ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ನರಸಿಂಹ ಪಾಹಿ ಲಕ್ಷ್ಮೀ ನರಸಿಂಹ ಪ ನರಸಿಂಹ ನಮಿಪೆ ನಾ ನಿನ್ನ ಚಾರುಚರಣಕಮಲಕೆ ನೀ ಎನ್ನ ಕರವ ಪಿಡಿದು ನಿಜ ಶರಣನೆಂದೆನಿಸೊ ಭಾ ಸುರ ಕರಣಾಂಬುಧೆ ಗರುಡವಾಹನ ಲಕ್ಷ್ಮೀ ಅ ತರಳ ಪ್ರಹ್ಲಾದನ್ನ ನುಡಿಯಾ ಕೇಳಿ ತ್ವರಿತದಿ ಬಂದ್ಯೊ ಎನ್ನೊಡೆಯ ನಾನು ಕರುಣಾಳೊ ಭಕ್ತರ ಭಿಡೆಯ ಮೀರ ಲರಿಯೆ ಎಂದೆಂದು ಕೆಂಗಿಡಿಯ ಅಹ ಭರದಿಂದುಗುಳುತ ಬೊಬ್ಬಿರಿದು ಬೆಂಬತ್ತಿಕ ರ್ಬುರ ಕಶ್ಯಪುವಿನ ಹಿಂಗುರುಳ ಪಿಡಿದೆ ಲಕ್ಷ್ಮೀ 1 ಪ್ರಳಯಾಂಬುನಿಧಿ ಘನಘೋಷದಂತೆ ಘುಳಿ ಘುಳಿಸುತಲಿ ಪ್ರದೋಷ ಕಾಲ ತಿಳಿದು ದೈತ್ಯನ ಅತಿರೋಷದಿಂದ ಪ್ಪಳಿಸಿ ಮೇದಿನಿಗೆ ನಿದೋಷ ಅಹ ಸೆಳೆಸೆಳೆಯುತ ಚರ್ಮಸುಲಿದು ಕೆನ್ನೆತ್ತರೋ ಕುಳಿಯನಾಡಿದೆ ದಿಶಾವಳಿಗಳೊಳಗೆ ಲಕ್ಷ್ಮೀ 2 ಕ್ರೂರ ದೈತ್ಯನ ತೋರಗರುಳಾ ತೆಗೆ ದ್ಹಾರ ಮಾಡಿದೆ ನಿಜಕೊರಳ ಕಂಡು ವಾರಿಜಾಸನ ಮುಖದಯರ್ಕಳ ಪುಷ್ಪ ಧಾರಿಗೆರೆದು ವೇಗ ತರಳಾ ಆಹ ಸೂರಿ ಪ್ರಹ್ಲಾದಗೆ ತೋರಿ ತವಾಂಘ್ರಿ ಸ ರೋರುಹಾವನು ಕಾಯ್ದೆ ಕಾರಣ್ಯನಿಧಿ 3 ಜಯಜಯ ದೇವವರೇಣ್ಯ ಮಹ ದ್ಭಯ ನಿವಾರಣನೆ ಅಗಣ್ಯ ಗುಣಾ ಶ್ರಯ ಘೋರ ದುರಿತಾರಣ್ಯ ಧನಂ ಜಯ ಜಗದೇಕ ಶರಣ್ಯ ಅಹ ಲಯವಿವರ್ಜಿತ ಲೋಕ ತ್ರಯ ವ್ಯಾಪ್ತ ನಿಜಭಕ್ತ ಪ್ರಿಯ ಘೋರಮಯ ಹರ ದಯ ಮಾಡೆನ್ನೊಳು ಲಕ್ಷ್ಮೀ 4 ಕುಟಲ ದ್ವೇಷದವನು ನೀನಲ್ಲ ನಿನ್ನಾ ರ್ಭಟಕಂಜಿದರು ಸುರರೆಲ್ಲ ನರ ನಟನೆ ತೋರಿದ್ಯೋ ಲಕ್ಷ್ಮೀನಲ್ಲ ನಾ ಪಾ ಸಟಿ ಕಾಣೆನಪ್ರತಿಮಲ್ಲ ಅಹ ವಟಪತ್ರಶಯನ ಧೂ ರ್ಜಟಿವಂದ್ಯ ಜಗನ್ನಾಥ ವಿಠಲ ಕೃತಾಂಜಲಿಪುಟದಿ ಬೇಡುವೆ ಲಕ್ಷ್ಮೀ5
--------------
ಜಗನ್ನಾಥದಾಸರು