ಒಟ್ಟು 18 ಕಡೆಗಳಲ್ಲಿ , 10 ದಾಸರು , 18 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಗ) ನದಿಸರೋವರಗಳು ನದನದಿಗಳನು ಸ್ಮರಿಸಿರೋ ನದನದಿಗಳನು ಸ್ಮರಿಸಿ ಹೃದಯ ನಿರ್ಮಳರಾಗಿ ಮುದದಿಂದ ನಿಮ್ಮ ಮನದಧಮತನ ಬಿಟ್ಟ ಸಂ ಪದವಿಗೆ ಸೋಪಾನದಂತಾಗುವದು ಶ್ರೀ ಪದುಮನಾಭನು ವೊಲಿವನು ಪ ಸಿಂಧು ಮರುಧೃತಿ ಹೇಮವತಿ ನೇಮಿ ನೇತ್ರವತಿ ತರಣಿಸುತೆ ನರ್ಮದಾ ಗಾಯತ್ರಿ ಗೋಮತಿ ಗರುಡ ಸಾಧರ್ಮಾ ಸರಸ್ವತಿ ಮಣಿಮುಕ್ತ ಮುಕ್ತನದಿಯು ಪ್ರಣತ ವರದಕಾಗಿಣಿ ಕೃಷ್ಣವೇಣಿ ವೇದವತಿ ಹರಿಧೃತಿ ಇಂದ್ರಾಣಿ ಪುನಃ ಪುನಃ ವಾಣಿವಂ ಜರಫಣಿ ಭೀಮರಥಿನೀ 1 ಧಾರಿ ತುಂಗಾ ಭದ್ರಿಗಣಪತಿ ಶತಭಾಗ ನಾರದಿ ಉಭಯಪಿನಾಕಿ ಚಿತ್ರವತೀ ಮೂರು ಲೋಕೋದ್ಭವ ಭವಾನೀ ಚಾರು ಗಂಡಿಕೆ ಸರಯು ಶ್ರೋಣಿ ಭದ್ರನೀಲ ಕ್ಷೀರನದಿ ಪಾಪಘ್ನ ಮಹಾನದಿ ಅಘನಾಶಿ ವಾರಿಜಾಪ್ತಾವತಿ ಸುರ್ವಣ ಮುಖರೀ ವಿಸ್ತಾರ ಹಾಟಕ ಅತ್ರಿಣೀ 2 ಸುಲಭ ಮಂದಾಕಿನಿ ಕೌಮೋದಕಿ ಶಾಂತಿ ಕಪಿಲ ಚಂದ್ರಭಾಗ ಅರುಣೀ ಪೊಳೆವ ಕಾಳಾವತಿ ತ್ರಿಪಥಿ ಗೌರಿ ಕುಂತಿ ಅಳಕನಂದನ ಅಮಲವತಿ ಭೀಮಸಂಭೆ ಸಿ ತಾಂಬ್ರ ಪರ್ಣಿಯು ಜಯ ಮಂ ಸತಿ ಸತ್ಯವತಿ ವೈಷ್ಣವೀ 3 ಕನಿಕ ಶುಕ್ಲಾವತೀ ಬಾಹುನದಿಗೋವಿಂದ ಮಿನಗುವ ಭೋಗವತಿ ಕಾಶ್ಯಪಿಂಕಾಳಿಂದಿ ಅನುಸಿಂಧು ಐರಾವತಿ ಋಣ ವಿಮೋಚನ ಮಯೂರ ಸಂಭವೆ ನಿತ್ಯ ಪುಷ್ಕರಣಿ ಪಯೋ ಶ್ವಿನಿ ಮಹಾಪಗ ಭದ್ರ ಭೈರವಿ ವಿಚಿತ್ರ ನದಿಗಳನು 4 ಅರುಣೋದಯಲೆದ್ದು ಧರೆಯೊಳುಗಳ್ಳ ಬಲು ಸರಿತಗಳ ನೆನೆದು ಪುಳಕೋತ್ಸವದಲಿ ಪರಮ ಧನ್ಯರಾಗಿ ಪಾಪಗಳ ಪೋಗಾಡಿ ನಿರುತ ಮಾರುತ ಮತದಲೀ ಚರಿಸಿ ನಿಜಭಕುತಿಯಲಿ ಹಗಲು ಇರಳು ಇನಿತು ಸಿರಿಯರಸ ವಿಜಯವಿಠ್ಠಲನ ಚರಣಾಂಬುಜವ ಸರಸದಿಂದಲಿ ಧ್ಯಾನಗೈದು ಈ ನದಿಗಳಲಿ ಕರಣದಲಿ ತಿಳಿದು ನಿತ್ಯಾ5
--------------
ವಿಜಯದಾಸ
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಕಂಡು ಎಂದಿಗೆ ಧನ್ಯಳಾಗುವೆ ನಾನು ಪಾದ ಪುಂಡರೀಕವನೂ ಪ. ಪುಂಡರೀಕನಿಗೊಲಿದು ಒಂದು ಇಟ್ಟಿಗೆ ಮೇಲೆ ಪಾಂಡವರ ಪ್ರಿಯ ಬಂಧು ನೆಲಸಿದಂಥಾ ಪಂಡರೀ ಕ್ಷೇತ್ರದಲಿ ಚಂದ್ರಭಾಗದಿ ಮಿಂದು ಮಂಡೆ ಬಾಗುತ ಹರಿಗೆ ಹಿಂಡಘವ ಕಳೆದೂ 1 ಕೋಮಲದ ಚರಣಕಭಿನಮಿಸಿ ಕರಯುಗದಿಂದ ಶ್ಯಾಮವರ್ಣನ ಪಾದಕಮಲ ಮುಟ್ಟೆ ಆ ಮಹಾ ಆನಂದ ಅನುಭವಿಪ ಭಾಗ್ಯವನು ಶ್ರೀ ಮಹಾಲಕುಮಿಪತಿ ಎಂದು ಕಾಂಬುವೆನೋ 2 ಆಪಾರಭಕ್ತರಿಗೆ ವಲಿದ ವಿಠಲನ ಮೂರ್ತಿ ಆಪಾದ ಮೌಳಿ ಈಕ್ಷಿಸುತ ಹೃದಯದಲಿ ಇರ್ಪಮೂರ್ತಿಯ ತಂದು ಗುರುಬಿಂಬ ಸಹಿತದಲಿ ಗೋಪಾಲಕೃಷ್ಣವಿಠಲನ ಎಂದು ಕಾಂಬೆ 3
--------------
ಅಂಬಾಬಾಯಿ
ಕಂಡು ಧನ್ಯಳಾದೆ ನಾ ಪಾಂಡುರಂಗವಿಠಲನಾ ಪ. ಕಂಡು ಧನ್ಯಳಾದೆ ಹರಿಯ ಪುಂಡರೀಕ ಪದದಿ ಎನ್ನ ಮಂಡೆ ಇಟ್ಟು ವಂದಿಸುತಲಿ ಪುಂಡರೀಕ ವರದ ನಾ ಅ. ದೂರದಿಂದ ಬಂದು ಹರಿಯ ಸೇರಿವಂದಿಸುತಲಿ ಈಗ ಹಾರಹಾಕಿ ನಮಿಸಿ ಮನೋ ಹಾರ ನೋಡಿ ದಣಿದೆನಿಂದು 1 ಗುರುಗಳಂತರ್ಯಾಮಿ ಹರಿಯ ಇರಿಸಿ ಎನ್ನ ಬಿಂಬ ಸಹಿತ ಸ್ಮರಿಸಿ ಚಿಂತಿಸಿ ವಿಠಲನಲ್ಲಿ ಕರುಣಮೂರ್ತಿ ಪಾಂಡುರಂಗನ 2 ಗುರುಪುರಂದರ ಸ್ತಂಭ ಕಂಡೆ ವರದ ಚಂದ್ರಭಾಗ ತೀರದಿ ಚರಣ ಇಟ್ಟಿಗೆಯಲಿ ಇಟ್ಟು ಸಿರಿ ಗೋಪಾಲಕೃಷ್ಣವಿಠಲನ 3
--------------
ಅಂಬಾಬಾಯಿ
ಕಂಡೆ ಕಂಡೆ ಪಂಡರೀಶನ | ಕಂಡೆ ಕಂಡೆ ಪ. ಕಂಡೆ ಪಂಡರಿಪುರದಿ ಮೆರೆವನ ಕಂಡೆ ಭಕ್ತರ ಕಾವ ಬಿರುದನ ಕಂಡೆ ಮಂಡೆಯ ಚರಣದಲ್ಲಿಡೆ ಹಿಂಡು ಅಘಗಳ ತರಿವ ವಿಠಲನ ಅ.ಪ. ಕಟಿಯಲೀ ಕರವಿಟ್ಟು ಮೆರೆವನ ಹಟದಿ ವಗದಿಟ್ಟಿಗೆಲಿ ನಿಂತನ ಕಟಕ ಮಕುಟನ ವಟದೆಲೆ ಮೇಲೊರಗಿದಂಥನ ಕುಟಿಲ ಕುಂತಳ ಫಣಿಯ ತಿಲುಕನ ತೃಟಿಯು ತೆರವಿಲ್ಲದಲೆ ನಮಿತನ ವಟುವೆನಿಸಿ ಬಲಿರಾಯಗೊಲಿದನ ನಟನೆಗೈಯ್ಯವ ದಿವ್ಯರೂಪನ 1 ಚಂದ್ರಭಾಗಾ ತೀರದಲ್ಲಿಹನ ಚಂದ್ರ ಕೋಟಿಸ್ಮರನ ರೂಪನ ಇಂದಿರೆಯ ಸಹಿತದಲಿ ನೆಲಸುತ ಚಂದ್ರದ್ಹಾರಗಳಿಂದಲೆಸವನ ಬಂದ ಭಕ್ತರ ಭೇದ ನೋಡದೆ ಸಂದರುಶನಾನಂದವೀವನ ಚಂದ್ರಮಂಡಲ ಮಧ್ಯವರ್ತಿಯ ಚಂದ್ರಕುಲಕೆ ತಾ ಚಂದ್ರನೆನಿಪನ 2 ವಿಠ್ಠಲನ ಪುರದಲ್ಲಿ ಹರಿಯುವ ಶ್ರೇಷ್ಠ ಇಂದುಭಾಗೆಯಲಿ ಮಿಂದು ಮುಟ್ಟಿ ವಿಠಲನ ಚರಣಕಮಲವ ಬಿಟ್ಟು ಮನದ್ಹಂಬಲಗಳೆಲ್ಲವ ವಿಠ್ಠಲಾ ನೀನೆ ಗತಿ ಕೈ ಗೊಟ್ಟು ಕಾಯೆಂದೆನುತ ಸ್ತುತಿಸಿ ಕಷ್ಟಹರ ಗೋಪಾಲಕೃಷ್ಣ ವಿಠ್ಠಲನ ಚರಣಾಂಬುಜಗಳನು 3
--------------
ಅಂಬಾಬಾಯಿ
ಚಂದ್ರಭಾಗ ಹರಿ ವಿಠಲ | ಸಲಹ ಬೇಕಿವಳಾ ಪ ಇಂದೀವರಾಕ್ಷ ಹರಿ | ಮಂದರೋದ್ಧಾರೀ ಅ.ಪ. ಮೋದ ಬಡಿಸುವ ಭಾರಮೋದ ಮಯ ನಿನಗಲ್ಲ | ದಧಾರಿಸಿಹುದೋಆದಿ ಮೂರುತಿ ಹರಿಯೆ | ಸಾಧನ ಸಾಧ್ಯವಾಗಿಕಾದುಕೋ ಬಿಡದಿವಳ | ಮಾಧವನೆ ದೇವಾ 1 ತರತಮಾತ್ಮಕ ಜ್ಞಾನ | ಅರುಹುತಿವಳಿಗೆ ಭೇದಎರಡು ಮೂರರ ಅರಿವು | ನೆರೆ ಕೈಗೂಡಲೀಹರಿಯೆ ಸರ್ವೋತ್ತಮನು | ಸುರಪಾದಿ ಸುರರೆಲ್ಲಹರಿಯ ಕಿಂಕರರೆಂಬ | ವರಜ್ಞಾನ ವಿರಲಿ 2 ಆಗು ಹೋಗುಗಳಲ್ಲಿ | ವೇಗ ಸಮತೆಯು ಬರಲಿಜಾಗು ಮಾಡದೆ ದ್ವಂದ್ವ | ಸಹನೆ ಬರುತಿರಲೀನಾಗಾರಿ ವಾಹನನ | ನಾಮ ಸುಧೆ ಸರ್ವದಾಸಾಗಿ ಮನ ಸವಿವಂತೆ | ಹಗಲಿರುಳು ಇರಲೀ 3 ಕಾಲ | ಮೋದದಿಂ ಕಳೆವಂತೆನೀ ದಯದಿ ಪಾಲಿಸುತ | ಕಾದುಕೋ ಇವಳಾಬೋಧ ಮೂರುತಿಯಾಗಿ | ಹೇ ದಯಾಕರ ಕೃಷ್ಣಾಆದರದಿ ಸುಜ್ಞಾನ | ಭಕ್ತಿಯನ್ನೀಯೋ 4 ಭವ ಬಂಧ ಬಿಡಿಸುವುದುಶ್ರೀವರನೆ ಶ್ರೀಗುರೂ | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಧನ್ಯನಾದೆ ಪಾಂಡುರಂಗನ ಕಣ್ಣಾರೆ ಕಂಡು¥ತಂದೆತಾುಯ ಸೇವೆ ಮಾಡಿಪುಂಡಲೀಕನ ಭಕ್ತಿಗೊಲಿದುಚಂದ್ರಭಾಗಾ ತೀರದಲ್ಲಿಬಂದು ನಿಂತ 'ಠ್ಠಲನ ಕಂಡು 1ವೆಂಕಟೇಶ ಅಲ್ಲಿರುವಶಂಖಚಕ್ರ ಪಿಡಿದ ಕರವಟೊಂಕದ ಮೇಲಿಟ್ಟುಕೊಂಡುನಿಂತು ಇಲ್ಲಿ 'ಠಲನಾದ 2ಕಡಗೋಲಿಂದ ಗಡಿಗೆ ಒಡೆದುತುಡುಗು ಮಾಡಿದ್ಹುಡುಗ ಬಂದಉಡುಪಿಯಲ್ಲಿ ಕೃಷ್ಣನಾಗಿಓಡಿಬಂದಿಲ್ಲಿ 'ಠಲನಾದ 3ಎಷ್ಟು ಜನ್ಮದ ಸುಕೃತವೊ ಶ್ರೀ-ಕೃಷ್ಣ 'ಠಲರೂಪದಿಂದಭಕ್ತಜನರಿಗಾಲಿಂಗನಭೆಟ್ಟಿ ಕೊಡುತ ನಿಂತುಬಿಟ್ಟ 4ಅನ್ನಬ್ರಹ್ಮ ಉಡುಪಿಯಲ್ಲಿಚಿನ್ನ ಬ್ರಹ್ಮ ಬೆಟ್ಟದಲ್ಲಿಸಣ್ಣ ತುಳಸಿಮಾಲೆ ಸಾಕುನಾದಬ್ರಹ್ಮ ಭೂಪತಿ'ಠಲಗೆ 5ಗಲಗಲಿ ವಾಸಸ್ಥ ಶ್ರೀ ಪಾಂಡುರಂಗ
--------------
ಭೂಪತಿ ವಿಠಲರು
ನದೀಸ್ತೋತ್ರವು ಕೃಷ್ಣ ಗೋದಾವರೀ ನಂದಿನೀ ನಳಿನೀ ಹೇಮಾವತಿ ಸಿಂಧು ಸರಯು ನೇತ್ರಾವತಿ ಕುಮದ್ವತೀ ಭಾಗೀರಥೀ ಭೋಗವತಿ ಜಾಹ್ನವೀ ಜಯಮಂಗಲಿ ತ್ರಿಜಗತ್ವಾವನೀ ವಿಷ್ಣು ಪಾದೋದ್ಭವೆ ದೇವಿ ಕೃಷ್ಣವೇಣಿ ಅಘನಾಶಿನೀ ಗಂಗಾ ಯಮುನಾ ತ್ರಿವೇಣೀ ದಕ್ಷಿಣ ಪಿನಾಕಿನೀ ನರ್ಮದಾ ಸಾವಿತ್ರೀ ಗಾಯತ್ರೀ ಸರಸ್ವತೀ ಸೀತಾ ಮಾಲತೀ ಚಮಲಾಪಹ ವಾರಾಹೀ ವೈಷ್ಣವೀ ಸುಜ್ಯೋತಿ ಶಿವಗಂಗಾ ಪಂಚಗಂಗೀ ತ್ರಿಪದಗಾಮಿನೀ ಬ್ರಹ್ಮಪುತ್ರಾ ತುಂಗಭದ್ರಾ ಭೀಮರಥೀ ಗೋಮತೀ ಶರಾವತೀ ಸ್ವಾಮಿ ಪುಷ್ಕರಿಣೀ ವರಹ ಪುಷ್ಕರಿಣಿ ಪಾಂಡುತೀರ್ಥ ಪಾಪನಾಶಿನೀ ಆಕಾಶಗಂಗಾಧವಳ ಗಂಗಾ ಶಾಲ್ಮಲೀ ಲೋಕಪಾವನೀ ಕುಮಾರ ತೀರ್ಥ ವಿಷ್ಣುತೀರ್ಥ ನಾರಾಯಣತೀರ್ಥ ಕೌಮೋದಕೀ ಕಪಿಲತೀರ್ಥ ಅಲಕನಂದ ವರದಾ ಪಶ್ಚಿಮವಾಹಿನೀ ಸಿಂಧು ನದಿ ಶೋಣನದಿ ಚಂದ್ರಭಾಗ ಅರ್ಕಾವತೀ ಸುವರ್ಣ- ಮುಖರೀ ಗೋಗರ್ಭ ಶಿಂಶಾಕಾಗಿನೀ ಮಂದಾಕಿನೀ ಪ್ರಾತ:ಕಾಲೇ ಪಠÉೀನ್ನಿತ್ಯಂ ದು:ಖದಾರಿದ್ರನಾಶನಂ ಸ್ಮರಾಮಿ ನಿತ್ಯಂ ಭವದುಃಖ ದೂರಾ ಶ್ರಿ ಕಮಲನಾಭ ವಿಠ್ಠಲೋ ವಿಜಯತೇ ಶುಭಂ
--------------
ನಿಡಗುರುಕಿ ಜೀವೂಬಾಯಿ
ನೋಡಿದೆನು ವಿಠ್ಠಲನ ದಣಿಯ ಪ. ನೋಡಿದೆನು ವಿಠ್ಠಲನ ರೂಪವ ಪಾಡಿದೆನು ಮನದಣಿಯ ಹರುಷವು ಮೂಡಿತಂಗದಿ ಮುಗಿದು ಕೈ ನಾ ಮಾಡಿ ಸಾಷ್ಟಾಂಗ ಬೇಡಿ ಮನಸಿನಭೀಷ್ಟ ಸಂತತ ನೀಡು ನಿನ್ನಯ ಚರಣ ಸ್ಮರಣಿಯ ಪಾಡಿಪೊಗಳುವ ಭಾಗ್ಯಬೇಕೆಂದು ಕಾಡಿದೆನು ಹರಿಯಾ 1 ಪಂಚ ಪಂಚ ಉಷಃ ಕಾಲದೀ ಪಂಚ ಬಾಣನ ಪಿತಗೆ ಆರುತಿ ಮುಂಚಿನೊಸನಗಳೆಲ್ಲ ತೆಗೆಯುತ ತೈಲವೆರೆಯುವರೂ ಪಂಚರೂಪಗೆ ಚಂದ್ರಭಾಗೆಯ ಪಂಚ ಗಂಗೋದಕಗಳೆರೆಯುತ ಅಮೃತ ಸ್ನಾನಗೈಸುವ ಸೊಬಗ ನೋಡಿದೆನು 2 ಬೆಣÉ್ಣ ಬಿಸಿನೀರೆರೆದು ಕೃಷ್ಣಗೆ ಸಣ್ಣ ವಸ್ತ್ರದಿ ವರಸಿ ಮೈಯ್ಯನು ಘನ್ನ ಪೀತಾಂಬರವನುಡಿಸುತ ಜರಿಯ ಶಾಲ್ಹೊದಿಸಿ ಬಣ್ಣದೊಸ್ತ್ರದ ಪಾಗು ಸುತ್ತುತ ಬೆಣ್ಣೆ ಕಳ್ಳಗೆ ಅಂಗಿ ತೊಡಿಸುತ ಸಣ್ಣ್ಣ ಮಲ್ಲಿಗೆ ಹಾರ ಉಪವೀತ ಸಡಗರವ ಕಂಡೆ 3. ಗಂಧ ಅಕ್ಷತೆ ಪುನುಗು ಜವ್ಜಾಜಿ ಛಂದದಾ ಕಸ್ತೂರಿ ತಿಲಕವು ಸುಂದರಾಂಗದ ಮುಖಕೆ ಕನ್ನಡಿ ತೋರಿಸುವರಿಂತೂ ಅಂದದಾ ಪಕ್ವಾನ್ನ ತರುತಲಿ ಇಂದಿರೇಶಗೆ ಅರ್ಪಿಸುತ್ತಲಿ ಒಂದು ಧೂಪಾರತಿಯ ಬೆಳಗಿ ಒಂದು ಏಕಾರ್ತಿ 4 ಮಾಡಿ ಪಂಚಾರ್ತಿಗಳ ವಿಠಲಗೆ ಪಾಡುವರು ಮನದಣಿಯ ಭಕ್ತರು ನೀಡುವರು ಪಂಚಾಮೃತಂಗಳ ಬೇಡುವರು ಹರಿಯ ರೂಢಿಯೊಳು ಪಂಡರಿಯ ಕ್ಷೇತ್ರವ ಬೇಡಿದವರನು ಪೊರೆವ ಗೋಪಾಲಕೃಷ್ಣವಿಠ್ಠಲನು 5
--------------
ಅಂಬಾಬಾಯಿ
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪಾದ | ಭೃಂಗನು ಎನಿಸುವಡಿಂಗರಿಗನೆ ಧನ್ಯನೊ ಪ ಧೃತ :ಅಂಗಜನಪಿತ ಕಾ | ಳಿಂಗ ಮರ್ದನತುಂಗ ಮಹಿಮನಪಾಂಗ ಕರುಣನಡಿಂಗರಿಗೆ ಅಭಯಾಂಕ ಹಸ್ತನರಂಗನಂಘ್ರಿ ಸರೋಜ ಭೃಂಗನ ಅ.ಪ. ಮೇದಿನಿ | ಮೌನಿವರ ವರದೇಂದ್ರ ಯತಿಯಲಿ |ಸಾನು ರಾಗದಿ ಜ್ಞಾನವಾರ್ಜಸಿ | ಜ್ಞಾನ ನಿಧಿ ಎಂದೆನಿಸಿ ಮೆರೆದ 1 ವಿಜಯರ ನಿಂದೆಯಿಂದ | ಸಂದಿತು ರೋಗವುನಿಜತನು ತ್ಯಜಿಸುವಂತೇ ||ಅಜನ ನಿಜಪದ ಯೋಗ್ಯ ಪ್ರಾಣನು | ಬಿಜಯಗೆಯ್ಯುತನಿಜ ಸುಸ್ವಪ್ನದಿ |ವಿಜಯದಾಸರ ಪೂಜಿಸೆನ್ನಲು | ಭಜಿಸುತಲಿ ವರವನ್ನೆ ಪಡೆದ 2 ತ್ಯಾಗೀ ಭೋಗೀ ಶೀಲ | ವಿಜಯರ ಸೇವಕಭಾಗಣ್ಣಾರ್ಯರ ಸೇವಿಸೀ ||ಆಗಮಜ್ಞನ ನಾಲ್ದಶಾಯು | ಭಾಗ್ಯವನೆ ತಾಪಡೆದು ಚಂದ್ರಭಾಗದಲಿ ಮೀಯುತಿರೆ ಶಿರಿ | ಜಗದೀಶ ವಿಠಲಾಂಕ ಪಡೆದ 3 ಸ್ವಾದಿ ಸ್ಥಳಕೆ ಪೋಗಿ | ರಾಜರ ಆಜ್ಞೆಯ ಆದರದಲಿ ಕೊಳ್ಳುತಾ ||ಮೋದ ತೀರ್ಥರ ಮತವ ಸಾರುತ | ವೇದ ಶಾಸ್ತ್ರ ಸುಧಾದಿ ಗ್ರಂಥದಸ್ವಾದುರಸ ಪ್ರಾಕೃತದಿ ಬೋಧಿಸಿ | ಶ್ರೀ ಹರಿಕಥೆ ಸುಧೆಯ ಗರೆದ 4 ಲಕ್ಷ್ಯವಿಡುತ ಶುಕ್ಲ | ವರ್ಷವು ಸಿತವೆನ್ನಪಕ್ಷ ಭಾದ್ರ ಪದದೀ ||ದಕ್ಷಿಣಾಯನ ಶುದ್ಧನವಮಿಲಿ | ದೀಕ್ಷೆ ಪಿಡಿಯುತ ಆದಿವಾರದಿಪಕ್ಷಿವಹ ಗುರು ಗೋವಿಂದ ವಿಠಲನ | ಈಕ್ಷಿಸುತ ಭುವಿಯನ್ನೆ ತೊರೆದ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಂಗಳ ಪಂಡರಿವಾಸನಿಗೆ ಜಯ ಮಂಗಳ ಇಟ್ಟಿಗೆ ನಿಲಯನಿಗೆ ಪ. ಗೋಕುಲವಾಸಗೆ ಆಕಳ ಪಾಲಗೆ ಲೋಕ ಲೋಕಗಳನ್ನು ಪೊರೆವನಿಗೆ ಪಾಕಶಾಸನ ವಂದ್ಯ ರುಕ್ಮಿಣಿ ರಮಣಗೆ ಲೋಕಮೋಹನ ಪಾಂಡುರಂಗನಿಗೆ 1 ಪಾಂಡವ ಪಾಲಕ ಪುಂಡಲೀಕನಿಗೊಲಿದು ಪಂಡರಿಕ್ಷೇತ್ರದಿ ನೆಲಸಿದಗೆ ಮಂಡೆ ಸೋಕಿಸಿಕೊಂಬ ಪುಂಡರೀಕ ಪಾದಯುಗಳನಿಗೆ 2 ಕಟಿಯಲ್ಲಿ ಕರವಿಟ್ಟು ಕೈಲಿ ಶಂಖವ ಪಿಡಿದು ನಟನೆಗೈಯ್ಯುವ ವೇಷಧಾರಕಗೆ ತಟಿನಿ ಚಂದ್ರಭಾಗೆ ತೀರದಿ ಮೆರೆಯುವ ವಟುರೂಪಿ ಗೋಪಾಲಕೃಷ್ಣವಿಠ್ಠಲಗೆ 3
--------------
ಅಂಬಾಬಾಯಿ
ಮನದಣಿ ನೋಡಿದೆನೊ ಸನಕಾದಿನಮಿತ ಮನದಣಿ ನೋಡಿದೆನು ದೃಢದಿ ಪ ನಿನಗೆ ಸರಿಯಿಲ್ಲ ಭುವನತ್ರಯದಿ ಮನಕೆ ಬೇಸರವಿಲ್ಲದನುದಿನ ತನುವನಪ್ಪಿಹಿಡಿದು ಭಕುತರ ಮನದ ವರಗಳನಡೆಸಿ ಸಲಹುವ ಕನಿಕರಾರ್ಣವ ವಿಠಲ ನಿನ್ನಡಿ ಅ.ಪ ಒಂದು ದಿನ ಆ ತ್ರೇತಾಯುಗದಲ್ಲಿ ಋಷಿಗಡಣ ಕೂಡಿ ಬಂದು ನಿಮ್ಮಯ ಚರಣಸನ್ನಿಧಿಲಿ ಭಯಭಕುತಿಯಿಂದ ವಂದಿಸಾಲಿಂಗನೆಯ ಕೋರುತಲಿ ಅಭಯ ಬೇಡುತಲಿ ನಿಂದ ಋಷಿಗಳಿಗ್ಹಲವು ಪರಿಯಲಿ ತಂದೆ ನೀ ಸಮ್ಮತವ ಪೇಳಿ ಬಂದು ದ್ವಾಪರಾಂತ್ಯಯುಗದಲಿ ಒಂದು ಅರಲವ ಅಗಲದಲೆ ನಿಮ್ಮ ಪೊಂದಿ ಆಲಿಂಗನವನೀಯುವೆ ನೆಂದು ವರವಿತ್ತ ವಿಠಲ ನಿಮ್ಮಡಿ 1 ಅಪಾರಮಹಿಮಜಾಲ ಅವತರಿತಿಸಿದಿ ದ್ವಾಪರಯುಗದಿ ಬಾಲಕೃಷ್ಣ ನೀನಾಗಿ ಶ್ರೀಪತಿ ಸುಜನಪಾಲ ದನುಜಕುಲಕಾಲ ಪಾಪಸಂಹಿತ ಅಮಿತಲೀಲ ಶಾಪಪರಿಹಾರ ವೇಣುಲೋಲ ತಾಪಸೋತ್ತಮರಿಷ್ಟ ನೀಡಲು ಗೋಪಿಕಾಸ್ತ್ರೀಯರೆನಿಸಿ ಪುಟ್ಟಿಸಿ ಗೌಪ್ಯದಾಲಿಂಗನವನಿತ್ತ ಭೂಪ ಭೂಪತಿ ವಿಠಲ ನಿಮ್ಮಡಿ 2 ಸುಗುಣ ಸಂತರಹೃದಯಸಂಚಾರ ದಾಸಾನುದಾಸರು ಪೊಗಳಿ ಭಜಿಸುವ ಗಾನಪ್ರಿಯಕರ ಮೌಲಕೌಸ್ತುಭ ಜಗದಜೀವನ ಪಾವನಾಕಾರ ಪರಮಸುಖಕರ ಅಗಣಿತಾಗಣಿತಮಹಿಮಭರಿತ ಪೊಗಳಲಳವೆ ನಿಮ್ಮ ಚರಿತ ತ್ರಿ ಜಗನಾಟಕ ಸುಲಭದಲಿ ನೀ ಅಗಲದನವರತಸಮ ಈ ಕಲಿ ಯುಗದಿ ಭಕ್ತರಿಗಾಲಿಂಗನೀಯುವ ನಿಗಮಗೋಚರ ವಿಠಲ ನಿನ್ನಡಿ 3 ಮಂದಹಾಸ ಮಂದರೋದ್ಧಾರ ಸುರಕಲ್ಪಧೇನು ಇಂದಿರೆಯರ ಪ್ರಾಣ ಮನೋಹರ ಹೇ ದೀನಬಂಧು ಸುಂದರಾಂಗ ಸುಗುಣಗುಣಹಾರ ಬಂಧನಿವಾರ ಸಿಂಧುಕಲಕಿದಪಾರ ಶೂರ ಕುಂದದೆ ಮೊರೆಕಾಯ್ದ ಸುರರ ಹೊಂದಿಭಜಿಸುವ ಭಕುತಜನಕಾ ನಂದ ನೀಡುತ ಚಂದನೋಡುತ ಸಿಂಧುನಿಲಯ ಮುಕ್ಕುಂದ ಮುರಹರಿ ಅಂದಮಾದ ವಿಠಲ ನಿಮ್ಮಡಿ 4 ಸುತ್ತಮುತ್ತ ಭಕ್ತರಾಲಯವು ಹಿಂಭಾಗದಲ್ಲಿ ಸತ್ಯಭಾಮ ರುಕ್ಮಿಣೀಕಾಂತನು ಮುಂಭಾಗದಲಿ ನಿತ್ಯನಿರ್ಮಲ ಚಂದ್ರಭಾಗಿನಿಯು ನಡುಮಧ್ಯ ರಂಗವು ಭಕ್ತಗೊಲಿದು ಭೂವೈಕುಂಠವ ಸತ್ಯವೆನಿಸಿ ಮೀರಿ ಮೆರೆವ ಭಕ್ತಜನರ ಕೈಯೆತ್ತಿ ಸಾರುವ ಪೃಥ್ವಿಗಧಿಕ ಮಹ ಪಂಢರಾಪುರ ಮುಕ್ತಿ ತವರೆಂಬ ಮಂದಿರದಲ್ಲಿ ಕರ್ತುಶ್ರೀರಾಮ ವಿಠಲ ನಿನ್ನಡಿ5
--------------
ರಾಮದಾಸರು
ಶ್ರೀ ಪಾಂಡುರಂಗ ಪ್ರಾರ್ಥನೆ ಪಾದ ಅಮಿತ ನೀಲಮೇಘಶ್ಯಾಮ ವಿಠಲನ್ನ 1 ಶಿಲೆಯನುದ್ಧರಿಸಿರ್ಪ ಪಾದಕೆ ಬಲಿಯ ಮೆಚ್ಚಿದ ಪಾದಕಮಲಕೆ ನಲಿವಿನಿಂದಲಿ ನಮಿಸಿ ಪೊಗಳುವೆಕಲಿಮಲಂಗಳನೆಲ್ಲ ತರಿಯುತತಲೆಯೊಳಾಶೀರ್ವಾದವೀಯಲು ಬಿದ್ದು ಬೇಡುವೆನು 2 ಕ್ರೂರ ರಕ್ಕಸರುಪಟಳಂಗಳ ವೀರತನದಿಂ ಚಕ್ರದಡಗಿಸಿ ಮಾರಪಿತ ಭವದೂರ ಕಂಸರಲಿ ದಣಿಯುತಲಿ ಯಾರ ಗೊಡವೆ ನಮಗೇನು ಎನ್ನುತ ಶ್ರೀ ರಮಾವರ ದೇವಿ ಸಹಿತೀ ದಾರಿಯೋಳ್ಮಿಜ ಭಕ್ತಗಾಶ್ರಯನಾಗಿ ನಿಂತಿಹನೆ 3 ಕಾಯ ಧರಿಸಿದ ಭಕ್ತವರ್ಯನ ಮಾಯೆಯಿಂದಲಿ ನೋಡಿ ನಲಿಯಲು ಬಂದ ವಿಠ್ಠಲನೆತೋಯಜಾಕ್ಷಿಯಳಾದ ಲಕುಮಿಯರಾಯ ಶ್ರೀಹರಿ ನಿನಗೆ ಇಟ್ಟಿಗೆ ಯಾಯಿತೇ ಬಲು ಸಂಖ್ಯದಂಸನ ನಿಂತುಕೊಳ್ಳಿಲ್ಕೆ 4 ತಾತನಂಘ್ರಿಯ ಸೇವೆಗೆಯ್ದಿರು-ವಾತ ಬರ¯ಂದನಿಮಿಷಾಗ್ರಣಿ ತಾತ ನಿಂತೆಯ ಸೊಂಟದ ಮೇಲೆ ಕೈಯಿಟ್ಟುಮಾತೆಯಾದವರು ಹಾಗೆ ಸಂಗಡ ಪ್ರೀತಿಯಿಂದಲೆ ನಿಂತುಕೊಂಡಳು ಖ್ಯಾತಿಯಾಯಿತು ಪಾಂಡುರಂಗನ ಲೀಲೆ ಭಕ್ತರಲಿ 5 ಸತ್ತು ಹುಟ್ಟುವ ಬಾಧೆಯಿಲ್ಲದಸತ್ಯವಂತನೆ ಕೊಟ್ಟ ಇಟ್ಟಿಗೆ ಮೆತ್ತಗಿಹುದೆÉೀನಷ್ಟು ದಿವಸವು ನಿಂತುಕೊಂಡಿರುವೆಮತ್ತೆ ಪೇಳುವುದೇನು ದೇವನೆ ಸುತ್ತು ಮುತ್ತಿನ ಜಗಕೆ ಆಸರವಿತ್ತೆ ನಿನಗಾಸರವು ಯಾವುದು ಭಕ್ತವತ್ಸಲನೆ 6 ಹೇ ದಯಾನಿಧೆ ಯಾದವಾಗ್ರಣಿ ಮಂದವಾಖ್ಯನೆ ಭೀಮತಡೆಯೊಳು ಆದರಮ್ಮಿಗೆ ತೋರಿ ಕರೆದನೆ ನಿಮ್ಮನೀರ್ವರನು ಬಾಧೆಬಡುತೀ ನಿಂತ ಕಾಲಿಗೆಹಾದಿನೋಡುವವೆಷ್ಟೊ ಬೆಳೆಯುಚೋದ್ಯವಲ್ಲವೆ ನಿನ್ನ ಲೀಲೆಯು ದಿವ್ಯವಿಗ್ರಹನೇ 7 ಆದಿಮೂರುತಿ ನಿನ್ನ ಹುಡುಕಲುವೇದ ಶಾಸ್ತ್ರ ಪುರಾಣವೆಂಬವು ಹಾದಿ ಕಾಣದೆ ನಿಂತವಲ್ಲೈ ನೀನೆ ಬಂದೀಗಮೇದಿನೀ ತಳದಲ್ಲಿ ಭಕ್ತರಹಾದಿ ನೋಡುತ ನಿಂತುಕೊಂಡಿರೆಹೋದವೆಷ್ಟೋ ದಿವಸ ಶ್ರೀಹರಿ ನಿನ್ನ ಲೀಲೆಯಲಿ 8 ನೀಲಮೇಘ ಶ್ಯಾಮ ಕೀರ್ತಿಯ ಜಾಲವನ್ನುರೆ ಭಜನೆ ಮಾಡುತತಾಳಹಾಕುತ ಸಂತಮಂಡಳಿ ಕುಣಿದು ಬರುತಿರಲುಧೂಳವೇಳುವದನ್ನು ಕಣ್ಣಲಿವೇಳೆಗಳೆಯದೆ ನೋಡಿ ನಲಿವುದುಲೀಲೆಯಲ್ಲವೆ ಪಾಂಡುರಂಗನೆ ವಿಶ್ವಚಾಲಕನೆ9 ಸರಸಿಜಾಕ್ಷನೆ ಕರಗಳೆರಡನುಇರಿಸಿ ಟೊಂಕದೊಳೇನು ನೋಡುವಿಪರಮ ಭಕುತನ ತಂದೆ ತಾಯ್ಗಳ ಸೇವೆ ಮಾಡುವುದುದೊರೆಯಲಾರದೆ ಕಲಿಯ ಕಾಲದೆ ದುರಿತ ನೀಗಿಸಿಕೊಂಡನಲ್ಲವೆ ಆರುಗಿಯಾದರು ನೋಡಲೊಲ್ಲನು ಭಕ್ತಿಬಲದಿಂದ 10 ಚಿನ್ನದರಸನೆÉ ನಿನ್ನ ಕೈಯನುಘನ್ನ ಟೊಂಕದ ಮೇಲೆ ಇರಿಸುತನನ್ನಿಯಿಂ ಭರವಸೆಯ ಕೊಡುವಿಯೊ ಭವದ ಸಾಗರವುತನ್ನ ನಂಬುತ ದಾಟಿ ಹೋಗುವಸನ್ನುತಾತ್ಮರಿಗಿಷ್ಟಯೆಂಬುದ ಚೆನ್ನವಾಗಿಯೆ ತಿಳಿಸಲೋಸುಗ ಹೀಗೆ ನಿಂತಿಹೆಯಾ 11 ನಾನು ನಿನ್ನನು ಕರೆಯದಿದ್ದರು ನೀನೆ ಬಂದಿಲ್ಲೇಕೆ ನಿಂತೆಯೊ ದೀನಪಾಲಕನೆಂಬ ಬಿರುದನೆ ಕಾಯಲೋಸುಗವೇಶಾನೆ ಸಂಪದವಿದ್ದ ದ್ವಾರಕೆ ಯಾನೆ ಕುದುರೆಗಳಿಂದ ಶೋಭಿಪ ದಾನವಾಂತಕ ಕೃಷ್ಣರಾಯನೆ ಈಗ ಪಂಡರದೀ 12 ಕರ್ಮ ಮುಗಿದಿಹುದೇಮಿಕ್ಕಿದವರೇನನ್ಯಯ ಪುತ್ರರೆ ತಕ್ಕ ಯೋಚನೆಗೆಯ್ದು ನಂತರತೆಕ್ಕೆಯೋಳ್ಸಲಹುವದು ಲೇಸೈ ಭಕ್ತವತ್ಸಲನೆ 13 ಹಾಲು ಮೊಸರಾ ಬೆಣ್ಣೆಯುಂಡೆಯ |ಲೀಲೆಯಿಂದಲೆ ಕದ್ದ ಕಳ್ಳನೆಚ್ಯಾಳಿಬಲಿತಾ ಬಳಿಕ ಬಿಡುವೆಯಾ ಭಕ್ತರಂತಹರಗಾಳಿ ಸೋಂಕಿದ ನೆವ ಮಾತ್ರಕೆಜಾಲಬೀಸುತ ಕದ್ದು ಕೊಳ್ಳುವಿಹೇಳಲೇನೈ ಹಿಂದಿನೆಷ್ಟೊ ಜನ್ಮದಘನಿದನಾ 14 ನಿನ್ನನೇ ನೆರೆ ನಂಬಿ ಭಜಿಸುವಪುಣ್ಯವಂತರ ಹೃದಯಮಂದಿರ-ವನ್ನೆಮಾಡಿದ ಪಾಂಡುರಂಗನೆ ನೀನು ಜಗದೊಳಗೆಘನ್ನ ಪಾಪದಿ ಬಳಲುತಿರುವವ-ರನ್ನುಸಲುಹಲು ಬಂದೆಯೇನೈಸನ್ನುತಾಂಗನೆ ಭಜನಿಗೊಲೆಯುವ ದಿವ್ಯ ವಿಠ್ಠಲನೆ 15 ವೇದಗಳ್ಳನ ಸದೆದು ಬ್ರಹ್ಮಗೆ ಮೋದದಿಂದಲಿ ಕೊಟ್ಟ ಮತ್ಸ್ಯನೆಆದಿಕೂರ್ಮನೆಯಾಗಿ ಮಂದರನೆಗಹಿ ನಿಂದವನೇಬಾಧೆÉ ಬಿಡಿಸುವ ಕ್ರೂರ ರಕ್ಕಸಭೇದಿಯಾಗುತ ಧರಣಿ ಮಂಡಲಸೇದಿ ತಂದನ ನೀನೆಯಲ್ಲದೆ ದಿವ್ಯ ವಿಠ್ಠಲನೆ 16 ಒಂದೆ ಮನದೊಳು ನೆನೆದ ಕುವರಗೆಬಂದೆ ಕಂಬದೆ ನಾರಸಿಂಹನೆನಿಂದ ಮಾತ್ರಕೆ ಮೂರು ಪಾದದ ಭೂಮಿದಾನದಲೀತಂದು ಪಾತಾಳದಲಿ ಬಲಿಯನುಚಂದದಿಂದಲಿ ಇಟ್ಟ ವಾಮನತಂದೆಯಾಡಿದ ನುಡಿಯ ನಡಿಸಿದ ಭಾರ್ಗವತ್ತೀ 17 ಸೀತೆಗೋಸುಗ ರಾಮನಾಗುತಖ್ಯಾತಿಗೋಸುಗ ಕೃಷ್ಣನಾದೆಯಲೇಪ್ರೀತಿಗೋಸುಗ ಬಾಧ್ಯನಾಗುತ ಜಗವ ಪಾಲಿಸಿದ್ಯಾಜಾತಿಯಶ್ವವನೇರಿ ರಿಪುಗಳÁತ ಮಾಡಿದ ಕಲ್ಕ್ಯರೂಪನೇಯಾತಕೀಪರಿ ಚಂದ್ರಭಾಗದಿ ನಿಂತೆ ಬೆರಗಾಗಿ 18 ನಿನ್ನ ನಾಮಗಳಮಿತವಿದ್ದರುನನ್ನ ನಾಲಿಗೆಗಷ್ಟು ಬರುವವೆ ?ಸನ್ನುತಾಂಗನೆ ಪಾಂಡುರಂಗನೆ ದಿವ್ಯ ವಿಠ್ಠಲನೆನ್ನುತಿಷ್ಟೇ ನಾಮಗರೆವೆನುಚಿನ್ನದರಸನೆ ಭಕ್ತಸಂಘದೊಳೆನ್ನ ಕೂಡಿಸಿ ಕಾಯಬೇಕೈ ಪರಮ ಭಗವಂತಾ 19 ಕಾಲಕಾಲಕೆ ನೇಮನಿತ್ಯಗ-ಳಾಲಯಂಗಳ ಮಧ್ಯದೆಸಗದೆಜಾಲಿಯಂತೇಗೆಲ್ಲ ಜನರಿಗೆ ಬೆಳೆದೆ ಬಾಧಿಸುತಬಾಲ ಯೌವನ ವಾರ್ಧಿಕತ್ವದೆಕಾಲಪೋಯಿತು ನಿನ್ನ ನೆನೆಯದೇ ಹೇಳಲೇನೈ ಕಾಲನೆಳೆಯುವನು 20 ಕಂತು ಜನಕನೆ ನಿನ್ನ ನಾಮದಮಂತ್ರವೆನಗಿನ್ನೆಲ್ಲಿ ಬರುವುದು ಶುದ್ಧ ಪಶುವಾದೇಅಂತರಾತ್ಮನೆ ನೀನು ಈ ತೆರನಿಂತುಕೊಂಡರೆ ನನ್ನ ಗತಿಯೇ-ನೆಂತ ಹೇಳಲಿ ಸಂತೆ ತೀರಿತು ಸಲಹೊ ವಿಠ್ಠಲನೇ 21 ಕಾಲ ಬಂದಿದೆಸದ್ಯಕಾರೂ ಕಾವರಿಲ್ಲವುದ್ಧಪಾಶದಿ ಬಿಡಿಸಬಾರೈ ದೀನ ಬಾಂಧವನೇ 22 ಕಾಯಕಿರುವದ ಬಂಧು ಬಳಗವು ಹೇಯ ದುಡ್ಡನೆ ಶಳಯಲೋಸುಗಜೀಯ ನಿನ್ನಂತಾರು ಇಲ್ಲವು ಜೀವಕನು ಸರಿಸೀತಾಯ ತಂದೆಯ ಜಗಕೆ ಲಕ್ಷ್ಮೀರಾಯ ನೀನೇ ಅಲ್ಲವೇನೈ ಬಾಯ ಬಿಡುವೆ ಅಜ್ಞಬಾಲರ ಕಾಯೊ ವಿಠ್ಠಲನೇ 23 ಅಣ್ಣನಾಗುತ ದ್ರುಪದ ಸುತೆಗಾಬಣ್ಣದಂಚಿನ ಸೀರೆ ಉಡಿಸಿದೆನಿನ್ನ ಬಾಲ್ಯದ ಸುಖ ಸುಧಾಮಗೆ ಕೊಟ್ಟಿಯ್ಯೆಸಿರಿಯಹಣ್ಣಿನಾಶೆಗೆ ಶಬರಿ....ಗೊಲಿದೈಬೆಣ್ಣೆಯಾಶೆಗೆ ಗೋಪಿಗೊಲಿದೈಮಣ್ಣಿನಾಶೆಗೆ ಬಲಿಯ ಬಾಗಿಲ ಕಾಯ್ದ ವಿಠ್ಠಲನೇ 24 ನಿನ್ನ ನೆಂದು ಕಾಣದಿದ್ದವಕುನ್ನಿ ಪಾಮರನಣ್ಣನೆಂಬೆನೆಹಣ್ಣು ಹಂಪಲವೆನಗೆ ಸಾಲವು ನಿನಗೆ ಕೊಡಬಹುದೇನನ್ನ ತೆರದಾಚಾರ ಹೀನರೆಇನ್ನು ಗೆಳೆಯರು ನನಗೆ ಆದರುಮುನ್ನ ಮಾಡಿದ ಪಾಪ ಬಹಳಿದೆ ಕೊಳ್ಳೊ ನೀನದನೂ 25 ಹಿರಿಯರೆಸಗಿದ ಪುಣ್ಯದಿಂದಲೆದೊರಕಿತಲ್ಲವೆ ನಿನ್ನ ನೆನೆವುದುಪರಮ ಸುಂದರ ಪಾಂಡುರಂಗನೆ ಬಾರೊ ಮಾನಸದೀತರಳರಾಟದಿ ತನ್ನ ತಾಯಿಯಮರೆತ ತೆರದಿಂ ಬಿಟ್ಟು ಕೆಟ್ಟೆನುಕರಗದೇನೈ ನನ್ನ ಮನವದು ನಿನ್ನ ದೆಶೆಯಿಂದ 26 ಕೂಸು ಆಟದೊಳಿದ್ದರೇನೈಹೇಸಿ ಕೆಲಸಹೊಳಿದ್ದರೇನೈದೋಷಗಳೆಯುತ ಪೊರೆವಳಲ್ಲಿದೆ ಪಡೆದ ತಾಯವ್ವಶ್ರೀಶ ವಿಠ್ಠಲ ಪಾಂಡುರಂಗನೆಘಾಸಿಗೊಳಿಸುವ ಮುನ್ನಯವನರುಪಾಶ ಬಿಡಿಸೈ ಭಕ್ತವತ್ಸಲ ದಿವ್ಯ ವಿಠ್ಠಲನೇ 27 ಕಾಮನಯ್ಯ ಸುಧಾಮ ಸಖ ಶ್ರೀರಾಮ ವಿಠ್ಠಲ ದಿವ್ಯ ರೂಪನೆಪ್ರೇಮವೆನ್ನಲ್ಲಿಟ್ಟು ಸಲಹೊ ಪುಣ್ಯವರ್ಜಿತನೆತಾಮಸತ್ವದ ಕೆಲಸವೆಲ್ಲವನೇಮದಿಂದಲೆ ಮಾಡಿ ನಾ ನಿ-ಸ್ಸೀಮನಾಗಿಹೆ ಕಾಯೆಯೊ ವಿಶ್ವವ್ಯಾಪಿ ವಿಠ್ಠಲನೇ 28 ನಾನು ಹೇಳುವುದೇನು ದೇವನೆನೀನೆ ತಿಳಕೊಂಡಿರ್ಪೆ ಎನ್ನಯಮಾನಕುಚಿತಪ್ಪಂತೆ ಸತ್ಫಲ ಕೊಡು ದಯಾಂಬುಧಿಯೇನೀನು ನಿಂvಡೆÉಗೆನ್ನ ಜಗ್ಗುತಸಾನುರಾಗದೆ ಪೊರೆಯೊ ವಿಠ್ಠಲನೀನೆಯಾದರು ಬಾರೊ ಭಕ್ತರ ಹೃದಯ ಮಂದಿರಕೆ 29 ಮಂಗಳಂ ಮಧುಕೈಟಭಾರಿಗೆಮಂಗಳಂ ಶ್ರೀವತ್ಸಧಾರಿಗೆಮಂಗಳಂ ಬ್ರಹ್ಮಾಂಡ ಪಾಲಕ ಪಾಂಡುರಂಗನಿಗೆಮಂಗಳಂ ಶ್ರೀ ಲಕುಮಿದೇವಿಗೆಮಂಗಳಂ ಭೀಮಾತಟಾಕಿಗೆಮಂಗಳಂ ಸದ್ಭಕ್ತ ಮಂಡಳಿಗೆಗಳ ಭೂತಳಕೆ 30
--------------
ಪಾಂಡುರಂಗ
ಶ್ರೀಮದಕ್ಷೋಭ್ಯ ತೀರ್ಥರ ದಿವ್ಯ ಚರಿತಂ ಕಾಮಿತ ಪ್ರದವಹುದು ಶೃಣ್ವತಾಂ ಸತತಂ ಪ ಈ ಮಹಿಯೊಳವತರಿಸಿ ಭೂಮಿಜಾಸಹಿತ ಶ್ರೀ ರಾಮನಂಘ್ರಿದ್ವಯವ ಪೂಜಿಸುತಲಿ ನಿರ್ಜರ ಜನಸ್ತೋಮ ವಂದಿತರಾಗಿ ವ್ಯೋಮ ಕೇಶಾಂಶರೆಂದೆನಿಸಿ ಮೆರೆವಂಥ 1 ಮೋದತೀರ್ಥರ ಮತ ಮಹೋದಧಿಗೆ ಪೂರ್ಣಹಿಮ ದೀದಿತಿಯರೆಂದೆನಿಸಿ ದಿಗ್ವಲಯದಿ ಭೇದ ಬೋಧಕ ಸೂತ್ರವಾದದಿಂದಲಿ ಮಹಾ ವಾದಿ ವಿದ್ಯಾರಣ್ಯ ಯತಿವರನ ಜಯಿಸಿದ 2 ವಿಟ್ಠಲನ ಪದಪದುಮ ಷಟ್ಟದರೆಂದೆನಿಸಿ ಸ್ವಪ್ನಸೂಚಿತ ಚಂದ್ರಭಾಗತಟದಿ ಶ್ರೇಷ್ಠ ಕುದುರೆಯನೇರಿ ನದಿಯ ಜಲಕುಡಿದವರ ಇಷ್ಟರೆನ್ನುತ ಕರೆದು ಕೊಟ್ಟರಾಶ್ರಮವ 3 ಸೃಷ್ಟಿಯೊಳು ಮಧ್ವಮತ ಪುಷ್ಠಿಗೈಸುವರೆಂಬ ದೃಷ್ಟಿಯಿಂದಿವರಿಗೆ ಸುಮುಹೂರ್ತದಿ ಪಟ್ಟಗಟ್ಟಿದರು ಜಯತೀರ್ಥ ನಾಮವನಿಡುತ ಕೊಟ್ಟರಾಜ್ಞೆಯನು ದಿಗ್ವಿಜಯ ಮಾಡಿರಿ ಎಂದು 4 ದೇಶದೇಶದಿ ಬರುವ ಭೂಸುರೋತ್ತಮರ ಅಭಿ ಲಾಷೆಗಳನೆಲ್ಲ ಪೂರೈಸಿ ಪೊರೆವ ಶ್ರೀಶಕಾರ್ಪರ ಕ್ಷೇತ್ರವಾಸ ಅಶ್ವತ್ಥನರ ಕೇಸರಿಯ ನೊಲಿಸಿದ ಯತೀಶರಿವರೆಂದು 5
--------------
ಕಾರ್ಪರ ನರಹರಿದಾಸರು