ಒಟ್ಟು 9 ಕಡೆಗಳಲ್ಲಿ , 3 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನೆ ಬಂದಿದೆ ಇದಿಗೊ ಮದ್ದಾನೆ ಪ ಜ್ಞಾನಿಗಳೊಳಾಡುವ ಮದ್ದಾನೆ ಅ ದೇವಕಿಯೊಳು ಪುಟ್ಟಿದಾನೆ - ವಸುದೇವನ ಪೆಸರೊಳೈತಂದ ಮದ್ದಾನೆಶ್ರೀ ವಾಸುದೇವನೆಂಬಾನೆ - ಗೋಪಿದೇವಿಯ ಗೃಹದೊಳಾಡುವ ಪುಟ್ಟಾನೆ 1 ನೀಲವರ್ಣದ ನಿಜದಾನೆ - ಸ್ವರ್ಣಮಾಲೆಗಳಿಟ್ಟು ಮೆರೆವ ಚಲುವಾನೆಶ್ರೀಲೋಲನೆನಿಪ ಪಟ್ಟದಾನೆ - ದುಷ್ಟಕಾಲಿಂಗನ ಪೆಡೆಯ ಮೆಟ್ಟಿ ತುಳಿದಾನೆ 2 ಬಾಲೇಂದು ಮುಖದ ಮರಿಯಾನೆ - ಕದ್ದುಪಾಲನ್ನು ಕುಡಿದ ಮರಿಯಾನೆಕೈಲಿ ಗಿರಿಯನೆತ್ತಿದಾನೆಕಾಳ್ಕಿಚ್ಚನ್ನು ನುಂಗಿದ ಪಟ್ಟದಾನೆ 3 ಧೇನುಕಾಸುರನ ಕೊಂದಾನೆತನಗೆ ಜೋಡಿಲ್ಲದಿಹ ನಿಜದಾನೆಮಾನವರಿಗೆಲ್ಲ ಸಿಲ್ಕದಾನೆಶೌನಕಾದಿಗಳೊಂದಿಗಿಪ್ಪಾನೆ 4 ಮಲ್ಲರೊಡನೆ ಗೆಲಿದಾನೆ - ಕಡುಖುಲ್ಲ ಕಂಸನ ಕೆಡಹಿದಾನೆ - ವಿದ್ಯೆ ಸಾಂದೀಪರಲಿ ಕಲಿತ ಮರಿಯಾನೆಸಲೆ ಭಕ್ತರ ಕಾವ ಪುಟ್ಟಾನೆ 5 ತರಳೆ ರುಕ್ಮಿಣಿಯ ತಂದಾನೆ - ಬಹುಕರುಣದಿಂ ಪಾಂಡವರ ಪೊರೆದಾನೆವರ ವೇಲಾಪುರದೊಳಿಪ್ಪಾನೆಸಿರಿಯಾದಿಕೇಶವನೆಂಬ ಮದ್ದಾನೆ 6
--------------
ಕನಕದಾಸ
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ
ನಾಮವೆ ಗತಿಯೆನಗೇ ಕೇಶವ ನಿನ್ನ ಪ್ರೇಮವೆ ಗತಿಯೆನಗೇ ಪ ರಾಮ ನಿನ್ನಯ ನಾಮವ ಸುಮತಿ ಸ್ಮರಿಸಲು ಭೂಮಿಗಭಯವಿತ್ತ ಸ್ವಾಮಿಯೇ ನಿನ್ನ ಅ.ಪ. ತರುಣ ಪ್ರಹ್ಲಾದ ನನೀಲ ದ್ರೌಪದಿ ಮತ್ತೆ ದುರುಳ ವಾಲ್ಮೀಕ ವಿಭೀಷಣರನ್ನು ಕಿನ್ನರ ಮರುತಾತ್ಮಜ ಋಷಿಗಳ ಪೊರೆದಂಥ ನರಹರಿ ಕೇಶವನೆಂಬ 1 ಇಂತೀ ಭಕ್ತರ ಸಲಹಿದ ಪರಿಯ ಸತತ ಭಜಕರ ಪೊರೆವ ಶ್ರೀಧರನ ಕಂತುಪಿತನ ನಾಮ ಸ್ಮರಿಸುವ ದಾಸರ ಅಂತಾರಾತ್ಮವ ಶುದ್ಧಿಗೊಳಿಸುವ ಹರಿಯ 2 ಅಂತ್ಯಕಾಲದಲಿ ಬಂದೊದಗುವ ಪರಿಯ ಕುಂತಿಯ ಸುತರನ್ನು ಸಲಹಿದ ಪರಿಯ ಸಂತತ ದೂರ್ವಾಪಟ್ಟಣದಲ್ಲಿ ಮೆರೆಯುವ ಅಂತ್ಯಾದಿರಹಿತ ಶ್ರೀ ಚನ್ನಕೇಶವನ 3
--------------
ಕರ್ಕಿ ಕೇಶವದಾಸ
ಬನ್ನಿರಿ ದಾಸರೇ ಪೋಗುವಾ ನಮ್ಮ ಚನ್ನಕೇಶವನೆಂಬ ಹರಿಮಂದಿರಕೇ ಪ ಬನ್ನಿರಿ ಪೋಗುವಾ ಗುಡಿಯೊಳು ತಿನ್ನುವಾ ಚನ್ನಗೆ ಅರ್ಪಿಸಿ ತಂದ ಪಕ್ವಗಳ ಅ.ಪ. ನಾ ತಂದಿರುವೆನು ಪರಮಾನ್ನವನ್ನು ತಾತನ ನಾಮಕ್ಕೆ ಬೆರಿಸಿ ಮಾಡಿದೆನು ನೀತಿಯೊಳಾಭಕ್ತಿ ಮಧುಕ್ಷೀರವನ್ನು ಸತ್ಯದಿ ಕೂಡಿಸಿ ಸೇವಿಸುವಾ 1 ಪರಹಿತವೆನ್ನುವ ಸಕ್ಕರೆ ತಂದು ನಾ ಬೆರಿಸುವೆ ಧರ್ಮಗಳೆಂಬ ಪಾಯಸಕೇ ಹರಿಯ ಕೀರ್ತನೆಗಳ ಅಮೃತವ ಸೇರಿಸಿ ಪರಮಾನ್ನವೀ ರೀತಿ ಮಾಡಿರುವೆನಯ್ಯ 2 ಹರಿಭಕ್ತಿಯೆಂಬುವ ತಂಡುಲವನೆ ತಂದು ಹರಿಯ ಸ್ಮರಣೆಯೆಂಬ ವುದಕದಿ ತೊಳೆದು ಹರಿಯ ಭಜನೆಯೆಂಬ ಬೆಂಕಿಯ ಮೇಲಿಟ್ಟು ಸರಸದಿ ನಾ ಪಾಕವ ಮಾಡಿರುವೆ 3 ಸನ್ನುತ ದೂರ್ವಾಪಟ್ಟಣದಿ ನಿತ್ತಿರುವಂಥ ಪನ್ನಗಶಯನ ಶ್ರೀ ಹರಿಯ ನೆನೆಯುತ್ತ ಉನ್ನತ ಸೇವೆಯಿಂದಾತನ ಮೆಚ್ಚಿಸಿ ತಿನ್ನುವಾ ಕೇಶವ ನೀಯುವ ವರವಾ 4
--------------
ಕರ್ಕಿ ಕೇಶವದಾಸ
ಭವ ಭಯ ವಿನಾಶ ಭೋ ಭಕ್ತವಿಲಾಸ ಭೋ ಪಾ-ಪವಿನಾಶ ಭೋ ಬಾಡದ ರಂಗೇಶ ಭೋ ಪ ಹರಿಯ ಸುತನಿಗೆ ಅಭಯವನಿತ್ತೆ ಹರಿಯ ಮಗನಾ ಕೊಂದೆಹರಿಯೆನಲು ಹರಿರೂಪ ತಾಳಿದೆಹರಿಯೊಳಡಗಿದೆ ಮತ್ತೆಹರಿಯನಗ್ರಜ ಕೋಟಿ ತೇಜನಹರಿಯ ವದನನೆಂಬ1 ಶಿವನ ಮಗಳೊಡಗೂಡಿ ಮತ್ತೆಶಿವಮಗಳನು ಮಾವನಿಗಿತ್ತೆಶಿವನ ಉಪಟಳಕಳುಕಿ ಗೋಕುಲಶಿವನ ಕರದಲಿ ಪೊತ್ತೆಶಿವನ ಧನುವನು ಖಂಡಿಸಿ ಮತ್ತೆಶಿವನ ತಲೆಯೇರಿ ನಿಂದೆಶಿವನ ಭೋಜನವಾಹನ ಸುತನಿಗೆಶಿವನ ಪ್ರತಿಪಾಲನೆಂಬ 2 ಕಮಲವನು ಈರಡಿಯ ಮಾಡಿದೆಕಮಲ ಮೊರೆಯಿಡಲಂದುಕಮಲದಲಿ ಬ್ರಹ್ಮಾಂಡ ತೋರಿದೆಕಮಲಧರ ನೀನೆಂದು ಕಮಲವನು ಕದ್ದೊಯ್ದ ಕಳ್ಳನ ಸದೆದುಕಮಲವ ತಂದೆಕಮಲಮುಖಿಯಳ ಕಾಯ್ದ ಕಾಗಿನೆಲೆವಿಮಲ ಆದಿಕೇಶವನೆಂಬ 3
--------------
ಕನಕದಾಸ
ರಾಮನ ನಾಮವ ಪ್ರೇಮದಿ ಭಜಿಸಲು ರಾಮನು ವಲಿಯುವಾ ಬಿಡದೆ ಪಾಲಿಸುವಾ ಪ ಕಾಮಿತ ವರಗಳ ನೀಯುತ ಭಜಕರ ಸ್ವಾಮಿಯು ವಲಿದೆಮ್ಮ ನಿರುತ ಪಾಲಿಸುವಾ ಅ.ಪ. ತರಳರ ಮಾತಿಗೆ ಸೈಯೆಂದು ನುಡಿಯುತ್ತ ಪರಮ ಸಾಮ್ರಾಜ್ಯದ ಪದವಿಯ ಕೊಡುತ್ತಾ ಸರಳರ ಹೃದಯವ ನೀಕ್ಷಿಸಿ ಜವದೊಳು ಕರೆದು ಸಾಯುಜ್ಯದ ಪದವಿಯ ಕೊಡುವಾ 1 ದುರುಳರ ಸುಖಗಳಿಗಂತಕನಾಗುತ ಶರಣರ ಪಿಡಿದು ಶಿಷ್ಟರನು ಕಾಯುತ್ತ ಭರದಿಂದ ಸುಜನರ ಕಷ್ಟವ ತರಿವಾ 2 ಕೌಸಲೆ ಗರ್ಭದಿ ಬಂದ ಶ್ರೀಹರಿ ತಾನು ವಾಸುಕಿ ಭಾರವ ನಿಳುಹಲಿಕ್ಕೆ ವಾಸ ಮಾಡುವನೀಗ ವರ ದೂರ್ವಾಪುರದಲ್ಲಿ ದಾಸನ ಸಲಹುವ ಕೇಶವನೆಂಬ 3
--------------
ಕರ್ಕಿ ಕೇಶವದಾಸ
ಶ್ರೀ ರಾಮ ರಘುರಾಮ ಭಾರ್ಗವ ರಾಮಾ ವಿರಚಿತ ಕಾಮ ಮೇಘ ಶ್ಯಾಮ ರಾಮಾ ರಾಮಾ ಪ ದಶರಥ ರಾಮ ಶ್ರೀರವಿಕುಲ ಸೋಮಾ ದಶರೂಪಧರ ರಾಮ ಕೌಸಲೆ ರಾಮಾ ರಾಮಾ 1 ಸಾಮಗಾನ ಪ್ರೇಮ ಕಾಂಚನ ಧಾಮಾ ರಾಮ ನಿಸ್ಸಿಮಾ ಶ್ರೀ ಹಲಧರ ರಾಮಾ ರಾಮಾ 2 ರಾಮ ಸೀತಾರಾಮ ಸದ್ಗುಣಧಾಮಾ ರಾಮ ಶ್ರೀ ಚೆನ್ನಕೇಶವನೆಂಬ ರಾಮಾ ರಾಮಾ 3
--------------
ಕರ್ಕಿ ಕೇಶವದಾಸ
ಹರಿನಾಮ ಮರೆಯ ಬೇಡಯ್ಯ ಪರಿ ದುರಿತಗಳನ್ನು ಅದು ನೀಗುವುದಯ್ಯಾ ಪ ತರಳಪ್ರಲ್ಹಾದನಿಗೊಲಿದ ನಾಮವುಯಿದು ದುರುಳ ರಕ್ಕಸರನ್ನು ತರಿದ ನಾಮವೋ 1 ನಿರುತದಿ ಭಕ್ತರಿಗೊಲಿವ ನಾಮವುಯಿದು ಸರಸದಿ ಭಜಕರ ಪೊರೆವ ನಾಮವೋ 2 ಭಾಮೆಗಕ್ಷಯವಿತ್ತ ಪರಮನಾಮವುಯಿದು ಪ್ರೇಮದಿ ದಾಸರಿಗೊಲಿವ ನಾಮವೋ 3 ಕಾಮಿತ ವರಗಳನೀವ ನಾಮವುಯಿದು ನಿತ್ಯ ಭಜಿಪ ನಾಮವೋ 4 ದಶರೂಪ ಧರಿಸಿದ ದಿವ್ಯ ನಾಮವುಯಿದು ದಶಕಂಠನನು ಕೊಂದ ಶ್ರೀನಾಮವೋ 5 ಕೇಶವ ರೂಪದಿ ಮೆರೆವ ನಾಮವುಯಿದು ಪಾಶವ ಕಡಿಯುವ ನಿಜ ನಾಮವೋ 6 ವರ ದೂರ್ವಾಪುರದ ಶ್ರೀಹರಿಯ ನಾಮವುಯಿದು ಮರೆಯದೆ ಭಕ್ತರ ಪೊರೆವ ನಾಮವೋ 7 ಸಿರಿ ಚನ್ನಕೇಶವನೆಂಬ ನಾಮವೋ 8
--------------
ಕರ್ಕಿ ಕೇಶವದಾಸ
ನಿನ್ನ ನಾಮವೆ ಎನಗೆ ಅಮೃತಾನ್ನವು |ಕೇಶವನೆಂಬ ನಾಮ ಕರಿದ ಹೂರಣಗಡಬು |ನಾರಾಯಣನ ನಾಮ ನೊರೆಹಾಲು ಸಕ್ಕರೆ |ಯದುಪತಿಯೆಂಬ ನಾಮ ಎಣ್ಣೂರಿಗೆಯ ರಾಶಿ |ದೇವಕಿಸುತನ ನಾಮ ವಧ್ಯನ್ನದಾ ಮುದ್ದೆ |ಗರುಡವಾಹನನ ನಾಮ ಘೃತಪಯೋದಧಿತಕ್ರ |ಈ ಪರಿಯ ನಾಮಾವಳಿಯನು ಸವಿದುಂಡು |
--------------
ಪುರಂದರದಾಸರು