ಒಟ್ಟು 9 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1 ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2 ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3 ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4 ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5
--------------
ಚಿದಾನಂದ ಅವಧೂತರು
ನಿನ್ನನೆ ನಂಬಿದೆ ಅನ್ಯರೊಬ್ಬರ ಕಾಣೆ | ಮಧ್ವರಾಯಾ ಪ ನಿಮ್ಮ ಸಿದ್ಧಾಂತದಿ ಮನವ ನಿಲ್ಲಿಸಯ್ಯ | ಮಧ್ವರಾಯಾ ಅಪ ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲು || ಮಧ್ವರಾಯಾ || ಗತಿಯ ಕಲ್ಪಿಸಿ ಸಜ್ಜನರ ತತಿಗಳ ಕಾಯಿ || ಮಧ್ವರಾಯಾ 1 ತಂದೆ ತಾಯಿ ಬಂಧು ಬಳಗವೆಲ್ಲವು ನೀನೆ | ಮಧ್ವರಾಯಾ | ಎಂದೆಂದಿಗು ನಿಮ್ಮ ಪೋದಿರುವಂತೆ ಮಾಡೈ | ಮಧ್ವರಾಯಾ 2 ಬಾಲಕೃಷ್ಣನ ಸೇವೆ ಮೇಲಾಗಿ ಮಾಡುವ | ಮಧ್ವರಾಯಾ | ಮೂಲ ಮೂವತ್ತೇಳು ಮೇಲು ಗ್ರಂಥಗಳಿತ್ತೆ | ಮಧ್ವರಾಯಾ 3 ಶ್ರೀನಿಧಿ ಕೃಷ್ಣನೆ ಜಗಕೆಲ್ಲ ದೊರೆಯೆಂಬ | ಮಧ್ವರಾಯಾ | ಹೆಸರು ಪೊತ್ತೆ | ಮಧ್ವರಾಯಾ 4 ಅಜಪದಕೆ ಬಂದು ಅಖಿಲರ ಪಾಲಿಪ | ಮಧ್ವರಾಯಾ |ವಿಜಯಸಾರಥಿ ಕೃಷ್ಣ ವಿಜಯವಿಠ್ಠಲಪ್ರಿಯ | ಮಧ್ವರಾಯಾ 5
--------------
ವಿಜಯದಾಸ
ಮುನಿಯುವರೇ ಕೃಷ್ಣಾ ಮುನಿಯುವರೆ ಪ ದಣಿಸಲಾಗದೊ ನಿನ್ನ ನೆನೆವ ಭಕುತರೊಳು ಅ.ಪ ಮುನಿಗಳು ಮನದೊಳು ಕ್ಷಣಬಿಡದಲೆ ನಿನ್ನ ದಣಿಸಿ ಕುಣಿಸುವರೊ ಮೌನದಿಂದಲಿ ನಾ ಮಣಿದು ಬೇಡುವೆ ಬರಿದೆ ಹಣಿದು ಬಿಸುಡುವರೆ ಕೆಣಕಿದವರ ನೀ ಕ್ಷಣದಿ ಕಾಪಾಡಿದೆ 1 ಬಲಿಯ ಯಾಚಿಸಿ ಭಕ್ತಿಬಲೆಗೆ ನೀ ಸಿಲುಕಿದೆ ಶಿಲೆಯನೊತ್ತಿ ಸುಶೀಲೆಯ ಪೊರೆದೆ ಜಲಧಿಶಯನಾ ನೀ ರಥಕೆ ಸಾರಥಿಯಾದೆ ಛಲವೇತಕೆನ್ನೊಳು ನೀನೆ ಗತಿ ಎಂದರೆ2 ಎಂಜಲಾಸೆಗೆ ಸೋತು ಶಬರಿಯ ಪೊರೆದೆ ಸಂಜೆ ಹಗಲೆನ್ನದೆ ಎಂಜಲ ಬಳಿದೆ ಅಂಜದೆ ಅಜಾಮಿಳಗೊಲಿದೆಯೋದೇವ ಅಂಜೆನೊ ಎಂದಿಗೂ ಕುಂಜರವರದಾ 3 ಶಪಥಮಾಡಿ ನಿನ್ನ ಪಂಥವ ಕೆಡಿಸಲು ಕುಪಿತನಾಗಲಿಲ್ಲ ಕುರುಪಿತಾಮಹನೊಳು ಆಪ್ತನಿಮಿತ್ತಬಾಂಧವನೆಂದು ನಿನ್ನ ಪ್ರಾಪ್ತಿಯ ಬೇಡಲು ಬಂದುದಕೆ ಈಗ 4 ಪರಿ ಅಂಕಿತ ಪೇಳದೆ ಬಿಂಕತನದಲಿ ಕಾಲವ ಕಳೆದೆ ಶಂಕರನುತ ಶ್ರೀ ವೇಂಕಟೇಶ ನಿನ್ನ ಕಿಂಕರನೆನಿಸೆನ್ನ ಸಂಕಟ ಹರಿಸೂ5
--------------
ಉರಗಾದ್ರಿವಾಸವಿಠಲದಾಸರು
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಂದಿಪೆ ಹರಿಹರನೇ | ನಿನಗೆ ನಾ ವೃಂದಾರಕನುತನೇ ಪ. ಬಂದು ಈ ಕ್ಷೇತ್ರದಿ ನಿಂದು ಸದ್ಭಕ್ತರ ಮೂರ್ತಿ ಅ.ಪ. ಚತುರ ಹಸ್ತದಿಂದಾ | ಶೋಭಿಸೆ ಅತಿ ಕೌತುಕದಿಂದಾ ಪಾದ ಕಮಲಜನ ತತಿಗೆ ತೋರದಂತೆ ಕ್ಷಿತಿಯಲಡಗಿದೇ 1 ಸೋಮಶೇಖರವಂದ್ಯಾ | ಆರ್ಧದ ಲಾಮಹ ಹರನಿಂದಾ ಪ್ರೇಮದಿ ಕೂಡಿಕೊಂಡೀ ಮಹಿ ಜನರಿಗೆ ನೀಮೋಹಕ ತೋರುವ ಜಗದ್ವಂದ್ಯಾ 2 ಪಾಪಿಗುಹನವರವಾ| ಕೆಡಿಸಲು ರೂಪಧರಿಸಿ ತಾಮಸರಿಗಂಧಮತಮ ಕೂಪದಿ ಕೆಡಹುವೆ ಶ್ರೀ ಮೋಹಿತ 3 ಅರ್ಧಹರನ ರೂಪಾ| ಕೃತಿಯಲಿ ಶುದ್ಧ ವಿಷ್ಣು ರೂಪಾ ಮುದ್ದು ಸುರಿವ ಭವ್ಯಾಂಗ ಸ್ವರೂಪ ಉದ್ಧರಿಸೆನ್ನನು ಶುದ್ಧ ಬುದ್ಧಿಮತಿಯನಿತ್ತು 4 ಶಂಖಚಕ್ರ ಅಭಯಾ| ತ್ರಿಶೂಲವ ಬಿಂಕದಿ ಧರಿಸಿದೆಯಾ ಪಂಕಹೋದ್ಭವೆ ಪಾರ್ವತಿಯ ಉಭ ಯಾಂಕದಲ್ಲಿ ಪೊಂದಿಹೆ ಶುಭಕಾಯಾ 5 ಅರ್ಧಶಿರದಿ ಮಕುಟಾ| ಆರ್ಧದಿ ಶುದ್ಧಗಂಗೆ ತ್ರಿಜಟಾ ಅರ್ಧಚಂದ್ರ ಶೋಭಿಸುತಿದೆ ಜಗತ್ತಿಗೆ ಅದ್ಭುತ ಅಚ್ಚರಿ ರೂಪಧಾರಕ 6 ಪಣೆಯ ತಿಲಕ ಢಾಳಾ | ಕಂಠಾಭ ರಣಗಳು ಪೂಮಾಲಾ ಮಿನುಗುವವಲ್ಲಿ ಪೀತಾಂಬರನುಟ್ಟಿಹ ಗುಣಗಣ ಪೂರ್ಣನೆ ಹನುಮನಯ್ಯ ಹರಿ7 ಮಾಯಾ | ಕವಿಸದೆ ಇನ್ನು ಕಾಯೊ ಜೀಯಾ ಘನ್ನ ಭಕ್ತಿ ಸುಜ್ಞಾನ ವೈರಾಗ್ಯವ ಮನ್ನಿಸಿ ಕರುಣಿಸಿ ನಿನ್ನ ಪದವಿ ಕೊಡು 8 ಹರನೊಳು ಹರ ಶಬ್ದಾ | ವಾಚ್ಯನೆ ಸಿರಿವರ ನಿರವದ್ಯಾ ಸರ್ವ ಶಬ್ದ ಸುರವಾಚ್ಯ ಈ ಪರಿಯೊಳು ಹರಿಹರ ಕ್ಷೇತ್ರದಿ ವರಗೃಹ ಮಾಡಿದಿ 9 ತುಂಗಭದ್ರ ತೀರಾ | ವಾಸನೆ ರಂಗ ಪಾಪ ದೂರಾ ಮಂಗಳ ಗೋಪಾಲಕೃಷ್ಣವಿಠಲ ಭವಹಿಂಗಿಸಿ ಪೊರೆ ದುಸ್ಸಂಗ ಬಿಡಿಸಿ ಹರಿ 10
--------------
ಅಂಬಾಬಾಯಿ
ಹನುಮಂತ ನೀ ಬಲು ಜಯವಂತನಯ್ಯ ಪ. ಅನುಮಾನವಿಲ್ಲವೊ ಆನಂದತೀರ್ಥಾರ್ಯ ಅ.ಪ. ರಾಮಸೇವಕನಾಗಿ ರಾವಣನ ಪುರವ ನಿ-ರ್ಧೂಮಮಾಡಿದ್ಯೊ ನಿಮಿಷದೊಳಗೆಭೂಮಿಪುತ್ರಿಗೆ ಮುದ್ರೆಯುಂಗುರವನಿತ್ತು ನೀಪ್ರೇಮಕುಶಲವ ರಾಮಪಾದÀಕÀರ್ಪಿಸಿದೆ 1 ಕೃಷ್ಣಾವತಾರದಲ್ಲಿ ಭೀಮನಾಗ್ಯವತರಿಸಿದುಷ್ಟ ದೈತ್ಯರನ್ನೆಲ್ಲ ಸಂಹರಿಸಿದೆದೃಷ್ಟಿಹೀನನಾದ ಧೃತರಾಷ್ಟ್ರವಂಶವನ್ನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಗರ್ಪಿಸಿದೆ 2 ಪತಿತ ಸಂಕರ ಪುಟ್ಟಿ ಮತವೆಲ್ಲ ಕೆಡಿಸಲುಮತಿಹೀನರಾಗೆ ಸಜ್ಜನರೆಲ್ಲಅತಿ ವೇಗದಲಿ ಮಧ್ವಯತಿಯಾಗಿ ಅವತರಿಸಿಗತಿಯ ತೋರಿಸಿದೆ ಹಯವದನ ನಿಜದಾಸ 3
--------------
ವಾದಿರಾಜ
ಙ್ಞÕನವೊಂದೇ ಸಾಕು ಮುಕ್ತಿಗೆ - ಇ - |ನ್ನೇನು ಬೇಕು ಹುಚ್ಚುಮರುಳು ಮಾನವನೆ ಪ.ಪಿತ ಮಾತೆಸತಿ ಸುತರನಗಲಿರಬೇಡ |ಯತಿಯಾಗಿ ಆರಣ್ಯ ಚರಿಸಲು ಬೇಡ ||ವ್ರತ - ನೇಮವ ಮಾಡಿ ದಣಿಯಲು ಬೇಡ |ಸತಿಯಿಲ್ಲದವಗೆ ಸದ್ಗತಿಯಿಲ್ಲೋ ಮೂಢ 1ಜಪತಪವನೆ ಮಾಡಿ ಸೊರಗಲುಬೇಡ |ಕಪಿಯಂತೆ ಅಡಿಗಡಿಗೆ ಹಾರಲುಬೇಡ ||(ಉಪವಾಸಪಾಶಕ್ಕೆ) ಸಿಕ್ಕಲುಬೇಡ |ಚಪಲತನದಲೇನು ಫಲವಿಲ್ಲೋ ಮೂಢ 2ಜಾಗರದಲಿ ನಿದ್ರೆ ಕೆಡಿಸಲು ಬೇಡ |ಓಗರವನು ಬಿಟ್ಟು ಒಣಗಲು ಬೇಡ ||ಸೋಗುಮಾಡಿ ಹೊತ್ತು ಕಳಿಯಲು ಬೇಡ |ಗೊಗೆ ಹಾಗೆ ಕಣ್ಣು ತಿರುಗಿಸಬೇಡ 3ಹೊನ್ನು - ಹೆಣ್ಣು - ಮಣ್ಣು ಜರೆದಿರಬೇಡ |ಅನ್ನ - ವಸ್ತ್ರಗಳನ್ನು ತೊರೆದಿರಬೇಡ ||ಬಣ್ಣದ ದೇಹವ ನೆಚ್ಚಲುಬೇಡ |ತಣ್ಣೀರೊಳಗೆ ಮುಳುಗಿ ನಡುಗಲು ಬೇಡ 4ಮಹಾವಿಷ್ಣುಮೂರ್ತಿಯ ಮರೆತಿರಬೇಡ |ಸಾಹಸದಿಂದಲಿ ಶ್ರಮ ಪಡಬೇಡ ||ಕುಹಕ ಬುದ್ಧಿಯಲಿ ಕುಣಿದಾಡಬೇಡ |ಮಹಿಮ ಪುರಂದರವಿಠಲನ ಮರೆಯದಿರೊ ಮೂಢ 5
--------------
ಪುರಂದರದಾಸರು
ಮುಟ್ಟು ಮುಟ್ಟೆನ್ನುತ ಮೂರ್ನಾರು ಹೊರಲೆಮುಟ್ಟಲಿ ಬಂತೆ ಬಿಕನಾಶಿಪಮುಟ್ಟೋ ನೀನೇ ಮಡಿಯೂ ನೀನೇಕೆಟ್ಟಿತು ನಿನಮಡಿ ಮೊದಲೇ ಜಲದಲಿ ನೀ ಮುಳುಗೆಕಡೆಯಲಿ ಆ ಉದಕವನೇ ತರುವೆದೇವರಿಗಿಂದಭಿಷೇಕವ ಮಾಡುತಅಹಂನ ಬಿಡು ನಿನ ಬಿಕನಾಶಿ1ಎಲುಬು ಚರ್ಮದಿ ಮಲಮೂತ್ರದ ಗೂಡಲಿನಲಿಯುತಲಿದ್ದೆ ಬಿಕನಾಶಿನೆಲೆಗೊಂಡಾ ನವ ದ್ವಾರದ ಜಲದೊಳುತೊಳಲುತ ಬಿಕನಾಶಿ2ಹುಟ್ಟುತಸೂತಕಹೊಂದುತಸೂತಕನಟ್ಟ ನಡುವೆ ಬಿಕನಾಶಿಪಟ್ಟಣದಾ ಕಾವೇರಿ ಮುಳುಗಲುಮುಟ್ಟು ತೇಲಿಯಿತೆ ಬಿಕನಾಶಿ3ಉತ್ತಮ ಹತ್ತಿ ಬತ್ತಿರಲಾಂಜನವೃಕ್ಷದಿ ಬೆಳೆವುದೆ ಬಿಕನಾಶಿಉತ್ತಮ ರೋಧನ ಭಾರವ ಕೆಡಿಸಲುಕೆಟ್ಟಿತು ನಿನ ಮಡಿ ಬಿಕನಾಶಿ4ನಾನಾ ಶಾಸ್ತ್ರವನೋದಿ ನಾ ನಿನ್ನ ಮರೆವೆನುಹೀನವ ಬಿಡು ನಿನ್ನ ಬಿಕನಾಶಿನಾನಾ ಶಾಖದಲಿ ಇರಲಾದರೂರ್ವಿಅದುರುಚಿತಿಳಿವುದೆ ಬಿಕನಾಶಿ5ಚರ್ಮವು ತೊಳೆದರೆ ಕರ್ಮವು ಹೋಯಿತೆಕರ್ಮವು ಬಿಡದು ನಿನ್ನ ಬಿಕನಾಶಿಒಮ್ಮೆ ಚಿದಾನಂದ ಪಾದವ ಸ್ಮರಿಸಲುನಿರ್ಮಲವಾದೆಯ ಬಿಕನಾಶಿ6
--------------
ಚಿದಾನಂದ ಅವಧೂತರು
ಹನುಮಂತ ನೀ ಬಲು ಜಯವಂತನಯ್ಯ |ಅನುಮಾನವಿಲ್ಲ ಆನಂದತೀರ್ಥರಾಯ ಪರಾಮಸೇವಕನಾಗಿ ರಾವಣನ ಪುರವ ನಿರ್ಧೂಮವ ಮಾಡಿದೆ ನಿಮಿಷದೊಳಗೆ ||ಭೂಮಿಯ ಪುತ್ರಿಗೆ ಮುದ್ರೆಯುಂಗುರವಿತ್ತು |ಕ್ಷೇಮ ಕುಶಲವ ಶ್ರೀರಾಮ ಪಾದಕರ್ಪಿಸಿದೆ 1ಕೃಷ್ಣಾವತಾರದಿ ಭೀಮನಾಗಿ ಬಂದುದುಷ್ಟ ದೈತ್ಯರನೆಲ್ಲ ಸಂಹರಿಸಿದೆ |ದೃಷ್ಟಿಹೀನ ಧೃತರಾಷ್ಟ್ರನ ವಂಶವನುಕಷ್ಟವಿಲ್ಲದೆ ಕೊಂದು ಶ್ರೀಕೃಷ್ಣಪಾದಕರ್ಪಿಸಿದೆ 2ಪತಿತ ಸಂಕರ ಹುಟ್ಟಿ ಮತವೆಲ್ಲ ಕೆಡಿಸಲುಮತಿ ಹೀನರಾದ ಸಜ್ಜನರಿಗೆಲ್ಲ ||ಅತಿ ಬೇಗದಲಿ ಮಧ್ವಯತಿರೂಪಧರಿಸಿ ಸದ್ಗತಿಪಾಲಿಸಿದೆಪುರಂದರವಿಠಲನ ದಾಸ3
--------------
ಪುರಂದರದಾಸರು