ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ಸತ್ಪಾತ್ರ ಪ. ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ ಅಷ್ಟು ದೇವತೆಗಳಿಗೆ ಅಭಿವಂದಿಸಿ ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1 ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2 ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ ಹರುಷದಲಿ ಈ ಯಾತ್ರೆ ಗೈದಲ್ಲದೆ ಹರಿದು ಪೋಗದು ಜೀವದಜ್ಞಾನದಂಧತೆಯು ಪರಮ ಸುಜ್ಞಾನದಾತನ ನೋಡಬನ್ನಿ 3 ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು ಸದ್ವೈಷ್ಣವರ ಸಂಗ ಸನ್ಮೋದ ಲಾಭ ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4 ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು ಗೋಪಿಕಾಜನಪ್ರಿಯ ಗೋಪಿಬಾಲ ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ ಈ ಪರಮ ಪುರುಷನೇ ತಂದಿತ್ತನೆಂದೂ 5
--------------
ಅಂಬಾಬಾಯಿ
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ