ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜನಾಭನ ವನಜಾಂಘ್ರಿಗಳಿಗೆ ಕರವ ಕೊಂಡಾಡುವೆ ಪದವ 1 ದೇವದೈತ್ಯರು ಕೂಡಿ ಪಾಲಾಂಬುಧಿಯಲ್ಲಿ ಮೇರು ಮಂದರವ ಕಡೆಗೋಲು ಮಾಡಿದರು2 ವಾಸುಕಿ ಶರಧಿ ಮಧ್ಯದಲಿ ಹರಿ ಕೂರುಮನಾಗಿ ಮಂದರವನೆತ್ತಿದನು3 ಕಾಲಕೂಟ ವಿಷವಾಯು ಪಾನಮಾಡುತಲಿ ಮಹದೇವ ಕೋಪದಿ ನುಂಗಿ ನೀಲಕಂಠೆನಿಸೆ 4 ಕೌಸ್ತುಭ ಕಾಮಧೇನು ಸುರತರುವು ಹಸ್ತಿ ತೇಜಿಯು ಕಲ್ಪವೃಕ್ಷ ಸುಧೆ ಉದಿಸೆ 5 ಸಿಂಧು ಮಥನವ ಮಾಡಲು ಶ್ರೀದೇವಿ ಜನಿಸೆ ಮಂದಾರಮಾಲೆ ಕೈಯಿಂದಲಿ ಪಿಡಿದು 6 ಅರ್ಕಚಂದ್ರರ ಕಾಂತಿಗಧಿಕಾದ ಮುಖವು ದಿಕ್ಕು ದಿಕ್ಕಿಗೆ ಮಿಂಚಿನಂತೆ ಹೊಳೆಯುತಲಿ 7 ವಜ್ರಾಭರಣವು ಕಾಲಗೆಜ್ಜೆ ಸರಪಳಿಯು ಮಲ್ಲಿಗೆ ಕುಸುಮಗಳೊಂದೊಂದ್ಹೆಜ್ಜೆಗುದುರುತಲಿ 8 ಕುಡಿಹುಬ್ಬು ಕಡೆಗಣ್ಣ ನೋಡುತಲಿ ನಡೆದು ಬಂದಳು ತಾ ಬಡನಡುವಿನ ಒಯ್ಯಾರಿ 9 ಅತಿಹಾಸ್ಯಗಳಿಂದ ದೇವತೆಗಳ ಮಧ್ಯೆ ಈ ಪತಿ ಎಲ್ಲಿಹನೋ ತಾ 10 ಅರ್ಕನ್ವಲ್ಲೆನೆ ಅಗ್ನಿಯಂತೆ ಸುಡುತಿರುವನ ಶಕ್ರನ ಒಲ್ಲೆ ಮೈಯೆಲ್ಲ ಕಣ್ಣವಗೆ 11 ಸೋಮನ ಒಲ್ಲೆ ಕಳೆಗುಂದಿ ತಿರುಗುವನ ಪಾವನ ನಮ್ಮ ಗಾಳಿರೂಪದವನ12 ರುದ್ರನ್ವಲ್ಲೆನೆ ರುಂಡಮಾಲೆ ಹಾಕುವನ ಮುದಿಹದ್ದಿನಂದದಲಿ ಗರುಡ ಹಾರ್ಯಾಡುವನಲ್ಲೆ 13 ಶೇಷನ ಒಲ್ಲೆ ವಿಷದ ದೇಹದವನ ಗ- ಣೇಶನ್ವಲ್ಲೆನೆ ಡೊಳ್ಳು ಹೊಟ್ಟೆ ಗಜಮುಖನ 14 ಬ್ರಹ್ಮ ನಾಲಕು ಮೋರೆಗುಮ್ಮನಂತಿರುವ ಯಮ- ಧರ್ಮನ ಒಲ್ಲೆ ನಿಷ್ಕರುಣ ಘಾತಕನ 15 ಸುರಜನರ ನೋಡಿ ಗಾಬರ್ಯಾಗುವೆನು 16 ಮಂದ ಹಾಸ್ಯಗಳಿಂದ ಮಾತನಾಡುತಲಿ ಇಂದಿರೆಪತಿ ಪಾದಾರವಿಂದ ನೋಡುತಲಿ 17 ಗುಣದಲಿ ಗಂಭೀರ ಮಣಿಕೋಟಿತೇಜ ಎಣಿಕಿಲ್ಲದ ಚೆಲುವ ನೋಡೆನ್ನ ಪ್ರಾಣನಾಥ 18 ಹದಿನಾಲ್ಕು ಲೋಕ ತನ್ನುದರದಲ್ಲಿರುವ ಪದುಮಾಕ್ಷಗ್ವನಮಾಲೆ ಮುದದಿಂದ್ಹಾಕುವೆನು 19 ಕರ ವೈಜಯಂತಿ ಸರ ಮಣಿ ನಾ ಇರುತಿರೆ ವಕ್ಷಸ್ಥಳವು 20 ಶ್ಯಾಮವರ್ಣನ ಮುದ್ದು ಕಾಮನಜನಕ ಪ್ರೇಮದಿಂದ್ವೊಲಿವೆ ನಾ ಕಾಮಿಸಿ ಹರಿಯ 21 ಕಮಲಮುಖಿ ಬ್ಯಾಗ ಕಮಲಾಕ್ಷನ್ನ ನೋಡಿ ಕಮಲಮಾಲೆಯ ತಾ ಕಂದರದಲ್ಹಾಕಿದಳು 22 ಅಂಗನೆ ರಚಿಸಿ ತಾ ನಿಂತಳು ನಗುತ 23 ರತ್ನ ಮಂಟಪ ಚಿನ್ನ ಚಿತ್ರ ಪೀಠದಲಿ ಲಕ್ಷ್ಮೀನಾರಾಯಣರು ಒಪ್ಪಿ ಕುಳಿತಿರಲು 24 ಸಾಗರರಾಜ ತನ್ನ ಭಾಗೀರಥಿ ಕೂಡಿ ಸಿರಿ ಧಾರೆಯನೆರೆದ 25 ಅಚ್ಚುತ ಲಕುಮಿಗೆ ಕಟ್ಟಿದ ನಗುತ 26 ಮೇಲು ಕರಿಮಣಿ ಮಂಗಳ ಸೂತ್ರವ ಪಿಡಿದು ಶ್ರೀ ಲೋಲ ಲಕುಮಿಗೆ ತಾ ಕಟ್ಟಿದ ನಗುತ 27 ವಂಕಿ ಕಂಕಣ ಮುತ್ತಿನ ಪಂಚಾಳಿಪದಕ ಪಂಕಜಮುಖಿಗೆ ಅಲಂಕರಿಸಿದರು 28 ಸರಿಗೆ ಸರಗಳು ನಾಗಮುರಿಗೆ ಕಟ್ಟಾಣಿ ವರಮಾಲಕ್ಷುಮಿಯ ಸಿರಿಮುಡಿಗೆ ಮಲ್ಲಿಗೆಯ 29 ನಡುವಿನ್ವೊಡ್ಯಾಣ ಹೊಸ ಬಿಡಿಮುತ್ತಿನ ದಂಡೆ ಸಿರಿ ಪರಮಾತ್ಮನ ತೊಡೆಯಲ್ಲೊಪ್ಪಿರಲು 30 ಇಂದಿರೆ ಮುಖವ ಆ- ನಂದ ಬಾಷ್ಪಗಳು ಕಣ್ಣಿಂದಲುದುರಿದವು 31 ರಂಗನ ಕಂಗಳ ಬಿಂದು ಮಾತ್ರದಲಿ ಅಂಗನೆ ತುಳಸಿ ತಾನವತರಿಸಿದಳು32 ಪಚ್ಚದಂತ್ಹೊಳೆವೊ ಶ್ರೀ ತುಳಸಿ ದೇವಿಯರ ಅಚ್ಚುತ ತನ್ನಂಕದಲ್ಲಿ ಧರಿಸಿದನು 33 ಮಂಗಳಾಷ್ಟಕ ಹೇಳುತ ಇಂದ್ರಾದಿ ಸುರರು ರಂಗ ಲಕ್ಷುಮಿಗೆ ಲಗ್ನವ ಮಾಡಿಸಿದರು 34 ಅಂತರಿಕ್ಷದಿ ಭೇರಿನಾದ ಸುರತರುವು ನಿಂತು ಕರೆದಿತು ದಿವ್ಯ ಸಂಪಿಗೆ ಮಳೆಯ 35 ಲಾಜಾಹೋಮವ ಮಾಡಿ ಭೂಮವನುಂಡು ನಾಗಶಯನಗೆ ನಾಗೋಲಿ ಮಾಡಿದರು 36 ಸಿಂಧುರಾಜನ ರಾಣಿಗೆ ಸಿಂಧೂಪವನಿತ್ತು ಗಜ ಚೆಂದದಿ ಬರೆದು 37 ಚೆಲುವೆ ನೀ ಬೇಕಾದರೆ ಹಿಡಿಯೆಂದನು ರಂಗ 38 ಅಚ್ಚುತ ಎನ್ನಾನೆ ಲೆಕ್ಕಿಲ್ಲದ್ಹಣವ ಕೊಟ್ಟರೆ ಕೊಡುವೆನೆಂದಳು ಲಕ್ಷುಮಿ ನಗುತ 39 ತುಂಬಿ ಮರದ ಬಾಗಿನವ ಸಿರಿ ತಾ ಋಷಿಪತ್ನೇರನೆ ಕರೆದು40 ತುಂಬಿ ಮರದ ಬಾಗಿನವ ಹರದಿ ಕೊಟ್ಟಳು ತಾ ಋಷಿಪತ್ನೇರನೆ ಕರೆದು 41 ಕುಂದಣದ್ಹೊನ್ನಕೂಸಿನ ತೊಟ್ಟಿಲೊಳಿಟ್ಟು ಕಂದನಾಡಿಸಿ ಜೋಜೋ ಎಂದು ಪಾಡಿದರು42 ಕರಿ ಎಂದನು ರಂಗ 43 ಸುರದೇವತೆಗಳಿಗೆ ಸುಧೆ ಎರೆಯಬೇಕಿನ್ನು ಕರಿ ಎಂದಳು ಲಕ್ಷ್ಮಿ 44 ಹೆಣ್ಣನೊಪ್ಪಿಸಿಕೊಟ್ಟು ಚಿನ್ನದಾರತಿಯ ಕರ್ನೆ(ನ್ಯ?) ಸರಸ್ವತಿ ಭಾರತಿ ಬೆಳಗಿದರಾಗ 45 ಈರೇಳು ಲೋಕದೊಡೆಯನು ನೀನಾಗೆಂದು ಬಹುಜನರ್ಹರಸ್ಯೆರೆದರು ಮಂತ್ರಾಕ್ಷತೆಯ 46 ಪೀತಾಂಬರಧಾರಿ ತನ್ನ ಪ್ರೀತ್ಯುಳ್ಳಜನಕೆ ಮಾತುಳಾಂತಕ ಮಾಮನೆ ಪ್ರಸ್ತ ಮಾಡಿದನು 47 ಸಾಲು ಕುಡಿಎಲೆ ಹಾಕಿ ಮೇಲು ಮಂಡಿಗೆಯ ಹಾಲು ಸಕ್ಕರೆ ಶಾಖ ಪಾಕ ಬಡಿಸಿದರು 48 ಎಣ್ಣೋರಿಗೆ ಫೇಣಿ ಪರಮಾನ್ನ ಶಾಲ್ಯಾನ್ನ ಸಣ್ಣಶ್ಯಾವಿಗೆ ತುಪ್ಪವನ್ನು ಬಡಿಸಿದರು 49 ಏಕಾಪೋಶನ ಹಾಕಿದ ಶೀಕಾಂತಾಮೃತವ ಆ ಕಾಲದಿ ಸುರರುಂಡು ತೃಪ್ತರಾಗಿಹರು 50 ಅಮೃತ ಮಥನವ ಕೇಳಿದ ಜನಕೆ
--------------
ಹರಪನಹಳ್ಳಿಭೀಮವ್ವ
ಇವನ ಹಿಡಿದುಕೊಂಡು ಹೋಗಲೊ ಜೋಗಿ |ಇವ ನಮ್ಮ ಮಾತು ಕೇಳದೆ ಪುಂಡನಾದನು ಪಆಡುಲಾಡುತ ಬಂದು ಮಡುವಿನೊಳ್ ಮುಳುಗಿದ |ಬೇಡವೆಂದರೆ ಬೆಟ್ಟ ಬೆನ್ನಲಿ ನೆಗಹಿದ ||ಓಡುತೋಡುತ ಬಂದು ದಾಡೆಯಿಂದ ಸೀಳ್ವ |ನೋಡ ಹೋದರೆ ಕಣ್ಣ ತರೆದಂಜಿಸುವ 1ಹುಲ್ಲಲಿ ಬ್ರಾಹ್ಮಣನ ಕಣ್ಣು ಕುಕ್ಕಿದ ಬುದ್ಧಿ ||ಅಲ್ಲವೆಂದರೆ ಕೊಡಲಿಯ ಪಿಡಿದೆತ್ತಿದ ||ಬಿಲ್ಲನು ಎಡದ ಕೈಯಿಂದಲಿ ಎತ್ತಿದ |ಬಲ್ಲಿದಮಾವನ ಶಿರವನರಿದು ಬಂದ2ಬತ್ತಲೆ ಕುದುರೆಯ ಹತ್ತಬೇಡೆಂದರೆ |ಹತ್ತುವ ಶ್ರೀಕೃಷ್ಣ ಚೆಂದದಿಂದ ||ಭಕ್ತವತ್ಸಲ ನಮ್ಮ ಪುರಂದರವಿಠಲನ |ಅತ್ತ ಹಿಡಿದು ಕೊಂಡು ಹೋಗಯ್ಯ ಜೋಗಿ 3
--------------
ಪುರಂದರದಾಸರು
ಬಗೆಬಗೆ ಆಟಗಳೆಲ್ಲಿ ಕಲಿತೆಯೊ |ಜಗದ ಮೋಹಕನೆ ಪಖಗವರಗಮನನೆಅಗಣಿತಮಹಿಮನೆ |ಜಗದೊಳು ನೀ ಬಹು ಮಿಗಿಲಾಗಿ |ಪರಿಅ.ಪಒಬ್ಬಳ ಬಸಿರಿಂದಲಿ ಬಂದು-ಮ-|ತ್ತೊಬ್ಬಳ ಕೈಯಿಂದಲಿ ಬೆಳೆದು ||ಕೊಬ್ಬಿದ ಭೂಭಾರವನಿಳುಹಲು ಇಂಥ |ತಬ್ಬಿಬ್ಬಾಟಗಳೆಲ್ಲಿ ಕಲಿತೆಯೊ 1ಮಗುವಾಗಿ ಪೂತಣಿ ಮೊಲೆಯ-ಉಂಡು |ನಗುತಲವಳ ಅಸುವನೆ ಕೊಂಡು |ಅಘಹರ ನೀ ಗೋಪಿಯೊಳು ಜನಿಸಿ ಇಂಥ |ಸೊಗಸಿನ ಆಟಗಳೆಲ್ಲಿ ಕಲಿತೆಯೊ 2ಲೋಕರಂತೆ ನೀ ಮಣ್ಣನು ತಿನಲು |ತಾ ಕೋಪಿಸಿ ಜನನಿಯು ಬೇಗ ||ಓಕರಿಸೆನ್ನಲು ಬಾಯೊಳು ಸಕಲ |ಲೋಕವ ತೋರಿದುದೆಲ್ಲಿ ಕಲಿತೆಯೊ | 3ಮಡುವ ಧುಮುಕಿ ಕಾಳಿಂಗನ ಪಿಡಿದು |ಪಡೆಯ ಮೇಲೆ ಕುಣಿದಾಡುತಿರೆ ||ಮಡದಿಯರು ನಿನ್ನ ಬಿಡದೆ ಬೇಡಲು |ಕಡುದಯೆದೋರಿದುದೆಲ್ಲಿ ಕಲಿತೆಯೊ | 4ಒಂದುಪಾದಭೂಮಿಯಲಿ ವ್ಯಾಪಿಸಿ ಮ-|ತ್ತೊಂದುಪಾದಗಗನಕ್ಕಿಡಲು ||ಅಂದದಿ ಬಲಿಯ ಶಿರದಿ ಮೂರನೆಯದಿಟ್ಟು |ಬಂಧಿಸಿದಾಟಗಳೆಲ್ಲಿ ಕಲಿತೆಯೊ | 5ಭರದಿ ಭಸ್ಮಾಸುರ ವರವನು ಪಡೆದು |ಹರನು ಶಿರದಿ ಕರವಿಡ ಬರಲು ||ತರುಣಿರೂಪವ ತಾಳಿ ಉರಿಹಸ್ತದವನ |ಮರುಳುಗೊಳಿಸಿದುದನೆಲ್ಲಿ ಕಲಿತೆಯೊ | 6ಜಗಕೆ ಮೂಲನೆಂದು ನಾಗರಾಜ ಕರೆಯೆ |ಖಗವಾಹನನಾಗದೆ ನೀ ಬಂದು ||ನಗುತ ನಗುತ ಆ ವಿಗಡನಕ್ರನ ಕೊಂದ |ಹಗರಣದಾಟಗಳೆಲ್ಲಿ ಕಲಿತೆಯೊ 7ವೇದಗಳರಸಿಯು ಕಾಣದ ಬ್ರಹ್ಮ ನೀ-|ನಾದರದಲಿ ವಿದುರನ ಗೃಹದಿ ||ಮೋದದಿ ಒಕ್ಕುಡಿತೆಯ ಪಾಲನೆ ಕೊಂಡು |ಹಾದಿಯೊಳ್ ಹರಿಸಿದುದೆಲ್ಲಿ ಕಲಿತೆಯೊ 8ಡಂಬಕಹಿರಣ್ಯಕಶಿಪು ಪ್ರಹ್ಲಾದನ |ಹಂಬಲವಿಲ್ಲದೆ ಶಿಕ್ಷಿಸಲು ||ಸ್ತಂಭದಿ ಭಕ್ತಗೆ ರೂಪವ ತೋರಿ |ಸಂಭ್ರಮವಿತ್ತುದನೆಲ್ಲಿ ಕಲಿತೆಯೊ 9ಚಕ್ರಧರನೆ ಜರಾತನಯನೊಂದಿಗೆ ಕಾದಿ |ಸಿಕ್ಕಿ ಓಡಿದವನಿವನೆಂದೆನಿಸಿ ||ಭಕ್ತ ಭೀಮನ ಕೈಯಲಿ ಕೊಲ್ಲಿಸಿದ |ಠಕ್ಕಿನಾಟಗಳನೆಲ್ಲಿ ಕಲಿತೆಯೊ | 10ಆ ಶಿರವಾತನ ತಂದೆಯ ಕರದೊಳು |ಸೂಸುತ ರಕ್ತವ ಬೀಳುತಿರೆ ||ಸೋಸಿ ನೋಡದೆ ರುಂಡ ಬಿಸುಡಲವನ ಶಿರ |ಸಾಸಿರ ಮಾಡಿದುದೆಲ್ಲಿ ಕಲಿತೆಯೊ 11ಪ್ರಾಣ ಸೆಳೆವನೀ ದಿನವೆಂದರ್ಜುನ |ಧೇನಿಸದಲೆ ಸೈಂಧವಗೆನಲು ||ಕಾಣದಂತೆ ಸೂರ್ಯಗೆ ಚಕ್ರವನಿಟ್ಟು |ಬಾಣ ಹೊಡಿಸಿದುದನೆಲ್ಲಿ ಕಲಿತೆಯೊ 12ಸರ್ಪನ ಬಾಣವು ಉರಿಯುತ ಬರಲು ಕಂ-|ದರ್ಪನ ಪಿತ ನೀ ಕರುಣದಲಿ ||ತಪ್ಪಿಸಿ ಪಾರ್ಥನ ರಥ ನೆಲಕೊತ್ತಿ |ತೋರ್ಪಡಿಸಿದಾಟವೆಲ್ಲಿ ಕಲಿತೆಯೊ 13ದುರುಳದುಃಶಾಸನ ದ್ರೌಪದಿ ಸೀರೆಯ |ಕರದಿಂದ ಸಭೆಯೊಳು ಸೆಳೆಯುತಿರೆ ||ಹರಿಶ್ರೀ ಕೃಷ್ಣ ನೀ ಪೊರೆಯೆನಲಾಕ್ಷಣ |ಅರಿವೆ ರೂಪದೆ ಬಂದುದೆಲ್ಲಿ ಕಲಿತೆಯೊ 14ಕುರುಪತಿ ಸಭೆಯೊಳು ಗುರುವಿನಿಂದಿರುತ |ಸಿರಿಕೃಷ್ಣನು ಬರೆ ವಂದಿಸದೆ ||ಸ್ಥಿರವಾಗಿ ಕುಳಿತಿರೆ ಚರಣದಿ ಧರೆಮೆಟ್ಟಿ |ಕುರುಪನನುರುಳಿಸಿದ್ದೆಲ್ಲಿ ಕಲಿತೆಯೊ | 15ದುರಿಯೋಧನ ಪಾಂಡವರ ಶಿಕ್ಷಿಸಲು |ಮೊರೆಯಿಡಲವನ ಮರುಳುಗೊಳಿಸಿ ||ಧುರದೊಳುಪಾರ್ಥಗೆ ಸಾರಥಿಯಾಗಿ ನೀ |ಕುರುಕುಲವಳಿದುದನೆಲ್ಲಿ ಕಲಿತೆಯೊ | 16ಪತಿಶಾಪದಿ ಶಿಲೆಯಾದ ಅಹಲ್ಯೆಯ |ಹಿತದಿಂದವಳನು ಉದ್ಧರಿಸಿ ||ಪತಿಯೊಡಗೂಡಿಸಿ ಪತಿವ್ರತೆಯೆನಿಸಿದ-ಅ-|ಮಿತಮಹಿಮೆಯ ಕೃತಿಯೆಲ್ಲಿ ಕಲಿತೆಯೊ 17ಅಂಬರೀಷ ದ್ವಾದಶಿ ವ್ರತ ಸಾಧಿಸೆ |ಡೊಂಬೆತನದಿದೂರ್ವಾಸಬರೆ ||ಇಂದುಧರಾಂಶನು ರಾಜನ ಪೀಡಿಸ-|ಲಂದು ಚಕ್ರದಿ ಕಾಯ್ದುದೆಲ್ಲಿ ಕಲಿತೆಯೊ | 18ಕುಲಛಲಗಳನಳಿದ ಅಜಮಿಳ ಸರಸದಿ |ಹೊಲತಿಯ ಕೂಡಿರೆ ಮರಣ ಬರೆ ||ಬಲು ಮೋಹದ ಸುತ ನಾರಗನೊದರಲು |ಒಲಿದು ಗತಿಯನಿತ್ತುದೆಲ್ಲಿ ಕಲಿತೆಯೊ 19ಬಡತನ ಪಾರ್ವನ ಬಿಡದೆ ಬಾಧಿಸಲು |ಮಡದಿಯ ನುಡಿಕೇಳಿಆಕ್ಷಣದಿ ||ಒಡೆಯ ನೀನವನೊಪ್ಪಿಡಿಯವಲನು ಕೊಂಡು |ಕಡುಭಾಗ್ಯನಿತ್ತುದನೆಲ್ಲಿ ಕಲಿತೆಯೊ | 20ಎಂದೆಂದು ನಿನ್ನ ಗುಣವೃಂದಗಳೆಣಿಸಲು |ಇಂದಿರೆಬೊಮ್ಮನಿಗಸದಳವು ||ಮಂದರಧರಸಿರೆಪುರಂದರವಿಠಲನೆ |ಚೆಂದ-ಚೆಂದದಾಟಗಳೆಲ್ಲಿ ಕಲಿತೆಯೊ 21
--------------
ಪುರಂದರದಾಸರು