ಒಟ್ಟು 59 ಕಡೆಗಳಲ್ಲಿ , 18 ದಾಸರು , 55 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಶೇಣಿಯ ಗೋಪಾಲಕೃಷ್ಣನನ್ನು ನೆನೆದು) ತಾಪವ ಬಿಡಿಸು ದಯಾಪರ ಶ್ರೀ ಗೋಪಾಲ ಕೃಷ್ಣ ನೀ ಕಾಪಾಡು ಸಂಸಾರ ಪ. ಲೋಕನಾಯಕ ನಿನ್ನ ಕರುಣವಂದಿದ್ದರೆ ಸಾಕೆಂಬೆ ಜ್ಞಾನಾನಂದಕರ ಪಾಕಶಾಸನ ಸುತಗೊಲಿದಾತನ ಭಂಡಿ ನೂಕಿ ನಡೆಸಿದ ಕೃಪಾಕರ ಮೂರುತಿ 1 ನಡೆವುದು ನುಡಿವುದು ಕೊಡುವುದು ಕೊಂಬುದು ಮಡದಿ ಮಂದಿರ ಮಮತಾಸ್ಪದದ ಒಡವೆ ವಸ್ತುವು ಮೊದಲಾದುದೆಲ್ಲವನು ಶ್ರೀ- ಮುಡಿಯ ಸಂವರಿಸುವ ಕರದಿ ಸಂಗ್ರಹಿಸುತ2 ನಿನ್ನಡಿಗಳ ನಂಬಿ ನಿಂದಿಹೆನಿಲ್ಲಿ ಪ್ರ- ಸನ್ನ ಮುಖಾಂಬುಜ ಪಾಲಿಸೆಂದು ಅನ್ಯರಿಗೆಂದೆಂದು ದೈನ್ಯ ತೋರಿಸಲಾರೆ ಪನ್ನಗಾಚಲವಾಸ ಪರಮ ದಯಾಳೊ 3
--------------
ತುಪಾಕಿ ವೆಂಕಟರಮಣಾಚಾರ್ಯ
ಇಕ್ಕೊ ಇಲ್ಲೆವೆ ಅದ ನಿಜಧನಾ ತಕ್ಕೊಂಬುದು ಬಲುಕಠಿಣ ಧ್ರುವ ಅದಕೊಂದದ ಉಪಾಯ ನೋಡಿ ಸದ್ಗುರುಪಾದಕ ಮನಗೂಡಿ ಒದಗಿ ಬಾಹುದು ತಾಂ ಕೈಗೂಡಿ ಇದೇ ಸಾಧಿಸಿ ಸುಖ ಸೂರ್ಯಾಡಿ 1 ಎಡಬಲಕ ತಾಂ ತುಂಬೇದ ದೃಢಮನಕ ತಾಂ ಸಿದ್ಧದ ಮೂಢಜನರಿಗಿದೇ ದೂರದ ನೋಡೇನೆಂದರ ಬಲು ಸಾರ್ಯದ 2 ಗುರುಪಾದಲ್ಯದ ಧನಸಮಸ್ತ ಅರಿತುಕೊಂಬುದು ಮನಮಾಡಿ ಸ್ವಸ್ಥ ತರಳಮಹಿಪತಿಗಿದೆ ಸುಪ್ರಸ್ತ ಗುರುನಾಥನೆ ತಾಂ ಸುವಸ್ತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮನಿಲಿ ಬ್ರಹ್ಮಾನಂದ ತಂದೆ ಸದ್ಗುರು ಸ್ವಾಮಿ ಕೃಪೆಯಿಂದ ಧ್ರುವ ವಸ್ತುದಯ ಬೀರುವಾನಂದ ಪ್ರಸ್ತ ಹಸ್ತ ಬಂದವರಿಗೆ ಸಾಧ್ಯಸ್ತ ಪ್ರಸ್ತ ಉಂಟಾಗಿದೆ ನೋಡಿ ಸಮಸ್ತ ಸ್ವಸ್ತ ಚಿತ್ತಲುಣಬೇಕು ಪ್ರಶಸ್ತ 1 ಉಂಬುದಕನುಮಾನ ಮಾಡಬ್ಯಾಡಿ ಕೊಂಬುದೆಲ್ಲ ಬಾಯಿದೆರೆದು ಬೇಡಿ ತುಂಬಿತುಳುಕುತಲ್ಯಾನಂದ ನೋಡಿ ಅಂಬುಜಾಕ್ಷನ ಸುಖಾಶ್ರಯ ಮಾಡಿ 2 ಸ್ವಾನುಭವದ ಪ್ರಸ್ತ ಸರ್ವಕಾಲ ತಾನೆ ತಾನಾಗಿ ದೋರುತದಚಲ ದೀನಮಹಿಪತಿಗಾನಂದ ಸುಕಾಲ ಭಾನುಕೋಟಿತೇಜ ದಾಸಾನುಕೂಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಜ್ಞಾನವೊ ಇದೇ ಮಾನವೊ ಧ್ರುವ ಕೇಳಿ ಕೇಳಿ ಕೇಳಿ ಕೇಳುವ ಮಾತಿದು ಕೇಳಿದಂತೆ ನೀವು ಬಾಳಿ ಬಾಳಿದ ಮ್ಯಾಲಿನ್ನು ಹೇಳ್ಯಾಡುವ ಮಾತಿನ ಮೊಳೆ ಅಂಕುರನೆ ಸೀಳಿ ಒಳಿತಾಗಿದೆ ಪೂರ್ಣ ಕೇಳಿ ಕಳೆದ ದುಸ್ಸಂಗವು ಕೇಳುವನಾದರೆ ತಿಳಿಸಿಕೊಡುವನು ಗುರು ಹೇಳಿ 1 ಸೂಟಿ ತಿಳಿದು ನಿಜಧಾಟಿಗೆ ಬಂದರೆ ಕೋಟಿಗವನೇ ಒಬ್ಬ ಙÁ್ಞನಿ ನೀಟಾಗಿಹ್ಯ ಘನಕೂಟವು ತಿಳಿದರೆ ನೋಟದಲ್ಲವ ಬಲು ತ್ರಾಣಿ ನೋಟದಲ್ಲಿಹುದು ತ್ರಾಟಿವ ಬಲ್ಲನೆ ಬೂಟಕ ದೇಹಾಭಿಮಾನಿ ನಾಟಿ ಮನದೊಳು ಮಾಟಿಸಿಕೊಂಬುದು ಘಟಿಸಿತಿದೆ ಸಾಧನ 2 ನೆನೆಯಲಿಕ್ಕೆ ಮನ ಘನಬೆರದಾಡುವ ಖೂನಾಗುವದಿದೆ ರಾಜಯೋಗ ಅನುಭವಿಗಳಿಗೆ ಅನುಕೂಲವಾಗಿನ್ನು ಅನುವಾಗಿದೋರುದು ಬ್ಯಾಗ ಭಾನುಕೋಟಿತೇಜ ತಾನೆತಾನಾದನು ಎನ್ನ ಮನದೊಳು ಈಗ ದೀನ ಮಹಿಪತಿಗೆ ಸನಾಥಮಾಡುವ ಸ್ವಾನುಭವದ ಬ್ರಹ್ಮಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ಜಲದೊಳಗಿದ್ಹಾಂಗೆ ಧ್ರುವ ನಡಿನಡಿಯಬೇಕ್ಹೀಂಗೆ ತಡಿಯೊಳರಿಬಿಡದ್ಹಾಂಗೆ ನುಡಿನುಡಿಯಬೇಕು ಹರಿನುಡಿಸಿದ್ಹಾಂಗೆ ಪಡೆದರಿದೇ ಪಡಿಯಬೇಕು ಹರಿ ಒಡಲ ಹುಗುವ್ಹಾಂಗೆ ಅಡಿಗಡಿಗೆ ಹರಿಕೂಡಿ ಬಿಡದಗ್ಹಲದ್ಹಾಂಗೆ 1 ಇಡಗಿ ಇಡಬೇಕ್ಹಿಂಗೆ ಇಡಗರಿಗುಡಿಸಿದ್ಹಾಂಗೆ ತುಡಗಿ ತುಡಬೇಕ್ಹೀಂಗೆ ತುಡಮಾಡಿಸದ್ಹಾಂಗೆ ಉಡಗಿ ಉಡಬೇಕ್ಹೀಂಗೆ ಉಡಿಗರಿಗುಡಿಸಿದ್ಹಾಂಗೆ ಮುಡಗಿ ಮುಡಿಬೇಕ್ಹಾಂಗ್ಹರಿಗೆ ಮುಡಿಸಿದ್ಹಾಂಗೆ 2 ಉಂಡರುಣಬೇಕ್ಹೀಂಗೆ ಉಂಡದರಿಗುಣಸಿದ್ಹಾಂಗೆ ಕೊಂಡುದಕೋ ಹರಿಗೆ ಕೊಡಿಸಿದ್ಹಾಂಗೆ ಮಂಡಣಿಯ ಮಾಡ್ಹೀಂಗೆ ಹರಿಗೆ ಮಂಡಿಸಿದ್ಹಾಂಗೆ ಕೊಂಡು ಕೊಂಬುದು ಹರಿಕಂಡು ಒಲುವ್ಹಾಂಗೆ 3 ಮಲಗಿ ಏಳುವದ್ಹೀಂಗೆ ಮಲಗರಿಗೇಳಿಸಿದ್ಹಾಂಗೆ ತಿಳವು ತಿಳವದು ಹರಿ ತಿಳಿಸಿದ್ಹಾಂಗೆ ಸುಳವು ಸುಳವರು ಹರಿಸುಳಸ್ಯಾಡಿದ್ಹಾಂಗೆ ಒಲವು ಮಾಡುವದ್ಹೀಂಗೆ ಹರಿಯ ಒಲಿವಾದ್ಹಾಂಗೆ 4 ರತಿಪಿಡಿದು ಹೀಂಗೆ ಹರಿಗತಿಯಾಗುವ್ಹಾಂಗೆ ಅತಿಹರುಷ ಬಡು ಹರಿನೋಡುವ್ಹಾಂಗೆ ಸಥಿಯ ಪಡೆದವುದು ಹೀಂಗರಿಯು ಸಥಿನಡಿಸಿದ್ಹಾಂಗೆಸ್ತುತಿಮಾಡುವ ಮಹಿಪತಿ ಪ್ರತಿಗಾಣದ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಉಂಬುವ ಬನ್ನಿರೋ ನೀಟ ಅನುಭವದೂಟ ಧ್ರುವ ಎಡಿಯು ಬಡಿಸಿಪೂರ್ಣ ಗೂಡಿನೊಳಿಟ್ಟಿದೆ ಖೂನ ನೋಡಿ ನಿಮ್ಮೊಳು ನಿಧಾನ ಮಾಡಿ ಭೋಜನ 1 ತುತ್ತುಕೊಂಬುದು ಬ್ಯಾಗೆ ಸತ್ಸಂಗದಲಿ ನೀವೀಗ ಅತಿಶಯಾನಂದ ಭೋಗ ಉತ್ತಮ ಯೋಗ 2 ಕಲ್ಪನೆಂಬುದು ನೊಣ ಬೀಳಗೊಡದೆ ಜತನ ಬಳೆದುಕೊಂಡುಂಬುವ ಜಾಣ ಕಳೆದನುಮಾನ 3 ಸವಿಸವಿಮಾಡಿಕೊಂಡು ಸೇವಿಸುವದು ಮನಗಂಡು ಪಾವನಾಗಬೇಕು ಉಂಡು ಸವಿಸೂರೆಗೊಂಡು 4 ಉಂಡು ಮಹಿಪತಿ ನೋಡಿ ಕೊಂಡಾದಿಡಾನಂದಗೂಡಿ ಮಂಡಲದೊಳಿದೇ ಮಾಡಿ ಬಿಡದೆ ಸೂರ್ಯಾಡಿ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಎರಡನೆಯ ಸಂಧಿ ಶ್ರೀಕಾಂತನ ಕರುಣವುಳ್ಳವಗೆ ಕುಂತಳಪುರಕೆ ಕಳುಹಿದನು 1 ಗಂಧಾಕ್ಷತೆ ಫಲಪುಷ್ಪದಿಂದ ಸಾಕ್ಷಾತು ಗಣಪತಿಗರ್ಪಿಸಿ ತರಳನ ಶಿಕ್ಷಾಗುರುವಿಗೆ ಒಪ್ಪಿಸಿದ2 ಮಣ್ಣ ಹರಹಿ ಅಕ್ಷರವ ಬರೆದು ಎನ್ನಣ್ಣನೀ ತಿದ್ದು ಬಾ ಎನಲು ಎನ್ನೊಡೆಯ ಶರಣೆಂದು ಬರೆದ 3 ನಿನ್ನ ಜ್ಞಾನ ಬೇರೆ ಚಿತ್ತ ಬೇರೆ 4 ಎಂದು ಧಿಕ್ಕರಿಸಿ ಹೇಳಿದನು 5 ಚಾತುರ್ಯದ ಬುದ್ಧಿ ಬೇರೆ ತೊಡರು ತಾತಗೆ ಒಯ್ದು ಒಪ್ಪಿಸಿದ 6 ಮುಕುಂದನ ಭಜಕನೆಂದೆನದೆ ಬಂದ ಹಾಂಗಿರಲೆಂದು ಸುತನ 7 ಧ್ರುವ ಪ್ರಹ್ಲಾದ ಅಕ್ರೂರಾಂಬರೀಷ ಮಾಧವ ಮುರಾರಿಯನ್ನು ಭಜಿಸಿ ಭವ ಭಯಾದಿಗಳಿಲ್ಲ ನಮಗೆ 8 ಕಟ್ಟಿಕೊಟ್ಟರು ಕರಲೇಸು ಎನುತ ಕಟ್ಟೆದರ್ ವೇದೋಕ್ತದಲಿ 9 ಓದಿಸಿದರು ಗುರುಮುಖದಿ ಮಾಧವನಲ್ಲದೆ ಅನ್ಯತ್ರರಿಲ್ಲವೆಂದು ಭೇದಾಭೇದವನೆಲ್ಲ ತಿಳಿದು 10 ಹೊಳೆವ ಶ್ರೀ ಮುದ್ರಿಕೆಯಿಟ್ಟು ಗೆಳೆಯರೆಲ್ಲರಿಗೆ ಬೋಧಿಸಿದ 11 ಪತಿತರಾದಪಗತಿ ಕುಮಾರರಿಗೆಲ್ಲ ಸದ್ಗತಿಯಾಗಬೇಕೆಂದೆನುತ ಮಾಡಿಸಿದನಾಜೆÉ್ಞಯಲಿ 12 ದ್ವಾದಶ ನಾಮವ ಹಚ್ಚಿ ಸಾದಿ ಸಾಧಿಸಿರಿ ಏಕಾದಶಿ ವ್ರತವೆಂದು ಬೋಧಿಸಿದನು ಎಲ್ಲರಿಗೆ13 ಜಾಗರ ಮಾಡಿ ಫುಲ್ಲನಾಭನ ಭಜಿಸುವರು ಪರಗೋಷ್ಠಿಯಿಲ್ಲ 14 ಬೆಳೆಸುವ ಹÀರಿಭಕ್ತರೊಡನೆ ಪರಾಕ್ರಮಿಯೆನಿಸಿದನು 15 ಇಮ್ಮಡಿಯನು ಗೆದ್ದು ಹೇರಿಸಿದನು ತನ್ನ ಪುರಕೆ 16 ತಂದು ಆರತಿಗಳನೆತ್ತಿ ಚರಣಕ್ಕೆರಗಿದನು 17 ಜಗದಧಿಪತಿಯಾಗು ಎಂದು ಹರುಷವನೆ ತಾಳಿದಳು 18 ಲೇಸಾದ ಶುಭಲಗ್ನವ ಕಟ್ಟಿ ಸುತನ ಸಿಂಹಾಸನದಲ್ಲಿ ಕುಳ್ಳಿರಿಸಿ ಭೂಸುರ ಬಂಧುಗಳೆಲ್ಲರು ನೆರೆದಿಂದುಹಾಸಗೆ ಪಟ್ಟಗಟ್ಟಿದರು19 ಪರಿ ಪಾಲಿಸುತ್ತ ರಾಜ್ಯನೀತಿಯಿಂದಾಳುತಲಿಹನು 20 ಲಾಲಿಸು ಕುಂತಳೇಶ್ವರಗೆ ಕಾಲಕಾಲಕೆ ಕಪ್ಪವ ಕೊಟ್ಟು ಬಹೆವು ಆಲಸ್ಯವಾಯಿತು ಎಂದ21 ಉದಾರಬುದ್ಧಿಯಲಿಂದುಹಾಸ ವಿಚಾರಿಸಿದನು ತನ್ನಪಿತನ 22 ಜೋಯಿಸ ಪುರೋಹಿತಗೆ ಕಾಂತಿಗೊಡದ ಕನಕಾಭರಣವೆಲ್ಲವ ಅಂತಸ್ಥದಿಂದ ಕಟ್ಟಿದನು23 ಜ್ಞಾನವುಳ್ಳ ಭೃತ್ಯರೊಡನೆ ದಾನವಾಂತಕನ ಕಿಂಕರನು 24 ತೆರಳಿದರಲ್ಲಿಂದ ಮುಂದೆ ಹೆಬ್ಬಾಗಿಲ ಮುಂದೆ 25 ದಿಟ್ಟರಾರೆಂದು ಕೇಳಿದನು ಅಟ್ಟಿದೆನ್ನೊಡೆಯ ಪುಳಿಂದ 26 ಮಂದಿರಕಾಗಿ ಕರೆಸಿದ ಕರವ ಮುಗಿದರು 27 ಕಡೆಗಣ್ಣಲಿ ನೋಡಲಿಲ್ಲವರೊಳು ಮಾತನುಡಿಯದೆ ಸನ್ಮಾನಿಸದೆ ಝೇಂಕರಿಸಿ ಕೇಳಿದನು 28 ಜೀಯ ಹಸಾದ ನಿಮ್ಮಡಿಗೆ ಇಂದಿನ ವಾಯಿದ ಕಟ್ಟಿದ ಧನವು ದೇವರು ಕೈಕೊಂಬುದೆನಲು 29 ನಗ ನಾಣ್ಯ ದೇವಾಂಗವನು ನಗ ನಾಣ್ಯ ದೇವಾಂಗವನು 30 ಸೊಗಸಾಗಿ ಮಾಡಿಸು ಎಂದ ನಗೆಮುಖದಿಂದ ಹೇಳಿದನು 31 ಸಣ್ಣ ರಾಜಾನ್ನದಕ್ಕಿಯನ್ನ ಶಾಕವು ಅಣ್ಣೆವಾಲೆರೆದ ಪಾಯಸವು ಉಣ್ಣೇಳಿರೆಂದು ಕರೆದರು 32 ನಿರಾಹಾರವು ನಮಗೆ ಎಂದು ಕೇಳಿದನು 33 ಎಮ್ಮೊಡೆಯನ ಸುಕುಮಾರ ತಮ್ಮ ರಾಜ್ಯದಲ್ಲಿ ಏಕಾದಶಿವ್ರತ ನಿರ್ಮಾಣವನ್ನೆ ಮಾಡಿದನು34 ಸತಿ ಎಂದೆಲ್ಲರು ಹೇಳುತಲಿಹರು ಎಲ್ಲಿದ್ದ ಆತಗೆ ಸುತನು 35 ಹಿಂದಟ್ಟಿ ಹೋದನು ಪುಳಿಂದ ಅಟ್ಟಡವಿಯೊಳಗಿರಲು 36 ಪೋಷಣೆಯನು ಮಾಡಿದರು ಭೂಸುರರನೆ ಪಾಲಿಸುವನು 37 ನಟ್ಟಂದದಿ ಮನದೊಳು ಮರುಗಿ ಎಂದು ತಾ ಮನದೊಳು ತಿಳಿದ 38 ಅನುಕೂಲವಾದ ಕಾರ್ಯವು ಮನದಲ್ಲಿ ಚಿಂತೆ ಮಾಡಿದನು 39
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಕಾರಣ ಮತಿಯಿಲ್ಲ ಮನವೆ ಪ ಹೀನಾಯವಾಡದಿರು ಪರರ ಗುಣಗಳ ಎಣಿಸಿ ಅ.ಪ ಅವನ ಗೊಡವೆಯೇಕೆ ಅವನಾರು ನೀನಾರು | ಅವನ ಪಾಪಕ್ಕೆ ನೀ ಭಾಗಾದಿಯೆ | ಅವನುತ್ತಮನಾದಡವನೆ ಬದುಕಿದ ಕಾಣೊ ಅವ ಪುಣ್ಯಮಾಡಿದರೆ ಅವನ ಕುಲ ಉದ್ಧಾರ 1 ನಿನಗೆ ಕೊಡುವುದರೊಳಗೆ ಬೇಡ ಬಂದವನಲ್ಲ | ನಿನಗೆ ಅವನಿಗೆ ಏನು ಸಂಬಂಧವೊ | ಮನೆ ಒಡವೆ ವಸ್ತುಗಳ ಹಂಚಿಕೊಂಬುವುದಲ್ಲ | ಕ್ಷಣ ಕ್ಷಣಕೆ ಕ್ಲೇಶವನು ಮಾಡಿಕೊಂಬುದು ಸಲ್ಲ 2 ನಿನ್ನ ಗತಿ ಮಾರ್ಗಕ್ಕೆ ಅವನಡ್ಡ ಬಾಹನೆ | ನಿನ್ನಿಂದ ಪರಲೋಕ ಅವನಿಗುಂಟೆ | ನಿನ್ನೊಳಗೆ ನೀ ತಿಳಿದು ವಿಜಯವಿಠ್ಠಲನ್ನ | ಸನ್ನುತಿಸಿ ಭವರೋಗ ಬನ್ನವನು ಕಳೆಯೊ 3
--------------
ವಿಜಯದಾಸ
ಏನುಂಟೇನಿಲ್ಲ ಗುರುಕೃಪೆಯಿಂದ ತನುಮನಿಟ್ಟದೇ ಪಡಕೊಂಬುದು ಚಂದ ಧ್ರುವ ಸುಖ ಸುರುತದೆ ನೋಡಿ ಬಲುಬ್ರಹ್ಮಾನಂದ ಪ್ರಕಟಸಲಿಕ್ಕೆ ಬಾರದು ಮುಖದಿಂದ ಸಕಲವೆಲ್ಲಕೆ ಮೇಲು ತಿಳಿಯಬೇಕಿದೊಂದೆ ಶುಕಾದಿ ಮುನಿಗಳದಾರಿದರಿಂದೆ 1 ಸಿದ್ಧ ಬುದ್ಧ್ದರಿಗೆ ಸಾದ್ಯವದೆ ಸಿದ್ಧ ನೋಡಿ ಬುದ್ಧಿವಂತರಿಗೆ ಒಲಿದುಬಾಹುದು ಕೈಗೂಡಿ ಸನ್ಮಾರ್ಗ ಸುಪಥವಿದೆ ಸದ್ಗುರು ಸೇವೆಮಾಡಿ ಸದ್ಭ್ಬಾವದಿಂದಲಿ ಸ್ವಸುಖವೆ ಸೂರ್ಯಾಡಿ 2 ಭಾಸ್ಕರ ಗುರುದಯದವಗಿನ್ನೇನು ಭಾಸುತೀಹ್ಯದಾವಗಿನ್ನು ನಿಜಕಾಮಧೇನು ವಿಶ್ವದೊಳಗವನೊಬ್ಬ ಸಿದ್ಧತಾನು ದಾಸಮಹಿಪತಿಗಿದೇ ಅಭಿನವಧೇನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೋ ಪ್ರಾಣಿ ಪ ಏನೋ ಪ್ರಾಣಿ ಮುಂದಗಣೀ | ಹೀನಗುಣಗಳ ಶ್ರೇಣಿ | ತಾ ನಳಿಯಂದದಿ ಮಾಣಿ ನೀ ನುಡಿನಮ್ರತವಾಣಿ | ಸ್ವಾನಂದ ಜನ್ಮಕ ಬಂದೆನಿಸಿ ಕೊಂಬುದು | ವಿಹಿದುತ್ತಮ ಜ್ಞಾನಿ 1 ಕೇಳು ಕೇಳಿಧಾಂಗ ಬಲು ಹೇಳಿದಾಂಗ ಮೇಳು | ತಿಳಿಗುರು ಭಕ್ತಿಯ ಮೇಲು ಬಲು ವಿವೇಕವ ತಾಳು | ಛಲದ ಮದಮತ್ಸರ ಶೀಳು ತಳಿಮನ ದುರ್ವತ್ತಿಗಳು | ಇಳಯೊಳು ಶ್ರೀ ಗುರುಪಾದಕ ನಂಬಿ | ವಿಡಿಯೋ ಪಂಥವಾ ಸೇರು 2 ಜರಿ ಹಂ ಮಮತೆಯ ದೂರಾ ಸರಿ ನಗಿ ಆರಿ ಮಿತ್ರರಾ | ಮರೆಯೋ ನಿಂದೆಯ ಪರರಾ ತೋರದೇ ವಾಗ್ವಿಸ್ತಾರಾ | ಪರಿ ನುಡಿಯಲಿ | ಮಹಿಪತಿಸುತ ಪ್ರಭು ಉದಾರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದು ಪಥವ ಹೊಂದಲರಿಯರೀ ಮನುಜರು ಇಂದಿರೇಶನ ಪಾದವ ಕಾಣದೆ ಕೆಡುವರು ಧ್ರುವ ಒಂದರೆ ಘಳಗಿ ನಾನೆವೆ ಮಾಡಿದೆನೆಂಬರು ಒಂದರೆ ಘಳಗಿ ಪ್ರಾಚೀನವೆಂಬರು ಒಂದರೆ ಘಳಗಿ ಈಶ್ವರ ಸೂತ್ರವೆಂಬರು ಒಂದರೆ ಘಳಗಿ ತಾ ಏನೋ ಎಂತೆಂಬರು 1 ಒಮ್ಮೆ ಜಾಗೃತಿಯೊಳಿದೇ ನಿಜವೆಂಬರು ಖರೆ ಎಂಬರು ಒಮ್ಮೆ ಸುಷುಪ್ತ್ತಿಯೊಳಿದೇ ಸತ್ಯವೆಂಬರು ಒಮ್ಮೆ ಇದರ ಶುದ್ಧಿ ತಿಳಿಯದಂತಿಹರು 2 ಒಂದು ತಿಳಿದರ ಸಕಲವು ಒಂದಾಗಿ ದೋರುವದು ಒಂದರೊಳಗ ಸಕಳ ದೊರೆಕೊಂಬುದು ಒಂದಾಗಿ ಸಲಹುವ ಮಹಿಪತಿ ಸ್ವಾಮಿಯ ತಂದೆ ಸದ್ಗುರು ಭಾಸ್ಕರ ಕೋಟಿ ತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡಿರ್ಯಾ ನೀವು ಕಂಡಿರ್ಯಾ ಮಂಡಲದೊಳು ನಿಜ ಕಂಡಿರ್ಯಾ ಧ್ರುವ ಮಂಡೆಯ ಮರೆಯಲ್ಯ ಖಂಡವಾಗಿಹುದು 1 ಪಿಂಡಬ್ರಹ್ಮಾಂಡಕೆ ಭೇದದೋರದಿದು 2 ಹಿಂಡದೈವಕ ತಾಪ್ರಚಂಡನಾಗಿಹುದು 3 ಕಂಡವರಾಶ್ರಯ ಪಂಡಿತರಿಗೆ ಪ್ರಿಯ 4 ಕಂಡವರಕಂಡು ಕೂಡಿಕೊಂಬುದಿದು 5 ನೋಡಿದವರ ಕೂಡ ನೋಟಮಾಳಾಹುದು6 ಮೂಢ ಮಹಿಪತಿ ಪ್ರಾಣದೊಡೆಯನಾಗಿಹ್ಯ ನಿಜ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ನಾನೊಂದು ಕೌತುಕವ ಧ್ರುವ ಭೂಮಿಯ ವೇದನೋದುದ ಕಂಡೆ ರಾಗಭೆÉೀದ ಮಾಡುದಕಂಡೆ ಪಾಡುದು ನಾಕಂಡೆ 1 ಆಕಾಶ ಮಾತುಕೇಳುದು ಕಂಡೆ ಪುರಾಣ ದೃಷ್ಟಿಸುವದು ಕಂಡೆ ಶಬ್ದ ಭೇದಗ್ರಹಿಸುದು ಕಂಡೆ ಪುಣ್ಯ ಶ್ರವಣವು ಕೇಳುದುಕಂಡೆ 2 ಖಣಿಯವಾದುದು ಕಂಡೆ ನಿರ್ಮಿತವಾಗಿಹ ರೂಪವ ಕಂಡೆ 3 ಅಗ್ನಿ ದೃಷ್ಟಿಸುವದು ಕಂಡೆ ಸೃಷ್ಟಿನೆಲ್ಲ ನೋಡುವದು ಕಂಡೆ ದೈವದ್ಯಾವರ ನೋಡುದು ಕಂಡೆ 4 ಗಾಳಿ ಘ್ರಾಣಿಸುವದು ಕಂಡೆ ಪರಿಪರಿವಾಸನೆ ಕೊಂಬುದುಕಂಡೆ ಬೀಜಾಕ್ಷರವು ನುಡಿವದು ಕಂಡೆ 5 ಎರಗಿತು ಪುಣ್ಯಶ್ರೀ ಚರಣದಲಿ ತ್ರಾಹಿಯೆಂದು ಪೊಡವಿಯಲಿ 6 ಬೆರಗಾದನು ಗುರುಕರುಣದಲಿ ಬೆಡಗವ ಕಂಡಿನ್ನು ಬೆರದಾದೆನಯ್ಯ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಣಿ ಖೂನ ಕಂಡ ಮ್ಯಾಲ ಖಂಡ ಮಾಡಿಕೊಂಬುದೆ ಸುಜ್ಞಾನ ಧ್ರುವ ಕಾಣುವನು ಕಾಣಿಯೇನಾಗಿದೊ ಪ್ರಾಣಿ ಕಾಣದೆ ಹೋದರನೇಕ ಜನ್ಮ ನಾನಾಯೋನಿ 1 ಕಾಣುವನ ಸ್ಥಾನ ಕಾಣದಿಹುದೇನ ಜ್ಞಾನಗುರುವಿನ ಕೈಯ ಕೇಳಿಕೊ ನೀ ಖೂನ 2 ಕಂಡು ಕಾಂಬುವನ ಅಖಂಡ ಮಾಡೋಧ್ಯಾನ ಪಿಂಡ ಬ್ರಹ್ಮಾಂಡಕ್ಕೆ ಇದೆ ವಸ್ತು ನಿಜಘನ 3 ಕಾಣುವನ ಕೂಡಿ ಸ್ವಾನುಭವ ಮಾಡಿ ದೀನ ಮಹಿಪತಿಗಿದೆ ಘನ ಸುಖನೋಡಿ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಾಮಧೇನುಗರವುತಲ್ಯದೆ ನಮ್ಮ ಮನಿಯಲಿ ನೋಡಿ ಬ್ರಹ್ಮಾನಂದದೋರುತದೆ ಪರಮಾಮೃತ ಸೂರ್ಯಾಡಿಧ್ರುವ ಭೋರ್ಗರೆವುತಲ್ಯದೆ ಇರುಳ ಹಗಲಿ ತಾ ಕರಕೊಳ್ಳಲಿ ವಶವಲ್ಲ ಅಮೃತ ದುರುಳರಿಗಿದು ಅರಿಕಿಲ್ಲ ಸುರಿ ಸುರಿದು ಸಾರಾಯ ಚಪ್ಪರಿದನುಭವ ನಿಜಸುಖ ತಾ ಬಲ್ಲ ಸುರಮುನಿಜನರಾನಂದದಿ ಸೇವಿಸಿ ಅರಹುತರಾದರು ಎಲ್ಲ 1 ಕಾಸಿ ಕಡಿಯದೇ ಭಾಸುತಲ್ಯದೆ ಲೇಸಾಗಿ ನವನೀತ ಮೋಸಹೋಗದನುಸರಿಸಿಕೊಂಬುದು ವಸುಧಿಯೊಳಗೆ ತ್ವರಿತ ಋಷಿಮುನಿಗಳು ಸ್ವಹಿತ ತುಸುಕೊರತಿಲ್ಲದೆ ಪಸರಿಸಿ ತುಂಬೆದ ವಿಶ್ವದೊಳಗೆ ಸನ್ಮತ2 ಅನುದಿನ ಮಹಿಪತಿಗಿದು ನಿಜ ನೋಡಿ ಮಹಾಮಹಿಮೆಯ ಸವಿಗೂಡಿ ಶಿರದಲಭಯವ ನೀಡಿ ಇಹಪರದೊಳು ಗುರುನಾಮವೆ ಕಾಮಧೇನುವಿದೆ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು