ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಥರವಲ್ಲ ಸ್ವಾಮಿ ಥರವಲ್ಲ ಪ. ಥರವಲ್ಲ ಸ್ವಾಮಿ ಈ ತೆರನ ಮಾಡುವುದು ಕರುಣ ಸಾಗರನೆಂಬ ಬಿರುದಿನ್ನು ನಿಲದು ಅ.ಪ. ಊರೊಳಗಿಹ ಜನರೆಲ್ಲರು ಕೂಡಿ ವಾರಿಜಾಕ್ಷನ ದಾಸನೆಂದು ಕೊಂಡಾಡಿ ಸಾರಿಸಾರಿಗೆ ನಿನ್ನ ಕೀರ್ತನೆ ಮಾಡಿ ಪೋರ ಪೇಚಾಡುವನೆಂಬರು ಕೂಡಿ1 ಪಾರಾಯಣದ ಪುಸ್ತಕವ ಕಟ್ಟಿಟ್ಟು ವಾರಿಜನಾಭ ನಿನ್ನಯ ಪೂಜೆ ಬಿಟ್ಟು ಕಾರಿ ಕೆಮ್ಮುತ ಬಿದ್ದಿರುವ ದೊಡ್ಡ ಗುಟ್ಟು ಯಾರ ಮೇಲಿನ್ನು ತೋರಿಸಲೆನ್ನ ಸಿಟ್ಟು 2 ಮೋಹ ಪಾಶದಿ ಮುಸುಕಿ ಕಟ್ಟಿದರೆ ಬಹ ಪಾತಕಗಳಿಗೆಲ್ಲ ನಾನಿದಿರೆ ನೀ ಹದಿನಾಲ್ಕು ಲೋಕೇಶನೆಂದೊದರೆ ದೇಹವ ಬಳಲಿಸಿದರೆ ನಾನೇನ್ಹೆದರೆ 3 ನಂಬಿರೊ ಭಕ್ತ ಕುಟುಂಬಿಯನೆಂದು ಅಂಬುಜಸಂಭವನ್ಯಾಕೆಂದನಂದು ಹಂಬಲಿಸಿದರು ನೀ ದಯದೋರದಿಂದು ಬೊಂಬೆಯೆ ಸರಿಯೆಂದು ಜನರೆಂಬೊ ಕುಂದು 4 ಸರ್ವದೋಷಹರ ಸಾಗರಜೇಶ ನಿರ್ವೇದದಿಂದ ನಾ ನುಡಿದೆನಾಕ್ರೋಶ ಸರ್ವಕಾಲಕು ಸಲಹುವ ನೀನೆ ಶ್ರೀಶ ಶರ್ವಾದಿ ವಂದ್ಯ ಶೇಷಾಚಲವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೋಡು ಮನವೆ ನಿನ್ನೊಳಾತ್ಮನ ನೋಡು ಮನವೆ ಧ್ರುವ ಸಾಧುಸಂಗವ ನೀ ಮಾಡಿ ಭೇದ ಬುದ್ಧಿಯ ಹೋಗಾಡಿ ಆದಿತತ್ವವ ನೀ ನೋಡಿ ಸದಮಲಾನಂದ ಕೂಡಿ1 ಕಾಮಕ್ರೋಧವ ಕಳೆದು ಮಮತಾ ಮಾಯವನಳಿದು ತಾಪ ತೊಳೆದು ಶಮದಮಾದಿ ತಿಳಿದು 2 ನಾನು ನೀನೆಂಬುದು ನೀಗಿ ಜ್ಞಾನದಿಂದ ಗುಪ್ತನಾಗಿ ಭಾನುಕೋಟಿತೇಜನಂಘ್ರಿ ಬೆರೆದು ನಿಶ್ಚಿಂತನಾಗಿ 3 ಅವಿದ್ಯುಪಾಧಿಯ ಜರಿದು ಮೂವಿಧ ಮದ ಮುರಿದು ಪವಿತ್ರ ಪ್ರಣವರಿದು ಸುವಿದ್ಯ ಸುಖಬೆರೆದು 4 ಬಾಹ್ಯಾಂತ್ರದೊಳಿಹ ಪೂರ್ಣ ಮಹಾಗುರುನಿರಂಜನ ಇಹ ಪರತ್ರ ಸಾಧನ ಮಹಿಪತಿ ಅಂತರಾತ್ಮನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಸಾರ ಶರಧಿಯೊಳು ಮುಳುಗಿ ಮುಳುಗಿ ಸಂಶಯವಿಲ್ಲದೆಬಳಲುತಿಹ ಮರುಗಿ ಮರುಗಿಪಅಜ್ಞಾನ ತಿಮಿರವೆಂಬ ವ್ಯಾಪಾರದೊಳೋಡಾಡಿಸುಜ್ಞಾನ ಜ್ಯೋತಿಯ ಬಿಡುಗಡೆಯ ಮಾಡಿಭಗ್ನ ಮಾಡಿಯೆ ಶಾಂತ ಬುದ್ಧಿಗಳನೇ ನೋಡಿಪ್ರಾಜÕನಾಗದೆ ಕೆಡುವೆ ನರಕವನು ಕೂಡಿ1ಕಾಲವಿಪರೀತದಿಂದ ಕೇಡುಬರೆ ನೀನದನುಕಾಲಲೊದೆಯದೆ ಬಹಳ ಚಿಂತೆಯನು ಮಾಡಿಓಲಗಿಸಿ ಮನದೊಳಗೆ ತಾ ಕೆಟ್ಟೆಯೆನ್ನುವನುಪಾಲಿಸುವರಿಲ್ಲೆಂದು ಸೇರುವೆಯ ನರಕವನು2ಬೇಡ ಮನದೆ ಇನ್ನುಖುಲ್ಲಗುಣಗಳ ಬಿಟ್ಟುಖೋಡಿಸಂಸಾರವೆಂಬುದನು ಸುಟ್ಟುಗೂಢ ಚಿದಾನಂದಾವಧೂತನೊಳು ಅಳವಟ್ಟುಕೂಡು ಕೆಲಸಾರದಲೆ ದೃಷ್ಟಿ ಆತ್ಮನಲಿಟ್ಟು3
--------------
ಚಿದಾನಂದ ಅವಧೂತರು