ಒಟ್ಟು 2 ಕಡೆಗಳಲ್ಲಿ , 1 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಚನ ಮನವು ಬಿಲ್ಲನೆ ಮಾಡಿ ತನುವು ಹೆದಿಯನೆ ಕಟ್ಟಿ ಅನುಭವದ ಅಂಬಿನಲಿ ಜನನ ಮರಣದ ಗುರಿಯ ಕೆಡಹಿದಾ ಜ್ಞಾನಸಾಗರ ಗುರುನಾಥನೆಂದು ಸ್ತುತಿಸಿದಾ ಮಹಿಪತಿಯು |
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿ ನಮ್ಮ ದೇವದತ್ತ ಬ್ರಹ್ಮಾನಂದ ಅವಧೂತ ಸಮಸ್ತಜನದಾತ ಬ್ರಹ್ಮಾದಿಗಳೊಂದಿತ ಧ್ರುವ ಕುಡಲಿಕ್ಕೆ ತಾ ಉದಾರಿ ಬಲು ದೊಡ್ಡ ಉಪಕಾರಿ ಕಡೆಗಾಣಿಸುವ ಧೊರಿ ನಿಜ ನೀಡುತಿಹ್ಯ ಸಾರಿ ಬಡವರಿಗೆ ಆಧಾರಿ ಭಕ್ತಜನ ಸಹಕಾರಿ ಪರಿ ಮಾಡುತಿಹ್ಯ ಮನೋಹರಿ 1 ಬೀರುತಿಹ್ಯ ನಿಜನೋಡಿ ಕರದಲ್ಲಭಯ ನೀಡಿ ಗುರುತಿಟ್ಟಿದೆ ಸೂರ್ಯಾಡಿ ಶರಣರು ನಿಜಗೂಡಿ ಅರುವ್ಹೆ ಅಂಜನ ಮಾಡಿ ಕುರುವ್ಹೆದೋರುದಿದರಡಿ ಧರೆಯೊಳಿದೆ ಕೊಂಡಾಡಿ ಗುರುನಾಥನೆಂದು ಪಾಡಿ 2 ಅನಾಥ ಬಂಧುನೀತ ದೀನದಯಾಳು ಸಾಕ್ಷಾತ ಅನುದಿನದೆ ಪ್ರಖ್ಯಾತ ಘನಗುರು ಶ್ರೀನಾಥ ಮನೋಭಾವ ಪೂರಿತ ಎನಗುಳ್ಳ ದೇವದತ್ತ ದಾತ ಭಾನುಕೋಟಿ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು