ಒಟ್ಟು 9 ಕಡೆಗಳಲ್ಲಿ , 9 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಂಗೆ ಸನ್ಮಂಗಳಾಂಗೆ ರಂಗನಂಘ್ರಿಯ ಸಂಗೆ ತುಂಗೆ ಕಾರುಣ್ಯ ಪಾಂಗೆ ಅಸಿತಾಂಗೆ ತಿಂಗಳಾನನೆ ಪ ಪರಮೇಷ್ಟಿ ಪಾತ್ರಜಾತೆ ವರುಣನ್ನ ನಿಜದೈಯಿತೆ ಸುರ ಮುನಿಗಣವಿನುತೆ ವರದಾತೆ ಸರ್ವಖ್ಯಾತೆ ತರಣಿಸುತನ ಉದ್ಧರಿಸಿದೆ ಕರುಣದಿ ಧರೆಯೊಳು ನಿನಗೆ ಎ ದುರುಗಾಣೆ ಶರಣಾ 1 ಭಯ ಪಾಪ ತಾಪದೊರೆ ಜಯ ಜಯ ಗುಣಸಾರೇ ತ್ರಯಭುವನ ಉದ್ಧಾರೆ ಆಯುತಾರ್ಕವರ್ನ ನೀರೆ ನಯವ ಭಕುತಿ ಹೃ ದಯದೊಳಗಿತ್ತು ಸಹಾಯ ದಿನ ದಿನ ನಯನ ಶ್ರವಣವೇಣಿ 2 ಘನ್ನ ವಾರಣಾಸಿ ಕಾಸಿವನ ಆನಂದ ನಿವಾಸಿ ಪ್ರಣತ ಜನರಘನಾಶ ಮಣಿಭೂಷೆ ಸೌಖ್ಯರಾಸಿ ಅನನುತ ವಿಜಯವಿಠ್ಠಲನ ಮನಸಿನಲಿ ನೆನೆಸುವ ಸಾಧನ ಕೊಡು ವಿರಜೇ 3
--------------
ವಿಜಯದಾಸ
ಜೋಗಿಯ ನೋಡಿರೇ ತಾಪಸ ಯೋಗಿಯ ನೋಡಿರೇ ಆಗಮನುತ ಗುಣಸಾರಸ್ವಾನಂದಶರವಾ ಭುವನದಿಮೆರವಾ ಪ ಗಿರಿಜೇಶನು ಧರಿಸಿಹ ರುಂಡಮಾಲಾಕೃತಿಯೋ ; ವಿದ್ಯುಲ್ಲತಿಯೋ ಭೂಷಣವೋ ; ತಾರಾಗಣವೋ 1 ಶ್ರೀ ಮಹಾದೇವನ ನಂಜು ಗೊರಳಠವಠವಿಯೋ : ಮೇಘ ಚ್ಛವಿಯೋ ತರಣಿಯ ಸದನೋ ಕಾಮಶಲಭನುಹಿದ ಭಾಲಾಕ್ಷದ ಇರವೋ; ದೀಪಾಂಕುರವೋ; ವ್ಯೋಮನದಿಯ ಆವರಿಸಿಹ ಭವನ ಕಂಜೆಡಿಯೋ: ಹವಳದ ಕುಡಿಯೋ 2 ಕರ ಡಮರದ ನಾದಸ್ಪರಣೋ : ಘನವ್ಯಾಕರಣೋ: ಕರ್ಪುರ ಗಿರಿಯೋ; ಸುರಕುಜ ಪರಿಯೋ: ಗುರವರ ಮಹಿಪತಿ ನಂದನ ತಾರಕ ಶಿವನೋ: ನಿಜ ಬಾಂಧವನೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದೆಯಾ ಕೃಷ್ಣಯ್ಯಾ ಬಂದೆಯಾ ಪ ಸುಂದರ ನರರೂಪದಿಂದಲೀ ಧರೆಯೊಳು ಅ.ಪ. ಲೋಕೈಕ ದೇವನೆಂದು ಜ್ಞಾನಿಗಳೇಕಾಗಿ ಸಾರ್ವರಿಂದುಆಕಾರ ರಹಿತನ ಲೋಕ ಸಾಮಾನ್ಯರುಸ್ವೀಕರಿಸರು ಎಂದು ಸಾಕಾರನಾಗಿ 1 ಪೂರಾ ವಿಶ್ವದಲ್ಲೆಲ್ಲ ತುಂಬಾ ನಿಂತಿಹ ನಿನ್ನ _ನಾರು ನಂಬರು ಎಂತೆಂಬಕಾರಣ ಜಗಕೆ ತೋರರೆಲ್ಲಾ ಗುಣಸಾರ ಸಂಗ್ರಹಿಸಿ ನೀ ಧೀರ ಮಾನವನಾಗಿ2 ಜಗದೊಳಂದದ್ಭುತ ಶಕ್ತಿ ಇರುವುದೆಂ _ದುಗಮಿಕೆ ಜನದೊಳಾಸಕ್ತಿಜಗದೊಳು ಗದುಗಿನ ವೀರನಾರಾಯಣಬಗೆ ಬಗೆ ಮಹಿಮೆಯ ಸುಗುಣ ಮಾನವನಾಗಿ 3
--------------
ವೀರನಾರಾಯಣ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ
ಮಂಗಲಂ ಮಂಗಲಂ ಕುಮಾರಗೆ ಮಂಗಲಂ ಪ ವಾಹನ ಗುಣಸಾರ ಕುಮಾರಗೆ1 ಅಂಬರ ಮಣಿ ಸುಗುಣಾಂಬುಧಿ ಗುಹನಿಗೆ 2 ಕೋವಿದನಿಗೆ ದಾಸ ಜನರ ರಕ್ಷಕಗೇ 3
--------------
ಬೆಳ್ಳೆ ದಾಸಪ್ಪಯ್ಯ
ಶ್ರೀ ನರಸಿಂಹ ಮಂತ್ರ ಜಯ ಜಯ ಜಯ ನರಸಿಂಹ ಜಯ ಜಯ ಮಹಾಲಕ್ಷ್ಮೀರಮಣ ಜಯ ನಿರಾಮಯ ಸರ್ವೋತ್ಕøಷ್ಟ ಆಹ ಜಯ ಕಮಲಜ ಮೃಡಾದ್ಯಮರವಂದ್ಯನೆ ನಮೋ ಭಯಬಂಧಹರ ಭಕ್ತ ಜನರ ರಕ್ಷಕ ಸ್ವಾಮಿ ಪ ಅರದೂರ ಗುಣಪರಿಪೂರ್ಣ ಉಗ್ರವೀರನೆ ಮಹಾವಿಷ್ಣು ಉರುಕಾಂತಿ ಸರ್ವತೋಮುಖನೆ ಆಹ ನರಸಿಂಹ ಭಯಕರಾಶ್ರಿತಜನರ ರಕ್ಷಕ ಶರಣಾದೆ ನಿನಗೆ ನಾ ಮೃತ್ಯುಮಾರಕ ನಮೋ 1 ಸೃಷ್ಟಾ ಪಾತಾ ಅತ್ತ ತ್ರಾತಾ ದುಷ್ಟ ದೈತ್ಯರಿಗತಿ ಕ್ರೂರ ಶ್ರೇಷ್ಠ ಅಸಮಬಲರೂಪ ಆಹ ಇಷ್ಟಭಕ್ತನ ಕಾಯೆ ಕಂಬದಿಂದಲಿ ಬಂದು ತ್ಕøಷ್ಟ ಪ್ರಜ್ವಲಿಪ ನಖದಿ ಸೀಳ್ದೆ ಭ್ರಷ್ಟನ 2 ವಿಶ್ವಸ್ಥ ಬಹಿರಂತವ್ರ್ಯಾಪ್ತ ವಿಶ್ವ ವಿಷ್ಣು ವಷಟ್ಕಾರ ಸರ್ವಜ್ಞ ನಿರ್ದೋಷ ಸುಗುಣಿ ಆಹ ಅಮಿತ ಸಕಾಂತಿಯಿಂ ಜ್ವಲಿಸುವೆ ವಿಶ್ವತೋಮುಖ ಸರ್ವಸಾಕ್ಷಿಸ್ವತಂತ್ರ 3 ನರನಲ್ಲ ನರರೂಪಧಾರಿ ನೀ ಮೃಗವಲ್ಲವು ಸಿಂಹವದ್ರೂವ ನರಮೃಗಗಳಲಿ ನೀ ಸಮನು ಆಹ ಧರೆ ದಿವಿ ಪಾತಾಳ ಜಂತು ಸರ್ವಾಂತಸ್ಥ ಉರು ಜ್ಞಾನ ಬಲರೂಪ ಅನಂತ ನೀ ಏಕ 4 ನ ಎಂದರೆ ಸರ್ವವಂದ್ಯ ರ ಎಂದರೆ ಸುಖ ಜ್ಞಾನ ಸಿಂ ಎಂದರೆ ಗುಣಸಾರ ಆಹ ಇಂದಿರಾಪತಿ ಮಹದೈಶ್ವರ ರೂಪನು ಹ ಎಂದರೆ ನೀನು ಪೂರ್ಣ ನಿರ್ದೋಷ 5 ಭೂತಾದಿ ದುಷ್ಟ ಗ್ರಹಗಳ ಖದ್ರೂಜಾದಿ ಸರ್ವ ವಿಷವ ನೀ ದಯದಿ ಪರಿಹರಿಪೆ ಆಹ ಭಕ್ತ ಜನರಿಗೆ ನೀ ಶುಭವಿತ್ತು ಅಕಾಲ ಮೃತ್ಯುವ ತರಿವ ರಕ್ಷಕ ನಮೋ ಎಂಬೆ 6 ದ್ವಾತ್ರಿಂಶ ಚತುರ್ವಿಂಶಾಕ್ಷರದ ಮಂತ್ರ ಗಾಯತ್ರಿ ಪ್ರತಿಪಾದ್ಯ ವೃತತಿಜಾಸನ ಮಂತ್ರ ಋಷಿಯು ಆಹ ಅಧಿಕಾರಿಗಳು ಇದನು ಶ್ರವಣ ಪಠಣ ಮಾಡೆ ಭೀತಿ ಮೋಹವÀ ಬಿಡಿಸಿ ನಿಖಿಳೇಷ್ಟವೀವೆ 7 ಜಯ ಜಯ ನರಸಿಂಹಸ್ವಾಮಿ ಜಯ ಜಯ ಸರ್ವಜ್ಞ ಭೂಮನ್ ಜಯ ಮಹಾ ತೇಜೋಬಲವೀರ್ಯ ಆಹ ಜಯ ಪುರುಷೋತ್ತಮ ವೇಧಾದಿ ಸುರರಿಂದ ಇಜ್ಯಪೂಜ್ಯನು ದೃಢಭಕ್ತಿಯಿಂ ಮುದದಿ 8 ನಾರ ಉರು ಗುಣಸಿಂಧು ನರಸಿಂಹ ಸುಪ್ರೀತನಾಗೊ ಚಿರಜ್ಞಾನ ಭಕ್ತಿಯ ಸತತ ಆಹ ಪರಮರಿಲ್ಲದ ಬಲಿ ನಿನ್ನಲಿ ಧ್ಯಾನ ತೀವ್ರ ಪ್ರೇರಿಸು ಎನಗೆ ಅನಂತ ಅನುತ್ತಮ 9 ಪ್ರೋದ್ಯಾರ್ಕನಿಭ ದೀಪ್ತವಾದ ವರ್ತುಲ ಉರು ನೇತ್ರತ್ರಯವು ಹಸ್ತದ್ವಯವು ಜಾನುವರೆಗೂ ಆಹ ಸುದರ್ಶನಿ ಶಂಖಿ ಮಹಾಲಕ್ಷಿಯುತ ಕೋಟಿ ಆದಿತ್ಯಾಧಿಕತೇಜ ಉತ್ಕøಷ್ಟ ಶಕ್ತ 10 ಕಮಠ ಕ್ರೋಡ ನೃಹರಿ ಮಾಣವ ಪರಶ್ವಿ ಸುಧನ್ವಿ ಬುದ್ಧ ಕಲ್ಕಿ ಶರಣ ಆಹ ವನರುಹನ ತಾತ ಪ್ರಸನ್ನ ಶ್ರೀನಿವಾಸ ಅನಿಷ್ಟಹ ಇಷ್ಟದ ಎನಗೆ ದಯವಾಗೊ 11
--------------
ಪ್ರಸನ್ನ ಶ್ರೀನಿವಾಸದಾಸರು
ಹರಿಕಥಾಮೃತಸಾರ ಫಲಸ್ತುತಿ (33ನೆಯ ಸಂಧಿ) ಹರಿಕಥಾಮೃತಸಾರ ಶ್ರೀಮ- ದ್ಗುರುವರ ಜಗನ್ನಾಥದಾಸರ ಕರತಳಾಮಲಕವೆನೆ ಪೇಳಿದ ಸಕಲ ಸಂಧಿಗಳ ಪರಮಪಂಡಿತಾಭಿಮಾನಿಗಳು ಮ- ತ್ಸರಿಸಲೆದೆಗಿಚ್ಚಾಗಿ ತೋರುವು- ದರಸಿಕರಿಗಿದು ತೋರಿ ಪೇಳುವುದಲ್ಲ ಧರೆಯೊಳಗೆ 1 ಭಾಮಿನಿಯ ಷಟ್ಪದಿಯ ರೂಪದ- ಲೀ ಮಹಾದ್ಭುತ ಕಾವ್ಯದಾದಿಯೊ- ಳಾ ಮನೋಹರ ತರತಮಾತ್ಮಕ ನಾಂದಿಪದ್ಯಗಳ ಯಾಮಯಾಮಕೆ ಪಠಿಸುವರ ಸು- ಧಾಮಸಖ ಕೈಪಿಡಿಯಲೋಸುಗ ಪ್ರೇಮದಿಂದಲಿ ಪೇಳ್ದ ಗುರುಕಾರುಣ್ಯಕೇನೆಂಬೆ 2 ಸಾರವೆಂದರೆ ಹರಿಕಥಾಮೃತ ಸಾರವೆಂಬುವುದೆಮ್ಮ ಗುರುವರ ಸಾರಿದಲ್ಲದೆ ತಿಳಿಯೆಂದೆನುತ ಮಹೇಂದ್ರನಂದನನ ಸಾರಥಿಯ ಬಲಗೊಂಡು ಸಾರಾ- ಸಾರಗಳ ನಿರ್ಣೈಸಿ ಪೇಳ್ದನು ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೊ 3 ದಾಸವರ್ಯರ ಮುಖದಿ ನಿಂದು ರ- ಮೇಶನನು ಕೀರ್ತಿಸುವ ಮನದಭಿ- ಲಾಶೆಯಲಿ ವರ್ಣಾಭಿಮಾನಿಗಳೊಲಿದು ಪೇಳಿಸಿದ ಈ ಸುಲಕ್ಷಣ ಕಾವ್ಯದೋಳ್ ಯತಿ ಪ್ರಾಸಗಳಿಗೆ ಪ್ರಯತ್ನವಿಲ್ಲದೆ ಲೇಸುಲೇಸೆನೆ ಶ್ರಾವ್ಯಮಾದುದೆ ಕುರುಹು ಕವಿಗಳಿಗೆ 4 ಪ್ರಾಕೃತೋಕ್ತಿಗಳೆಂದು ಬರಿದೆ ಮ- ಹಾಕೃತಘ್ನರು ಜರಿವರಲ್ಲದೆ ಸ್ವೀಕೃತವ ಮಾಡದಲೆ ಬಿಡುವರೆ ಸುಜನರಾದವರು ಶ್ರೀಕೃತೀಪತಿಯಮಲಗುಣಗಳು ಈ ಕೃತಿಯೊಳುಂಟಾದ ಬಳಿಕ ಪ್ರಾಕೃತವೆ ಸಂಸ್ಕøತದ ಸಡಗರವೇನು ಸುಗುಣರಿಗೆ 5 ಶ್ರುತಿಗೆ ಶೋಭನವಾಗದೊಡೆ ಜಡ ಮತಿಗೆ ಮಂಗಳವೀಯದೊಡೆ ಶ್ರುತಿ ಸ್ಮøತಿಗೆ ಸಮ್ಮತವಲದಿದ್ದೊಡೆ ನಮ್ಮ ಗುರುರಾಯ ಮಥಿಸಿ ಮಧ್ವಾಗಮಪಯೋಬ್ಧಿಯ ಕ್ಷಿತಿಗೆ ತೋರಿಸಿ ಬ್ರಹ್ಮವಿದ್ಯಾ ರತರಿಗೀಪ್ಸಿತ ಹರಿಕಥಾಮೃತಸಾರ ಸೊಗಸುವುದು 6 ಸಕ್ತಿ ಸಲ್ಲದು ಕಾವ್ಯದೊಳು ಪುನ- ರುಕ್ತಿ ಶುಷ್ಕ ಸಮಾಸ ಪದವ್ಯತ್ಯಾಸ ಮೊದಲಾದ ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ ವಿ- ಭಕ್ತಿ ವಿಷಮಗಳಿರಲು ಜೀವ- ನ್ಮುಕ್ತಿಯೋಗ್ಯವಿದೆಂದು ಸಿರಿಮದನಂತ ಮೆಚ್ಚುವನೆ 7 ಆಶುಕವಿಕುಲಕಲ್ಪತರು ದಿ- ಗ್ದೇಶವರಿಯಲು ರಂಗನೊಲುಮೆಯ ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬುವೆನು ಈ ಸುಲಕ್ಷಣ ಹರಿಕಥಾಮೃತ ಸಾರ ದೀರ್ಘ ದ್ವೇಷಿಗಳಿಗೆರೆಯದಲೆ ಸಲಿಸುವುದೆನ್ನ ಬಿನ್ನಪವ 8 ಪ್ರಾಸಗಳ ಪೊಂದಿಸದೆ ಶಬ್ದ ಶ್ಲೇಷಗಳ ಶೋಧಿಸದೆ ದೀರ್ಘ ಹ್ರಸ್ವಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ ದೂಷಕರು ದಿನದಿನದಿ ಮಾಡುವ ದೂಷಣವೇ ಭೂಷಣವು ಎಂದುಪ- ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ 9 ಅಶ್ರುತಾಗಮಭಾವ ಇದರ ಪ- ರಿಶ್ರಮವು ಬಲ್ಲವರಿಗಾನಂ- ದಾಶ್ರುಗಳ ಮಳೆಗರಿಸಿ ಮೈಮರೆಸುವ ಚಮತ್ಕøತಿಯ ಮಿಶ್ರರಿಗೆ ಮರೆಮಾಡಿ ದಿತಿಜರ ಶಸ್ತ್ರದಲಿ ಕಾಯದಿಪ್ಪರಿದರೊಳು- ಪಶ್ರುತಿಗಳು ತಪ್ಪುವುವೇ ನಿಜ ಭಕ್ತಿಯುಳ್ಳರಿಗೆ 10 ನಿಚ್ಚ ನಿಜಜನ ಮೆಚ್ಚ ಗೋಧನ ಅಚ್ಚ ಭಾಗ್ಯವು ಪೆಚ್ಚೆ ಪೇರ್ಮೆಯು ಕೆಚ್ಚ ಕೇಳ್ವನು ಮೆಚ್ಚ ಮಲಮನ ಮುಚ್ಚಲೆಂದೆನುತ ಉಚ್ಚವಿಗಳಿಗೆ ಪೊಚ್ಚ ಪೊಸದೆನ- ಲುಚ್ಚರಿಸಿದೀ ಸಚ್ಚರಿತ್ರೆಯ ನುಚ್ಚರಿಸೆ ಸಿರಿವತ್ಸಲಾಂಛನ ಮೆಚ್ಚಲೇನರಿದು 11 ಸಾಧು ಸಭೆಯೊಳು ಮೆರೆಯೆ ತತ್ವಸು- ಬೋಧವೃಷ್ಟಿಯ ಗರೆಯೆ ಕಾಮ ಕ್ರೋಧ ಬೀಜವ ಹುರಿಯೆ ಖಳರೆದೆ ಬಿರಿಯೆ ಕರಕರಿಯ ವಾದಿಗಳ ಪಲ್ಮುರಿಯೆ ಪರಮವಿ- ನೋದಿಗಳ ಮೈ ಮರೆಯಲೋಸುಗ ಹಾದಿ ತೋರಿದ ಹಿರಿಯ ಬಹು ಚಾತುರಿಯ ಹೊಸ ಪರಿಯ 12 ವ್ಯಾಸತೀರ್ಥರ ಒಲವೊ ವಿಠಲೋ- ಪಾಸಕ ಪ್ರಭುವರ್ಯ ಪುರಂದರ ದಾಸರಾಯರ ದಯವೊ ತಿಳಿಯದು ಓದಿ ಕೇಳದಲೆ ಕೇಶವನ ಗುಣಮಣಿಗಳನು ಪ್ರಾ- ಣೇಶಗರ್ಪಿಸಿ ವಾದಿರಾಜರ ಕೋಶಕೊಪ್ಪುವ ಹರಿಕಥಾಮೃತಸಾರ ಕೇಳಿದರು 13 ಹರಿಕಥಾಮೃತಸಾರ ನವರಸ ಭರಿತ ಬಹುಗಂಭೀರ ರತ್ನಾ- ಕರ ರುಚಿರ ಶೃಂಗಾರ ಸಾಲಂಕಾರ ವಿಸ್ತಾರ ಸರಸ ನರಕಂಠೀರವಾಚಾ- ಜನಿತ ಸುಕುಮಾರ ಸಾತ್ವೀ- ಕರಿಗೆ ಪರಮೋದಾರ ಮಾಡಿದ ಮರೆಯದುಪಕಾರ 14 ಅವನಿಯೊಳು ಜ್ಯೋತಿಷ್ಮತಿಯ ತೈ- ಲವನು ಪಾಮರನುಂಡು ಜೀರ್ಣಿಸ- ಲವನೆ ಪಂಡಿತನೋಕರಿಪವಿವೇಕಿಯಪ್ಪಂತೆ ಶ್ರವಣಮಂಗಳ ಹರಿಕಥಾಮೃತ ಸವಿದು ನಿರ್ಗುಣಸಾರಮಕ್ಕಿಸ- ಲವ ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು 15 ಅಕ್ಕರದೊಳೀ ಕಾವ್ಯದೊಳು ಒಂ- ದಕ್ಕರವ ಬರೆದೋದಿದವ ದೇ- ವರ್ಕಳಿಂ ದುಸ್ತ್ಯಜ್ಯನೆನಿಸಿ ಧರ್ಮಾರ್ಥಕಾಮಗಳ ಲೆಕ್ಕಿಸದೆ ಲೋಕೈಕನಾಥನ ಭಕ್ತಿಭಾಗ್ಯವ ಪಡೆದ ಜೀವ ನ್ಮುಕ್ತಗಲ್ಲದೆ ಹರಿಕತಾಮೃತಸಾರ ಸೊಗಸುವದೆ16 ಒತ್ತಿ ಬಹ ವಿಘ್ನಗಳ ತಡೆದಪ ಮೃತ್ಯುವಿಗೆ ಮರೆಮಾಡಿ ಕಾಲನ ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲಸಿದ್ಧಿಗಳ ಒತ್ತಿಗೊಳಿಸಿ ವನರುಹೇಕ್ಷಣ ನೃತ್ಯಮಾಡುವನವನ ಮನೆಯೊಳು ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ 17 ಆಯುರಾರೋಗ್ಯೈಶ್ವರ್ಯ ಯಶ ಧೈರ್ಯ ಬಲ ಸಮಸಹಾಯ ಶೌರ್ಯೋ ದಾರ್ಯ ಗುಣಗಾಂಭೀರ್ಯ ಮೊದಲಾದ ಆಯತಗಳುಂಟಾಗಲೊಂದ- ಧ್ಯಾಯ ಪಠಿಸಿದ ಮಾತ್ರದಿಂ ಶ್ರವ- ಣೀಯವಲ್ಲದೆ ಹರಿಕಥಾಮೃತಸಾರ ಸುಜನರಿಗೆ 18 ಕುರುಡ ಕಂಗಳ ಪಡೆವ ಬಧಿರನಿ- ಗೆರಡುಕಿವಿ ಕೇಳ್ವಹವು ಬೆಳೆಯದ ಮುರುಡ ಮದನಾಕೃತಿಯ ತಾಳ್ವನು ಕೇಳ್ದಮಾತ್ರದಲಿ ಬರಡು ಹೈನಾಗುವುದು ಕೇಳ್ದರೆ ಕೊರಡು ಪಲ್ಲವಿಸುವುದು ಪ್ರತಿದಿನ ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ 19 ನಿರ್ಜರತರಂಗಿಣಿಯೊಳನುದಿನ ಮಜ್ಜನಾದಿ ಸಮಸ್ತ ಕರ್ಮವಿ- ವರ್ಜಿತಾಶಾಪಾಶದಿಂದಲಿ ಮಾಡಿದಧಿಕಫಲ ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ ಸಜ್ಜನರು ಶಿರತೂಗುವಂದದಿ ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ 20 ಸತಿಯರಿಗೆ ಪತಿಭಕುತಿ ಪತ್ನಿ ವ್ರತ ಪುರುಷರಿಗೆ ಹರಿಷ ನೆಲೆಗೊಂ- ಡತಿಮನೋಹರರಾಗಿ ಗುರುಹಿರಿಯರಿಗೆ ಜಗದೊಳಗೆ ಸತತ ಮಂಗಳವೀವ ಬಹು ಸು- ಕೃತಿಗಳೆನಿಸುತ ಸುಲಭದಿಂ ಸ ದ್ಗತಿಯು ಪಡೆವರು ಹರಿಕಥಾಶಮೃತಸಾರವನು ಪಠಿಸೆ 21 ಎಂತು ವರ್ಣಿಸಲೆನ್ನಳವೆ ಭಗ- ವಂತನಮಲ ಗುಣಾನುವಾದಗ- ಳೆಂತು ಪರಿಯಲಿ ಪೂರ್ಣಭೋಧರ ಮತವ ಹೊಂದಿದರ ಚಿಂತನೆಗೆ ಬಪ್ಪಂತೆ ಬಹು ದೃ- ಷ್ಟಾಂತಪೂರ್ವಕವಾಗಿ ಪೇಳ್ದ ಮ- ಹಂತರಿಗೆ ನರರೆಂದು ಬಗೆವರೆ ನಿರಯಭಾಗಿಗಳು 22 ಮಣಿಖಚಿತ ಹರಿವಾಣದಲಿ ವಾ ರಣಸುಭೋಜ್ಯ ಪದಾರ್ಥ ಕೃಷ್ಣಾ ರ್ಪಣವೆನುತರ್ಪಿಸಿದವರಿಗೋಸುಗ ನೀಡುವಂದದಲಿ ಪ್ರಣತರಿಗೆ ಪೊಂಗನಡ ವರವಾ ಙ್ಮಣಿಗಳಿಂ ವಿರಚಿಸಿದ ಶ್ರುತಿಯೊ ಳುಣಿಸಿ ನೋಡುವ ಹರಿಕಥಾಮೃತಸಾರವನುದಾರ 23 ದುಷ್ಟರೆನ್ನದೆ ದುರ್ವಿಷಯದಿಂ ಪುಷ್ಟರೆನ್ನದೆ ಪೂತಕರ್ಮ ಭ್ರಷ್ಟರೆನ್ನದೆ ಶ್ರೀದವಿಠ್ಠಲ ವೇಣುಗೋಪಾಲ ಕೃಷ್ಣ ಕೈಪಿಡಿಯುವನು ಸತ್ಯ ವಿ- ಶಿಷ್ಟ ದಾಸತ್ವವನು ಪಾಲಿಸಿ ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ 24
--------------
ಶ್ರೀದವಿಠಲರು
ಬೇಡುವೆ ವರಗಳ | ಜೋಡಿಸಿ ಕರಗಳ |ನೀಡು | ಕೃಪೆಯೊಳ ಮಾಡದೆ ಮುನಿಸುಗಳ ||ಗೋಪಾಲ||ಬೇಡನು ಮರಗಳ ನೋಡುತ ತಪಗಳ ಮಾಡಲು ವರಗಳ |ನೀಡಿದೆ ಕರುಣದೊಳ್ ||ಶ್ರೀ ಲೋಲ|| 1ಜಪವನು ಮಾಡಲಾರೆ | ತಪವನು ಮಾಡಲಾರೆ |ಉಪವಾಸ ಮಾಡಲಾರೆ ||ಶಪಥವ ಮಾಡಲಾರೆನು || ನಿನ್ನೊಳು ನಾನೂ ||ದ್ರುಪಜೆಯುಟ್ಟ ಸೀರೆ | ಕುಪಿತಾತ್ಮ ಸೆಳೆವರೆ |ಉಪಕರಿಸಿದನ್ಯಾರೆ || ನಿಪುಣ ನೀ ದಯವ ತೋರೆ ||ಮುರಾರೆ 2ಹುಲುನರಜನ್ಮವೆತ್ತೀ | ಹುಲುಗಾವಲೊಳು ಸುತ್ತೀ |ಹುಲು ಗೋವರ್ಧನವೆತ್ತಿ | ಹುಲುಗೈದೆ ಸುರಶಕ್ತೀ ||ಗೊಲ್ಲರೊಳ್ ಅರ್ಥೀ || ಕಲುಷವ ಬಿಡಿಸುತ್ತಿ |ಫಲ್ಗುಣಸಾರಥಿ| ಸಲಹೆನ್ನ ಮನದರ್ಥಿ |ಚೆಲುವ ಗೋವಿಂದ ಮೂರುತಿ | ದಾಸರೊಳ್ ಪ್ರೀತಿ 3
--------------
ಗೋವಿಂದದಾಸ
ಶ್ರೀ ಕಾಶಿವಿಶ್ವನಾಥ ಶಿಷ್ಟ ಜನ ಪ್ರೀತಲೋಕ ರಕ್ಷಕ ವರದಾತ ಪ್ರಖ್ಯಾತಏಕಾನೇಕ ವಿವೇಕಶರಧಿಶರಪಾಕಾರಿ ಪ್ರಿಯ ಪಾಹಿಮಾಂ ಶಂಭೋಪಕರಿಮುಖಪಿತ ಈಶ ಕಲಿವಿನಾಶಕಕರಿಚರ್ಮ ವಸ್ತ್ರಧಾರಿಕದನಕಂಠೀರವಉರಗಭೂಷಣ ದೇವ ಉತ್ತಮಭಾವಕರದಿ ಬ್ರಹ್ಮಕಪಾಲ ಶಿರರುಂಡಮಾಲಧರದುರಿತನಿವಾರ ಗುಣಸಾರ ಗಂಭೀರಸಾರರಹಿತ ಸಂಸಾರ ವಿದೂರಆರಾಧಿತ ಪ್ರಜ್ಞಾಂಬುಜಭವನುತಸಾರಾಸಾರ ವಿಚಾರಪಿನಾಕಿ1ಶಶಿಯ ಶಿರದೊಳಿಟ್ಟ ಸುರಮುನಿ ಶ್ರೇಷ್ಠಅಸಮ ಅಂಧಕಾಸುರ ಸಂಹಾರಭಸಿತ ಮೈಯೊಳು ಪೂಸಿ ಭುಜಗನ ವಿಷತಾಳ್ದವೃಷಭವಾಹನಲೋಲಉರ್ವಿಜನ ಪಾಲಈಶ ಸುರೇಶ ಉಮೇಶಭೂತೇಶಭಾಸುರಕೋಟಿಸವಿತಸಂಕಾಶ ವಿನು-ತಸುರಜನ ಪಾಲಿತ ಶುಭಾಂಗಕಪರ್ದಿ2ಮೆರೆದೆಭುವನಈರೇಳು ಧರಿಸಿ ಕುಕ್ಷಿಯೊಳುನರರ ರಕ್ಷಿಸಿ ಪೊರೆದು ನಾದದೊಳ್ಬೆರೆದುಧರಣಿಯೊಳೆ ಪೆಸರ್ವಡೆದವರಕಾಶಿಪುರದಮೆರವ ವಿಶ್ವೇಶದೇವ ಸುರನಿಕರ ವಂದಿತಹರ ಅಸುರಹರ ಭವದೂರ ವೀರ ಚಿದಾನಂದಅವಧೂತಕಾರಣ ನಿರ್ಮಲ ಚಾರುಪರಾತ್ಮಕಮಾರಭಸ್ಮಾಂಕಿತ ಗೌರಿಯ ರಮಣ3
--------------
ಚಿದಾನಂದ ಅವಧೂತರು