ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೀಷ್ಟದಾಯಕ ಕರುಣದಿ ಪಿಡಿ ಕೈಯಾ ಪ ರಾಮಕೃಷ್ಣ ಪವನಾತ್ಮಜನಂಘ್ರಿ ತಾಮರಸವ ಧೇನಿಸು ಪರಿವ್ರಾಜಾ ಭೀಮತೀರ ಪಿಪ್ಪಲ ಭೂಜ ಮೂಲ ಸೀಮೆಯೊಳಗೆ ರಾಜಿಸುವ ಯತಿರಾಜ 1 ಭೇದ ಮತಾಂಬುಧಿ ಚಂದಿರಾ ಗುರು ವೇದವ್ಯಾಸ ಮುನಿವರ ಸುಕುಮಾರಾ ಸಾಧು ಸದ್ಗುಣಗಣ ಗಂಭೀರನಾದ ಬಾದರಾಯಣನಾಮದಲಿಪ್ಪ ಧೀರಾ 2 ದೇವ ಜಗನ್ನಾಥ ವಿಠಲನ್ನ ಪಾದ ಸೇವಕ ಭೇಡುವೆ ಹರಿಮೂರ್ತಿ ಧ್ಯಾನ ಕೇವಲ ಭಕುತಿ ನಿರ್ಮಲ ಜ್ಞಾನ ವಿತ್ತು ಪಾವನ್ನ ಮಾಡಿ ಪಾಲಿಸೋ ಪ್ರತಿದಿನ 3
--------------
ಜಗನ್ನಾಥದಾಸರು