ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಲವಂತರೋಳಗೆ ಬಲವಂತ ಹನುಮಾ | ನಳಿನಸಂಭವ ಕರ್ತನಾದ ಮಹಿಮಾ ಪ ಗಾವುದೈದತ್ತು ಸಾವಿರದಲಿಹ ಪರ್ವತವ | ಝಾವ ಮೂರಕೆ ತಂದ ನೋಡಿನೇಮಾ1 ಪೋಗಲಾಗಮ್ಯವಾಗಿದ್ದ ಸ್ಥಳವನೇ ಪೊಕ್ಕು | ಸೌಗಂಧಿಕಾ ಪುಷ್ಪ ತಂದ ಭೀಮಾ2 ವೇದಾಂತ ಸಾಗರದಿ ಖಳನಬಳಿಪ ಹಲವು | ದು- ರ್ವಾದಿ ಜಲಚರರ ಬಾಯಿಬಿಗಿದ ಮಹಿಮಾ 3 ಗುರು ಮಹೀಪತಿ ಸ್ವಾಮಿ ರಾಮಚಂದ್ರ ಪ್ರೀಯ | ದುರಿತೌಘದ್ಯುಮಣಿ ಎನಿಪ ನಾಮಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ವಯಂ ಭಾನು ಉದಯವಾದ ನೋಡಿ ದಯಕರುಣಾನಂದದ ಕೃಪೆಮಾಡಿ ಧ್ರುವ ರವಿಕೋಟಿತೇಜನೆ ಬಂದ ಮೂಡಿ ಭವಭ್ರಮದ ಕತ್ತಲ್ಹೋಯಿತೋಡಿ ದೇವದೇವೋತ್ತಮನ ಪ್ರಭೆ ಕೂಡಿ ದಿವಾರಾತ್ರಿಲ್ಲದಾಯಿತು ನೋಡಿ 1 ಜ್ಞಾನ ಗಮ್ಯವಾಗಿದ್ದ ಸುವಸ್ತ ಕಾಣಬಾವ್ಹಾಯಿತು ಮನಸ್ವಸ್ತ ಮನದಿಂದೆವೆ ಆಯಿತು ಮನಸ್ವಸ್ತ ಘನಮಯವೆ ತೋರಿತು ಸಮಸ್ತ 2 ತಾನೆ ತನ್ನಿಂದುದಯವಾದ ಪೂರ್ಣ ನಾನಾವೆಂಬುದ್ಹೋಯಿತನುಮಾನ ಆನೇಕಲಿದೋರಿತು ಇದೆ ಖೂನ ದೀನ ಮಹಿಪತಿ ಸ್ವಹಿತ ಸುಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು