ಒಟ್ಟು 13 ಕಡೆಗಳಲ್ಲಿ , 11 ದಾಸರು , 13 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನೆ ಆತನೇ ದಾತನು ಯೆತ್ತಿಕೊಡುವವನು ಭೂತದಯೆಯುಳ್ಳಂಥ ಪುಣ್ಯಾತ್ಮನು ಪ ನಿಂದು ಕೀರ್ತಿಯೆ ಪಾಡೆ ದೇಹಿಯನ್ನುತ ಬೇಡೆ ಸಿಂಧು ಜಲದಲಿ ಮಿಂದು ಭಜಿಸಲಾಗ ಬಂಧನವ ಪರಿಹರಿಸಿ ಬಹು ಪ್ರೀತಿಯಿಂದೆನಗೆ ಬಂದಿರುವ ಕಷ್ಟಗಳ ನೀಗುವರು ಯಾರೋ 1 ನಿತ್ತು ಶ್ರೀ ಹರಿಭಜಿಸೆ ಕೂತು ಶ್ರೀ ಹರಿಸ್ಮರಿಸೆ ತಾತನೇ ಗತಿಯೆಂದು ಪಾದದಲಿ ಬೀಳೇ ಹೊತ್ತು ನೋಡದೆ ಮುದದಿ ಭಿನ್ನವೆಣಿಸದೆಯನಗೆ ಯೆತ್ತಿ ಮೋಕ್ಷವ ಬೇಗನೀವ ನಾರೋ 2 ನಾನು ಬಡವನು ಜಗದಿ ದೀನಹೀನನು ಹರಿಯೆ ಏನು ಗತಿಯೆಂದೆನುತ ಚರಣ ಮರೆ ಹೊಕ್ಕೇ ಪಾನ ಮಾಡುತಲೆನ್ನ ಅವಗುಣವ ನೀಗೆನಗೆ ತಾನೆ ಭಿಕ್ಷವು ಬೇಗನೀವ ನಾರೋ 3 ಭಜನೆ ಸ್ತೋತ್ರಗಳರಿಯೆ ಪೂಜೆ ವಿಧಿಯನು ತಿಳಿಯೇ ಅಜನ ಪಿತ ಶ್ರೀಹರಿಯ ಮೆಚ್ಚಿಸಲು ಅರಿಯೇ ಸುಜನರನು ಪೊರೆವಂತೆ ಸಲಹುವನು ಯಾರೋ 4 ನಾನು ಪಾಪಿಯು ಋಣಿಯು ಕ್ಲೇಶವನು ತೊರೆದೀಗ ಇನ್ನು ಮರೆಯದೆ ನಿನ್ನ ದಾಸನಾಗುವೆನು ಚನ್ನಕೇಶವ ಸ್ವಾಮಿ ರಕ್ಷಿಸೆಂದೊದರುತಿರೆ ಪ್ರಾಣವನು ಯತ್ತೆನ್ನ ಸಲಹುವನು ಯಾರೋ 5
--------------
ಕರ್ಕಿ ಕೇಶವದಾಸ
ಇಂದು ವದನ ಇಂದುವದನ ಕುಂದರವದನ ಪ ಬಂದ ದುರಿತವನ್ಹಿಂದುಮಾಡಿ ಕರುಣಾ ಭವ ವಂದಿತ ಮುಕುಂದ ಹರಿ 1 ಪಾದ ದ್ವಂದ್ವ ಗತಿಯೆಂದೆ ಮುದದಿಂದ ಆನಂದಮಯ 2 ಪನ್ನಗಾದ್ರೀಶವರ ಹೆನ್ನೆಪುರ ನಿಲಯ ಆ ಪನ್ನ ಜನರನ್ನ ಕಾಯ್ವನೆ ತ್ವರದಿನ್ನು 3
--------------
ಹೆನ್ನೆರಂಗದಾಸರು
ಇಂದುಶೇಖರಾ ಮನ್ನಿಸೋ ದಯದಿಂದ ಶಂಕರಾ ಪಪಂಚವಕ್ತ್ರನೆ ಪಾಲಿಪುದು ತ್ರಿಪಂಚನೇತ್ರನೆಪಂಚಭೂತ ತನು'ದೆನಗೆ ಪಗೆಯಾಗಿದೆ ನೋಡಯ್ಯಾವಂಚಕನು ನೀನೆಂದೆನ್ನ ವಾರೆನೋಡಬೇಡಯ್ಯಾಸಂಚರಿಪ ಮನಕೆ ಮನುವ ತೋರಿ ನೋಡಬೇಡಯ್ಯಾಪಂಚಶಿರದ ನಾಮಾಧೀಶ ಪರಮ ಕೃಪೆಮಾಡಯ್ಯಾ 1ವ್ಯಾಳಭೂಷಣನೆ ಬಿನ್ನಪವನ್ನು ಕೇಳು ಈಶನೆಏಳು 'ಷಯ ವ್ಯಸನಾದಿಗಳಿಂದೇಳಿಗೆಯ ಘನವಾದಾಳಿವರಿದಾ ಕರಣಾತಡಿಗೆ ಧೈರ್ಯ ಕಲಿತನವಾತಾಳಲಾರೆನಯ್ಯಾ ಎನ್ನ ತನು'ನವಗುಣವಾಫಾಲನೇತ್ರ ಬಿಡಿಸೊ ನಿನ್ನ ನೆನ'ಗಿತ್ತಭಯವಾ 2ಕಾಮನಾಶನೆ ಕರುಣಿಸಯ್ಯಾ ವ್ಯೋಮಕೇಶನೆಹೇಮ ಭೂ'ು ಹೆಣ್ಣಿಗಾಗಿ ಹೇಳಲೇನ ನೊಂದೆನೈತಾಮಸಗುಣಂಗಳಿಂದ ತಾಪಹೆಚ್ಚಿ ಬೆಂದೆನೈಕಾ'ುನಿಯರೆಡೆಯೊಳೆನ್ನ ಕಾಡಬೇಡವೆಂದೆನೈನಾಮರೂಪಕ್ರಿಯಾರ'ತ ನೀನೆ ಗತಿಯೆಂದೆನೈ 3
--------------
ತಿಮ್ಮಪ್ಪದಾಸರು
ಉತ್ಥಾನ ದ್ವಾದಶಿಯ ದಿವಸ (ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ) ರಂಭೆ ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ. ಮಾನಿನೀಮಣಿ ಈತನ್ಯಾರೆ ಕರು ಣಾನಿಧಿಯಂತಿಹ ನೀರೆ ಹಾ ಹಾ ಭಾನುಸಹಸ್ರ ಸಮಾನಭಾಷಿತ ಮ- ಹಾನುಭಾವನು ಸುಪ್ರವೀಣನಾಗಿಹ ಕಾಣೆ 1 ಭಯಭಕ್ತಿಯಿಂದಾಶ್ರಿತರು ಕಾಣಿ- ಕೆಯನಿತ್ತು ನುತಿಸಿ ಪಾಡಿದರು ನಿರಾ- ಮಯ ನೀನೇ ಗತಿಯೆಂದೆಲ್ಲವರು ಹಾ ಹಾ ಭಯನಿವಾರಣ ಜಯ ಜಯವೆಂದು ನುತಿಸೆ ನಿ- ರ್ಭಯ ಹಸ್ತ ತೋರುತ ದಯಮಾಡಿ ಪೊರಟನೆ2 ಭೂರಿ ವಿಪ್ರರ ವೇದ ಘೋಷದಿಂದ ಸ್ವಾರಿಗೆ ಪೊರಟ ವಿಲಾಸ ಕೌಸ್ತು- ಚಾರುಕಿರೀಟಕೇಯೂರಪದಕಮುಕ್ತಾ ಹಾರಾಲಂಕಾರ ಶೃಂಗಾರನಾಗಿರುವನು3 ಸೀಗುರಿ ಛತ್ರ ಚಾಮರದ ಸಮ ವಾಗಿ ನಿಂದಿರುವ ತೋರಣದ ರಾಜ ಭೋಗ ನಿಶಾನಿಯ ಬಿರುದ ಹಾ ಹಾ ಮಾಗಧ ಸೂತ ಮುಖ್ಯಾದಿ ಪಾಠಕರ ಸ- ರಾಗ ಕೈವಾರದಿ ಸಾಗಿ ಬರುವ ಕಾಣೆ4 ಮುಂದಣದಲಿ ಶೋಭಿಸುವ ಜನ ಸಂದಣಿಗಳ ಮಧ್ಯೆ ಮೆರೆವ ತಾರಾ ವೃಂದೇಂದುವಂತೆ ಕಾಣಿಸುವ ಹಾಹಾ ಕುಂದಣ ಖಚಿತವಾದಂದಣವೇರಿ ಸಾ- ನಂದದಿ ಬರುವನು ಮಂದಹಾಸವ ಬೀರಿ5 ತಾಳ ಮೃದಂಗದ ರವದಿ ಶ್ರುತಿ ವಾಲಗ ಭೇರಿ ರಭಸದಿ ಜನ ಜಾಲ ಕೂಡಿರುವ ಮೋಹರದಿ ಹಾಹಾ ಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ- ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6 ಊರ್ವಶಿ:ಈತನೆ ಭಾಗ್ಯನಿಧಿ ನೋಡೆ ನೀ ಮುದದಿಪ. ಈತನೆ ಈರೇಳು ಲೋಕದ ದಾತ ನಾರಾಯಣ ಮಹಾ ಪುರು- ವಿನುತ ನಿ- ರ್ಭೀತ ನಿರ್ಗುಣ ಚೇತನಾತ್ಮಕಅ.ಪ. ಮಂದರ ಪೊತ್ತ ಭೂನಿತಂಬಿನಿಯ ಪ್ರೀತ ಮಾನವಮೃಗಾಧಿಪ ತ್ರಿವಿಕ್ರಮ ದಾನಶಾಲಿ ದಶಾನನಾರಿ ನ- ವೀನ ವೇಣುವಿನೋದ ದೃಢ ನಿ- ರ್ವಾಣ ಪ್ರವುಢ ದಯಾನಿಧಿ ಸಖಿ 1 ವಾರಿಜಾಸವಾನವಂದಿತ ಶ್ರೀಪಾದಯುಗ್ಮವ ತೋರಿಕೊಂಬುವ ಸಂತತ ಕೇರಿಕೇರಿಯ ಮನೆಗಳಲಿ ದಿ- ವ್ಯಾರತಿಯ ಶೃಂಗಾರ ಭಕ್ತರ- ನಾರತದಿ ಉದ್ಧಾರಗೈಯಲು ಸ್ವಾರಿ ಪೊರಟನು ಮಾರಜನಕನು 2 ಮುಗುದೆ ನೀ ನೋಡಿದನು ಕಾಣಿಕೆಯ ಕ- ಪ್ಪಗಳ ಕೊಳ್ಳುವನು ತಾನು ಬಗೆಬಗೆಯ ಕಟ್ಟೆಯೊಳು ಮಂಡಿಸಿ ಮಿಗಿಲು ಶರಣಾಗತರ ಮನಸಿನ ಬಗೆಯನೆಲ್ಲವ ಸಲ್ಲಿಸಿ ಕರುಣಾ ಳುಗಳ ದೇವನು ಕರುಣಿಸುವ ನೋಡೆ3 ರಂಭೆ :ದೃಢವಾಯಿತೆಲೆ ನಿನ್ನ ನುಡಿಯು ಸುರ ಗಡಣ ಓಲಗಕೆ ಇಮ್ಮಡಿಯು ಜನ- ರೊಡಗೂಡಿ ಬರುತಿಹ ನಡೆಯು ಹಾ ಹಾ ಮೃಡ ಸರೋಜ ಸುರಗಡಣ ವಂದಿತ ಕ್ಷೀರ ಕಡಲ ಶಯನ ಜಗದೊಡೆಯನಹುದು ಕಾಣೆ1 ಮದಗಜಗಮನೆ ನೀ ಪೇಳೆ ದೇವ ಸದನವ ಪೊರಡುವ ಮೊದಲೇ ಚಂದ- ನದ ಪಲ್ಲಂಕಿಯ ತಂದು ಮ್ಯಾಲೆ ಹಾ ಹಾ ಮುದದಿಂದ ಬಾಲಕರೊದಗಿ ಸಂತೋಷದಿ ಚದುರತನದಿ ಪೋಗುವನು ಪೇಳೆಲೆ ನೀರೆ2 ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವ ಶ್ರೀರಮಾಧವನ ಲೀಲೆ ಘೋರ ದೈತ್ಯಕುಠಾರ ಲಕ್ಷ್ಮೀ ನಾರಾಯಣನ ಬಲಕರ ಸರೋಜದಿ ಸೇರಿ ಕುಳಿತ ಗಂಭೀರ ದಿನಪನ ಭೂರಿತೇಜದಿ ಮೆರೆವುದದು ತಿಳಿ1 ದೊರೆಯು ಬರುವನು ಎಂದು ಎಲ್ಲರಿಗೆ ಗೋ- ಚರಿಸುವನೊಲಿದು ಇಂದು ತರ ತರದ ಆರತಿಗಳನು ನೀವ್ ಧರಿಸಿ ನಿಂದಿರಿಯೆಂದು ಜನರಿಗೆ- ಚ್ಚರಿಗೆಗೋಸುಗ ಮನದ ಭಯವಪ- ಹರಿಸಿ ಬೇಗದಿ ಪೊರಟು ಬಂದುದು ರಂಭೆ :ಸರಸಿಜನಯನೆ ನೀ ಪೇಳೆ ಸೂರ್ಯ ಕಿರಣದಂತಿಹುದೆಲೆ ಬಾಲೆ ಸುತ್ತಿ ಗೆರಕವಾಗಿಹುದು ಸುಶೀಲೆ ಆಹಾ ಹರಿಯ ವೈಕುಂಠ ನಗರದಂತೆ ಜ್ಯೋತಿ ವಿ- ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1 ಊರ್ವಶಿ:ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧ ದ್ವಾದಶಿಯೊಳಗೆ ಬಾಲೆ ಮಾಧವನ ಪ್ರೀತ್ಯರ್ಥವಾಗಿ ಶು- ಭೋದಯದಿ ಸಾಲಾಗಿ ದೀಪಾ ರಾಧನೆಯ ಉತ್ಸಹದ ಮಹಿಮೆಯ ಸಾದರದಿ ನೀ ನೋಡೆ ಸುಮನದಿ1 ನಿಗಮಾಗಮದ ಘೋಷದಿ ಸಾನಂದ ಸು- ತ್ತುಗಳ ಬರುವ ಮೋದದಿ ಬಗೆ ಬಗೆಯ ನರ್ತನ ಸಂಗೀತಾ ದಿಗಳ ಲೋಲೋಪ್ತಿಯ ಮನೋಹರ ದುಗುಮಿಗೆಯ ಪಲ್ಲಂಕಿಯೊಳು ಕಿರು2 ನಗೆಯ ಸೂಸುತ ನಗಧರನು ಬಹ ಚಪಲಾಕ್ಷಿ ಕೇಳೆ ಈ ವಸಂತ ಮಂ- ಟಪದಿ ಮಂಡಿಸಿದ ಬೇಗ ಅಪರಿಮಿತ ಸಂಗೀತ ಗಾನ ಲೋ- ಲುಪನು ಭಕ್ತರ ಮೇಲೆ ಕರುಣದಿ ಕೃಪೆಯ ಬೀರಿ ನಿರುಪಮ ಮಂಗಲ ಉಪಯಿತನು ತಾನೆನಿಸಿ ಮೆರೆವನು3 ಪಂಕಜಮುಖಿ ನೀ ಕೇಳೆ ಇದೆಲ್ಲವು ವೆಂಕಟೇಶ್ವರನ ಲೀಲೆ ಶಂಕರಾಪ್ತನು ಸಕಲ ಭಕ್ತಾ ಕರ ಚ ಕ್ರಾಂಕಿತನು ವೃಂದಾವನದಿ ನಿ ಶ್ಯಂಕದಿಂ ಪೂಜೆಯಗೊಂಡನು4 ಕಂತುಜನಕನಾಮೇಲೆ ಸಾದರದಿ ಗೃ- ಹಾಂತರಗೈದ ಬಾಲೆ ಚಿಂತಿತಾರ್ಥವನೀವ ಲಕ್ಷ್ಮೀ ಕಾಂತ ನಾರಾಯಣನು ಭಕುತರ ತಿಂಥಿಣಿಗೆ ಪ್ರಸಾದವಿತ್ತೇ- ಕಾಂತ ಸೇವೆಗೆ ನಿಂತ ಮಾಧವ5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂಥಾದರು ಬಂದರು ಚಿಂತೇ ಇಲ್ಲಾ ಪಂಥವು ಸರಿಯಲ್ಲಾ ಪ ಚಿಂತೆ ಎಂದೆಂಬುದೆ ಮನಸಿನ ರೋಗಾ ಸಂತಸ ಸಂತ್ಯಾಗ ಎಂಥೆಂಥ ಮಿಂಚುವ ದೇಹವಿದೀಗ ಕೃಂತನ ವಿಧಿಭಾಗ ಎಂತಲ್ಲಿ ನೆಲೆಸಿ ಹವಣಿತ ರೋಗಾ ಸಂತತ ಜಡ ಬೀಗಾ ನೀ ನೆನ್ನೊ 1 ಹಿತಾಹಿತವೆಂದಿಗೂ ಕೈಶೇರಿಲ್ಲಾ ಕೃತಿಪತಿ ತಾ ಬಲ್ಲಾ ಮತಿಗೆಟ್ಟು ಸತಿಯೇ ಗತಿಯೆಂದೆಲ್ಲಾ ಸುತಮೋಹ ಬಿಡಲಿಲ್ಲಾ ಮಿತಿಮೀರಿ ಪಣ ಭಂಡಾರದೊಳೆಲ್ಲಾ ರತಸುಖರೆ ಡಿಲ್ಲಾ ಕೇಸರಿ ಸುಖಗುರಿ ಮುರಿಯಲು ಧೃತಿಗೆಟ್ಟು ಬಳಲುವ ಸಂಗತಲ್ಯಾರು ತಿಳಿಯೋ 2 ನೀರಿನ ಬುದ್ಬುದ ಪರಿಸಂಸಾರಾ ದುಃಖದ ಆಗಾರಾ ಶ್ರೀರಾಮ ಮಂತ್ರದ ಸಾರಾ ನಿಜ ಸೌಖ್ಯದ ದ್ವಾರಾ ಶೇರಿ ಹಣ ಹೊನ್ನು ಹೆಂಣ ವಿಚಾರಾ ಗಂಜಾಸಮ ತಾರಾ ನಿಜಸುಖವನು ಪಡೆಯೇ 3
--------------
ನರಸಿಂಹವಿಠಲರು
ಎಲೆ ಮನಸೆ ಎಲೆ ಮನಸೆ ಹರಿಪಾದ ನಂಬು ಸುಲಭ ಭಕ್ತರಿಗಾತ ಕೊಡುವ ನಿನಗಿಂಬು ಪ ಕುಲಹೀನನೆನಬೇಡ ಹಳಿದುಕೊಳ್ಳಲಿ ಬೇಡ ತಿಳಿಗೇಡಿಯೆನಬೇಡ ಕಳವಳಿಸಬೇಡ ಮಲಿನವೆಂದೆನಬೇಡ ಜಳಕ ಮಡಿಯೆನಬೇಡ ತಿಳಿದು ಭಜಿಪರ ಬೆಂಬಲನು ನಾನೆಂಬ 1 ವಿಪಿನ ಸೇರಲಿಬೇಡ ಕೌಪೀನ ಬೇಡ ಕಪಟಬುದ್ಧಿಯ ಬಿಟ್ಟು ಸಫಲ ಮಾನಸದಿಂದ ಆಪತ್ತು ಬಂಧುಯೆನೆ ಕೃಪೆಮಾಡ್ವ ಬಂದು 2 ದಾನಧರ್ಮವು ಬೇಡ ನಾನಾ ಕರ್ಮವು ಬೇಡ ಮೌನದೊಳಿರಬೇಡ ಏನುವ್ರತಬೇಡ ಧ್ಯಾನದಾಯಕ ಎನಗೆ ನೀನೆ ಗತಿಯೆಂದೆನಲು ದೀನದಯ ಶ್ರೀರಾಮ ಮಾಣದೆ ಕಾಯ್ವ 3
--------------
ರಾಮದಾಸರು
ಭಕ್ತನ್ನ ಮಾಡಿಕೊ ಎನ್ನಾ ನಿಜ ಭಕ್ತನಾಗಿ ನಿನ್ನ ಭಕ್ತನ್ನ ಮಾಡಿಕೋ ಎನ್ನಾ ಪ ಸಾರೆ ಕೀಚಕ ಬೇಡ ಓಡಿ ಅದು [?] ಪಾರಿ ಸಿಡಿವ ಪರಿಜಾಲದಿ ಕೂಡಿ ಆಡು ಆಗದೆನ್ನ ಕಾಡಿ ಮತ್ತೆ ಮೂರು ಮಡುವಿನೊಳು ನೋಳ್ಪರು ದೂಡಿ ಭಕ್ತನ್ನಾ 1 ಘೃತ ಭಾಂಡವಿರೆ ನೊಣ ನೋಡಿ ಅಲ್ಲಿ ಪರಿ ಭರದಿ ಈಸಾಡಿ ಸತಿಸುತಯುತ ಭವನೋಡಿ ಅಲ್ಲಿ ಮತಿಗೆಟ್ಟು ಮೋಹಿಸಿ ಬಿದ್ದೆನೊದ್ದಾಡಿ 2 ಉರಿಯ ಕಾಣಲು ಶಿಶು ಐದಿ ತಾ ಭರದಿಯದರ ಪರಿಯರಿವೋಲುನೊಯ್ದು ಅರಿದೆ ವಿಷಯದುರಿ ಮೈಯ್ದು ಇನ್ನು ನರಸಿಂಹ ವಿಠ್ಠಲ ನೀನೇ ಗತಿಯೆಂದೆ ಭಕ್ತನ್ನ 3
--------------
ನರಸಿಂಹವಿಠಲರು
ರಂಗ ಬಾರೈಯ್ಯ ದೇವೋತ್ತುಂಗ ದಯಾಂತರಂಗ | ಅಂಗಜನಯ್ಯ ನರಶಿಂಗಾ ಸಾರಸಾಪಾಂಗ || ಮಂಗಳ ಮಹಿಮಾ ವಿಹಂಗ ಘೋರ ಭವಭಂಗರಹಿತ ರಣರಂಗ ವಿಜಯ || ಸನ್ನುತ ಶೃಂಗಾರಾಂಗ ರಮಾಂಗನಾಸಂಗ ಪ ಶತಕೋಟಿ ಭಾಸ್ಕರ ಯುತತೇಜ ಮರುತಾಂತರ್ಗತ | ಹರಿಮೃದು ಭಾಷಣ | ಕೌಸ್ತು ಭಾಭರಣ | ಜಿತದಿತಿಸುತಬಾಲ | ಶ್ರಿತಭಕ್ತ ಮಂದಾರ | ಪತಿತ ಪಾವನ ಶ್ರೀರಾಮ ಪಟ್ಟಾಭಿರಾಮ | ಅತುಲಿತ ಚರಿತ ಕಾಮಿತ ಫಲದಾಯಕ | ಶತ ಧೃತಿ ಜನಕಾಚ್ಯುತ ಸರ್ವೋತ್ತಮ | ಸತತವು ನೀನೇ ಗತಿಯೆಂದೆನುತಲಿ | ಹಿತದಿ ನಾನು ನಿಮ್ಮ ಸ್ತುತಿಸುತಲಿರುವೆನು 1 ನಂದನಂದನ ವೇಣುನಾದ ವಿನೋದ ಜಗದ್ವಂದ್ಯ ಶ್ರೀವತ್ಸಲಾಂಛನ ವಾಸುಕಿಶಯನ | ಮಂದಹಾಸ ಮುಚುಕುಂದವರದ ರಾಕೇಂದುವದನ | ಗೋವಿಂದ ಇಂದಿರಾನಂದ ಸಿಂಧು ಗಂಭೀರಾ | ಮುಕುಂದ ಧರಣೀಧರ ಕುಂದರದನ ಕಾಳಿಂದಿರಮಣ ಗಜೇಂದ್ರನ ಸಲಹಿದ ಛೆಂದದೆನ್ನ ಮೊರೆಯಿಂದಿಗೆ ಲಾಲಿಸೊ ಪರಮಾತ್ಮ ಸರಸಿಚೋದರ ಸಕಲಾಣುರೇಣು ಪರಿಪೂರ್ಣ 2 ನಿರುಪಮಧೀರ ಶರಣಾಗತ ರಕ್ಷಣ ಮಧುಸೂದನ ಸುರವರ ಪೂಜಿತ ಚರಣಾಂಭೋರುಹ ಕೃಪಾಕಾರ ಹರುಷದಲಿ 3
--------------
ಹೆನ್ನೆರಂಗದಾಸರು
ಶರಣು ಬಂದೆನೊ ಹರಿಯೆ ಶರಣು ಬಂದೆನೊ ಪ ಕರುಣದಿ ನೋಡೆನ್ನ ಸಲಹು ಎಂದೆನೊ ಅ.ಪ. ಜನನ ಮರಣ ಸುಳಿಗಳಲಿ ತೊನೆದು ಬಳಲಿ ನೊಂದೆನೊಘನಭವದಲಿ ಮೂರುತಾಪಗಳಲಿ ಸಿಲುಕಿ ಬೆಂದೆನೊ 1 ಧನಕೆ ಮೆಚ್ಚಿ ನಿನ್ನ ಮರೆತು ಕಹಿಯ ಫಲವ ತಿಂದೆನೊಅನುದಿನ ಘನ ಚಿಂತೆಯಿಂದ ಮನದ ಶಾಂತಿ ಹೊಂದೆನೊ 2 ವನಿತೆ ಸುತರು ಪೊರೆವರೆಂಬ ಭ್ರಮದೊಳಾತ್ಮ ಕೊಂದೆನೊಕೊನೆಗೆ ಗದುಗು ವೀರನಾರಾಯಣನೆ ಗತಿಯೆಂದೆನೊ 3
--------------
ವೀರನಾರಾಯಣ
ಶರಣು ಶರಣು ಪ ಪರಿಹರಿಸು ಕರುಣಾಳು ಬಿನ್ನಪವ ಕೇಳು ಅ.ಪ. ವಾಸವಾದ್ಯಮರನುತ ವನಜಸಂಭವನ ಸುತ ನೀ ಸಲಹೊ ಕೈಲಾಸವಾಸ ಈಶ ಕ್ಲೇಶ ಮೋದಾದಿ ಸಮ ತಿಳಿದು ಅಶ್ವತ್ಥಾಮ ಶ್ರೀಶುಕ ದುರ್ವಾಸ ಸ್ಫಟಿಕ ಸಮಭಾಸ 1 ವೈಕಾರಿಕಾದಿ ತ್ರೈರೂಪ ನಿನ್ನಯ ಕೋಪ ಶೋಕಕೊಡುವುದು ದೈತ್ಯಜನಕೆ ನಿತ್ಯ ಲೌಕಿಕಗಳೆಲ್ಲ ವೈದಿಕವಾಗಲೆನಗೆ ಮೈ ನಾಕಿ ಹೃತ್ಕುಮುದೇಂದು ಭಕ್ತಜನ ಬಂಧು 2 ಪವಮಾನತನಯ ನಿನ್ನವರಲ್ಲಿ ಕೊಡು ವಿನಯ ದಿವಸ ಸವನಗಳಲ್ಲಿ ಎನ್ನಿರುವ ನೀ ಬಲ್ಲಿ ಪವನ ದ್ವಿತಿಯರೂಪ ಸತತ ಎನ್ನಯಪಾಪ ಅವಲೋಕಿಸದಲೆನ್ನ ಸಲಹೊ ಸುರಮಾನ್ಯ 3 ಶೇಷನಂದನ ಶೇಷಭೂಷಣನೆ ನಿಶೇಷ ದೋಷರಹಿತನ ತೋರು ಕರುಣವನು ಬೀರು ಶ್ರೀ ಷಣ್ಮುಖನ ತಂದೆ ಸತತ ನೀ ಗತಿಯೆಂದೆ ಶೋಷಿಸು ಭವಾಮಯವ ಬೇಡುವೆನು ದಯವ4 ಗರ್ಗ ಮುನಿಕರಪದುಮ ಪೂಜ್ಯ ಚರಣಾಬ್ಜ ಮಮ ದುರ್ಗುಣಗಳೆಣಿಸದಲೆ ಜಗದೆ ಮೇಲೆ ನಿರ್ಗತಾಶನ ಜಗನ್ನಾಥ ವಿಠಲನ ಸ ನ್ಮಾರ್ಗವನೆ ತೋರು ಈ ದೇಹ ನಿನ ತೇರು 5
--------------
ಜಗನ್ನಾಥದಾಸರು
ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಯಾರೂ ಸಂಗಡ ಬಾಹೋರಿಲ್ಲನಾರಾಯಣ ನಿಮ್ಮ ನಾಮವೊಂದಲ್ಲದೆ ಪ.ಹೊತ್ತು ನವಮಾಸ ಪರಿಯಂತರವು ಗರ್ಭದಲಿಹೆತ್ತು ಬಲು ನೋವು ಬೇನೆಗಳಿಂದಲಿತುತ್ತು ಬುತ್ತಿಯ ಕೊಟ್ಟು ಸಲಹಿದಂಥ ತಾಯಿಅತ್ತು ಕಳುಹುವಳಲ್ಲದೆ ನೆರೆಬಾಹಳೆ 1ದೇವವಿಪ್ರರು ಅಗ್ನಿಸಾಕ್ಷಿಯಿಂದಲಿ ತನ್ನಭಾವಶುದ್ಧಿಯಲಿ ಧಾರೆಯೆರಿಸಿಕೊಂಡದೇವಿ ತನ್ನ ತಲೆಗೆ ಕೈಯಿಟ್ಟುಕೊಂಡು ಇನ್ನಾವ ಗತಿಯೆಂದೆನುತ ಗೋಳಿಡುವಳಲ್ಲದೆ 2ಮತ್ತೆ ಪ್ರಾಣನು ತನುವ ಬಿಟ್ಟು ಹೋಗುವಾಗಎತ್ತಿವನ ಹೊರಗೊಯ್ಧ ಹಾಕೆಂಬರುಎತ್ತಿದ ಕಸಕಿಂತ ಕಡೆಯಾಯಿತೀ ದೇಹವಿತ್ತವೆಷ್ಟಿದ್ದರೂ ಫಲವಿಲ್ಲ ಹರಿಯೆ 3ಪುತ್ರಮಿತ್ರರು ಸಕಲ ಬಂಧು ಬಳಗಗಳೆಲ್ಲಹತ್ತಿರ ನಿಂತು ನೋಡುವರಲ್ಲದೆಮೃತ್ಯುದೇವಿಯ ಬಂದು ಅಸುಗಳನು ಸೆಳೆವಾಗಮತ್ತೆ ತನ್ನವರಿದ್ದು ಏನು ಮಾಡುವರು 4ಯಮನ ದೂತರು ಬಂದು ಪಾಶಂಗಳನೆ ಎಸೆದುಮಮತೆಯಿಲ್ಲದೆ ಪ್ರಾಣ ಎಳೆಯುತಿರಲುವಿಮುಖನಾಗಿ ತಾನು ವ್ಯಥೆಯಿಂದ ಪೋಪಾಗಕಮಲಾಕ್ಷ ಪುರಂದರವಿಠಲ ನೀನಲ್ಲದೆ * 5
--------------
ಪುರಂದರದಾಸರು