ಒಟ್ಟು 4 ಕಡೆಗಳಲ್ಲಿ , 4 ದಾಸರು , 4 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಹುದಾದಡಹುದೆನ್ನಿ ಅಲ್ಲವಾದಡಲ್ಲವೆನ್ನಿಸಹಜವಿದು ಸಜ್ಜನರ ಮನಕೆ ಸಮ್ಮತವು ಪ ಕರಿಕೆಯಿಲ್ಲದ ಬಾಳು ಕರಿವರದನ ದಯೆ ಕೇಳುಅರಿತವರಿರೆ ಮನೆಯೊಳು ಅದು ಸ್ವರ್ಗವು ಕೇಳುಕರಣಿಕರೊಳಗಣ ನಂಟು ಕಟ್ಟಿದ ಹಣವಿನ ಗಂಟುಗುರುವಿನ ವಾಕ್ಯದಿ ಭಕ್ತಿ ಇಹಪರಕದು ಮುಕ್ತಿ1 ಒಕ್ಕಲಿಗಾಗದ ಗವುಡ ಮೇಲೆರಗಿ ಕುಕ್ಕುವ ಲಗಡಮಕ್ಕಳ ಪಡೆವುದು ಪುಣ್ಯ ನಲಿವು ನಗೆಗಳ ಪಣ್ಯಇಕ್ಕುವ ಅನ್ನವು ಧರ್ಮ ಇಹಪರಕದು ಅತಿ ಧರ್ಮಬಿಕ್ಕಳಿಕಿಕ್ಕಿದ ವ್ಯಾಧಿ ಯಮಪುರಕದು ಹಾದಿ2 ಕಂಡರೆ ಸೇರದ ನಾರಿ ಕೆಂಡವನುಗುಳುವ ಮಾರಿದಂಡವ ತೆರಿಸುವ ಪುತ್ರ ಹಗೆಗಳಿಗವ ಮಿತ್ರಉಂಡರೆ ಸೇರದ ತಾಯಿ ಉರಗನ ಮೆಕ್ಕೆ ಕಾಯಿಹಿಂಡನಗಲಿದ ಗೋವು ಹುಲಿಗಿಕ್ಕಿದ ಮೇವು 3 ಪರನಾರಿಯರೊಡನಾಟ ಗರಲವನಟ್ಟುಂಬಾಟಬರೆದೂ ಅರಿಯದ ಲೆಕ್ಕ ಕಡೆಯಲಿ ಬಹು ದುಕ್ಕಇರಿತಕೆ ಬೆದರುವ ಮದಕರಿ ಬಾಯ್ಕಿರಿವ ಕೋಡಗ ಮರಿಕರೆ ಬರಲರಿಯದ ಗಂಡ ಅವ ನಾಚಿಕೆ ಭಂಡ4 ಸಮಯಕ್ಕೊದಗದ ಅರ್ಥ ಸಾವಿರವಿದ್ದರು ವ್ಯರ್ಥಸವತಿಯರೊಳಗಣ ಕೂಟ ಎಳನಾಗರ ಕಾಟಅಮರರಿಗೊದಗದ ಯಾಗ ಆಡಿನ ಮೇಲಣ ರೋಗನಮ್ಮ ಆದಿಕೇಶವನ ಭಕ್ತ ಅವ ಜೀವನ್ಮುಕ್ತ 5
--------------
ಕನಕದಾಸ
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಯೋಗಿ ದಿವಾಳಿ ತನ್ನಉದ್ಯೋಗವುಡುಗಿ ಕೈಗಂಟು ಮುಳುಗಲು ಪ ಕ್ಲೇಶ ಪಂಚಕವೆಂಬ ಕಡು ತವಕವದು ಹರಿಯಿತುಈಷಣತ್ರಯವೆಂಬ ಇಟ್ಟ ಉದ್ರಿನಿಂತಿತು1 ತಪ್ತನಾಲಕು ಒಡವೆ ತಾರದಲ ಹೋಯಿತುಲಿಪ್ತಿ ಇಂದ್ರಿಯ ಲಾಭ ಲಿಂಗಾರ್ಪಿತವಾಯಿತುಗುಪ್ತ ಜೀವವು ತಾನು ಗುರುತಿಲ್ಲದೆ ಮುಳುಗಿತು2 ದೇಣಿಗಾರನು ಚಿದಾನಂದನು ಒಂದೇ ಕುಳಿತುದೇಣಿಯ ಸಲಿಸೆಂದು ಗಾಣಗತಿಯನೆ ಮಾಡಿದೇಣಿಯಕೆ ಸರ್ವವೆಲ್ಲ ಧಾರೆಯನೆರೆದೆಮಾಣದಲೆ ತನ್ನಾಳು ಮಗನ ಮಾಡಿಕೊಂಡ3
--------------
ಚಿದಾನಂದ ಅವಧೂತರು
ಕೇಳು ಕೋಪಿಸಬೇಡ ಹೇಳಲಿಕಂಜುವೆಬಾಳು ಬಡತನವ ನಾನು ಪ.ತಲೆಗೊಯ್ಕ ಹಿರಿಯ ಮಗ ಇಳೆಗೆ ಪೂಜಿತನಲ್ಲಬಲು ಭಂಡ ನಿನ್ನಯ ಕಿರಿಯ ಮಗ ||ಲಲನೆಯು ಸೇರಿದಳು ಬಲು ಲೋಭಿಗಳ ಮನೆಯಹೊಲಕುಲವರಿಯಳು ನಿನ್ನ ಸೊಸೆಯು ರಂಗ 1ಮಗಳ ಮಾರ್ಗವುಡೊಂಕು | ಮೈದುನ ಗುರುದ್ರೋಹಿಮಗನ ಮಗನು ಚಾಡಿಗಾರಹಗರಣಕೆ ನೀಚರ ಹಣ್ಣು ಮೆದ್ದೆಂಜಲಜಗದೊಡೆಯನೆನಿಸಿಕೊಂಡೆ - ನೀನುಂಡೆ 2ಲಕ್ಷ್ಮೀಪತಿಯು ಎನಿಸಿಭಿಕ್ಷೆ ಬೇಡಲು ಪೋದೆಪಕ್ಷಿಯ ಪೆಗಲೇರಿ ರಾಜನೆನಿಸಿದೆ ||ಸಾಕ್ಷಾತು ಪುರಂದರವಿಠಲನೆ ನಿನ್ನಗುಣಲಕ್ಷಣ ಪೇಳಲಳವೆ - ಕಳೆವೆ 3
--------------
ಪುರಂದರದಾಸರು