೀಖಿಲಗೊಳಬೇಡ ಆಭಾಸ ಸೂಚಿಸಿ ಜರೆವರೆಕೊಲೆಗೆ ಗುರಿಯಾದೆ ಕಾಣೊ ಈ ಕೋಪಹೊಲೆಗೆ ಸರಿಯಲ್ಲವೇನೊ ನಿನ್ನಹುಳುಕು ಬುದ್ಧಿಯನು ಮಾಣೊ ಪ್ರಾಣಿ 4 ಮರೆದು ಕಳೆ ಕ್ರೋಧವನು ಮಾಡದಿರು ಲೋಭವನುಗುರುಹಿರಿಯರಾದವರಿಗೆರಗೂ ಅನಾ-ಥರಿಗೆ ಚೆನ್ನಾಗಿ ಮರುಗೊ ಇದೆಪರಮಗತಿಯ ಸೆರಗೊ ಭಕ್ತರಿಗೆಸಿರಿಯರಸ ಹಯವದನನೊಡೆಯ ಲೋಕಪರನಿಂದಕರಿಂಮುಕ್ತಿಪಡೆಯೊ ಭಜಿಸಿದುರಿತ ಸಂಕಲೆಯ ಕಡಿಯೊ ಪ್ರಾಣಿ 5
--------------
ವಾದಿರಾಜ
ಸರಿಸರಿದೋಡುತಿವೆಲವತ್ರುಟಿಗಳುತಿರುಗದಲಿಟ್ಟಡಿಯಹರಿಗುರು ಪ್ರೀತಿಯ ದೊರಕಿಸು ಪ್ರಾಣಿಕಿರಿಯರಲ್ಲ್ಲ್ಯಮನವರು ಪ್ರಾಣಿ ಪ.ಪರದಾರ ಪರಸಿರಿ ಪರನಿಂದೆ ನಿರುತದಿಚಿರರತಿ ಬೆರತ್ಯಲ್ಲೊಪರಉಪಕಾರ ದಾರಿಯರಿಯದೆ ಬರಿ ಒಣಗರುವಿನಲಿರುವ್ಯಲ್ಲೊನರಹರಿ ಚರಣವಾದರಿಸದೆ ಸ್ಮರಿಸದೆನರರನುಸರಿಪ್ಯಲ್ಲೊಶರೀರ ಸಿಂಗರಿಸಿ ಸತ್ಕಾರ್ಯಬಾಹಿರನಾಗಿನಿರಯಕೆ ಗುರಿಯಾದ್ಯಲ್ಲೊ ಪ್ರಾಣಿ 1ಸುಖಗಳ ಕಕುಲತೆಗಖಿಳ ಸಾಧಕನಾದೆಭಕುತಿಗಳಿಕೆ ತೊರೆದುಬಕವೃತ್ತಿಯ ಕಲಿತು ಮುಖವ ಮುಸುಕಿದೆ ವಿರಕ್ತಿಸರಕುದೋರೈಲೋಕದ ಮೋಹಕ ಜ್ಞಾನಾಧಿಕನಾದೆ ಅಕಳಂಕಸುಖತೀರ್ಥವಾಕುದೋರೈಸಕಲಕಲೆ ಕಲಿತು ಸ್ತ್ರೀಕದಂಬ ಸಖನಾದೆಮುಕುತಿ ಹೊಂದಿಕೆ ತೋರೈ ಪ್ರಾಣಿ 2ಅಶನದುವ್ರ್ಯಸನಕೆ ನಿಶಿದಿನ ವಶನಾದೆಶ್ರೀಶ ಭೃತ್ಯೆನಿಸಿಕೊಳ್ಳೊಹುಸಿಉಪದೇಶಧ್ಯಾತ್ಮ ವೇಷದೊಳು ಘಾಸಿಯಾದೆದಶವ ವರಿಸಿಕೊಳ್ಳೈವಿಷಯ ಬಯಸಿ ವೃಥ ಮಸಿವರ್ಣೆನಿಸದೆ ನೀನ್ಯಶಸ ಕೂಡಿಸಿಕೊಳ್ಳೈಹಸಿತೃಷೆಗಸಣೆಗೆ ಬೇಸರದೆ ಪ್ರಸನ್ವೆಂಕಟೇಶನ ಒಲಿಸಿಕೊಳ್ಳೈ ಪ್ರಾಣಿ 3
--------------
ಪ್ರಸನ್ನವೆಂಕಟದಾಸರು