ಒಟ್ಟು 12 ಕಡೆಗಳಲ್ಲಿ , 2 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕಾವೇರಿ ಪ್ರಾರ್ಥನೆ) ಕಾವೇರಿ ಕಲುಷಹರಿ ಭುವನ ಪಾವನ ನಾರಿ ಶ್ರೀವರನ ಕೃಪೆ ದೋರಿ ಕಾವುದಕಾಗುವಿ ಸ್ವಾರಿ ಪ. ತಾಪಗಳೆಲ್ಲವ ತರಿವಾ ಶ್ರೀಪತಿಪಾದಾಶ್ರಯವಾ ಯೀ ಪರಿಯಿಂದೊದಗಿಸುವ ಲೋಪಾಮುದ್ರೆಯೆನಿಸುವಾ 1 ಮನಸಿಜನಯ್ಯನ ಕಥೆಯು ಮನೆಯಲಿ ಸಾಂಗದೊಳಿಂದು ಅನುಕೃತವಾಗುವುದೆಂದು ಕನಸಿಲಿ ತೋರಿದಿ ಬಂದು 2 ದಕ್ಷಿಣ ಗಂಗೆಯ ನೋಡಿದಾಕ್ಷಣ ಕಷ್ಟವ ದೂಡಿ ಪಕ್ಷಿವರ ಧ್ವಜಯನ್ನಾಪೇಕ್ಷೆಯ ನೀಡಿದ ಮುನ್ನ 3 ಕಲಿಮಲಕಾಲನ ಹರಿಯ ಒಲುಮೆಯ ತಾಳಿದ ಪರಿಯ ಕರ ಕರಿಯ 4 ತಪ್ಪುಗಳೆಲ್ಲವ ಕ್ಷಮಿಸಿ ಒಪ್ಪುವುದುತ್ತಮಕರಸಿ ಸರ್ಪಗಿರೀಂದ್ರನ ಕರುಣಾ ತಪ್ಪು ಮನ್ನಿಸು ಶರಣಾ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಜಗನ್ನಾಥದಾಸರ ಪ್ರಾರ್ಥನೆ) ಯಾತಕಿನ್ನನಾಥನೆಂಬುವುದು ಕರುಣಾಳು ಜಗ ನ್ನಾಥದಾಸರ ಸೇರಿಕೊಂಬುವುದು ಪ. ಭೀತಿಕರ ಬಹು ಜನ್ಮಕೃತ ಮಹಾ ಪಾತಕಾದಿಗಳನ್ನು ಭೇದಿಸೆ ಮಾತುಳಾಂತಕನಂಘ್ರಿ ಕಮಲದಿ ನೀತಭಕ್ತಿಯ ನೀಡಿ ಸಲಹುವ ಅ.ಪ . ಘೋರತರ ಸಂಸಾರಪಾರಾವಾರ ದಾಟಿಸುವ ಲಕ್ಷ್ಮೀ ನಿತ್ಯ ಭಾರ ವಹಿಸಿರುವ ಮೂರು ಲೋಕಾಧಾರ ದುರಿತೌಘಾರಿ ಕೃಷ್ಣಕಥಾಮೃತಾಬ್ಧಿಯ ಸಾರ ತೆಗೆದು ಖರಾರಿ ಕರುಣವ ಬೀರಿ ಸುಜನೋದ್ಧಾರ ಮಾಡಿದ 1 ಶ್ರೀ ರಮಾಪತಿ ಸರ್ವ ಸುಗುಣಾಧಾರ ದಯದಿಂದ ಒಲಿಯಲು ಸೇರಿ ಬರುವುದು ಸರ್ವಸಂಪತ್ಸಾರವಾನಂದ ಕಾರುಣಿಕತನದಿಂದಲಿಂತುಪಕಾರ ಮಾಡಿದ ದೀನಜರಿಗೆಧೀರ ಶೇಷಗಿರೀಂದ್ರನಿರವನು ತೋರಿದನು ನಿಜಭಕ್ತ ಬುಧರಿಗೆ 2
--------------
ತುಪಾಕಿ ವೆಂಕಟರಮಣಾಚಾರ್ಯ
(ಭಕ್ತಿ ಎಂಬ ಸ್ತ್ರೀಯ ವರ್ಣನೆ) ಸೇರಿರೊ ನವ ನಾರಿಕುಂಜರನನ್ನು ಧೀರಲಕ್ಷ್ಮೀವರನು ಮಂಟಪವೇರಿ ಮುಂದಕೆ ಬರುವನು ಪ. ಶ್ರವಣ ಕೀರ್ತನ ಸ್ಮರಣ ಸೇವನ ಪೂಜ ಪ್ರ- ಣವ ದಾಸ್ಯ ಸಖತ್ವ ಸರ್ವವ ವಹಿಪ ನವವಿಧ ಭಕುತಿಯ1 ದೂರ ನಿಂತರೆ ತೋರದು ಸರಿಯಾಗಿ ಸಾರಗೈಯಲು ಸಾಧನೆಗಳಿಂದಾರು ಮೂರಾಗಿರುವುದು 2 ಜೋಲುವಾ ಸೊಂಡಿಲೆಂಬುದೆ ಸುಜ್ಞಾನ ಕಾಲುಗಳೆ ಪುರುಷಾರ್ಥವೆನಿಪವು ಬಾಲ ಸದ್ಗುಣಭಾವವು 3 ಭಕ್ತಿ ಭುಕ್ತಿಗಳೆರಡು ನೇತ್ರಗಳು ವಿ- ರಕ್ತಿಯುದರವು ವಿಷ್ಣು ಗಾಥಾಸಕ್ತಿ ಸಕಲೇಂದ್ರಿಯಗಳು 4 ನಿತ್ಯ ನಿರ್ಮಲ ಚರಿತ ಲಕ್ಷ್ಮೀಶನ ಭೃತ್ಯಪಾದ ರಜಸ್ಸಮೂಹವನೆತ್ತಿ ನಾಲ್ದೆಸೆ ಸುರಿವದು 5 ಹತ್ತಿರೆಂದಿಗು ಸೇರಲೀಯದು ದು- ದುರಿತ ಕೂಪದಿ ಒತ್ತಿ ಕೆಡುಹುವ ವಹಿಲವು 6 ಛಲಕೆ ಮೆಚ್ಚುತ ನಲಿವುದು ಮನದಲಿ ಚೆಲುವ ಶೇಷಗಿರೀಂದ್ರನಾಥನ ವಲಿಸಿ ಕೊಂಡಿಲ್ಲಿಳಿವುದು 7
--------------
ತುಪಾಕಿ ವೆಂಕಟರಮಣಾಚಾರ್ಯ
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಶುಕಾಚಾರ್ಯರ ಸ್ತೋತ್ರ) ಆಚಾರ್ಯನ ನೋಡಿ ಸುಮ್ಮನೆ ಪೇಚಾಡಲು ಬ್ಯಾಡಿ ಪಡದ ಮೃಡಾತ್ಮನ ಪಾಡಿ ಪ. ಬಾಲಕರಂತಿರುವ ಧೂಸರ ಧೂಳಿಯ ಧರಿಸಿರುವಾ ಕೇಳಿದವರಿಗೊರೆವಾ ಭಗವನ್ಮೂಲ ತತ್ವದಿರವಾ ಪರೀಕ್ಷಿತ ಲಾಲಿಸುವಂತೆರ- ಮಾಲಯ ಗುಣವರುಣಾಲಯ ತಿಳಿಸಿದ 1 ವ್ಯಾಪಿಸಿ ಕೊಂಡಿರುವಾ ಸಂಸೃತಿ ತಾಪತ್ರಯ ಭರವಾ ತಾಪಕ ಮತ್ಸರವಾ ಮೋಹ ಮಹಾಪರಾಧದಿರವಾ ದೀಪವು ತಿಮಿರವ ಕಳವಂದದಿ ನಿ- ಲೋಪಗೊಳಿಸುವ ಪರೋಪಕಾರಿಯನು 2 ಭಾಗವತಾಮೃತವಾ ಮುಖದಿ ಸರಾಗದಿ ಧರಿಸಿದನಾ ವಾಗೀಶಾಂಶಕನಾ ಹೊಂದಿರೊ ಗುರುಮುನಿ ಶುಕನಾ ತಾಗುಬಾಗುವೊಳಗಾಗದ ತೆರದಲಿ ನಾಗ ಗಿರೀಂದ್ರನು ನಲಿವನು ಮನದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಇಂದಿರೇಶ ದಯದಿಂದಲಿ ತ್ವರಿತದಿ ಬಂದು ಒದಗಿ ಸಲಹೊ ಸುಧೆಯಾನಂದ ಉಣಿಸಿದ ಪ. ಇನ್ನು ನಿರೀಕ್ಷಿಸಲೆನಗೆ ಸಾಧ್ಯವಿಲ್ಲ ಅನ್ಯ ಸಾಧನವಿಲ್ಲ ಮುನ್ನಿನ ಮಾರ್ಗದ ರೀತಿಯ ನೋಡಲು ಮನ್ನಿಪ ಜನರಿಲ್ಲ ಧನ್ಯ ವಿಬುಧ ಗಣ ಮಾನ್ಯ ಮುಕುಂದನೆ ಮಾಧವ 1 ದಾರು ನೀನಲ್ಲದೆ ಮಾರಮಣನೆ ನಿನ್ನ ಸೇರಿದ ಬಳಿಕೀ ಧಾರುಣಿ ಒಳಗೆ ನಿವಾರಣೆಯದೇನೊ ಮೂರು ದೊರೆಗಳಲಿ ವಾರಿಜನಾಭ ನೀ ಪ್ರೇರಕನಾಗಿರೆ ಘೋರವಾವರಿಸುವುದೆ 2 ತಪ್ಪುಗಳೆಲ್ಲವ ಒಪ್ಪಿಕೊಳ್ಳೊಯೆನ್ನಪ್ಪ ನೀ ಕರುಣದಲಿ ಒಪ್ಪಿಸಿ ಪಡದನು ತಪ್ಪದೆ ಮನದೊಳಗಿಪ್ಪ ವ್ಯಸನ ಬಿಡಿಸೊ ಸರ್ಪ ಗಿರೀಂದ್ರನೊಳೊಪ್ಪುವ ಸತ್ಯ ಸಂ- ಕಲ್ಪ ಭಜಕ ನಿಜ ಕಲ್ಪತರುವೆನಿಪ 3
--------------
ತುಪಾಕಿ ವೆಂಕಟರಮಣಾಚಾರ್ಯ
ಉದದಿ ಮೇಖಳೆಯ ಭಾರವನಿಳುಹುವನೆಂದು ವಿಧಿಪೂರ್ವಸುರರು ಬಂದು ಕ್ಷೀರಾಬ್ಧಿಯ ಸಿಂಧು ಪ. ಶೌರಿ ಗೃಹದ ಗೋಪಿ ಜನಕೆ ನಾನಾ ವಿಧದ ಲೀಲಿಯ ತೋರಿ ದೈತ್ಯರ ಸದೆದು ಗೋವುಗಳ ಕಾಯ್ದ ಕೃಷ್ಣಗೆ ಪದುಮದಾರತಿಯ ಬೆಳಗಿರೆ ಶೋಭಾನೆ 1 ಮೆಲ್ಲನೆ ಮಧುರೆಗೆ ಹೋಗಿ ಮಾವನ ದೊಡ್ಡ ಬಿಲ್ಲ ಮಧ್ಯದಿ ನಿಂದು ರಂಗದಿ ಹಸ್ತ ಮಲ್ಲಾದಿಗಳ ತರಿದು ಕೈದೋರಿ ಮೆರೆದು ಖುಲ್ಲನನು ಮಡುಹಿ ಬಂಧುಗ- ಳೆಲ್ಲರನು ಸಂರಕ್ಷಿಸಿದ ಸಿರಿ ನಲ್ಲ ಗೋಪೀ ವಲ್ಲಭನ ಪದ ಪಲ್ಲವಗಳನು ಪಾಡಿ ಪೊಗಳುತ ಮಲ್ಲಿಗೆಯಾರತಿಯ ಬೆಳಗಿರಿ ಶೋಭಾನೆ 2 ಮಂದಿಮಾಗದ ಮೊದಲಾದ ರಾಯರ ಮದ ಕುಂದಿಸಿ ರಥದೊಳಂದು ಭೈಷ್ಮಿಯ ಕರ ತಂದು ದ್ವಾರಕೆಗೆ ಬಂದು ಭಾಮಾದಿ ಮಹಿಷೀ ವೃಂದ ಸಂಗ್ರಹಿಸಿದ ಪರಾಪರ ವಂದ್ಯ ಶೇಷಗಿರೀಂದ್ರನಾಥನ ಚಂದನಾತ್ಮಕ ಮೂರುತಿಯ ಹೃ- ನ್ಮಂದಿರದ ಮಧ್ಯದಲಿ ಮಂಡಿಸಿಕುಂದಣದಾರತಿಯ ಬೆಳಗಿರೆ ಶೋಭಾನೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಾತ್ವಿಕ ಹಿನ್ನೆಲೆಯ ಹಾಡುಗಳು (ಸರ್ವೋತ್ತಮತ್ವ ವರ್ಣನೆ) ಸಕಲವು ತ್ವದಧೀನವು ಶ್ರೀಶನೀ ಕೇಳು ಪ. ಸಕಲವು ತ್ವದಧೀನ ಸಾಕಯ್ಯ ಸತ್ಯಮಾನ ವಿಖನ ಸಗಣಧಾಮ ವಿಶ್ವಗುಣಾಭಿರಾಮ ಅ.ಪ. ಕಮಲ ಸಂಭವ ಮುಖರು ಶ್ರೀಶ ತ್ವತ್ಪಾದ ವಿಮಲ ಪದ್ಮ ಸೇವಕರು ಅಮಿತ ಗುಣಾಂಬುಧಿ ಆಡುವಿ ನಿರುತದಿ ದುರಿತ ಬೀಜ ಶ್ಯಾಮ ಸುಂದರ ರಾಜ 1 ದೇಹ ಗೇಹಾದಿಗಳೆಲ್ಲ ಸುವರ್ಣ ಪಕ್ಷಿ ವಾಹ ನಿನ್ನೊಶ ಭೂನಲ್ಲ ಮೋಹದಿ ತನ್ನದೆಂದು ಜೋಹಗೊಂಡ ಪರಿಗೆ ಬಾಹದಿರದು ಕೇಡು ಬಿಡದೆಂದು ನಗೆಗೇಡು 2 ಪರಮ ಕೃಪಾಳು ನಿನ್ನ ಪಾದವ ನಂಬಿ ಮರೆದೆ ದುರ್ಮಾನವನ್ನ ಉರಗ ಗಿರೀಂದ್ರನೋಳ್ಮೆರೆವ ಮಹಾತ್ಮನೆ ಶರಣ ಜನ ಮಂದಾರ ಸೇರಿಸು ಕೃಪಾಧಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ನೀನೆ ಗತಿ ಶ್ರೀಪತಿ ನೀನೆ ಗತಿ ನಿರಾಕೃತ ದಾನವತತಿ ದೀನಾನುಕಂಪಿತ ಮತಿ ಪ. ಏನೆಂಬೆನು ನಿನ್ನಯ ಕರುಣಾ ಪವಮಾನ ಮತಿಯ ಜನಾದರಣಾ ದೀನಬಂಧು ದುರಿತೌಘ ನಿವಾರಣ ಶುಭ ಸಂಚಯ ಕರಣ 1 ನಿರವಧಿ ಸುಖದಾಯಕ ನಿನಗನ್ಯರು ಸರಿಯಂಬರು ನರಕದಿ ಹೊರಳುವರು ಚರಣಯುಗ್ಮಸರಸಿಜವಿಂತಿರಲು ಬರಿದೆ ಭವದಿ ತಿಳಿಯದೆ ಬಳಲುವರು 2 ಸ್ಮರಣೆ ಮಾತ್ರದಿಂದೊಲಿವ ಮನವರಿತು ಪಾಡಿದರೆ ನಲಿವ ಸಿರಿಸಮೇತ ಮಂದಿರದೊಳಗಿರುವ ಉರಗ ಗಿರೀಂದ್ರನ ಶಿರದಲಿ ನಲಿವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಭಕ್ತಪೋಷಣಭೂಷ ಮನ್ಮಂದಿರವಾಸ ಶ್ರೀನಿವಾಸ ಪಾದಾತನ ಜನರನು ಸಾನುರಾಗದೊಳ್ಮಾನಿಸಿ ಸಲಹುವ ಪ. ಬಾಲತ್ವದಿಂದ ಬಹುವಿಧವಾದ ಭಕ್ತಿಯನಿತ್ತು ಲಾಲಿಸಿ ಪೊರೆದ ಪೂಜ್ಯಪಾದ ಈ ಮಧ್ಯದೊಳಾದ ಧಾಳಿಗಳನು ನಿರ್ಮೂಲಗೈದ ಕರು- ಣಾಳು ರಾಜ ನಿನ್ನಾಳಾಗಿಹೆನು 1 ಪಂಚಭೌತಿಕವಾದ ತನುವಿಂದ ಆಗುವ ತಪ್ಪ ಕಿಂಚಿನ ವರದ ನೀ ದಯದಿಂದ ಕ್ಷಮಿಸೈ ಗೋವಿಂದ ವಂಚಿಸಿ ದಾನವದಿತಿಜರ ಸುರರಿಗೆ ಹಂಚಿದಿ ಸುಧೆಯನು ಶುಭಕರದಿಂದ 2 ಕಮಲಾಬ್ಜಭವರುದ್ರೇಂದ್ರಾದಿಗಳು ಪಾದಯುಗ ಕಲ್ಪ ದ್ರುಮ ನಿನ್ನ ನೆಳಲನಾಶ್ರೈಸಿಹರು ಕರುಣಾರಸದೋರು ನಮಿಸುವೆ ಎಂಬೀ ಮಮತೆಯಿಂದ ಎ- ನ್ನಮಿತಪರಾಧವ ಕ್ಷಮಿಸುವ ಹರಿಯೆ 3 ಇಂದ್ರಿಯಂಗಳ ಭಾವನೆ ಬಹುಘೋರ ಅದರಲ್ಲಿ ಮುಳುಗಿದ- ರಿಂದಿರಾಧವ ನೀನೆ ಬಹುದೂರ ಆ ರೀತಿಯ ಭಾರ ಹೊಂದಿದ ದಾಸರಿಗೆಂದು ತಾರಾ- ಮಂದರಾದ್ರಿಧರಾ ಮಾಧವಧೀರ 4 ಚರಣ ಸಂಸ್ಮರಣೆ ಮಾತ್ರ ಬೇಕು ಇದರಿಂದ ಸರ್ವ ಪುರುಷಾರ್ಥ ಲಬ್ಧಿಗಿನ್ನು ಸಾಕು ಇರುವುದೆ ಈ ನಾಕು ಉರಗ ಗಿರೀಂದ್ರನ ಶಿರದಲಿ ಮಂಡಿಸಿ ಮೆರೆವ ಸುಖಾಂಬುಧಿ ಸುರವರ ನಾಥ5
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸೊ ಹರಿನಾಮ ಏ ಮನುಜಾ ಸ್ಮರಿಸೋ ಹರಿನಾಮ ನಿರವಧಿ ಸುಖಧಾಮ ಪರಮ ಪುರುಷಗಿದು ಪರಿಪೂರ್ಣ ಪ್ರೇಮ ಪ. ತರಳ ಪ್ರಹ್ಲಾದನ ಪೊರದು ಪಾಂಚಾಲಿಗೆ ತ್ವರಿತದೊಳಕ್ಷಯವಿತ್ತು ಸರಸಿಯೊಳಗೆ ಕರಿರಾಜನ ಸಲಹಿದ ನರ ಕಂಠೀರವ ಕರುಣಿಸುವನು ಬೇಗ 1 ಹಲವು ಜನ್ಮಗಳಲ್ಲಿ ಗಳಿಸಿದ ದುಷ್ಕøತ ಗಳನೆಲ್ಲ ನಿರ್ಮೂಲಗೊಳಿಸುವುದು ಜಲಜ ಸಂಭವ ಮಾಳ್ಪ ಕೆಲಸದಿ ಸಿಲುಕದೇ ನೆಲೆಗೊಂಡು ಸೌಖ್ಯವ ಸಲಿಸಬೇಕಾದರೆ 2 ಕಲಿಕೃತ ಕಲ್ಮಷ ಬಲೆಯಿಂದ ಮೋಚನ- ಗೊಳಿಸಲು ಹರಿನಾಮವಲ್ಲದಿನ್ನು ಚಲಿತ ಚಿತ್ತದ ಕರ್ಮಬಲದಿಂದಲಾಹದೆ ನಳಿನನಾಭನೇ ನೀ ಬೆಂಬಲನಾಗು ತನಗೆಂದು 3 ಉದಯಾರಂಭಿಸಿ ಮತ್ತೊಂದು ದಯ ಪರ್ಯಂತ ವಿಧಿವಿಹಿತಗಳೆಲ್ಲ ಸದರವೇನೊ ಪದುಮನಾಭನ ನಾಮ ಒದಗಿದರದು ಪೂರ್ಣ- ವದರಿಂದ ಸರ್ವರ ಹೃದಯ ನೀ ಮರೆಯದೆ 4 ಸಂಚಿತಾಗಾಮಿಗಳಂಚುವಂ ದಿತಿಜರ ಸಂಚಯಕನುದಿನ ಸ್ಮರಿಸುವರ ಕಿಂತಿತಾರಬ್ದ ಪ್ರಪಂಚವ ತ್ವರಿತದಿ ಮಿಂಚಿನಂದದಿ ತೋರಿ ಪರಿಹಾರಗೊಳಿಪರೇ 5 ಕರುಣಾಭಿಮಾನಿಗಳರಿತು ಮಾಡಿಸುತಿಹ ನಿರತ ಕೃತ್ಯಗಳೊಂದು ಮೀರದಲೆ ಹರಿಯಾಜ್ಞೆ ಇದು ಯೆಂದು ಚರಿಸುತಲನುದಿನ ಪರಮೋತ್ತಮ ಕಾರ್ಯಧುರವಿದೆ ತನಗೆಂದು 6 ನಾಗ ಗಿರೀಂದ್ರನ ನೆನೆದರೆ ಇಹಪರ ಭೋಗ ಸಾಮ್ರಾಜ್ಯವು ಸ್ಥಿರವಾಹುದು ವಾಗೀಶನ ಪರಮಾಗಮ ಸಿದ್ಧಾಂತ- ವಾಗಿಹದಿದೆಯೆಂದು ನೀ ಗುರುತವನಿಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ