ಒಟ್ಟು 1 ಕಡೆಗಳಲ್ಲಿ , 1 ದಾಸರು , 1 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು