ಒಟ್ಟು 31 ಕಡೆಗಳಲ್ಲಿ , 14 ದಾಸರು , 27 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿನಲ್ಲ ಕೇಳುತಲೆನ ಸೊಲ್ಲ ಬಾರೊ ಬಾರೆನುತಲಿ ಭಕ್ತವತ್ಸಲನೆ ಬಾರಿ ಬಾರಿಗೆ ನಿನ್ನ ಬೇಡಿಕೊಂಬುವೆನು ಪ ಕಡಲೊಳು ಮುಣಿಗಜಗ್ವೇದವ ತರುವ ಕ್ಷೀರಾಂಬುಧಿ ಕಡೆವ ಕಡು ಕ್ರೋಡರೂಪದಿ ಬೇರನೆ ಕಡಿವ ಅಸುರನ ಒಡಲೊಡೆವ ಬಡವನಾಗ್ಯಜ್ಞ ಶಾಲೆಗೆ ನಡೆವ ಕೊಡಲಿಯನೆ ಪಿಡಿವ ಹೊಡೆದ್ಹತ್ತು ಶಿರ ಕಾಳಿ ಮಡುವ್ಹಾರಿ ತ್ರಿಪುರರ ಮಡದೇರನ್ವೊಲಿಸ್ವಾಜಿ ಹಿಡಿದೇರೋಡಿಸುವನೆ 1 ಕಣ್ಣು ತೆರೆದೆವೆಯಿಕ್ಕದಲೆ ನೋಡಿ ಬೆನ್ನಲಿ ಗಿರಿ ಹೂಡಿ ಮಣ್ಣುಕೆದರುತಲವನ ದಾಡೆ ಕರುಳ್ಹಾರವ ಮಾಡಿ ಸಣ್ಣ ತ್ರಿಪಾದ ದಾನವ ಬೇಡಿ ಮನ್ನಿಸಿ ತಪ ಮಾಡಿ ಅ- ದಧಿ ಬೆಣ್ಣೆಗಳನು ಕದ್ದು ಹೆಣ್ಣುಗಳನೆ ಕೆಡಿಸ್ಹಯವನ್ನೇರಿ ಮೆರೆವನೆ 2 ನಾರುತ್ತ ಮೈಯ ನೀರೊಳಗಿರುವ ಮಂ- ದಾರವನ್ಹೊರುವ ಕ್ವಾರೆ (ಕೋರೆ?)ಯಲಿ ಧರೆಯ ಮ್ಯಾಲಕೆ ತರುವ ಕರಿ (ಕರೆಯೆ?) ಕಂಬದಿ ಬರುವ ಘೋರ ತ್ರಿವಿಕ್ರಮನಾಗಿ ತೋರುವ ತಾಯಿಯ ಶಿರ ತರಿವ ನಾರ್ವಸ್ತ್ರಬಿಗಿದುಟ್ಟ ಭೀಮೇಶಕೃಷ್ಣನೆ ಭಂಗ ಮಾಡಿ ತುರುಗವೇರಿ3
--------------
ಹರಪನಹಳ್ಳಿಭೀಮವ್ವ
(ಬಪ್ಪನಾಡಿನ ಪಂಚದುರ್ಗೆ) ಮಂಗಲಂ ಶ್ರೀಪಂಚದುರ್ಗೆಗೆ ಜಯ ಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆಪ. ಶಂಕರನಂಕಾಲಂಕಾರಿಗೆ ಕುಂಕುಮಬೊಟ್ಟಕಸ್ತೂರಿ ಲಲಾಟೆಗೆ ಪಂಕಜಗಂಧಿ ಶ್ರೀಪಾರ್ವತಿಗೆ1 ಕೋಕಿಲಗಾನೆಗೆ ಕೋಕಪಯೋಜೆಗೆ ಶ್ರೀಕಂಠನರ್ಧಾಂಗಿ ಶ್ರೀಗೌರಿಗೆ ಏಕದಂತನ ಜನನಿಗೆ ಜಗದಂಬೆಗೆ ಲೋಕನಾಯಕಿ ಶ್ರೀಮಹಾಕಾಳಿಗೆ2 ಕಂಜದಳಾಕ್ಷಿಗೆ ಕಲಧೌತಗಾತ್ರೆಗೆ ಕುಂಜರಗಮನೆ ಕಂಧರಜಾತೆಗೆ ಮಂಜೀರನೂಪುರರಣಿತಪದಾಬ್ಜೆಗೆ ನಂಜುಂಡನ ಮನಮಂಜುಳೆಗೆ3 ಅಂಗಜರೂಪೆಗೆ ಮಂಗಲದಾತೆಗೆ ಭೃಂಗಕುಂತಳೆ ಸರ್ವಮಂಗಲೆಗೆ ಬಂಗಾರಮಕುಟೋತ್ತಮಾಂಗದಿ ಧರಿಸಿದ ಸಂಗೀತಲೋಲೆಗೆ ಶರ್ವಾಣಿಗೆ4 ರೂಢಿಗಧಿಕ ಬಪ್ಪನಾಡಿಗೊಡತಿಯಾಗಿ ಮೂಡಿತೋರಿದ ಶ್ರೀಮುಕಾಂಬಿಕೆಗೆ ಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆ ಬೇಡಿದಿಷ್ಟವನೀವ ಸರ್ವೇಶೆಗೆ5
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ರಮಣನೆಲ್ಲಿಹ ಕರೆತಾರೆ ಸಖಿಯಳೆ ) * ಪ ಮನು ಕಮಂಡಲ ಕೂಪದಲ್ಲಿ ಹಿಡಿಯದಂತೆ ಬೆಳೆದು ಅವರ ಶರಧಿ ಒಳಗೆ ಹರಿದಾಡುತಿರುವ ಕೇಳ್ ಸಖಿಯಳೆ ಶರಧಿ ಒಳಗೆ ಹರಿದಾಡುತಲೆ ವೇದತಂದು ತೋರಿದ್ಹೊಳೆವ ಮಚ್ಛನ್ನ ಬಲಗೊಂಬೆ ಕೇಳ್ ಸತಿಯಳೆ 1 ಸೃಷ್ಟಿಗೆ ಅಧಿಕ ಸ್ತ್ರೀಯಳ ದೈತ್ಯರು ಮೋಹಿಸಲು ಕಂಡು ಹುಟ್ಟಿಸಿದ ಸುಧೆಯ ಸುರರಿಗೆರೆದ ಕೇಳ್ ಸಖಿಯಳೆ ಹುಟ್ಟಿಸಿದ ಸುಧೆಯ ಸುರರಿಗೆರೆದು ಬೆಟ್ಟವನು ಬೆನ್ನ- ಲಿಟ್ಟ ಕೂರ್ಮನ ಬಲಗೊಂಬೆ ಕೇಳ್ ಸತಿಯಳೆ 2 ವಾಸುದೇವ ಕ್ರೋಡರೂಪಿಲಿಂದ ಹಿರಣ್ಯಾಕ್ಷನ ನಾಶವ ಮಾಡಿ ಕೋರೆಯಿಂದ ಕೇಳ್ ಸಖಿಯಳೆ ನಾಶವ ಮಾಡಿ ಕೋರೆಯಿಂದ ಧರಣಿ ತಂದು ಹರ್ವಿ (ರವಿ?)ದ ಭೂಪತಿವರ್ಹ(ರಾಹ?)ನ್ನ ಬಲಗೊಂಬೆ ಕೇಳ್ ಸತಿಯಳೆ 3 ಒಡೆದು ಕಂಬ ಕಡೆಗೆ ಕಿತ್ತು ಬಿಡದೆ ಅರಿಯ ತೊಡೆಯಲಿಟ್ಟು ಒಡಲ ತಾ ಬಗೆದ ಭಕ್ತರೊಡೆಯ ಕೇಳ್ ಸಖಿಯಳೆ ಒಡಲ ತಾ ಬಗೆದ ಭಕ್ತರೊಡೆಯನಾಗಿದ್ದ ಲಕ್ಷ್ಮೀ- ನಾರಸಿಂಹನ್ನ ಬಲಗೊಂಬೆ ಕೇಳ್ ಸತಿಯಳೆ 4 ಪಾದ ದಾನ ಬೇಡಿ ಪೃಥ್ವಿ ಆಕ್ರಮಿಸಿದ ಪರಮಾತ್ಮ ಕೇಳ್ ಸಖಿಯಳೆ ಪೃಥ್ವಿ ಆಕ್ರಮಿಸಿದ ಪರಮಾತ್ಮನಾದ ನಮ್ಮ ಕಶ್ಯಪರ ಸುತ ವಾಮನನ ಬಲಗೊಂಬೆ ಕೇಳ್ ಸಖಿಯಳೆ 5 ಋಷಿಗಳಲ್ಲಿ ಜನಿಸಿ ಕರದಿ ಧರಿಸಿ ಕುಠಾರವನ್ನು ಅರಸು ಕ್ಷತ್ರಿಯರಿಗಂತಕನ ಕೇಳ್ ಸಖಿಯಳೆ ಅರಸು ಕ್ಷತ್ರಿಯರ ಕುಲಕೆ ಅಂತಕನಾಗಿದ್ದ ನಮ್ಮ ಪರÀಶುರಾಮನ್ನ ಬಲಗೊಂಬೆ ಕೇಳ್ ಸಖಿಯಳೆ 6 ಮುದ್ರೆ ಕಳುವಿ(ಹಿ?) ಲಂಕಾಪುರದಲ್ಲಿದ್ದ ವಾರ್ತೆ ಕೇಳಿ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೇಳ್ ಸಖಿಯಳೆ ಸ- ಮುದ್ರ ಸೇತುಗಟ್ಟಿ ಜಾನಕಿಯ ಕೂಡಿ ಬಂದ ಅ- ಯೋಧ್ಯಾರಾಮನ್ನ ಬಲಗೊಂಬೆ ಕೇಳ್ ಸಖಿಯಳೆ7 ಎಲ್ಲ ಜಗವ ತನ್ನ ಉದರದಲ್ಲೇ ಇಟ್ಟು ಗೋಕುಲದ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕೇಳ್ ಸಖಿಯಳೆ ಗೊಲ್ಲತಿಯರ ಮನೆಯ ಪಾಲ್ಬೆಣ್ಣೆ ಕದ್ದು ಮೆಲ್ಲುವಂಥ ಚೆಲ್ವ ಕೃಷ್ಣನ್ನ ಬಲಗೊಂಬೆ ಕೇಳ್ ಸುಖಿಯಳೆ 8 ಮಾಯಾಶಿಶುರೂಪ ತಾನಾಗಿ ವೇದನಿಂದ್ಯವನ್ನು ಮಾಡಿ ಬೋಧಿಸಿದ ದುರ್ಮತವ ಕೇಳ್ ಸಖಿಯಳೆ ಮಾಡಿ ಬೋಧಿಸಿದ ದುರ್ಮತವ ತ್ರಿಪುರಜನರಿಗೆಲ್ಲ ಬೋಧಿಸಿದ ಬೌದ್ಧನ್ನ ಬಲಗೊಂಬೆ ಕೇಳ್ ಸಖಿಯಳೆ 9 ಕಲಿಸಮಾಪ್ತಿ ಕಾಲದಲ್ಲಿ ಚೆಲುವ ಅಶ್ವಾರೂಢನಾಗಿ ಬಿಡದೆ ಪಾಲಿಸಿದ ಶರಣಜನರ ಕೇಳ್ ಸಖಿಯಳೆ ಬಿಡದೆ ಪಾಲಿಸಿದ ಶರಣಜನರನು ಭೀಮೇಶಕೃಷ್ಣನ ಚರಣಕಮಲಕೆರಗಿ ಬಲಗೊಂಬೆ ಕೇಳ್ ಸಖಿಯಳೆ 10
--------------
ಹರಪನಹಳ್ಳಿಭೀಮವ್ವ
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಕೇಳೋನಂದ ಇದು ಏನು ಚೆಂದ ಹಾಲಿನ್ಹರವಿಯ ಒಡೆದೋಡಿ ಬಂದು ಬಾಲರನು ಕೂಡ್ಯಾಡಿ ಗೋವಿಂದ ಬವಣೆಬಡಿಸುವ ಬಲುಬಗೆಯಿಂದ ಪ ಕಣ್ಣ ತೆರೆದು ಉದಕದೊಳಾಡುವನು ಸಣ್ಣ ಮೋರೆಯ ಮಾಡಿ ಬಗ್ಗುವನು ಮಣ್ಣಕೆದರುತ ಕ್ರೋಡಾಗಿ ತಾನು ಚಿನ್ನಸುರ ಎಲ್ಲೆ ಕರುಳ್ಹಾರ್ಹಾಕುವನು 1 ತಿರುಕನಂದದಿ ಬೇಡಿಕೊಂಬುವನೊ ಗುರುತದಾರದರಿಯ ತಾಯ್ಹಂತಕನು ದೊರೆತನವ ಬಿಟ್ಟಡವಿಲಿರುವವನು ಶರತಮಾಡಿ ಮಾತುಳನ ಕೊಲ್ಲುವನು 2 ಬËದ್ಧರೂಪದಿ ಲಜ್ಜೆಗೆಡಿಸುವನು ಎದ್ದು ತುರುಗನೇರ್ಯೋಡಿ ಪೋಗುವನು ಕದ್ದು ಬೆಣ್ಣೆಯ ಮೆಲ್ಲುವ ತಾನು ಮುದ್ದು ಭೀಮೇಶಕೃಷ್ಣ ಎಲ್ಲಿಹನು 3
--------------
ಹರಪನಹಳ್ಳಿಭೀಮವ್ವ
ಕೋಲು ಕೋಲೆನ್ನ ಕೋಲೆ ಪ ಅಂಜಾನೆ ಗಿರಿಯಲ್ಲಿ | ಸಂಜೀವರಾಯ ಸಹ ಕಂಜನಾಭನಿರುವ | ಅಂಜಿಕ್ಯಾತಕಮ್ಮ 1 ಮೂಡಲು ಗಿರಿವಾಸ | ನಾಡಿಗೊಡೆಯನೆಂದು ಪಾಡುವವರ ದೋಷ | ಓಡಿಸುವನಮ್ಮ 2 ವೆಂಕಟರಮಣನು | ಕಿಂಕರ ಜನಗಳ ಸಂಕಟಗಳ ಕಳೆವ | ಶಂಕೆ ಇಲ್ಲವಮ್ಮ 3 ಈಶ ಶ್ರೀನಿವಾಸ | ದಾಸ ಜನರ ಪೋಷ ರಾಶಿ ದೋಷ ಸುಟ್ಟು | ಲೇಸುಗೈವನಮ್ಮ 4 ಮತ್ಸ್ಯ ಮೂರುತಿ ತ | ನ್ನಿಚ್ಛೆಯಿಂದಲಿ ಬಲು ತುಚ್ಛ ದೈತ್ಯನನು | ಕೊಚ್ಚಿ ಬಿಸುಟನಮ್ಮ 5 ಅಮಿತ ಭಾರ ಪೊತ್ತು ಸುಮನಸರಿಗಮೃತ | ಮಮತೆಲಿತ್ತನಮ್ಮ 6 ಕ್ರೋಡಾಕಾರನಾಗಿ | ರೂಢಿಚೋರನಾದ ಹೇಡಿ ರಕ್ಕಸನ | ತೀಡಿ ಕೊಂದನಮ್ಮ 7 ಘೋರ ರೂಪ ಕೊಂಡು | ಕ್ರೂರ ರಕ್ಕಸನ ದೋರೆ ಕರುಳಕಿತ್ತು | ಪೋರನ ಪೊರೆದನಮ್ಮ 8 ಪುಟ್ಟ ಪೋರನಾಗಿ | ಬೆಟ್ಟದಂತೆ ಬೆಳೆದು ದಿಟ್ಟ ಬಲಿಯ ಶಿರವ | ಮೆಟ್ಟಿ ತುಳಿದನಮ್ಮ 9 ತಾತನ ನುಡಿ ಕೇಳಿ | ಕಾತರನಾಗದೆ ಮಾತೆಯ ಶಿರವನ್ನು | ತಾ ತರಿದಿಟ್ಟನಮ್ಮ 10 ಸೀತೆಯ ಬಿಡಿಸಲು | ಸೇತುವೆಯನು ಕಟ್ಟಿ ಭೂತನನ್ನು ಕೊಂದು | ಖ್ಯಾತಿಗೊಂಡನಮ್ಮ 11 ದ್ವಾರಕಪತಿ ತಾನು | ನಾರಿ ಪಾಂಚಾಲೆಯು ಕೋರಿದ ಕ್ಷಣದಲ್ಲಿ | ಸೀರೆಯ ನೇದನಮ್ಮ 12 ಚಿತ್ತಜನಯ್ಯನು | ಅತ್ತಿತ್ತ ಅಲೆಯುತ ಬೆತ್ತಲೆ ನಾರಿಯರ | ಮುತ್ತುಗೊಂಡನಮ್ಮ 13 ಜಲಜನಾಭನು ತಾ | ಕಲಿಗಾಲ ಕಡೆಯಲ್ಲಿ ಹಲವು ಪಾಪಿಗಳನು | ಫಲದಿ ಕೊಂದನಮ್ಮ 14 ಮುಟ್ಟಿ ಭಜಿಸುವರಿಗೆ | ಇಷ್ಟವಾದ ವರವಕೊಟ್ಟನು ರಂಗೇಶ | ವಿಠಲ ಕೇಳಮ್ಮ 15
--------------
ರಂಗೇಶವಿಠಲದಾಸರು
ಗೋವಿಂದೋ ನಾರಾಯಣ ಗೋವಿಂದೋ ನಾರಾಯಣ ಪ ವೇದಗಳು ಕದ್ದೊಯ್ದು ದೈತ್ಯ ಪಯೋಧಿಯೊಳಗಿಡಲು ಮತ್ಸ್ಯ ರೂಪದೊಳಂದು ವೇದಗಳ ತಂದನಮ್ಮ 1 ಬೆಟ್ಟವು ಮುಳುಗು ಸಮಯದಿ ನಮ್ಮರಂಗ ಹುಡಿಗಟ್ಟಿ ಸುರರರಕ್ಷಿಸಿದನಮ್ಮ 2 ಮಡಿದೊಯ್ಯಲು ಕ್ರೋಡತನ ತಾಳ್ದವನ ಛೇದಿಸಿ ದವಡೆಯೊಳ- ವನಿಯನೆತ್ತಿದನಮ್ಮ 3 ಕಶ್ಯಪನ ಸಿಗಿದನಮ್ಮ ಕೀರ್ತಿಯ ಪಡೆದನಮ್ಮ 4 ದಾನವ ಬೇಡಿದನು ಬಲಿಯಕೊಂದ ನಮ್ಮ 5 ನಿತ್ಯಾತ್ಮಕನಾಗಿ ಮೆರೆದ ನಮ್ಮ 6 ವಾರಿಧಿಯನು ಬಂಧಿಸಿದನಮ್ಮ ಮೀರಿದ ರಕ್ಕಸನಗಳ ನಿಳುಹಿ ನಾರಿ ಸೀತೆಯ ತಂದನಮ್ಮ 7 ಕಂಸನನು ಕೊಂದನಮ್ಮ ಗೋವುಗಳನು ಕಾಯ್ದನಮ್ಮ 8 ಬೌದ್ಧರೂಸವತಾಳ್ದನಮ್ಮ ಕೀರ್ತಿಯ ಪಡೆದ ನಮ್ಮ 9 ತುರುಗವ ನೇರುತ ಬಂದನಮ್ಮ ಕರುಣದಿಂದಲಿ ಕಾಯ್ದನಮ್ಮ 10 ಶ್ರೀ ಕೃಷ್ಣ ಮುಕುಂದನಮ್ಮ 11
--------------
ಕವಿ ಪರಮದೇವದಾಸರು
ಜಯಜಯತು ಶುಭಕಾಯ ಜಯಜಯತು ಹರಿಪ್ರೀಯಜಯತು ಜೀಯ ಮಧ್ವಾಖ್ಯಮುನಿರಾಯಪ. ರಾಮಾವತಾರದಲಿ ಹನುಮಂತನಾಗಿ ನೀತಾಮಸನ ಪುರವ ಅನಲಗಾಹುತಿಯನಿತ್ತೆಭೂಮಿಜೆಯ ಕುಶಲವನು ರಘುನಾಥಗರುಹಿದೆಸ್ವಾಮಿಕಾರ್ಯವ ವಹಿಸಿ ಖಳರ ನೀ ತರಿದೆ 1 ದ್ವಾಪರಾಂತ್ಯದಲಿ ಶ್ರೀಕೃಷ್ಣನಂಘ್ರಿಯ ಭಜಿಸಿಪಾಪಿಮಾಗಧ ಬಕ ಕೀಚಕಾದಿಗಳಕೋಪದಿಂದಲಿ ತರಿದು ಕುರುಕುಲವ ನೀನಳಿದೆ ಪ್ರ-ತಾಪದಿಂದಲಿ ಮೆರೆದೆ ಖಳರ ನೀ ಮುರಿದೆ 2 ಮಾಯಿಗಳು ಹೆಚ್ಚಿ ಮತವೆಲ್ಲ ಸಂಕರವಾಗಿತಾಯಿಗಳಿಲ್ಲದ ಶಿಶುಗಳಂತೆ ಸುಜನರಿರಲುನೀಯವತರಿಸಿ ಮತವೆಲ್ಲ ಉದ್ಧರಿಸಿ ನಾ-ರಾಯಣನೆ ಮೂಜಗಕೆ ಪರದೈವವೆಂದೊರೆದೆ 3 ದುರುಳ ವಾದಿಗಳಿಗುತ್ತರವ ಕೊಡಬೇಕೆನುತಸರುವ ಶಾಸ್ತ್ರಾಮೃತವ ಸೃಜಿಸಿ ವಾಕ್ಯಗಳ ಕ್ರೋಡಿಸಿದರುಶನ ಗ್ರಂಥಗಳ ರಚಿಸಿ ಶಿಷ್ಯರಿಗಿತ್ತೆಪರಮ ತತ್ವದ ಖಣಿಯೆ ಗುರುಶಿರೋಮಣಿಯೆ 4 ನಿನ್ನ ಮತವೇ ವೇದಶಾಸ್ತ್ರಗಳ ಸಮ್ಮತವುನಿನ್ನ ಮತವೇ ಇಹಪರಕೆ ಸಾಧನವುಪನ್ನಂಗಶಯನ ಶ್ರೀ ಹಯವದನದಾಸರೊಳುನಿನ್ನ ಪೋಲುವರುಂಟೆ ಮಧ್ವಮುನಿರಾಯ 5
--------------
ವಾದಿರಾಜ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ನಾರಾಯಣ ನಾರಾಯಣ ನಾರಾಯಣ ನಾರಾಯಣ ನಾರಾಯಣ ನರಹರಿಯೆ ಪ. ನಾರಾಯಣ ನರಹರಿಯೆ ಹಯವದನ ಸ್ವಾಮಿ ನೀ ಎನಗೆ ದಯವಾಗೊ ಅ.ಪ. ನಿಗಮವ ಕದ್ದೊಯ್ದ ದುಗುಡ ದೈತ್ಯನ ಕೊಂದು ಆಗಮವ ತಂದು ಅಜಗಿತ್ತೆ ಆಗಮವ ತಂದು ಅಜಗಿತ್ತೆ ಹಯವದನ ಆದಿಮೂರುತಿಯೆ ದಯವಾಗೊ 1 ಕೂರ್ಮರೂಪದಿ ಬಂದು ಆ ಗಿರಿಯನೆತ್ತಿದ ಪ್ರೇಮದಿ ಸುರರಿಗಮೃತವ ಪ್ರೇಮದಿ ಅಮೃತವನಿಕ್ಕಿದ ಹಯವದನ ಸ್ವಾಮಿ ನೀ ಎನಗೆ ದಯವಾಗೊ 2 ಕ್ರೋಡರೂಪದಿ ಬಂದು ಮೂಢದೈತ್ಯನ ಕೊಂದು ರÀೂಢಿಯ ನೆಗಹಿ ಜಗಕಿತ್ತೆ ರÀೂಢಿಯ ನೆಗಹಿ ಜಗಕಿತ್ತೆ ಹಯವದನ ಪ್ರೌಢ ನೀ ಎನಗೆ ದಯವಾಗೊ 3 ಶಿಶುವ ಬಾಧಿಸುತಿರ್ದ ಕಶಿಪನ್ನ ಸೀಳಿದಿ ಕುಶಲದಿಂ ಕರುಳ ಮಾಲೆಯ ಕುಶಲದಿಂ ಮಾಲೆ ಧರಿಸಿದ ಹಯವದನ ಬಿಸಜಾಕ್ಷ ಎನಗೆ ದಯವಾಗೊ 4 ವಾಮನರೂಪದಿ ಬಂದು ಭೂಮಿ ಓರಡಿ ಮಾಡಿ ವ್ಯೋಮಕ್ಕೆ ಚರಣವ ನೀಡಿದೆ ವ್ಯೋಮಕ್ಕೆ ಚರಣವ ನೀಡಿದ ಹಯವದನ ವಾಮನ ಎನಗೆ ದಯವಾಗೊ 5 ಕೊಡಲಿಯ ಪಿಡಿದು ಕಡಿದೆ ದುಷ್ಟನೃಪರ ಹಡೆದ ತಂದೆಯ ಮಾತು ಸಲಿಸಿದೆ ಹಡೆದ ತಂದೆಯ ಮಾತು ಸಲಿಸಿದ ಹಯವದನ ಒಡೆಯ ನೀ ಎನಗೆ ದಯವಾಗೊ 6 ಸೀತೆಗೋಸ್ಕರ ಪೋಗಿ ಸೇತುವೆಯ ಕಟ್ಟಿದೆ ಭೂತ ರಾವಣನ ಮಡುಹಿದೆ ಭೂತ ರಾವಣನ ಮಡುಹಿದೆ ಹಯವದನ ಖ್ಯಾತ ನೀ ಎನಗೆ ದಯವಾಗೊ 7 ಗೊಲ್ಲರ ಒಡನಾಡಿ ಬಲ್ಲಿದಸುರÀನ ಕೊಂದು ಮಲ್ಲರೊಡನಾಡಿ ಮಡುಹಿದೆ ಮಲ್ಲರೊಡನಾಡಿ ಮಡುಹಿದ ಹಯವದನ ಫುಲ್ಲಾಕ್ಷ ಎನಗೆ ದಯವಾಗೊ 8 ತ್ರಿಪುರರ ಸತಿಯರಿಗುಪದೇಶವನಿಕ್ಕಿ ತ್ರಿಪುರರನೆಲ್ಲ ಮಡುಹಿದೆ ತ್ರಿಪುರರನೆಲ್ಲ ಮಡುಹಿದ ಹಯವದನ ನಿಪುಣ ನೀ ಎನಗೆ ದಯವಾಗೊ 9 ತೇಜಿಯನೇರಿ ರಾಹುತನಾಗಿ ನೀ ಮೆರೆದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಮೂರ್ಜಗಕ್ಕೆ ಕಲ್ಕಿಯೆಂದೆನಿಸಿದೆ ಹಯವದನ ಭೋಜ ನೀ ಎನಗೆ ದಯವಾಗೊ 10 ವಾದಿರಾಜರಿಗೊಲಿದು ಸ್ವಾದೆಪುರದಲಿ ನಿಂದು ವೇದದ ಕಥೆಯನರುಹಿದೆ ವೇದದ ಕಥೆಯನರುಹಿದ ಹಯವದನ ಮಾಧವ ನೀ ಎನಗೆ ದಯವಾಗೊ 11
--------------
ವಾದಿರಾಜ
ಪ್ರಸನ್ನ ಶ್ರೀ ವರಾಹ ಆದಿವರಾಹ ಸಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರಧ್ಧೇಶ ವಂದ್ಯ ಬದರಶೇಖರ ಮುಖ ಸುರವಿನುತ ವಾಂಛಿತದ ಮೋದಚಿನ್ಮಯ ಭೂವರಾಹ ಯಜÉ್ಞೀಶ ಪ ಅದ್ವಿತೀಯನು ನೀನೇ ಪದುಮಜಾಂಡದ ಒಡೆಯ ಪದುಮಭವನೊಳಿದ್ದು ಭುವನಗಳ ಸೃಜಿಸಿ ಕೃತಿ ನಡೆಸುತ್ತ ಒದಗುವಿ ಸುಖಜ್ಞಾನ ಬಲಪೂರ್ಣ ಹರಿಯೇ 1 ಅಂದು ಸ್ವಾಯಂಭುವ ಮನು ವೇನಗರ್ಭನಲಿ ಬಂದು ನಮಿಸಿ ಭಿನ್ನಹವ ಮಾಡೆ ವಿಧಿ ಹೇಳಿದ ಜನಾದರ್Àನ ಯಜ್ಞಪರಮಾತ್ಮ ಶ್ರೀದ ಭದ್ರದ ಈಜ್ಯ ಪೂಜ್ಯ ನೀನೇ ಎಂದು 2 ಸ್ವಾಯಂಭುವ ಸಾಮ್ರಾಟ್ ಪೇಳಿದ ಮಹಾ ಈ ಭೂಮಿ ಇರುವುದು ಉದ್ಧರಿಸಿ ಸ್ಥಾನವ ತನ್ ಪ್ರಜೆಗಳಿಗೆ ಒದಗಿಸಬೇಕು ಎಂದ 3 ಇರುವುದಕೆ ಸ್ಥಳ ಪ್ರಜೆಗಳಿಗೆ ಒದಗಿಸಲು ಪರಮೇಷ್ಟಿರಾಯ ತನ್ನ ಹೃದ್ ವನಜದಿ ಸುಪ್ರಕಾಶಿಪ ಪರಮ ಪೂರುಷ ನಿನ್ನನ್ನು ಪರಮಾದರದಲ್ಲಿ ಧ್ಯಾನಿಸಿದನು 4 ಮಹಿಶಿರಿಕಾಂತ ನಿನ್ನನು ಧ್ಯಾನಿಸುತಲಿದ್ದ ಬ್ರಹ್ಮನ ಮೂಗಿಂದ ಹರಿ ಅನಘ ನೀನು ವರಾಹ ಮರಿ ಅಂಗುಷ್ಟ ಮಾತ್ರ ಪ್ರಮಾಣದಿ ಬಹಿರ್ಗತನು ಆದಿಯೋ ಚಿದಾನಂದರೂಪ 5 ಒಂದೇ ಕ್ಷಣದಿ ಗಜಮಾತ್ರ ವರ್ಧಿಸಿದಿಯೋ ಅದ್ಭುತ ಈ ರೂಪ ಕಂಡು ಅಲ್ಲಿ ಇದ್ದ ಮರೀಚಿ ಪ್ರಮುಖ ವಿಪ್ರರು ಮನು ಮೊದಲಾದವರು ಬಹು ಬೆರಗಾದರಾಗ 6 ಸೂಕರ ರೂಪ ಕಂಡಿಲ್ಲ ಎಲ್ಲೂನು ಇದು ಮಹಾಶ್ಚರ್ಯ ಗಂಡ ಶಿಲಾವೋಲ್ ಕ್ಷಣ ಮಾತ್ರದಲಿ ಚಂಡ ಈ ಕ್ರೋಡವು ದೊಡ್ಡದಾಗಿಹುದು 7 ಸೂಕರ ರೂಪವ ನೋಡುತ್ತ ಮುನಿಗಳು ತರ್ಕಿಸಿ ಮೀಮಾಂಸ ಮಾಡೆ ಅನಿಮಿತ್ತಬಂಧು ಹರಿ ಒಲಿದು ಬಂದಿರುವಿ ಎಂದು ವನಜಸಂಭವ ಸಂತೋಷ ಹೊಂದಿದನು 8 ಮಹಾವರಾಹ ರೂಪನೇ ವಿಭೋ ನೀನು ಮಹಾಧ್ವನಿಯಲಿ ಗರ್ಜಿಸಿದಿ ಆಗ ಆ ಹೂಂಕಾರವು ದಿಕ್ಕು ವಿದಿಕ್ಕುಗಳ ಮಹಾಂಬರವ ತುಂಬಿತು ಪ್ರತಿಧ್ವನಿಯಿಂದ9 ಅಪ್ರತಿ ಮಹಾಮಹಿಮ ಉರುಪರಾಕ್ರಮ ನೀನು0 ಅಂಬುಧಿಯೊಳು ಲೀಲೆಯಿಂದಲಿ ಪೊಕ್ಕು ಸುಪವಿತ್ರತಮ ನಿನ್ನ ದಂಷ್ಟ್ರದ ಮೇಲಿಟ್ಟುಕೊಂಡು ಕ್ಷಿಪ್ರದಲಿ ನೀರಮೇಲ್ ತಂದಿ ಭೂಮಿಯನು 10 ನೀರೊಳಗಡೆ ತಡೆದ ಆದಿದೈತ್ಯನ ಕೊಂದು ನೀರಮೇಲ್ ಇರಿಸಿದಿ ಭೂಮಿಯ ಎತ್ತಿ ಸರಸಿಜೋದ್ಭವ ಮುಖ್ಯಸುರಮುನಿ ವೃಂದವು ಕರಮುಗಿದು ಸ್ತುತಿಸಿದರÀು ಕೃತಜ್ಞ ಭಕ್ತಿಯಲಿ 11 ಎಂದು ಜಯಷೋಷವ ಮಾಡಿ ಮುದದಿ ಸುತಪೋನಿಧಿಗಳು ಸ್ತುತಿಸಿ ನಮಿಸಿದರು ವೇದವೇದ್ಯನೇ ಸೂಕರರೂಪ ನಿನ್ನನ್ನ 12 ಅಖಿಳ ಮಂತ್ರದೇವತಾ ದ್ರವ್ಯಾಯ ಸರ್ವಕೃತವೇ ಕ್ರಿಯಾತ್ಮನೇ ವೈರಾಗ್ಯ ಭಕ್ತ್ಯಾತ್ಮಜಯಾನುಭಾವಿತ ಜ್ಞಾನಾಯ ವಿದ್ಯಾ ಗುರುವೇ ನಮೋ ನಮಃ13 ಈ ರೀತಿ ಇನ್ನೂ ಬಹುವಾಗಿ ಸ್ತುತಿಸಿದರು ಹರಿ ವರಾಹನೇ ಭೂದರ ಧರೋದ್ಧಾರ ನರಸುರರು ಶುಚಿಯಿಂ ಪಠಿಸಿ ಎಲ್ಲರೂ ಕೇಳೆ ಸುಪ್ರಸನ್ನನು ಆಗಿ ಭದ್ರÀವನು ಈವಿ 14 ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 15 -ಇತಿ ಪ್ರಥಮ ಅಧ್ಯಾಯ ಪೂರ್ಣಂ - ದ್ವಿತೀಯ ಅಧ್ಯಾಯ ಹಿರಣ್ಯಾಕ್ಷ ಸಂಹಾರ ಆದರದಿ ಶರಣಾದೆ ಭೂದರ ವರಾಹನೇ ವಿಧಿ ಶ್ರದ್ಧೇಶ ವಂದ್ಯ ಬದರಶೇಖರ ಮುಖ ಸುವಿನುತ ವಾಂಛಿತದ ಮೋದ ಚಿನ್ಮಯ ಭೂವರಾಹ ಯಜÉ್ಞೀಶ À ಜ್ಞಾನಸುಖ ಭೂಮಾದಿ ಗುಣಪೂರ್ಣ ನಿರ್ದೋಷ ಪೂರ್ಣಬಲ ಹರಿ ಯಜ್ಞಮೂರುತಿ ವರಾಹ ಹನನ ಮಾಡಿ ಆದಿದೈತ್ಯನ ನೀರಿಂದ ಕ್ಷೋಣಿಯ ನಿನ್ ದಂಷ್ಟ್ರ ಮೇಲಿಟ್ಟು ತಂದಿ 1 ಭೂಮಿ ಉದ್ಧರಿಸಲು ಮಾತ್ರವಲ್ಲದೇ ಆ ಹೇಮಾಕ್ಷ ಅಸುರನ್ನ ಸಂಹಾರ ಮಾಡೆ ನೀ ಮಹಾಕ್ರೋಡರೂಪವÀ ಪ್ರಕಟಿಸಿದಿ ವಿಭೋ ಅಪ್ರಾಕೃತ ಚಿನ್ಮಯ ವಪುಷ 2 ಏಕದಾ ಬ್ರಹ್ಮನ ಸುತರು ಸನಕಾದಿಗಳು ಏಕಾತ್ಮ ಶ್ರೀ ವಿಷ್ಣುಲೋಕಕ್ಕೆ ಬರಲು ದಿಗ್ವಾಸಸ ಶಿಶುರೂಪ ಆ ಮುನಿವರರ ಲೆಕ್ಕಿಸದೆ ತಡೆದರು ದ್ವಾರಪಾಲಕರು 3 ಜಯವಿಜಯರೆಂಬುವ ಆ ದ್ವಾರಪಾಲಕರಿಗೆ ಮಾಯೇಶ ಹರಿ ಪ್ರಿಯತರ ಮುನಿಶ್ರೇಷ್ಠರು ಈಯಲು ಶಾಪವ ಆ ವಿಷ್ಣು ಪಾರ್ಷದರು ದೈತ್ಯಜನ್ಮವ ಹೊಂದಿದರು ಪತನವಾಗಿ 4 ಪತಿ ಕಶ್ಯಪ ಮುನಿ ಅಹ್ನೀಕದಲಿ ಇರಲು ದಿತಿ ದೇವಿ ಬಂದು ಅಪತ್ಯಕಾಮದಲಿ ಸಂಧ್ಯಾಕಾಲದಿ ಇಚ್ಛಿಸಿ ನಿರ್ಬಂಧಿಸಿ ವಿಧಿ ವಿರುದ್ಧದಲಿ 5 ಸುತಪೋನಿಧಿ ಕಶ್ಯಪ ತೇಜೋಲ್ಬಣದಿ ದಿತಿದೇವಿ ಜಠರದಲಿ ವಿಷ್ಣುಪಾರ್ಶದರು ಪತಿತ ಆ ಜಯವಿಜಯರು ಪ್ರವೇಶಿಸಿದರು ಆ ಆದಿದೈತ್ಯನು ಸಹ ಮೊದಲೇ ಅಲ್ಲಿ ಹೊಕ್ಕಿದ್ದ 6 ಅಬ್ಧಿಯಿಂ ನೀ ಭೂಮಿ ಎತ್ತೆ ತಡೆದು ಹತ - ನಾದ ಆ ದೈತ್ಯನು ಅಬ್ಜದೋದ್ಭವನು ಶ್ರೀದ ನಿನ್ ಪಾರ್ಶದನು ಆವಿಷ್ಟನಾದ 7 ಆದಿ ಹೇಮಾಕ್ಷನೊಳು ವಿಷ್ಣು ದ್ವಾರಪ ವಿಜಯ ದಿತಿದೇವಿ ಅವರ ಸುತ ಹಿರಣ್ಯಾಕ್ಷನೆಂದು ಉದಿಸಿದನು ಅಣ್ಣ ಜಯ ಹಿರಣ್ಯಕಶಿಪು ಸಹ ಅತಿಪರಾಕ್ರಮಯುತನು ಲೋಕಕಂಟಕನು 8 ಗದೆ ಹಿಡಿದು ಹಿರಣ್ಯಾಕ್ಷ ದಿಗ್ವಿಜಯ ಮಾಡಿ ಭೀತಿ ಪಡಿಸಿದ ದೇವತಾ ಜನರನ್ನೆಲ್ಲ ಅತಿಬಲಯುತನಿವ ಧರೆಯ ಸೆಳಕೊಂಡು ಉದಧಿಯೊಳು ಹೊಕ್ಕನು ಆರ್ಭಟಮಾಡುತ್ತ 9 ಸುರರು ನಿನ್ನಲಿ ಮೊರೆ ಇಡಲು ವರಾಹ ಹರಿ ನೀನು ನೀರೊಳು ಲೀಲೆಯಿಂದಲಿ ಪೊಕ್ಕು ಆ ದೈತ್ಯ ಹಿರಣ್ಯಾಕ್ಷನ ಸಹ ಯುದ್ದ ಮಾಡಿದಿಯೋ 10 ಸುರವೃಂದ ಕ್ಷೇಮಾರ್ಥ ಪದುಮಜ ಪ್ರಾರ್ಥಿಸಲು ಕರದಿಂದ ಹೊಡೆದು ಆ ದೈತ್ಯನ ಕೊಂದು ಧರೆಯನುದ್ಧರಿಸಿ ನೀ ಮೇಲೆತ್ತಿ ತಂದಿಯೋ ಉರುಪರಾಕ್ರಮ ಭಕ್ತವತ್ಸಲ ಕೃಪಾಳೋ 11 ವರಾಹ ಹರಿ ನಿನ್ನ ಕೃತಜ್ಞ ಮನದಿ ಸನ್ನಮಿಸಿ ಸ್ತುತಿಸಿದರು ಉದಾರ ವಿಕ್ರಮ ಹಿರಣ್ಯಾಕ್ಷನ್ನ ನೀನು ಕೊಂದ ನಿನ್ನಯ ಕ್ರೀಡಾ ವರ್ಣಿಸಲಶಕ್ಯ 12 ಕಮಲಾರಮಣ ಶ್ವೇತವರಾಹ ಮೂರುತಿ ನಮೋ ಶಾಮಚಾರ್ವಾಂಗ ನಮೋ ಭೂವರಾಹ ಬ್ರಹ್ಮ ಪವಮಾನರಿಂದಲಿ ಸದಾ ಪೂಜ್ಯನೇ ಸ್ವಾಮಿ ಕರುಣಾಂಬುಧಿಯೇ ಶರಣು ಮಾಂಪಾಹಿ 13 ಕೂರ್ಮ ಕ್ರೋಢ ನರಸಿಂಹ ವಾಮನ ರೇಣುಕಾದೇವಿಯ ಸುತ ರಾಮಚಂದ್ರ ಬುದ್ಧ ಕಲ್ಕಿ ವ್ಯಾಸ ಹಯಗ್ರೀವ ಆನಮಿಪೆ ಅವನೀಶ ಭೂ ಶ್ರೀಶ ಪಾಹಿ 14 ವರಾಹ ನಮೋ ಸದಾನಂದಮಯ ಜಗಜ್ಜ£್ಮÁದಿ ಕರ್ತ ನಿರ್ದೋಷ ಗುಣಪೂರ್ಣ ಅನಿಷ್ಟ ಪರಿಹರಿಸಿ ವರ್ಧಿಸುವಿ ದಯದಿ 15 ಶ್ಯಾಮ ಅರಿಶಂಖಧರ ಅಭಯ ಸದ್ವರಹಸ್ತ ಭೂಮಿಧರ ಸರ್ವವಾಂಛಿತ ಸಿದ್ಧಿದಾತ ಭೂಮ ನಿರ್ಮಲ ಕೋಲ ರೂಪ ಸರ್ವೋತ್ತಮನೇ ಮನ್ಮನದಿ ಸರ್ವದಾ ಹೊಳೆಯೋ ಕರುಣಾಳು 16 ಗುರು ಗುರೋರ್ಗುರು ಗುರೋರ್ಗುರುವಿನ ಗುರು ಶ್ರೀ ರಾಘವೇಂದ್ರ ಗುರುರಾಜ ಲಾತವ್ಯ ಋಜುವರ್ಯ ಮಧ್ವ ವಾರಿಜಾಸನ ಸರ್ವಹೃದ್ವನಜ ಅಂತಸ್ಥ ವರಾಹ ನಮೋ ಶರಣು 17 ಜ್ಞಾನಸುಖಪೂರ್ಣ ಪ್ರಸನ್ನ ಶ್ರೀನಿವಾಸ ಅನತೇಷ್ಟಪ್ರದ ಭೂವರಾಹ ಹಯಗ್ರೀವ ಶ್ರೀಶ ನರಸಿಂಹ ವಿಧಿತಾತ ನಮಸ್ತುಭ್ಯಂ ಪೂರ್ಣಪ್ರಜ್ಞರ ಹೃತ್‍ಸ್ಥ ಜನ್ಮಾದಿಕರ್ತ 18 -ಇತಿ ದ್ವಿತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಮಂಗಳಾಂಗ ಶ್ರೀಕೃಷ್ಣಗೆ ಸುದತಿಯರು ಮಂಗಳಾರತಿ ಎತ್ತಿರೆಪ ಭವ ಭಯ ಭಂಗ ಶುಭಗುಣಸಾಂದ್ರನಿಗೆ ಜಯ ಅ.ಪ ಕೂರ್ಮ ಕ್ರೋಡ ನೃಹರಿಗೆ ದಾನವ ಬೇಡಿದಗೆ ಮಾನದಿ ಭೃಗು ಶ್ರೀರಾಮ ಶ್ರೀಕೃಷ್ಣಗೆ ಬುದ್ಧ ಕಲ್ಕ್ಯನಿಗೆ ಜಯ 1 ಅನಿರುದ್ಧ ಮೂರುತಿಗೆ ಪಕ್ಷಿವಾಹನ ಹರಿಗೆ ಕುಕ್ಷಿಯೊಳೀರೇಳು ಜಗವನಿಂಬಿಟ್ಟಗೆ ಲಕ್ಷ್ಮೀನಾರಾಯಣ ಶ್ರೀ ಶ್ರೀಶನಿಗೆ ಜಯ 2 ಗೋಕುಲದೊಳು ಗೋಪಾಲಕರೊಡಗೂಡಿ ಗೋವ್ಗಳ ಕಾಯ್ದವಗೆ ಗೋವರ್ಧನಗಿರಿ ಎತ್ತಿದ ಧೀರಗೆ ಗೋಪಿದೇವಿಗೆ ಬಾಲಲೀಲೆಯ ತೋರ್ದಗೆ 3 ವೃಂದಾವನದಿ ಮೃತ್ತಿಕೆ ಮೆಲ್ಲುವೆನೆಂದು ವೃಂದಾರಕರು ನುಡಿಯೆ ನಂದ ಯಶೋದೆಯರು ಬಂದು ತೋರೆನಲು ಛಂದದಿಂದ ವಿಶ್ವರೂಪವ ತೋರ್ದಗೆ 4 ಕಾಳಾಹಿವೇಣಿಯರೊಡಗೂಡಿ ನಲಿವಗೆ ಕಾಳಿಂದಿ ರಮಣನಿಗೆ ಕಾಲಕರ್ಮಕೆ ಈಶನಾದ ಸ್ವಾಮಿಗೆ ಕಾಳಿಮರ್ದನ ಕಮಲನಾಭವಿಠ್ಠಲನಿಗೆ 5
--------------
ನಿಡಗುರುಕಿ ಜೀವೂಬಾಯಿ
ಮಂಗಳಾಚರಣ ಜಯ ಜಯ ರಮಾಕಾಂತ ಜಯತು ದೈತ್ಯಕೃಪಾಂತ ಜಯ ಸರ್ವ ವೇದಾಂತ ಜಯತು ನಿಶ್ಚಿಂತಾ ಪ. ಬ್ಯಾಡ ವೇಷವ ತಾಳಿ ಓಡಿಸುತ ತುರಗವನು ಹೂಡೆ ಪದ್ಮಾವತಿಯ ನೋಡಿ ನಸುನಗುತ್ತ ಜೋಡಾತು ತನಗೆಂದು ಗಾಡಿಕಾರನ ಮಾತ- ನಾಡಿ ಕ್ರೋಡಾಲಯಕೆ ಓಡಿ ಬಂದವನೆ 1 ತಾಯಿ ಬಕುಳೆಯ ಕಳುಹಿ ಮಾಯಕದ ಕೊರವಂಜಿ ಕಾಯದಿಂದಾಕಾಶ ರಾಯನರಮನೆಗೆ ಜೋಯೆಂದು ಪೋಗಿಸದುಪಾಯಗಳ ನಡಿಶಿ ತ- ನ್ನಾಯ ಕೈಕೊಂಡು ಕಮನೀಯ ಮೂರುತಿಯೆ 2 ಶುಕಮುನಿಯ ಮುಖದಿಂದ ಸುಖವಾರ್ತೆಯನು ಕೇಳಿ ಸಕಲ ದೇವೋತ್ತಮರ ನಿಕರವನು ನೆರಹಿ ಅಕಳಂಕ ಲಗ್ನದಲಿ ಸುಕವೋಲೆಗೊಲಿದುರಗ ಶಿಖರಿಯಲಿ ನೆಲೆಯಾದ ಲಕುಮಿವಲ್ಲಭನೆ ಜಯ ಜಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಮಾನುತ ಪಾದಪಲ್ಲವ ಶ್ರೀಕರ ಚರಣ ಸೇವಕರ ಸಂಗದೊಳಿರಿಸು ವಿಜಯರಾಯ ಪ ನಿಮ್ಹೊರತು ಪೊರೆವರನ್ಯರನು ನಾಕಾಣೆ ನಿಮ್ಮ ಚರಣವ ನಂಬಿದೆ ಕರುಣದಿ ಕಾಯೊ ಅ.ಪ ಪಂಡಿತ ಪಾಮರರನು ಉದ್ಧಾರ ಮಾಡೆ ಕರುಣದಿಂದ ಸಕಲ ವೇದಗಳ ಕ್ರೋಡೀಕೃತವಾದ ನಿರ್ಣಯ ಭಾಷ್ಯಗಳರ್ಥವ ಮಾಡಿದಿ ಪದಗಳ ಸಕಲರೂ ತಿಳಿವಂದದಿ 1 ನಿನ್ನವರಾದ ರಂಗ ಒಲಿದ ರಾಯರ ನೋಡು ನಿನ್ನ ಉಕ್ತಿಯ ನಂಬಿದ ವೆಂಕಟರಾಯರ ನೋಡು ನಿನ್ನವನೆಂದೆನ್ನನು ಅವರಂತೆ ನೋಡದೆ ಎನ್ನ ಕೈ ಸಡಿಲ ಬಿಡುವದೇನೋ 2 ಎಂದಿಗಾದರು ನಿನ್ನ ದಾಸರ ಕರುಣದಿಂದ ಪಾದದ್ವಂದ್ವ ಹೊಂದದೆ ಹೋಗುವೆನೆ ದಾಸರಪ್ರಿಯನೆ ತಂದೆ ವಿಜಯ ರಾಮಚಂದ್ರವಿಠಲರಾಯನ ಹೊಂದುವ ಮಾರ್ಗವ ಬಂದು ತೋರಿಸಬೇಕೊ 3
--------------
ವಿಜಯ ರಾಮಚಂದ್ರವಿಠಲ
ವರಾಹ ಹರಿ ವಿಠಲ | ಪೊರೆಯ ಬೇಕಿವಳ ಪ ಕರ ಪಿಡಿಯ ಬೇಕೋ ಅ.ಪ. ಕರ್ಮ ಅಘ | ಕಾನನಗೆ ದಾವಾಗ್ನಿನೀನೆ ಕೃಪೆ ನೋಟದಲಿ | ಮಾನಿನಿಯ ಸಲಹೋ 1 ತೀರ್ಥ ಪದ ನಿನ್ನ ಗುಣ | ಕೀರ್ತನೆಯ ನೊದಗಿಸುತಆರ್ತಳುದ್ಧರ ಕಾರ್ಯ | ಪ್ರಾರ್ಥಿಸುವೆ ಹರಿಯೇ |ಮೂರ್ತಿ ನಿನ್ನದು ಹೃದಯ | ಪಾತ್ರದಲಿ ಕಾಣಿಸುತಗೋತ್ರ ಉದ್ಧರಿಸಯ್ಯ | ಪೃಥ್ವಿ ಧರ ದೇವಾ 2 ಭವ ಶರಧಿ | ಪೋತನೀನೆನಿಸೋ 3 ನಿತ್ಯ ಮಂಗಳವಾ 4 ಸೃಷ್ಟೀಶ ಕ್ರೋಡೇಂದ್ರ | ಅಷ್ಟ ಸೌಭಾಗ್ಯದನೆಪ್ರೇಷ್ಟ ನೀನಾಗಿರಲು | ಕಷ್ಟವೆಲ್ಲಿಹುದೋವಿಷ್ಟರಶ್ರವ ಇವಳ | ಸುಷ್ಟು ಪೊರೆವುದು ಎನುತದಿಟ್ಟ ಗುರು ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು