ಒಟ್ಟು 55 ಕಡೆಗಳಲ್ಲಿ , 23 ದಾಸರು , 52 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

* ನೋಡಬಲ್ಲಿರೆ ದಿವ್ಯ ಉಡುಪಿ ಕ್ಷೇತ್ರ ಸತ್ಪಾತ್ರ ಪ. ಶ್ರೇಷ್ಠ ಸದ್ಗುರು ಚರಣ ಕಮಲಗಳಿಗಭಿನಮಿಸಿ ಅಷ್ಟು ದೇವತೆಗಳಿಗೆ ಅಭಿವಂದಿಸಿ ಮುಟ್ಟಿ ಹಿರಿಯರ ಚರಣ ಮಹದಾಜ್ಞೆ ಸ್ವೀಕರಿಸಿ ಪಟ್ಟ ಬ್ರಹ್ಮನ ಪದಕೆ ಸಿರಿಹರಿಗೆ ಎರಗಿ 1 ಎಷ್ಟು ಜನ್ಮದ ಫಲವೊ ಈ ಯಾತ್ರೆ ಕೈಕೊಳಲು ಶ್ರೇಷ್ಠ ಶ್ರೀ ಮಧ್ವಮುನಿ ಮತದಿ ಜನಿಸಿ ದಿಟ್ಟ ವೈಷ್ಣವರಾದ ಭಕ್ತಸಂಗವ ಕೂಡಿ ಬಿಟ್ಟು ಮನ ಕಲ್ಮಷಗಳೆಲ್ಲ ಮುಂದೋಡಿ2 ಭರತಖಂಡದಿ ಪುಟ್ಟಿ ವಾಯುಮತ ಪೊಂದಿದಕೆ ಹರುಷದಲಿ ಈ ಯಾತ್ರೆ ಗೈದಲ್ಲದೆ ಹರಿದು ಪೋಗದು ಜೀವದಜ್ಞಾನದಂಧತೆಯು ಪರಮ ಸುಜ್ಞಾನದಾತನ ನೋಡಬನ್ನಿ 3 ಮಧ್ವರಾಯರ ಕರುಣ ಮುದ್ದು ಕೃಷ್ಣನ ಕತೆಯು ಸದ್ವೈಷ್ಣವರ ಸಂಗ ಸನ್ಮೋದ ಲಾಭ ಹೃದ್ವನಜದಲಿಪ್ಪ ಹರಿಯ ಕಾಣಲು ಮಾರ್ಗ ಗೆದ್ದು ಭವದಬ್ಧಿ ದಾಟುವಿರಿ ನೀವಿನ್ನು 4 ಶ್ರೀ ಪತಿಯು ಬಾಲರೂಪದಿ ಇಲ್ಲಿ ನೆಲಸಿಹನು ಗೋಪಿಕಾಜನಪ್ರಿಯ ಗೋಪಿಬಾಲ ಗೋಪಾಲಕೃಷ್ಣವಿಠ್ಠಲನ ನೋಡುವ ಪುಣ್ಯ ಈ ಪರಮ ಪುರುಷನೇ ತಂದಿತ್ತನೆಂದೂ 5
--------------
ಅಂಬಾಬಾಯಿ
ಗೋಪಿಕಾ ಗೀತೆ ಬಾಲ ಲೀಲೆಯ ಜಗಕೆ ತೋರುತ 1 ಗಾಡಿಗಾರನು ಅವಳ ಹೆಗಲನೇರಿಸಿ 2 ದೀನನಾಥನು ಅದೃಶ್ಯನಾದನು 3 ಅಗರು ಕಸ್ತೂರೀ ಪೂಸಿ ಹೃದಯಕೇ ಮೊಗರು ಕುಚಗಳ ಮುಖದ ಕಮಲವು 4 ಎತ್ತ ಪೋದನೋ ರಂಗ ಎನುತಲಿ ಚಿತ್ತ ಭ್ರಮೆಯಲಿ ಹುಡುಕುತ್ತಿದ್ದರು 5 ಎಲ್ಲಿ ಪೋದನೋ ಕೃಷ್ಣ ಎನುತಲಿ ಮತ್ತೆ ಸಖಿಯರು ಹುಡುಕುತ್ತಿದ್ದರು 6 ಸುತ್ತ ಗೋಕುಲಾದೊಳಗೆ ಸ್ತ್ರೀಯರೂ ಪಾದ ಕಾಣದೇ 7 ಗಿಳಿಯು ಕೋಗಿಲೇ ಹಂಸ ಭೃಂಗನೇ ನಳಿನನಾಭನ ಸುಳಿವು ಕಂಡಿರಾ8 ಕಂದ ಮೂಲವೇ ಜಾಜಿ ವೃಕ್ಷವೇ ಇಂದಿರೇಶನ ಸುಳಿವು ಕಂಡಿರಾ 9 ಇಂದಿರೇಶನು ನಮ್ಮನು ವಂಚಿಸೀ ಮಂದಭಾಗ್ಯರ ಮಾಡಿ ಪೋರನು10 ಶ್ರುತಿಗೆ ಸಿಲುಕದ ದೋಷದೂರನೇ ವ್ರತವ ಕೆಡಿಸಿರೆ ಎಲ್ಲಿಗ್ಹೋಗೋಣ11 ರಂಗರಾಯನು ಬಂದು ಸೇರಿದ 12 ಬಹಳ ಪರಿಯಲಿ ಸ್ತೋತ್ರಮಾಡಲು ಕೃಷ್ಣರಾಯನು ಬಂದು ಸೇರಿದ13 ಮದನನಯ್ಯನಾ ಮುದದಿ ನೆನೆದರೆ ನದಿಯ ತೀರದಿ ವಿಜಯವಿಠ್ಠಲ14 ನದಿಯ ತೀರದ ತೀರ್ಥಪಾದರುಸಲಿಹ ಭಕುತರ ಪಾಲಿಸೂವನು 15
--------------
ವಿಜಯದಾಸ
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಕ್ಷವಿದ್ಯಾನಿಪುಣ ಅಕ್ಷಯಾತ್ಮಕ ಸುಗುಣ ಅಕ್ಷಯತರ ಸುವಚನ ಲಸಿತವದನ ದ್ಯೂತೋದ್ಯೋಗತರ ಖ್ಯಾತ ಸುಗುಣೋಪೇತ ದೈತ್ಯ ಸಂಕುಲಘಾತ ಪ್ರಾಣನಾಥ ಸುರಸಿದ್ಧ ಸಂಪ್ರೀತ ಮಾರತಾತ ಗೋಪಾಲ ಕುಲರತ್ನದೀಪ ಗೋಕುಲ ಶರಣ ಗೋಪಿಕಾಜನಮನದ ತಾಪಶಮನ ಲೀಲಾ ವಿಭೂತಿಯುಗನಿರತ ಸುಹಿತ ನೀಲಾಂಬರಾವರಜ ರಾಜರಾಜ ಕಾಲಾಂಬುದಾಕಾರ ಖಲಕುಠಾರ ಪಾಹಿಮಾಂ ಶ್ರೀಶೇಷಗಿರಿವಿವಿಭಾಕ್ಷ
--------------
ನಂಜನಗೂಡು ತಿರುಮಲಾಂಬಾ
ಆರುತೀಯ ಬೆಳಗಿರೀಗ ನಾರಿಯೇರು ಶ್ರೀನಿವಾಸಗಾರುತೀಯ ಪ. ಆರುತೀಯ ಬೆಳಗಿರೀಗ ಸಾರಸಾಕ್ಷ ಪದ್ಮಿನೀಯ ಸೇರಿ ಲಕುನಿಯಿಂದ ಮೆರೆವೊ ಮೂರುಲೋಕದೊಡೆಯ ಕೃಷ್ಣಾ ಅ.ಪ. ಮೀನನಾಗಿ ವೇದ ತಂದು ದಾನವರ ವಂಚಿಸುತ್ತ ಯಾನದಲ್ಲಿ ಭೂಮಿ ತಂದ ದೀನರಕ್ಷಕ ನಾರಸಿಂಹಗೆ 1 ಚಲುವ ಬ್ರಹ್ಮಚಾರಿಯಾಗಿ ಛಲದಿ ಕ್ಷತ್ರಿಯೇರ ಕೊಂದು ಒಲಿವ ಶಿವನ ಬಿಲ್ಲ ಮುರಿದು ನಲಿದು ಬಂದ ಗೋಪಿಕಂದಗಾ 2 ನಾರಿಯೇರ ವ್ರತವನಳಿದು ತೆÉೀಜಿಯೇರಿ ಮೆರೆವ ಧೀರ ವಾರವಾರ ಪೂಜೆಗೆಂದು ಶೂರ ಶ್ರೀ ಶ್ರೀನಿವಾಸಗಾರುತೀಯ 3
--------------
ಸರಸ್ವತಿ ಬಾಯಿ
ಉರುಟಣಿಯಾ ಸರಸಿಜನಾಭಾಗ್ಹರುಷದಲಿ ಮಾಡುವೆನಾ ಪ ಶಂಖಚಕ್ರಧರಾ ವೆಂಕಟೇಶ ನಿಮಗೆ | ಕುಂಕುಮ ಹಚ್ಚುವೆ ಪಂಕಜಾಕ್ಷಿ ನಾ 1 ನಂದಗೋಪಿಕಂದ ಹಚ್ಚುವೆ ಗಂಧ ಹಚ್ಚುವೆ ಸುಗಂಧ | ಮುಕುಂದಗೆ 2 ಯಶೋದೆಯ ಬಾಲಾ ಕಾಮಿತಶೀಲಾ ಹಾಕುವೆನು ಮಾಲಾ ಗೋಪಾಲಗೆ 3 ಪೊಡವಿ ಪಾಲಿಪಾ | ಕಡಲಶಯನಾ | ಕೊಡುವೆನು ವಿಡಾ ಪಿಡಿ ಬೇಗನೆ 4 ಪೊಡವಿ ಪಾಲಿಪಾ ಕಡಲಶಯನಾ | ವಂದಿಸಿ ಪ್ರಾರ್ಥನೆಗೈಯುವೆನಾ 5
--------------
ಶಾಮಸುಂದರ ವಿಠಲ
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ
ಏನ ಬೇಡಲೊ ನಿನ್ನ ದೇವಾಧಿ ದೇವ ಪ ಏನಹುದೊ ನಿನ್ನೊಳಗೆ ಮಹಾನುಭಾವ ಅ.ಪ ವನಧಿ ಹಾಸಿಗೆಯು ವಟಪತ್ರವನಿತೆಯರ ಬೇಡಲೆ ಬ್ರಹ್ಮಚಾರಿಘನ ಸಖ್ಯವನು ಬಯಸೆ ನೆನೆಯುವರ ಮನದಲಿಹೆತಿನುವುದಕೆ ಕೇಳುವೆನೆ ನವನೀತಚೋರ 1 ಒಡವೆಗಳ ಬಯಸೆ ಶಿಖಿಪಿಂಛ ತುಳಸಿ ಪತ್ರಕಡು ಸೈನ್ಯವನೆ ಬಯಸೆ ಗೋಪಾಲನುಬಿಡದೆ ರೂಪವÀ ಬಯಸೆ ನೀಲಮೇಘಶ್ಯಾಮಉಡುವುದಕೆ ಕೇಳುವೆನೆ ಸ್ತ್ರೀವಸನ ಚೋರ 2 ಶಕ್ತಿಯನು ಗೋಪಿಕಾ ಸ್ತ್ರೀಯರಲಿ ವ್ರಯಗೈದೆಭಕ್ತಿಯನು ಸತ್ಯವಂತರಿಗಿತ್ತಿಹೆಭಕ್ತರನು ವಂಚಿಸುತ ನೀನು ಬಚ್ಚಿಟ್ಟಿರುವಮುಕ್ತಿ ಕಾಂತೆಯ ಕೊಡು ಸುಖಿಪೆನೊ ಶ್ರೀಕೃಷ್ಣ3
--------------
ವ್ಯಾಸರಾಯರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಕೃಪಾಳೋ ಕೃಷ್ಣ ಕೃಪಾಳೋವ್ಣೃ ಕುಲೋದ್ಭವ ಕೃಷ್ಣ ಕೃಪಾಳೋ ಪವಸುದೇವ ನಂದನ ವರ ರತ್ನ ಭೂಷಣಕುಶಲಕರೇಕ್ಷಣ ಕೃಷ್ಣ ಕೃಪಾಳೋ 1ಭುವನತ್ರಯಾಧಾರ ಬಹುಗೋಪಿಕಾ ಜಾರನವನೀತ ದಧಿ ಚೋರ ಕೃಷ್ಣ ಕೃಪಾಳೋ 2ಮುರಳೀನಾದ ವಿನೋದ ವಿಶ್ವಾತ್ಮಕವಿರಳೀಕೃತಲೀಲ ಕೃಷ್ಣ ಕೃಪಾಳೋ 3ಗುಂಜಾಭರಣ ಸುರಂಜಿತ ಮಣಿಮಯಮಂಜೀರ ಪದಪದ್ಮ ಕೃಷ್ಣ ಕೃಪಾಳೋ 4ರಾಗಾದಿ ದೋಷ ಕಲುಷಮನಸೋ ಮೇಕಾಗತಿರಧುನಾ ಕೃಷ್ಣ ಕೃಪಾಳೋ 5ಆರ್ತಸಂರಕ್ಷಕ ಪಾರ್ಥಸಹಾಯಕಕೀರ್ತಿವಿಧಾಯಕ ಕೃಷ್ಣ ಕೃಪಾಳೋ 6ಕಾಮಸಂಪುಟದಿವ್ಯನಾಮಜಪನಶೀಲಕಾಮಿತಾರ್ಥಪ್ರದ ಕೃಷ್ಣ ಕೃಪಾಳೋ 7ಕಾಳೀಯ ಫಣ ಮಾಣಿಕ್ಯ ರಂಜಿತ ಪಾದಕಾಳಿಂದೀ ಪಾವನ ಕೃಷ್ಣ ಕೃಪಾಳೋ 8ಮಾಮವಲೋಕಯ ಮಾಧವ ಮುರಹರತಾಮಸಮಪಹರ ಕೃಷ್ಣ ಕೃಪಾಳೋ 9ತವ ಸತ್ಕಥಾ ಶ್ರವಣೇ ಕೀರ್ತನೇ ಮಮಶಿವಸುಧಿಯಂ ದೇಹಿ ಕೃಷ್ಣ ಕೃಪಾಳೋ 10ತಿರುಪತಿ ಕ್ಷೇತ್ರನಿಲಯ ಕರುಣಾಲಯವರದ ಶ್ರೀ ವೆಂಕಟಕೃಷ್ಣ ಕೃಪಾಳೋ 11 ಓಂ ಕೃಷ್ಣಾವ್ಯಸನಕರ್ಷಕಾಯ ನಮಃ
--------------
ತಿಮ್ಮಪ್ಪದಾಸರು
ಗೋಕುಲ ಆನಂದ ಲೀಲಾ | ಘನ ಸುಂದರ ರುಕ್ಮಿಣಿಲೋಲ ಶ್ರೀಕರ ಶುಭದಾಯಕ ವರ | ಗೋಪಾಲ ಬಾಲ ಪ ಮಣಿರಂಜಿತ ಭೋಗರಾಗವಿಮಲ ಶೃಂಗಾರಶೀಲ ಸುರಪಾಲ ಸಂಸೇವ್ಯ ಗಾನಲೋಲ ಅ.ಪ ಪದ್ಮಲೋಚನ ಪರಿವೃತ ಶರಣವತ್ಸಲ ಸರ್ವಜ್ಞ ಸುಭಾಷಿತ ಸದ್ಭಾವ ವಿನಯಾದಿ ಭೂಷಿತ ಚಿತ್ರ ವಿಚಿತ್ರ ಕರ್ಷಿತ ಸೂತ್ರಾ ಮನಸಿಜ ಗಾತ್ರಾ | ಸುವಿನೀತ ಗೋಪೀನಂದನ 1 ಮಣಿಪೀಠ ಮಂಡಿತಾ | ಕಿರೀಟ ಮಣಿಮಯ ರಾರಾಜಿತ | ಗೋಪಿಕಾನತ ಪಾಂಡವಪಕ್ಷ ದನುಜವಿಪಕ್ಷ |ಕಮಲದಳಾಕ್ಷ ದಾನವಶಿಕ್ಷ ಶ್ರೀವನಮಾಲಿಕಾವಕ್ಷ | ಮಾಂಗಿರಿನಾಥಾ ದೀನರಕ್ಷ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲ ಬಾಲಾ ತ್ರಿಭುವನ ಪಾಲಾ ಕರುಣಾಲವಾಲ ಗೋಪಾಲ ಬಾಲಾ ಗೋಪೀ ಬಾಲಾ ಭಕುತಾನುಕೂಲ ಪ ಪಾಪಕುಲಾನಲ ತಾಪಸ ಸಂಕುಲ ಶ್ರೀಪತೆ ಮಾಂಗಿರಿನಿಲಯ ಶುಭಾಕುಲ ತಾಪತ್ರಯ ಕುಲಜಾಲ ನಿರ್ಮೂಲ ಗೋಪಗೋಪಿಕಾನಂದದುಕೂಲಾಅ.ಪ ಮುರಳೀಧರ ಘನಸುಂದರ ಭಾವ ದೇವಾದಿದೇವ ಸರಸೀರುಹದಳನಯನ ಸ್ವಭಾವಾ ಜೀವಾದಿಜೀವ ವರದಾಯಕ ಶರಣರ ಸಂಜೀವಾ ಮೃದುಮಧುರಸ್ವಭಾವ ಸ್ವರನಾದದಿ ಘಲು ಘಲ್ಲೆನುತಿರುವಾ ವರನೂಪುರದುಂಗುರ ಝಣ ಝಣರವ ಹರುಷದೊಳೆಲ್ಲೆಡೆಯೊಳು ನಲಿನಲಿದಾಡುವ 1 ಮುದ್ದಾಡಿ ನಲಿಯಳೆ ನಿನ್ನ ಯಶೋದಾ ಅಘರೂಪವಾದ ಮುದ್ದೆ ಬೆಣ್ಣೆಯ ಮೆಲುವಾತುರದಿಂದ ಕರಯುಗಗಳಿಂದ ಕದ್ದು ನೀ ನೋಡುವುದೇ ಅತಿಚೆಂದ ಭಕ್ತರಾನಂದಾ ಮದ್ದುಣಿಸಿದಳ ಒದ್ದು ಸಂಹರಿಸಿದ ಮೆದ್ದು ಉದ್ಧರಿಸೊ ಗೋವಿಂದ ನಂದನಕಂದ 2 ಅಕ್ಕೋ ಬೃಂದಾವನದಾನಂದ ಹೊಂಗೊಳಲಿಂದಾ ಇಕ್ಕೋ ಚೆಂದದ ಗಾನಾನಂದ ಕಿರುನಗೆಯಿಂದ ಕಕ್ಕುಲತೆಯ ಮದದಿಕ್ಕೆಗೆ ಸಿಲುಕದ ಠಕ್ಕುಗಾರ ಸೊಬಗಿಂದ ರಾಧೆಗೆ ಮುದ ವಿಕ್ಕಿ ಮಡುವ ಧುಮ್ಮಿಕ್ಕಿ ನರ್ತನಗೈದ 3 ವೈರಿ ಕಂಸಾರಿ ಶೌರಿ ಬಾ ಬಾರೋ ಪಾಂಡವ ಪಕ್ಷ ವಿಹಾರೀ ಶಿಶುಪಾಲ ಸಂಹಾರೀ ಭವ ಬಂಧನ ಪರಿಹಾರಿ ಶರಣರಿಗುಪಕಾರೀ ಇಭಕುಲಕೇಸರಿ ಘನ ಗಿರಿಧಾರೀ ಅಭಯಪ್ರದ ಹರಿ ಗೂಢಸಂಚಾರಿ ನಭಚರಹರಿ ಮಾಂಗಿರಿ ಸುವಿಹಾರೀ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಾಲ ಸಕಲಪಾಲ ಶ್ರೀಪಾಲ ಜಗಕೆ ಮೂಲ ಪ ತಾರಾಧಿಪಾಶು ಜಾಲ ಶ್ರೀ | ಪಾವನ ಚರಣ ಮಾಲೋಲ ಅ.ಪ ಗೋಪಿಕಾ ವನಸುಮ ಮಧುಕರ ಸುರುಚಿರ ಸುಖಕರ ವಿಸರ ಅಘಕುಲಪರಿಹರ ಸಮೀರಕುವರ ನುತಪದಮುಕುರ ಮುರಳೀಧರಿತಕರ ನೀರಜಾಕ್ಷಶೃಂಗಾರ ನಿಕರ ಮಾಂಗಿರೀಶ ಭವನಾಶ ರಾಮಭದ್ರ ಶುಭಕರ ವಿಧಿಶಿವ ಸುರನಿಕರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗೋಪಿ ಜನಪಾಲ ಪಾವನ ತರಲೀಲ ಲಕ್ಷ್ಮೀಲೋಲ ಕಾಲನಮಿತ ಸುರಜಾಲ ಸೇವಿತ ಶೌರಿ ಪ ವಂದಿತ ಸುರಮುನಿ ವೃಂದ ಭಕುತಜನ ಬಂಧುವಾಗಿರುವ ಗೋವಿಂದ ಗೋಪಾಲದೇವ ಮಂದಹಾಸ ಬಲಿ ಬಂಧನ ಮುರಹರ ಸಿಂಧು ಶಯನ ಗೋಪಿಕಂದ ಮುಕುಂದ 1 ಕಂಸಾರಿ ಕರುಣಾಭ್ದಿ ಶೃಂಗಾರಿ ಸುಜನ ಮನೋರಥ ಸುರತರು ಹಾರ ಹೀರ ಗಂಭೀರ ವೈಯಾರ 2 ಅಂಬುಜ ಭವನುತ ಶಂಬರಾರಿಯಪಿತ ಜಂಭಾರಿ ನಮಿತ ಹೇರಂಬ ಜನಕಪ್ರೀತ ಕಂದರ ಕಮಳಾಂಬಕ ರಮಣ 3 ರಾಗಿ ಜನರ ಭವರೋಗ ಹರಣಹರಿ ನಗಧರ ಸಗರ ವಂಶೋದ್ಧಾರ ಖಗವರ ಗಮನ ಸುಗುಣ ಗಂಭೀರ 4 ದುರಿತ ಸಂಹಾರಿ ಕರದಿ ಚಕ್ರಧಾರಿ ಸುರರ ಸಿರಿ ಧುರ ಧೀರ ಚಿಪ್ಪಳಿವಾಸ ವೇಣುಗೋಪಾಲ 5
--------------
ಕವಿ ಪರಮದೇವದಾಸರು