ಮರೆತು ಬಿಡುವರೇ ಸ್ವಾಮಿ ಪ
ಕರಪಿಡಿದೆನ್ನನು ಕಾಯೊ ಮಾರುತಿಅ.ಪ.
ಸೀತೆಗೋಸುಗ ಪೋಗೀ ಶಿರಧಿಯದಾಟಿ ನೀ
ಮೋದ ಪಾತಕಿ ರಾವಣನಾ ಪುರದ ದಹಿಸಿ ಬಂದು
ಚೂಡಾಮಣಿಯ ತಂದು ಶ್ರೀ ರಾಮರಿ ಗರ್ಪಿಸಿದೇ 1
ಪರಮಾತ್ಮಾ ಶ್ರೀ ಕೃಷ್ಣಗರ್ಪಣೆ ಮಾಡಿದೆ 2
ಮಧ್ವರಾಯರೆಂಬೊ ಪೆಸರಿನಿಂದಾ
ಅದ್ವೈತವಾದಿಗಳ ಖಂಡಿಸಿ ಮೆರೆದೇ
ಅದ್ಭುತ ಮಹಿಮ ವೇಂಕಟವಿಠಲನ
ಪಾದ ಪದ್ಮಂಗಳ ನಿರುತ ಸೇವಿಸುತಿರಾ 3