ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ
ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ ಪ
ನಿರ್ದೋಷ ಗುಣವಾರುಧಿ
ನಿರ್ಧಾರವಾಗಿ ನುಡಿವೆ
ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು 1
ಅಜ ಭವಾದ್ಯರು ನಿನ್ನ
ಭಜಿಪರಾರು ದೋಷ
ಮಾನವ ತಿಳಿದು ಭಜಿಸಬಲ್ಲೆನೆ ದೇವಾ 2
ಮಧ್ವ ಸರೋವರದಲ್ಲಿ
ಇದ್ದು ಪೂಜೆಯಗೊಂಬ
ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ 3