ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣ ನೀ ಕರುಣದಿ ಥಟ್ಟನೆ ಸಲಹೊ ದುಷ್ಟಮರ್ದನ ಸಕಲೇಷ್ಟದಾಯಕ ರಾಮ ಪ. ಹುಟ್ಟಿಸಿದ ದೇವರು ಹುಲ್ಲು ಮೇಯಿಸನೆಂದು ಶಿಷ್ಟ ನುಡಿವುದ ನಂಬಿಹೆನು ಮೆಟ್ಟಿ ಬಾಧಿಸುವಂಥ ದಟ್ಟ ದಾರಿದ್ರ್ಯದ ಬಟ್ಟೆ ಒಂದನು ಕಾಣೆ 1 ಊರ ಜನರ ಮುಂದೆ ಸೇರಿದ ಪದವನ್ನು ದೂರಗೊಳಿಸಿ ಬಹು ಗಾರಾದೆನು ಮಾರಮಣ ನೀನ್ನುದಾರ ಗುಣವ ನಂಬಿ ಚೀರುವ ಎನಗೆ ಬೇರಾರು ರಕ್ಷಕರಿನ್ನು 2 ವಿಶ್ವಕುಟುಂಬಿ ಸರ್ವೇಶ್ವರ ನೀನಿಂದು ವಿಶ್ವಾಸದಿಂದ ನಾನಿರುವದನು ತೈಜಸ ಪ್ರಾಜ್ಞ ತುರ್ಯರೂಪಗಳಿಂದ ವಿಶ್ವವ್ಯಾಪಕನಾದ ನಿನಗರುಪುವುದೇನೊ 3 ಖುಲ್ಲ ಮಾನವರೆಂಬ ಕ್ಷುಲ್ಲ ನುಡಿಗಳಿಂದ ತಲ್ಲಣಗೊಳಿಸುವುದುಚಿತವೇನೊ ಮಲ್ಲ ಚಾಣೂರ ಮುಷ್ಟಿಕರನ್ನ ಗೆಲಿÉದರಿ- ದಲ್ಲಣಯನಗೆ ಬೆಂಬಲನಾಗಿ ಸಲಹಿನ್ನು 4 ಇಂದ್ರಾದಿ ದಿವಿಜರ ಪದಗಳನವರಿಗೆ ಪೊಂದಿಸಿ ಪಾಲಿಪ ಕರುಣಿ ನೀನು ಇಂದಿರೆ ಸಹಿತಾಗಿ ಬಂದೆನ್ನ ಮನಸಿಗಾ ನಂದ ತೋರಿಸೊ ಭುಜಗೇಂದ್ರಾದಿ ಒಡೆಯ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೀ ಕರುಣದಿಂದ ಪಾಲಿಸದಿದ್ದರೆ ಇನ್ನುನಾ ಕಾಣೆ ಮನ್ನಿಸುವರ ಪ. ಸಾಕಾರ ಮೂರುತಿ ಸರ್ವೋತ್ತಮನೆನೀ ಕಾಯೊ ಪರಾಕುಮಾಡದೆ ಎನ್ನನು ದೇವ ಅ.ಪ. ಗುರುಹಿರಿಯರನು ಕಂಡು ತರಳತನದಲಿ ನಾನುಚರಣಕೆರಗದೆ ತಿರುಗಿದೆವರ ಸಕಲ ಸಂಪದವ ಬೇಡಿ ಬಯಸುತ ನಿನ್ನಸ್ಮರಣೆಯನು ಮರೆತಿದ್ದೆನೊಸ್ಮರನ ಬಾಣಕೆ ಸಿಲುಕಿ ಪರಸತಿಗೆ ಮರುಳಾಗಿದುರ್ಗತಿಗೆ ನೆಲೆಯಾದೆನೊಸಿರಿಯರಸನೆ ನಿನ್ನ ಚರಣವನು ನಂಬಿದೆನೊಕರುಣದಿಂ ಕಡೆಹಾಯಿಸೊ 1 ಆರುಮಂದಿಗಳೆಂಬ ಕ್ರೂರವೈರಿಗಳಿಂದಗಾರಾದೆನವರ ದೆಸೆಗೆಮಾರಿಹಬ್ಬದÀ ಕುರಿಯು ತೋರಣವ ಮೆಲುವಂತೆತೋರುತಿದೆ ಎನ್ನ ಮತಿಗೆಘೋರ ಸಂಸಾರವೆಂಬೋ ವಾರಿಧಿಯ ದಾಟಿಸುವಚಾರುತರ ಬಿರುದು ನಿನಗೆಮಾರನಯ್ಯನೆ ನಿನ್ನ ಚರಣವನು ನಂಬಿದೆನುಪಾರಗಾಣಿಸೊ ಎನ್ನನು 2 ಹಲವು ಜನ್ಮಗಳಲ್ಲಿ ಬಲುನೊಂದು ಬಾಯಾರಿತೊಳತೊಳಲಿ ಬಳಲುತಿಹೆನುಸಲೆ ಉದರ ಪೋಷಣೆಗೆ ತಲೆಹುಳುಕ ನಾಯಂತೆಹಲವು ಮನೆ ತಿರುಗುತಿಹೆನೊಜಲದ ಮೇಲಿನ ಗುಳ್ಳೆಯಂತಿಪ್ಪ ಈ ದೇಹನೆಲೆಯೆಂದು ನೆಚ್ಚುತಿಹೆನೊಜಲಜನಾಭನೆ ನಿಮ್ಮ ಮಹಿಮೆಯನು ಪೊಗಳುವೆನುಚೆಲುವ ಶ್ರೀ ಹಯವದನ ರನ್ನ 3
--------------
ವಾದಿರಾಜ
ಭಕ್ತಾಧೀನಹರೇ ಭಕ್ತಾಧೀನ ವಿರಕ್ತ ವಿನೋದನ ಭುಕ್ತಿಮುಕ್ತಿದ ಸರ್ವಶಕ್ತಿ ನೀ ದಯವಾಗು ಪ. ಚಂಚಲ ಮನದಿ ಪ್ರಾಪಂಚಿಕ ಸುಖದಾಸೆ ಮಿಂಚಿ ಸಂಸ್ಕøತಿಯಲಿ ಸಂಚರಿಸಿ ಮುಂಚಿನ ಭವಗತ ಸಂಚಿತವರಿಯದೆ ಹಂಚಿಗು ಕಡೆಯಾದೆ ಪಂಚಾತ್ಮನ ನೆನೆಯದೆ 1 ಘೋರ ಸಂಸ್ಕøತಿ ಪಾರ ವಾರುಧಿ ಮುಳುಗ್ಯಾಡಿ ಪಾರುಗಾಣದೆ ಬಹು ಗಾರಾದೆನು ಶ್ರೀರಮಣನೆ ನಿನ್ನಾಧಾರವಲ್ಲದೆ ಮುಂದೆ ಕಂಸಾರಿ ನೀ ಕೃಪೆದೋರು 2 ಭವ ವಾಯು ಗಿರೀಶಾದಿ ದಿವಿಜರ ನಿರತ ಪ್ರೇರಿಸುವಂಥ ದೊರೆಯೆ ನಿನ್ನ ಸ್ಮರಿಸುವೆ ಪರಿವೃತಾಂತರ ನಿಯಾಮಕ ಲಕ್ಷ್ಮೀ- ವರ ವೆಂಕಟಾದ್ರೀಶ ನಿರುಪಧಿ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ಮೊರೆ ಹೊಕ್ಕೆನೋದೇವ ಪÀ ಕರಿರಾಜವರದನೇ ಶರಣಾರ್ತಿಹರಣನೇ ಅ.ಪ ಆರೊಂದುವ್ಯಸನದಿ ಈರೊಂದು ತಾಪದಿ ಗಾರಾದೆ ಮೋಹದಿ ಕಾರುಣ್ಯವಾರಿಧಿ 1 ಅನುಮಾನವೇತಕೈ ಮನಸೇಕೆ ಬಾರದು2 ಸುರವಂದ್ಯ ಚರಣನೆ ಸರಿಯಾರೊ ನಿನಗೆಣೆ ಪರಿಪಾಲಿಸೆನ್ನನೆ 3
--------------
ಗುರುರಾಮವಿಠಲ
ಆರ ಮುಂಧೇಳಲಿ ಕರಕರಿಯ ಈ |ಪೋರನು ಕೊಡವಲ್ಲನಲ್ಲೇ ಸೀರೆಯ ಪದಾರಿಯೊಳ್ಹೋಗಿ ಬಹರ್ಯಾರೆನ್ನ ಕಂಡರೆ |ಊರೆಲ್ಲ ಹೋಗಿ ದೂರರೇನೆ1ಸಂತಿಗೆ ಹೋಗ್ಯಾಕೆ ನಿಂತರೆಂದುಡುಕುತ |ಕಾಂತನೇ ಬಂದರೇನಂತ ಹೇಳುವಾ 2ಬತ್ತಲಾರಾಗಿ ಜಲ ಮತ್ತೀಗ ಸೇರುವಾಗಿ |ಮೃತ್ಯು ಬಂದನಂಬುದರ್ತಿವೇನೆ 3ನೀರ ಹಾವುಗಳೆಲ್ಲ ಶರೀರವ ಸುತ್ತುತಿವೆ |ಗಾರಾದೆವಲ್ಲೆ ವಾರಿಜಾಸ್ಯೆ 4ಮುಳ್ಳು ತೆಪ್ಪವು ಮೋರೆಗೆಲ್ಲ ಮುಚ್ಚುತಲಿವೆ |ಖುಲ್ಲಪೋರಗೆ ದಯೆಯಿಲ್ಲವಲ್ಲೇ 5ಜಲ ಜಂತುಗಳೆಲ್ಲ ಗುಳು ಗುಳು ಮಾಡುತವೆ |ಜಲಜಾಕ್ಷಗ್ಯೇತಕೆ ತಿಳಿಯದಮ್ಮ 6ಮೀನಾಗಳಲ್ಲಿ ಹತ್ತಿ ಏನೇನೋ ಮಾಡುತವೆ |ಏಣಾಕ್ಷಿ ನಮಗೇ ಏನು ಬಂತೇ 7ಹಿಂದತ್ತ ಹೋದರೆ ಕಂಧರದುದ್ದ ನೀರು |ಮುಂದತ್ತ ಬರೆ ಎದೆಗಿಂದ ಕೆಳಗೆ 8ಏಡಿಗಳೆಲ್ಲ ಕಾಲು ನೋಡಿ ಕಚ್ಚುತಲಿವೆ |ಮಾಡಲಿನೆ ಮೋರೆ ಬಾಡಿತಲ್ಲೆ 9ಮೂಗುತಿ ಮಣಿಯೆಲ್ಲ ಹೇಗೋ ಎಲ್ಲ್ಯೋ ಎನಲು |ಈ ಗತಿಯಾಗೆ ಮನೆಗೆ ಹೋಗೋದ್ಹ್ಯಾಂಗೆ 10ಏನಾದರಾಗಲಿ ಪ್ರಾಣೇಶ ವಿಠಲಗೆ |ನೀನೇ ಗತಿಯೋ ಕಾಯೊ ಎನ್ನಬೇಕೇ 11
--------------
ಪ್ರಾಣೇಶದಾಸರು