ಒಟ್ಟು 227 ಕಡೆಗಳಲ್ಲಿ , 64 ದಾಸರು , 210 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೈ ಭೀಮ ಜರೆಸುತನ್ವೈರಿ ಜೈ ಭೀಮ ಜಯ ಜಯ ಜಯ ಮುಖ್ಯಪ್ರಾಣ ಸೋಮ ಕುಲದೊಳುದ್ಭವಿಸಿ ಗೀರ್ವಾಣ ಬಲು ಬಲುಮೆಯಿಂದಲಿ ದುರ್ವಾದಿಗಳನ್ನೆ ಮೂತಿಂದ್ವೊತ್ತಿ ಸಲಹೆನ್ನ ಶ್ರೀಮ- ದಾನಂದತೀರ್ಥಮುನಿ ಪ ರೋಮ ರೋಮಕೆ ಕೋಟಿಲಿಂಗ ಜಗತ್ಪ್ರಾಣಿಗಳಿಗೆ ಅಂತರಂಗ ಲಂಕೆನಾಳ್ವೋ ಭೂಪತಿಗತಿ ಭಂಗಬಡಿಸಿ ಕ್ಷೋಣಿಸುತೆಗೆ ಉಂಗುರಿಟ್ಟು ರಾಮರಲ್ಲೆ ಪ್ರೇಮ- ವಾರ್ತೆಯ ತಂದ ಪ್ರಾ- ಣೇಶ ದಯವಾಗೊ 1 ಮಧುವೈರಿ ಮಾತುಳನಾಗೆ ಬಂದು ಮಗಧ ಮುತ್ತಿಗೆ ಹಾಕೆ ಬ್ಯಾಗ ವೃಕೋದರ ಛಲವ್ಹಿಡಿದು ತಾ ಹೋಗೆ ಅಲ್ಲೆ ದ್ವಿಜನ್ವೇಷಧರಿಸ್ವಾಸುದೇವ ವಾಸವಿ ಕೂಡಿ ಮಗಧರಾಜನ ಮ- ರ್ಮಗಳಿಂದ ಸೀಳಿದ್ಯೊ 2 ಹಾಟಕಾಂಬರನಲ್ಲಿ ಭಕ್ತರೆಂದು ಅರಿಯದೆ ಅಂತಕನ ಪುತ್ರ(ನ) ಜೂಜಿನಾಟ(ದಿ) ಸೋಲಿಸಿ ಸೆಳೆಯೆ ವಸ್ತ್ರ ಕೃಷ್ಣೆ ನೋಟದಿ ಭಸ್ಮ ವಿಚಿತ್ರ ಸವ್ಯಸಾಚಿ ಸಹಿತವಾಗ್ವಿರಾಟ- ವರ್ಗದಿ ಸತಿಗೆ ಕಾಟ ಕಳೆದ್ಯಮ- ಪುರಿಗೆ ದಾಟಿಸ್ದ್ಯೋ ಕೀಚಕನ 3 ಕಳೆದÀು ಅಲ್ಲಜ್ಞಾತವಾಸ ಬಂದು ಖಳರೊಳಗಧಿಕ ದುಶ್ಶಾಸ(ನ) ಅವನ ಕರುಳ ಬಗೆಯಲತಿ ರೋಷ ಕಾಲಕ್ಕೊದಗಲು ನರಹರಿ ಆ- ವೇಶ ಕಂಡು ಸುರರಸುರರ ಸೈನ್ಯ ಜರಿದು ಹಿಂದಕೆ ನಿಲ್ಲೆ ರಣಧೀರ- ಗೆಣೆಯಿಲ್ಲ ಪರಮ ಪರಾಕ್ರಮ 4 ಸಕಲ ಜೀವರಿಗಾಧಾರಕನೊ ಭಾರತಿ ಪ್ರಾರಂಭಕ್ವೊಂದಿತನೊ ಮಧ್ವಮತ ಶಾಸ್ತ್ರಗಳ ಉದ್ಧಾರಕÀನೊ ತ್ರಿಗುಣ ಜೀವನು ಸಾರಪ್ರೇರಕನು ವಾಯು ಸಕಲ ಸುರರೊಡೆಯ ಭೀಮೇಶ ಕೃಷ್ಣನಲ್ಲಿ ಭಕುತಿ ಜ್ಞಾನವ ದಿವ್ಯ ಮುಕುತಿ ಮಾರ್ಗವ ತೋರಿದಿ 5
--------------
ಹರಪನಹಳ್ಳಿಭೀಮವ್ವ
ಸರ್ವಾಂತರ್ಯಾಮಿ-ನೀನೇಸರಿ-ಸರ್ವಜ್ಞನು ಸ್ವಾಮೀ ಪ ಸರ್ವಕಾರಣ ಸರ್ವಾಧಾರನು ಸರ್ವಶರಿರೇಕ ಸರ್ವನಿಮಾಯಕ ಅ.ಪ. ಹರಿತನಯನಿಗಂದೂ ಸ್ವಶಕ್ತಿಯ ಹರಿಕೊಡುವನು ಬಂದು ಗುರಿಮಾಡಿದೆ ಹರಿ1 ಕಾಣಿಸುವನು ಎಂದೂ ಸಪ್ರಾಣರಮಾಡಿದೆ 2 ಮರುತನ ಸುತನೆಂದು ಧೃತರಾಷ್ಟ್ರನು ಕರದಪ್ಪುವನೆಂದು ಶರಣನಹರಣವನುಳಹಿದೆ 3 ಪಾಲನ ಖತಿಯೊಳಗೆ ಶರಧಿಯೊಳಾಲಯ ಮಾಡಿದೆ 4 ದುರುಳ ಪುಲಿಯು ಬಂದು ಕರದಖಡುಗದಿಂ-ಹರಿಯನು ಖಂಡಿಸಿ ಶರಣನ ಸಲಹಿದ ವರದವಿಠಲಹರಿ5
--------------
ಸರಗೂರು ವೆಂಕಟವರದಾರ್ಯರು
(1) ನಿಂದಾಸ್ತುತಿಗಳು ಏನುಂಟು ನಿನ್ನೊಳಗೆ ನಾ ಬೇಡಲು ಏನು ಕೊಡುವೆ ಎನಗೆ ಪ ಶ್ರೀನಿವಾಸನೇ ಬಲು ದೀನನೊಳವಲಕ್ಕಿ ಮಾನವ ನೋಡದೆಅ.ಪ ತಿರುಕನಾಗಿ ತಂದೆ ಧರೆಯ ಕಶ್ಯಪನೆಂಬ ತಿರುಕ ಹಾರುವನಿಗೆ ಗುರಿಮಾಡಿದೆ ಸಿರಿಯನು ರಜಕನ ಪರಿವಾರದಿ ಬಿಟ್ಟು ಗರಳ ಹಾಸಿನೊಳೊರಗಿದೆ ಕೃಷ್ಣ 1 ಧನಕನಕಂಗಳು ನಿನಗಿರೆ ಸತ್ರಾಜಿ ತನ ಮಣಿಯನು ನೀಗಣಿಸುವೆಯಾ ಅನುವಾದ ಮನೆಯಿರೆ ಮುನಿಮನವೇತಕೆ ಮನೆವಾರ್ತೆಯುಳ್ಳರೆ ವನವಾಸಬೇಕೆ 2 ಕಾಮಧೇನುವು ಕಲ್ಪನಾಮಕ ತರುವು ಚಿಂ ತಾಮಣಿಗಳನು ಸುತ್ರಾಮಗಿತ್ತು ಗೋಮಯರಸಗಳ ಕಾಮಿಸಿ ಕದ್ದು ನೀ ದಾಮೋದರನಾದೆ ತಾಮರಸಾಕ್ಷ 3 ಖ್ಯಾತಿ ನೋಡದೆ ರಣ ಭೀತಿಯೊಳೋಡಿದೆ ಜಾತಿ ನೋಡದೆ ಜಾಂಬವತಿಗೂಡಿದೆ ನೀತಿಯ ನೋಡದೆ ಕೋತಿಯೊಳಾಡಿದೆ ಮಾತು ನೋಡದೆ ಬರಿ ಮಾಯೆಯ ಪಿಡಿದೆ 4 ಗತಿಹೀನರಿಗೆ ವರ ಗತಿಯ ತೋರಿಪನಾಮ ಸ್ಮøತಿಯೊಂದಿತ್ತರೆ ಸಾಕೆನಗೆ ಅತಿಶಯವಿದು ಎನ್ನ ಮತಿಯೊಳು ನಿನ್ನಯ ರತಿಯನ್ನು ಪಾಲಿಸು ವರದವಿಠಲರಾಮ 5
--------------
ವೆಂಕಟವರದಾರ್ಯರು
* ನರಹರಿಯೆ ಸುಕ್ಷೇಮವ ಪ. ಪರಮಪ್ರಿಯರಿಗೆ ಇತ್ತು ವರ ಸೇವೆ ಕೈಕೊಂಡು ನಿರುತದಿ ಪಾಲಿಸೆನ್ನ ಘನ್ನ ಅ.ಪ. ದಾಸ ಗುರುಕುಲತಿಲಕರಿವರಿಗೆ ನೀನೀಗ ಘಾಸಿಗೊಳಿಸುವುದುಚಿತವೆ ದೋಷದೂರನೆ ಎಮ್ಮ ಮನವನರಿತವ ಜನರ ದೂಷಣೆಗೆ ಗುರಿ ಮಾಳ್ಪರೆ ಘಾಸಿಪಡುತಿಹರ ಆಯಾಸಪಡಿಸುವುದು ಬಹು ಲೇಸಲ್ಲ ನಿನಗೆ ಥರವೆ ಶೇಷಶಯನನೆ ಎಮ್ಮ ಮಾತು ಲಾಲಿಸಿ ಈಗ ಪೋಷಿಸಲಿ ಬೇಕೊ ಸ್ವಾಮಿ ಪ್ರೇಮಿ 1 ಕಲ್ಪತರುವಂತಿಹರು ಶಿಷ್ಯವೃಂದಕೆ ಇವರು ಇಪ್ಪರೋ ಚಂದ ಜಗದಿ ತಪ್ಪದಲೆ ಆಯುರಾರೊಗ್ಯ ಕೊಟ್ಟು ನೀ ಸರ್ಪಶಯನನೆ ರಕ್ಷಿಸೊ ಒಪ್ಪದಿಂದಲಿ ಎಮ್ಮ ಸೇವೆ ಸಫಲವಗೊಳಿಸಿ ಅಪ್ಪ ಸಂತಸವಪಡಿಸೊ ಬಪ್ಪ ಪೋಪ ಕೀರ್ತಿ ಅಪಕೀರ್ತಿ ನಿನ್ನಡಿಗೆ ಪುಷ್ಪದಂತರ್ಪಿಸುವೆನೊ ನೃಹರಿ 2 ಮನವಚನ ಕಾಯದಲಿ ಅನ್ಯ ಬಗೆಯದೆ ಎಮ್ಮ ಗುರುಗಳನು ಸೇವಿಸುವೆವೊ ಚಿನುಮಯನೆ ನೀ ಸಾಕ್ಷಿಯೋ ಮನುಜರಿದನೇನ ಬಲ್ಲರು ಕೇಳು ತಂತಮ್ಮ ಮನ ಬಂದ ತೆರ ನುಡಿವರೊ ಎನಗದರ ಗೊಡವೇನು ನೀನಿರಲು ಭಯವೇನು ಘನ ಮಹಿಮ ಪೊರೆಯೊ ಬೇಗ ಸ್ವಾಮಿ 3 ಪಂಚಪ್ರಾಣರು ಇವರು ವಂಚನಿಲ್ಲದೆ ಪೇಳ್ವೆ ಮುಂಚೆ ನೀ ಕಾಪಾಡೆಲೊ ಸಂಚಿತಾಗಾಮಿ ಪ್ರಾರಬ್ಧ ದುಷ್ಕರ್ಮಗಳು ಮಿಂಚಿನಂದದಿ ಮಾಡೆಲೊ ಸಂಚಿತಾಗಾಮಿಗಳ ಶಿಷ್ಯರಿಗೆ ಕಳೆವರಿಗೆ ಕೊಂಚ ಬಾಧೆಯ ಕೊಡದೆಲೊ ಸಂಚಿತಿತ ಪ್ರದನೆ ಎನ್ನ ಮೊರೆ ಲಾಲಿಸು ಅಚಂಚಲದ ಕ್ಷೇಮವೀಯೋ ದೇವ 4 ಪರಿ ಪ್ರಾರ್ಥಿಸುವೆ ಶ್ರೀ ಪತಿಯೆ ದಯವ ಮಾಡೊ ನಾ ಪೇಳ್ವುದಿನ್ನೇನು ನಿನ್ನ ಸೇವಾದಿಗಳು ಕೃಪೆಯಿಂದ ಗುರುಗಳಿಂದ ಪಾಪ ಪರಿಹರನೆ ನೀ ಕೈಕೊಂಡು ಕೀರ್ತಿಯನು ಈ ಪೃಥ್ವಿಯಲ್ಲಿ ನೆಲಸೊ ಗೋಪಾಲಕೃಷ್ಣವಿಠ್ಠಲನೆ ನೀ ಕಾಪಾಡು ಕಾಪಾಡು ಜಗದ್ರಕ್ಷಕ ಹರಿಯೆ 5
--------------
ಅಂಬಾಬಾಯಿ
ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
ವಚನ ಮನವು ಬಿಲ್ಲನೆ ಮಾಡಿ ತನುವು ಹೆದಿಯನೆ ಕಟ್ಟಿ ಅನುಭವದ ಅಂಬಿನಲಿ ಜನನ ಮರಣದ ಗುರಿಯ ಕೆಡಹಿದಾ ಜ್ಞಾನಸಾಗರ ಗುರುನಾಥನೆಂದು ಸ್ತುತಿಸಿದಾ ಮಹಿಪತಿಯು |
--------------
ಕಾಖಂಡಕಿ ಶ್ರೀ ಮಹಿಪತಿರಾಯರು
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಆ) ಆಳ್ವಾರಾಚಾರ್ಯ ಸ್ತುತಿಗಳು (1) ಆಂಜನೇಯ ನೋಡಿರೈ ಕಣ್ದಣಿಯಾ ಸಜ್ಜನರೆಲ್ಲ ಪಾಡಿರೈ ಮನದಣಿಯಾ ಪ ಗಾಢಭಕುತಿಯನಾಂತು ಭಜನೆಯ ಮಾಡುವರ ದುರಿತಗಳನೋಡಿಸಿ ಕೂಡೆನಿರ್ಮಲರೆನಿಸಿ ಪೊರೆವಾ ರೂಢನಹ ಮಾರುತಿಯ ಮೂರ್ತಿಯ ಅ.ಪ ಉಡಿಯೋಳ್ ಘಂಟೆಗಳೆಸೆಯೆ ಚರಣದೊಳುಳ್ಳ ತೊಡರುಗಗ್ಗರಮುಲಿಯೆ ರ್ಕಡೆಯ ಕರ್ಣದಿ ಪೊಳೆಯೆ ಕಡಗ ಮಣಿಮಕುಟಗಳ ಪೇರುರ ದೆಡೆಯ ವಜ್ರದಪದಕ ಮೊದಲಹ ತೊಡಿಗೆಗಳ ಸಡಗರದೊಳೊಪ್ಪುವ ದೃಢತರದ ಮಾರುತಿಯ ಮೂರ್ತಿಯ 1 ಭರದಿಂದ ಶರನಿಧಿಯಾ ಲಂಘಿಸಿ ಪೊಕ್ಕಾ ನಿರುಪಮತರ ಲಂಕೆಯ ಗುರಿಗೊಂಡರಸಿ ಸೀತೆಯಾ ಕಂಡಾರಘು ವರನುರುಮುದ್ರಿಕೆಯ ಕರದೊಳಿತ್ತಾರಮಣಿಯಿಂ ವಿ ಸ್ಫುರಿಪ ಚೂಡಾಮಣಿಯ ಕೈಕೊಂ ಡಿರದೆ ಬಂದೊಡೆಯಂಗೆ ಸಲಿಸಿದ ಪರಮಬಲಯುತನಮಳಮೂರ್ತಿಯ 2 ವಾದವಿದೂರನನು ಪಾವನ ಮೃದು ಪಾದಾರವಿಂದನನು ವೇದಾಂತವೇದ್ಯನನು-ಸನ್ನುತಪರ ನಾದಾನುಮೋದನನು ಸಾದರದೊಳೈತಂದು ಪ್ರಾರ್ಥಿಪ ಸಾಧುಸಂತತಿಗೊಲಿದು ಪರಮಾ ಮೋದದಿಂ ಪರಮಾರ್ಥವಿಷಯವ ಬೋಧಿಸುವ ಮಾರುತಿಯ ಮೂರ್ತಿಯ 3 ರಂಗನಾಥನದೂತನ ಸತ್ಕರುಣಾಂತ ರಂಗನಾರ್ತಪ್ರೀತನ ಕಂಗೊಳಿಸುವ ನೂತನಪುರವರದೊಳು ಹಿಂಗದೊಪ್ಪಿರುವಾತನ ಮಂಗಳಾತ್ಮನ ಮೋಹದೂರನ ಸಂಗರಹಿತನ ಸತ್ಯಚರಿತನ ರಂಗದಾಸಪ್ರಣಿತಮಹಿಮೋ ತ್ತುಂಗ ಶ್ರೀ ಮಾರುತಿಯ ಮೂರ್ತಿಯ 4
--------------
ರಂಗದಾಸರು
(ಉ) ಆತ್ಮನಿವೇದನೆ ನೋಡದೆ ತ್ವರದಿ ಪ ಹೆಂಡತಿ ಮಕ್ಕಳ ಭ್ರಾಂತಿಯೊಳನ್ಯರ ದಂಡಿಸಿ ಧನವ ಹರಿಸಿದೆನೋ ಭಂಡತನದಲಿ ಪ್ರಚಂಡನಾದೆನೋ ಹರಿ ಪುಂಡರೀಕಾಕ್ಷನೇ 1 ನಾ ದಿನಗಳೆದೆ ಹೇ ಮಹಾಭಾವನೇ ಪಾಮರನಾದೆ ಎನ್ನ ನೀ ಮಮತೆಯಿಂದಲಿ 2 ಅಟ್ಟಮೇಲೆ ಒಲೆ ನೆಟ್ಟಗುರಿವಂದದಿ ಕೆಟ್ಟ ಮೇಲೆಚ್ಚರ ಹುಟ್ಟಿತೆನಗೆ ನೀ ದಯದಿ 3
--------------
ಹನುಮೇಶವಿಠಲ
5. ವಿಶಿಷ್ಟ ಗೀತೆಗಳು ಭ್ರಮರಗೀತೆ 92 ಭೃಂಗಾ ನಿನ್ನಟ್ಟಿದನೇ ಶ್ರೀರಂಗ ಮಧುರೆಲಿ ನಿಂದುಅಂಗಜಲುಬ್ಧಕ ಪೂಗೋಲಂಗಳ ತಡೆಯನಿಕ್ಕಿಅಂಗನೇರೆಂಬೋ ಹುಲ್ಲೆ ಮೃಗಂಗಳಿಗೆ ಗುರಿಯೆಚ್ಚುಹಿಂಗಿಸುತೈಧಾನೆ ಅಸುವ ಹೇ ಕಿತವಾ ಪ ನಿನ್ನ ನೋಡೆ ನಮ್ಮ ಅಚ್ಯುತನ್ನ ಕಂಡಂತಾಯಿತಯ್ಯಚನ್ನಿಗರರಸ ಕುಶಲೋನ್ನತಿಯೊಳಹನೇನೋಚಿಣ್ಣತನ ಮೊದಲಾಗವನ್ನ ಕಿತವ ಬಲ್ಲೆವೋಗನ್ನಗಾರ ಚಿತ್ತ ಚೋರನ್ನ ಶ್ರೀ ಹರಿಯಾಮನ್ನಣೆಗೆ ಮೆಚ್ಚಿ ತನುವನ್ನೊಪ್ಪಿಸಿದ ಮುಗುದೆವೆಣ್ಣುಗಳ ವಿರಹಾಬ್ಧಿಯನ್ನೆ ದಾಟಿಸುವೆನೆಂದುತನ್ನ ನೇಹವೆಂಬೋ ನಾವೆಯನ್ನೇರಿಸಿ ಮೋಸದಿನಡುನೀರೊಳು ತೊರೆದ್ಹೋದನೆ ಹೇ ಕಿತವಾ 1 ತಮ್ಮ ನಂದಗೋಪ ಯಶೋದಮ್ಮನ ಕಂಡುಬಾರೆಂದುರಮ್ಮ್ಮೆಯ ರಮಣ ನಿನ್ನನೊಮ್ಮೆ ಕಳುಹಿದನೈಸೆಹಮ್ಮುಗೆಟ್ಟಾರಮ್ಮಣೇರಿಂದುಮ್ಮಳಿಸುವೆವೊ ವೃಥಾನಮ್ಮ ಹಂಬಲಿನ್ನೇನವಗೆ ಶ್ರೀ ಹರಿಗೆಹೊಮ್ಮೇಲಟ್ಟದಲಂಚೆಯಗಮ್ಮನೇರ ಕುಚದ ಕುಂ-ಕುಮ್ಮ ಕಸ್ತೂರಿಯ ಕರದಿಮ್ಮನದಿ ಸಿಲುಕಿದಂಗೆಕಮ್ಮಗೋಲನ ಬಾಣಂಗಳುಮ್ಮಳಿ ನೋಯಿಸುತಿವೆಸುಮ್ಮನೆ ಬಾಹೋದು ಸುಲಭವೆ ಹೇ ಕಿತವಾ2 ಮಧುವೈರಿ ಮೇದಿನಿ ನಿಟ್ಟಿಸಲಾಗಮೃದುವಾಕ್ಯದೊಳೆಮ್ಮಪ್ಪಿ ಅಧರಾಮೃತ ಭೋಜನಕ್ಕೊದಗುವ ಸತತ ಸನ್ನದ್ಧ ನಮ್ಮನಗಲಿ ಕಲ್ಲೆದೆಯಾದನೆಂತೋ ಕೃಪಾಳು ಹೇ ಕಿತವಾ 3 ಮಜ್ಜನ ಸಾಯುಜ್ಯ ಸುಖವತ್ತಲಿಪ್ಪುದೂ ಶ್ರೀ ಹರಿಯಅಬ್ಜಭವ ಮುನಿಜನ ಪೂಜ್ಯನಗಲಿದ ಮ್ಯಾಲೆನಿರ್ಜೀವಿಗಳಾಗಿ ಕಣ್ಣ ಕಜ್ಜಲ ಕಲಕಿಕೊಂಡುಲಜ್ಜೆಗೆಟ್ಟು ತನುಲತೆ ಜರ್ಝರಿತದಿ ಜೀವಿಸೆವಜ್ಜರೆದೆಯಲ್ಲವೆ ನಮ್ಮದು ಹೇ ಕಿತವಾ 4 ಕೌಸ್ತುಭ ವೈಜಯಂತಿ ಮಾಲೆಶ್ರೀ ತುಲಸಿ ಘಮಘಮಿಸುತ್ತಲಿಹ ವನಮಾಲೆರತುನ ಕಂಕಣ ಭುಜಕೀರ್ತಿಯಿಂದೊಪ್ಪುವ ಪುರುಷೋತ್ತಮನ್ನ ಬಣ್ಣಿಪರುಂಟೇ ಹೇ ಕಿತವಾ 5 ಉತ್ಪಲ ಶ್ಯಾಮಲ ಮುದವೆತ್ತ ಬಾವನ್ನವದೀಡಿಅತ್ಯಮಲ ಪೊನ್ನಂಬರ ಸುತ್ತಿದಮತ್ತಾ ನೂಪುರ ಝಣತ್ಕಾರದಿ ಮಿಂಚಿಯೆಮ್ಮಚಿತ್ತಶಿಖಿಗೆ ಪೀಯೂಷಸಿಕ್ತ ಮೇಘದಂತೆ ಒಪ್ಪುವ ಶ್ರೀಹರಿಯಹೆತ್ತ ತಾಯಿ ಆಪ್ತ ಬಂಧು ಗೋತ್ರ ಗತಿ ನೀನೆ ನಮ್ಮ ಚಿತ್ತವೆಂದು ನಂಬಿ ತನ್ನ ಹತ್ತಿಲಿ ಸಾರಿದವರಒತ್ತಿ ತಾಂ ರಥವನೇರಿ ಸತ್ವರ ಬರುವೆನೆಂದುಮತ್ತಕ್ರೂರನೊಡನೈದಿದ ಹೇ ಕಿತವಾ 6 ಲಕ್ಷುಮಿರಮಣನವ ಸೂಕ್ಷುಮ ಗೊಲ್ಲತೇರಾವುಕುಕ್ಷಿಯೊಳು ಬೊಮ್ಮಾಂಡವವಗೆ ಮಕ್ಷಿಕಗಳಂತಿಪ್ಪೆವುಮೋಕ್ಷದರಸನು ಅವ ಗೋಕ್ಷೀರದಿ ತೃಪ್ತರಾವುಲಕ್ಷಿಸುವದೆಂತೋ ಎಮ್ಮನು ಶ್ರೀ ಹರಿಯುರಕ್ಷಿಸಲುದಿಸಿ ಜನರಕ್ಷಣೆಗೆ ಪಾಲÉ್ಬಣ್ಣೆಯಭಕ್ಷಿಸಿ ನಿರುತ ನಮ್ಮ ಅಕ್ಷಿಗೆ ಹಬ್ಬವನುಣಿಸಿಈ ಕ್ಷೋಣಿ ಚರಾಚರ ದೀಕ್ಷಿಗೆ ನರರ ಸಾಮ್ಯವಕ್ಷ(ಮ)ಣರಾದೆವೊ ಮೂರ್ಖರೋ ಹೇ ಕಿತವಾ 7 ಸಿರಿ ಮಂದರೋದ್ಧರನಂಘ್ರಿಯಪೊಂದುವ ಭಾಗ್ಯಕ್ಕೆಣೆ ಉಂಟೆ ಶ್ರೀಹರಿಯಅಂದೆಮ್ಮೊಳು ರಾಸಕ್ರೀಡೆಯಿಂದ ಬಂದಪರಾಧವ-ನೊಂದನೆಣಿಸದೆ ಸಲಹೆಂದು ಬಿನ್ನೈಸಿ ಸಾಷ್ಟಾಂಗದಿಂದವಂದಿಪೆವೋ ಭಕ್ತ ಬಂಧುವಿಗೆ ನಮ್ಮ ಹೃದಯ ಮಂದಿರದೊಳೆಂದೆಂದಿರೆಂದು ಹೇ ಕಿತವಾ 8 ಹೆಂಗಳೇರೊಂದಾಗಿ ಅಂತರಂಗದರಸನಾಡಿದಮಂಗಳಚರಿತೆಯನ್ನು ಸಂಗೀತದಿಂ ಪೊಗಳುತ್ತಕಂಗಳಶ್ರುಗಳೆವುತ್ತ ಇಂಗಿತಜ್ಞ ದೇವ-ನಂಗಸಂಗದ ಸುಖವ ನೆನೆದು ಶ್ರೀಹರಿಯಮಂಗಳ ವೇದಸ್ತೇಯಾರಿ ಶೃಂಗಾರ ಕೂರವ ನಮ್ಮಪೊಂಗಣ್ಣನ ಸೀಳ್ದ ನರಸಿಂಗ ವಟು ಭಾರ್ಗವನೆಅಂಗದ ಪಾರ್ಥ ಕಂಬುತುರಂಗಪ ರಂಗವಿಠಲತುಂಗ ಮಹಿಮ ನಮೋ ಎಂಬೆವೋ ಹೇ ಕಿತವಾ 9
--------------
ಶ್ರೀಪಾದರಾಜರು
ಅನುದಿನ ಘನ ತನ್ನೊಳಗೆ ತುಂಬಿಹದು ನಿನ್ನೊಳಗೆ ದ್ರುವ ಓದಿ ಕೇಳಿ ಮರುಳಾದ್ಯೊ ಮನವೆ ಸಾಧಿಸಲಿಲ್ಲ ಸ್ವರೂಪ ವೇದವೋದಿ ವಿವದಕೆ ನೀನು ಸಾಧಿಸಿದೊ ಬಲುಕೋಪ ಭೇದವಿಡಿದು ಬಾಧೆಗೆ ಗುರಿಯಾಗಿ ಆದಿ ನಿನಗೆ ನೀ ಪಾಪ ಘನಗುರು ಕುಲದೀಪ 1 ದೇಹದ ಒಳಗಿನ ದೇವರ ತಿಳಿಯದೆ ಬಾಹ್ಯ ರಂಜನಗೆದೆರದ್ಯೊ ಸೋಹ್ಯವರಿಯದೆ ಶ್ರೀಹರಿ ಭಕ್ತಿಯ ಅಹಂಭಾವದಿ ಮೆರೆದ್ಯೊ ದೇಹಾಭಿಮಾನದಲಿ ಸೋಹಂಭಾವದ ವಾರ್ತೆಯ ಜರಿದ್ಯೊ ಸವಿ ಸುಖವನು ಮರೆದ್ಯೊ 2 ಕನಸುದೋರುವ ಜನ ಪ್ರಪಂಚವ ನೆನೆಸಿ ಬಯಸುವದ್ಯಾಕೆ ಖೂನ ತಿಳಿಯದೆ ಸತ್ತು ಹುಟ್ಟಿ ಜನಿಸಿ ಬಾಹುದು ಯಾಕೆÉ ಹೀನಯೋನಿಯ ಮುಖದಲಿ ಬೀಳುವ ದಣುವಿಕಿ ನಿನಗಿದು ಬೇಕೆ ಅನುದಿನ ನಿನಗಿದು ತಾ ಸಾಕೆ 3 ಹಾದಿತಪ್ಪಿ ನಡೆವದು ವೇದಾಂತದ ಇದು ನಿನಗುಚಿತೆ ಸಾಧು ಸಜ್ಜನರನುಸರಿಸದೆ ತಾ ಇಹುದೊಂದು ಸ್ವಹಿತೆ ಗಾದಿಯ ಮಾತೆ ಬಂದುದು ಪುರುಷಾರ್ಥೆ 4 ಶರಣ್ಹೊಕ್ಕರ ಕರುಣಿಸಿ ನೋಡುವ ಎರಡಿಲ್ಲದೆ ಗುರುನಾಥ ಕರವಿಡಿದು ಪಾರನೆ ದಾಟಿಸುವಾ ಸುರಮುನಿಜನ ಸೇವಿತ ತರಣೋಪಾಯದ ಸಾಧನದೋರುವ ತರಳ ಮಹಿಪತಿ ದಾತ ಮನವೆ ನಿನಗಿದು ಸುಪಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಮ್ಮ ನೀ ಕರೆತಾರೆ ಅರವಿಂದನಯನ ಒಮ್ಯಾದರು ಬಾರ ನಮ್ಮನೆಗೆ ಬ್ರಹ್ಮನ ಪಡೆದನಗಮ್ಯಮಹಿಮನೆ ತಾ ಕಾಮ್ಯಾರ್ಥ ಕರೆವ ಶ್ರೀ ರಮ್ಮೆರಮಣನ ಪ ಘನ ಉದಕದಿ ನೋಡೆ ಗ್ರಂಥಚೋರನ ಕೊಂದು ವೇದವ ತಂದಜಗಿತ್ತು ಬರುವೊನೊ ಪಯಾಬ್ಧಿಯೊಳು ಸುಧೆ ಸುರಜನರಿಗೆ ನೀಡಿ ಮೇರುಮಂದರದಲಡಗಿಕೊಂಡಿಹನೊ 1 ಭೂಮಿ ಬಗಿದು ನೋಡ್ಹೇಮಾಕ್ಷನಂತಕನಾಗಿ ಕೋಡಿಂದಲಾ ಧರೆನೆತ್ತಿ ಬರುವೊನೊ ಉಗುರಿನಿಂದಲಿ ಉರಬಗಿದು ಕರುಳನ್ಹಾಕಿ ಮೃಗರೂಪ ಧರಿಸಿ ಕಂಬದಲಿ ಬರುವೊನೊ 2 ಗೊತ್ತನ್ಹೇಳುವೆ ಈ ಜಗತ್ತು ಸಾಲದಲ್ಹೋಗಿ ಒತ್ತಿ ಬಲಿಯ ಬಾಗಿಲ್ಹತ್ತಿಲಿರುವೊನೊ ಹೈಹಯ ಮೊದಲಾದ ಸರುವ ರಾಜರನೆಲ್ಲ ಗೆಲಿದು ಕಾಮಧೇನು ಕೊಂಡು ಬರುವನೊ3 ಒಬ್ಬ ಸತಿಯನಾಳಲಾರದೆ ಗರ್ಭಿಣಿಯ ದಬ್ಬಿ ಕಾನಡಿಗೊಬ್ಬೆ (ಕಾಡಿನಲ್ಲೊಬ್ಬೆ?) ಲ್ಲಿರುವೊನೊ ತೋಷ್ಟಪುತ್ರಿಯರು ಮೇಲಷ್ಟಭಾರ್ಯರು ಶತಪತ್ನೇರನಾಳದಿನ್ನೆತ್ತÀ ಪೋಗಿಹನೊ 4 ಬತ್ತಲೆ ತಿರುಗುವನಿತ್ತ ಬರುವನ್ಹ್ಯಾಗೆ ವಸ್ತ್ರವ ಕೊಟ್ಟು ನಮ್ಮ್ಹತ್ತಿಲೆ ಹರಿಯ ಖಡ್ಗ ಪಿಡಿದು ಕಲಿಗಳ ಕೊಲ್ಲಲ್ಹೋಗುವ ಬಿದ್ದು ಪಾದಾರವಿಂದಕ್ಕೆರಗಿ ಭೀಮೇಶಕೃಷ್ಣ(ನ) 5
--------------
ಹರಪನಹಳ್ಳಿಭೀಮವ್ವ
ಆ ಬಾಲಗೋಪಾಲ ವರ್ಣನೆ ಆಡ ಹೋಗುವಾ ಬಾರೊ ರಂಗಾ ಪ ಆಡ ಹೋಗುವಾ ಬಾರೊ ರಂಗಾ ಕೂಡಿ ಕಾಳಿಂದೀ ತೀರದಲ್ಲಿ ನಾಡ ಗೊಲ್ಲರ ಹೆಂಗಳಿಗೆಲ್ಲ ಬೇಡಿದಿಷ್ಟಾರ್ಥಗಳ ಕೊಡುವಾ ಅ.ಪ. ಆಣಿಕಲ್ಲು ಗೋಲಿ ಗಜ್ಜುಗ ಚಿಣ್ಣಿಕೋಲು ಚಂಡು ಬುಗುರಿ ಕಣ್ಣುಮುಚ್ಚಾಲೆ ಕುಂಟಹಲಿಪೆ ಬಣ್ಣ ಬಣ್ಣದಾಟಗಳನು 1 ಸೋಲುಗೆಲವಿಗೆಲ್ಲ ನೀನೆ ಪಾಲುಗಾರನಾಗಿ ನಮ್ಮ ಮೇಲೆ ಮಮತೆ ಇಟ್ಟು ಸಾನು - ಕೂಲನಾಗಿ ಕೈಯ್ಯ ಪಿಡಿಯೋ2 ಮೆಟ್ಟು ಮೆಟ್ಟು ಕೋಲು ಕೈಲಿ ಕಟ್ಟು ಬುತ್ತಿ ಕೊಳಲು ಕಂಬಳಿ ಧಿಟ್ಟ ಗೋವಳರಾಮ ಶ್ರೀದ - ವಿಠಲಯ್ಯ ಯಾಕೆ ತಡವೋ3
--------------
ಶ್ರೀದವಿಠಲರು
ಆಡುವ ಬನ್ನಿರಿ ಬಾಲಕರೆ ಪ ರೂಢಿಗಚ್ಚರಿಯಾಗಿ ಬಲುಲೀಲೆಗಳಿಂ ಅ.ಪ ಜನನ ಮರಣವÉಂಬ ಚೆಂಡು ಬುಗುರಿಯಿಂ ಮನದ ವೃತ್ತಿಗಳೆಂಬ ಗೋಲಿಗಜ್ಜುಗದಿಂ ಜನಸಂಘವೆಂಬುವ ಚಿಳ್ಳೆಕೋಲುಗಳಿಂ ಅನುದಿನ ಭ್ರಾಂತಿಯೆಂಬ ಕವಣೆ ಕಲ್ಲುಗಳಿಂ 1 ಏಳುತಲೀ ಮುಖ ತೊಳೆದು ನೀವೆಲ್ಲ ಕರ್ಮ ಭಕ್ಷಗಳೆಲ್ಲ ಲೀಲೆಯಿಂ ಮೆಲ್ಲುತಲಿದರೊಳು ಬಲ್ಲ ಶೀಲ ಸದ್ಗುಣವುಳ್ಳ ಬಾಲಕರೆಲ್ಲ 2 ಶ್ರವಣ ಮನನವೆಂಬ ಸಾಧನೆಯಿಂದ ಭವಹರ ಗುರುರಾಮ ವಿಠಲ ಮುಕುಂದ 3
--------------
ಗುರುರಾಮವಿಠಲ
ಆಡುವರೇಚಕ ಪೂರಕ ನಂದಿಯ | ಜೋಡಿಸಿ ಎರಡನು ಮೆರೆವಸುಷಮ್ನಿಯ | ನಾಡಿಯ ರಥಿಕರ ಹೂಡುತ ಮೆಲ್ಲನೆ | ನಿಜಮನ ಸಾರಥಿಯಾ | ಕೂಡಿಸಿ ಹರುಷಲೇರಿ ನಡೆಸುತ ಸ | ವಾಡಿಕಿಯಿಂದಲಿ ಮೇಲ್ಗುರಿಯಾತ್ರೆಯ | ಮಾಡಿ ವಿಲಾಸದಲಾಡಿದ ಮಹಿಪತಿ | ಗುರುಮೂರ್ತಿಗೆ ಶರಣು
--------------
ಕಾಖಂಡಕಿ ಶ್ರೀ ಕೃಷ್ಣದಾಸರು