ಒಟ್ಟು 5 ಕಡೆಗಳಲ್ಲಿ , 5 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶ ಮಾಧವ ಮಧುರಿಪು ಮಾನುಷವೇಷ ಶರಣಾಗತಪೋಷಪ. ವೇದಾಗಮ್ಯ ದಯೋದಧಿ ಗೈದಪ- ರಾಧ ಕ್ಷಮಿಸಿ ಸುಗುಣೋದಯನಾಗುತಅ.ಪ. ಅನಾಥ ಜನರ ಕಾಮಧೇನು ಕಾಯೊ ಎಮ್ಮನು ದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನು ಆನತಜನ ಸುತ್ರಾಣಿಸುವಂತೆ ಪ್ರ- ದಾನಿಯಂತೆ ಶತಭಾನು ಪ್ರಕಾಶದಿ1 ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮ ಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮ ಕಾಟಕ ಮನಸಿನ ಮಾಟವ ನಿಲ್ಲಿಸಿ ಘೋಟಕಾಸ್ಯ ನರನಾಟಕಧಾರಿ2 ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆ ಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆ ಕಾಣಿಸದೆಮ್ಮಲಿ ಮೌನವ ಮಾಳ್ಪರೆ ದೀನಜನರ ದುಮ್ಮಾನಗೊಳಿಸುವರೆ 3 ಹಿಂದೆಮ್ಮ ಕಾಯ್ದವ ನೀನೆ ಹರಿ ಸುರನರ ಕೈವಾರಿ ಮಂದಜ್ಞಾನಿಗಳ ತಪ್ಪನು ಮಾರಿ ಮೂರ್ಲೋಕೋದ್ಧಾರಿ ಹೊಂದಿದವರಿಗೆಂದೆಂದಿಗು ಬಿಡನೆಂ- ಬಂದವ ತೋರಿ ಆನಂದವ ಬೀರುತ 4 ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದ ಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದ ಒಪ್ಪಿಸಿದೆಮ್ಮಭಿಪ್ರಾಯವ ತಿ- ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮನ್ಮನೋಹಾರಕ ಪ ರಾಮ ದಶರಥ ರಾಮ ಮಂಗಳನಾಮ ಶ್ರೀ ರಘುರಾಮ ಗುಣಗಣಧಾಮ ಸಜ್ಜನಪ್ರೇಮ ಹೇ ಜಯ ರಾಮ ಸೀತಾರಾಮ ರಘುವರ ಅ.ಪ ಕೂಡಲು ಕೋಪದಿ ಗೌತಮಮುನಿ ತರಳೆಯ ಶಪಿಸಿರಲು ಕಲ್ಲಾಗಿ ಬಿದ್ದಿರೆ ಪಾದಗಳ ರಜದಿಂ ಸುವಾರ್ತೆಯ ಕೇಳಿ ಬಂದಿಹೆ 1 ಗಿಡ ಮರವಲೆದು ತಂದು ಫಲಮೂಲಗಳನು ಒಡೆಯ ನೀ ಬರುವೆಯೆಂದು ಕೇಳುತ ತಾನು | ಬಡವರೊಡೆಯ ನೀನೆಂದರಿತು | ಕಡುಹಿತದೊಳೆಂಜಲ ಫಲಗಳುಣಿಸಲು| ಕೇಳಿ ಬಂದಿಹೆ 2 ಛಲದಲೋಡಿಸಿ ರಾಜ್ಯದಿ ಗೆಳೆಯ ಮಾರುತಿಯಿಂದಲರಿತು ಗಳಿಸಿದ್ವಾರ್ತೆಯ ಕೇಳಿ ಬಂದಿಹೆ 3 ಸತಿ ವರಪತಿವ್ರತೆ ಸೀತೆಯ ಪರಿಪರಿಯಿಂದಲಿರದೆ ದುರುಳ ರಾವಣನ ಭಂಗಿಸಿ ಹೊರದೂಡಲವ ನರಸಿ ನಿನ್ನಯ ಪರಮ ಪಾದಾಶ್ರಯವ ಬೇಡಲು ಪೊರೆದ ವಾರ್ತೆಯ ಕೇಳಿ ಬಂದಿಹೆ4 ಪರಮಪುರುಷ ನೀನೆಂದು ನಂಬಿದೆ ಸಿರಿಯರಸ ಪ್ರಭುವು ನೀನೆಂದು ಚರಾಚರ ಗುರುವು ಪ್ರಭುವು ನೀನೆಂದು ಇಂದು ತರಣಿ ಮಣಿ ಸಾರ್ವಭೌಮನೆ ಶರಣರಘ ಕೋಟಿಗಳ ಕಳೆವನೆ ಶರಣ ಬಂದಿಹೆನೆನ್ನ ಪಾಲಿಸದಿರುವರೇ ರಘುರಾಮ ವಿಠಲ 5
--------------
ರಘುರಾಮವಿಠಲದಾಸರು
ಬಾ ದೀನವತ್ಸಲ ಲಕ್ಷ್ಮೀನಿವಾಸ ಶ್ರೀವೆಂಕಟೇಶಮಾಧವಮಧುರಿಪು ಮಾನುಷವೇಷ ಶರಣಾಗತಪೋಷಪ.ವೇದಾಗಮ್ಯ ದಯೋದಧಿ ಗೈದಪ-ರಾಧ ಕ್ಷಮಿಸಿ ಸುಗುಣೋದಯನಾಗುತ ಅ.ಪ.ಅನಾಥ ಜನರ ಕಾಮಧೇನು ಕಾಯೊ ಎಮ್ಮನುದಾನವಕಾನನಕಲ್ಪಕೃಶಾನು ಸರ್ವೋತ್ತಮ ನೀನುಆನತಜನ ಸುತ್ರಾಣಿಸುವಂತೆ ಪ್ರ-ದಾನಿಯಂತೆ ಶತಭಾನು ಪ್ರಕಾಶದಿ 1ಕೋಟಿ ಬ್ರಹ್ಮಾಂಡವ ಕಾಯುವ ಮಹಿಮ ಸದ್ಗುಣಗಣಧಾಮಹಾಟಕವಸನ ಕೈರವಶ್ಯಾಮ ಮುನಿಮನವಿಶ್ರಾಮಕಾಟಕ ಮನಸಿನ ಮಾಟವ ನಿಲ್ಲಿಸಿಘೋಟಕಾಸ್ಯ ನರನಾಟಕಧಾರಿ 2ಸೇನಾನಾಯಕನಿಲ್ಲದ ಸೇನೆ ಕಂಡರೆ ತಾನೆಭೂನಾಥಗಿಲ್ಲವೇನು ಬೇನೆ ಉಂಟೆಂಬುದು ನೀನೆಕಾಣಿಸದೆಮ್ಮಲಿ ಮೌನವ ಮಾಳ್ಪರೆದೀನಜನರ ದುಮ್ಮಾನಗೊಳಿಸುವರೆ 3ಹಿಂದೆಮ್ಮ ಕಾಯ್ದವ ನೀನೆಹರಿಸುರನರ ಕೈವಾರಿಮಂದಜ್ಞಾನಿಗಳ ತಪ್ಪನುಮಾರಿಮೂರ್ಲೋಕೋದ್ಧಾರಿಹೊಂದಿದವರಿಗೆಂದೆಂದಿಗು ಬಿಡನೆಂ-ಬಂದವ ತೋರಿ ಆನಂದವ ಬೀರುತ 4ಸರ್ಪಾದ್ರಿಯಿಂದ ಓಡಿಬಂದ ಕಾರ್ಕಳದೊಳು ನಿಂದಚಪ್ಪರ ಶ್ರೀನಿವಾಸ ಮುಕುಂದ ಪರಿಪೂರ್ಣಾನಂದಒಪ್ಪಿಸಿದೆಮ್ಮಭಿಪ್ರಾಯವ ತಿ-ಮ್ಮಪ್ಪ ಲಕ್ಷ್ಮೀನಾರಾಯಣ ಸಲಿಸಲು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ರಾಮ ಶ್ರೀರಾಮ ಸೀತಾರಾಮ ಶ್ರೀರಾಮರಾಮನೆ ರವಿಕುಲಸೋಮಶ್ರೀರಾಮಪರಾಮ ರಾಮ ರಘುರಾಮನೆ ದಶರಥರಾಮನೆ ಗುಣಗಣಧಾಮನೆ ಶ್ರೀರಘು ಅ.ಪಕೌಸಲ್ಯಾದೇವಿಯ ಕಂದನೆ ರಾಮಕೌಶಿಕಯಜÕವ ಕಾಯ್ದ ಶ್ರೀರಾಮಹಿಂಸಿಸಿದ ತಾಟಕಿಯನು ಕೊಂದರಾಮಧ್ವಂಸಮಾಡಿದೆ ಶಿವಧನು ಮುರಿದುರಾಮಸಂಶಯವಿಲ್ಲದೆ ಸೀತೆಕರವಪಿಡಿದುತನ್ನಂಶದ ಪರಶುರಾಮನಿಗೊಲಿದನೆ ಶ್ರೀ 1ದಶರಥರಾಮ ನೀನರಸನಾಗೆನಲುಅಸುರಾವೇಶದಿ ಕೈಕೆ ವರವ ಯಾಚಿಸಲುಎಸೆವ ಸಿಂಹಾಸನ ತೊರೆದು ಪೊರಮಾಡಲುಶಶಿಮುಖಿಸೀತಾಲಕ್ಷ್ಮಣರ ಕೂಡಿ ಬರಲುಭರತಗೆ ಪಾದುಕೆ ಕೊಡುತಲಿ ಕಳುಹಿಸಿಗುಹನ ಮನ್ನಿಸಿ ವನರಾಜ್ಯದೊಳ್ ಮೆರೆದೆ 2ವನದೊಳುಮಾಯಾಮೃಗವ ಕಂಡು ಸತಿಯುಮನದಿ ಚಿಂತಿಸಿರಾಮ ತೆರಳೆ ರಕ್ಕಸನುವನಜಾಕ್ಷಿ ಸೀತೆಯ ಕಳವಿನಿಂ ತರಲುವನವನಚರಿಸಿ ಪುಡುಕೆ ಕಂಡು ಕಪಿವರನುಶರಧಿಲಂಘಿಸಿ ಸೀತೆಯನು ಕಂಡು ಹನುಮನುಕುರುಹು ಪಡೆದು ಲಂಕೆ ದಹಿಸುತ ಬರಲು 3ಸೇತುಬಂಧನ ಮಾಡಿ ಕಪಿಗಳ ಕೂಡಿನೀತಿ ಪೇಳಿದ ವಿಭೀಷಣಗಭಯ ನೀಡಿಭೂತ ರಾವಣನ ದಶಶಿರವ ಚಂಡಾಡಿಸೀತಾಸಹಿತ ರಾಮ ಪುಷ್ಪಕವನೇರಿಆತುರದಿಂದಿಹ ಭರತನಿಗ್ವಾರ್ತೆಯಪ್ರೀತಿಲಿ ಕಳುಹಿದ ಶ್ರಿ ರಘುರಾಮ 4ಬಂದ ಶ್ರೀರಾಮಚಂದ್ರ ಬಹುಪ್ರೀತಿಯಿಂದಛಂದದಿಂ ಭರತನ ಮನ್ನಿಸಿ ಮುದದಿಂದಕುಂದಣಮಯದ ಸಿಂಹಾಸನ ಚಂದ-ದಿಂದಲೇರುತ ರಾಮ ನಸುನಗೆಯಿಂದಇಂದಿರಾಸೀತಾ ಸಹಿತ ಅಯೋಧ್ಯದಿಬಂದು ಪೊರೆವ ಕಮಲನಾಭ ವಿಠ್ಠಲನು 5
--------------
ನಿಡಗುರುಕಿ ಜೀವೂಬಾಯಿ