ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ತುಪಾಕಿ ಸಾಧನವನು ತ್ವರಿಯ ಬಿದ್ದು ಮಾಡುತಿರುವೆಶಾಬಾಸು ಶಿವನೇ ನೀನಣ್ಣ ಪೇಳುವೆನಣ್ಣ ಪ ಮೌನವೆಂದೆನಿಪ ಮುಸೈದೆ ಸಹಿತಾಗಿಜ್ಞಾನ ಪಡೆದಳವ ಬಗಿಯಣ್ಣಾ ಸಾಧಿಸು ಅಣ್ಣಧ್ಯಾನವೆಂದೆನಿಪ ತಲೆಕಟ್ಟನೆ ಕಟ್ಟಿಆನಂದವನೆ ಆಡಣ್ಣ ಸಾಧಿಸು ಅಣ್ಣ 1 ಆರು ಚಕ್ರವೆಂಬ ಆರು ಕಟ್ಟಿನ ತುಪಾಕಿಧೀರತನದಿಂದ ಪಿಡಿಯಣ್ಣಾ ಸಾಧಿಸು ಅಣ್ಣಮೂರಾವಸ್ಥೆಯೆಂಬ ಮೂವೆರಳ ಮದ್ದ ಹೊಯ್ದಪೂರಾಯದವನ ಮಾಡಣ್ಣ ಸಾಧಿಸು ಅಣ್ಣ2 ಇಡಾಪಿಂಗಳವೆಂಬ ಎರಡು ಗುಂಡನೆ ಹಾಕಿರೂಢಿ ಎಂಬ ಗಜವ ಜಡಿಯಣ್ಣ ಸಾಧಿಸು ಅಣ್ಣಕೂಡಿಹ ಸತ್ವನೆಂಬ ಕೂರಿ ರಂಜಕವರೆದುಗೂಡು ಗುರು ಜಾವಿಗೆ ಒತ್ತಣ್ಣ ಸಾಧಿಸು ಅಣ್ಣ 3 ಆಸನ ನಳಿಕೆಯೆಂಬ ಆಧಾರವನೆ ಆಂತುವಾಸರ ಹೊಗ್ಗೊಡಬೇಡಣ್ಣ ಸಾಧಿಸು ಅಣ್ಣನಾಸಿಕಾಗ್ರವು ಎಂಬ ನೊಣನ ದಿಟ್ಟಿಸಿ ನೋಡಿಸೂಸದೆ ಏರಿಸಿ ನಿಲ್ಲಣ್ಣ ಸಾಧಿಸು ಅಣ್ಣ4 ಬರಿಯ ಪ್ರಣವವೆ ಎಂಬ ಬೆರಳ ಬೊಬ್ಬೆಯನಿಟ್ಟುಭರದಿ ಭೀತಿಯನಳಿಯಣ್ಣಾ ಸಾಧಿಸು ಅಣ್ಣಗುರು ಚಿದಾನಂದನು ಎಂಬ ಗುರಿ ಭ್ರೂಮಧ್ಯವೆ ಇರೆಗುರಿಯ ತಾಗುವಂತೆ ಇಡಣ್ಣ ಸಾಧಿಸು ಅಣ್ಣ5
--------------
ಚಿದಾನಂದ ಅವಧೂತರು
ರುದ್ರಕುಮಾರನ ಚರಣಕ್ವಂದನೆ ಮಾಡಿ ವಿದ್ಯಾಭಿಮಾನಿ ವಾಣಿಯ ಸು - ಪದ್ಮ ಪಾದಗಳಿಗೆ ಎರಗಿ ನಾ ಪೇಳುವೆ ಶುದ್ಧವಾಗಿ ಕೊಡು ಮತಿಯ 1 ಶ್ರಾವಣಮಾಸ ಶುಕ್ಕುರುವಾರ ಶುಭಮೂರ್ತೆ (ಮುಹೂರ್ತೆ?) ಕಾಲದಿ ಕಮಲಾಕ್ಷಿಯನು ಆಲಯದೊಳಗಿಟ್ಟಾದರದಿಂದ ಪೂಜಿಸೆ ಬೇಡಿದಭೀಷ್ಟ ನೀಡುವಳು 2 ಇರುತಿರಲೊಂದು ಪಟ್ಟಣದಲ್ಲಿ ರಾಜನು ತನಯರಿಲ್ಲದ ಕಾರಣವು ವಿವಹದುತ್ಸವಕೆಂದು ತೆರಳೋ ಪತಿಯ ಕಂಡು ತೆಗೆದಿಟ್ಟಳಾತನಾಯುಧವ 3 ಪಟ್ಟದ ಕತ್ತಿಯ ಬಿಟ್ಟು ಬಂದೆನೆಂದು ಅಟ್ಟಿಹ ತನ್ನ ದೂತರನು ನೆಟ್ಟನೆರಡು ಕಾಲು ಚಾಚಿ ಕುಳ್ಳಿರಲಾಗ ತಟ್ಟನೆ ದಾಟಿ ನಡೆದನು 4 ಮೂರು ತಿಂಗಳು ಗರ್ಭಸಾಕ್ಯಾ (ವಾಸಕ್ಕಾ?)ಗಿ ಬಂದಿತು ನೀನೀಗ ದಾಟಿ ಪೋಗುವರೆ ಕೇಳಿ ಸಂಭ್ರಮದಿಂದ ಹೇಳೆ ರಾಜಗೆ ಬಂದು ತಾಳಿದ ಪರಮ ಹರುಷವನು 5 ಸದ್ದು ಮಾಡದೆ ಸೂಲಗಿತ್ತಿ ಕರೆಸಿ ತಾ- ನಿದ್ದ ವಾರ್ತೆಗಳ ಹೇಳಿದಳು ಮುತ್ತಿಲು ತುಂಬ್ಹೊನ್ನು ಕೊಡುವೆ 6 ಹುಡುಕುತ ಬಂದಳು ಕಡೆಯ ಬಜಾರಕ್ಕೆ ಬಡವ ಬ್ರಾಹ್ಮಣನ ಮಂದಿರದಿ ಮಡದಿಗೆ ಮೂರು ತಿಂಗಳು ಗರ್ಭವಾಗಿದೆ ಕÀಡೆಹಾಯ್ಸಲೆನ್ನ ಕರೆಸೆಂದ್ಲು 7 ಮೂರು ತಿಂಗಳ ರಾಜನರಸಿಗೆ ಮೊಗ್ಗೆಯು ಏಳು ತಿಂಗಳು ಹೂವ ಮುಡಿಸಿ ಎಂಟು ತಿಂಗಳಿಗೆ ಶ್ರೀಮಂತದುತ್ಸವ ಮಾಡಿ ಬಂತಾಗ ನವಮಾಸಗಳು 8 ವಿಪ್ರನ ಮಡದಿಗೆ ಒತ್ತಿ ಬಂದವು ಬ್ಯಾನೆ ಕಟ್ಟಿ ಕಣ್ಣುಗಳ ನಿಚ್ಚಣಿಕೆ ಹತ್ತಿ ಇಳಿದು ಹಡೆದಳ ಗಂಡುಕುಮಾರನ ಎತ್ತಿಕೊಂಡೊಯ್ದಳಾಕ್ಷಣವೆ 9 ಕಲ್ಲು ಗುಂಡನೆ ಹಡೆದಿಯೆ ನೀನೆಂಬಂಥ ಸೊಲ್ಲು ಕೇಳುತಲೆ ತಲ್ಲಣಿಸಿ ಎಲ್ಲಿದ್ದರೆನ್ನ ಕುಮಾರನು ಸುಖಬಾಳಲೆಂ- ದಲ್ಲಿ ನೇಮವ ನಡೆಸಿದಳು 10 ಜಾತಕ ಬರೆಸಿ ಸಕ್ಕರೆ ಸಗಟದಿಂದ್ಹಂಚಿ ದಕ್ಷಿಣೆ ತಾಂಬೂಲ ಸಹಿತ ಬ್ರಾಂಬರಿಗೆಲ್ಲ ಇಟ್ಟು ಭೋಜನವ ಮಾಡಿಸಿದ 11 ನಾಮಕರಣ ಜಾವಳ ಜುಟ್ಟು ಉಪÀನಯನ ಪ್ರೇಮದಿಂದ್ವಿದ್ಯವ ಕಲಿಸಿ ಸೋಮನಂದದಿ ಹೊರಗ್ಹೊರಟು ತ- ಮ್ಮಮ್ಮನ ನೋಡಿ ಮೋಹಿಸಿದÀನಾಕ್ಷಣದಿ 12 ಕತ್ತಲೊಳಗೆ ಬರುತಿರಲು ಬಾಗಿಲ ಮುಂದೆ ಕಟ್ಟಿದ ಗೋವು ಕಾಣದಲೆ ವತ್ಸದ ಕಾಲು ತುಳಿಯಲಾಗ ಅದು ಬಾಯಿ ಬಿಟ್ಟೊದರಿತು ಭಯದಿಂದ 13 ಅಮ್ಮ ನೀ ಬಾರೆ ತಮ್ಮಮ್ಮನರಿಯದವ ನಮ್ಮನು ಬಲ್ಲನೆ ಒಮ್ಮ್ಯಲ್ಲದೆರಡುಬಾರ್ಯಾಲಿಸ್ಯದರ ಮಾತು ತಮ್ಮಿ ್ಹರಿಯರನು ಕೇಳಿದನು 14 ಮಂದಾಕಿನಿಯ ಸ್ನಾನವ ಮಾಡಿ ಬಂದರೆ ಸಂದೇಹ ಪರಿಹಾರವಾಗುವುದು ಹಾ- ಗೆಂದು ಹೇಳಿದ ಹಿರಿಯರ ವಾಕ್ಯವ ಕೇಳಿ ಗಂಗಾಯಾತ್ರೆಗೆ ತೆರಳಿದನು 15 ನಡೆದು ಬಂದನು ನಡುಮಾರ್ಗದಿ ಪಟ್ಟಣ ಹಡೆದ ಮನೆಯ ಬಾಗಿಲಲ್ಲಿ ಕೊಡಬೇಕು ನಮಗಿಷ್ಟು ಸ್ಥಳಗಳೆಂದೆನುತಲಿ ನುಡಿದು ಪವಡಿಸಿದ ತಾನಲ್ಲಿ 16 ಹೊರಗಿಂದ ಶೆಟವಿ ಬಂದಳು ಮಹಾಲಕ್ಷುಮಿ ಒಳಗಿಂದ ಬಂದಳು ಎನ್ನ ವರಪುತ್ರ ಇವನ ದಾಟಲು ನಿನ್ನ ಶಿರವು ಸಿಡಿದು ಸಾ(ಸಹ?)ಸ್ರೊ ್ಹೀಳಾಗೋದೆನಲು17 ಅದು ಕೇಳಿ ಶೆಟವಿ ತಾ ತಿರುಗಿ ಪೋಗುತಲಿರೆ ಬದಿಯಲ್ಲಿ ಬದುಕಿದ್ದ ಶಿಶುವು ಇದು ನಿನ್ನ ಪುಣ್ಯದಿಂದುಳಿದಿತೆಂದೆನುತಿರೆ ಅಧಿಕ ಸಂತೋಷವಾಗಿ ಹೊರಟು 18 ಭಾಗೀರಥಿಯ ಸ್ನಾನವಮಾಡಿ ತಾನು ಪ್ರ- ಯಾಗಕೆ ನಡೆತರಲು ಬ್ಯಾಗ ಮಾಡಿದ ದಾನಧರ್ಮಕಾರ್ಯಗಳ ತಾ- ನಾಗ ಕಂಡನು ಚತುರ್ಹಸ್ತ 19 ನಾಲ್ಕು ಹಸ್ತಗಳ ಕಂಡಕಾರಣೇನೆಂದು ವ್ಯಾ- ಕುಲದಿಂದ ಕೇಳಿದನು ಸಾಕಿದವರು ಹಡೆದವರುಂಟು ನಿನಗೆಂದ್ವಿ- ವೇಕಬುದ್ಧಿ ಅವರು ಹೇಳಿದರು 20 ಗೊತ್ತಿಲೆ ಬಂದನು ಪಟ್ಟಣದೊಳಗೊಂಡು ಹೆತ್ತರಂದಿನದ (?) ಮಂದಿರದಿ ಹೊಸ್ತಿಲೊಳಗೆ ಅಡ್ಡಮಲಗಿದ್ದ ಕಾಲಕ್ಕೆ ಮತ್ತಾಗ ಬಂದಳು ಶೆಟವಿ 21 ಚೊಚ್ಚಿಲ ಮಗನ ದಾಟಲು ನಿನ್ನ ಶಿರವು ಬಿಚ್ಚಿ ಸಾಸ್ರೊ ್ಹೀಳಾಗೋದೆನಲು ಲಕ್ಷ್ಮಿ ಮಾತಿಗೆ ತಿರುಗಿದಳೆನ್ನ ತುತ್ತಿಗೆ ಮಿತ್ರ್ಯಾದ ಪಾಪಿ ಎಂದೆನುತ 22 ಸತ್ಯವಂತನೆ ನಿನ್ನ ಪುಣ್ಯದಿಂದಿಬ್ಬರು ಪುತ್ರರು ಉಳುದÀರಂತಿಹರು
--------------
ಹರಪನಹಳ್ಳಿಭೀಮವ್ವ