ಒಟ್ಟು 7 ಕಡೆಗಳಲ್ಲಿ , 6 ದಾಸರು , 7 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಸುಪರಿ ಈಸಬೇಕೋ ಶ್ರೀಶದಾಸನೇ ಮತ್ತೂರೇಶ ಭವಸಾಗರದಿ ಏಸುಪರಿ ಈಸಬೇಕೋ ಪ ಕೂಸಿನಂಕದಿ ಬಾವು ಘಾಸಿಸುವ ಜ್ವರತಾಪನೋಸರಿಸಲೇಶ ಸಮಯದಿಯೊದಗಲು ಲೇಶವಾದರು ಮಗುವಿನಾಸೆ ಇರದಿರೆ ಪ್ರಾಣೇಶನೇ ಗತಿಯೆನಲು ಲೇಸುಮಾಡಿದೆ ಸ್ವಾಮಿ1 ಎನಿತೆಂದು ಹೇಳಲ್ಯ ನಿನಗೆ ಮನದಳಲು ನೀಗಲಸದಳವಾಗಿ ಬಳಲುವೆನು ತನುವಿನೀ ಸಂಕಟವ ತೊಲಗಿಸೈ ಜವದಿ 2 ದುರಿತ ದೂರಪುದು ಭರದಿ ಎನ್ನೊಡೆಯ ಶ್ರೀರಾಮ ಪೊರೆವಾ ಭವ ಕಿಚ್ಚಿನಿಂದುದ್ಧರಿಸಿ ಎನ್ನನು ನರಸಿಂಹವಿಠ್ಠಲನ ನೆನೆಯೆ ಜಿಹ್ವೆಗನಿಸೊ 3
--------------
ನರಸಿಂಹವಿಠಲರು
ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ ಜಲಜನಾಭನ ಕೃಪೆಯ ಪಡೆದವರು ಕೇಳಿ ಅ ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1 ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2 ವೈರಿ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3 ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4 ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5 ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6 ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7 ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8 ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9 ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10 ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11
--------------
ಕನಕದಾಸ
ದೇಶ ತಿರುಗಿಸಿ ಪರದೇಶಿ ಮಾಡಲು ಬೇಡೋ ಈಶ ನೀ ಘನ್ನಾ ಸಂಪನ್ನಾ ಪ ಜನಕನಂಶದಿ ಧ್ರುವನು ಸನುಮತವ ಮಂಡಿಸಲು ಘನರೋಷ ತಾಳಿ ಮಲಜನನಿ ಧೂರ್ತೆ ದೂಡಲು ವನವಾಸ ಲೇಸೆಂದು ತಿಳಿದು ನಿನ್ನ ನೆನೆಯೆ ತಾ ನಡೆದ ಘನಮಹಿಮ ಶ್ರೀಮನ್ನಾರಾಯಣ ಸ್ಥಿರಪಟ್ಟವ ನಾಡಿದ 1 ಖಳ ಕುರುಪಗೊಡೆತನವು ಭಲೆ ಧರ್ಮಗೆ ವನವಾಸವು ಬಲು ಮಾನವಂತೆ ದ್ರೌಪದಿಯು ಜಲಜನಾಭನೆ ನೀನೆ ಗತಿಯೆನಲು ಒಲಿದು ಬೆಂಬಲನಾಗಿ ಪಾಂಡವರ ಪೊರೆದೆ 2 ವರಮುನಿಯ ಶಾಪದಿಂದರಸನಿಂ ಪ್ರದ್ಯುಮ್ನ ಕರಿರಾಜನಾಗಿ ಮಡುವೊಳು ಕ್ರೀಡಿಸೆ ಭರದಿ ನೆಗಳಿಯು ಪೀಡಿಸೆ ಶ್ರೀ- ಹರಿಯೆಂದು ಮೊರೆಯಿಡÀಲು ಶ್ರೀ- ಕರದಿಯುದ್ಧರಿಸಿದೆ ನರಸಿಂಹವಿಠ್ಠಲಾ 3
--------------
ನರಸಿಂಹವಿಠಲರು
ಧನ್ಯನಲ್ಲವೇ ಇವನು ಧನ್ಯನಲ್ಲವೇ ಪ ಧನ್ಯನಲ್ಲವೇ ಪನ್ನಂಗಶÀಯನ ನುನ್ನತ ಮಹಿಮೆ ತನ್ನೊಳ್ತಿಳಿದವ ಅ.ಪ ಕರಿ ಮೊಸಳಿಗೆ ಸಿಲ್ಕಿ ಪೊರೆಯೊ ಹರಿಯೆನಲು ಕರುಣದಿಂದಲಿ ಬಂದು ಪೊರೆದನೆಂದರಿತವ 1 ದುರುಳ ದುಶ್ಯಾಸನನು ಸೀರೆ ಸೆಳೆಯುತಿರೆ ತರುಣಿಗ್ವರದ ಶ್ರೀಪರಮನೆಂದರಿತವ 2 ಬಲಿಯನು ರಸಾತಳಕಿಳಿಸಿ ತಾ ಪಾದದಿ ಒಲಿದು ಮನೆಯ ಬಾಗಿಲ ಕಾಯ್ದೆಂದರಿತವ 3 ಮಲತಾಯಿ ಧ್ರುವನೊದೆದು ಛಲದಿ ನೂಕಲು ಕಂದ ನಳಿನಾಕ್ಷ ಗತಿಯೆನಲು ಒಲಿದು ಸಲಹಿದ್ದರಿತವ 4 ನೀನೆಗತಿಯೆನಗೀ ಭುವನದಾರು ಗತಿಯಿಲ್ಲ ಪಾದ ನೆನವಿನೊಳಿರ್ದವ 5
--------------
ರಾಮದಾಸರು
ಬಾದರಾಯಣ ಪಾದಕೆರಗಿದೆನೊ ಪ ನೀದಯದಿ ಕಾಮಕ್ರೋಧಗಳನೆ ಬಿಡಿಸಿ ಸಾಧು ಕರ್ಮದಲಿ ಆದರವೀಯೊ ಅ.ಪ ಜ್ಞಾನಿ ಗೌತಮಿ ಮೌನಿ ಶಾಪದಿಂದ ಜ್ಞಾನಿಗಳಿಗೆ ಅಜ್ಞಾನತೆ ಬರಲು ದೈನ್ಯದಲಿ ಚತುರಾನನಾದಿಗಳು ನೀನೆ ಗತಿಯೆನಲು ಮಾನಿಸಿದ ಸುಖಾತ್ಮ 1 ತಾಪಸೋತ್ತಮ ಆ ಪರಾಶರರು ದ್ವೀಪದಲ್ಲಿರಲು ನೀ ಪವಳಿಸಿದೆ ಶಾಪದಿಂದ ಕ್ರಿಮಿರೂಪ ಪೊಂದಿದವಗೆ ಭೂಪತನವನಿತ್ತ ದ್ವೈಪಾಯನಾಖ್ಯ 2 ಶೃತಿಗಳರ್ಥ ಮಂದಮತಿಗಳರಿಯದಿರೆ ಹಿತದಿ ಬ್ರಹ್ಮಸೂತ್ರತತಿಗಳನ್ನೆ ರಚಿಸಿ ಭಾಗವತ ವರ ಮಹಾಭಾ- ರತಗಳನ್ನು ರಚಿಸಿ ಅತಿ ಪ್ರಸನ್ನರಾದ 3
--------------
ವಿದ್ಯಾಪ್ರಸನ್ನತೀರ್ಥರು
ಮಾತುಮಾತಿಗೆ ಕೇಶವ ನಾರಾಯಣ ಮಾಧವÀ ಎನಬಾರದೆಪ. ಪ್ರಾತಃಕಾಲದಲೆದ್ದು ಪಾರ್ಥಸಾರಥಿಯನುಪ್ರೀತಿಲಿ ನೆನೆದರೆ ಪ್ರೀತನಾಗುವ ಹರಿಅ.ಪ. ಜಿಹ್ವೆ 1 ಜಿಹ್ವೆ 2 ಹೇಮಕಶ್ಯಪಸಂಭವ ಈ ಜಗಕೆಲ್ಲ ನಾಮವೆ ಗತಿಯೆನಲುವಾಮನ ನೀನೆಂದು ವಂದಿಸಿದವರಿಗೆ ಶ್ರೀಮದನಂತಸ್ವಾಮಿ ಹಯವದನನುಕಾಮಿತಫಲವೀವನು ಹೇ ಜಿಹ್ವೆ3
--------------
ವಾದಿರಾಜ
ಯೇನೆಲವೊ ದೈವಾ ವೈಕುಂಠನಾಥ ನೀ ನಾರಿವೇಷವನು ಧರಿಸಿದ ಬಗೆಯೇನೊ ಪ ದೈತ್ಯರು ಎರಗಿ ದೇವತತಿಗಳು ತಲ್ಲಣಿಸೆ | ಮಿತ್ರಭಾವದಲಿವರು ಕೂಡಲಿಟ್ಟು | ಇತ್ತಂಡದ ನಡುವೆ ಸುಧೆಯ ಬಡಿಸುವೆನೆಂದು | ಮಿತ್ರವೇಷವ ಧರಿಸಿ ಸುರರ ಸಲಹಿದ ಬಗೆಯ 1 ಶಿವಗೆ ವೃಕಾಸುರನು ಬೆಂಬಿಡದೆ ತನ್ನುರಿ | ಕರವ ನೀಡುವೆನೆಂದು ಬರಲಾಗಲು || ಅವನೀಶ ಭವಹರ ಕೇಶವ ನೀನೆ ಗತಿಯೆನಲು | ಯುವತಿ ವೇಷವ ಧರಿಸಿ ಶಿವನ ಸಲಹಿದ ಬಗೆಯಾ 2 ಅಂದು ಮಾಡಿದ ಚರಿತೆ ಭಕ್ತಜನರು ಬಂದು | ಒಂದೊಂದನ ನುಡಿದರನ ಲೀಲೆಂದು | ಇಂದು ಸತಿವೇಷವನು ಧರಿಸಿ ತೋರಿದಿಯೋ ಪು ರಂದರ ದಾಸರಿಗೊಲಿದೆ ವಿಜಯವಿಠಲ ಚಲುವಾ3
--------------
ವಿಜಯದಾಸ