ಒಟ್ಟು 9 ಕಡೆಗಳಲ್ಲಿ , 7 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಡಿಯ ತುಂಬಿರೆ ಕಡಲೊಡೆಯನ ಮಡದಿಗ್ಹರುಷದಿ ಪ ಬಿಡಿಯ ಮುತ್ತು ಬಿಗಿದ ತಟ್ಟೆಯ ಪಿಡಿದು ಬೇಗದಿಅ.ಪ ಅಚ್ಚ ಜರಿಪೀತಾಂಬ್ರನುಟ್ಟ ಅಚ್ಚುತನರಸಿಗೆ ಹೆಚ್ಚಿನ ಆಭರಣ ಧರಿಸಿ ಮೆರೆವ ದೇವಿಗೆ ಅಚ್ಚುತನ ವಕ್ಷಸ್ಥಳದಿ ವಾಸಿಪ ಲಕುಮಿಗೆ ಅಚ್ಚಮುತ್ತು ಅರಿಶಿನಡಿಕೆ ಉತ್ತತ್ತಿ ಫಲಗಳು 1 ಕದಳಿ ಫಲಗಳಿಂ ಅಂಬುಜಾಕ್ಷನರಸಿಗೆ ದಾಳಿಂಬೆ ತೆಂಗು ಸಹಿತದಿ ಅಂಬುಧಿಯೊಳು ಜನಿಸಿದ ಮುಕುಂದನರಸಿಗೆ ಅಂಬುಜಾಕ್ಷಿಯರೆಲ್ಲ ನೆರೆದು ಸಂಭ್ರಮಪಡುತಲಿ2 ಮಾದಳದ ಫಲವು ಮಾವು ಪನೆÀ್ನರಿಲ ಫಲಗಳ ಮಾಧವನ ಮಡದಿಗೀಗ ಮಾನಿನಿಮಣಿಯರು ಕ್ರೋಧಿನಾಮ ಸಂವತ್ಸರದಿ ಸಾಧು ಜನಗಳ ಆದರಿಸಿ ಕಾವ ಕಮಲನಾಭ ವಿಠ್ಠಲನರಸಿಗೆ 3
--------------
ನಿಡಗುರುಕಿ ಜೀವೂಬಾಯಿ
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ನಾನೇನು ಬಲ್ಲೆ ನಿಮ್ಮ ನಾಮದ ಸ್ಮರಣೆಯನುಏನೆಂದು ಸ್ತುತಿ ಮಾಡಲರಿಯೆ ಪ ದುರುಳ ಕರ್ಮಿಯು ನಾನುಪರಂಜ್ಯೋತಿಯು ನೀನು ಪಾಮರನು ನಾನು 1 ಅಣುರೇಣು ತೃಣ ಕಾಷ್ಠ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕರ್ಮಿ ನಾನುವನಜಸಂಭವನಯ್ಯ ವೈಕುಂಠಪತಿ ನೀನುತನುವು ಸ್ಥಿರವಲ್ಲದ ನರಬೊಂಬೆ ನಾನು 2 ದುರಿತ ಮಾಯಾ ಶರೀರಿ ನಾನು 3 ಭೂರಿ ಕಾರುಣ್ಯಪತಿ ನೀನುಘೋರತರ ಕಾಮಕ್ರೋಧಿಯು ನಾನುಈರೇಳು ಲೋಕವನು ಪೊಡೆಯಲಿಟ್ಟವ ನೀನುಸಾರಿ ಭಜಿಸದ ದುಷ್ಟ ಕರ್ಮಿ ನಾನು 4 ತಿರುಪತಿಯೊಳು ನೆಲಸಿದ ವೆಂಕಟೇಶನು ನೀನುಚರಣಕೆರಗುವ ಕನಕದಾಸನು ನಾನುಬಿರಿದುಳ್ಳ ದೊರೆ ನೀನು ಮೊರೆ ಹೊಕ್ಕೆನಯ್ಯ ನಾನುಮರಣ ಕಾಲಕೆ ಬಂದು ಕಾಯೊ ಹರಿಯೆ5
--------------
ಕನಕದಾಸ
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ಪ ದುರುಳ ತಿರುಕನು ನಾನು 1 ವಾರಿಧಿಶಯನನಾದ ಕಾರುಣ್ಯನಿಧಿ ನೀನುಘೋರದಿಂದಿಹ ಕಾಮಿಕ್ರೋಧಿ ನಾನುಈರೇಳು ಭುವನದೊಳು ಇರುವ ಮೂರುತಿ ನೀನುದೂರಿ ನಿನ್ನನು ಬೈವ ದುಷ್ಟ ನಾನು2 ಅಣುರೇಣು ತೃಣಗಳಲಿ ಪರಿಪೂರ್ಣನು ನೀನುಕ್ಷಣಕ್ಷಣಕೆ ಅವಗುಣದ ಕುಕರ್ಮಿ ನಾನುವಾಣಿಯರಸನ ಪೆತ್ತ ವೈಕುಂಠಪತಿ ನೀನುಕ್ಷಣಭಂಗುರ ತನುವಿನ ಗೊಂಬೆ ನಾನು 3 ಕಂಬದಲಿ ಬಂದ ಆನಂದ ಮೂರುತಿ ನೀನುನಂಬಿಕೆಯಿಲ್ಲದ ಪ್ರಪಂಚಕನು ನಾನುಅಂಬರೀಷಗೆ ಒಲಿದ ಅಕ್ರೂರಸಖ ನೀನುಡಂಬ ಕರ್ಮಿಯು ನಾನು ನಿರ್ಜಿತನು ನೀನು4 ತಿರುಪತಿಯ ವಾಸ ಶ್ರೀವೆಂಕಟೇಶನೆ ನಿನ್ನಚರಣಸೇವಕರ ಸೇವಕನು ನಾನುಬಿರುದುಳ್ಳವನು ನೀನು ಮೊರೆಹೊಕ್ಕವನು ನಾನುಸಿರಿ ಕಾಗಿನೆಲೆಯಾದಿಕೇಶವನು ನೀನು 5
--------------
ಕನಕದಾಸ
ಶುಕಪಿತನ ಪದಕಂಜ ಪದುಪಾ | ಅಖಿಳ ಲೋಕದ ಗುರುವೆ ಸುಖ ತೀರ್ಥ ಮುನಿಪಾ ಪ ನಿತ್ಯ ನೈಮಿತ್ಯಗಳು | ಗತಿ ತಪ್ಪಿ ಪೋಗಿರಲು ಸರ್ವ ದೇವತೆಗಳು || ಪಥವ ಕಾಣದೆ ನೆರೆದು ಯೋಚಿಸಿ ತಮ್ಮೊಳು | ಅತಿಶಯದಿ ವೊದರಿ ಕೇಳು ಭವನದಾ | ಪತಿಯಾದ ಬೊಮ್ಮಗುಸರಿದರಂದು ಮೇಲು1 ತುತಿಸಲಾಕ್ಷಣ ಕೇಳಿ ಅಜನು ಶಿರದೂಗಿದನು | ಕೃತಭುಜರ ಸಹವಾಗಿ ಹರಿಪುರಕೆ ಸಾಗಿದನು | ನತನಾಗಿ ಶಿರಿಪತಿಯ ಪದಯುಗಕೆ ಬಾಗಿದನು | ಗತಿ ನೀನೆ ಎಂದು ಕೂಗಿದನು ಹರಿ ಕೇಳಿ | ಸತತ ನಿನ್ನನ್ನು ಕರೆದು ಪೇಳಿದವೇಗಿದನು 2 ಭೂಸುರನ ಗರ್ಭದಲಿ ಬಂದೆ ನೀನವತರಿಸಿ | ವಾಸುದೇವನೆಂಬ ನಾಮದಿಂದಲಿ ಜನಿಸೀ | ಭಾಸುರ ಕೀರ್ತಿಯಲಿ ಮೆರೆÀದೆ ಬಲು ಪಸರಿಸಿ | ದೋಷ ವರ್ಜಿತದ ಗುಣರಾಸಿ ಎನಿಸುವಾ | ಲೇಸು ಆರೈದೆರಡು ಲಕ್ಷಣ ಸಂನ್ಯಾಸಿ 3 ಪುಟ್ಟಿ ಇಳಿಯೊಳಗೆ ಸಂಕರನೆಂಬ ದುರವಾದಿ | ಜಟ್ಟಿಗನಾಗಿ ಸೋsಹಂ ಯೆಂಬ ಅತಿ ಕ್ರೋಧಿ | ಅಟ್ಟಹಾಸದಲಿ ತಿರುಗಿದನು ಬೀದಿ ಬೀದಿ | ಘಟ್ಟವಚನದಿಂದ ಕಾದಿ ಅವನ ಮುರಿ | ದೊಟ್ಟಿದೇ ವಪ್ಪದಲಿ ಮಾಯಿ ಮತಭೇದಿ 4 ಅಮೃತ | ಗ್ರಂಥ ಉತ್ತಮರಿಗೆರೆದು ಸುಖ ಬಡಿಸಿದೆ ಅತಿಶ್ಯಾಂತ | ಅತ್ಯಂತ ಮಹಿಮ ಬಲವಂತ ನಿಮಗೆ ನಾ | ಎತ್ತಿ ಕರಗಳ ಮುಗಿವೆ ತೋರು ನಿಜ ಪಂಥ 5 ಹರಿಯೆ ಪರನೆಂದು ಬೊಬ್ಬರಿದು ಎಳಹರಿ | ಮರಿಯೆ ಬಿರಿದು ಡಂಗುರವ ಹೊಯಿಸಿ | ಚರಿಸಿದ ಗುರು ದೊರೆಯೇ | ಸರಿಗಾಣೆ ನಿನಗೆಲ್ಲಿ ಮತ್ತೊಬ್ಬರನ ಕರಿಯೇ | ವರ ಬದರಿಲಿಪ್ಪ ವೈರಾಗ್ಯದ ಸಿರಿಯೇ 6 ಮುನಿಗಳೊಳಗೆ ರನ್ನ ಮುನಿದವರಿಗಿರಬೆನ್ನ | ಘನ ವಿದ್ಯಸಂಪನ್ನ ಗುಣದಲ್ಲಿ ಅಚ್ಛಿನ್ನ | ನೆನೆದವರ ಪ್ರಸನ್ನ ತನುವೆ ತಪುತ ಚಿನ್ನ | ಮಿನಗುವಂತೆಯಿಪ್ಪ ಪಾವನ್ನ ಮಧ್ವಮುನಿ | ಚಿನುಮಯ ವಿಜಯವಿಠ್ಠಲನ್ನ ಪ್ರಸನ್ನಾ7
--------------
ವಿಜಯದಾಸ
ಸಖಿಯೆ ಲಾಲಿಸು ಎನ್ನ ಸಖನ ವರ್ಣಿಪೆ ಮುನ್ನ ಸುಖದಾತ ಸುಂದರನ ಪ್ರಾಣಸಖನ ಕಡುದೈನ್ಯದಿಂದೆರೆಯಲೊಡನೆ ಬಂದು ವೇದಗಳ್ಳನು ಪೋದ ಹಾದಿಯನೆ ತಾ ಪಿಡಿದು ವಾರ್ಧಿಯೊಳ್ಮುಳುಗಿ ಸಮ್ಮೋದದಿಂದ ಕ್ರೋಧಿರಕ್ಕಸನುರವ ಛೇದಿಸುತೆ ವೇದವ ನ್ನಾದರಿಸಿ ತಂದೀಯುತ ಜಗಕೆನಲವಿಂ ನಿರ್ಮಾಣ ಕಾರ್ಯದೋಳ್ ನಿಯಮಿಸಿದನಾ ಸ್ವರ್ಣಗರ್ಭನನಂತು ಮೀನನಾಗಿ ಅರ್ಣವದಿ ನೆಲೆಯಾಗಿ ನಿಂತ ಸುಗುಣ
--------------
ನಂಜನಗೂಡು ತಿರುಮಲಾಂಬಾ
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂದೇಹಿ ಕಲ್ಯಾಣಸಾಂದ್ರ ಪ.ಶ್ರೀಹರಿ ನಾಗಾರಿವಾಹನ ಶ್ಯಾಮಲ-ದೇಹ ರಾಕ್ಷಸ ಸಮೂಹವಿದಾರಕಅ.ಪ.ಸಜ್ಜನ ಕಲ್ಪವೃಕ್ಷ ಪಾಪಾಂಕುರ-ಭರ್ಜನ ವಿಬುಧಪಕ್ಷಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ-ಪ್ರಜ್ವಲಿಪಪರಮಜಗಜ್ಜೀವನಧಾಮನಿರ್ಜರೇಂದ್ರ ಪ್ರಮುಖ ಸುರಗಣ ಪೂಜ್ಯಪೂರ್ಣಬ್ರಹ್ಮ ರಘುವಂ-ಶೋರ್ಜಿತಾತ್ಮ ಮಹಾಮಹಿಮ ರಿಪುದುರ್ಜಯಜಯಾಕಾಂತ ಪ್ರಭುವೆ 1ವೇದೋದ್ಧಾರಣ ಕೂರುಮವರಾಹಪ್ರ-ಹ್ಲಾದವರದ ಗುಣಧಾಮಸಾಧುವಟುವೇಷವಿನೋದಭಾರ್ಗವಬಹುಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕಯಾದವಕುಲಾಂಬೋಧಿಚಂದ್ರಕುವಾದಿಜನದುರ್ಬೋಧಬದ್ಧವಿ-ರೋಧ ಕಲಿಮಲಸೂದನಾಚ್ಯುತಶ್ರೀಧರ ರಮಾಮೋದಮಾನಸ 2ಕಾಶಿಮಠಸ್ಥ ಯತಿ ಪರಂಪರ್ಯ-ಭೂಷಣ ಶುದ್ಧಮತಿಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದವಾಸುದೇವತವ ದಾಸ್ಯವ ಪಾಲಿಸುಶೇಷಶಯನ ವಿಲಾಸ ಪರಮದಯಾಸಮುದ್ರಸುಭದ್ರ ಶ್ರವಣ ಪ-ರೇಶಭವರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3ಪಾರಗಾಣರು ನಿನ್ನಯ ಬ್ರಹ್ಮಾದ್ಯರುಭೂರಿಗುಣದ ಮಹಿಮೆಯಸೂರಿಜನಪ್ರೀತ ಸೀತಾನಯನ ಚ-ಕೋರಚಂದ್ರನು ಮಹೋದಾರ ಶಾಙ್ರ್ಗಧರಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4ಪ್ರಣವರೂಪ ನಿರ್ಲೇಪ ನಿತ್ಯಾತ್ಮದು-ರ್ಜನವನೋದ್ದಹನೋದ್ದೀಪಮನುಕುಲಮಣಿ ಮುನಿಗಣ ಸಮಾಹಿತ ಜನಾ-ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನಜನುಮ ಜನುಮಕೆ ಲಕ್ಷುಮಿನಾರಾಯಣಚಿದಾನಂದೈಕ ದೇಹನೆಮನ ವಚನ ಕಾಯದಲಿ ಧ್ಯಾನಿಪಘನಭಕುತಿ ಭಾಗ್ಯವನು ಪಾಲಿಸು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವೆಂಕಟಾಚಲ ವಾಸ ವಂದಿಪೆನೋ ತವ ಪದ |ಪಂಕಜವ ನಿರ್ದೋಷ ವಾರಾಶಿಜಾದ್ರುಹಿಣ|ಶಂಕರ ಪ್ರಮುಖ ಪೋಷ ಶ್ರೀ ಶ್ರೀನಿವಾಸ ಪವೆಂಕಟ ಗದಾ ಸುದರುಶನವಿಜಯ|ಅಂಕಿತನೆಗಾಂಗೇಯಚೈಲತ- |ಳಂಕ ನನುಜ ಪಾಲಿಪುದು ಯನ್ನ ಮೀ |ನಾಂಕ ಜನಕ ಶಶಾಂಕ ಭಾಸ ಅ.ಪ.ಸ್ವಾಮಿ ಹೇ ನಿರಪೇಕ್ಷಝಷಕೂರ್ಮವರಾಹ|ಹೇಮಕಶ್ಯಪು ತೀಕ್ಷವಟುಭೃಗು ಕುಲೋದ್ಭವ ||ರಾಮ ಪಾಂಡವಪಕ್ಷ ತ್ರಿಪುರಾರಿ ಕಲ್ಕಿ |ಭೀಮವಂದಿತ ತ್ರ್ಯಕ್ಷಸಖವ್ರತತಿಜಾಕ್ಷ ||ಕಾಮಿತಪ್ರದ ಕೈರವದಳಶ್ಯಾಮಸುಂದರ ಕೋಟಿಮಾರಸು- |ಧಾಮಪ್ರಿಯ ಭಯವಿಪಿನವಹ್ನಿಸು ||ತ್ರಾಮ ನಂದನ ಪ್ರಾಣರಕ್ಷಕ |ಭೂಮಿಯೊಳು ದುರುಳರಿಪು ಸಾಲಿ ||ಗ್ರಾಮ ಮಂದಿರ ಲಕುಮೀ ಮನೋಹರ |ಸಾಮಜೇಂದ್ರನ ಪೊರೆದ ಸಹಸ್ರನಾಮ ಕಾಳೀಮದಾಹ ದೇವತ್ರ ||ಈಮಾಯಾತೃಣಕಾಷ್ಠಾದಿ ವ್ಯಾಪುತ |ಚಾಮೀಕರಭೂಷಣ ಶೋಭಿತ ||ಹೇಮಾಚಲ ಮಂದಿರ ಮುನಿಗಣಸೋಮಾರ್ಚಿತ ಕರುಣಿಸು ತ್ವರ್ಯಾ 1ನೀರಚರನಗಧರಕಿಟಿನೃಹರಿ ವಾಮನ |ಧರಣಿಪ ಸಂಹರ ಕೋದಂಡಕರ ಸ- ||ತ್ಯಾರಮಣಅಂಬರವರ್ಜಿತ |ತುರಂಗಮವೇರಿಕುಂಭಿಣಿಭಾರವಿಳುಹಿದ ಉದಾರ ||ಪರಾಶರ ಸುತ ಕಪಿಲರೂಪಿ ಸ- |ಮೀರ ವಂದ್ಯ ಅನಸೂಯವರಕುಮಾರ ಪು- ||ಷ್ಕರ ಕೇಶನನುಜ ಮಂದಾರನತ ಜನವಿಶ್ವ|ಧರಣ ಶರೀರವ್ಯೋಮಸಂತ್ಪತಿ ನಘ ತು- ||ಷಾರ ಗಣ ವೈದುವರೊ ನಿನ್ನಯಾ |ಪಾರಮಹಿಮೆಯ ತಿಳಿಯಲಾರರುನೀರಜಾಕ್ಷ|| ಯ ||ಪಿತಾಮಾತಾ ಮಹಿಮಯ ||ಕ್ಕಾರಿಂದೊಶ ಅಗ್ನಿಭಯ ನಿವಾರಣ ||ಸಾರೆಗರೆದು ಪೂರೈಸಭಿಲಾಷೆಯ |ಘೋರಿಸುತಿಹ ತಾಪತ್ರಯ ಬಿಡಿಸೊ ರ- |ಮಾರಮಣನೇ ಪ್ರಣತಾರ್ಥಿ ಪರಿಹರ 2ವೇದೋದ್ಧರಕೂರ್ಮಈ ಕ್ಷಿತಿಯ ಮಾಯದಲೊ- |ಯ್ದದುರ್ಮತಿ ಭರ್ಮ ಲೋಚನರತರಳಪ್ರ- ||ಹ್ಲಾದ ವರದ ಸುಕರ್ಮಸ್ಥಿತ ಮಾತೃಹಿಂಸಕ |ನಾದ ನಿರಶ ಸುಶರ್ಮ ಪ್ರಮುಖರನ ಮರ್ಮ ||ಭೇದಿಸೇಳಿದ ಭೈಷ್ಮೀವಲ್ಲಭ|ಶ್ರೀದಬುದ್ಧಖಳಕುಲಭಂಜನ||ಬಾದರಾಯಣನಿಗಮವೇದ್ಯನೆ |ಮೋದಮಯ ಪ್ರಾಣೇಶ ವಿಠ್ಠಲ ||ಕಾದುಕೋ ನಿನ್ನವರನು ಎಂದಾದಿಮಧ್ಯ |ವಿದೂರ ಯನ್ನ ವಿಷಾದಗುಣಗಳೆಣಿಸದೆ ಕುಬುಜೆಗೆ ||ಮೋದತೋರಿದ ದೀನಬಂಧು |ಶ್ರೀಧರಕೌಸ್ತುಭವಕ್ಷಸ್ಥಳ ||ದ್ವಾದಶವಪು ಸನ್ನಿಭ ನಿನ್ನಯ ಕ್ರೋಧಿಗಳೊಳು ಸ್ನೇಹವ ಪುನರಪಿ |ಮೇದಿನಿಯೊಳು ಜನ್ಮವ ಕೊಡದಿರು 3
--------------
ಪ್ರಾಣೇಶದಾಸರು