ಒಟ್ಟು 15 ಕಡೆಗಳಲ್ಲಿ , 13 ದಾಸರು , 15 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವಿನ ನೋಡಿರೋ ಕರುಣವ ಪಾಡಿರೋ ಪ ದೀನ ಜನರ ಅಭಿಮಾನಿ ನಿಜ ಸುಖದಾನಿ ಮಹಾಸುಜ್ಞಾನಿ | ಸ್ವಾನುಭವ ದಾಗರ ಗುಣಗಂಭೀರ ಪರಮ ಉದಾರ | ಮೂರ್ತಿ ವಿಮಲ ಸುಕೀರ್ತಿ | ಭರಿತನಾದಸುರ ಚರಿತನು 1 ವಿಡಿಯುತ ಕುರುಹು | ನಿರುತ ತತ್ವದ ಬೊಂಬೆಯೆನೆ ಸುಖದಿಂಬೆ ಅದು ಏನೆಂಬೆ | ನರ ಶರೀರದೆ ಬಂದ ಪರಗೃಹಲಿಂದಲ್ಯಾಡೊದ ಛಂದ | ವಿರಾಗದೋರಿದ ಯೋಗನು 2 ಬೆಳೆಯದೋರಿದ ಕಳೆಯ | ಮರೆದ ಮುನ್ನಿನ ಠಾವ ದೋರಿಸಿ ಜೀವನ್ಮುಕ್ತಿಯ ನೀವ | ನಮೋ ನಮೋ ಎಂದೆ | ಕರುಣವ ಮಾಡಿದ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಚಾರು ಶ್ರೀ ಕುಶನದಿ ತೀರದಲ್ಲಿರುತಿಹನ್ಯಾರೆ ಪೇಳಮ್ಮಯ್ಯ ಸಾರಯತೀಶ್ವರ ಧೀರ ಸುಗುಣಗಂಭೀರ ವಿಷ್ಣುತೀರ್ಥಾರ್ಯಕಾಣಮ್ಮಾ ಪ ಇವನಾರೆ ಪೇಳಮ್ಮಯ್ಯ ವೃಂದಾವನದಲಿ ಬಂದಿರುವರು ಮತ್ತಲ್ಲಿ ನೋಡಮ್ಮಯ್ಯಾ ಗಂಧಾಕ್ಷತ ನೋಡಮ್ಮಯ್ಯ ವಿಷ್ಣು ತೀರ್ಥಾರ್ಯ ಕಾಣಮ್ಮಾ 1 ಬೆನ್ಹಿಂದೆ ನೋಡಮ್ಮಯ್ಯ ಇಹನೂ ನೋಡಮ್ಮಯ್ಯ ತೀರದಲ್ಲಿಹನಮ್ಮಾ ತೀರ್ಥಾರ್ಯ ಕಾಣಮ್ಮಾ 2 ನೋಡಮ್ಮಯ್ಯಾ ನೋಡಮ್ಮಯ್ಯ ಪುರವಾಸಾ ಕಾಣಮ್ಮ ವಿಷ್ಣು ತೀರ್ಥಾರ್ಯ ಕಾಣಮ್ಮ 3
--------------
ಅನಂತಾದ್ರೀಶರು
ಧೀರ ಶೂರನ್ನ ಗುಣಗಂಭೀರ ಶೂರನ್ನಪೋರತನದ ಈ ನಾರಿಯರನೆಚ್ಚದಿರು ವೀರ ಶೂರನ್ನ ಪಲ್ಲ ಎಲ್ಲ ಮಂಗಳಕಾರ್ಯ ಕಲ್ಲು ಒರಳು ಪೂಜೆ ಬಲ್ಲನಾರಿಯರು ನಗದಿರಿಬಲ್ಲ ನಾರಿಯರು ನಗದಿರಿ ಲಕ್ಷ್ಮಿವಲ್ಲಭಇದಕೆ ಒಲಿಯಲಿ 1 ತುಂಬಿ ಕುಂಕುಮ ಮಾಡಿ ಅರೆದೆವಕುಂಕುಮ ಮಾಡಿ ಅರೆದು ಬೀಸಿದೆವಮ್ಮ ಪಂಕಜನಾಭ ಒಲಿಯಲಿ2 ತುಂಬಿ ಅರಿಷಿಣ ಮಾಡಿ ಅರೆದೆವ ಅರಿಷಿಣ ಮಾಡಿ ಅರೆದು ಬೀಸಿದೆವಮ್ಮಸರಸಿಜನಾಭಒಲಿಯಲಿ 3 ತುಂಬಿ ಗಂಧವ ಮಾಡಿ ಅರೆದೆವಗಂಧವ ಮಾಡಿ ಅರೆದು ಬೀಸಿದೆವಮ್ಮಇಂದಿರೆಯರಸು ಒಲಿಯಲಿ4 ತುಂಬಿ ಬುಕ್ಕಿಟ್ಟು ಮಾಡಿ ಅರೆದೆವಬುಕ್ಕಿಟ್ಟು ಮಾಡಿ ಅರೆದು ಬೀಸಿದೆವಮ್ಮ ಧಿಟ್ಟ ರಾಮೇಶÀ ಒಲಿಯಲಿ 5
--------------
ಗಲಗಲಿಅವ್ವನವರು
ನಾರಿ ನಾನರಿಯೆನೆ ನಿನ್ನಯ ಮಹಿಮ ಕರುಣದಿ ಇಡು ಪ್ರೇಮ ಪ ಬಾರಿ ಬಾರಿಗೆ ನಿನ್ನ ಭಜಿಸುವ ಭಕ್ತರ ಪಾರುಗಾಣಿಸಿ ಪೊರೆ ನಾರಿ ಶಿರೋಮಣಿ ಅ.ಪ ಕನಸು ಮನಸಿನೊಳ್ ನಿನ್ನಯ ಧ್ಯಾನ ಬಿಡದಲೆ ನಾ ಇನ್ನ ನೆನಸಿ ನೆನಸಿ ಸುಖಿಸುವೆ ಮುನ್ನ ವನಜಾಕ್ಷಿಯೆ ನಿನ್ನ ಅನುದಿನ ನಿನ್ನನು ಸ್ಮರಿಸುವ ಸುಜನರ ಘನವನುಳುಹಿ ಕಾಯೆ ಮನಸಿಜನ ತಾಯೆ 1 ಸೃಷ್ಟಿಯೊಳಗೆ ಶೆಟ್ಟಿ ಕೆರೆಯ ತಟದಲಿ ನೀ ನಿಂತು ಶ್ರೇಷ್ಠಳೆನಿಸಿ ಭಕ್ತರ ಮೊರೆಯ ನಿತ್ಯದಿ ನೀನರಿತು ಇಷ್ಟದಿ ಕೇಳುತ ಶಿಷ್ಟಜನರ ಅಘ ಹಿಟ್ಟುಮಾಡಿ ಕಾಯೆ ಶ್ರೀ ಕೃಷ್ಣನ ಜಾಯೆ 2 ಮದನನಯ್ಯನ ಮೋಹದ ರಾಣಿ ಮದಮುಖದ ಶ್ರೇಣಿ ವಧಿಸಿದ್ಯೆಲೆ ಪರಮ ಕಲ್ಯಾಣಿ ಜಗದೊಳಗತಿ ಜಾಣೆ ಸದನ ಮಾಡಿಕೊಂ ಡೊದಗಿ ಭಕ್ತರ ಮುದವಪಡಿಸಿದ್ಯೆಲೆ 3 ಜಗದೊಳು ನಿನಗೆ ಸರಿಯಾರೆ ಪರಿಪರಿ ವಯ್ಯಾರೆ ಅಗಣಿತ ಗುಣಗಂಭೀರೆ ಸುಂದರ ಸುಕುಮಾರೆ ಬಗೆಯಲಿ ಎನ್ನವಗುಣಗಣ ವೆಣಿಸದೆ ಸೊಗದಿಂದಲಿ ಕಾಯೆ ನಗಧರನ ಪ್ರಿಯೆ 4 ಅನುವನರಿತು ಪಾಲಿಸು ಮುನ್ನನಂಬಿದ ಮನುಜರನ ಅನುದಿನ ನಿನ್ನ ಪಾದಧ್ಯಾನ ಮನಸಿಗೆ ಕೊಟ್ಟೆನ್ನ ವನಜಾಕ್ಷಶ್ರೀ ಪ್ರಾಣನಾಥ ವಿಠಲನ ಸನ್ನಿಧಾನವಿತ್ತು ಮನ್ನಿಸು ತಾಯೆ 5
--------------
ಬಾಗೇಪಲ್ಲಿ ಶೇಷದಾಸರು
ಭಜರೇ ಹನುಮಂತಂ | ಮಾನಸಭಜರೇ ಹನುಮಂತಂ ಪ ಕೋಮಲ ಕಾಯಂ ನಾಮ ಸುದೇವಂ |ಭಜ ಸಖಸಿಂಹಂ ಭೂಸುರ ಶ್ರೇಷ್ಠಂ1 ಮೂರ್ಖ ನಿಶಾಚರ ವನ ಸಂಹಾರಂ |ಸೀತಾ ದುಃಖ ವಿನಾಶಕಾರಂ 2 ಪರಮಾನಂದ ಗುಣೋದಯ ಚರಿತಂಕರುಣಾರಸ ಸಂಪೂರ್ಣ ಸುಭರಿತಂ3 ರಣರಂಗ ಧೀರಂ ಗುಣಗಂಭೀರಂದಾನವ ದೈತ್ಯಾರಣ್ಯ ಕುಠಾರಂ 4 ಗುರು ಚೆನ್ನಕೇಶವ ಕದಳೀ ರಂಗಂಸ್ಥಿರ ಸದ್ಭಕ್ತಂ ಮುಖ್ಯಪ್ರಾಣಂ 5
--------------
ಕನಕದಾಸ
ರಂಗ ಬಂದ ಬೃಂದಾವನದಲಿ ನಿಂದಕೊಳಲಿನ ಧ್ವನಿ ಬಹು ಚೆಂದ ಪ ನಂದಗೋಪಿಯರ ಕಂದ ಮುಕುಂದಸುಂದರಿಯರ ಆನಂದ ಗೋವಿಂದ ಅ.ಪ ಮಂದಗಮನೇರ ಕೂಡಿ ಸರಸವನಾಡುತಇಂದಿರೆಯರಸ ನಗುತ ಕೊಳಲನೂದುತಎಂದೆಂದಿಗೂ ತನ್ನ ನಂಬಿದ ಭಕ್ತರಬಂದು ಪೊರೆವ ಗೋವಿಂದ ಮುಕುಂದ 1 ಉದಧಿ ಸಂಚಾರ ಗುಣಗಂಭೀರನವನೀತದಧಿ ಭಾಂಡಚೋರ ರುಗ್ಮಿಣಿ ಮನೋಹರಮದನ ಗೋಪಾಲನು ಭಜಿಸುವ ಭಕುತರಹೃದಯದೊಳಗೆ ನಿಂದು ಮುದವನು ಕೊಡುವ2 ಮಧುರೆಯಿಂದಲಿ ಬಂದ ಮಾವನ್ನ ಕೊಂದಕಡೆಗೋಲ ನೇಣ ಕೈಲಿ ಪಿಡಿದ ದ್ವಾರಕಾವಾಸಹಡಗಿನಿಂದಲಿ ಬಂದು ಉಡುಪಿಲಿ ನೆಲೆಸುತಬಿಡದೆ ಪೂಜೆಗೊಂಬ ಒಡೆಯ ಶ್ರೀಕೃಷ್ಣ3
--------------
ವ್ಯಾಸರಾಯರು
ರಾಧಕೃಷ್ಣಪಾಲಿಸೊ ರಾಧಕೃಷ್ಣಪಾಲಿಸೊ ಪ ನವನೀತ ಚೋರ ಅಗಣಿತ ಗುಣಗಂಭೀರ 1 ಉದಧಿ ಶಯನ ಉಡುರಾಜವದನ ಮದಮುಖ ಕಂಸಾಸುರನ ಮದನಿವಾರಣ 2 ಗಾನವಿನೋದನೆ ದೀನಾಧಾರನೆ ಪ್ರಾಣನಾಥವಿಠಲನೆ ಪವನಾತ್ಮನೇ 3
--------------
ಬಾಗೇಪಲ್ಲಿ ಶೇಷದಾಸರು
ರಾಮ ಸಲಹಯ್ಯ ಪುಣ್ಯನಾಮ ಶ್ರೀ ರಾಘವೇಂದ್ರ ಪೂರಿತಕಾಮ ನೇಮ ಶ್ಯಾಮ ಪರಮಗುಣ ರತ್ನಧಾಮ ಧ್ರುವ ವನಜಾಂತಕ ಕುಂದರದನ ಅನುಪಮ ಸುಂದರವದನ ಸದನ 1 ಕರುಣ ಶರಣ ಭರಣ ಭರಣ ಧರಣೋದ್ಧಾರಣ ಸ್ಪುರಣ ಕಿರಣದೊರಣ ಚರಣ ಅರುಣಾಂಬುಜಾಲಯರಮಣ 2 ವೀರಗುಣಗಂಭೀರ ಕ್ರೂರಾಸುರ ಸಂಹಾರ ಶೂರ ಜನ್ಮವಿದೂರ ಮಹಿಪತಿ ಧೀರ ಕೃಷ್ಣೊಡಿಯ ಉದಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ರಾಯರ ನೋಡಿರೈ ಶ್ರೀ ಗುರು |ರಾಯರ ಪಾಡಿರೈ |ಶ್ರೀ ಯರಸನ ಪ್ರಿಯಕಂಜಾಪ್ತಾಭಸು |ಕಾಯ ಕವಿಜನಗೇಯಾ ಪ ಶ್ರೀ ಸುಧೀಂದ್ರ ಕರಕಮಲದಲಿ ಸಂಭೂತಾ |ಬಹು ವಿಖ್ಯಾತಾ |ಶ್ರೀಶನ ಗುಣಗಳ ತುತಿಸುವ ಯತಿ ಶಿರೋಮಣಿಯೊ | ಚಿಂತಾಮಣಿಯೊ |ಈ ಸುಜನರ ಮನಸಿಗೆ ತೋರುವದಹಲ್ಲಾದಾ |ಶಿರಿ ಪ್ರಲ್ಹಾದಾ 1 ದಂಡಕಮಂಡಲ ಕಾಷಾಯವು ಸೂವಸನಾ |ವೇದ ವ್ಯಸನಾ |ಪುಂಡರೀಕ ಪದಭೃಂಗಾ ಮುನಿಕುಲೋತ್ತುಂಗಾ |ಕರುಣಾಪಾಂಗಾ |ಮಂಡಲದೊಳು ಬಹುತೋಂಡರ ಪರಿಪಾಲಕಾ |ವರ ಬಾಹ್ಲೀಕಾ 2 ತುಂಗಾ ತೀರದಿ ಮಂತ್ರಾಲಯದೊಳಗಿರುವೊ |ಕಲ್ಪ ತರುವೊ |ಗಂಗಾಜನಕ ವಿಹಂಗವಾಹನ ಇಲ್ಲಿಹನು |ನತ ಸುರದೇನು |ಮಂಗಳ ಮಹಿಮರ ದರುಶನ ಮಾತ್ರಾ ಫನಾಶಾ |ಶ್ರೀ ಗುರುವ್ಯಾಸಾ 3 ಪರಿಮಳ ವಿರಚಿಸಿ ಬುಧರಿಗೆ ಬೀರಿದದೀಶಾ |ಗುಣಗಂಭೀರಾ |ಪರಿಪರಿ ಚರಿತೆಯ ತೋರ್ದಭೂದೇವರ ದೇವಾ |ದೇವ ಸ್ವಭಾವಾ |ನರ ಇವರನು ಕ್ಷಣಬಿಡದಲೆ ಭಜಿಸಲು ಸುಖವೊ |ಅಹಿಕಾಮುಕವೊ (ಅಘ ಪರಿಹರವೊ) 4 ದುಷ್ಟ ಮತವ ಖಂಡಿಸಿ ಹರಿಪರನೆಂದೊರೆದಾ |ಭೀಷ್ಟಿಯಗರದಾ |ಸೃಷ್ಠಿಯೊಳಗೆ ಶ್ರೀಶ ಪ್ರಾಣೇಶ ವಿಠ್ಠಲನದಾಸಾಮುನಿಕುಲೋತ್ತಂಸಾ |ಎಷ್ಟು ಪೊಗಳಲಾಶಕ್ಯವು ಸದ್ಗುಣ ಸಾಂದ್ರಾ |ಶ್ರೀ ರಾಘವೇಂದ್ರಾ 5
--------------
ಶ್ರೀಶಪ್ರಾಣೇಶವಿಠಲರು
ಶಂಕರ ಗುರುವರ ಮಹದೇವ ಭವ- ಸಂಕಟ ಪರಿಹರಿಸಯ್ಯ ಶಿವ ಪ. ಸಂಕಲ್ಪ ವಿಕಲ್ಪಮನೋನಿಯಾಮಕ ಕಿಂಕರಜನಸಂಜೀವ ಅ.ಪ. ಭಾಗವತರರಸ ಭಾಗೀರಥೀಧರ ಬಾಗುವೆ ಶಿರ ಶರಣಾಗುವೆ ಹರ ಶ್ರೀ ಗೌರೀವರ ಯೋಗಿಜನೋದ್ಧರ ಸಾಗರಗುಣಗಂಭೀರ 1 ರಾಯ ಲಕ್ಷ್ಮೀನಾರಾಯಣ ಭಕ್ತಿಪ- ರಾಯಣ ತ್ರಿನಯನ ಪುರಹನ ಕಾಯಜಮಥನ ಮುನೀಂದ್ರ ಸಿದ್ಧಜನ- ಗೇಯಸ್ವರೂಪೇಶಾನ 2
--------------
ತುಪಾಕಿ ವೆಂಕಟರಮಣಾಚಾರ್ಯ
ಸರಿ ತ್ವರದಿ ನೀ ಕರುಣಾವು ಪ ಸಾರೋ ಸಾರಿಗೆ ಬಂದದೊಮೋಹನೀನಾ ಭಾರಿಪುಟ್ಟಿ ಪುಟ್ಟಿ ಮಾರ ಗುಣಗಂಭೀರಾ ಈ ಪರಿ ಇರಲು ತೋರೋ ನಿನ್ನಯ ಚರಣಾರ ವಿಂದಗಳಿಂದೂ 1 ಬಾಧೆಗೆ ಒಳಗಾಗಿ ಧ್ಯಾನಚಿತ್ತಕೆ ಬಾರದೊ ಈ ಮಹಾ ಭಕ್ತನಕೈಯ ಹಿಡಿದು ರಕ್ಷಿಸು ಇಂದೂ 2 ಇಂದು ನೀನೆ ಬಂಧುಬಳಗ ಮುನ್ನ ಪಾದ ಬಂದವರಾನಂದದಿ ಕಂಡು ಮುಕುಂದ 'ಹೊನ್ನೆಯ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ಜಯ ಪಾಂಡುರಂಗ ಹೋ ಜಲದ ನಿಭಾಂಗ ಹೋ|ಜಗದಂತರಂಗ ಹೋ ಜಯ ಪಾಂಡುರಂಗ ಹೋ ಪನೀಲಭೂಧರವಾಸಕೌಸ್ತುಭಭೂಷ ರಮೆಯಾಧೀಶಸುಮನಸ|ಪಾಲ ಗುಣಗಂಭೀರ ನವನೀತಚೋರ ಕುಜನಕುಠಾರ| ನರಹರಿ ||ಫಾಲಲೋಚನಬಂಧು ದೈತ್ಯನ ಕೊಂದು ವೇದವ ತಂದು ದ್ರುಹಿಣಗೆ |ಮೇಲು ಶರುಣುದಲಿತ್ತೆ,ಮಂದರಪೊತ್ತೆ ಸುಂದರ ಮೂರ್ತಿ 1ನಿಗಮವಂದಿತ ರಾಮಹರಿಪೂರ್ಣ ಕಾಮ ಸದ್ಗುಣಧಾಮ, ವಾಮನ |ಮಗನ ಮೂಗಿಲಿ ಪುಟ್ಟಿ, ಹೇಮನ ಕುಟ್ಟಿ,ಅವನಿತಂದಿಟ್ಟಿ, ಈರೇಳು ||ಜಗದಿ ಪೂಜಿತನಾದಿ ಕೈಟಭ ಭೇದಿ ಇಭಪನ ಕಾಯ್ದಿ, ಪ್ರಣತರ |ಅಘವನೋಡಿಸುತಿಪ್ಪ ಹಲಾಯುಧತಲ್ಪಮನ್ಮಥನಪ್ಪ 2ವೇದ ವಿಸ್ತರ ಮಾಡ್ಡೀ, ದಾನವ ಬೇಡ್ಡೀ, ದನುಜನಿಗ್ಯೋಡ್ಡೀ, ಕುರುಕುಲ |ಸೂದನ, ಕಿರೀಟ ಸೂತ, ಪವಮಾನ ತಾತ, ದುರ್ಬಲನಾಥ ಎನ್ನನು ||ಆದರದಿ ಕೈಪಿಡಿಯೋ, ದುರಿತವ ತಡೆಯೊ, ದುರ್ಮತಿ ಕಡಿಯೊ,ಅಗಣಿತ|ಮೋದಪ್ರಾಣೇಶ ವಿಠಲ, ನರಮೃಗ, ನಿಟಿಲನೇತ್ರ, ಅಕುಟಲ3
--------------
ಪ್ರಾಣೇಶದಾಸರು
ಶಂಕರ ಗುರುವರ ಮಹದೇವ ಭವ-ಸಂಕಟ ಪರಿಹರಿಸಯ್ಯ ಶಿವ ಪ.ಸಂಕಲ್ಪ ವಿಕಲ್ಪಮನೋನಿಯಾಮಕಕಿಂಕರಜನಸಂಜೀವ ಅ.ಪ.ಭಾಗವತರರಸ ಭಾಗೀರಥೀಧರಬಾಗುವೆ ಶಿರ ಶರಣಾಗುವೆ ಹರಶ್ರೀ ಗೌರೀವರ ಯೋಗಿಜನೋದ್ಧರಸಾಗರಗುಣಗಂಭೀರ 1ರಾಯ ಲಕ್ಷ್ಮೀನಾರಾಯಣ ಭಕ್ತಿಪ-ರಾಯಣ ತ್ರಿನಯನ ಪುರಹನಕಾಯಜಮಥನ ಮುನೀಂದ್ರ ಸಿದ್ಧಜನ-ಗೇಯಸ್ವರೂಪೇಶಾನ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ವೆಂಕಟೇಶ ಸಲಹು ವೆಂಕಟೇಶಭಾವಿಕ ಸೇವಕ ಭವಭಯನಾಶ ಪ.ಸುರಾರಿ ಗಜಗಳೆಂಬ ಗಣಕೆಕಂಠೀರವಕರಿರಾಜ ಸಂಕಟ ಛಿತ್ತ ದೇವಪರಮಭಾಗವತರ ಸಮೂಹ ಸಂಜೀವನಪುರಹರವರಮತ್ತವೃಕ( ಷ?)ಮಥನ 1ವನಜಭವ ಸವಿೂರರೊಡೆಯ ಶ್ರೀರಮಣಮುನಿ ಹೃದಯಾಲಯ ಪರಿಪೂರ್ಣಫಣಿವರಶಾಯಿಪರಾತ್ಪರಅಗಣಿತಗುಣಗಂಭೀರ ಜಗದದಾತ2ಶುಕಶೌನಕ ಸನಕಾದಿ ದೇವಋಷಿಸಕಳ ಸುರಭೂಸುರ ರಾಜಾಧೀಶಭಕುತವತ್ಸಲಬಾದರಾಯಣಹರಿಹಯಮುಖ ಪ್ರಸನ್ವೆಂಕಟ ಗಿರಿನಿಲಯ 3
--------------
ಪ್ರಸನ್ನವೆಂಕಟದಾಸರು
ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು