ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸುವೆ ಗಣರಾಜ ನೀ ದಯದಿಂದ ಪಾಲಿಸುವುದು ಪ ಸದ್ಗುಣಭರಿತನೇ ದುರ್ಗುಣರಹಿತನೇ ವಿಘ್ನವಿನಾಶಕನೇ ಭಗ್ನಗೈಸೋ ಎನ್ನ ಅವಗುಣಗಳ ನೀ ವಿದ್ಯಾದಾಯಕನೇ 1 ಶ್ರೀಶನಂಘ್ರಿಸರೋಜಭೃಂಗ ಮಹೇಶನ ವರಸುತನೇ ವ್ಯಾಸಕರುಣಾಪಾತ್ರನೇ ಮನದಾಸೆ ಪೂರೈಸುವವನೇ 2 ಪಾಶಪಾಣಿಯೆ ಪ್ರಾರ್ಥಿಸುವೆ ನೀ ಲೇಸು ಕೊಡುವುದಿನ್ನಾ ಶ್ರೀಶ ಶ್ರೀ ಹನುಮೇಶವಿಠಲನ ದಾಸನೇ ಅನುದಿನಾ 3
--------------
ಹನುಮೇಶವಿಠಲ
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಗಣೇಶ ಪ್ರಾರ್ಥನೆ1ಲಂಬೋದರ ಪಾಹೀ ಪಾಹೀ ಜಗದ್ಗುರು|ಶಂಭುನಂದನ ಸುರಸುತ ಪಾದಾ ಪಯೋಗೀಶಾರ್ಚಿತ ಶ್ರೀ ಪಾರ್ವತಿ ಪುತ್ರ ನತಮಿತ್ರಾ |ಆಗಸವಾಳ್ದಮೂಷಕರೂಢಾ ||ನಾಗಶಯನನಪಾದಧ್ಯಾನದಲ್ಲಿಡು ನಿತ್ಯಾ |ಶ್ರೀ ಗಣಪತಿ ನಿನ್ನ ಬಲಗೊಂಬೆ 1ಶ್ರೀವರ ಶ್ರೀರಾಮಚಂದ್ರ ಧರ್ಮರಾಯಾ |ದೇವೇಂದ್ರಾ ನಿನ್ನ ಪೂಜಿಸಿದಾರೋ ||ಕೇವಾಲಾಕಲಿದುರ್ಯೋಧನ ಪೂಜಿಸದೆ ಕೆಟ್ಟಾ |ಶ್ರೀ ವಿಘ್ನೇಶ್ವರ ನಿನ್ನ ಬಲಗೊಂಬೆ 2ದನುಜಾರ ಮೋಹೀಸೂವದಕೆ ಸಂಕಟ ಚೌತಿ |ಮನಿಸೀ ಪೂಜಿಸಿಕೊಂಬೆ ಖಳರಿಂದಾ ||ಮುನಿ ವ್ಯಾಸ ಕೃತ ಗ್ರಂಥಾರ್ಥವ ತಿಳಿದು ಬರೆದಾ |ಗಣರಾಜಾ ನಿನ್ನ ಪಾದಾ ಬಲಗೊಂಬೆ 3ಶಂಬು ಚಕ್ರಾಂಕಿತಾ ಪಾಶಧಾರನೇ ರಕ್ತ |ಅಂಬರಾದ್ವಯ ಭೂಷಾ ನಿರ್ದೋಷಾ ||ಶಂಬರಾರಿಪುಶರಾ ವಿಜತಾಮೃದ್ಭವ ಗಾತ್ರಾ |ಅಂಬಾರಾಧಿಪ ನಿನ್ನ ಬಲಗೊಂಬೆ 4(ಅಂಬೂಜಾಲಯಜಾನೆ ಬಲಗೊಂಬೆ)ಏಕವಿಂಶತಿಪುಷ್ಪಾನ ಮನ ಮೋದಕ ಪ್ರೀಯ |ನೀ ಕರುಣಿಪುದೂ ನಿನ್ನವಾನೆಂದು ||ಸಾಕು ವಿಷಯ ಸುಖಾ ಸುಜನಾರೋಳಾಡಿಸೊ |ಏಕಾದಂತನೆ ನಿನ್ನ ಬಲಗೊಂಬೆ 5ಏನು ಬೇಡುವೊದಿಲ್ಲಾ ಏನು ಮಾಡುವೊಕರ್ಮ|ಶ್ರೀನಿವಾಸನೆ ಮಾಡಿಸುವನೆಂಬೊ ||ಜ್ಞಾನಾವೆ ಯಂದೆಂದಿಗಿರಲಿ ತಾರಶಾಂತ- |ಕಾನುಜಾ ನಿನ್ನ ಬಲಗೊಂಬೆ 6ಪ್ರಾಣಸೇವಕ ಚಾಮೀಕರವರ್ಣ ಗಜಮುಖ |ಪ್ರಾಣೇಶ ವಿಠಲನಾ ಸುಕುಮಾರಾ ||ನೀನೊಲಿದೆಮಗೆ ವಿಘ್ನವ ಪರಿಹರಿಸುತ |ಪೋಣಿಸು ಸನ್ಮತೀ ಬಲಗೊಂಬೆ 7
--------------
ಪ್ರಾಣೇಶದಾಸರು
ರಾಮ ರಾಮ ರಘುನಾಥನೆ ಸುರಸ್ತೋಮತಿಲಕ ವಿಶ್ವಕರ್ತನೆ ದಿವ್ಯಸ್ವಾಮಿ ಪುಷ್ಕರತೀರವಾಸನೆ ನನ್ನಸ್ವಾಮಿವರಾಹವೆಂಕಟೇಶನೆಪ.ಕಾಯೊ ಕಾಯೊ ಮಧುಮರ್ದನಭವಸಾಯಕದೂರ ಜನಾರ್ದನ ಯದುನಾಯಕಧೃತಗೋವರ್ಧನ ನಾರಾಯಣ ನಿಜಜನವರ್ಧನ 1ಹೊಂದಿದಭಟಕಲ್ಪವೃಕ್ಷನೆ ನನ್ನತಂದೆ ತಾಯಿ ವಿಶ್ವಕುಕ್ಷನೆಕ್ಷೀರಸಿಂಧುಮಂದಿರ ಅಧ್ಯಕ್ಷನೆ ನಿನ್ನಿಂದಾರುಗತಿ ಪದುಮಾಕ್ಷನೆ 2ಅಡಿಗಡಿಗೊದಗದ ತಪ್ಪನೆ ಇಕ್ಕಡಿಮಾಡುದೇವ ತಿಮ್ಮಪ್ಪನೆಮಾಯಾಸಡಕ ತಪ್ಪಿಸು ಸುಪ್ರದೀಪನೆನಿತ್ಯಬಿಡದೆ ಕ್ರೀಡಾದ್ರಿಯೊಳಿಪ್ಪನೆ 3ಲೇಶಭಕ್ತಿಗೆ ಮನ ಹಾರಿತು ವಿಷಯಾಸೆಯಟವಿಯನೆ ಸೇರಿತು ಈಹೇಸಿ ಚಂಚಲಚಿತ್ತ ಹೋರಿತು ತವದಾಸರ ಸಂಗಕೆ ಜಾರಿತು 4ಕುಸುಮಶರನಂತ:ತೇಜನೆ ಮಹಮಿಸುನಿವೆಟ್ಟದ ಕಲ್ಪಭೂಜನೆ ಅಜÕನಿಶಾಕುಲ ಉಡುಗಣರಾಜನೆ ಶ್ರೀಪ್ರಸನ್ವೆಂಕಟ ರಾಜಾಧಿರಾಜನೆ 5
--------------
ಪ್ರಸನ್ನವೆಂಕಟದಾಸರು